📍 Karavali Maruta
LIVE | CONTACT
ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

ತಡರಾತ್ರಿ ಭಟ್ಕಳದಲ್ಲಿ ವಿಚ್ಛಿದ್ರಕಾರಿ ಕೋಮುವಾದಿಗಳಿಂದ ದಾಂದಲೆ

ಕೆಲವು ಸಮಯದಿಂದ ತಣ್ಣಗಿದ್ದ ಕರಾವಳಿಯ ಭಟ್ಕಳದಲ್ಲಿ ಮತ್ತೆ ಅನಾಹುತಕಾರಿ ಚಟುವಟಿಕೆಗಳು ಪ್ರಾರಂಭವಾಗುತ್ತಿದೆ ನೋಡಿ. ನಿನ್ನೆ ರಾತ್ರಿ, ಇಲ್ಲಿನ ರಾಷ್ಟ್ರೀಯ ಹೆದ್ದಾರಿಯ ಪಕ್ಕದಲ್ಲಿ ಧಾರ್ಮಿಕ ಚಟುವಟಿಕೆಯ ಕಟ್ಟೆಯೊಂದನ್ನು ಧ್ವಂಸ ಮಾಡುವ ಮೂಲಕ ಇಂತಹದೊಂದು ಹಿಂಸಾತ್ಮಕ ಚಟುವಟಿಕೆಗೆ ಆಹ್ವಾನ ನೀಡಿದ್ದಾರೆ ಇಲ್ಲಿನ ಕಮ್ಯುನಲ್ ಕ್ರಿಮಿಗಳು. 

ಭಟ್ಕಳ ನಗರದ ವೆಂಕಟಪುರ ಬಳಿಯ ರಾಷ್ಟ್ರೀಯ ಹೆದ್ದಾರಿಯ ಪಕ್ಕದಲ್ಲಿ, ಹಲವು ವರುಷಗಳಿಂದ ಇದ್ದಂತಹ ಮೂರಿನಕಟ್ಟೆ (ದೇವರ ಹೊರೆ ಇಳಿಸುತ್ತಿದ್ದ ಸ್ಥಳ) ಯನ್ನು ರಾಷ್ಟ್ರೀಯ ಹೆದ್ದಾರಿಯ ಕಾಮಗಾರಿಯ ಕಾರಣದಿಂದಾಗಿ ತೆರವುಗೊಳಿಸಲಾಗಿತ್ತು. ರಾಷ್ಟ್ರೀಯ ಹೆದ್ದಾರಿ ನಿರ್ಮಾಣದ ನಂತರ, ಮೂರಿನಕಟ್ಟೆಯನ್ನು  ಪುನಃ ನಿರ್ಮಾಣ ಮಾಡುವಂತೆ ಸತತ ಬೇಡಿಕೆಯನ್ನು ಇಡುತ್ತಾ ಬಂದಿದ್ದರು ಅಧಿಕಾರಿಗಳು ಕಿವಿಗೊಟ್ಟಿರಲಿಲ್ಲ.

ಹೀಗಾಗಿ, ನಿನ್ನೆ ಸ್ಥಳೀಯ ಹಿಂದೂ ಜಾಗರಣ ವೇದಿಕೆಯ ಕಾರ್ಯಕರ್ತರು, ಸ್ವತಹ ರಾಷ್ಟ್ರೀಯ ಹೆದ್ದಾರಿಯ ಪಕ್ಕದಲ್ಲಿ ಮೂರಿನಕಟ್ಟೆಯನ್ನು ನಿರ್ಮಿಸಿದ್ದರು. ಈ ಸಂದರ್ಭದಲ್ಲಿ ಅನ್ಯ ಕೋಮಿನ ವ್ಯಕ್ತಿಗಳು ಇದಕ್ಕೆ ಅಪಸ್ವರ ವ್ಯಕ್ತಿದ್ದರು. ಪೊಲೀಸರು ಕೂಡ ಜಮಾವಣೆಯಾಗಿದ್ದರು. ಕೊನೆಗೆ ಅದು ಸರ್ಕಾರಿ ಜಾಗದಲ್ಲಿದೆ ಅದರಿಂದ ಯಾವುದೇ ತೊಂದರೆ ಇಲ್ಲ ಎಂಬ ವಿಚಾರ ಗೊತ್ತಾಗುತ್ತಿದ್ದಂತೆ ಅನ್ಯ ಕೋಮಿನ ವ್ಯಕ್ತಿಗಳು ಅಲ್ಲಿಂದ ತೆರಳಿದ್ದರು.

ಆದರೆ ತಡರಾತ್ರಿ ಇಲ್ಲಿನ ಕ್ರಿಮಿನಲ್ ಹಿನ್ನೆಲೆಯ ಹಾಗೂ ಅಪ್ಪಟ ಕಮ್ಯೂನಲ್ ಯುವಕರ ತಂಡವು ಈ ಒಂದು ಪ್ರದೇಶದ ಮೇಲೆ ದಾಳಿಮಾಡಿ ನಿರ್ಮಿಸಲಾಗಿದ್ದ ಮೂರಿನ ಕಟ್ಟೆಯನ್ನು ದ್ವಂಸ ಗೊಳಿಸಿದೇ ಎಂಬ ಆರೋಪ ಕೇಳಿ ಬಂದಿದೆ.

ಉದ್ವಿಗ್ನ ಪರಿಸ್ಥಿತಿಯ ಕಾರಣ ಸ್ಥಳಕ್ಕೆ ಬಂದ ಪೊಲೀಸರ ಎದುರೇ, ಈ ಕಮ್ಯುನಲ್ ಕ್ರಿಮಿಗಳು ಹಿಂದೂ ಜಾಗರಣ ವೇದಿಕೆಯ ಕಾರ್ಯಕರ್ತರು ನಿರ್ಮಿಸಿದ ಧಾರ್ಮಿಕ ಹಿನ್ನೆಲೆಯ ಕಟ್ಟೆಯನ್ನು ಧ್ವಂಸ ಗಳಿಸಿದ್ದಾರೆ, ಆ ಮೂಲಕ ಮತ್ತೊಮ್ಮೆ ಕಮ್ಯೂನಲ್ ಗಲಾಟೆಗೆ ಇನ್ನೊಂದು ಸಮುದಾಯವನ್ನು ಪ್ರವೋಕ್ ಮಾಡಿದ್ದಾರೆ.

ಭಟ್ಕಳದ ಶಾಂತಿಗೆ ಭಂಗ ತರುವ ಕೆಲಸವನ್ನು ಮಾಡಿದ ಆ ವ್ಯಕ್ತಿಗಳ ಮೇಲೆ ಕಠಿಣ ಕ್ರಮ ಕೈಗೊಳ್ಳುವ ಕೆಲಸ ಆಗದಿದ್ದರೆ, ಹಾಗೆಯೇ ದ್ವಂಸ ಗಂಡ ಕಟ್ಟೆಯನ್ನು ಪುನರ್ ನಿರ್ಮಾಣ ಮಾಡದಿದ್ದರೆ ಇದೇ ವಿಚಾರ ಭಟ್ಕಳವನ್ನು ಮಾತ್ರವಲ್ಲ ಇಡೀ ಕರಾವಳಿಯನ್ನು ಕೋಮು ಜ್ವಾಲೆಯ ಕುಂಡದೊಳಗೆ ಹಾಕಲಿದೆ ಎಂಬ ಮಾತುಗಳು ಕೇಳಿ ಬರುತ್ತದೆ.

ರಾಷ್ಟ್ರೀಯ ಹೆದ್ದಾರಿಯ ಪಕ್ಕದಲ್ಲಿ, ಅನಾದಿ ಕಾಲದಿಂದ ಇದ್ದಂತಹ ಈ ಧಾರ್ಮಿಕ ಕಟ್ಟೆ, ಯಾರಿಗೂ ತೊಂದರೆ ಕೊಟ್ಟಿರಲಿಲ್ಲ. ಸರ್ಕಾರಿ ಜಾಗದಲ್ಲಿರುವ ಕಾರಣ ಯಾವ ಧರ್ಮದವರಿಗೂ ಅದರಿಂದ ತೊಂದರೆ ಇರಲಿಲ್ಲ. ಆದರೂ ಇನ್ನೊಂದು ಧರ್ಮದವರು ಇದರ ವಿರುದ್ಧ ದಾಂದಲೆ ನಡೆಸಿರುವಂಥದ್ದು, ಅಕ್ಷಮ್ಯ ಎಂಬ ಮಾತು ಕೇಳಿ ಬರುತ್ತಿದೆ. ಈಗಲೇ ಅವರನ್ನು ಹೆಡೆಮುರಿ ಕಟ್ಟದಿದ್ದರೆ ಇದರ ತಾಪವು ಎಲ್ಲೆಡೆ ಪಸರಿಸುವ ಸಾಧ್ಯತೆ ಇರುವುದರ ಬಗ್ಗೆ ಗುಸುಗುಸು ಶುರುವಾಗಿದೆ. ಹಾಗೆಯೇ ಇದೇ ವಿಚಾರವಾಗಿ ಎಲ್ಲೆಡೆ ಪ್ರತಿಭಟನಾ ಸಭೆ ಹಾಗೂ ಭಟ್ಕಳ ಚಲೋ ಕರೆ ಕೊಟ್ಟರು ಅಚ್ಚರಿಲ್ಲ, ಹಾಗಾಗಿ ಈ ವಿಚಾರದಲ್ಲಿ ಉತ್ತರ ಕನ್ನಡ ಜಿಲ್ಲಾ ಪೊಲೀಸರು ಎಷ್ಟು ಕಠಿಣ ಕ್ರಮ ಕೈಗೊಳ್ಳುತ್ತಾರೆ ಅನ್ನೋದರ ಮೇಲೆ ಎಲ್ಲವೂ ನಿಂತಿದೆ. ಉಸ್ತುವಾರಿ ಸಚಿವ ಮಂಗಳ ವೈದ್ಯ ಸ್ಥಳೀಯರಾದ ಕಾರಣ ಅವರು ಇದನ್ನು ಹೇಗೆ ಮ್ಯಾನೇಜ್ ಮಾಡಬಹುದು ಅನ್ನುವುದರ ಬಗ್ಗೆಯೂ ಕುತೂಹಲವಿದೆ.

COMMENTS

Login with Gmail to comment

ಇನ್ನಷ್ಟು ಸುದ್ದಿ

ಜಿಲ್ಲಾ ಸರ್ಜನ್ ಡಾ. ಅಶೋಕ್ರನ್ನು ತಕ್ಷಣವೇ ಅಮಾನತು ಮಾಡಿ- ದ.ಸಂ.ಸ. ಆಗ್ರಹ
ಅವಿವಾಹಿತಗೆ ಗರ್ಭ ದಾನ ಮಾಡಿದವ ಜೈಲಿಗೆ
ಸನ್ಯಾಸಿಗೆ ಕಾಡಿದ ಸುಂದರಿಯ  ಬಂಧನ
ಕರ್ನಾಟಕದಲ್ಲಿ ತಾಪಮಾನ ಅಪಾಯ ಮಟ್ಟಕ್ಕೆ!ಆಸ್ಪತ್ರೆಗಳಲ್ಲಿ ವಿಶೇಷ ಹೀಟ್ ಸ್ಟ್ರೋಕ್ ರೂಮ್‌ಗಳು-ಆರೋಗ್ಯ ಇಲಾಖೆ ತುರ್ತು ಕ್ರಮ ಜಾರಿ
ಜುಲೈ 1ರಿಂದ ದೇಶದಲ್ಲಿ ಹಲವು ಹೊಸ ನಿಯಮಗಳು ಜಾರಿ…ಪಾಸ್‌ಪೋರ್ಟ್, ರೈಲ್ವೆ, ಕ್ರೆಡಿಟ್ ಕಾರ್ಡ್, ಬ್ಯಾಂಕ್… ಒಂದೇ ದಿನದಲ್ಲಿ ಹಲವು ದೊಡ್ಡ ಬದಲಾವಣೆಗಳು
“ಭಾರತೀಯ ಕುಟುಂಬ ಆಸ್ತಿ ವಿವಾದಗಳಲ್ಲಿ ಮಧ್ಯಸ್ಥಿಕೆಯ ಮಹತ್ವವನ್ನು ಮತ್ತೊಮ್ಮೆ ಎತ್ತಿಹಿಡಿದ ಸುಪ್ರೀಂ ಕೋರ್ಟ್”
ಕೂದಲೆಳೆ ಅಂತರದಲ್ಲಿ ಪಾರಾದ ಗುಜರಾತ್ ಟೈಟಾನ್ಸ್!ಕ್ಷಣಾರ್ಧ ತಡವಾಗಿದ್ದರೂ ಸಂಭವಿಸುತ್ತಿತ್ತು ಘೋರ ಅಗ್ನಿ ದುರಂತ!
ತೈಲ, ಯುದ್ಧ ಮತ್ತು ಆರ್ಥಿಕತೆ: ಭಾರತದ ಮುಂದೆ ಹೊಸ ಸವಾಲು
ತುರ್ತು ಎಚ್ಚರಿಕೆ ‼️ಹಿಪ್ನೋಟೈಸಿಂಗ್ ಸ್ವಾಮಿಗಳು ನಿಮ್ಮ ಬಳಿಯೂ ಬರಬಹುದು
ಜಪಾನ್ ಟೆಕ್ನಾಲಜಿ ಬಳ್ಳಾರಿಗೆ ಎಂಟ್ರಿ!ನಿರ್ಮಲಾ ಸೀತಾರಾಮನ್ ಹಸಿರು ಕ್ರಾಂತಿಗೆ ಚಾಲನೆ… ಇದು ಸಾಮಾನ್ಯ ಯೋಜನೆ ಅಲ್ಲ.1 ಲಕ್ಷ ಸಸಿಗಳು, 300 ಎಕರೆ ಭೂಮಿ ..
ಸಚಿವ ಜಮೀರ್ ಕಥೆ ಗೋವಿಂದ!!!?
ಇಂದು ಮಾಜಿ ಸಚಿವರಿಂದ ಸೌಹಾರ್ದ ಇಫ್ತಾರ್ ಕೂಟ 
ಮಂಗಳೂರಿನಲ್ಲಿ ಮುಂಜಾನೆ ನಡೆದ ರೌಡಿಶೀಟರ್ ಹತ್ಯೆ – ದುಷ್ಕರ್ಮಿಗಳ  ಜಾಡು ಬೆನ್ನಟ್ಟಿದ ಪೊಲೀಸ್‌ ಪಡೆ….ಮಹತ್ವದ ಸುಳಿವು…..!
ಉಡುಪಿಯ ಪ್ರತಿಷ್ಠಿತರನ್ನೇ ಟಾರ್ಗೆಟ್ ಮಾಡಿದ ಜೀನತ್ ವಿರುದ್ಧ ಮತ್ತೊಂದು ದೂರು? ₹15 ಲಕ್ಷ ಮೋಸದ ಹೊಸ ಆರೋಪ!?
ಇಂದಿನ ಆಧುನಿಕ ಯುಗದಲ್ಲೂ ಗಂಡನ ಮನೆಯಲ್ಲಿ ಹೆಣ್ಣೊಬ್ಬಳ ನರಕಯಾತನೆಯ ನೈಜ ದೃಶ್ಯ ತಂದೆಯೇ ಕಣ್ಣಾರೆ ನೋಡಿದರೇ ….ಕಣ್ಣೀರು ತಡೆಯಲು ಸಾಧ್ಯವಿಲ್ಲ…..
ಸುರತ್ಕಲ್ ಹುಡುಗಿ ವಿಚಾರದಲ್ಲಿ ಹಲ್ಲೆ
ಎಷ್ಟೇ ಚಾಣಾಕ್ಷತನ ತೋರಿದರೂ, ಡಿಜಿಟಲ್ ಕಣ್ಣುಗಳಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ.” AI ಸಣ್ಣ ಸುಳಿವು’ → ‘ನಿಖರ ಪತ್ತೆ’ ಜನರ ಭದ್ರತೆಗಾಗಿ ತಂತ್ರಜ್ಞಾನವೇ ಶಕ್ತಿಯುತ ಆಯುಧ ..!
19 ವರ್ಷದ ಆಯಾನ್ ಅಹ್ಮದ್ ತನ್ವೀರ್ ಅಹ್ಮದ್ ವಿರುದ್ಧ ಗಂಭೀರ ಸೈಬರ್ ಲೈಂಗಿಕ ಶೋಷಣೆ ..!ಅಮರಾವತಿ ಭೀಕರ ಪ್ರಕರಣ-
“ಮಂಗಳೂರಲ್ಲಿ ಡ್ರೈ ಡೇ ಘೋಷಣೆ -ಎರಡು ದಿನ ಬಾರ್‌ಗಳಿಗೆ ಲಾಕ್ ..!” ದಕ್ಷಿಣ ಕನ್ನಡದಲ್ಲಿ ಕಟ್ಟುನಿಟ್ಟಿನ ಆದೇಶ
ಆಕಾಂಕ್ಷಳ ಪತ್ರ “ಮಮ್ಮಿ-ಪಾಪಾ, ನನಗೆ ಮತ್ತೆ ನೀಟ್ ಪರೀಕ್ಷೆ ಬರೆಯುವ ಧೈರ್ಯವಿಲ್ಲ” 3 ಲಕ್ಷ ಸಾಲ, ಡಾಕ್ಟರ್ ಆಗುವ ಆ ಕನಸುಗಳು…650 ಅಂಕಗಳ ನಿರೀಕ್ಷೆ..ಆದರೆ…ಕೊನೆಗೆ ಹೀಗೊಂದು ವಿದಾಯ ಪತ್ರ!
ಕಾರಿಗೆ ಮಹಿಳೆ ಡಿಕ್ಕಿ..ಗುಳಿಗಜ್ಜನೆ ಕಾಪಾಡಿದ್ದ..! ಎದೆ ಜಲ್ಲೆನಿಸುವ ದೃಶ್ಯ
ಕನಕಪುರ ಬಂಡೆ ಬಿಜೆಪಿಗೆ ಎಂಬ ಬೋಗಸ್ ಸುದ್ದಿ
Top 5, ಹೆಚ್ಚು ಅನುದಾನ ಪಡೆದ ಇಲಾಖೆಗಳು ಯಾವವು ಗೊತ್ತಾ?
ರಾಕಿಂಗ್ ಸ್ಟಾರ್ ಯಶ್ ‘ಟಾಕ್ಸಿಕ್’ ಸಿನಿಮಾ ಅಪ್ಡೇಟ್: ಸೋಶಿಯಲ್ ಮೀಡಿಯಾದಲ್ಲಿ ಧೂಳೆಬ್ಬಿಸ್ತಿರೋ ಯಶ್ ಡೈಲಾಗ್!
ಫೇಸ್‌ಬುಕ್ ‘ಸುಂದರಿ’ಅವಳಲ್ಲ ಅವನು!ಲವ್ ಮಾಡಿ ಹೆಂಡತಿ ಅಂದುಕೊಂಡವನು ಗಂಡಸು ಅಂತ ಗೊತ್ತಾದಾಗ ನಡೆದಿದ್ದೇ ಬೇರೆ!
ಬಾಲಗರ್ಭಿಣಿಯರ ಸಂಖ್ಯೆ 5975….!!
ಕರಾವಳಿಯಲ್ಲಿ ವರುಣನ ಆರ್ಭಟ ಮುಂದುವರಿಕೆ: ಜುಲೈ 2ಕ್ಕೆ ಮೂರು ಜಿಲ್ಲೆಗಳಿಗೆ ರೆಡ್ ಅಲರ್ಟ್, ಏಳು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್
🔥 “Get out of here! — ಸೂಪರ್ women ವಿರುದ್ಧವೇ ಕೇಸ್?!!
ವಿಶ್ವ ಸಂಸ್ಥೆಯು ಯಾವ ಪುರುಷಾರ್ಥಕ್ಕೆ? ಬಲವರ್ಧನೆಯ  ಅಗತ್ಯತೆ
ಭಾರತದಲ್ಲಿ ಮೊದಲ ಬಾರಿಗೆ ಭಾರೀ ಕ್ಯಾಪ್ಟಾಗನ್ “ಜಿಹಾದಿ ಡ್ರಗ್”ಜಾಲ ಬಯಲಾಗಿದ್ದು, ಸುಮಾರು ₹182 ಕೋಟಿ ಮೌಲ್ಯದ ಮಾದಕ ವಸ್ತು ಜಪ್ತಿ!ಅಪಾಯಕಾರಿ ಡ್ರಗ್ ದೇಶದೊಳಗೆ ಹೇಗೆ ಪ್ರವೇಶಿಸಿತು ಎಂಬುದರ ಬಗ್ಗೆ ತನಿಖೆ ತೀವ್ರವಾಗಿದೆ.