📍 Karavali Maruta
LIVE | CONTACT
ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

ಇಬ್ಬರು ಮಕ್ಕಳ ಕಣ್ಣೆದುರೇ ಪತ್ನಿಯನ್ನು ಸುಮಾರು 20 ಬಾರಿ ಚಾಕುವಿನಿಂದ ಇರಿದು ಕೊಂದ ಪತಿ – ಕಾರಣ ಮೊಬೈಲ್‌ನಲ್ಲಿ ಆಟ


ಬೆಂಗಳೂರು ಮಹದೇವಪುರದಲ್ಲಿ ನಡೆದ ಮಂಜುಳಾ ಹತ್ಯೆ ರಾಜ್ಯವನ್ನೇ ಬೆಚ್ಚಿಬೀಳಿಸಿದೆ. ಇಬ್ಬರು ಮಕ್ಕಳ ಕಣ್ಣೆದುರೇ ಪತ್ನಿಯನ್ನು ಸುಮಾರು 20 ಬಾರಿ ಚಾಕುವಿನಿಂದ ಇರಿದು ಕೊಂದ ಪತಿ ಪ್ರದೀಪ್, ತನ್ನ ಸೆಲ್ಫಿ ವಿಡಿಯೋದಲ್ಲಿ “ಆನ್‌ಲೈನ್ ಗೇಮಿಂಗ್‌ನಿಂದ ನನ್ನ ಕುಟುಂಬ ಹಾಳಾಯಿತು” ಎಂದು ಹೇಳಿರುವುದು ಈ ಘಟನೆಯ ಅತ್ಯಂತ ಆತಂಕಕಾರಿ ಅಂಶವಾಗಿದೆ.

ಮಂಜುಳಾ ಅವರ ವೃತ್ತಿ ಹೋಂ ಗಾರ್ಡ್ (Home Guard) ಆಗಿತ್ತು. ಅವರು ಬೆಂಗಳೂರಿನ ಮಹದೇವಪುರ ಪೊಲೀಸ್ ಠಾಣೆಗೆ ನಿಯೋಜಿತರಾಗಿದ್ದರು . ಅವರು ಸುಮಾರು 32 ವರ್ಷದವರು ಆಗಿದ್ದು, ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆ ಮನೆಗೆ ತಡವಾಗಿ ಬರುತ್ತಿದ್ದ ಕಾರಣ ಪತಿ ಪ್ರದೀಪ್ ಅನುಮಾನ ಪಡುತ್ತಿದ್ದನೆಂದು ಕುಟುಂಬದವರು ಆರೋಪಿಸಿದ್ದಾರೆ.

ಒಬ್ಬ ಮಹಿಳೆ, ಇಬ್ಬರು ಮಕ್ಕಳು, ಒಂದು ಕುಟುಂಬ… ಎಲ್ಲವೂ ಕ್ಷಣಾರ್ಧದಲ್ಲಿ ಚೂರುಚೂರಾಯಿತು. ಕಾರಣ ಕೇವಲ ಕೋಪವಲ್ಲ. ವರ್ಷಗಳಿಂದ ಬೆಳೆದ ಅನುಮಾನ, ಆರ್ಥಿಕ ನಷ್ಟ, ಜೂಜಾಟದ ವ್ಯಸನ ಮತ್ತು ಮಾನಸಿಕ ಅಸ್ಥಿರತೆ. ಕುಟುಂಬದವರ ಮಾಹಿತಿ ಪ್ರಕಾರ ಪ್ರದೀಪ್ ಆನ್‌ಲೈನ್ ಬೆಟ್ಟಿಂಗ್‌ನಲ್ಲಿ ಸುಮಾರು 7 ರಿಂದ 8 ಲಕ್ಷ ರೂಪಾಯಿಗಳವರೆಗೆ ಕಳೆದುಕೊಂಡಿದ್ದ. ಹಣ ಕಳೆದುಕೊಂಡಂತೆ ಕುಟುಂಬದ ಮೇಲಿನ ಜವಾಬ್ದಾರಿಯೂ ಕಳೆದುಹೋಯಿತು.

ದುರದೃಷ್ಟವಶಾತ್ ಇದು ಒಂದೇ ಘಟನೆ ಅಲ್ಲ. ಮಂಗಳೂರು ಸೇರಿದಂತೆ ಕರ್ನಾಟಕದ ಅನೇಕ ಭಾಗಗಳಲ್ಲಿ ಇದೇ ಮಾದರಿಯ ಕಥೆಗಳು ಕೇಳಿಬರುತ್ತಿವೆ. ಪತಿ ಅಥವಾ ಕುಟುಂಬದ ಸದಸ್ಯರು ಆನ್‌ಲೈನ್ ಗೇಮಿಂಗ್ ಮತ್ತು ಬೆಟ್ಟಿಂಗ್‌ಗೆ ಅಂಟಿಕೊಂಡು ಲಕ್ಷಾಂತರ ರೂಪಾಯಿ ಕಳೆದುಕೊಳ್ಳುತ್ತಿದ್ದಾರೆ. ಮನೆ ಖರ್ಚು, ಮಕ್ಕಳ ಶಿಕ್ಷಣ, ಸಾಲದ ಹೊರೆ, ಕುಟುಂಬದ ಭವಿಷ್ಯ ಎಲ್ಲವೂ ಕಡೆಗಣಿಸಲ್ಪಡುತ್ತಿದೆ. ಹಣ ಕಳೆದುಹೋದ ನಂತರ ಮಾನಸಿಕ ಒತ್ತಡ, ಕೊನೆಗೆ ಮನೆಯಲ್ಲೇ ಜಗಳ,ಕೋಪ, ಅನುಮಾನ, ಗೃಹಹಿಂಸೆ ಮತ್ತು ಕೆಲವೊಮ್ಮೆ ಆತ್ಮಹತ್ಯೆ ಅಥವಾ ಕೊಲೆಯಂತಹ ದುರಂತಗಳಿಗೆ ದಾರಿ ಮಾಡಿಕೊಡುತ್ತಿದೆ.

ಇಂದು ಮೊಬೈಲ್‌ನಲ್ಲಿ ನಡೆಯುತ್ತಿರುವ ಕೆಲವು ಆನ್‌ಲೈನ್ ಬೆಟ್ಟಿಂಗ್ ಮತ್ತು ಜೂಜಾಟದ ಆ್ಯಪ್‌ಗಳು ಅನೇಕ ಕುಟುಂಬಗಳಿಗೆ ಕಾಣದ ಶತ್ರುವಾಗಿವೆ. ಆರಂಭದಲ್ಲಿ “ಸಣ್ಣ ಹಣ ಗೆಲ್ಲಬಹುದು” ಎಂಬ ಆಸೆ ಹುಟ್ಟಿಸುತ್ತವೆ. ನಂತರ ಅದು ವ್ಯಸನವಾಗಿ ಬದಲಾಗುತ್ತದೆ. ವ್ಯಸನ ಬೆಳೆದಂತೆ ವ್ಯಕ್ತಿ ತನ್ನ ಸಮಯ, ಹಣ, ಸಂಬಂಧಗಳು ಮತ್ತು ಕೊನೆಗೆ ತನ್ನ ಜೀವನವನ್ನೇ ಕಳೆದುಕೊಳ್ಳುವ ಹಂತಕ್ಕೆ ತಲುಪುತ್ತಾನೆ.

ಅಂತಹ ಸಂದರ್ಭಗಳಲ್ಲಿ ಅತ್ಯಂತ ಹೆಚ್ಚು ನೋವು ಅನುಭವಿಸುವವರು ಹೆಂಡತಿ ಮತ್ತು ಮಕ್ಕಳು. ಇಬ್ಬರು ಅಥವಾ ಮೂವರು ಪುಟ್ಟ ಮಕ್ಕಳನ್ನು ನೋಡಿಕೊಳ್ಳುವುದು, ಶಾಲಾ ಶುಲ್ಕ ಪಾವತಿಸುವುದು, ಮನೆ ಬಾಡಿಗೆ, ದಿನನಿತ್ಯದ ಖರ್ಚು, ವೃದ್ಧ ತಂದೆ-ತಾಯಿಯ ಜವಾಬ್ದಾರಿ — ಎಲ್ಲವೂ ಮಹಿಳೆಯ ಹೆಗಲಿನ ಮೇಲೆ ಬೀಳುತ್ತದೆ. ಪತಿ ಸಂಪಾದಿಸಿದ ಹಣವನ್ನು ಕುಟುಂಬಕ್ಕೆ ಬಳಸುವ ಬದಲು ಮೊಬೈಲ್ ಪರದೆಯೊಳಗೆ ಕಳೆದುಕೊಳ್ಳುತ್ತಿರುವಾಗ, ಮನೆಯ ಮಹಿಳೆ ಕಣ್ಣೀರಿನೊಳಗೆ ಬದುಕು ಸಾಗಿಸುತ್ತಾಳೆ.

ಅನೇಕ ಮಹಿಳೆಯರು ಸಮಾಜದ ಭಯಕ್ಕೆ, ಮಕ್ಕಳ ಭವಿಷ್ಯಕ್ಕಾಗಿ ಅಥವಾ ಕುಟುಂಬ ಉಳಿಯಲಿ ಎಂಬ ಆಶೆಯಿಂದ ಈ ನೋವನ್ನು ಯಾರಿಗೂ ಹೇಳದೆ ಸಹಿಸಿಕೊಳ್ಳುತ್ತಾರೆ. ಗಂಡ ಹಣ ಕಳೆದುಕೊಂಡರೂ, ಸಾಲ ಮಾಡಿದರೂ, ಮನೆಯ ವಸ್ತುಗಳನ್ನು ಮಾರಿದರೂ, ಬಂಧುಗಳ ಮುಂದೆ ಅವಮಾನ ಮಾಡಿದರೂ, ಕೊನೆಗೆ ಮನೆ ನಡೆಸಲು ಮಹಿಳೆಯೇ ಹೋರಾಡಬೇಕಾಗುತ್ತದೆ. ಮಕ್ಕಳಿಗೆ ಊಟ ಕೊಡಲು, ಶಾಲೆಗೆ ಕಳುಹಿಸಲು, ಭವಿಷ್ಯ ಕಟ್ಟಲು ಅವಳು ಒಬ್ಬಳೇ ಯುದ್ಧ ಮಾಡುತ್ತಾಳೆ.

ಇಂತಹ ಘಟನೆಗಳು ಮರುಕಳಿಸದಂತೆ ಸರ್ಕಾರ, ಪೊಲೀಸ್ ಇಲಾಖೆ ಮತ್ತು ಸಮಾಜ ತಕ್ಷಣ ಎಚ್ಚೆತ್ತುಕೊಳ್ಳಬೇಕಾಗಿದೆ. ಆನ್‌ಲೈನ್ ಜೂಜಾಟ ಮತ್ತು ಬೆಟ್ಟಿಂಗ್ ಆ್ಯಪ್‌ಗಳ ಮೇಲೆ ಕಠಿಣ ನಿಯಂತ್ರಣ ಅಗತ್ಯ. ಅಕ್ರಮ ವೇದಿಕೆಗಳನ್ನು ಸಂಪೂರ್ಣವಾಗಿ ನಿಷೇಧಿಸುವ ಬಗ್ಗೆ ಗಂಭೀರ ಚಿಂತನೆ ನಡೆಯಬೇಕು.

ಬ್ಯಾಂಕ್ ಖಾತೆಗಳಿಂದ ನಿರಂತರವಾಗಿ ಬೆಟ್ಟಿಂಗ್ ವ್ಯವಹಾರ ನಡೆಸುತ್ತಿರುವವರನ್ನು ಗುರುತಿಸಿ ಅವರಿಗೆ ಕಡ್ಡಾಯ ಕೌನ್ಸೆಲಿಂಗ್ ವ್ಯವಸ್ಥೆ ಮಾಡಬೇಕು.

ಪೊಲೀಸ್ ಇಲಾಖೆ, ಶಾಲೆಗಳು, ಕಾಲೇಜುಗಳು ಮತ್ತು ಸ್ಥಳೀಯ ಸಂಸ್ಥೆಗಳು ಸೇರಿ ಜಾಗೃತಿ ಅಭಿಯಾನಗಳನ್ನು ನಡೆಸಬೇಕು. ಮದ್ಯ ಮತ್ತು ಮಾದಕ ವಸ್ತುಗಳ ವ್ಯಸನದಂತೆ ಆನ್‌ಲೈನ್ ಜೂಜಾಟವನ್ನೂ ಗಂಭೀರ ಸಾಮಾಜಿಕ ಸಮಸ್ಯೆಯಾಗಿ ಪರಿಗಣಿಸುವ ಸಮಯ ಬಂದಿದೆ. ಕುಟುಂಬಗಳು ಕೂಡ ಸದಸ್ಯರ ಆರ್ಥಿಕ ಚಟುವಟಿಕೆಗಳು ಮತ್ತು ವರ್ತನೆಯಲ್ಲಿ ಆಗುತ್ತಿರುವ ಬದಲಾವಣೆಗಳ ಬಗ್ಗೆ ಎಚ್ಚರಿಕೆಯಿಂದಿರಬೇಕು.

ಒಬ್ಬ ವ್ಯಕ್ತಿ ಹಣ ಕಳೆದುಕೊಳ್ಳುವುದಕ್ಕಿಂತ ದೊಡ್ಡ ನಷ್ಟವೆಂದರೆ ಒಂದು ಕುಟುಂಬದ ನಾಶ. ಮಕ್ಕಳ ಭವಿಷ್ಯ ಕತ್ತಲಾಗುವುದು. ತಾಯಿಯನ್ನು ಕಳೆದುಕೊಂಡ ಮಕ್ಕಳು, ತಂದೆಯನ್ನು ಜೈಲಿಗೆ ಕಳುಹಿಸಿದ ಪರಿಸ್ಥಿತಿ, ಅಳಿದುಹೋದ ಕುಟುಂಬದ ಕನಸುಗಳು — ಇವೆಲ್ಲಕ್ಕೂ ಸಮಾಜವಾಗಿ ನಾವು ಬೆಲೆ ತೆರುತ್ತಿದ್ದೇವೆ.

ಪ್ರಶ್ನೆ ಒಂದೇ…

ಇನ್ನೆಷ್ಟು ಹೆಣ್ಣು ಬಲಿಯಾಗಬೇಕು?
ಇನ್ನೆಷ್ಟು ಮಕ್ಕಳು ಅನಾಥರಾಗಬೇಕು?
ಇನ್ನೆಷ್ಟು ಕುಟುಂಬಗಳು ಆನ್‌ಲೈನ್ ಜೂಜಾಟದ ಬಲೆಗೆ ಬೀಳಬೇಕು?

ಇದೀಗ ಕೇವಲ ಒಂದು ಕುಟುಂಬದ ದುಃಖದ ಕಥೆಯಲ್ಲ. ಇದು ಸಮಾಜಕ್ಕೆ ಮೊಳಗುತ್ತಿರುವ ಅಪಾಯದ ಗಂಟೆ. ಆನ್‌ಲೈನ್ ಬೆಟ್ಟಿಂಗ್‌ನಲ್ಲಿ ಸೋಲುವುದು ಕೇವಲ ಹಣವಲ್ಲಒಬ್ಬ ಹೆಂಡತಿಯ ನೆಮ್ಮದಿ, ಇಬ್ಬರುಮೂರು ಪುಟ್ಟ ಮಕ್ಕಳ ಭವಿಷ್ಯ, ಮತ್ತು ಇಡೀ ಕುಟುಂಬದ ಕನಸು. ಬೆಂಗಳೂರಿನ ಮಂಜುಳಾ ಪ್ರಕರಣ ಎಚ್ಚರಿಕೆಯ ಗಂಟೆಯಾಗಬೇಕು.

ಮಂಗಳೂರಿನಿಂದ ಬೆಂಗಳೂರುವರೆಗೆ ಇಂತಹ ಘಟನೆಗಳು ಮತ್ತೆ ಮತ್ತೇ ಮರುಕಳಿಸುವ ಮೊದಲು ಸರ್ಕಾರ, ಪೊಲೀಸ್ ಇಲಾಖೆ, ಸೈಬರ್ ಕ್ರೈಂ ವಿಭಾಗ ಮತ್ತು ಸಮಾಜ ಒಟ್ಟಾಗಿ ಕಠಿಣ ಕ್ರಮ ಕೈಗೊಳ್ಳಬೇಕಾಗಿದೆ. ಇಲ್ಲದಿದ್ದರೆ ಮುಂದಿನ ಬಲಿಪಶು ಮತ್ತೊಂದು ಕುಟುಂಬವಾಗಬಹುದು.

##BanOnlineBettingApps #JusticeForFamilies #MangaloreCommissioner #MangalorePolice #KarnatakaPolice #SaveChildrenFuture #StopGamingAddiction

COMMENTS

Login with Gmail to comment

ಇನ್ನಷ್ಟು ಸುದ್ದಿ

ರಾಜಕೀಯ ಬದಲಾಗುತ್ತಿದೆ -ಪಂಚರಾಜ್ಯ election ರಿಸಲ್ಟ್ “ಗೆಲುವು-ಸೋಲಿನ ಶಕ್ತಿ ಪಕ್ಷದಲ್ಲಲ್ಲ… ಜನರ ಕೈಯಲ್ಲಿ”
ಇರಾನ್ ಬಿಕ್ಕಟ್ಟು ವೀಸಾ ವಿಸ್ತರಿಸಲು ವಿದೇಶಿ ಪ್ರಜೆಗಳು ಹತ್ತಿರದ FRRO ಅನ್ನು ಸಂಪರ್ಕಿಸಲು ಭಾರತ ಸಲಹೆ
ಮದರಸಾದಲ್ಲಿ ದೌರ್ಜನ್ಯ ಮತ್ತು ಬಲವಂತದ ಕೂಲಿ ಆರೋಪ-24 ಮಕ್ಕಳ ರಕ್ಷಣೆ
ಪ್ರಜ್ಞೆ ಬಂದಾಗ ಎದೆಯ ಮೇಲೆ ಬಿದ್ದಿತ್ತು ಪತಿಯ ಶವ!ಹಸೆಮಣೆ ಏರಿದ ಕೆಲವೇ ಗಂಟೆಗಳಲ್ಲಿ ಕತ್ತಲಾದ ಬದುಕು..
ಜೆಡಿಎಸ್  ಜನರಲ್ ಸೆಕ್ರೆಟರಿಯಾಗಿ ಯೋಗೇಶ್ ಶೆಟ್ಟಿ ಜಪ್ಪು ಆಯ್ಕೆಯ ಲೆಕ್ಕಾಚಾರವೇನು?
ಮಂಗಳೂರು ಏರ್‌ಪೋರ್ಟ್ ಬಳಿ ಬರ್ತಿದೆ ಲಕ್ಸುರಿ ಇಂಟರ್‌ನ್ಯಾಷನಲ್ ಹೋಟೆಲ್!
“ಬರ್ಕಾಸ್ತು ಘಟಕಕ್ಕೆ ‘ಬೋಗಸ್ ನಾಯಕತ್ವ’ – ಕರವೇ ಮಹಿಳಾ ಘಟಕದಲ್ಲಿ ಭಿನ್ನಮತ ಸ್ಫೋಟ!”
ಬೈಂದೂರಿನಲ್ಲಿ ಹಳೆ ವೈಷಮ್ಯದಿಂದ ಮನೆಗೆ ನುಗ್ಗಿ ಹಲ್ಲೆಗೆ ಯತ್ನ
ಇದು IPLನಲ್ಲಿ ಹೊಸ ಹೀರೋ ಹುಟ್ಟಿದಂತೇ…ಆದ್ರೆ ಕ್ರಿಕೆಟ್ ಅಲ್ಲ, ಬಾಕ್ಸಿಂಗ್‌ನಲ್ಲಿ! 🥊🔥
Side Income ಇಂದು ಆಯ್ಕೆ ಅಲ್ಲ, ಅಗತ್ಯ …ಹಣ ಗಳಿಸಿ… ನಿದ್ರೆಯಲ್ಲೂ!ಒಂದು ಸಂಬಳ ಸಾಕಾಗದ ಕಾಲ ಇದು.
ಕೆಲವೊಮ್ಮೆ ದೇಹದ ಶತ್ರು “ಲೂಪಸ್ “ಹೊರಗಿಲ್ಲ… ಒಳಗೇ ಇರುತ್ತದೆ.ಮಹಿಳೆಯರ ದಣಿವು, ಸಂಧಿ ನೋವು, ತೂಕ ಇಳಿಕೆ —. ನಿರ್ಲಕ್ಷ್ಯ ಬೇಡ. ‘ಸಾಮಾನ್ಯ’ ಎಂದು ಕಡೆಗಣಿಸಬೇಡಿ.
📣3 ತಿಂಗಳಲ್ಲಿ LPG ಸಂಪರ್ಕ ರದ್ದು ??– PNGಗೆ ಬದಲಾವಣೆ ಕಡ್ಡಾಯ” ಈಗಲೇ ಸತ್ಯ ತಿಳಿದುಕೊಳ್ಳಿ..! ಗ್ಯಾಸ್ ಬಗ್ಗೆ ಗೊಂದಲಕ್ಕೆ ಸ್ಪಷ್ಟ ಉತ್ತರ ಇಲ್ಲಿದೆ.
ಕಪ್ಪೆ ಚಿಪ್ಪು ದುರಂತಕ್ಕೆ ಮತ್ತೆರಡು ಜೀವ ಬಲಿ, ಬಲಿಯ ಸಂಖ್ಯೆ ಏರುವ ಸಾಧ್ಯತೆ
ರೀಲ್ಸ್ ಮಾಡುವ ಕನಸು… ಕ್ಷಣದಲ್ಲೇ ದುರ್ಘಟನೆ,  ಜೀವವನ್ನೇ ಕಳೆದುಕೊಂಡ ಬಾಲಕ.
ಇನ್ನು ಹೈವೇಯಲ್ಲಿ ಲಿಮಿಟ್ ಗಿಂತ ವೇಗವಾಗಿ ಹೋಗುವವರು ಹುಷಾರಾಗಿರಿ…
ವಿಶಾಖಪಟ್ಟಣಂ ಉಕ್ಕಿನ ಕಾರ್ಖಾನೆ ದುರಂತ:ಕೆಲವೇ ಕ್ಷಣಗಳಲ್ಲಿ ಎಂಟು ಜೀವಗಳನ್ನು ನುಂಗಿದ ಉಕ್ಕಿನ ಬೆಂಕಿ!ಕೆಲಸಕ್ಕೆ ಹೋದವರು ಮನೆಗೆ ಮರಳಲಿಲ್ಲ… 
ಶೋಕಿ ಜೀವನಕ್ಕೆ ಸ್ಕೀಮ್ ಸ್ಕ್ಯಾಮ್:ಗಿಫ್ಟ್ ಆಸೆ-ದೊಡ್ಡ ಕನಸು ತೋರಿಸಿ, ಹಣದೊಂದಿಗೆ ಪರಾರಿ—ಇದುವೇ ನಕಲಿ ಸ್ಕೀಮ್‌ಗಳ ಅಸಲಿ ಕಥೆ!
ಕಾಂಗ್ರೆಸ್ ಮೇಲಿನ ಕೋಪ ತಣ್ಣಗಾಗಿಲ್ಲ….. ಜನಪರ ಯೋಜನೆ ಮುಂದುವರೆಸಲು ಸ್ಟಾಲಿನ್ ಮನವಿ
ಯುಎಇಯಿಂದ ಯುರೋಪ್ ತನಕ ಮೋದಿ ಐತಿಹಾಸಿಕ ವಿದೇಶ ಪ್ರವಾಸ…ಡಿಪ್ಲೊಮಸಿ – ತೈಲದಿಂದ ತಂತ್ರಜ್ಞಾನವರೆಗೆ ಇದು ಭಾರತದ ಭವಿಷ್ಯದ ತಂತ್ರಾತ್ಮಕ ನಡೆ ?!
ಟ್ರಂಪ್ ಮೇಲೆ ದಾಳಿ ಯತ್ನ -ಗನ್ ಸದ್ದು ಮತ್ತೆ ವೈಟ್ ಹೌಸ್ ರಾಜಕೀಯವನ್ನ ನಡುಗಿಸಿದೆ!ಭದ್ರತಾ ಪ್ರಶ್ನೆ!
‘ಮೇಕ್ ಇನ್ ಇಂಡಿಯಾ’ಗೆ ಮತ್ತೊಂದು ದೊಡ್ಡ ಗೆಲುವು: C295 ವಿಮಾನದ ಮೊದಲ ಯಶಸ್ವಿ ಪರೀಕ್ಷಾ ಹಾರಾಟ
ಬಲಪಂಥೀಯರ ಜೊತೆ ಮುಖ್ಯಮಂತ್ರಿಗಳ ಸ್ನೇಹ : ಅಭದ್ರತೆ ಯಾರಿಗೆಲ್ಲ?
ಸಾರ್ವಜನಿಕ ಸ್ಥಳದಲ್ಲಿ ಕೈಕೈ ಮಿಲಾಯಿಸಿ ಜಗಳ ಮಾಡಿದ್ರೇ ಹುಷಾರ್…!
“ಬಾದಾಮಿ ತಿಂದರೆ ಮೆಮೊರಿ ಹೆಚ್ಚಾಗಿ, ನನ್ನ ಫೈಲ್ ಎಲ್ಲಿ ಇದೆ ಎಂದು ನೆನಪಾಗಬಹುದು”-ಹಣ ಕೊಡದೇ ಕೆಲಸ ಆಗೋದಿಲ್ಲ ಎಂಬ ಭ್ರಷ್ಟ ವ್ಯವಸ್ಥೆ ಇನ್ನೂ ಬಲವಾಗಿ ಜೀವಂತವಾಗಿದೆ…!
ಕಾಂಗೋದಲ್ಲಿ ಎಬೋಲಾ ಅಟ್ಟಹಾಸ:ಜಗತ್ತಿಗೆ ಮತ್ತೆ ಸಾಂಕ್ರಾಮಿಕ ಭೀತಿಯ ಗಂಟೆ..!
ಬೆಂಗಳೂರಿನಲ್ಲಿ₹2,384 ಕೋಟಿ GSTದಂಧೆ ಭೇದಿಸಿದ ಇಲಾಖೆ.. ಭರ್ಜರಿ ದಾಳಿ! ಭಾರೀ GST ಸ್ಕ್ಯಾಂ .. ಹಲವರು ಬಲೆಗೆ ಬೀಳುವ ಸಾಧ್ಯತೆ!…
ಬಂಗಾಳ ರಾಜಕೀಯದಲ್ಲಿ ಭಾರಿ ಟ್ವಿಸ್ಟ್ ಮೇಲೆ ಟ್ವಿಸ್ಟ್..! ಸುವೇಂದು ಪ್ರಮಾಣವಚನಕ್ಕೂ ಬ್ರೇಕ್ ಬೀಳುತ್ತಾ?ಸುಪ್ರೀಂ ಕೋರ್ಟ್ ಎಂಟ್ರಿ ಆಗುತ್ತಾ?
ಸಿಎಂ ಕುರ್ಚಿಯನ್ನು, ಡಿಕೆಗೆ ಮಗ್ಗಲ ಮುಳ್ಳನ್ನಾಗಿಸಲು ಸಕಲ ತಯಾರಿ
ಕೂತ್ಕೊಳಪ್ಪ ಡಿಕೆಶಿ ನಿಂದೆ ಖುರ್ಚಿ … ಅಂತ CM ಸಿದ್ದು ಯಾವಾಗ ಹೇಳ್ಬೇಕಿತ್ತು??ಅಹಿಂದ ಮಾಸ್ ಲೀಡರ್ ವರ್ಸಸ್ ಮನಿ ಮ್ಯಾನ್..ಕರ್ನಾಟಕ ರಾಜಕಾರಣದ ಅತಿ ದೊಡ್ಡ ಟ್ವಿಸ್ಟ್!
“ಅಪ್ಪಾ” ಎಂದು ಕರೆದವನ ಕೈಯಿಂದಲೇ 18 ತಿಂಗಳ ಕಂದಮ್ಮನ ದೇಹದ ಮೇಲೆ 91 ಗಾಯದ ಗುರುತು – ಅಮಾನುಷ ಹತ್ಯೆ!..