📍 Karavali Maruta
  • LOGIN
  • BREAKING
    ‘ಮೇಡ್ ಇನ್ ಮಂಗಳೂರು’ ಹಡಗು ಜರ್ಮನ್ ಸಂಸ್ಥೆಯ ತೆಕ್ಕೆಗೆ; ವಿಶ್ವದ ಗಮನ ಸೆಳೆದ ಚೌಗುಲೆ ಶಿಪ್‌ಯಾರ್ಡ್! ಧಾರವಾಡದಲ್ಲಿ ಭೀಕರ LPG ಸಿಲಿಂಡರ್ ಸ್ಫೋಟ , ಹಲವು ಮೀಟರ್ ದೂರಕ್ಕೆ ಹಾರಿದ ಬೈಕ್‌! ಹಲವರಿಗೆ ಗಾಯ CCTVಯಲ್ಲಿ ಶಾಕಿಂಗ್ ದೃಶ್ಯ ದಯಾಮರಣ ಕೇಳಿದ್ದ ತುಮಕೂರು ರಾಬಿಯಾ ಇನ್ನಿಲ್ಲ …!ಪರಮೇಶ್ವರ್ ಮುಂದೆ ಕಣ್ಣೀರಿಟ್ಟಿದ್ದ ಮಹಿಳೆ ಇಬ್ಬರು ಮಕ್ಕಳೊಂದಿಗೆ ವಿಷಸೇವಿಸಿ ಕೊನೆಯುಸಿರು…‘ಮನೆ’ ಸಿಕ್ಕರೂ ಬದುಕು ಉಳಿಯಲಿಲ್ಲ! ನೇಪಾಳ ದುರಂತ: ಕಂಪ್ಲೀಟ್ ರಿಪೋರ್ಟ್ ಇಲ್ಲಿದೆ…ಕಣ್ಣೆದುರೇ ಕೊಚ್ಚಿಹೋದ ಬದುಕು… ಲೆಕ್ಕಕ್ಕೆ ಸಿಗದ ಸಾವು, ನೋವು!ಪ್ರವಾಹದ ರೌದ್ರದ ನಡುವೆ ಮೃತದೇಹದಿಂದಲೇ ಚಿನ್ನ ಕದಿಯಲು ಯತ್ನ… ಮಾನವೀಯತೆ ಮರೆತ ಕಿರಾತಕರು!ಇಬ್ಬರು ಅರೆಸ್ಟ್! ಮಹಿಳಾ ಕಾನ್ಸ್‌ಟೇಬಲ್ ಮೇಲೆ ಪೊಲೀಸ್ ಠಾಣೆಯಲ್ಲಿ ಮಾರಣಾಂತಿಕ ಹಲ್ಲೆ
    ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

    ಇಬ್ಬರು ಮಕ್ಕಳ ಕಣ್ಣೆದುರೇ ಪತ್ನಿಯನ್ನು ಸುಮಾರು 20 ಬಾರಿ ಚಾಕುವಿನಿಂದ ಇರಿದು ಕೊಂದ ಪತಿ – ಕಾರಣ ಮೊಬೈಲ್‌ನಲ್ಲಿ ಆಟ


    ಬೆಂಗಳೂರು ಮಹದೇವಪುರದಲ್ಲಿ ನಡೆದ ಮಂಜುಳಾ ಹತ್ಯೆ ರಾಜ್ಯವನ್ನೇ ಬೆಚ್ಚಿಬೀಳಿಸಿದೆ. ಇಬ್ಬರು ಮಕ್ಕಳ ಕಣ್ಣೆದುರೇ ಪತ್ನಿಯನ್ನು ಸುಮಾರು 20 ಬಾರಿ ಚಾಕುವಿನಿಂದ ಇರಿದು ಕೊಂದ ಪತಿ ಪ್ರದೀಪ್, ತನ್ನ ಸೆಲ್ಫಿ ವಿಡಿಯೋದಲ್ಲಿ “ಆನ್‌ಲೈನ್ ಗೇಮಿಂಗ್‌ನಿಂದ ನನ್ನ ಕುಟುಂಬ ಹಾಳಾಯಿತು” ಎಂದು ಹೇಳಿರುವುದು ಈ ಘಟನೆಯ ಅತ್ಯಂತ ಆತಂಕಕಾರಿ ಅಂಶವಾಗಿದೆ.

    ಮಂಜುಳಾ ಅವರ ವೃತ್ತಿ ಹೋಂ ಗಾರ್ಡ್ (Home Guard) ಆಗಿತ್ತು. ಅವರು ಬೆಂಗಳೂರಿನ ಮಹದೇವಪುರ ಪೊಲೀಸ್ ಠಾಣೆಗೆ ನಿಯೋಜಿತರಾಗಿದ್ದರು . ಅವರು ಸುಮಾರು 32 ವರ್ಷದವರು ಆಗಿದ್ದು, ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆ ಮನೆಗೆ ತಡವಾಗಿ ಬರುತ್ತಿದ್ದ ಕಾರಣ ಪತಿ ಪ್ರದೀಪ್ ಅನುಮಾನ ಪಡುತ್ತಿದ್ದನೆಂದು ಕುಟುಂಬದವರು ಆರೋಪಿಸಿದ್ದಾರೆ.

    ಒಬ್ಬ ಮಹಿಳೆ, ಇಬ್ಬರು ಮಕ್ಕಳು, ಒಂದು ಕುಟುಂಬ… ಎಲ್ಲವೂ ಕ್ಷಣಾರ್ಧದಲ್ಲಿ ಚೂರುಚೂರಾಯಿತು. ಕಾರಣ ಕೇವಲ ಕೋಪವಲ್ಲ. ವರ್ಷಗಳಿಂದ ಬೆಳೆದ ಅನುಮಾನ, ಆರ್ಥಿಕ ನಷ್ಟ, ಜೂಜಾಟದ ವ್ಯಸನ ಮತ್ತು ಮಾನಸಿಕ ಅಸ್ಥಿರತೆ. ಕುಟುಂಬದವರ ಮಾಹಿತಿ ಪ್ರಕಾರ ಪ್ರದೀಪ್ ಆನ್‌ಲೈನ್ ಬೆಟ್ಟಿಂಗ್‌ನಲ್ಲಿ ಸುಮಾರು 7 ರಿಂದ 8 ಲಕ್ಷ ರೂಪಾಯಿಗಳವರೆಗೆ ಕಳೆದುಕೊಂಡಿದ್ದ. ಹಣ ಕಳೆದುಕೊಂಡಂತೆ ಕುಟುಂಬದ ಮೇಲಿನ ಜವಾಬ್ದಾರಿಯೂ ಕಳೆದುಹೋಯಿತು.

    ದುರದೃಷ್ಟವಶಾತ್ ಇದು ಒಂದೇ ಘಟನೆ ಅಲ್ಲ. ಮಂಗಳೂರು ಸೇರಿದಂತೆ ಕರ್ನಾಟಕದ ಅನೇಕ ಭಾಗಗಳಲ್ಲಿ ಇದೇ ಮಾದರಿಯ ಕಥೆಗಳು ಕೇಳಿಬರುತ್ತಿವೆ. ಪತಿ ಅಥವಾ ಕುಟುಂಬದ ಸದಸ್ಯರು ಆನ್‌ಲೈನ್ ಗೇಮಿಂಗ್ ಮತ್ತು ಬೆಟ್ಟಿಂಗ್‌ಗೆ ಅಂಟಿಕೊಂಡು ಲಕ್ಷಾಂತರ ರೂಪಾಯಿ ಕಳೆದುಕೊಳ್ಳುತ್ತಿದ್ದಾರೆ. ಮನೆ ಖರ್ಚು, ಮಕ್ಕಳ ಶಿಕ್ಷಣ, ಸಾಲದ ಹೊರೆ, ಕುಟುಂಬದ ಭವಿಷ್ಯ ಎಲ್ಲವೂ ಕಡೆಗಣಿಸಲ್ಪಡುತ್ತಿದೆ. ಹಣ ಕಳೆದುಹೋದ ನಂತರ ಮಾನಸಿಕ ಒತ್ತಡ, ಕೊನೆಗೆ ಮನೆಯಲ್ಲೇ ಜಗಳ,ಕೋಪ, ಅನುಮಾನ, ಗೃಹಹಿಂಸೆ ಮತ್ತು ಕೆಲವೊಮ್ಮೆ ಆತ್ಮಹತ್ಯೆ ಅಥವಾ ಕೊಲೆಯಂತಹ ದುರಂತಗಳಿಗೆ ದಾರಿ ಮಾಡಿಕೊಡುತ್ತಿದೆ.

    ಇಂದು ಮೊಬೈಲ್‌ನಲ್ಲಿ ನಡೆಯುತ್ತಿರುವ ಕೆಲವು ಆನ್‌ಲೈನ್ ಬೆಟ್ಟಿಂಗ್ ಮತ್ತು ಜೂಜಾಟದ ಆ್ಯಪ್‌ಗಳು ಅನೇಕ ಕುಟುಂಬಗಳಿಗೆ ಕಾಣದ ಶತ್ರುವಾಗಿವೆ. ಆರಂಭದಲ್ಲಿ “ಸಣ್ಣ ಹಣ ಗೆಲ್ಲಬಹುದು” ಎಂಬ ಆಸೆ ಹುಟ್ಟಿಸುತ್ತವೆ. ನಂತರ ಅದು ವ್ಯಸನವಾಗಿ ಬದಲಾಗುತ್ತದೆ. ವ್ಯಸನ ಬೆಳೆದಂತೆ ವ್ಯಕ್ತಿ ತನ್ನ ಸಮಯ, ಹಣ, ಸಂಬಂಧಗಳು ಮತ್ತು ಕೊನೆಗೆ ತನ್ನ ಜೀವನವನ್ನೇ ಕಳೆದುಕೊಳ್ಳುವ ಹಂತಕ್ಕೆ ತಲುಪುತ್ತಾನೆ.

    ಅಂತಹ ಸಂದರ್ಭಗಳಲ್ಲಿ ಅತ್ಯಂತ ಹೆಚ್ಚು ನೋವು ಅನುಭವಿಸುವವರು ಹೆಂಡತಿ ಮತ್ತು ಮಕ್ಕಳು. ಇಬ್ಬರು ಅಥವಾ ಮೂವರು ಪುಟ್ಟ ಮಕ್ಕಳನ್ನು ನೋಡಿಕೊಳ್ಳುವುದು, ಶಾಲಾ ಶುಲ್ಕ ಪಾವತಿಸುವುದು, ಮನೆ ಬಾಡಿಗೆ, ದಿನನಿತ್ಯದ ಖರ್ಚು, ವೃದ್ಧ ತಂದೆ-ತಾಯಿಯ ಜವಾಬ್ದಾರಿ — ಎಲ್ಲವೂ ಮಹಿಳೆಯ ಹೆಗಲಿನ ಮೇಲೆ ಬೀಳುತ್ತದೆ. ಪತಿ ಸಂಪಾದಿಸಿದ ಹಣವನ್ನು ಕುಟುಂಬಕ್ಕೆ ಬಳಸುವ ಬದಲು ಮೊಬೈಲ್ ಪರದೆಯೊಳಗೆ ಕಳೆದುಕೊಳ್ಳುತ್ತಿರುವಾಗ, ಮನೆಯ ಮಹಿಳೆ ಕಣ್ಣೀರಿನೊಳಗೆ ಬದುಕು ಸಾಗಿಸುತ್ತಾಳೆ.

    ಅನೇಕ ಮಹಿಳೆಯರು ಸಮಾಜದ ಭಯಕ್ಕೆ, ಮಕ್ಕಳ ಭವಿಷ್ಯಕ್ಕಾಗಿ ಅಥವಾ ಕುಟುಂಬ ಉಳಿಯಲಿ ಎಂಬ ಆಶೆಯಿಂದ ಈ ನೋವನ್ನು ಯಾರಿಗೂ ಹೇಳದೆ ಸಹಿಸಿಕೊಳ್ಳುತ್ತಾರೆ. ಗಂಡ ಹಣ ಕಳೆದುಕೊಂಡರೂ, ಸಾಲ ಮಾಡಿದರೂ, ಮನೆಯ ವಸ್ತುಗಳನ್ನು ಮಾರಿದರೂ, ಬಂಧುಗಳ ಮುಂದೆ ಅವಮಾನ ಮಾಡಿದರೂ, ಕೊನೆಗೆ ಮನೆ ನಡೆಸಲು ಮಹಿಳೆಯೇ ಹೋರಾಡಬೇಕಾಗುತ್ತದೆ. ಮಕ್ಕಳಿಗೆ ಊಟ ಕೊಡಲು, ಶಾಲೆಗೆ ಕಳುಹಿಸಲು, ಭವಿಷ್ಯ ಕಟ್ಟಲು ಅವಳು ಒಬ್ಬಳೇ ಯುದ್ಧ ಮಾಡುತ್ತಾಳೆ.

    ಇಂತಹ ಘಟನೆಗಳು ಮರುಕಳಿಸದಂತೆ ಸರ್ಕಾರ, ಪೊಲೀಸ್ ಇಲಾಖೆ ಮತ್ತು ಸಮಾಜ ತಕ್ಷಣ ಎಚ್ಚೆತ್ತುಕೊಳ್ಳಬೇಕಾಗಿದೆ. ಆನ್‌ಲೈನ್ ಜೂಜಾಟ ಮತ್ತು ಬೆಟ್ಟಿಂಗ್ ಆ್ಯಪ್‌ಗಳ ಮೇಲೆ ಕಠಿಣ ನಿಯಂತ್ರಣ ಅಗತ್ಯ. ಅಕ್ರಮ ವೇದಿಕೆಗಳನ್ನು ಸಂಪೂರ್ಣವಾಗಿ ನಿಷೇಧಿಸುವ ಬಗ್ಗೆ ಗಂಭೀರ ಚಿಂತನೆ ನಡೆಯಬೇಕು.

    ಬ್ಯಾಂಕ್ ಖಾತೆಗಳಿಂದ ನಿರಂತರವಾಗಿ ಬೆಟ್ಟಿಂಗ್ ವ್ಯವಹಾರ ನಡೆಸುತ್ತಿರುವವರನ್ನು ಗುರುತಿಸಿ ಅವರಿಗೆ ಕಡ್ಡಾಯ ಕೌನ್ಸೆಲಿಂಗ್ ವ್ಯವಸ್ಥೆ ಮಾಡಬೇಕು.

    ಪೊಲೀಸ್ ಇಲಾಖೆ, ಶಾಲೆಗಳು, ಕಾಲೇಜುಗಳು ಮತ್ತು ಸ್ಥಳೀಯ ಸಂಸ್ಥೆಗಳು ಸೇರಿ ಜಾಗೃತಿ ಅಭಿಯಾನಗಳನ್ನು ನಡೆಸಬೇಕು. ಮದ್ಯ ಮತ್ತು ಮಾದಕ ವಸ್ತುಗಳ ವ್ಯಸನದಂತೆ ಆನ್‌ಲೈನ್ ಜೂಜಾಟವನ್ನೂ ಗಂಭೀರ ಸಾಮಾಜಿಕ ಸಮಸ್ಯೆಯಾಗಿ ಪರಿಗಣಿಸುವ ಸಮಯ ಬಂದಿದೆ. ಕುಟುಂಬಗಳು ಕೂಡ ಸದಸ್ಯರ ಆರ್ಥಿಕ ಚಟುವಟಿಕೆಗಳು ಮತ್ತು ವರ್ತನೆಯಲ್ಲಿ ಆಗುತ್ತಿರುವ ಬದಲಾವಣೆಗಳ ಬಗ್ಗೆ ಎಚ್ಚರಿಕೆಯಿಂದಿರಬೇಕು.

    ಒಬ್ಬ ವ್ಯಕ್ತಿ ಹಣ ಕಳೆದುಕೊಳ್ಳುವುದಕ್ಕಿಂತ ದೊಡ್ಡ ನಷ್ಟವೆಂದರೆ ಒಂದು ಕುಟುಂಬದ ನಾಶ. ಮಕ್ಕಳ ಭವಿಷ್ಯ ಕತ್ತಲಾಗುವುದು. ತಾಯಿಯನ್ನು ಕಳೆದುಕೊಂಡ ಮಕ್ಕಳು, ತಂದೆಯನ್ನು ಜೈಲಿಗೆ ಕಳುಹಿಸಿದ ಪರಿಸ್ಥಿತಿ, ಅಳಿದುಹೋದ ಕುಟುಂಬದ ಕನಸುಗಳು — ಇವೆಲ್ಲಕ್ಕೂ ಸಮಾಜವಾಗಿ ನಾವು ಬೆಲೆ ತೆರುತ್ತಿದ್ದೇವೆ.

    ಪ್ರಶ್ನೆ ಒಂದೇ…

    ಇನ್ನೆಷ್ಟು ಹೆಣ್ಣು ಬಲಿಯಾಗಬೇಕು?
    ಇನ್ನೆಷ್ಟು ಮಕ್ಕಳು ಅನಾಥರಾಗಬೇಕು?
    ಇನ್ನೆಷ್ಟು ಕುಟುಂಬಗಳು ಆನ್‌ಲೈನ್ ಜೂಜಾಟದ ಬಲೆಗೆ ಬೀಳಬೇಕು?

    ಇದೀಗ ಕೇವಲ ಒಂದು ಕುಟುಂಬದ ದುಃಖದ ಕಥೆಯಲ್ಲ. ಇದು ಸಮಾಜಕ್ಕೆ ಮೊಳಗುತ್ತಿರುವ ಅಪಾಯದ ಗಂಟೆ. ಆನ್‌ಲೈನ್ ಬೆಟ್ಟಿಂಗ್‌ನಲ್ಲಿ ಸೋಲುವುದು ಕೇವಲ ಹಣವಲ್ಲಒಬ್ಬ ಹೆಂಡತಿಯ ನೆಮ್ಮದಿ, ಇಬ್ಬರುಮೂರು ಪುಟ್ಟ ಮಕ್ಕಳ ಭವಿಷ್ಯ, ಮತ್ತು ಇಡೀ ಕುಟುಂಬದ ಕನಸು. ಬೆಂಗಳೂರಿನ ಮಂಜುಳಾ ಪ್ರಕರಣ ಎಚ್ಚರಿಕೆಯ ಗಂಟೆಯಾಗಬೇಕು.

    ಮಂಗಳೂರಿನಿಂದ ಬೆಂಗಳೂರುವರೆಗೆ ಇಂತಹ ಘಟನೆಗಳು ಮತ್ತೆ ಮತ್ತೇ ಮರುಕಳಿಸುವ ಮೊದಲು ಸರ್ಕಾರ, ಪೊಲೀಸ್ ಇಲಾಖೆ, ಸೈಬರ್ ಕ್ರೈಂ ವಿಭಾಗ ಮತ್ತು ಸಮಾಜ ಒಟ್ಟಾಗಿ ಕಠಿಣ ಕ್ರಮ ಕೈಗೊಳ್ಳಬೇಕಾಗಿದೆ. ಇಲ್ಲದಿದ್ದರೆ ಮುಂದಿನ ಬಲಿಪಶು ಮತ್ತೊಂದು ಕುಟುಂಬವಾಗಬಹುದು.

    ##BanOnlineBettingApps #JusticeForFamilies #MangaloreCommissioner #MangalorePolice #KarnatakaPolice #SaveChildrenFuture #StopGamingAddiction

    COMMENTS

    Login with Gmail to comment

    ಇನ್ನಷ್ಟು ಸುದ್ದಿ

    ದೇಶಕ್ಕಾಗಿ ಹಾರಿದ ಯುವ ಪೈಲಟ್: ಅಸ್ಸಾಂ ದುರಂತದಲ್ಲಿ ಐಎಎಫ್ ಅಧಿಕಾರಿ ವೀರಮರಣ
    ಶಾಲೆ ಹತ್ತಿರವಿದ್ದರೂ,ಮಕ್ಕಳ ಹೆಲ್ಮೆಟ್ ನಿರ್ಲಕ್ಷಿಸಬೇಡಿ!4 ವರ್ಷದೊಳಗಿನ ಮಗುಗೂ ಹೆಲ್ಮೆಟ್ ಕಡ್ಡಾಯ!
    ಮಕ್ಕಳ ಕೈಯಿಂದ ಮೊಬೈಲ್ ಕಸಿಯಲು ಮುಂದಾದ ಬ್ರಿಟನ್!ಯುಕೆಯ ನಿರ್ಧಾರಕ್ಕೆ ವಿಶ್ವದ ಗಮನ…
    ಕೇಂದ್ರ ಸಚಿವ ಸೋಮಣ್ಣರ ವಿರುದ್ಧ  ವಾಗ್ದಾಳಿ: “ನಡೆದು ಬಂದ ದಾರಿ ಮರೆತು ಮಾತನಾಡಬೇಡಿ”
    ಭೋಪಾಲ್ ತ್ವಿಷಾ ಶರ್ಮಾ ಪ್ರಕರಣ ಪೋಷಕರ ಪಟ್ಟು-ಅಂತ್ಯಕ್ರಿಯೆ ಮಾಡುವುದಿಲ್ಲ “ನ್ಯಾಯ ಸಿಗುವವರೆಗೂ ನಾವು ದೇಹವನ್ನು ಸ್ವೀಕರಿಸುವುದಿಲ್ಲ” 
    ಶಾಲಾ ವಾಹನಗಳ ಸುರಕ್ಷತೆ ಬಗ್ಗೆ ಜೆಡಿಎಸ್ ಆಗ್ರಹ
    ರಾಮ ಮಂದಿರ ಟ್ರಸ್ಟ್‌ಗೆ ಸರ್ಕಾರದ ನಿಯಂತ್ರಣವೇ ಇಲ್ಲ! ಆರ್‌ಟಿಐಗೂ ಬಾಧ್ಯತೆ ಇಲ್ಲ ಎಂದ ಸಿಐಸಿ
    ಮೂಡುಬಿದಿರೆಯಲ್ಲಿ ಖರೀದಿಸಿದ ಕೆಲವೇ ಗಂಟೆಗಳಲ್ಲಿ ಕಾರಿಗೆ ಬೆಂಕಿ! ತಪ್ಪಿದ ಭಾರೀ ದುರಂತ ..ಏಕಾಏಕಿ ಬೆಂಕಿ.ಕಾರಿನಲ್ಲಿದ್ದ ಕುಟುಂಬ ಅಪಾಯದಿಂದ ಪಾರು.
    ಮಂಗಳೂರಲ್ಲಿ ಮಳೆಯ ಅಬ್ಬರ… ಗುಡುಗು-ಮಿಂಚಿನ ಆಟ ದಕ್ಷಿಣ ಕನ್ನಡದಲ್ಲಿ ಮತ್ತೆ pre-ಮಾನ್ಸೂನ್ ಮ್ಯಾಜಿಕ್!?
    ಕರ್ನಾಟಕದಲ್ಲಿ ಯುಗಾದಿ ಹಬ್ಬಕ್ಕೂ ಮುನ್ನವೇ  ಮುಂಗಾರು  ಮಳೆರಂಗು – 5 ಜಿಲ್ಲೆಗಳಲ್ಲಿ ಆಲಿಕಲ್ಲು ಅಬ್ಬರ!
    ಆಹಾರ ಬೆಲೆ ಏರಿಕೆ: ಸಾಮಾನ್ಯರ ಅಡಿಗೆ ಮನೆಗೆ ಮತ್ತೆ ಹೊರೆ?
    ಶಾಸಕ ಸ್ಥಾನಕ್ಕೆ ರಾಜೀನಾಮೆ, ಯಶ್ವಂತರಾಯಗೌಡರ ನಡೆ  ಸಸ್ಪೆನ್ಸ್
    ವೆಟ್-ವೆಲ್‌ಗಳ ಕಳಪೆ ನಿರ್ವಹಣೆಚರಂಡಿ-ಬಾವಿಗಳಿಗೆ ಡ್ರೈನೇಜ್ ನೀರು..
    ಮರಣದಂಡನೆ ಶಿಕ್ಷೆಗೆ ಈಡಾದ  ತಮಿಳುನಾಡು   ಪೊಲೀಸರು
    ಶಿಶಿಲದಲ್ಲಿ ವಿಷಪೂರಿತ ಹಾವು ಕಚ್ಚಿ 65 ವರ್ಷದ ರೈತ ಮೃತ್ಯು
    “ಮಂಜಿನ ನಡುವೆ ಕ್ಷಣಾರ್ಧದಲ್ಲಿ ಮಾಯವಾದ ಮಗಳು”ಶ್ರೀನಂದಾ ಶವವಾಗಿ ಪತ್ತೆ…!
    ಬೆಂಗಳೂರಲ್ಲಿ Bowring Hospital ಬಳಿ ಗೋಡೆ ಕುಸಿತ ಮನ ಕಲುಕುವ ಘಟನೆ ಬಿಸಿಲಿನಿಂದ ತಪ್ಪಿಸಿಕೊಳ್ಳಲು ನಿಂತವರು… ಏಳು ಮಂದಿಯ ದುರಂತ ಅಂತ್ಯ.!
    ‘ಮೇಕ್ ಇನ್ ಇಂಡಿಯಾ’ಗೆ ಮತ್ತೊಂದು ದೊಡ್ಡ ಗೆಲುವು: C295 ವಿಮಾನದ ಮೊದಲ ಯಶಸ್ವಿ ಪರೀಕ್ಷಾ ಹಾರಾಟ
    Old Monk, Royal Challengeಗೆ ಭಾರೀ ಶಾಕ್..! FSSAI ಲ್ಯಾಬ್ ವರದಿಯಲ್ಲಿ ಬಯಲಾಯ್ತಾ ದೊಡ್ಡ ರಹಸ್ಯ?
    ಮಕ್ಕಳ ಸುರಕ್ಷತೆಯೇ ಮುಖ್ಯ – ಸಂದೇಶ ಕೊಟ್ಟ ಹೈಕೋರ್ಟ್
    ಸರ್ಕಾರಕ್ಕೆ CJP ಸವಾಲು…ದೆಹಲಿ ಪ್ರತಿಭಟನೆಗೆ ಹಿಂಸಾತ್ಮಕ ತಿರುವು..ಲಾಠಿಚಾರ್ಜ್, ಅಶ್ರುವಾಯು, ಇಂಟರ್ನೆಟ್ ಶಟ್‌ಡೌನ್..
    ಬಂಗಾಳದಲ್ಲಿ ಬಿಜೆಪಿಯ ಯುದ್ಧೋನ್ಮಾದ, ದೀದಿಯ ರಚ್ಚೆ…
    24 ಭಾರತೀಯರಿದ್ದ ಹಡಗಿನ ಮೇಲೆ ಅಮೆರಿಕಾ ದಾಳಿ: 3 ನಾವಿಕರ ಜೀವ ಬಲಿ
    ಈಶ್ವರ್ ಮಲ್ಪೆ ತಂಡಕ್ಕೆ MAHE ಸಂಸ್ಥೆಯಿಂದ ಅಮೂಲ್ಯ ರಕ್ಷಣಾ ವಾಹನ ಕೊಡುಗೆ-ಜೀವ ಉಳಿಸುವ ಸೇವೆಗೆ ಮತ್ತಷ್ಟು ಶಕ್ತಿ
    AIಗೆ ಒಂದು ಪ್ರಶ್ನೆ ಕೇಳಿದ್ರೆ…ಲಕ್ಷಾಂತರ ಲೀಟರ್ ನೀರು ಆವಿಯಾಗುತ್ತೆ…..!ಅದೇಗೆ.??AIಜಗತ್ತನ್ನು ಬದಲಾಯಿಸುತ್ತಿದೆ… ಆದರೆ ಶುದ್ಧ ನೀರಿನ ಜಲಮೂಲಗಳನ್ನು ಖಾಲಿ ಮಾಡುತ್ತಿದೆ.
    ಚುನಾವಣೆ ಗೆಲ್ಲುವುದು ಸಾಕಿನ್ನು, ರಾಷ್ಟ್ರದ ಸಣ್ಣ ಮತ್ತು ಮಧ್ಯಮ ವ್ಯವಹಾರ ಸ್ಥರ ಹಿತ ಕಾಪಾಡಿ
    ಕರ್ನಾಟಕದಲ್ಲಿ ಅತಿ ಕನಿಷ್ಠ ಮಟ್ಟಕ್ಕೆ ಕುಸಿದ ‘ಟೀನ್ ಪ್ರೆಗ್ನೆನ್ಸಿ’! 70% ಕೇಸ್‌ಗಳು ಮಾಯವಾಗಿದ್ದು ಹೇಗೆ?
    ನಾಸಿಕ್‌ನ Tata Consultancy Services ಕಚೇರಿಯಲ್ಲಿ ಗಂಭೀರ ಆರೋಪಗಳ ನಡುವೆ ಉದ್ಯೋಗಿಗಳಿಗೆ ವರ್ಕ್ ಫ್ರಮ್ ಹೋಮ್ — ಸುರಕ್ಷತೆಗೆ ಮೊದಲ ಆದ್ಯತೆ.
    ಮೂಡಬಿದ್ರೆ: ಅಕ್ರಮ ಜಾನುವಾರು ಸಾಗಾಟ -ಆರೋಪಿಗಳ ಬಂಧನ, ವಾಹನ ಹಾಗೂ ಕರು ವಶಕ್ಕೆ.
    ಅಪ್ಪ -ಅಮ್ಮ ಮಕ್ಕಳ–ಬಾಂಧವ್ಯಕ್ಕೆ ಎಚ್ಚರಿಕೆಯ ಗಂಟೆ……!ಸುತ್ತಿಗೆಯಿಂದ ಹೊಡೆದು ತಂದೆ-ತಾಯಿಯನ್ನೇ ಕೊಂದ ಮಗ!