📍 Karavali Maruta
  • LOGIN
  • BREAKING
    ‘ಮೇಡ್ ಇನ್ ಮಂಗಳೂರು’ ಹಡಗು ಜರ್ಮನ್ ಸಂಸ್ಥೆಯ ತೆಕ್ಕೆಗೆ; ವಿಶ್ವದ ಗಮನ ಸೆಳೆದ ಚೌಗುಲೆ ಶಿಪ್‌ಯಾರ್ಡ್! ಧಾರವಾಡದಲ್ಲಿ ಭೀಕರ LPG ಸಿಲಿಂಡರ್ ಸ್ಫೋಟ , ಹಲವು ಮೀಟರ್ ದೂರಕ್ಕೆ ಹಾರಿದ ಬೈಕ್‌! ಹಲವರಿಗೆ ಗಾಯ CCTVಯಲ್ಲಿ ಶಾಕಿಂಗ್ ದೃಶ್ಯ ದಯಾಮರಣ ಕೇಳಿದ್ದ ತುಮಕೂರು ರಾಬಿಯಾ ಇನ್ನಿಲ್ಲ …!ಪರಮೇಶ್ವರ್ ಮುಂದೆ ಕಣ್ಣೀರಿಟ್ಟಿದ್ದ ಮಹಿಳೆ ಇಬ್ಬರು ಮಕ್ಕಳೊಂದಿಗೆ ವಿಷಸೇವಿಸಿ ಕೊನೆಯುಸಿರು…‘ಮನೆ’ ಸಿಕ್ಕರೂ ಬದುಕು ಉಳಿಯಲಿಲ್ಲ! ನೇಪಾಳ ದುರಂತ: ಕಂಪ್ಲೀಟ್ ರಿಪೋರ್ಟ್ ಇಲ್ಲಿದೆ…ಕಣ್ಣೆದುರೇ ಕೊಚ್ಚಿಹೋದ ಬದುಕು… ಲೆಕ್ಕಕ್ಕೆ ಸಿಗದ ಸಾವು, ನೋವು!ಪ್ರವಾಹದ ರೌದ್ರದ ನಡುವೆ ಮೃತದೇಹದಿಂದಲೇ ಚಿನ್ನ ಕದಿಯಲು ಯತ್ನ… ಮಾನವೀಯತೆ ಮರೆತ ಕಿರಾತಕರು!ಇಬ್ಬರು ಅರೆಸ್ಟ್! ಮಹಿಳಾ ಕಾನ್ಸ್‌ಟೇಬಲ್ ಮೇಲೆ ಪೊಲೀಸ್ ಠಾಣೆಯಲ್ಲಿ ಮಾರಣಾಂತಿಕ ಹಲ್ಲೆ
    ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

    ಮಂಗಳೂರು ಯೂಟ್ಯೂಬರ್‌ಗಳ ವಿರುದ್ಧ ಬಿಎನ್‌ಎಸ್ ಅಸ್ತ್ರ ಪ್ರಯೋಗಿಸಿದ ಖಾಕಿ!….

    ಮಂಗಳೂರು ನಗರದಲ್ಲಿ ಇತ್ತೀಚಿನ ದಿನಗಳಲ್ಲಿ ಯೂಟ್ಯೂಬರ್‌ಗಳು ಹಾಗೂ ಸಾಮಾಜಿಕ ಜಾಲತಾಣಗಳ ವರದಿಗಾರರ ಹಾವಳಿ ಮಿತಿಮೀರುತ್ತಿದ್ದು, ಸುದ್ದಿಯ ರಭಸದಲ್ಲಿ ವಿವಾದಾತ್ಮಕ ಹೇಳಿಕೆಗಳನ್ನು ಪ್ರಸಾರ ಮಾಡಿದ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಮಂಗಳೂರು ಪೊಲೀಸರು ಭಾರಿ ಕಾನೂನು ಕ್ರಮ ಜರುಗಿಸಿದ್ದಾರೆ. ಸಮಾಜದಲ್ಲಿ ದ್ವೇಷ ಬಿತ್ತುವ ಹಾಗೂ ಸೌಹಾರ್ದತೆಗೆ ಧಕ್ಕೆ ತರುವಂತಹ ವಿಷಯಗಳನ್ನು ಪ್ರಸಾರ ಮಾಡಿದ ಹಿನ್ನೆಲೆಯಲ್ಲಿ ಇಬ್ಬರು ಯೂಟ್ಯೂಬರ್‌ಗಳ ವಿರುದ್ಧ ಭಾರತೀಯ ನ್ಯಾಯ ಸಂಹಿತೆ (BNS) ಅಡಿಯಲ್ಲಿ ಕ್ರಿಮಿನಲ್ ಪ್ರಕರಣ ದಾಖಲಾಗಿದೆ.

    ಸುದ್ದಿಯ ರಭಸದಲ್ಲಿ ಸೌಹಾರ್ದತೆಗೆ ಕೊಳ್ಳಿ ಇಟ್ಟ ಮಂಗಳೂರಿನ ಯೂಟ್ಯೂಬರ್ಸ್ …ಮಹಿಳೆ ಜಗಳದ ವಿಡಿಯೊ ವೈರಲ್ ಮಾಡಿ ವೀವ್ಸ್,likes ಹಪಾಹಪಿಗೆ ಬಿದ್ದ ಕಿರಾತಕರಿಗೆ ಕಾದಿತ್ತು ಮಂಗಳೂರು ಪೊಲೀಸರ ಬಿಗ್ ಶಾಕ್!ಫುಟ್‌ಪಾತ್ ಜಗಳಕ್ಕೆ ಕೋಮು ಬಣ್ಣ ಬಳಿದ ಯೂಟ್ಯೂಬರ್‌ಗಳು ಈಗ ಲಾಕಪ್‌ಗೆ..?!ಬಿಎನ್‌ಎಸ್ ಸೆಕ್ಷನ್ 196, 353 ಅಡಿಯಲ್ಲಿ ಎಫ್‌ಐಆರ್; ಕಮಿಷನರ್ ಕಡಕ್ ವಾರ್ನಿಂಗ್!

    ಮಂಗಳೂರಿನಲ್ಲಿ ನಡೆದಿರುವ ಈ ಗಂಭೀರ ವಿದ್ಯಮಾನ ..ಪ್ರಕರಣ ದಾಖಲಾಗುವ 2 ದಿನಗಳ ಮೊದಲು ಮಂಗಳೂರಿನ ಆ ಫುಟ್‌ಪಾತ್‌ನಲ್ಲಿ ನಿಖರವಾಗಿ ಏನೆಲ್ಲಾ ನಡೆದಿತ್ತು..ಮಂಗಳೂರು ನಗರದ ಪ್ರಮುಖ ರಸ್ತೆಯೊಂದರ ಪಾದಚಾರಿ ಮಾರ್ಗದಲ್ಲಿ (ಫುಟ್‌ಪಾತ್) ವ್ಯಾಪಾರ ಮಾಡುತ್ತಿದ್ದ ಸ್ಥಳೀಯ ಸಣ್ಣ ವ್ಯಾಪಾರಿಯೊಬ್ಬರ ಬಳಿ ಮಹಿಳೆಯೊಬ್ಬರು ಬಂದು ಜಗಳ ತೆಗೆದಿದ್ದರು. ಈ ಸಣ್ಣ ಗಲಾಟೆಯನ್ನು ನೋಡಿದ ಇಬ್ಬರು ಸ್ಥಳೀಯ ಯೂಟ್ಯೂಬರ್‌ಗಳು ಮತ್ತು ಸೋಷಿಯಲ್ ಮೀಡಿಯಾ ವರದಿಗಾರರು, ಸುದ್ದಿಯ ರಭಸದಲ್ಲಿ ಹಾಗೂ ವ್ಯೂಸ್ (Views) ಗಿಟ್ಟಿಸಿಕೊಳ್ಳುವ ಆತುರದಲ್ಲಿ ಘಟನೆಯನ್ನು ತಪ್ಪು ತಪ್ಪಾಗಿ ಬಿಂಬಿಸಿದ್ದರು. ಕೇವಲ ವ್ಯಾಪಾರದ ಜಗಳಕ್ಕೆ ಕೋಮು ಮತ್ತು ಪ್ರಾದೇಶಿಕ ಬಣ್ಣ ಬಳಿದು, ಸಾರ್ವಜನಿಕರಲ್ಲಿ ದ್ವೇಷ ಹಾಗೂ ಸೌಹಾರ್ದತೆಗೆ ಧಕ್ಕೆ ತರುವಂತಹ ಪ್ರಚೋದನಾತ್ಮಕ ಹೇಳಿಕೆಗಳೊಂದಿಗೆ ವಿಡಿಯೊವನ್ನು ಯೂಟ್ಯೂಬ್‌ನಲ್ಲಿ ಅಪ್ಲೋಡ್ ಮಾಡಿದ್ದರು. ಈ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವಿವಾದ ಸೃಷ್ಟಿಸಿದ ಹಿನ್ನೆಲೆಯಲ್ಲಿ, ಪೊಲೀಸರು ಈಗ ಸ್ವಯಂಪ್ರೇರಿತರಾಗಿ ಹಾಗೂ ಸಾರ್ವಜನಿಕರ ದೂರಿನ ಮೇರೆಗೆ ಇಬ್ಬರು ಯೂಟ್ಯೂಬರ್‌ಗಳ ವಿರುದ್ಧ ಬಿಎನ್‌ಎಸ್ ಕಾಯ್ದೆಯಡಿ ಎಫ್‌ಐಆರ್ ದಾಖಲಿಸಿದ್ದಾರೆ.

    1. ಬಿಎನ್‌ಎಸ್ ಸೆಕ್ಷನ್ 196 ಮತ್ತು 353 ಅಡಿಯಲ್ಲಿ ಎಫ್‌ಐಆರ್

    ಸಾಮಾಜಿಕ ಜಾಲತಾಣ ಹಾಗೂ ಯೂಟ್ಯೂಬ್ ಚಾನೆಲ್‌ಗಳಲ್ಲಿ ಪ್ರಸಾರವಾದ ವಿಡಿಯೊವೊಂದರಲ್ಲಿನ ಹೇಳಿಕೆಗಳಿಗೆ ಸಂಬಂಧಿಸಿದಂತೆ ಮಂಗಳೂರು ಪೊಲೀಸರು ಬಿಎನ್‌ಎಸ್ (BNS) ಸೆಕ್ಷನ್ 196 (ಧರ್ಮ, ಪ್ರದೇಶ, ಭಾಷೆ ಅಥವಾ ಇತರೆ ಗುರುತುಗಳ ಆಧಾರದ ಮೇಲೆ ದ್ವೇಷ ಅಥವಾ ವೈಮನಸ್ಸು ಉತ್ತೇಜಿಸುವುದು) ಮತ್ತು ಸೆಕ್ಷನ್ 353 (ಸಾರ್ವಜನಿಕ ಶಾಂತಿ ಮತ್ತು ಸೌಹಾರ್ದತೆಗೆ ಧಕ್ಕೆ ತರುವಂತಹ ಸುಳ್ಳು ಸುದ್ದಿ ಅಥವಾ ಹೇಳಿಕೆಗಳನ್ನು ಹರಡುವುದು) ಅಡಿಯಲ್ಲಿ ಅಧಿಕೃತವಾಗಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ವಿಡಿಯೊದಲ್ಲಿನ ಕೆಲವು ಮಾತುಗಳು ಸಮಾಜದಲ್ಲಿ ಅಸಾಮರಸ್ಯವನ್ನು ಸೃಷ್ಟಿಸುವ ಸಾಧ್ಯತೆಯನ್ನು ಹೊಂದಿವೆ ಎಂದು ಪೊಲೀಸರು ತಿಳಿಸಿದ್ದಾರೆ.

    2. ಘಟನಾ ಸ್ಥಳದಿಂದ ತೆರಳಿ ವಾಪಸ್ ಬಂದು ದೂರು ನೀಡಿದ ವ್ಯಕ್ತಿ

    ಪೊಲೀಸ್ ಮೂಲಗಳು ನೀಡಿರುವ ಮಾಹಿತಿಯ ಪ್ರಕಾರ, ವಿವಾದಾತ್ಮಕ ವಿಡಿಯೊ ಪ್ರಸಾರವಾದ ದಿನ ಸ್ಥಳದಲ್ಲಿದ್ದ ವ್ಯಕ್ತಿಯೊಬ್ಬರು ಆರಂಭದಲ್ಲಿ ಅಲ್ಲಿಂದ ತೆರಳಿದ್ದರು. ಆದರೆ, ವಿಷಯದ ಗಂಭೀರತೆಯನ್ನು ಅರಿತು ಬಳಿಕ ಪೊಲೀಸ್ ಠಾಣೆಗೆ ಹಿಂದಿರುಗಿ ಅಧಿಕೃತವಾಗಿ ದೂರು ಸಲ್ಲಿಸಿದ್ದಾರೆ. ದೂರು ಸ್ವೀಕರಿಸಿದ ತಕ್ಷಣವೇ ಕಾರ್ಯಪ್ರವೃತ್ತರಾದ ಮಂಗಳೂರು ನಗರ ಪೊಲೀಸರು ಲಭ್ಯವಿರುವ ಸತ್ಯಾಂಶಗಳು ಹಾಗೂ ಸಾಕ್ಷ್ಯಾಧಾರಗಳನ್ನು ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.

    3. ಮಹಿಳೆಯ ದೂರು ಮತ್ತು ನ್ಯಾಯಾಲಯದ ನಿರ್ದೇಶನದ ತನಿಖೆ

    ಇದೇ ಘಟನೆ ನಡೆದ ದಿನದಂದು ಮಹಿಳೆಯೊಬ್ಬರು ಪಾದಚಾರಿ ಮಾರ್ಗದಲ್ಲಿ (ಫುಟ್‌ಪಾತ್) ವ್ಯಾಪಾರ ಮಾಡುತ್ತಿದ್ದ ವ್ಯಾಪಾರಿಯೊಬ್ಬರ ವಿರುದ್ಧವೂ ದೂರು ನೀಡಿದ್ದರು. ಪೊಲೀಸರು ಆರಂಭದಲ್ಲಿ ಆ ಘಟನೆಯ ವಿಡಿಯೊವನ್ನು ಸಂಪೂರ್ಣವಾಗಿ ಪರಿಶೀಲಿಸಿದ್ದರು. ಆದರೆ ಅದರಲ್ಲಿ ಯಾವುದೇ ಗಂಭೀರ ಅಪರಾಧ ಪ್ರಕರಣ ದಾಖಲಿಸುವಂತಹ ಅಂಶಗಳು ಮೇಲ್ನೋಟಕ್ಕೆ ಕಂಡುಬರದ ಕಾರಣ, ತಕ್ಷಣಕ್ಕೆ ಪ್ರಕರಣ ದಾಖಲಿಸದೆ ನಾನ್-ಕಾಗ್ನಿಜಬಲ್ (NC) ದಾಖಲಾತಿ ಮಾಡಿಕೊಂಡು ಮಹಿಳೆಗೆ ದೂರಿನ ಸ್ವೀಕೃತಿ ಪತ್ರ (Acknowledgement) ನೀಡಿದ್ದರು. ಆದಾಗ್ಯೂ, ಆ ಮಹಿಳೆ ಕಾನೂನು ಪ್ರಕ್ರಿಯೆಯಂತೆ ನ್ಯಾಯಾಲಯದ ಮೊರೆ ಹೋಗಿದ್ದು, ಈಗ ಕೋರ್ಟ್ ನೀಡಿರುವ ನಿರ್ದೇಶನದ ಮೇರೆಗೆ ಪೊಲೀಸರು ಈ ಕುರಿತು ಪ್ರತ್ಯೇಕ ತನಿಖೆ ನಡೆಸುತ್ತಿದ್ದಾರೆ.

    4. ವೃತ್ತಿಪರ ಪತ್ರಿಕೋದ್ಯಮದ ಮಾನದಂಡ ಮೀರಿ ಯೂಟ್ಯೂಬರ್‌ಗಳ ಹಾವಳಿ

    ಕೆಲವರು ಯೂಟ್ಯೂಬ್ ಅಥವಾ ಸಾಮಾಜಿಕ ಜಾಲತಾಣ ವೇದಿಕೆಗಳ ಮೂಲಕ ವೀಡಿಯೊ ಹಾಗೂ ಸುದ್ದಿಗಳನ್ನು ಪ್ರಸಾರ ಮಾಡುವ ಭರದಲ್ಲಿ ವೃತ್ತಿಪರ ಪತ್ರಿಕೋದ್ಯಮದ ಕನಿಷ್ಠ ಮಾನದಂಡಗಳನ್ನು ಗಾಳಿಗೆ ತೂರುತ್ತಿದ್ದಾರೆ ಎಂಬ ದೂರುಗಳು ಮಂಗಳೂರು ನಗರದಲ್ಲಿ ಈ ಹಿಂದೆಯೂ ವ್ಯಾಪಕವಾಗಿ ಕೇಳಿಬಂದಿದ್ದವು. ಸದ್ಯ ದಾಖಲಾಗಿರುವ ಪ್ರಕರಣದ ಕುರಿತು ಸಂಪೂರ್ಣ ತನಿಖೆ ಮುಗಿದ ಬಳಿಕವಷ್ಟೇ ವಿಡಿಯೊದ ಹಿಂದಿರುವ ಅಸಲಿ ವಾಸ್ತವಾಂಶಗಳು ಹಾಗೂ ಸತ್ಯಾಸತ್ಯತೆಗಳು ಸ್ಪಷ್ಟವಾಗಲಿವೆ ಎಂದು ಪೊಲೀಸ್ ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.

    5. ಮಂಗಳೂರು ಪೊಲೀಸ್ ಆಯುಕ್ತರ ಕಡಕ್ ವಾರ್ನಿಂಗ್

    ಪ್ರಕರಣದ ಗಂಭೀರತೆ ಕುರಿತು ಪ್ರತಿಕ್ರಿಯಿಸಿರುವ ಮಂಗಳೂರು ನಗರ ಪೊಲೀಸ್ ಆಯುಕ್ತರು ಮಾಧ್ಯಮಗಳಿಗೆ ಕಠಿಣ ಸಂದೇಶ ರವಾನಿಸಿದ್ದಾರೆ. “ಪತ್ರಕರ್ತರು ಮತ್ತು ವರದಿಗಾರರ ಮುಖ್ಯ ಜವಾಬ್ದಾರಿ ಎಂದರೆ ಘಟನೆಗಳು ಹಾಗೂ ಸತ್ಯಾಂಶಗಳನ್ನು ನಿಷ್ಪಕ್ಷಪಾತವಾಗಿ ವರದಿ ಮಾಡುವುದಾಗಿದೆ. ಅದನ್ನು ಬಿಟ್ಟು ನಿರ್ದಿಷ್ಟ ವ್ಯಕ್ತಿಗಳನ್ನು ಗುರಿಯಾಗಿಸಿಕೊಂಡು ವೈಮನಸ್ಸು ಸೃಷ್ಟಿಸುವುದು, ಸಮಾಜದಲ್ಲಿ ಜಾತಿ-ಧರ್ಮದ ಹೆಸರಿನಲ್ಲಿ ವಿಭಜನೆ ಉಂಟುಮಾಡುವುದು ಅಥವಾ ಕಾನೂನುಬಾಹಿರ ಚಟುವಟಿಕೆಗಳಲ್ಲಿ ತೊಡಗುವುದು ಯಾವುದೇ ಮಾಧ್ಯಮ ಕಾರ್ಯಕರ್ತರ ಕರ್ತವ್ಯದ ವ್ಯಾಪ್ತಿಗೆ ಬರುವುದಿಲ್ಲ” ಎಂದು ಆಯುಕ್ತರು ಸ್ಪಷ್ಟಪಡಿಸಿದ್ದಾರೆ.

    ಪೊಲೀಸ್ ಇಲಾಖೆಯ ಕಿವಿಮಾತು: ಸಾರ್ವಜನಿಕ ಹಿತಾಸಕ್ತಿಯ ವಿಷಯಗಳ ಕುರಿತು ಪ್ರತಿಯೊಬ್ಬ ನಾಗರಿಕನಿಗೂ ಹಾಗೂ ಸೋಷಿಯಲ್ ಮೀಡಿಯಾ ಬಳಕೆದಾರರಿಗೂ ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸುವ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯದ ಹಕ್ಕಿದೆ. ಆದರೆ ಅಂತಹ ಅಭಿವ್ಯಕ್ತಿ ಯಾವಾಗಲೂ ಕಾನೂನಿನ ಚೌಕಟ್ಟಿನೊಳಗೆ ಇರಬೇಕೇ ಹೊರತು, ಸಾರ್ವಜನಿಕ ಸುವ್ಯವಸ್ಥೆ ಮತ್ತು ಸಮಾಜದ ಶಾಂತಿ-ಸೌಹಾರ್ದತೆಗೆ ಧಕ್ಕೆ ತರಬಾರದು ಎಂದು ಮಂಗಳೂರು ನಗರ ಪೊಲೀಸ್ ಅಧಿಕಾರಿಗಳು ಕಟ್ಟುನಿಟ್ಟಿನ ಎಚ್ಚರಿಕೆ ನೀಡಿದ್ದಾರೆ.

    #1. #MangaluruPolice 2. #YouTubersFIR 3. #BNS196 4. #BNS353 5. #SocialMediaGuidelines 6. #ಮಂಗಳೂರುಸುದ್ದಿ

    COMMENTS

    Login with Gmail to comment

    ಇನ್ನಷ್ಟು ಸುದ್ದಿ

    ಆಮಾದ್ಮಿ ಪಕ್ಷದ ಏಳು ಸಂಸದರು ಬಿಜೆಪಿಯ ತೆಕ್ಕೆಗೆ ರೈಟೋ?  ರಾಂಗೋ?
    ಅಮೇರಿಕಾಕ್ಕೆ ಅಷ್ಟು ಧೈರ್ಯದಿಂದ ಎಲ್ಲಿಂದ ಬಂತು?
    ನೀವೂ ತಿಳಿದಿರಬೇಕಾದ ವಿಷಯ:ಬರುವ ಆರ್ಥಿಕ ಸಂಕಷ್ಟಕ್ಕೆ ಈಗಲೇ ಸಿದ್ಧರಾಗಿ!
    ರಸ್ತೆಯ ವಿಚಾರಕ್ಕೆ ನೆರೆಹೊರೆಯರ ನಡುವೆ ಬಾರಿ ಗಲಾಟೆ !
    ತಿರುಮಲ ತಿಮ್ಮಪ್ಪನ 3,550 ಮೆಟ್ಟಿಲು ಹತ್ತಿದ 116 ವರ್ಷದ ನವನೀತಮ್ಮ ಕರ್ನಾಟಕದ ಶತಾಯುಷಿ!
    ಬಂಗಾಳದಲ್ಲಿ ಬಿಜೆಪಿಯ ಯುದ್ಧೋನ್ಮಾದ, ದೀದಿಯ ರಚ್ಚೆ…
    ಬೆಳಗಾವಿ ಮಾಜಿ ಯೋಧನ ಸಾವಿನ ಹಿಂದೆ ಬೆಚ್ಚಿಬೀಳಿಸುವ ಸತ್ಯ ₹2 ಕೋಟಿ ವಿಮೆ..!? ಸಿನೆಮಾವನ್ನೂ ಮೀರಿಸಿದ ಕ್ರೈಂ ಸ್ಟೋರಿ!
    🚢 “ಹಾರ್ಮುಝ್‌ನಿಂದ ಮಂಗಳೂರುವರೆಗೆ – 46,000 MT ಎಲ್‌ಪಿಜಿ ಯಮಹಾಯಾತ್ರೆ!
    ಕೂದಲೆಳೆ ಅಂತರದಲ್ಲಿ ಪಾರಾದ ಗುಜರಾತ್ ಟೈಟಾನ್ಸ್!ಕ್ಷಣಾರ್ಧ ತಡವಾಗಿದ್ದರೂ ಸಂಭವಿಸುತ್ತಿತ್ತು ಘೋರ ಅಗ್ನಿ ದುರಂತ!
    ಮೇ 29ರಿಂದ ತಣ್ಣೀರುಬಾವಿ ಬೀಚ್‌ನಲ್ಲಿ ಮೂರು ದಿನಗಳ ರಾಷ್ಟ್ರಮಟ್ಟದ ಸರ್ಫಿಂಗ್ ಸ್ಪರ್ಧೆ…
    ಕಸ ಸಾಗಾಣಿಕೆ ಟೆಂಡರ್‌ನಲ್ಲಿ ₹133 ಕೋಟಿ ಅಕ್ರಮ ಆರೋಪ
    ಲಖನೌ ಅಗ್ನಿ ದುರಂತದ ಕೊನೆ ಕ್ಷಣದ ಫೋನ್ ಕರೆಗಳು …”ಅಪ್ಪಾ,ಪ್ಲೀಸ್ ನನ್ನನ್ನು ಉಳಿಸು…” – “ನನ್ನ ಮಗನ ಬಳಿ ಹೋಗಲು ಬಿಡಿ…”
    ಆರ್‌ಸಿಬಿ ಎದುರಿಸಲು ರಾಯಲ್ಸ್ ರೆಡಿ??: ಕ್ರಿಕೆಟ್ ಜಗತ್ತಿಗೆ ಶಾಕ್ ಕೊಟ್ಟ ಬಿಹಾರದ ಬಾಲಕ-ಸಚಿನ್ ತೆಂಡೂಲ್ಕರ್ ಕೂಡ ಮೆಚ್ಚಿದ ಆ 29 ಎಸೆತಗಳ ರುದ್ರತಾಂಡವ!
    ಕರ್ನಾಟಕದಲ್ಲಿ ಈಗ ಏನು ಟ್ರೆಂಡಿಂಗ್ ಗೊತ್ತಾ…! ಸಾಲು ಸಾಲು ಹಗರಣ, ಲಂಚವತಾರ , ಅಕ್ರಮ ನೇಮಕಾತಿ,ಟ್ರಾನ್ಸ್‌ಫರ್ ಮಾಫಿಯಾ ..ಒಂದೋ ಎರಡೋ….!??
    ಮಂಗಳೂರಿಗರಿಗೆ ಎಚ್ಚರಿಕೆ: ನೀರನ್ನು ಜಾಣ್ಮೆಯಿಂದ ಬಳಸಿ –ಮಾರ್ಚ್ ನಲ್ಲೇ ರೇಷನಿಂಗ್ ಮಾಡುವ ಪರಿಸ್ಥಿತಿ ಇದೆ…
    ಮಂಗಳೂರಿನ ಟ್ರಾಫಿಕ್‌ಗೆ ಬ್ರೇಕ್ ಹಾಕಲು ಜಿಲ್ಲಾಡಳಿತದ ಮಾಸ್ಟರ್ ಪ್ಲಾನ್!ಯಾವೆಲ್ಲ ಬದಲಾವಣೆ ಬರಲಿದೆ?
    🔥 ಮಧ್ಯಪ್ರಾಚ್ಯ ಯುದ್ಧ: 17ನೇ ದಿನಕ್ಕೆ- ದುಬೈ ವಿಮಾನ ನಿಲ್ದಾಣದ ಬಳಿ ಬೆಂಕಿ!
    ಉಡುಪಿಯ ಪ್ರತಿಷ್ಠಿತರನ್ನೇ ಟಾರ್ಗೆಟ್ ಮಾಡಿದ ಜೀನತ್ ವಿರುದ್ಧ ಮತ್ತೊಂದು ದೂರು? ₹15 ಲಕ್ಷ ಮೋಸದ ಹೊಸ ಆರೋಪ!?
    ಬಂಗಾಳ ರಾಜಕೀಯದಲ್ಲಿ ಭಾರಿ ಟ್ವಿಸ್ಟ್ ಮೇಲೆ ಟ್ವಿಸ್ಟ್..! ಸುವೇಂದು ಪ್ರಮಾಣವಚನಕ್ಕೂ ಬ್ರೇಕ್ ಬೀಳುತ್ತಾ?ಸುಪ್ರೀಂ ಕೋರ್ಟ್ ಎಂಟ್ರಿ ಆಗುತ್ತಾ?
    ಭಾರತದಲ್ಲಿ ಮೋದಿ-ಜಸ್ಸಿ ಹೈ-ಲೆವೆಲ್ ಮೀಟಿಂಗ್ – ಅಮೆಜಾನ್ ಬರೋಬ್ಬರಿ $48 ಬಿಲಿಯನ್ ಹೂಡಿಕೆಗೆ ಆಂಡಿ ಜಸ್ಸಿ ಮುದ್ರೆ!
    ವಿಟ್ಲ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಕಚೇರಿಯಲ್ಲಿ ಗಲಾಟೆ:
    ಕಲ್ಲಂಗಡಿ ಹಣ್ಣು ತಪ್ಪು ಮಾಡಲಿಲ್ಲ… ಆದರೆ ಅಪರಾಧಿ ಸುದ್ದಿ ದೊಡ್ಡದಾಗಿದೆ!
    ಮೊಹಾಲಿ ಬೆಚ್ಚಿಬೀಳಿಸಿದ ಕಚೇರಿ ಕೊಲೆ: ಮಹಿಳೆ ಮೇಲೆ ಮಾರಣಾಂತಿಕ ದಾಳಿ, ದೇಶಾದ್ಯಂತ ಆಕ್ರೋಶ…
    ಕರ್ನಾಟಕದಲ್ಲಿ ಅತಿ ಕನಿಷ್ಠ ಮಟ್ಟಕ್ಕೆ ಕುಸಿದ ‘ಟೀನ್ ಪ್ರೆಗ್ನೆನ್ಸಿ’! 70% ಕೇಸ್‌ಗಳು ಮಾಯವಾಗಿದ್ದು ಹೇಗೆ?
    ಶಿಕ್ಷಣ ಸುಧಾರಣೆಗೆ ರಾಜ್ಯ ಸರ್ಕಾರದ ಭರ್ಜರಿ ಪ್ಲಾನ್ ಬಹಿರಂಗ!
    ಗುಂಡಿನ ದಾಳಿ ನಡೆಸಿದ ಹಂತಕರ ಬಂಧನ??
    ಶಂಕರಾಚಾರ್ಯರ ಹೊಸ ಯೋಜನೆ ದೇಶವನ್ನೇ ಚರ್ಚೆಗೆ ತಳ್ಳಿದ ಕಾರಣ ಏನು?Go-LXಒಂದು ಕ್ಲಿಕ್‌ನಲ್ಲಿ ಹಸು ಮಾರಾಟ…
    80 ಲಕ್ಷ ವಂಚನೆ ಪ್ರಕರಣ ದೂರು ದಾಖಲು
    “ರಾಜಕಾರಣಿಗಳ ಮಕ್ಕಳೂ ಸರ್ಕಾರಿ ಶಾಲೆಗೆ! ಇಸ್ರೋ ವಿಜ್ಞಾನಿಗೆ ಶಿಕ್ಷಣದ ಚುಕ್ಕಾಣಿ, ಸಿಎಂ ವಿಜಯ್‌ನ ಹೊಸ ಹೆಜ್ಜೆ ದೇಶದ ಗಮನ ಸೆಳೆದಿದೆ
    ಆಸಿಡ್ ದಾಳಿಗೊಳಗಾದ ಮಹಿಳೆಯರಿಗೆ ₹50 ಸಾವಿರ ಮಾಸಾಶನ: ಆಸಿಡ್ ಮಾರಾಟಕ್ಕೆ ಕಡಿವಾಣ ಹಾಕಲು ಸರ್ಕಾರ ಕ್ರಮ