📍 Karavali Maruta
  • LOGIN
  • ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

    ಅಣ್ಣಾ ಹಜಾರೆಗೆ ಲೈವ್, ಸೋನಂ ವಾಂಗ್ಚುಕ್‌ಗೆ ಮೌನವೇಕೆ?”  ದ್ವಂದ್ವ ನೀತಿಯ ಬಗ್ಗೆ ಪ್ರಶ್ನೆ

    ನವದೆಹಲಿ/ಲೇಹ್: ದೇಶಕ್ಕಾಗಿ ಉಪವಾಸ ಸತ್ಯಾಗ್ರಹ ಮಾಡುವಾಗ ವ್ಯಕ್ತಿ ಒಂದೇ. ಆದರೆ ವ್ಯವಸ್ಥೆಯಲ್ಲಿ ಕೊಡುವ ಪ್ರಾಮುಖ್ಯತೆ ಮಾತ್ರ ಬೇರೆ ಬೇರೆ. ಇದೇ ಪ್ರಶ್ನೆಯನ್ನು ಈಗ ಜನಸಾಮಾನ್ಯರು ಕೇಳುತ್ತಿದ್ದಾರೆ.

    2011 ರಲ್ಲಿ ಅಣ್ಣಾ ಹಜಾರೆ ಲೋಕಪಾಲ್‌ಗಾಗಿ ಉಪವಾಸ ಸತ್ಯಾಗ್ರಹ ಮಾಡಿದಾಗ ಪ್ರತಿ ಚಾನಲ್‌ಗಳಲ್ಲಿ 24 ಗಂಟೆ ಲೈವ್ ಪ್ರಸಾರವಾಗಿತ್ತು. ಅದೇ ರೀತಿ ಲಡಾಖ್‌ಗಾಗಿ, ಪರಿಸರಕ್ಕಾಗಿ, ಸಂವಿಧಾನದ 6ನೇ ಪರಿಚ್ಛೇದಕ್ಕಾಗಿ ಹೋರಾಡುತ್ತಿರುವ ಸೋನಂ ವಾಂಗ್ಚುಕ್ ಅವರು ಉಪವಾಸ ಸತ್ಯಾಗ್ರಹ ಮಾಡಿದಾಗ ಮುಖ್ಯವಾಹಿನಿಗಳಲ್ಲಿ ಆ ಮಟ್ಟದ ಪ್ರಚಾರ ಕಾಣಿಸಿಲ್ಲ ಎಂಬ ಆರೋಪ ಕೇಳಿಬಂದಿದೆ.

    ಸೋನಂ ವಾಂಗ್ಚುಕ್ ಯಾರು?

    “Three Idiots” ಸಿನಿಮಾದ “ಫುಂಗ್ಸುಕ್ ವಾಂಗ್ಡು” ಪಾತ್ರಕ್ಕೆ ಸ್ಫೂರ್ತಿಯಾದ ವ್ಯಕ್ತಿ ಇವರೇ.

    ಪರಿಚಯ: ಇಂಜಿನಿಯರ್: ಶೈಕ್ಷಣಿಕ ಸುಧಾರಣೆಗಾಗಿ “SECMOL” ಸಂಸ್ಥೆ ಸ್ಥಾಪಿಸಿದವರು ಪರಿಸರವಾದಿ: ಲಡಾಖ್‌ನ ಮರುಭೂಮಿಯಲ್ಲಿ “ಐಸ್ ಸ್ತೂಪ” ತಂತ್ರಜ್ಞಾನದಿಂದ ನೀರಿನ ಸಮಸ್ಯೆ ಪರಿಹರಿಸಿದವರ ವಿಜ್ಞಾನಿ ಮತ್ತು ಸಾಮಾಜಿಕ ಹೋರಾಟಗಾರ: ಸುಸ್ಥಿರ ಅಭಿವೃದ್ಧಿ, ಸ್ಥಳೀಯ ಜನರ ಹಕ್ಕುಗಳಿಗಾಗಿ ಹೋರಾಡುತ್ತಿರುವವರು

    “ಜನರಿಗಾಗಿ, ಭೂಮಿಗಾಗಿ ಹೋರಾಡುವವರು ನಿಜವಾದ ದೇಶಭಕ್ತರು” ಎಂಬ ಸಂದೇಶದೊಂದಿಗೆ ಅವರು ಲಡಾಖ್‌ಗೆ 6ನೇ ಪರಿಚ್ಛೇದ ರಕ್ಷಣೆ, ಪರಿಸರ ರಕ್ಷಣೆಗಾಗಿ ಉಪವಾಸ ಸತ್ಯಾಗ್ರಹ ನಡೆಸಿದ್ದರು.

    ಜನರ ಪ್ರಶ್ನೆ

    “ಅಣ್ಣಾ ಹಜಾರೆ ಉಪವಾಸ ಮಾಡಿದಾಗ ಪ್ರತಿ ಚಾನಲ್‌ನಲ್ಲಿ ಲೈವ್ ಇತ್ತು. ಆದರೆ ಸೋನಂ ವಾಂಗ್ಚುಕ್ ಅವರು ಲಡಾಖ್‌ನ ಹಿಮದಲ್ಲಿ ಕುಳಿತು ದೇಶಕ್ಕಾಗಿ ಉಪವಾಸ ಮಾಡಿದಾಗ ಯಾವ ಚಾನಲ್ ತೋರಿಸಿತು?” – ಇದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿರುವ ಪ್ರಶ್ನೆ. ಜನರು ಹೇಳುತ್ತಿರುವುದು:
    “ಮಾಧ್ಯಮ ಲೋಕವು TRP, ರಾಜಕೀಯ ಲಾಭ ನೋಡಿ ಸುದ್ದಿ ತೋರಿಸುತ್ತಿದೆಯೇ? ಜನಪರ ಹೋರಾಟಗಾರರನ್ನು ನಿರ್ಲಕ್ಷಿಸುತ್ತಿದೆಯೇ? ಇದರಿಂದ ನಮ್ಮ ಪ್ರಸಾರ ಮಾಧ್ಯಮ ಯಾವ ಗತಿಗೆ ಹೋಗಿದೆ ಎಂಬುದು ಗೊತ್ತಾಗುತ್ತದೆ.” ಎಂಬುದಾಗಿದೆ.

    ಹಿರಿಯ ಪತ್ರಕರ್ತರೊಬ್ಬರ ಪ್ರಕಾರ, “ಯಾವುದೇ ಸತ್ಯಾಗ್ರಹವಾಗಲಿ, ಅದು ಜನಪರವಾಗಿದ್ದರೆ ಮಾಧ್ಯಮಗಳು ಜಾತಿ, ಪ್ರದೇಶ, ರಾಜಕೀಯ ನೋಡದೆ ಪ್ರಸಾರ ಮಾಡಬೇಕು. ಸೋನಂ ವಾಂಗ್ಚುಕ್ ಅವರ ಹೋರಾಟ ಲಡಾಖ್‌ನ ಭವಿಷ್ಯಕ್ಕೆ ಸಂಬಂಧಿಸಿದ್ದು. ಅದನ್ನು ನಿರ್ಲಕ್ಷಿಸುವುದು ಪ್ರಜಾಪ್ರಭುತ್ವಕ್ಕೆ ಒಳ್ಳೆಯದಲ್ಲ”

    ಸೋನಂ ವಾಂಗ್ಚುಕ್ ಅವರ ಹೋರಾಟಕ್ಕೆ ದೇಶದ ಮೂಲೆ ಮೂಲೆಯಿಂದ ಬೆಂಬಲ ವ್ಯಕ್ತವಾಗುತ್ತಿದೆ. “ನಾನು ನಿಮ್ಮ ಜೊತೆ ಇದ್ದೇನೆ. ಜೈ ಹಿಂದ್” ಎಂಬ ಸಂದೇಶಗಳು ಅವರಿಗೆ ರವಾನೆಯಾಗುತ್ತಿವೆ.

    ಒಬ್ಬ ಇಂಜಿನಿಯರ್, ವಿಜ್ಞಾನಿ, ಪರಿಸರವಾದಿ ದೇಶಕ್ಕಾಗಿ ಉಪವಾಸ ಮಾಡುವಾಗ ಮಾಧ್ಯಮಗಳು ಮೌನವಾಗಿದ್ದರೆ, ಅದು ದೇಶ-ಧರ್ಮಕ್ಕೆ ಮಾಡುವ ದ್ರೋಹವೇ ಎಂದು ಜನರು ಹೇಳಲು ಪ್ರಾರಂಭಿಸಿದ್ದಾರೆ.


    COMMENTS

    Login with Gmail to comment

    ಇನ್ನಷ್ಟು ಸುದ್ದಿ

    ತಮಿಳುನಾಡು ರಾಜಕೀಯದಲ್ಲಿ ದಿನಕ್ಕೊಂದು ಟ್ವಿಸ್ಟ್ -TVK wave ಎಷ್ಟು ದೂರ ಸಾಗುತ್ತದೆ?
    ಕರ್ನಾಟಕ–ತಮಿಳುನಾಡು ಮೇಕೆದಾಟು ವಾದ ವಿರೋಧಕ್ಕೆ ಕರ್ನಾಟಕದ ಆಹ್ವಾನ ಸ್ವೀಕರಿಸಿ ವಿಜಯ್ ಬೆಂಗಳೂರಿಗೆ? ಇಂದು ಬೆಂಗಳೂರಿನಲ್ಲಿ ಮಹತ್ವದ ಚರ್ಚೆ!
    ಮಂಗಳೂರು ಇನ್ಸ್ಟಾಮಾರ್ಟ ಕುಂಟಿಕಾನದಲ್ಲಿ ಲಿಫ್ಟ್ ದುರಂತ: ಡೆಲಿವರಿ ಸಿಬ್ಬಂದಿ ದುರ್ಮರಣ
    NEET ಹಂಗಾಮ ನೀಟಾಗಿ ಅಂತ್ಯ ಕಾಣುತ್ತಾ…?!ಮೋದಿಯ ‘ತಡವಾದ ಪ್ರತಿಕ್ರಿಯೆ’-ಕೊನೆಗೂ ವಾಂಗ್ಚುಕ್ ಉಪವಾಸ ಅಂತ್ಯ… ಆದರೆ … ‘ಕಾಕ್ರೋಚ್’ ಹೋರಾಟ ಮುಂದುವರಿಕೆ!ಮುಂದೇನು??
    ಐಸಿಸ್ ನೆರವು ಜಾಲದ ಮೇಲೆ ಇ.ಡಿ ಸರ್ಜಿಕಲ್ ಸ್ಟ್ರೈಕ್..! ಬೆಂಗಳೂರಿನ 8 ಕಡೆ ಏಕಕಾಲಕ್ಕೆ ದಾಳಿ
    “ಮಾರಿಕೊಂಡ ಮಾಧ್ಯಮದವರು ಯಾರು?” ಪ್ರಶ್ನೆಗೆ ಪ್ರಕಾಶ್ ರಾಜ್ ನಿರುತ್ತರ”ಪತ್ರಿಕಾಗೋಷ್ಠಿಯಲ್ಲೇ ಶುರುವಾದ ಭಾರೀ ವಿವಾದ ಏನು?
    ಜುಲೈ 1ರಿಂದ ದೇಶದಲ್ಲಿ ಹಲವು ಹೊಸ ನಿಯಮಗಳು ಜಾರಿ…ಪಾಸ್‌ಪೋರ್ಟ್, ರೈಲ್ವೆ, ಕ್ರೆಡಿಟ್ ಕಾರ್ಡ್, ಬ್ಯಾಂಕ್… ಒಂದೇ ದಿನದಲ್ಲಿ ಹಲವು ದೊಡ್ಡ ಬದಲಾವಣೆಗಳು
    “ಧುರಂಧರ್” ನಟ ರಣವೀರ್ ಸಿಂಗ್‌ ವಿರುದ್ಧ ಇಡೀ ಬಾಲಿವುಡ್ ಒಕ್ಕೂಟವೇ ತಿರುಗಿಬಿದ್ದಿದ್ದೇಕೆ? shocking ₹45 ಕೋಟಿ ವಿವಾದದ ಅಸಲಿ ಕಥೆ ಇಲ್ಲಿದೆ!
    ವಿಶ್ವ ಸಂಸ್ಥೆಯು ಯಾವ ಪುರುಷಾರ್ಥಕ್ಕೆ? ಬಲವರ್ಧನೆಯ  ಅಗತ್ಯತೆ
    “ವಚನಾನಂದ ಶ್ರೀ ಸರದಿ ಸಾಲಿನಲ್ಲಿ ಮಕ್ಕಳನ್ನು ಕರೆಯುತ್ತಿದ್ದರು”– ಪೀಠದಿಂದ ಉಚ್ಚಾಟನೆ ಬಳಿಕ ಪೋಕ್ಸೋ ಕೇಸ್ ಶಾಕ್..ಮಠದಲ್ಲಿ ಭಾರೀ ಸಂಚಲನ .. ಭೇಟಿ ನೀಡಿದ ಮಕ್ಕಳ ಕಲ್ಯಾಣ ಸಮಿತಿ
    ದಕ್ಷಿಣ ಕನ್ನಡದ ಸರ್ಕಾರಿ ಶಾಲೆಗಳು …ಮಕ್ಕಳ ಶಾಲೆಯಾ? ನ್ಯೂಸ್ ಚಾನೆಲ್ಲಾ? ಬ್ರೇಕಿಂಗ್ ನ್ಯೂಸ್…ಪಠ್ಯಪುಸ್ತಕದಿಂದ ಪ್ರೈಮ್‌ಟೈಮ್‌ವರೆಗೆ..!
    ಹಾರ್ಮುಜ್ ಬಳಿ ಹಡಗುಗಳ ಹಿಂತಿರುಗುವ ಸರಣಿ!ಜಾಗತಿಕ ತೈಲ ಸರಬರಾಜಿಗೆ ಶಾಕ್ ⚠️
    ಆಸಿಡ್ ದಾಳಿಗೊಳಗಾದ ಮಹಿಳೆಯರಿಗೆ ₹50 ಸಾವಿರ ಮಾಸಾಶನ: ಆಸಿಡ್ ಮಾರಾಟಕ್ಕೆ ಕಡಿವಾಣ ಹಾಕಲು ಸರ್ಕಾರ ಕ್ರಮ
    ಮಾರ್ಚ್ 17 :ಮಂಗಳೂರಿನಲ್ಲಿ ವಿಶ್ವ ಗ್ರಾಹಕರ ದಿನಾಚರಣೆ-ಗ್ರಾಹಕರ ಹಕ್ಕುಗಳ ಜಾಗೃತಿ ಕಾರ್ಯಕ್ರಮ
    ಕಪ್ಪೆ ಚಿಪ್ಪು ದುರಂತಕ್ಕೆ ಮತ್ತೆರಡು ಜೀವ ಬಲಿ, ಬಲಿಯ ಸಂಖ್ಯೆ ಏರುವ ಸಾಧ್ಯತೆ
    ಗುಜರಾತ್ ಪೊಲೀಸರಲ್ಲಿ ಆಗದ ಕೆಲಸ, ಒಬ್ಬ ಮಂತ್ರವಾದಿಯಿಂದ ಆಯ್ತು
    ಮಂಗಳೂರಿನಲ್ಲಿ ವಕೀಲರೊಬ್ಬರ ನಕಲಿ ದುಷ್ಕೃತ್ಯ ಬಯಲಿಗೆ?
    17 ವರ್ಷದ ಯುವಕ ಸಂಸತ್ತಿನ ಕದ ತಟ್ಟಬಲ್ಲ ಎಂದಾದರೆ, ನಿಮ್ಮ ಧ್ವನಿಗೆ ಎಷ್ಟು ಶಕ್ತಿಯಿದೆ ಯೋಚಿಸಿ!..ವ್ಯವಸ್ಥೆಯ ಲೋಪದ ವಿರುದ್ಧ ಧ್ವನಿ ಎತ್ತದಿದ್ದರೆ ಬದಲಾವಣೆ ಸಾಧ್ಯವಿಲ್ಲ.
    5.5 ವರ್ಷದ ಹೆಣ್ಣುಮಗಳ ಕೊಲೆ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್!ಮಗು ಸತ್ತು 3 ತಿಂಗಳು…ಆದ್ರೆ FIR ಇಲ್ಲ! 3 ಪೊಲೀಸರು ಸಸ್ಪೆಂಡ್
    🚨 ಸಾರ್ವಜನಿಕರಿಗೆ ತುರ್ತು ಎಚ್ಚರಿಕೆ – ಕಟಪಾಡಿ ರಾಷ್ಟ್ರೀಯ ಹೆದ್ದಾರಿ ಅಪಘಾತ
    AI ಡೀಪ್‌ಫೇಕ್ ಕೇವಲ ಸಿನಿಮಾ ನಟಿಯರಿಗೆ ಸೀಮಿತವಾಗಿಲ್ಲ .
    ಗೃಹ ಬಳಕೆಯ LPG ಗ್ರಾಹಕರಿಗೆ Aadhaar e-KYC ಕಡ್ಡಾಯ – PMUY ಫಲಾನುಭವಿಗಳಿಗೆ ವಾರ್ಷಿಕ ಬಯೋಮೆಟ್ರಿಕ್ ಪರಿಶೀಲನೆ
    ಕರಾವಳಿ ಪ್ರತ್ಯೇಕ ರಾಜ್ಯಕ್ಕೆ ಒತ್ತಾಯ: “ಕರಾವಳಿ ಪಡೆ” ಹೋರಾಟ ತೀವ್ರಗೊಳಿಸಲು ನಿರ್ಧಾರ
    ಕರ್ನಾಟಕದಲ್ಲಿ ಯುಗಾದಿ ಹಬ್ಬಕ್ಕೂ ಮುನ್ನವೇ  ಮುಂಗಾರು  ಮಳೆರಂಗು – 5 ಜಿಲ್ಲೆಗಳಲ್ಲಿ ಆಲಿಕಲ್ಲು ಅಬ್ಬರ!
    ಉಡುಪಿ ಸಬ್ ರಿಜಿಸ್ಟರ್ ಕಚೇರಿಯಲ್ಲಿ ಕಾನೂನುಬಾಹಿರ ಚಟುವಟಿಕೆ
    ಕರ್ನಾಟಕದಲ್ಲಿ 2 ಲಕ್ಷಕ್ಕೂ ಹೆಚ್ಚು ನಾಯಿ ಕಚ್ಚಿದ ಪ್ರಕರಣಗಳು …!ನಗರಗಳಲ್ಲಿ ‘ಸ್ಟ್ರೇ ಡಾಗ್ ಟೆರರ್’ — ಜನರು ಭಯದಲ್ಲಿ ಬದುಕುತ್ತಿದ್ದಾರೆ!
    ಮಳೆ ಬರುತ್ತದೆ ಎಂದಾಗ ರಜೆ ಇಲ್ಲ… ರಜೆ ಕೊಟ್ಟ ದಿನ ಮಳೆಯೇ ಇಲ್ಲ!ಹವಾಮಾನ ಮುನ್ಸೂಚನೆನಾ? ಖಚಿತ ಭವಿಷ್ಯವಾಣಿಯಾ? ಮಳೆ–ರಜೆ ಗೊಂದಲಕ್ಕೆ ಕಾರಣವೇನು?
    ಇನ್ನೂ ಏಳು ದಿನ ಕರ್ನಾಟಕದ ಸಿಎಂ ಕುರ್ಚಿ ಕಾಲಿ… ಜೂನ್ 5 ರಂದು ಡಿಕೆ ಶಿವಕುಮಾರ್ ಪ್ರಮಾಣ ವಚನ!
    ಮಂಗಳೂರು ಯೂಟ್ಯೂಬರ್‌ಗಳ ವಿರುದ್ಧ ಬಿಎನ್‌ಎಸ್ ಅಸ್ತ್ರ ಪ್ರಯೋಗಿಸಿದ ಖಾಕಿ!….
    ಮರಣದಂಡನೆಗೆ ಗುರಿಯಾದ ಅಪರಾಧಿಯಿಂದ ಮಾಧ್ಯಮ ಪ್ರತಿನಿಧಿಗಳ ಮೇಲೆ ಏಕಾಏಕಿ ಹಲ್ಲೆ: ಸ್ಥಳದಲ್ಲಿ ಕೆಲಕಾಲ ಉದ್ವಿಗ್ನತೆ