📍 Karavali Maruta
  • LOGIN
  • ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

    “ಅಕ್ಕಾ, ಮನೆಗೆ ಹೋಗೋಣ” ಎಂದು ಅಕ್ಕನನ್ನು ಕರೆತರಲು ಬಂದ ಅಪೂರ್ವ… ಕೆಲವೇ ಕ್ಷಣಗಳಲ್ಲಿ ಕಬ್ಬಿಣದ ಗೇಟ್ ಅಡಿಯಲ್ಲಿ ಅಂತ್ಯ

    ಕುಶಾಲನಗರದಲ್ಲಿ ಹೃದಯವಿದ್ರಾವಕ ದುರಂತ: ಶಾಲೆಯ ಶಿಥಿಲಗೊಂಡ ಕಬ್ಬಿಣದ ಗೇಟ್‌ ಬಿದ್ದು 4 ವರ್ಷದ ಬಾಲಕಿ ಅಪೂರ್ವ ಬಲಿ..

    ಕುಶಾಲನಗರ: ಶಾಲೆಗೆ ಅಕ್ಕನನ್ನು ಕರೆತರಲು ಬಂದಿದ್ದ ನಾಲ್ಕು ವರ್ಷದ ಪುಟ್ಟ ಬಾಲಕಿ, ಕೆಲವೇ ಕ್ಷಣಗಳಲ್ಲಿ ಜೀವ ಕಳೆದುಕೊಂಡ ಹೃದಯವಿದ್ರಾವಕ ಘಟನೆ ಕೊಡಗು ಜಿಲ್ಲೆಯ ಕುಶಾಲನಗರ ತಾಲೂಕಿನ ಬಸವನಹಳ್ಳಿ ಹಾಡಿಯಲ್ಲಿ ನಡೆದಿದೆ. ಮಳೆಯಿಂದ ದುರ್ಬಲಗೊಂಡಿದ್ದ ಶಾಲೆಯ ಕಾಂಪೌಂಡ್‌ನ ಭಾರೀ ಕಬ್ಬಿಣದ ಗೇಟ್‌ ಕಳಚಿ ಬಿದ್ದ ಪರಿಣಾಮ ಅಂಗನವಾಡಿ ವಿದ್ಯಾರ್ಥಿನಿ ಅಪೂರ್ವ (4)ಸ್ಥಳದಲ್ಲೇ ಮೃತಪಟ್ಟಿದ್ದಾಳೆ.

    ಮೃತ ಅಪೂರ್ವ, ಬಸವನಹಳ್ಳಿ ಹಾಡಿಯ ನಿವಾಸಿಗಳಾದ ಸತೀಶ್ ಮತ್ತು ಪವಿತ್ರ ದಂಪತಿಯ ಮೂರನೇ ಪುತ್ರಿ. ಪ್ರತಿದಿನದಂತೆ ತನ್ನ ಅಕ್ಕಂದಿರಾದ ಅಮೂಲ್ಯ (5ನೇ ತರಗತಿ) ಮತ್ತು ಶ್ರಾವಣಿ (1ನೇ ತರಗತಿ) ಅವರನ್ನು ಕರೆದುಕೊಂಡು ಹೋಗಲು ಶಾಲೆಯ ಗೇಟ್ ಬಳಿ ಬಂದಿದ್ದಳು. ಸ್ಥಳೀಯರ ಮಾಹಿತಿ ಪ್ರಕಾರ, ಗೇಟ್ ಬಳಿ ಆಟವಾಡುವುದು ಅಪೂರ್ವನ ದಿನನಿತ್ಯದ ಅಭ್ಯಾಸವಾಗಿತ್ತು.

    ಆದರೆ ಶುಕ್ರವಾರ ಸಂಜೆ ಮಳೆಯ ನಡುವೆ ಶಿಥಿಲಗೊಂಡಿದ್ದ ಕಾಂಪೌಂಡ್ ಏಕಾಏಕಿ ಕುಸಿದು, ಅದರೊಂದಿಗೆ ಭಾರೀ ತೂಕದ ಕಬ್ಬಿಣದ ಗೇಟ್ ಬಾಲಕಿಯ ಮೇಲೆ ಬಿದ್ದಿದೆ. ತಲೆಗೆ ಗಂಭೀರ ಗಾಯಗೊಂಡ ಅಪೂರ್ವಳನ್ನು ತಕ್ಷಣ ಕುಶಾಲನಗರ ಸಮುದಾಯ ಆರೋಗ್ಯ ಕೇಂದ್ರಕ್ಕೆ ಕರೆದೊಯ್ಯಲಾಯಿತಾದರೂ, ವೈದ್ಯರು ಆಕೆ ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ.

    ಘಟನೆ ಬಳಿಕ ಬಸವನಹಳ್ಳಿ ಹಾಡಿಯಲ್ಲಿ ಶೋಕದ ವಾತಾವರಣ ನಿರ್ಮಾಣವಾಗಿದ್ದು, ಕುಟುಂಬದವರ ಆಕ್ರಂದನ ಕಂಡು ಸ್ಥಳೀಯರ ಕಣ್ಣಲ್ಲೂ ನೀರು ತರಿಸಿದೆ.

    15 ದಿನಗಳಿಂದ ಮಳೆಯ ಹೊಡೆತ – ದುರಸ್ತಿ ಮಾಡದ ಅಧಿಕಾರಿಗಳ ವಿರುದ್ಧ ಆಕ್ರೋಶ

    ಕಳೆದ ಸುಮಾರು 15 ದಿನಗಳಿಂದ ಈ ಭಾಗದಲ್ಲಿ ನಿರಂತರ ಮಳೆಯಾಗುತ್ತಿದ್ದು, ಶಾಲೆಯ ಕಾಂಪೌಂಡ್ ಗೋಡೆ ಮತ್ತು ಗೇಟ್ ಅಪಾಯಕಾರಿಯಾಗಿ ಶಿಥಿಲಗೊಂಡಿತ್ತು ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ. ಗೇಟ್ ಯಾವಾಗ ಬೇಕಾದರೂ ಬೀಳುವ ಸ್ಥಿತಿಯಲ್ಲಿದ್ದರೂ, ಯಾವುದೇ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗಿಲ್ಲ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ನೂರಾರು ಮಕ್ಕಳು ಪ್ರತಿದಿನ ಓಡಾಡುವ ಶಾಲೆಯ ಆವರಣದಲ್ಲಿ ಇಂತಹ ಅಪಾಯಕಾರಿ ಸ್ಥಿತಿ ಇದ್ದರೂ, ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿರುವುದೇ ಈ ದುರಂತಕ್ಕೆ ಕಾರಣ ಎಂದು ನಿವಾಸಿಗಳು ದೂರಿದ್ದಾರೆ.

    ಅಧಿಕಾರಿಗಳ ಭೇಟಿ – ಪರಿಹಾರದ ಭರವಸೆ

    ಘಟನಾ ಸ್ಥಳಕ್ಕೆ ತಹಸೀಲ್ದಾರ್ ಕೆ.ಕೆ. ಕೃಷ್ಣಮೂರ್ತಿ, ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ವಿ.ಪಿ. ಶಶಿಧರ್, ಗಿರಿಜನ ಮುಖಂಡ ಆರ್.ಕೆ. ಚಂದ್ರ ಸೇರಿದಂತೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು.

    ತಹಸೀಲ್ದಾರ್ ಕೆ.ಕೆ. ಕೃಷ್ಣಮೂರ್ತಿ ಮಾತನಾಡಿ, “ಇದು ಪ್ರಕೃತಿ ವಿಕೋಪದಿಂದ ಉಂಟಾದ ದುರ್ಘಟನೆ. ಇತ್ತೀಚಿನ ಭಾರೀ ಮಳೆಯಿಂದ ಮಣ್ಣು–ಇಟ್ಟಿಗೆ ಮಿಶ್ರಿತ ಕಾಂಪೌಂಡ್ ದುರ್ಬಲಗೊಂಡು ಭಾರೀ ಗೇಟ್ ಬಿದ್ದಿದೆ. ಪೋಷಕರು ಅಗತ್ಯ ದಾಖಲೆ ಸಲ್ಲಿಸಿದರೆ ಎನ್‌ಡಿಆರ್‌ಎಫ್ ಹಾಗೂ ಎಸ್‌ಡಿಆರ್‌ಎಫ್ ನಿಯಮಗಳಡಿ ಪರಿಹಾರ ಒದಗಿಸಲಾಗುತ್ತದೆ” ಎಂದು ತಿಳಿಸಿದ್ದಾರೆ.

    ಪ್ರಶ್ನೆ ಮಾತ್ರ ಉಳಿದಿದೆ

    ಒಂದು ಶಾಲೆಯ ಶಿಥಿಲಗೊಂಡ ಗೇಟ್‌ ಸಮಯಕ್ಕೆ ದುರಸ್ತಿ ಮಾಡಿದ್ದರೆ, ನಾಲ್ಕು ವರ್ಷದ ಅಪೂರ್ವ ಇಂದು ಜೀವಂತವಾಗಿರುತ್ತಿರಲಿಲ್ಲವೇ? ಎಂಬ ಪ್ರಶ್ನೆ ಈಗ ಬಸವನಹಳ್ಳಿ ಹಾಡಿಯ ಜನರನ್ನು ಕಾಡುತ್ತಿದೆ. ಈ ದುರಂತ ಕೇವಲ ಪ್ರಕೃತಿ ವಿಕೋಪವೇ, ಅಥವಾ ಆಡಳಿತದ ನಿರ್ಲಕ್ಷ್ಯದ ಮತ್ತೊಂದು ಬಲಿಯೇ ಎಂಬ ಚರ್ಚೆ ವ್ಯಾಪಕವಾಗಿದೆ.

    ##ಕುಶಾಲನಗರ #ಕೊಡಗು #ಶಾಲಾದುರಂತ #ಅಪೂರ್ವ #ಗೇಟ್ಬಿದ್ದುಸಾವು #ಕರ್ನಾಟಕಸುದ್ದಿ #NegligenceCase

    COMMENTS

    Login with Gmail to comment

    ಇನ್ನಷ್ಟು ಸುದ್ದಿ

    ಕಾರ್ಕಳದ ವಂಚನೆ ಪ್ರಕರಣ, ದೂರುದಾರನ ಮೇಲೂ ಶಂಕೆ
    ಜೂನ್ 30,ಪ್ಲಾಸ್ಟಿಕ್ ನೋಟುಗಳು ಬರುತ್ತಿವೆಯೇ? – ವೈರಲ್ ಸುದ್ದಿಯ ಹಿಂದಿನ ವಿಷಯ
    BRICS ನ ಡಿಜಿಟಲ್ ಕರೆನ್ಸಿ ವಿಶ್ವ ಆರ್ಥಿಕತೆಯನ್ನೇ ಬೆರಗಾಗಿಸುತ್ತಾ..?
    ಮೋದಿ ನೇತೃತ್ವದಲ್ಲಿ ಇತಿಹಾಸಕ್ಕೆ ಮರಳಿದ ರಾಜರಾಜಚೋಳರ ಹೆಮ್ಮೆ — ಆನೈಮಂಗಲಂ ತಾಮ್ರಶಾಸನಗಳು! 1000 ವರ್ಷದ ಇತಿಹಾಸ 100 ವರ್ಷಗಳ ಬಳಿಕ ಚೋಳರ ಕಾಲದ ಅಪರೂಪದ ದಾಖಲೆ ನೆದರ್‌ಲ್ಯಾಂಡ್ಸ್‌ನಿಂದ ಭಾರತಕ್ಕೆ ವಾಪಸ್….
    ದವಳ ಕೋ- ಆಪರೇಟಿವ್ನ ಈ ಸಾಲಿನ ವ್ಯವಹಾರ ಎರಡುನೂರು ಕೋಟಿ
    ಕ್ಲೀನ್ ಮಂಗಳೂರು ಕನಸು ನಿಮ್ಮದಾಗಿದ್ದರೆ ಇಲ್ಲಿದೆ ದಾರಿ…ಸ್ವಚ್ಛ ಮಂಗಳೂರು ಅಭಿಯಾನ: ನಾಗರಿಕರ ಕೈಗೆ ಸಿಕ್ಕಿತು ವಾಟ್ಸಾಪ್ ಅಸ್ತ್ರ….!
    ನಿವೇಶನ ಮೋಸದ ಆರೋಪ: ಶಾಸಕ ಎಸ್ ಟಿ ಸೋಮಶೇಖರ್ ಬೆಂಬಲಿಗ ಕೇಬಲ್ ಕೃಷ್ಣನ ಮೇಲೆ ಹಿಗ್ಗಾಮುಗ್ಗಾ ಹಲ್ಲೆ..!
    ಹತ್ತು ವರ್ಷದಿಂದ ಪೊಲೀಸರಿಗೆ ಬೇಕಾದ ಆರೋಪಿಯನ್ನು ಕೊನೆಗೂ ಬಂಧಿಸಿದ ಪೊಲೀಸರು
    ಮಿಜಾರಿನಲ್ಲಿ ರಸ್ತೆ ಕುಸಿತ, ಸಾರ್ವಜನಿಕರಲ್ಲಿ ಆತಂಕ ಮೊದಲ ಮಳೆಯಲ್ಲೇ ಕೊಚ್ಚಿಹೋಯ್ತು ಹೆದ್ದಾರಿ! ಕೋಟಿ ಕೋಟಿ ಕಾಮಗಾರಿಯ ಅಸಲಿ ಮುಖ ಬಯಲು? 
    ಶಾಂತಿ ಕಾಪಾಡಿ, ವದಂತಿಗಳಿಗೆ ಕಿವಿಗೊಡಬೇಡಿ: ಪ್ರತಿಭಟನಾಕಾರರಿಗೆ ದೆಹಲಿ ಪೊಲೀಸರ ಮನವಿ
    ‼️ ಮುಂಗಾರು ಅಬ್ಬರ ಶುರು: ಕರ್ನಾಟಕ-ಕೇರಳಕ್ಕೆ IMD ರೆಡ್ ಸಿಗ್ನಲ್! ಮುಂದಿನ 7 ದಿನ ಭಾರೀ ಮಳೆ, ಬಿರುಗಾಳಿ ಸಾಧ್ಯತೆ!
    ರಾಜ್ಯದ 800 ಶಾಲೆಗಳನ್ನು ಕರ್ನಾಟಕ ಪಬ್ಲಿಕ್ ಸ್ಕೂಲ್ ಗಳಾಗಿ ಉನ್ನತೀಕರಿಸಲು 3900 ಕೋಟಿ ಮೀಸಲು
    ಬಾರ್ ಲೆಕ್ಕಾಚಾರ-ಚೂರಿ ದಾಳಿ – ಯುವಕನ ಕುತ್ತಿಗೆಗೆ ಕೊಯ್ದು ಕೊಲೆ ಯತ್ನ
    ಎನ್‌ಡಿಎ ಜೊತೆ ಎನ್‌ಸಿಪಿ ವಿಲೀನ ವದಂತಿ: ಪ್ರಧಾನಿ ಮೋದಿಯನ್ನು ಭೇಟಿಯಾದ ಶರದ್ ಪವಾರ್, ಸುಪ್ರಿಯಾ ಸುಳೆ
    ನಂದಿಬೆಟ್ಟದ ಬಳಿ ಪ್ರೇಯಸಿ ಕೊಲೆಗೈದು ಪ್ರಿಯಕರನ ಆತ್ಮಹತ್ಯೆ ಯತ್ನ?ಲವ್ ಜಿಹಾದ್’ ಆರೋಪ ಹೊರಿಸಿದ ತಾಯಿ!
    ಬಾಲಗರ್ಭಿಣಿಯರ ಸಂಖ್ಯೆ 5975….!!
    ಮೈ ಜುಮ್ಮೆನ್ನಿಸುವ ಬೈಕ್–ಲಾರಿ ಡಿಕ್ಕಿ ಅಪಘಾತ… ಕ್ಷಣಾರ್ಧದಲ್ಲೇ ಜೀವ ಹೋದ ಹೃದಯವಿದ್ರಾವಕ ರಸ್ತೆ ದುರಂತ
    ನಿಶ್ಶಬ್ದ ಕೊಠಡಿ ಹೇಳುವ ನಿಗೂಢ ರಹಸ್ಯ …!ಮನೆಯ ಗೋಡೆಗಳ ಮೇಲೆ ಬರಹ,ಕಾಗದಗಳು ನೂರಾರು…! ಅಸಹಜ ಮರಣದ ಹಿಂದೆ ಅಡಗಿರುವ ಸತ್ಯ ಇನ್ನೂ ಅನಾವರಣವಾಗಿಲ್ಲ…”
    ದಾವೂದ್ ಇಬ್ರಾಹಿಂನ ಆಪ್ತ. ಸಲೀಂ ಡೋಲಾ ಬಂದನ ವಿದೇಶದಲ್ಲಿ ಅಡಗಿದ್ದರೂ ಕಾನೂನಿನಿಂದ ತಪ್ಪಿಸಿಕೊಳ್ಳಲಾಗಲಿಲ್ಲ
    ದೇವರ ಮುಂದೆ ಸಾಲಿನಲ್ಲಿ ನಿಲ್ಲಲೇಬೇಕು! ಮಂತ್ರಿ ಇರಲಿ, ಸೆಲೆಬ್ರಿಟಿ ಇರಲಿ…ಅಧಿಕಾರ ಇರಲಿ, ಅಂತಸ್ತು ಇರಲಿ…”ವಿಐಪಿ ದರ್ಶನ”ಕ್ಕೆ ಹೈಕೋರ್ಟ್ ಕೊಟ್ಟ ಚಾವಟಿ ಏಟು!
    ಮದುವೆ -ಜೀವನ ಬೇಸರವಾಯ್ತು ಆಸಕ್ತಿ ಇಲ್ಲ ಅಂದ್ರೆ ವಿಚ್ಛೇದನ ಸಿಗುತ್ತಾ ..! ಮಗಳು18 ದಾಟಿದರೂ ಶಿಕ್ಷಣದ ಹೊಣೆ ಯಾರಿಗೆ?
    ಗ್ಯಾಂಬ್ಲರ್ ಹಿಡಿತದಲ್ಲಿ ಉಡುಪಿ, ಬಚಾವ್ ಮಾಡಿ..
    ಟಾಟಾ ಸನ್ಸ್ IPOಗೆ ಒತ್ತಾಯ: ಟ್ರಸ್ಟಿಗಳಲ್ಲಿ ಭಿನ್ನಾಭಿಪ್ರಾಯ ಹೆಚ್ಚಳ…!
    ಮಂಗಳೂರು ಜಾರಂದಾಯ ಸ್ಥಾನದ ದೈವ ನರ್ತನ ವಿವಾದ – ಸ್ಪಷ್ಟನೆ- ಮರುಪ್ರಶ್ನೆ-ಇತ್ಯರ್ಥವಾಗುತ್ತಾ..?!
    ಗೃಹ ಬಳಕೆಯ LPG ಗ್ರಾಹಕರಿಗೆ Aadhaar e-KYC ಕಡ್ಡಾಯ – PMUY ಫಲಾನುಭವಿಗಳಿಗೆ ವಾರ್ಷಿಕ ಬಯೋಮೆಟ್ರಿಕ್ ಪರಿಶೀಲನೆ
    ಮುಂಬೈ ಬೀದಿಯಲ್ಲಿ ನಾರಿ ಶಕ್ತಿಯ ಸಿಡಿಲು!ಜನರ ಬದುಕು ಅಡ್ಡಗಟ್ಟಿದರೆ ಎದುರಿಸುವವರು ಹೀಗೆ ಒಬ್ಬೊಬ್ಬರೇ ಇನ್ನೂ ಹುಟ್ಟುತ್ತಾರೆ..
    ಮಹಿಳಾ ಕ್ರೀಡಾಪಟುಗಳ ಹೋರಾಟಕ್ಕೆ ಹೊಸ ತಿರುವು ಕೊಟ್ಟ ದೆಹಲಿ ಹೈಕೋರ್ಟ್!
    ಹೊಟ್ಟೆಪಾಡಿಗಾಗಿ ಬಂದ ಕಾರ್ಮಿಕನ ಜೀವ ರೋಡ್ ರೋಲರ್ ಹರಿದು ರಸ್ತೆಯಲ್ಲೇ ಅಂತ್ಯ…
    ಉಡುಪಿ ಜಿಲ್ಲಾಆಸ್ಪತ್ರೆಯಲ್ಲಿ ಹಗರಣ, ತಾರತಮ್ಯದ ಆರೋಪ: ವೀಣಾದೇವಿ ವಿರುದ್ಧದಕ್ರಮ ಕಣ್ಣೊರೆಸುವ ತಂತ್ರ
    ಕದನ ವಿರಾಮ ಹೇಳಿಕೆ ಮಾತ್ರ…“Middle East ಮತ್ತೆ ಸ್ಫೋಟಕ