📍 Karavali Maruta
  • LOGIN
  • BREAKING
    ‘ಮೇಡ್ ಇನ್ ಮಂಗಳೂರು’ ಹಡಗು ಜರ್ಮನ್ ಸಂಸ್ಥೆಯ ತೆಕ್ಕೆಗೆ; ವಿಶ್ವದ ಗಮನ ಸೆಳೆದ ಚೌಗುಲೆ ಶಿಪ್‌ಯಾರ್ಡ್! ಧಾರವಾಡದಲ್ಲಿ ಭೀಕರ LPG ಸಿಲಿಂಡರ್ ಸ್ಫೋಟ , ಹಲವು ಮೀಟರ್ ದೂರಕ್ಕೆ ಹಾರಿದ ಬೈಕ್‌! ಹಲವರಿಗೆ ಗಾಯ CCTVಯಲ್ಲಿ ಶಾಕಿಂಗ್ ದೃಶ್ಯ ದಯಾಮರಣ ಕೇಳಿದ್ದ ತುಮಕೂರು ರಾಬಿಯಾ ಇನ್ನಿಲ್ಲ …!ಪರಮೇಶ್ವರ್ ಮುಂದೆ ಕಣ್ಣೀರಿಟ್ಟಿದ್ದ ಮಹಿಳೆ ಇಬ್ಬರು ಮಕ್ಕಳೊಂದಿಗೆ ವಿಷಸೇವಿಸಿ ಕೊನೆಯುಸಿರು…‘ಮನೆ’ ಸಿಕ್ಕರೂ ಬದುಕು ಉಳಿಯಲಿಲ್ಲ! ನೇಪಾಳ ದುರಂತ: ಕಂಪ್ಲೀಟ್ ರಿಪೋರ್ಟ್ ಇಲ್ಲಿದೆ…ಕಣ್ಣೆದುರೇ ಕೊಚ್ಚಿಹೋದ ಬದುಕು… ಲೆಕ್ಕಕ್ಕೆ ಸಿಗದ ಸಾವು, ನೋವು!ಪ್ರವಾಹದ ರೌದ್ರದ ನಡುವೆ ಮೃತದೇಹದಿಂದಲೇ ಚಿನ್ನ ಕದಿಯಲು ಯತ್ನ… ಮಾನವೀಯತೆ ಮರೆತ ಕಿರಾತಕರು!ಇಬ್ಬರು ಅರೆಸ್ಟ್! ಮಹಿಳಾ ಕಾನ್ಸ್‌ಟೇಬಲ್ ಮೇಲೆ ಪೊಲೀಸ್ ಠಾಣೆಯಲ್ಲಿ ಮಾರಣಾಂತಿಕ ಹಲ್ಲೆ
    ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

    ಅಪ್ರಾಪ್ತನ ಕ್ರೌರ್ಯಕ್ಕೆ ಬಳ್ಳಾರಿ ವಸತಿ ಶಾಲೆಯ ದೌರ್ಜನ್ಯವೇ ಸಾಕ್ಷಿ… ಈ ಕ್ರೌರ್ಯದ ಹಿಂದೆ ಮನೋರೋಗ ಅಡಗಿದೆಯಾ? 

    ಬಳ್ಳಾರಿ ವಸತಿ ಶಾಲೆ ದುರಂತ: ಮಕ್ಕಳ ಮನೋವೈಜ್ಞಾನಿಕ ಸ್ಥಿತಿ, ಒಂದು ದೊಡ್ಡ ಪ್ರಶ್ನೆ

    ಬಳ್ಳಾರಿ: ಆಸ್ಪತ್ರೆ ಆವರಣದಲ್ಲಿ ಮೃತ ವಿದ್ಯಾರ್ಥಿಯ ತಾಯಿ ಕಣ್ಣೀರಿಟ್ಟು ಅಳುತ್ತಿರುವ ದೃಶ್ಯ ಎಲ್ಲರ ಮನಸ್ಸನ್ನು ಕಲುಕಿದೆ. ಮಗನನ್ನು ಓದಲು ದೂರದ ಊರಿಗೆ ಕಳುಹಿಸಿದ್ದ ಪೋಷಕರಿಗೆ ಇದು ಭಾರೀ ಆಘಾತವಾಗಿದೆ.

    ಮಾರ್ಚ್ 7ರ ರಾತ್ರಿ ಸಾಮಾನ್ಯ ದಿನದಂತೆ ಆರಂಭವಾಗಿತ್ತು. ಬಳ್ಳಾರಿ ಹೊರವಲಯದ ತಾಳೂರು ರಸ್ತೆಯಲ್ಲಿರುವ ಖಾಸಗಿ ವಸತಿ ಶಾಲೆಯ ಹಾಸ್ಟೆಲ್‌ನಲ್ಲಿ ವಾಸಿಸುತ್ತಿದ್ದ ವಿದ್ಯಾರ್ಥಿಗಳು ರಾತ್ರಿ ಊಟ ಮುಗಿಸಿ ಸುಮಾರು 9:30ರ ವೇಳೆಗೆ ಮಲಗಿದ್ದರು. ಹಾಸ್ಟೆಲ್‌ನಲ್ಲಿ ಒಟ್ಟು 9 ವಿದ್ಯಾರ್ಥಿಗಳು ವಾಸವಾಗಿದ್ದರು – 7 ಗಂಡು ಮಕ್ಕಳು ಮತ್ತು 2 ಹೆಣ್ಣು ಮಕ್ಕಳು.

    ರಾತ್ರಿ ಸುಮಾರು 11 ಗಂಟೆ ವೇಳೆಗೆ, 9ನೇ ತರಗತಿಯ 15 ವರ್ಷದ ಬಾಲಕನೊಬ್ಬ ತನ್ನ ಕೊಠಡಿಯಿಂದ ಹೊರಬಂದು, ಮಲಗಿದ್ದ ಸಹಪಾಠಿಗಳ ಮೇಲೆ ಕಬ್ಬಿಣದ ರಾಡ್ ಹಾಗೂ ಇತರೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ್ದಾನೆ. ವಿದ್ಯಾರ್ಥಿಗಳು ಮಲಗಿದ್ದ ಸ್ಥಿತಿಯಲ್ಲೇ ಹೊಟ್ಟೆ, ತಲೆ ಹಾಗೂ ಎದೆ ಭಾಗಗಳಿಗೆ ಗಂಭೀರ ಗಾಯಗಳನ್ನು ಮಾಡಿದ್ದಾರೆ.

    ವಿದ್ಯಾರ್ಥಿಗಳ ಕೂಗಾಟ ಕೇಳಿ ಹಾಸ್ಟೆಲ್ ವಾರ್ಡನ್ ಬ್ಲೆಸ್ಲಿ ಕುರಿಕೋಸ್ ಸ್ಥಳಕ್ಕೆ ಬಂದಾಗ, ಅವರ ಮೇಲೂ ಬಾಲಕ ದಾಳಿ ನಡೆಸಿದ್ದಾನೆ. ನಂತರ ಆತ ಸ್ಥಳದಿಂದ ಪರಾರಿಯಾಗಿದ್ದಾನೆ.

    ಈ ದಾಳಿಯಲ್ಲಿ ಡಿ. ಹೇಮಂತ್ (15) ಎಂಬ ವಿದ್ಯಾರ್ಥಿ ತೀವ್ರ ಗಾಯಗಳಿಂದ ಸಾವನ್ನಪ್ಪಿದ್ದಾನೆ. ಹೇಮಂತ್ ಆಂಧ್ರಪ್ರದೇಶದ ಕರ್ನೂಲ್ ಜಿಲ್ಲೆಯ ಆಲೂರು ತಾಲೂಕಿನ ಸಮಗಿರಿ ಗ್ರಾಮದ ನಿವಾಸಿ ಎಂದು ತಿಳಿದುಬಂದಿದೆ.

    ಇನ್ನೂ ಒಬ್ಬ ವಿದ್ಯಾರ್ಥಿನಿ ಮತ್ತು ಐವರು ವಿದ್ಯಾರ್ಥಿಗಳು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಬಳ್ಳಾರಿಯ ವಿಮ್ಸ್ (VIMS) ಆಸ್ಪತ್ರೆಗೆ ದಾಖಲಿಸಲಾಗಿದೆ. ಹಾಸ್ಟೆಲ್ ವಾರ್ಡನ್ ಕೂಡ ಗಾಯಗೊಂಡಿದ್ದು ಚಿಕಿತ್ಸೆ ಪಡೆಯುತ್ತಿದ್ದಾರೆ.

    ಶಿಕ್ಷಣ ಸಂಸ್ಥೆಗಳು ಮಕ್ಕಳ ಭವಿಷ್ಯ ರೂಪಿಸುವ ಪವಿತ್ರ ಸ್ಥಳಗಳೆಂದು ನಾವು ನಂಬುತ್ತೇವೆ. ಆದರೆ ಬಳ್ಳಾರಿ ಹೊರವಲಯದ ಖಾಸಗಿ ವಸತಿ ಶಾಲೆಯಲ್ಲಿ ನಡೆದ ಘಟನೆ ಆ ನಂಬಿಕೆಯನ್ನು ತತ್ತರಗೊಳಿಸಿದೆ. 9ನೇ ತರಗತಿಯ 15 ವರ್ಷದ ಬಾಲಕನೊಬ್ಬ ತನ್ನ ಸಹಪಾಠಿಗಳ ಮೇಲೆ ನಡೆಸಿದ ಉನ್ಮಾದಿತ ದಾಳಿಯಲ್ಲಿ ಒಬ್ಬ ವಿದ್ಯಾರ್ಥಿ ಸಾವನ್ನಪ್ಪಿದ್ದು, ಇನ್ನೂ ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಈ ಘಟನೆ ಕೇವಲ ಒಂದು ಅಪರಾಧ ಪ್ರಕರಣವಲ್ಲ; ಇದು ಮಕ್ಕಳ ಮನೋಸ್ಥಿತಿ, ಹಾಸ್ಟೆಲ್ ಸುರಕ್ಷತೆ ಮತ್ತು ಶಿಕ್ಷಣ ವ್ಯವಸ್ಥೆಯ ಮೇಲಿನ ದೊಡ್ಡ ಪ್ರಶ್ನೆಯನ್ನು ಸಮಾಜದ ಮುಂದೆ ತಂದಿದೆ.

    ಆರೋಪಿ ಪರಾರಿ: ಪೊಲೀಸ್ ತಂಡಗಳ ಶೋಧ ಘಟನೆ ಬಳಿಕ ದಾಳಿ ನಡೆಸಿದ ಬಾಲಕ ಪರಾರಿಯಾಗಿದ್ದು, ಪೊಲೀಸರು ಅವನ ಪತ್ತೆಗಾಗಿ ಎರಡು ಪಿಐ ಹಾಗೂ ಐದು ಪಿಎಸ್‌ಐಗಳ ನೇತೃತ್ವದಲ್ಲಿ ಏಳು ವಿಶೇಷ ತಂಡಗಳನ್ನು ರಚಿಸಿದ್ದಾರೆ. ಬಾಲಕ ಓಡಾಡುತ್ತಿದ್ದ ಮಾರ್ಗಗಳು ಮತ್ತು ಪರಿಚಯದ ಸ್ಥಳಗಳನ್ನು ಗಮನದಲ್ಲಿಟ್ಟುಕೊಂಡು ಶೋಧ ಕಾರ್ಯ ಮುಂದುವರಿಸಲಾಗಿದೆ.

    ಪೊಲೀಸರ ಪ್ರಕಾರ, ಬಾಲಕ ಪತ್ತೆಯಾದ ನಂತರವೇ ದಾಳಿಯ ನಿಖರ ಕಾರಣ ಸ್ಪಷ್ಟವಾಗಲಿದೆ. ಪ್ರಾಥಮಿಕ ಮಾಹಿತಿಯ ಪ್ರಕಾರ ಸಣ್ಣ ವಿಚಾರದ ವಿವಾದ ಅಥವಾ ವೈಯಕ್ತಿಕ ಅಸಮಾಧಾನ ಈ ದಾಳಿಗೆ ಕಾರಣವಾಗಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ.

    ಮತ್ತೊಂದು ದೊಡ್ಡ ಅಚ್ಚರಿ: ಹಾಸ್ಟೆಲ್‌ಗೆ ಅನುಮತಿ ಇರಲಿಲ್ಲ

    ಘಟನೆ ಬಳಿಕ ಹೊರಬಂದ ಮತ್ತೊಂದು ವಿಚಾರ ಇನ್ನಷ್ಟು ಆತಂಕಕಾರಿ. ಜಿಲ್ಲಾ ಮಕ್ಕಳ ರಕ್ಷಣಾ ಘಟಕವು ಸಲ್ಲಿಸಿದ ವರದಿ ಪ್ರಕಾರ, ಈ ಖಾಸಗಿ ಹಾಸ್ಟೆಲ್ ರಾಜ್ಯ ಶಿಕ್ಷಣ ಇಲಾಖೆಯಿಂದ ಅಧಿಕೃತ ಅನುಮತಿ ಪಡೆದಿರಲಿಲ್ಲ.ಮಕ್ಕಳ ಮೇಲ್ವಿಚಾರಣೆಗೆ ಯಾವುದೇ ಪುರುಷ ಸಿಬ್ಬಂದಿ ನೇಮಕವಾಗಿರಲಿಲ್ಲ,ಹಾಸ್ಟೆಲ್‌ನ CCTV ಕ್ಯಾಮೆರಾಗಳು ಕಾರ್ಯನಿರ್ವಹಿಸುತ್ತಿರಲಿಲ್ಲ

    ಘಟನೆ ಬಳಿಕ ಶಾಲೆಯ ಆಡಳಿತ ಮಂಡಳಿ ಕಾಣೆಯಾಗಿದ್ದಾರೆ

    ಶಾಲೆಯಲ್ಲಿ ಒಟ್ಟು 158 ವಿದ್ಯಾರ್ಥಿಗಳು ಓದುತ್ತಿದ್ದರೂ, ಹಾಸ್ಟೆಲ್‌ನಲ್ಲಿ ಕೇವಲ 9 ವಿದ್ಯಾರ್ಥಿಗಳು ಮಾತ್ರ ವಾಸವಾಗಿದ್ದರು.

    ಈ ಘಟನೆ ಮತ್ತೊಂದು ಪ್ರಮುಖ ವಿಷಯವನ್ನು ಸಮಾಜದ ಮುಂದೆ ತರುತ್ತದೆ – ಮಕ್ಕಳ ಮಾನಸಿಕ ಆರೋಗ್ಯ. ವಸತಿ ಶಾಲೆಗಳಲ್ಲಿ ಓದುತ್ತಿರುವ ಮಕ್ಕಳಿಗೆ ಕೆಲವೊಮ್ಮೆ ಹಲವು ರೀತಿಯ ಒತ್ತಡಗಳು ಎದುರಾಗುತ್ತವೆ.ಅವುಗಳಲ್ಲಿ ಪ್ರಮುಖವಾದವು,ಮನೆ ಮತ್ತು ಕುಟುಂಬದ ನೆನಪು,ಒಂಟಿತನ,ಸಹಪಾಠಿಗಳ ಕಿರುಕುಳ (Bullying),ಅಧ್ಯಯನದ ಒತ್ತಡ,ಶಿಕ್ಷೆ ಅಥವಾ ಅವಮಾನ ಭಯದಂತ ಸಮಸ್ಯೆ ಹೇಳಿಕೊಳ್ಳಲಾಗದೇ ಅದುಮಿಟ್ಟು ಇಟ್ಟು ಈ ರೀತಿ ಹೊರಹಾಕಬಹುದಾದ ಗಂಬೀರ ವರ್ತನೆಗಳು .

    ಈ ಸಮಸ್ಯೆಗಳು ಸರಿಯಾದ ಸಮಯದಲ್ಲಿ ಗಮನಕ್ಕೆ ಬರದಿದ್ದರೆ, ಕೆಲ ಸಂದರ್ಭಗಳಲ್ಲಿ ಅವು ಅಪಾಯಕಾರಿಯಾಗಿ ಪರಿಣಮಿಸ್ತವೆ.ಸಮಾಜಕ್ಕೆ, ಪೋಷಕರಿಗೆ, ವಿದ್ಯಾಸಂಸ್ಥೆ ಗಳು ಒಟ್ಟಾರೆಯಾಗಿ ಗಮನಿಸಬೇಕಾದ ವಿಷಯಗಳು ಮೊದಲನೆಯದಾಗಿ, ಮಕ್ಕಳ ಮಾನಸಿಕ ಆರೋಗ್ಯವನ್ನು ಗಂಭೀರವಾಗಿ ಪರಿಗಣಿಸಬೇಕು. ಪ್ರತಿ ಶಾಲೆಯಲ್ಲೂ ಕೌನ್ಸಿಲಿಂಗ್ ವ್ಯವಸ್ಥೆ ಇರಬೇಕು.

    ಎರಡನೆಯದಾಗಿ, ವಸತಿ ಶಾಲೆಗಳ ಭದ್ರತಾ ವ್ಯವಸ್ಥೆ ಕಡ್ಡಾಯವಾಗಬೇಕು. ಯಾವುದೇ ಹಾಸ್ಟೆಲ್ ಸರ್ಕಾರದ ಅನುಮತಿ ಇಲ್ಲದೆ ನಡೆಯಲು ಅವಕಾಶ ನೀಡಬಾರದು.

    ಮೂರನೆಯದಾಗಿ, ವಿದ್ಯಾರ್ಥಿಗಳ ನಡುವಿನ ಬುಲಿಯಿಂಗ್ ಅಥವಾ ಕಿರುಕುಳವನ್ನು ಕಟ್ಟುನಿಟ್ಟಾಗಿ ತಡೆಯಬೇಕು.

    ನಾಲ್ಕನೆಯದಾಗಿ, ಪೋಷಕರು ಮಕ್ಕಳನ್ನು ಹಾಸ್ಟೆಲ್‌ಗೆ ಸೇರಿಸುವ ಮೊದಲು ಅದರ ಸುರಕ್ಷತೆ ಮತ್ತು ವ್ಯವಸ್ಥೆಯನ್ನು ಪರಿಶೀಲಿಸುವುದು ಅತ್ಯಂತ ಅಗತ್ಯ.

    ಬಳ್ಳಾರಿಯ ಈ ದುರಂತ ಕೇವಲ ಒಂದು ಕ್ರಿಮಿನಲ್ ಪ್ರಕರಣವಲ್ಲ; ಇದು ಸಮಾಜಕ್ಕೆ ಎಚ್ಚರಿಕೆಯ ಘಂಟೆಯಾಗಿದೆ. ಒಂದು ಮಗುವಿನ ಜೀವ ಕಳೆದುಹೋಯಿತು. ಇನ್ನೂ ಹಲವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಹಲವಾರು ಕುಟುಂಬಗಳು ದುಃಖದಲ್ಲಿ ಮುಳುಗಿವೆ.

    ಶಿಕ್ಷಣ ಸಂಸ್ಥೆಗಳು ಮಕ್ಕಳಿಗೆ ಭದ್ರತೆ, ಮಾರ್ಗದರ್ಶನ ಮತ್ತು ಪ್ರೀತಿ ನೀಡಬೇಕಾದ ಸ್ಥಳಗಳು. ಆದರೆ ಆ ಸ್ಥಳದಲ್ಲೇ ಹಿಂಸಾಚಾರ ನಡೆದರೆ, ಅದು ಸಮಾಜದ ಒಟ್ಟಾರೆ ವ್ಯವಸ್ಥೆಯ ವೈಫಲ್ಯವನ್ನು ತೋರಿಸುತ್ತದೆ.ಈ ಘಟನೆ ನಮಗೆ ಮಕ್ಕಳ ಸುರಕ್ಷತೆ ಮತ್ತು ಮಾನಸಿಕ ಆರೋಗ್ಯವನ್ನು ನಾವು ನಿರ್ಲಕ್ಷಿಸಿದರೆ, ಅದರ ಪರಿಣಾಮವನ್ನು ಸಂಪೂರ್ಣ ಸಮಾಜವೇ ಅನುಭವಿಸಬೇಕಾಗುತ್ತದೆ ಎಂಬ ಸ್ಪಷ್ಟ ಸಂದೇಶ ನೀಡುತ್ತದೆ

    ಮಕ್ಕಳ ಭವಿಷ್ಯ ನಿಜವಾಗಿಯೂ ಸುರಕ್ಷಿತವಾಗಿರಬೇಕಾದರೆ ಇಂತಹ ದುರಂತಗಳು ಮತ್ತೆ ನಡೆಯದಂತೆ ಸರ್ಕಾರ, ಶಾಲಾ ಆಡಳಿತ, ಶಿಕ್ಷಕರು, ಪೋಷಕರು ಮತ್ತು ಸಮಾಜ ಒಟ್ಟಾಗಿ ಕೆಲಸ ಮಾಡಬೇಕಾಗಿದೆ..

    COMMENTS

    Login with Gmail to comment

    ಇನ್ನಷ್ಟು ಸುದ್ದಿ

    Golden Hour ಉಳಿಸುವತ್ತ ಗ್ರಾಮದಿಂದ ನಗರವರೆಗೆ – ಕರ್ನಾಟಕ ಹೆಲ್ತ್ ಸಿಸ್ಟಮ್ ಮಹತ್ವದ ಹೆಜ್ಜೆ
    ತೇಹಲ್ಕಾ ಮಾಜಿ ಸಂಪಾದಕ ತರುಣ್ ತೇಜ್‌ಪಾಲ್ ಅತ್ಯಾಚಾರ ಪ್ರಕರಣಕ್ಕೆ 13 ವರ್ಷಗಳ ಬಳಿಕ ಗೋವಾ ಹೈಕೋರ್ಟ್ ಮಹತ್ವದ ತೀರ್ಪು….!
    ಮಂಗಳೂರು ಬೆಂಗಳೂರು ಮಧ್ಯೆ ಇನ್ನು ತಡರಾತ್ರಿಯೂ ವಿಮಾನ ಯಾನ
    “ಕೃಷ್ಣ ಜೆ. ರಾವ್‌ ಡಿಎನ್ಎ ಸತ್ಯ ಬಯಲು — ಮಗುವಿಗೆ ನ್ಯಾಯ ಬೇಕು ಎಂದ ಹೈಕೋರ್ಟ್!”
    🚨 ಬೈಂದೂರಿನಲ್ಲಿ ಭಯಾನಕ ದಾಳಿ! ಕತ್ತಿಯಿಂದ ಹಲ್ಲೆ – ಆರೋಪಿ ಬಂಧನ
    ಶಿಶಿಲದಲ್ಲಿ ವಿಷಪೂರಿತ ಹಾವು ಕಚ್ಚಿ 65 ವರ್ಷದ ರೈತ ಮೃತ್ಯು
    ಕೆಪಿಎಸ್‌ಸಿ ನೇಮಕಾತಿ ಅಕ್ರಮಕ್ಕೆ ಇ.ಡಿ. ಶಾಕ್: 21 ಕಡೆ ಏಕಕಾಲದ ದಾಳಿ
    “ಅಪ್ರಾಪ್ತ ಅತ್ಯಾಚಾರ ಸಂತ್ರಸ್ತರಿಗೆ ಅಬಾರ್ಷನ್ ಮಾಡಲು ಆದ್ಯತೆ ,ಕಾನೂನು ತಿದ್ದುಪಡಿ”- ಸುಪ್ರೀಂ ಕೋರ್ಟ್
    ಎಥೆನಾಲ್ ಮಿಶ್ರಿತ ಇಂಧನದಿಂದ ವಾಹನಗಳಿಗೆ ಸಮಸ್ಯೆ ಇಲ್ಲ – ನಿತಿನ್ ಗಡ್ಕರಿ
    ಕುಡಿತದ ಅಮಲಿನಲ್ಲಿ ಹೆತ್ತ ತಾಯಿಯನ್ನೇ ಕೊಂದ ಮಗಳು, ಮೊಮ್ಮಗ: ಕೆಂಗೇರಿಯಲ್ಲಿ ಕರುಳು ಹರಿಯುವ ಕೃತ್ಯ!
    ದುಬೈ ಕನಸು… ಜೈಲು ವಾಸ್ತವ!ಡ್ರಗ್ ಮಾಫಿಯಾದ ಗುರಿಯೇ ಯುವಕರು..!!ಭವಿಷ್ಯ ಕಳೆದುಕೊಳ್ಳುವ ಮುನ್ನ ಎಚ್ಚರ!
    ಇಂದಿನ ಆಧುನಿಕ ಯುಗದಲ್ಲೂ ಗಂಡನ ಮನೆಯಲ್ಲಿ ಹೆಣ್ಣೊಬ್ಬಳ ನರಕಯಾತನೆಯ ನೈಜ ದೃಶ್ಯ ತಂದೆಯೇ ಕಣ್ಣಾರೆ ನೋಡಿದರೇ ….ಕಣ್ಣೀರು ತಡೆಯಲು ಸಾಧ್ಯವಿಲ್ಲ…..
    ಕೇವಲ “Aunty” ಅಂತ ಅಂದಿದಕ್ಕೆ 2 ಲಕ್ಷ ದಂಡ…!
    ಹಾರರ್ ಸಿನಿಮಾ ಸೀನ್ ಅಂತ ಅನಿಸ್ತು… ಆದರೆ ಇದು ನಿಜ ಘಟನೆ! ಟಾಯ್ಲೆಟ್ ಒಳಗಿಂದ ತಲೆ ಎತ್ತಿದ ವಿಷದ ರಾಜ…
    ಕೆತ್ತಿಕಲ್‌ನಿಂದ ಚಾರ್ಮಾಡಿವರೆಗೆ ಅಪಾಯದ ಗಂಟೆ! ಭೂಕುಸಿತ ಭೀತಿಯಲ್ಲಿ ಕರಾವಳಿ ರಸ್ತೆಗಳು !ಮಳೆ ಬಂದ ಮೇಲೆ ಸಭೆ, ಪರಿಶೀಲನೆ… ಆದರೆ ಮುನ್ನೆಚ್ಚರಿಕೆ ಎಲ್ಲಿದೆ?
    ಮೋದಿ ವಿಡಿಯೋ ಡಿಲೀಟ್ ವಿವಾದ: ಭಾರತಕ್ಕೆ ಕ್ಷಮೆಯಾಚಿಸಿದ ಮಾರ್ಕ್ ಜುಕರ್‌ಬರ್ಗ್!
    ಜೈಲಿನೊಳಗೆ ಮೊಬೈಲ್ ಮಾಫಿಯಾ: ಖತರ್ನಾಕ್ ಐಡಿಯಾ..!
    ಬಂಟರ ಸಮುದಾಯದಲ್ಲೊಂದು ಹೀನ ಸಂಪ್ರದಾಯ-ವರದಕ್ಷಿಣೆಗಾಗಿ ಹಿಂಸೆ, ಹಲ್ಲೆ.. ಬೆದರಿಕೆ!
    ಪ್ರಜ್ವಲ್ ರೇವಣ್ಣ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಕ್ಷಿಗೆ ಬೆದರಿಕೆ ಕರೆ!
    ಡೊನಾಲ್ಡ್ ಟ್ರoಪ್ ಮುಂದೆ ಮಂಡಿಯೂರಿ ಕೂತ ಜಗತ್ತು!
    ಅಕ್ರಮ ಮರಳುಗಾರಿಕೆ, ಕ್ರಮ ಕೈಗೊಂಡ ವೇಣೂರು ಪೊಲೀಸರು
    ಐಟಿ ಕ್ಷೇತ್ರದಲ್ಲಿ ಮತ್ತೆ ಲೇಆಫ್ ಭೀತಿ!
    ಕಸ ಸಾಗಾಣಿಕೆ ಟೆಂಡರ್‌ನಲ್ಲಿ ₹133 ಕೋಟಿ ಅಕ್ರಮ ಆರೋಪ
    ಇರಾನ್ ಮೇಲೆ ಇಸ್ರೇಲ್-ಅಮೆರಿಕ ದಾಳಿಗೆ  ಪ್ರತಿದಾಳಿ ಯುಎಇ, ಬಹ್ರೇನ್, ಸೌದಿಯಲ್ಲಿ ಅಮೆರಿಕದ ನೆಲೆಗಳಿಗೆ ನಡುಕ.
    ಡಿಕೆಎಮುಲ್‌ನಿಂದ ₹1,270 ಕೋಟಿ ದಾಖಲೆ ಬೆಳವಣಿಗೆ ಹೊಸ ಮೈಲುಗಲ್ಲು..!
    ನಿರ್ಮಾಣ ಹಂತದ ಗಾಲ್ಫ್ ಕೋರ್ಸ್‌ನ ಕೆರೆಯಲ್ಲಿ ತೇಲಿದ ಮೂವರು ಬಾಲಕರ ಶವಗಳು..!
    ನೀವು Fit…ಆದ್ರೆ ನಿಮ್ಮ ಹೃದಯ ?ಮನೆಯಲ್ಲಿಯೇ 5 ನಿಮಿಷದಲ್ಲಿ ಪರೀಕ್ಷಿಸಿಕೊಳ್ಳಿ ನಿಮ್ಮ ಹೃದಯದ ಆರೋಗ್ಯ!
    ಕರ್ನಾಟಕ ಸೇರಿ 16 ರಾಜ್ಯಗಳಲ್ಲಿ SIR ಮತದಾರರ ಪಟ್ಟಿಯಲ್ಲಿ ನಿಮ್ಮ ಹೆಸರು ಅಳಿಸಬಹುದಾ? ಈಗಲೇ ಎಚ್ಚರ!
    ಅಕ್ರಮ ಪ್ರವೇಶ, ದೌರ್ಜನ್ಯ, ಹಾಗೂ ಕೃಷಿ ಚಟುವಟಿಕೆಗೆ ತಡೆಯ ಬಗ್ಗೆ ದೂರು ದಾಖಲು
    ಚುನಾವಣೆಯವರೆಗೆ ಮೌನ, ನಂತರ LPG ದರ ಭಾರಿ ಏರಿಕೆ –ಇದು ರಾಜಕೀಯ ಅಜೆಂಡಾನಾ?