📍 Karavali Maruta
LIVE | CONTACT
ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

ಅಪ್ರಾಪ್ತನ ಕ್ರೌರ್ಯಕ್ಕೆ ಬಳ್ಳಾರಿ ವಸತಿ ಶಾಲೆಯ ದೌರ್ಜನ್ಯವೇ ಸಾಕ್ಷಿ… ಈ ಕ್ರೌರ್ಯದ ಹಿಂದೆ ಮನೋರೋಗ ಅಡಗಿದೆಯಾ? 

ಬಳ್ಳಾರಿ ವಸತಿ ಶಾಲೆ ದುರಂತ: ಮಕ್ಕಳ ಮನೋವೈಜ್ಞಾನಿಕ ಸ್ಥಿತಿ, ಒಂದು ದೊಡ್ಡ ಪ್ರಶ್ನೆ

ಬಳ್ಳಾರಿ: ಆಸ್ಪತ್ರೆ ಆವರಣದಲ್ಲಿ ಮೃತ ವಿದ್ಯಾರ್ಥಿಯ ತಾಯಿ ಕಣ್ಣೀರಿಟ್ಟು ಅಳುತ್ತಿರುವ ದೃಶ್ಯ ಎಲ್ಲರ ಮನಸ್ಸನ್ನು ಕಲುಕಿದೆ. ಮಗನನ್ನು ಓದಲು ದೂರದ ಊರಿಗೆ ಕಳುಹಿಸಿದ್ದ ಪೋಷಕರಿಗೆ ಇದು ಭಾರೀ ಆಘಾತವಾಗಿದೆ.

ಮಾರ್ಚ್ 7ರ ರಾತ್ರಿ ಸಾಮಾನ್ಯ ದಿನದಂತೆ ಆರಂಭವಾಗಿತ್ತು. ಬಳ್ಳಾರಿ ಹೊರವಲಯದ ತಾಳೂರು ರಸ್ತೆಯಲ್ಲಿರುವ ಖಾಸಗಿ ವಸತಿ ಶಾಲೆಯ ಹಾಸ್ಟೆಲ್‌ನಲ್ಲಿ ವಾಸಿಸುತ್ತಿದ್ದ ವಿದ್ಯಾರ್ಥಿಗಳು ರಾತ್ರಿ ಊಟ ಮುಗಿಸಿ ಸುಮಾರು 9:30ರ ವೇಳೆಗೆ ಮಲಗಿದ್ದರು. ಹಾಸ್ಟೆಲ್‌ನಲ್ಲಿ ಒಟ್ಟು 9 ವಿದ್ಯಾರ್ಥಿಗಳು ವಾಸವಾಗಿದ್ದರು – 7 ಗಂಡು ಮಕ್ಕಳು ಮತ್ತು 2 ಹೆಣ್ಣು ಮಕ್ಕಳು.

ರಾತ್ರಿ ಸುಮಾರು 11 ಗಂಟೆ ವೇಳೆಗೆ, 9ನೇ ತರಗತಿಯ 15 ವರ್ಷದ ಬಾಲಕನೊಬ್ಬ ತನ್ನ ಕೊಠಡಿಯಿಂದ ಹೊರಬಂದು, ಮಲಗಿದ್ದ ಸಹಪಾಠಿಗಳ ಮೇಲೆ ಕಬ್ಬಿಣದ ರಾಡ್ ಹಾಗೂ ಇತರೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ್ದಾನೆ. ವಿದ್ಯಾರ್ಥಿಗಳು ಮಲಗಿದ್ದ ಸ್ಥಿತಿಯಲ್ಲೇ ಹೊಟ್ಟೆ, ತಲೆ ಹಾಗೂ ಎದೆ ಭಾಗಗಳಿಗೆ ಗಂಭೀರ ಗಾಯಗಳನ್ನು ಮಾಡಿದ್ದಾರೆ.

ವಿದ್ಯಾರ್ಥಿಗಳ ಕೂಗಾಟ ಕೇಳಿ ಹಾಸ್ಟೆಲ್ ವಾರ್ಡನ್ ಬ್ಲೆಸ್ಲಿ ಕುರಿಕೋಸ್ ಸ್ಥಳಕ್ಕೆ ಬಂದಾಗ, ಅವರ ಮೇಲೂ ಬಾಲಕ ದಾಳಿ ನಡೆಸಿದ್ದಾನೆ. ನಂತರ ಆತ ಸ್ಥಳದಿಂದ ಪರಾರಿಯಾಗಿದ್ದಾನೆ.

ಈ ದಾಳಿಯಲ್ಲಿ ಡಿ. ಹೇಮಂತ್ (15) ಎಂಬ ವಿದ್ಯಾರ್ಥಿ ತೀವ್ರ ಗಾಯಗಳಿಂದ ಸಾವನ್ನಪ್ಪಿದ್ದಾನೆ. ಹೇಮಂತ್ ಆಂಧ್ರಪ್ರದೇಶದ ಕರ್ನೂಲ್ ಜಿಲ್ಲೆಯ ಆಲೂರು ತಾಲೂಕಿನ ಸಮಗಿರಿ ಗ್ರಾಮದ ನಿವಾಸಿ ಎಂದು ತಿಳಿದುಬಂದಿದೆ.

ಇನ್ನೂ ಒಬ್ಬ ವಿದ್ಯಾರ್ಥಿನಿ ಮತ್ತು ಐವರು ವಿದ್ಯಾರ್ಥಿಗಳು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಬಳ್ಳಾರಿಯ ವಿಮ್ಸ್ (VIMS) ಆಸ್ಪತ್ರೆಗೆ ದಾಖಲಿಸಲಾಗಿದೆ. ಹಾಸ್ಟೆಲ್ ವಾರ್ಡನ್ ಕೂಡ ಗಾಯಗೊಂಡಿದ್ದು ಚಿಕಿತ್ಸೆ ಪಡೆಯುತ್ತಿದ್ದಾರೆ.

ಶಿಕ್ಷಣ ಸಂಸ್ಥೆಗಳು ಮಕ್ಕಳ ಭವಿಷ್ಯ ರೂಪಿಸುವ ಪವಿತ್ರ ಸ್ಥಳಗಳೆಂದು ನಾವು ನಂಬುತ್ತೇವೆ. ಆದರೆ ಬಳ್ಳಾರಿ ಹೊರವಲಯದ ಖಾಸಗಿ ವಸತಿ ಶಾಲೆಯಲ್ಲಿ ನಡೆದ ಘಟನೆ ಆ ನಂಬಿಕೆಯನ್ನು ತತ್ತರಗೊಳಿಸಿದೆ. 9ನೇ ತರಗತಿಯ 15 ವರ್ಷದ ಬಾಲಕನೊಬ್ಬ ತನ್ನ ಸಹಪಾಠಿಗಳ ಮೇಲೆ ನಡೆಸಿದ ಉನ್ಮಾದಿತ ದಾಳಿಯಲ್ಲಿ ಒಬ್ಬ ವಿದ್ಯಾರ್ಥಿ ಸಾವನ್ನಪ್ಪಿದ್ದು, ಇನ್ನೂ ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಈ ಘಟನೆ ಕೇವಲ ಒಂದು ಅಪರಾಧ ಪ್ರಕರಣವಲ್ಲ; ಇದು ಮಕ್ಕಳ ಮನೋಸ್ಥಿತಿ, ಹಾಸ್ಟೆಲ್ ಸುರಕ್ಷತೆ ಮತ್ತು ಶಿಕ್ಷಣ ವ್ಯವಸ್ಥೆಯ ಮೇಲಿನ ದೊಡ್ಡ ಪ್ರಶ್ನೆಯನ್ನು ಸಮಾಜದ ಮುಂದೆ ತಂದಿದೆ.

ಆರೋಪಿ ಪರಾರಿ: ಪೊಲೀಸ್ ತಂಡಗಳ ಶೋಧ ಘಟನೆ ಬಳಿಕ ದಾಳಿ ನಡೆಸಿದ ಬಾಲಕ ಪರಾರಿಯಾಗಿದ್ದು, ಪೊಲೀಸರು ಅವನ ಪತ್ತೆಗಾಗಿ ಎರಡು ಪಿಐ ಹಾಗೂ ಐದು ಪಿಎಸ್‌ಐಗಳ ನೇತೃತ್ವದಲ್ಲಿ ಏಳು ವಿಶೇಷ ತಂಡಗಳನ್ನು ರಚಿಸಿದ್ದಾರೆ. ಬಾಲಕ ಓಡಾಡುತ್ತಿದ್ದ ಮಾರ್ಗಗಳು ಮತ್ತು ಪರಿಚಯದ ಸ್ಥಳಗಳನ್ನು ಗಮನದಲ್ಲಿಟ್ಟುಕೊಂಡು ಶೋಧ ಕಾರ್ಯ ಮುಂದುವರಿಸಲಾಗಿದೆ.

ಪೊಲೀಸರ ಪ್ರಕಾರ, ಬಾಲಕ ಪತ್ತೆಯಾದ ನಂತರವೇ ದಾಳಿಯ ನಿಖರ ಕಾರಣ ಸ್ಪಷ್ಟವಾಗಲಿದೆ. ಪ್ರಾಥಮಿಕ ಮಾಹಿತಿಯ ಪ್ರಕಾರ ಸಣ್ಣ ವಿಚಾರದ ವಿವಾದ ಅಥವಾ ವೈಯಕ್ತಿಕ ಅಸಮಾಧಾನ ಈ ದಾಳಿಗೆ ಕಾರಣವಾಗಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ.

ಮತ್ತೊಂದು ದೊಡ್ಡ ಅಚ್ಚರಿ: ಹಾಸ್ಟೆಲ್‌ಗೆ ಅನುಮತಿ ಇರಲಿಲ್ಲ

ಘಟನೆ ಬಳಿಕ ಹೊರಬಂದ ಮತ್ತೊಂದು ವಿಚಾರ ಇನ್ನಷ್ಟು ಆತಂಕಕಾರಿ. ಜಿಲ್ಲಾ ಮಕ್ಕಳ ರಕ್ಷಣಾ ಘಟಕವು ಸಲ್ಲಿಸಿದ ವರದಿ ಪ್ರಕಾರ, ಈ ಖಾಸಗಿ ಹಾಸ್ಟೆಲ್ ರಾಜ್ಯ ಶಿಕ್ಷಣ ಇಲಾಖೆಯಿಂದ ಅಧಿಕೃತ ಅನುಮತಿ ಪಡೆದಿರಲಿಲ್ಲ.ಮಕ್ಕಳ ಮೇಲ್ವಿಚಾರಣೆಗೆ ಯಾವುದೇ ಪುರುಷ ಸಿಬ್ಬಂದಿ ನೇಮಕವಾಗಿರಲಿಲ್ಲ,ಹಾಸ್ಟೆಲ್‌ನ CCTV ಕ್ಯಾಮೆರಾಗಳು ಕಾರ್ಯನಿರ್ವಹಿಸುತ್ತಿರಲಿಲ್ಲ

ಘಟನೆ ಬಳಿಕ ಶಾಲೆಯ ಆಡಳಿತ ಮಂಡಳಿ ಕಾಣೆಯಾಗಿದ್ದಾರೆ

ಶಾಲೆಯಲ್ಲಿ ಒಟ್ಟು 158 ವಿದ್ಯಾರ್ಥಿಗಳು ಓದುತ್ತಿದ್ದರೂ, ಹಾಸ್ಟೆಲ್‌ನಲ್ಲಿ ಕೇವಲ 9 ವಿದ್ಯಾರ್ಥಿಗಳು ಮಾತ್ರ ವಾಸವಾಗಿದ್ದರು.

ಈ ಘಟನೆ ಮತ್ತೊಂದು ಪ್ರಮುಖ ವಿಷಯವನ್ನು ಸಮಾಜದ ಮುಂದೆ ತರುತ್ತದೆ – ಮಕ್ಕಳ ಮಾನಸಿಕ ಆರೋಗ್ಯ. ವಸತಿ ಶಾಲೆಗಳಲ್ಲಿ ಓದುತ್ತಿರುವ ಮಕ್ಕಳಿಗೆ ಕೆಲವೊಮ್ಮೆ ಹಲವು ರೀತಿಯ ಒತ್ತಡಗಳು ಎದುರಾಗುತ್ತವೆ.ಅವುಗಳಲ್ಲಿ ಪ್ರಮುಖವಾದವು,ಮನೆ ಮತ್ತು ಕುಟುಂಬದ ನೆನಪು,ಒಂಟಿತನ,ಸಹಪಾಠಿಗಳ ಕಿರುಕುಳ (Bullying),ಅಧ್ಯಯನದ ಒತ್ತಡ,ಶಿಕ್ಷೆ ಅಥವಾ ಅವಮಾನ ಭಯದಂತ ಸಮಸ್ಯೆ ಹೇಳಿಕೊಳ್ಳಲಾಗದೇ ಅದುಮಿಟ್ಟು ಇಟ್ಟು ಈ ರೀತಿ ಹೊರಹಾಕಬಹುದಾದ ಗಂಬೀರ ವರ್ತನೆಗಳು .

ಈ ಸಮಸ್ಯೆಗಳು ಸರಿಯಾದ ಸಮಯದಲ್ಲಿ ಗಮನಕ್ಕೆ ಬರದಿದ್ದರೆ, ಕೆಲ ಸಂದರ್ಭಗಳಲ್ಲಿ ಅವು ಅಪಾಯಕಾರಿಯಾಗಿ ಪರಿಣಮಿಸ್ತವೆ.ಸಮಾಜಕ್ಕೆ, ಪೋಷಕರಿಗೆ, ವಿದ್ಯಾಸಂಸ್ಥೆ ಗಳು ಒಟ್ಟಾರೆಯಾಗಿ ಗಮನಿಸಬೇಕಾದ ವಿಷಯಗಳು ಮೊದಲನೆಯದಾಗಿ, ಮಕ್ಕಳ ಮಾನಸಿಕ ಆರೋಗ್ಯವನ್ನು ಗಂಭೀರವಾಗಿ ಪರಿಗಣಿಸಬೇಕು. ಪ್ರತಿ ಶಾಲೆಯಲ್ಲೂ ಕೌನ್ಸಿಲಿಂಗ್ ವ್ಯವಸ್ಥೆ ಇರಬೇಕು.

ಎರಡನೆಯದಾಗಿ, ವಸತಿ ಶಾಲೆಗಳ ಭದ್ರತಾ ವ್ಯವಸ್ಥೆ ಕಡ್ಡಾಯವಾಗಬೇಕು. ಯಾವುದೇ ಹಾಸ್ಟೆಲ್ ಸರ್ಕಾರದ ಅನುಮತಿ ಇಲ್ಲದೆ ನಡೆಯಲು ಅವಕಾಶ ನೀಡಬಾರದು.

ಮೂರನೆಯದಾಗಿ, ವಿದ್ಯಾರ್ಥಿಗಳ ನಡುವಿನ ಬುಲಿಯಿಂಗ್ ಅಥವಾ ಕಿರುಕುಳವನ್ನು ಕಟ್ಟುನಿಟ್ಟಾಗಿ ತಡೆಯಬೇಕು.

ನಾಲ್ಕನೆಯದಾಗಿ, ಪೋಷಕರು ಮಕ್ಕಳನ್ನು ಹಾಸ್ಟೆಲ್‌ಗೆ ಸೇರಿಸುವ ಮೊದಲು ಅದರ ಸುರಕ್ಷತೆ ಮತ್ತು ವ್ಯವಸ್ಥೆಯನ್ನು ಪರಿಶೀಲಿಸುವುದು ಅತ್ಯಂತ ಅಗತ್ಯ.

ಬಳ್ಳಾರಿಯ ಈ ದುರಂತ ಕೇವಲ ಒಂದು ಕ್ರಿಮಿನಲ್ ಪ್ರಕರಣವಲ್ಲ; ಇದು ಸಮಾಜಕ್ಕೆ ಎಚ್ಚರಿಕೆಯ ಘಂಟೆಯಾಗಿದೆ. ಒಂದು ಮಗುವಿನ ಜೀವ ಕಳೆದುಹೋಯಿತು. ಇನ್ನೂ ಹಲವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಹಲವಾರು ಕುಟುಂಬಗಳು ದುಃಖದಲ್ಲಿ ಮುಳುಗಿವೆ.

ಶಿಕ್ಷಣ ಸಂಸ್ಥೆಗಳು ಮಕ್ಕಳಿಗೆ ಭದ್ರತೆ, ಮಾರ್ಗದರ್ಶನ ಮತ್ತು ಪ್ರೀತಿ ನೀಡಬೇಕಾದ ಸ್ಥಳಗಳು. ಆದರೆ ಆ ಸ್ಥಳದಲ್ಲೇ ಹಿಂಸಾಚಾರ ನಡೆದರೆ, ಅದು ಸಮಾಜದ ಒಟ್ಟಾರೆ ವ್ಯವಸ್ಥೆಯ ವೈಫಲ್ಯವನ್ನು ತೋರಿಸುತ್ತದೆ.ಈ ಘಟನೆ ನಮಗೆ ಮಕ್ಕಳ ಸುರಕ್ಷತೆ ಮತ್ತು ಮಾನಸಿಕ ಆರೋಗ್ಯವನ್ನು ನಾವು ನಿರ್ಲಕ್ಷಿಸಿದರೆ, ಅದರ ಪರಿಣಾಮವನ್ನು ಸಂಪೂರ್ಣ ಸಮಾಜವೇ ಅನುಭವಿಸಬೇಕಾಗುತ್ತದೆ ಎಂಬ ಸ್ಪಷ್ಟ ಸಂದೇಶ ನೀಡುತ್ತದೆ

ಮಕ್ಕಳ ಭವಿಷ್ಯ ನಿಜವಾಗಿಯೂ ಸುರಕ್ಷಿತವಾಗಿರಬೇಕಾದರೆ ಇಂತಹ ದುರಂತಗಳು ಮತ್ತೆ ನಡೆಯದಂತೆ ಸರ್ಕಾರ, ಶಾಲಾ ಆಡಳಿತ, ಶಿಕ್ಷಕರು, ಪೋಷಕರು ಮತ್ತು ಸಮಾಜ ಒಟ್ಟಾಗಿ ಕೆಲಸ ಮಾಡಬೇಕಾಗಿದೆ..

COMMENTS

Login with Gmail to comment

ಇನ್ನಷ್ಟು ಸುದ್ದಿ

ಮಂಗಳೂರಿನಲ್ಲಿ ವಕೀಲರೊಬ್ಬರ ನಕಲಿ ದುಷ್ಕೃತ್ಯ ಬಯಲಿಗೆ?
ಕಾಪು ಮಹಿಳೆ ಹತ್ಯೆ – ಇಬ್ಬರು ಪೊಲೀಸ್ ವಶಕ್ಕೆ
ರಾಜಕೀಯ ಬದಲಾಗುತ್ತಿದೆ -ಪಂಚರಾಜ್ಯ election ರಿಸಲ್ಟ್ “ಗೆಲುವು-ಸೋಲಿನ ಶಕ್ತಿ ಪಕ್ಷದಲ್ಲಲ್ಲ… ಜನರ ಕೈಯಲ್ಲಿ”
ರಾಜ್ಯ ಪೊಲೀಸ್ ಇಲಾಖೆಯಲ್ಲಿ “ಕಲೋನಿಯಲ್ ಆರ್ಡರ್ಲಿ” ‘ಆಡಲ್’ (Adal) ಪದ್ದತಿ ರದ್ದು
ಮೂಡಬಿದ್ರೆ ಪೊಲೀಸ್ ಅಧಿಕಾರಿಯ ಮಾನ ಹರಾಜಿಗೆ ನಿಂತವರು ಯಾರು?
ತಿಮರೋಡಿ ಸೇರಿ ನಾಲ್ವರಿಗೆ ಕೇಸ್…
ಗುಜರಾತ್ ಪೊಲೀಸರಲ್ಲಿ ಆಗದ ಕೆಲಸ, ಒಬ್ಬ ಮಂತ್ರವಾದಿಯಿಂದ ಆಯ್ತು
ಮುಳುಗುತ್ತಿರುವ ಕಾಂಗ್ರೆಸ್ಸಿಗೆ ಇನ್ನೂ ಬುದ್ಧಿ ಬಂದಂತಿಲ್ಲ… ಡಿಜೆಪಿ ರಾಮಚಂದ್ರರಾವ್  ಅಮಾನತ್ ಆದೇಶ ಹಿಂಪಡೆದ  ಸರ್ಕಾರ
ತೈಲ, ಯುದ್ಧ ಮತ್ತು ಆರ್ಥಿಕತೆ: ಭಾರತದ ಮುಂದೆ ಹೊಸ ಸವಾಲು
ಡಿಕೆಎಮುಲ್‌ನಿಂದ ₹1,270 ಕೋಟಿ ದಾಖಲೆ ಬೆಳವಣಿಗೆ ಹೊಸ ಮೈಲುಗಲ್ಲು..!
MRPL ವಿರುದ್ಧ ಜನಹೋರಾಟದ ಎಚ್ಚರಿಕೆ – ಮೇ 1ರಿಂದ ಅನಿರ್ದಿಷ್ಟ ಧರಣಿಗೆ ಸಮಿತಿ ಸಜ್ಜು..
“ತಲೈವಾ”ಗೂ ಭಯವಾ? ಹೂವಿನ ಚೆಂಡು ಕಂಡು ವಿಜಯ್ ರನ್! ಒಂದು ಕ್ಷಣದ ಥ್ರಿಲ್ಲರ್!
ಇಂಧನ ಬೆಲೆ ಏರಿಕೆ ಹೊಡೆತ Air India ಹೊಸ ತೀರ್ಮಾನ ಶಾಕಿಂಗ್ …!
ಆಂಬ್ಯುಲೆನ್ಸ್‌ನಲ್ಲೇ ನಡೆದ ಭೀಕರ ಘಟನೆ… ನಂಬಲು ಕಷ್ಟ, ಆದರೆ ಸತ್ಯ!
ವಿದ್ಯಾರ್ಥಿಯೊಬ್ಬ 12ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ..
ಇನ್ನು ಹೈವೇಯಲ್ಲಿ ಲಿಮಿಟ್ ಗಿಂತ ವೇಗವಾಗಿ ಹೋಗುವವರು ಹುಷಾರಾಗಿರಿ…
ಆಂಧ್ರದ ಪುಟ್ಟಪರ್ತಿಯಲ್ಲಿ ಅಡಗಿದೆ ಆ ದೊಡ್ಡ ರಹಸ್ಯ!ಆಕಾಶದಲ್ಲಿ ಕಣ್ಣಿಗೆ ಕಾಣದಂತೆ ಬೇಟೆಯಾಡುವ ಸಮಯ ಹತ್ತಿರದಲ್ಲಿದೆ!
ಹಾಡುಹಗಲೇ ಉಡುಪಿಯ ಕರಾವಳಿ ಬೈಪಾಸ್ ನಲ್ಲಿ ಗುಂಡಾಗಿರಿ
ಪುಲ್ವಾಮಾ ದಾಳಿಯ ಮಾಸ್ಟರ್ಮೈಂಡ್ ಹಮ್ಜಾ ಬುರ್ಹಾನ್ ಹತ್ಯೆ: ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ರಹಸ್ಯ ಗುಂಡಿನ ದಾಳಿ
ಕರ್ನಾಟಕದಲ್ಲಿ 2 ಲಕ್ಷಕ್ಕೂ ಹೆಚ್ಚು ನಾಯಿ ಕಚ್ಚಿದ ಪ್ರಕರಣಗಳು …!ನಗರಗಳಲ್ಲಿ ‘ಸ್ಟ್ರೇ ಡಾಗ್ ಟೆರರ್’ — ಜನರು ಭಯದಲ್ಲಿ ಬದುಕುತ್ತಿದ್ದಾರೆ!
ಹಲವು ಗಂಭೀರ ಅಪರಾಧ ಪ್ರಕರಣಗಳಲ್ಲಿ ಆರೋಪಿಯಾಗಿ ಕಳೆದ 8 ವರ್ಷಗಳಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯನ್ನು ಕೊನೆಗೂ ಪತ್ತೆ ಹಚ್ಚಲಾಗಿದೆ.
ಜಿಮ್,“ಫಿಟ್ನೆಸ್ ಸೆಂಟರ್‌ಗಳಲ್ಲಿ ಹೆಚ್ಚುತ್ತಿರುವ ಅಪಾಯಕಾರಿ ಸಂಬಂಧಗಳು: ಜಿಮ್ ಟ್ರೈನರ್ ಆತ್ಮಹತ್ಯೆ
ಹಾರ್ಮುಜ್‌ನಲ್ಲಿ ಹಡಗು ಸಂಚಾರ ಹೆಚ್ಚಳ—ಇಂಧನ ಪೂರೈಕೆಗೆ ದೊಡ್ಡ ಮುನ್ನಡೆ 🚢
“Arvind Kejriwal: ‘ಸತ್ಯಾಗ್ರಹ’ದಿಂದ ನ್ಯಾಯದ ಬೇಡಿಕೆ.”
ಮಂಗಳೂರು ಸರ್ಕಾರಿ ಕಾಲೇಜಿನಲ್ಲಿ ಎಬಿವಿಪಿ, ಎನ್ ಎಸ್ ಯು ಐ ವಿದ್ಯಾರ್ಥಿಗಳ ಘರ್ಷಣೆ 
ಬ್ಯಾಂಕಿಂಗ್ ಸೇವೆ ಸ್ಮಾರ್ಟ್‌ಫೋನ್ ನೇ ಬೇಕಂತಿಲ್ಲ .ಕೀಪ್ಯಾಡ್ ಫೋನ್ ಸಾಕು ಈಗ “ಸ್ಮಾರ್ಟ್” ಆಗಿದ್ದರೆ ಸಾಕು! 
ಕೊಲೆ ಆರೋಪಿಗಳ ಕಾರು ಮಾಣಿಯಲ್ಲಿ ಪತ್ತೆ ….!
ಕನಕಪುರ ಬಂಡೆ ಬಿಜೆಪಿಗೆ ಎಂಬ ಬೋಗಸ್ ಸುದ್ದಿ
ಮೂಡಿಗೆರೆ ತಾಲ್ಲೂಕಿನಲ್ಲಿ ಭಾರಿ ಗಾಳಿ-ಮಳೆ ಅಬ್ಬರ
ನಾಸಿಕ್‌ನ Tata Consultancy Services ಕಚೇರಿಯಲ್ಲಿ ಗಂಭೀರ ಆರೋಪಗಳ ನಡುವೆ ಉದ್ಯೋಗಿಗಳಿಗೆ ವರ್ಕ್ ಫ್ರಮ್ ಹೋಮ್ — ಸುರಕ್ಷತೆಗೆ ಮೊದಲ ಆದ್ಯತೆ.