📍 Karavali Maruta
LIVE | CONTACT
ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

ಅಪ್ರಾಪ್ತನ ಕ್ರೌರ್ಯಕ್ಕೆ ಬಳ್ಳಾರಿ ವಸತಿ ಶಾಲೆಯ ದೌರ್ಜನ್ಯವೇ ಸಾಕ್ಷಿ… ಈ ಕ್ರೌರ್ಯದ ಹಿಂದೆ ಮನೋರೋಗ ಅಡಗಿದೆಯಾ? 

ಬಳ್ಳಾರಿ ವಸತಿ ಶಾಲೆ ದುರಂತ: ಮಕ್ಕಳ ಮನೋವೈಜ್ಞಾನಿಕ ಸ್ಥಿತಿ, ಒಂದು ದೊಡ್ಡ ಪ್ರಶ್ನೆ

ಬಳ್ಳಾರಿ: ಆಸ್ಪತ್ರೆ ಆವರಣದಲ್ಲಿ ಮೃತ ವಿದ್ಯಾರ್ಥಿಯ ತಾಯಿ ಕಣ್ಣೀರಿಟ್ಟು ಅಳುತ್ತಿರುವ ದೃಶ್ಯ ಎಲ್ಲರ ಮನಸ್ಸನ್ನು ಕಲುಕಿದೆ. ಮಗನನ್ನು ಓದಲು ದೂರದ ಊರಿಗೆ ಕಳುಹಿಸಿದ್ದ ಪೋಷಕರಿಗೆ ಇದು ಭಾರೀ ಆಘಾತವಾಗಿದೆ.

ಮಾರ್ಚ್ 7ರ ರಾತ್ರಿ ಸಾಮಾನ್ಯ ದಿನದಂತೆ ಆರಂಭವಾಗಿತ್ತು. ಬಳ್ಳಾರಿ ಹೊರವಲಯದ ತಾಳೂರು ರಸ್ತೆಯಲ್ಲಿರುವ ಖಾಸಗಿ ವಸತಿ ಶಾಲೆಯ ಹಾಸ್ಟೆಲ್‌ನಲ್ಲಿ ವಾಸಿಸುತ್ತಿದ್ದ ವಿದ್ಯಾರ್ಥಿಗಳು ರಾತ್ರಿ ಊಟ ಮುಗಿಸಿ ಸುಮಾರು 9:30ರ ವೇಳೆಗೆ ಮಲಗಿದ್ದರು. ಹಾಸ್ಟೆಲ್‌ನಲ್ಲಿ ಒಟ್ಟು 9 ವಿದ್ಯಾರ್ಥಿಗಳು ವಾಸವಾಗಿದ್ದರು – 7 ಗಂಡು ಮಕ್ಕಳು ಮತ್ತು 2 ಹೆಣ್ಣು ಮಕ್ಕಳು.

ರಾತ್ರಿ ಸುಮಾರು 11 ಗಂಟೆ ವೇಳೆಗೆ, 9ನೇ ತರಗತಿಯ 15 ವರ್ಷದ ಬಾಲಕನೊಬ್ಬ ತನ್ನ ಕೊಠಡಿಯಿಂದ ಹೊರಬಂದು, ಮಲಗಿದ್ದ ಸಹಪಾಠಿಗಳ ಮೇಲೆ ಕಬ್ಬಿಣದ ರಾಡ್ ಹಾಗೂ ಇತರೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ್ದಾನೆ. ವಿದ್ಯಾರ್ಥಿಗಳು ಮಲಗಿದ್ದ ಸ್ಥಿತಿಯಲ್ಲೇ ಹೊಟ್ಟೆ, ತಲೆ ಹಾಗೂ ಎದೆ ಭಾಗಗಳಿಗೆ ಗಂಭೀರ ಗಾಯಗಳನ್ನು ಮಾಡಿದ್ದಾರೆ.

ವಿದ್ಯಾರ್ಥಿಗಳ ಕೂಗಾಟ ಕೇಳಿ ಹಾಸ್ಟೆಲ್ ವಾರ್ಡನ್ ಬ್ಲೆಸ್ಲಿ ಕುರಿಕೋಸ್ ಸ್ಥಳಕ್ಕೆ ಬಂದಾಗ, ಅವರ ಮೇಲೂ ಬಾಲಕ ದಾಳಿ ನಡೆಸಿದ್ದಾನೆ. ನಂತರ ಆತ ಸ್ಥಳದಿಂದ ಪರಾರಿಯಾಗಿದ್ದಾನೆ.

ಈ ದಾಳಿಯಲ್ಲಿ ಡಿ. ಹೇಮಂತ್ (15) ಎಂಬ ವಿದ್ಯಾರ್ಥಿ ತೀವ್ರ ಗಾಯಗಳಿಂದ ಸಾವನ್ನಪ್ಪಿದ್ದಾನೆ. ಹೇಮಂತ್ ಆಂಧ್ರಪ್ರದೇಶದ ಕರ್ನೂಲ್ ಜಿಲ್ಲೆಯ ಆಲೂರು ತಾಲೂಕಿನ ಸಮಗಿರಿ ಗ್ರಾಮದ ನಿವಾಸಿ ಎಂದು ತಿಳಿದುಬಂದಿದೆ.

ಇನ್ನೂ ಒಬ್ಬ ವಿದ್ಯಾರ್ಥಿನಿ ಮತ್ತು ಐವರು ವಿದ್ಯಾರ್ಥಿಗಳು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಬಳ್ಳಾರಿಯ ವಿಮ್ಸ್ (VIMS) ಆಸ್ಪತ್ರೆಗೆ ದಾಖಲಿಸಲಾಗಿದೆ. ಹಾಸ್ಟೆಲ್ ವಾರ್ಡನ್ ಕೂಡ ಗಾಯಗೊಂಡಿದ್ದು ಚಿಕಿತ್ಸೆ ಪಡೆಯುತ್ತಿದ್ದಾರೆ.

ಶಿಕ್ಷಣ ಸಂಸ್ಥೆಗಳು ಮಕ್ಕಳ ಭವಿಷ್ಯ ರೂಪಿಸುವ ಪವಿತ್ರ ಸ್ಥಳಗಳೆಂದು ನಾವು ನಂಬುತ್ತೇವೆ. ಆದರೆ ಬಳ್ಳಾರಿ ಹೊರವಲಯದ ಖಾಸಗಿ ವಸತಿ ಶಾಲೆಯಲ್ಲಿ ನಡೆದ ಘಟನೆ ಆ ನಂಬಿಕೆಯನ್ನು ತತ್ತರಗೊಳಿಸಿದೆ. 9ನೇ ತರಗತಿಯ 15 ವರ್ಷದ ಬಾಲಕನೊಬ್ಬ ತನ್ನ ಸಹಪಾಠಿಗಳ ಮೇಲೆ ನಡೆಸಿದ ಉನ್ಮಾದಿತ ದಾಳಿಯಲ್ಲಿ ಒಬ್ಬ ವಿದ್ಯಾರ್ಥಿ ಸಾವನ್ನಪ್ಪಿದ್ದು, ಇನ್ನೂ ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಈ ಘಟನೆ ಕೇವಲ ಒಂದು ಅಪರಾಧ ಪ್ರಕರಣವಲ್ಲ; ಇದು ಮಕ್ಕಳ ಮನೋಸ್ಥಿತಿ, ಹಾಸ್ಟೆಲ್ ಸುರಕ್ಷತೆ ಮತ್ತು ಶಿಕ್ಷಣ ವ್ಯವಸ್ಥೆಯ ಮೇಲಿನ ದೊಡ್ಡ ಪ್ರಶ್ನೆಯನ್ನು ಸಮಾಜದ ಮುಂದೆ ತಂದಿದೆ.

ಆರೋಪಿ ಪರಾರಿ: ಪೊಲೀಸ್ ತಂಡಗಳ ಶೋಧ ಘಟನೆ ಬಳಿಕ ದಾಳಿ ನಡೆಸಿದ ಬಾಲಕ ಪರಾರಿಯಾಗಿದ್ದು, ಪೊಲೀಸರು ಅವನ ಪತ್ತೆಗಾಗಿ ಎರಡು ಪಿಐ ಹಾಗೂ ಐದು ಪಿಎಸ್‌ಐಗಳ ನೇತೃತ್ವದಲ್ಲಿ ಏಳು ವಿಶೇಷ ತಂಡಗಳನ್ನು ರಚಿಸಿದ್ದಾರೆ. ಬಾಲಕ ಓಡಾಡುತ್ತಿದ್ದ ಮಾರ್ಗಗಳು ಮತ್ತು ಪರಿಚಯದ ಸ್ಥಳಗಳನ್ನು ಗಮನದಲ್ಲಿಟ್ಟುಕೊಂಡು ಶೋಧ ಕಾರ್ಯ ಮುಂದುವರಿಸಲಾಗಿದೆ.

ಪೊಲೀಸರ ಪ್ರಕಾರ, ಬಾಲಕ ಪತ್ತೆಯಾದ ನಂತರವೇ ದಾಳಿಯ ನಿಖರ ಕಾರಣ ಸ್ಪಷ್ಟವಾಗಲಿದೆ. ಪ್ರಾಥಮಿಕ ಮಾಹಿತಿಯ ಪ್ರಕಾರ ಸಣ್ಣ ವಿಚಾರದ ವಿವಾದ ಅಥವಾ ವೈಯಕ್ತಿಕ ಅಸಮಾಧಾನ ಈ ದಾಳಿಗೆ ಕಾರಣವಾಗಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ.

ಮತ್ತೊಂದು ದೊಡ್ಡ ಅಚ್ಚರಿ: ಹಾಸ್ಟೆಲ್‌ಗೆ ಅನುಮತಿ ಇರಲಿಲ್ಲ

ಘಟನೆ ಬಳಿಕ ಹೊರಬಂದ ಮತ್ತೊಂದು ವಿಚಾರ ಇನ್ನಷ್ಟು ಆತಂಕಕಾರಿ. ಜಿಲ್ಲಾ ಮಕ್ಕಳ ರಕ್ಷಣಾ ಘಟಕವು ಸಲ್ಲಿಸಿದ ವರದಿ ಪ್ರಕಾರ, ಈ ಖಾಸಗಿ ಹಾಸ್ಟೆಲ್ ರಾಜ್ಯ ಶಿಕ್ಷಣ ಇಲಾಖೆಯಿಂದ ಅಧಿಕೃತ ಅನುಮತಿ ಪಡೆದಿರಲಿಲ್ಲ.ಮಕ್ಕಳ ಮೇಲ್ವಿಚಾರಣೆಗೆ ಯಾವುದೇ ಪುರುಷ ಸಿಬ್ಬಂದಿ ನೇಮಕವಾಗಿರಲಿಲ್ಲ,ಹಾಸ್ಟೆಲ್‌ನ CCTV ಕ್ಯಾಮೆರಾಗಳು ಕಾರ್ಯನಿರ್ವಹಿಸುತ್ತಿರಲಿಲ್ಲ

ಘಟನೆ ಬಳಿಕ ಶಾಲೆಯ ಆಡಳಿತ ಮಂಡಳಿ ಕಾಣೆಯಾಗಿದ್ದಾರೆ

ಶಾಲೆಯಲ್ಲಿ ಒಟ್ಟು 158 ವಿದ್ಯಾರ್ಥಿಗಳು ಓದುತ್ತಿದ್ದರೂ, ಹಾಸ್ಟೆಲ್‌ನಲ್ಲಿ ಕೇವಲ 9 ವಿದ್ಯಾರ್ಥಿಗಳು ಮಾತ್ರ ವಾಸವಾಗಿದ್ದರು.

ಈ ಘಟನೆ ಮತ್ತೊಂದು ಪ್ರಮುಖ ವಿಷಯವನ್ನು ಸಮಾಜದ ಮುಂದೆ ತರುತ್ತದೆ – ಮಕ್ಕಳ ಮಾನಸಿಕ ಆರೋಗ್ಯ. ವಸತಿ ಶಾಲೆಗಳಲ್ಲಿ ಓದುತ್ತಿರುವ ಮಕ್ಕಳಿಗೆ ಕೆಲವೊಮ್ಮೆ ಹಲವು ರೀತಿಯ ಒತ್ತಡಗಳು ಎದುರಾಗುತ್ತವೆ.ಅವುಗಳಲ್ಲಿ ಪ್ರಮುಖವಾದವು,ಮನೆ ಮತ್ತು ಕುಟುಂಬದ ನೆನಪು,ಒಂಟಿತನ,ಸಹಪಾಠಿಗಳ ಕಿರುಕುಳ (Bullying),ಅಧ್ಯಯನದ ಒತ್ತಡ,ಶಿಕ್ಷೆ ಅಥವಾ ಅವಮಾನ ಭಯದಂತ ಸಮಸ್ಯೆ ಹೇಳಿಕೊಳ್ಳಲಾಗದೇ ಅದುಮಿಟ್ಟು ಇಟ್ಟು ಈ ರೀತಿ ಹೊರಹಾಕಬಹುದಾದ ಗಂಬೀರ ವರ್ತನೆಗಳು .

ಈ ಸಮಸ್ಯೆಗಳು ಸರಿಯಾದ ಸಮಯದಲ್ಲಿ ಗಮನಕ್ಕೆ ಬರದಿದ್ದರೆ, ಕೆಲ ಸಂದರ್ಭಗಳಲ್ಲಿ ಅವು ಅಪಾಯಕಾರಿಯಾಗಿ ಪರಿಣಮಿಸ್ತವೆ.ಸಮಾಜಕ್ಕೆ, ಪೋಷಕರಿಗೆ, ವಿದ್ಯಾಸಂಸ್ಥೆ ಗಳು ಒಟ್ಟಾರೆಯಾಗಿ ಗಮನಿಸಬೇಕಾದ ವಿಷಯಗಳು ಮೊದಲನೆಯದಾಗಿ, ಮಕ್ಕಳ ಮಾನಸಿಕ ಆರೋಗ್ಯವನ್ನು ಗಂಭೀರವಾಗಿ ಪರಿಗಣಿಸಬೇಕು. ಪ್ರತಿ ಶಾಲೆಯಲ್ಲೂ ಕೌನ್ಸಿಲಿಂಗ್ ವ್ಯವಸ್ಥೆ ಇರಬೇಕು.

ಎರಡನೆಯದಾಗಿ, ವಸತಿ ಶಾಲೆಗಳ ಭದ್ರತಾ ವ್ಯವಸ್ಥೆ ಕಡ್ಡಾಯವಾಗಬೇಕು. ಯಾವುದೇ ಹಾಸ್ಟೆಲ್ ಸರ್ಕಾರದ ಅನುಮತಿ ಇಲ್ಲದೆ ನಡೆಯಲು ಅವಕಾಶ ನೀಡಬಾರದು.

ಮೂರನೆಯದಾಗಿ, ವಿದ್ಯಾರ್ಥಿಗಳ ನಡುವಿನ ಬುಲಿಯಿಂಗ್ ಅಥವಾ ಕಿರುಕುಳವನ್ನು ಕಟ್ಟುನಿಟ್ಟಾಗಿ ತಡೆಯಬೇಕು.

ನಾಲ್ಕನೆಯದಾಗಿ, ಪೋಷಕರು ಮಕ್ಕಳನ್ನು ಹಾಸ್ಟೆಲ್‌ಗೆ ಸೇರಿಸುವ ಮೊದಲು ಅದರ ಸುರಕ್ಷತೆ ಮತ್ತು ವ್ಯವಸ್ಥೆಯನ್ನು ಪರಿಶೀಲಿಸುವುದು ಅತ್ಯಂತ ಅಗತ್ಯ.

ಬಳ್ಳಾರಿಯ ಈ ದುರಂತ ಕೇವಲ ಒಂದು ಕ್ರಿಮಿನಲ್ ಪ್ರಕರಣವಲ್ಲ; ಇದು ಸಮಾಜಕ್ಕೆ ಎಚ್ಚರಿಕೆಯ ಘಂಟೆಯಾಗಿದೆ. ಒಂದು ಮಗುವಿನ ಜೀವ ಕಳೆದುಹೋಯಿತು. ಇನ್ನೂ ಹಲವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಹಲವಾರು ಕುಟುಂಬಗಳು ದುಃಖದಲ್ಲಿ ಮುಳುಗಿವೆ.

ಶಿಕ್ಷಣ ಸಂಸ್ಥೆಗಳು ಮಕ್ಕಳಿಗೆ ಭದ್ರತೆ, ಮಾರ್ಗದರ್ಶನ ಮತ್ತು ಪ್ರೀತಿ ನೀಡಬೇಕಾದ ಸ್ಥಳಗಳು. ಆದರೆ ಆ ಸ್ಥಳದಲ್ಲೇ ಹಿಂಸಾಚಾರ ನಡೆದರೆ, ಅದು ಸಮಾಜದ ಒಟ್ಟಾರೆ ವ್ಯವಸ್ಥೆಯ ವೈಫಲ್ಯವನ್ನು ತೋರಿಸುತ್ತದೆ.ಈ ಘಟನೆ ನಮಗೆ ಮಕ್ಕಳ ಸುರಕ್ಷತೆ ಮತ್ತು ಮಾನಸಿಕ ಆರೋಗ್ಯವನ್ನು ನಾವು ನಿರ್ಲಕ್ಷಿಸಿದರೆ, ಅದರ ಪರಿಣಾಮವನ್ನು ಸಂಪೂರ್ಣ ಸಮಾಜವೇ ಅನುಭವಿಸಬೇಕಾಗುತ್ತದೆ ಎಂಬ ಸ್ಪಷ್ಟ ಸಂದೇಶ ನೀಡುತ್ತದೆ

ಮಕ್ಕಳ ಭವಿಷ್ಯ ನಿಜವಾಗಿಯೂ ಸುರಕ್ಷಿತವಾಗಿರಬೇಕಾದರೆ ಇಂತಹ ದುರಂತಗಳು ಮತ್ತೆ ನಡೆಯದಂತೆ ಸರ್ಕಾರ, ಶಾಲಾ ಆಡಳಿತ, ಶಿಕ್ಷಕರು, ಪೋಷಕರು ಮತ್ತು ಸಮಾಜ ಒಟ್ಟಾಗಿ ಕೆಲಸ ಮಾಡಬೇಕಾಗಿದೆ..

COMMENTS

Login with Gmail to comment

ಇನ್ನಷ್ಟು ಸುದ್ದಿ

ರಾಜ್ಯಮಟ್ಟದಲ್ಲಿ ಸದ್ದು ಮಾಡಿದ ತೆರಿಗೆ ವಂಚನೆ ಪ್ರಕರಣದ ನಂತರವೂ ಅಧಿಕಾರಿಗಳು ಪಾಠ ಕಲಿತಿಲ್ಲವೇ….!?
ಅಮೆರಿಕ–ಇಸ್ರೇಲ್ ದಾಳಿ ಬಳಿಕ ಇರಾನ್‌ನಲ್ಲಿ ಉದ್ವಿಗ್ನತೆ ತಾರಕಕ್ಕೆ
ರಾಜ್ಯ ಪೊಲೀಸ್ ಇಲಾಖೆಯಲ್ಲಿ “ಕಲೋನಿಯಲ್ ಆರ್ಡರ್ಲಿ” ‘ಆಡಲ್’ (Adal) ಪದ್ದತಿ ರದ್ದು
AI ಡೀಪ್‌ಫೇಕ್ ಕೇವಲ ಸಿನಿಮಾ ನಟಿಯರಿಗೆ ಸೀಮಿತವಾಗಿಲ್ಲ .
ಕರಾವಳಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್: ಬಿಸಿಲಿಗೆ ಎಚ್ಚರ!
ಸಚಿವ ಜಮೀರ್ ಕಥೆ ಗೋವಿಂದ!!!?
Top 5, ಹೆಚ್ಚು ಅನುದಾನ ಪಡೆದ ಇಲಾಖೆಗಳು ಯಾವವು ಗೊತ್ತಾ?
ಸಂಕಷ್ಟದಲ್ಲಿರುವ ರಾಜ್ಯದ ಜನತೆಗೆ ಬರೆ ಹಾಕಿದ ರಾಜ್ಯ ಸರ್ಕಾರ!
🚨 ಸಾರ್ವಜನಿಕರಿಗೆ ತುರ್ತು ಎಚ್ಚರಿಕೆ – ಕಟಪಾಡಿ ರಾಷ್ಟ್ರೀಯ ಹೆದ್ದಾರಿ ಅಪಘಾತ
“ಮಂಗಳೂರಲ್ಲಿ ಡ್ರೈ ಡೇ ಘೋಷಣೆ -ಎರಡು ದಿನ ಬಾರ್‌ಗಳಿಗೆ ಲಾಕ್ ..!” ದಕ್ಷಿಣ ಕನ್ನಡದಲ್ಲಿ ಕಟ್ಟುನಿಟ್ಟಿನ ಆದೇಶ
ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು: ದಯಾ ಮರಣಕ್ಕೆ ಅನುಮತಿ
ಗೃಹ ಸಚಿವರಾದ ಜಿ ಪರಮೇಶ್ವರ್ ರವರ ಒಡೆತನದ ಸಂಸ್ಥೆಯಲ್ಲಿ ನಡೆದಿದೆ ಎಂಬ ವಿಡಿಯೋ ವೈರಲ್….!
ಮಸೀದಿ ಹುಂಡಿಗೂ ಲಗ್ಗೆ ಇಟ್ಟ ಕಳ್ಳರು….!
ಗೃಹ ಬಳಕೆಯ LPG ಗ್ರಾಹಕರಿಗೆ Aadhaar e-KYC ಕಡ್ಡಾಯ – PMUY ಫಲಾನುಭವಿಗಳಿಗೆ ವಾರ್ಷಿಕ ಬಯೋಮೆಟ್ರಿಕ್ ಪರಿಶೀಲನೆ
ಬಲಪಂಥೀಯರ ಜೊತೆ ಮುಖ್ಯಮಂತ್ರಿಗಳ ಸ್ನೇಹ : ಅಭದ್ರತೆ ಯಾರಿಗೆಲ್ಲ?
“ವಾಹನ ಮಾರಾಟ-RC ಬದಲಾವಣೆ  ಅಗತ್ಯ.. ಇಲ್ಲವಾದರೆ ಕಾನೂನು ಸಮಸ್ಯೆಗಳು ತಪ್ಪಿದ್ದಲ್ಲ..!” ಹೈಕೋರ್ಟ್
ಬ್ರೇಕಿಂಗ್ ನ್ಯೂಸ್
Maths hate ಮಾಡ್ತಿರಾ ? ಹಾಗಾದ್ರೆ ಈ ವರದಿ ನೋಡಿ ಸಮಸ್ಯೆ ನಿಮ್ಮಲ್ಲಿಲ್ಲ … research ಹೇಳುತ್ತೆ ಸಂಖ್ಯೆಗಳಲ್ಲಿ ಇದೆ!”
ಮಂಗಳೂರು ನೀರಿನ ಸಂಕಷ್ಟ:ಮಳೆಯಿಲ್ಲದೆ ಮುಂದಿನ 1–2 ತಿಂಗಳು ಗಂಭೀರ ನೀರಿನ ಕೊರತೆ ಸಂಭವ ಸಾಧ್ಯತೆ.
ಮಾಜಿ ಮುಖ್ಯಮಂತ್ರಿಯ ಮೇಲೆ ಗುಂಡಿನ ದಾಳಿ,- Z+ ಭದ್ರತೆಯ ನಡುವೆ ದಾಳಿಕೋರ ಹೇಗೆ  ಬಂದ?
ಅಗತ್ಯ ಮಾಹಿತಿ ಇಲ್ಲಿದೆ ಓದಿ..!“ಎಲ್‌ಪಿಜಿ ಬುಕಿಂಗ್‌ಗೆ ಹೊಸ ನಂಬರ್‌ಗಳು: ಆತಂಕ ಬೇಡ, ಸರಬರಾಜು ಶೀಘ್ರ ಸಾಮಾನ್ಯಕ್ಕೆ!”
ಪಾಕಿಸ್ತಾನದಲ್ಲಿ ಹಿಂದೂ ಯುವತಿಯ ಸಾಧನೆ
ಕಳುವಾದ ವಾಹನ ಸಮೇತ ಕಳ್ಳರ ಬಂಧನ…!
ನಿಶ್ಚಿತಾರ್ಥ ಮಾಡಿಕೊಂಡು, ಫೈನಾನ್ಸಿಯಲ್ ವಂಚನೆ ದೂರು ದಾಖಲು
ಕಾಪು ಮಹಿಳೆ ಹತ್ಯೆ – ಇಬ್ಬರು ಪೊಲೀಸ್ ವಶಕ್ಕೆ
ಕರ್ನಾಟಕದಲ್ಲಿ ಮಳೆ ಅಲರ್ಟ್! 13 ಜಿಲ್ಲೆಗಳಿಗೆ ಯೆಲ್ಲೋ ವಾರ್ನಿಂಗ್ – ಜನರು ಎಚ್ಚರಿಕೆ ಅಗತ್ಯ
ಗ್ಯಾಸ್ ಪೈಪ್‍ಲೈನ್ ಸೋರಿಕೆ: ಅಣಕು ಪ್ರದರ್ಶನ
ತೈಲ, ಯುದ್ಧ ಮತ್ತು ಆರ್ಥಿಕತೆ: ಭಾರತದ ಮುಂದೆ ಹೊಸ ಸವಾಲು
ಕಂದಾಯ ಸಚಿವರ ದಕ್ಷಿಣ ಕನ್ನಡ ಜಿಲ್ಲಾ ಪ್ರವಾಸ
ಮಕ್ಕಳ ಸುರಕ್ಷತೆಯೇ ಮುಖ್ಯ – ಸಂದೇಶ ಕೊಟ್ಟ ಹೈಕೋರ್ಟ್