📍 Karavali Maruta
  • LOGIN
  • ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

    ‘ಅಮರ್ ಜವಾನ್ ಪಾರ್ಕ್’ಗೆ ಯುದ್ಧ ಟ್ಯಾಂಕ್, ಯುದ್ಧವಿಮಾನ ಸ್ಥಾಪನೆಗೆ ರಕ್ಷಣಾ ಸಚಿವರಿಗೆ ಸಂಸದೆ ಪ್ರಭಾ ಮಲ್ಲಿಕಾರ್ಜುನ ಮನವಿ

    ವೀರ ಯೋಧರಿಗೆ ಶಾಶ್ವತ ಗೌರವ ಸಲ್ಲಿಸುವ ಉದ್ದೇಶ — ಜಿಲ್ಲೆಯ ಅಭಿವೃದ್ಧಿ ಹಾಗೂ ಮಾಜಿ ಸೈನಿಕರ ಹಿತಕ್ಕೆ ಎರಡು ಪ್ರಮುಖ ಬೇಡಿಕೆ

    ನವದೆಹಲಿ: ದಾವಣಗೆರೆಯ ‘ಅಮರ್ ಜವಾನ್ ಪಾರ್ಕ್’ನಲ್ಲಿ ದೇಶಕ್ಕಾಗಿ ಸೇವೆ ಸಲ್ಲಿಸಿದ ವೀರ ಯೋಧರ ಸ್ಮರಣಾರ್ಥವಾಗಿ ನಿವೃತ್ತಿಗೊಳಿಸಲಾದ ವಿಂಟೇಜ್ ಯುದ್ಧ ಟ್ಯಾಂಕ್ ಹಾಗೂ ಯುದ್ಧ ವಿಮಾನವನ್ನು ಸ್ಥಾಪಿಸುವಂತೆ ದಾವಣಗೆರೆ ಲೋಕಸಭಾ ಕ್ಷೇತ್ರದ ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ್ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರಿಗೆ ಮನವಿ ಸಲ್ಲಿಸಿದ್ದಾರೆ.

    ನವದೆಹಲಿಯಲ್ಲಿ ಇಂದು ಕೇಂದ್ರ ರಕ್ಷಣಾ ಸಚಿವರನ್ನು ಭೇಟಿಯಾದ ಸಂಸದೆ, ಜಿಲ್ಲೆಯ ಅಭಿವೃದ್ಧಿ ಹಾಗೂ ಮಾಜಿ ಸೈನಿಕರ ಹಿತದೃಷ್ಟಿಯಿಂದ ಎರಡು ಪ್ರಮುಖ ಬೇಡಿಕೆಗಳನ್ನು ಒಳಗೊಂಡ ಮನವಿ ಪತ್ರವನ್ನು ಸಚಿವರಿಗೆ ಹಸ್ತಾಂತರಿಸಿದರು.

    ದಾವಣಗೆರೆಯ ‘ಅಮರ್ ಜವಾನ್ ಪಾರ್ಕ್’ನಲ್ಲಿ ಸೇವೆಯಿಂದ ನಿವೃತ್ತಿಗೊಳಿಸಲಾದ ಯುದ್ಧ ಟ್ಯಾಂಕ್ ಹಾಗೂ ಯುದ್ಧ ವಿಮಾನವನ್ನು ಪ್ರದರ್ಶನಕ್ಕೆ ಇಡುವುದರಿಂದ ದೇಶದ ರಕ್ಷಣೆಯಲ್ಲಿ ಮಹತ್ವದ ಪಾತ್ರ ವಹಿಸಿದ ಭಾರತೀಯ ಸೇನೆಯ ಶೌರ್ಯ ಮತ್ತು ತ್ಯಾಗವನ್ನು ಮುಂದಿನ ಪೀಳಿಗೆಗೆ ಪರಿಚಯಿಸಲು ಸಾಧ್ಯವಾಗಲಿದೆ ಎಂದು ಮನವಿಯಲ್ಲಿ ತಿಳಿಸಿದ್ದಾರೆ.

    ದೇಶದ ಗಡಿಗಳನ್ನು ಕಾಯುವ ಸಂದರ್ಭದಲ್ಲಿ ಪ್ರಾಣತ್ಯಾಗ ಮಾಡಿದ ವೀರ ಯೋಧರಿಗೆ ಈ ಮೂಲಕ ಶಾಶ್ವತ ಗೌರವ ಸಲ್ಲಿಸಿದಂತಾಗಲಿದೆ. ಅಲ್ಲದೆ, ಯುವಜನರಲ್ಲಿ ದೇಶಭಕ್ತಿ, ರಾಷ್ಟ್ರ ಸೇವೆ ಹಾಗೂ ಸಶಸ್ತ್ರ ಪಡೆಗಳ ಬಗ್ಗೆ ಗೌರವ ಮೂಡಿಸಲು ಇದು ಪ್ರೇರಣೆಯಾಗಲಿದೆ ಎಂದು ಅವರು ಮನವಿಯಲ್ಲಿ ಉಲ್ಲೇಖಿಸಿದ್ದಾರೆ.

    ಮಾಜಿ ಸೈನಿಕರು ಹಾಗೂ ಅವರ ಕುಟುಂಬಗಳ ಕಲ್ಯಾಣಕ್ಕೂ ಹೆಚ್ಚಿನ ಆದ್ಯತೆ ನೀಡುವ ಅಗತ್ಯವಿದ್ದು, ಈ ನಿಟ್ಟಿನಲ್ಲಿ ಕೇಂದ್ರ ಸರ್ಕಾರದಿಂದ ಅಗತ್ಯ ಸಹಕಾರ ದೊರೆಯಬೇಕು ಎಂದು ಸಂಸದೆ ಮನವಿ ಮಾಡಿದ್ದಾರೆ.

    ದಾವಣಗೆರೆಯಲ್ಲಿ ನಿರ್ಮಾಣಗೊಳ್ಳುತ್ತಿರುವ ‘ಅಮರ್ ಜವಾನ್ ಪಾರ್ಕ್’ ಭವಿಷ್ಯದಲ್ಲಿ ವೀರ ಯೋಧರ ಸ್ಮರಣೆಯ ಪ್ರಮುಖ ಕೇಂದ್ರವಾಗಿ ರೂಪುಗೊಳ್ಳಬೇಕು. ಇದಕ್ಕಾಗಿ ಕೇಂದ್ರ ರಕ್ಷಣಾ ಸಚಿವಾಲಯದಿಂದ ಅಗತ್ಯ ನೆರವು ಹಾಗೂ ನಿವೃತ್ತ ಯುದ್ಧೋಪಕರಣಗಳ ಮಂಜೂರಾತಿ ದೊರೆಯುವ ವಿಶ್ವಾಸವಿದೆ ಎಂದು ಡಾ. ಪ್ರಭಾ ಮಲ್ಲಿಕಾರ್ಜುನ್ ಆಶಯ ವ್ಯಕ್ತಪಡಿಸಿದ್ದಾರೆ.

    COMMENTS

    Login with Gmail to comment

    ಇನ್ನಷ್ಟು ಸುದ್ದಿ

    ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು: ದಯಾ ಮರಣಕ್ಕೆ ಅನುಮತಿ
    ರಾಜಧಾನಿಯ ಫುಟ್‌ಪಾತ್ ಮೇಲಿದ್ದ ಮಗುವನ್ನು ಎತ್ತಿಕೊಂಡು ಹೋಗಿ ಕ್ರೌರ್ಯ ಮೆರೆದ ಕಾಮುಕನ ಧೈರ್ಯ ಮತ್ತು ಭೀಕರ ಹತ್ಯೆ ಬಿಚ್ಚಿಟ್ಟ ಸತ್ಯ!
    ಕಾರ್ಕಳದಲ್ಲಿ  ಜಾಗ ಕಿತ್ತುಕೊಳ್ಳಲು ಮಾಡಿದ ಪ್ಲಾನ್, ರಿವರ್ಸಾಗಿ ಪೊಲೀಸ್ ಠಾಣೆ ಮೆಟ್ಟಿಲು ಹತ್ತಿದೆ
    ಜೀತಕ್ಕಿಟ್ಟುಕೊಂಡು ದರ್ಬಾರ್ ನಡೆಸುತ್ತಿದ್ದ ರಜನಿಶೆಟ್ಟಿಯ ಬಂಧನ
    ಮಂಗಳೂರಿನಲ್ಲಿ ಮುಂಜಾನೆ ನಡೆದ ರೌಡಿಶೀಟರ್ ಹತ್ಯೆ – ದುಷ್ಕರ್ಮಿಗಳ  ಜಾಡು ಬೆನ್ನಟ್ಟಿದ ಪೊಲೀಸ್‌ ಪಡೆ….ಮಹತ್ವದ ಸುಳಿವು…..!
    35 ವರ್ಷಗಳ ಬಳಿಕ ಮತ್ತೆ ಕಾಲೇಜಿಗೆ ಬಂದ 50 ವರ್ಷದ ಮಹಿಳೆ: ಇಂಟರ್ನೆಟ್‌ಗೆ ಸ್ಫೂರ್ತಿಯಾದ ಕಥೆ
    ಮೋದಿ ಸರ್ಕಾರಕ್ಕೆ ಮತ್ತೊಂದು ಶಾಕ್ …ಕೇಂದ್ರ ಸಚಿವ ಸಂಪುಟಕ್ಕೆ ರವನೀತ್ ಸಿಂಗ್ ಬಿಟ್ಟು ರಾಜೀನಾಮೆ
    ಕರಾವಳಿ ಪ್ರತ್ಯೇಕ ರಾಜ್ಯಕ್ಕೆ ಒತ್ತಾಯ: “ಕರಾವಳಿ ಪಡೆ” ಹೋರಾಟ ತೀವ್ರಗೊಳಿಸಲು ನಿರ್ಧಾರ
    ಬೆಳ್ತಂಗಡಿಯಲ್ಲಿ ಮಧುಮಗ ಜೈಲಿಗೆ-ಅಪ್ರಾಪ್ತೆಯ ಮೇಲೆ ದೌರ್ಜನ್ಯ – ಇಬ್ಬರು ಆರೋಪಿಗಳ ಬಂಧನ..!
    ಚುನಾವಣಾ ಆಯೋಗ ಸರ್ವಾಧಿಕಾರಿಯಾಗುತ್ತಿದೆ ಎಂಬ ಅನುಮಾನದ ಸುತ್ತ….
    ಜಾರ್ಖಂಡ್‌ನಲ್ಲಿ 16 ದಿನಗಳ ಉಪವಾಸಕ್ಕೆ ಫಲ!ವಿದ್ಯಾರ್ಥಿಗಳ ಹೋರಾಟಕ್ಕೆ ಮಹತ್ವದ ಜಯ —ಒತ್ತಡಕ್ಕೆ ಮಣಿದ ಸರ್ಕಾರ? ಬೇಡಿಕೆಗಳ ಮೇಲೆ ಮಹತ್ವದ ಒಪ್ಪಂದಗಳೇನು..?
    ಭಾರತ ಮುಸ್ಲಿಂ ದೇಶವಾಗುವುದೇ?- ನಾಳೆ ಪುಸ್ತಕ ಬಿಡುಗಡೆಯ ಕಾರ್ಯಕ್ರಮ
    ಪ್ರಧಾನಿ ಮೋದಿ ನೆದರ್ಲ್ಯಾಂಡ್ ಭೇಟಿ ಭಾರತ ಸಹಕಾರದ ಸೇತುವೆ ಕಟ್ಟುವ ದ್ವಿಪಕ್ಷೀಯ ಸಂಬಂಧಗಳ ವಿಸ್ತರಣೆ…
    ಕುಮಾರಸ್ವಾಮಿ ನೆನೆದ ಗುಬ್ಬಿ ವಾಸು: ಮತ್ತೆ ಜೆಡಿಎಸ್ ಸೇರ್ಪಡೆಗೆ ಮುನ್ನುಡಿಯೇ ಈ ಹೇಳಿಕೆ?
    ಅನಾಥ ಪುಟ್ಟ ಬಾಲಕಿಯರ ಮೇಲೆ ವರ್ಷಗಳ ಕಾಲ ಲೈಂಗಿಕ ದೌರ್ಜನ್ಯ:ರಾಕ್ಷಸ ಮನಸ್ಸುಗಳಿಗೆ ಅಂತ್ಯ ಯಾವಾಗ?
    ಬರದ ಭೀತಿ ಎದುರಿಸುತ್ತಿರುವ ಕರ್ನಾಟಕ ,ಮಳೆ ಇಲ್ಲ… ಬೆಳೆ ಇಲ್ಲ… ಅನ್ನ ಇಲ್ಲ!,ಕೇಂದ್ರಕ್ಕೆ ನೆರವಿಗಾಗಿ ಡಿ ಕೆ ಶಿ ಮನವಿ
    ಧೂಮಪಾನ ಮಾಡುತ್ತಿದ್ದೀರಾ? ನಿಮ್ಮ ಮುಖ ನಿಧಾನವಾಗಿ ನಾಶವಾಗುತ್ತಿದೆ…
    ಕೊನೆಗೂ ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿದ ನಿತೀಶ್ ಕುಮಾರ್
    50 ಸಾವಿರ ಸಾಲಕ್ಕೆ ಸವಣೂರು ಪೇಟೆಯಲ್ಲಿ ರಕ್ತಸಿಕ್ತ ಘರ್ಷಣೆ ..
    ಸುಪ್ರೀಂ ಕೋರ್ಟ್‌ನಲ್ಲಿ ಗದ್ದಲ: ದಾಖಲೆ ಎಸೆದು ಅವಾಚ್ಯ ಶಬ್ದ ಬಳಕೆ ಯಾಕೆ?- ಅರ್ಜಿದಾರನ ಅರ್ಜಿ ವಜಾ
    ಟೀಕೆಗಳು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿನ ಸೌಂದರ್ಯ – ಖಾದರ್
    📣3 ತಿಂಗಳಲ್ಲಿ LPG ಸಂಪರ್ಕ ರದ್ದು ??– PNGಗೆ ಬದಲಾವಣೆ ಕಡ್ಡಾಯ” ಈಗಲೇ ಸತ್ಯ ತಿಳಿದುಕೊಳ್ಳಿ..! ಗ್ಯಾಸ್ ಬಗ್ಗೆ ಗೊಂದಲಕ್ಕೆ ಸ್ಪಷ್ಟ ಉತ್ತರ ಇಲ್ಲಿದೆ.
    ಮಕ್ಕಳಿಲ್ಲದ ನೋವನ್ನು ಮರಗಳ ಪ್ರೀತಿಯಾಗಿ ಬದಲಿಸಿ ಬರಡು ಭೂಮಿಯನ್ನು ಹಸಿರು ಕಾಡಾಗಿಸಿದ ದಂಪತಿಗಳ ಅದ್ಭುತ ಜೀವನಗಾಥೆ
    ನಾರ್ವೇ ಪತ್ರಕರ್ತರಿಗೆ ತಿರುಗೇಟು: “ಭಾರತದ ವಾಸ್ತವತೆ ಅರಿವಿಲ್ಲ” ಎಂದ MEA ಕಾರ್ಯದರ್ಶಿ ಸಿಬಿ ಜಾರ್ಜ್…
    ಪೊಲೀಸರಿಂದ ಕ್ರೂರವಾಗಿ ತಳಿಸಲ್ಪಟ್ಟ ವಿದ್ಯಾರ್ಥಿಗಳಲ್ಲಿ ಕ್ಷಮೆ ಕೇಳಿದ ಸಿಜೆಪಿ ನಾಯಕ ಅಭಿಜಿತ್ ದೀಪ್ಕೆ
    ಕೆಪಿಎಸ್‌ಸಿ ನೇಮಕಾತಿ ಅಕ್ರಮಕ್ಕೆ ಇ.ಡಿ. ಶಾಕ್: 21 ಕಡೆ ಏಕಕಾಲದ ದಾಳಿ
    ಡಾನ್ -3 ಸಿನಿಮಾ ಕಥೆ ಗೋವಿಂದ….!
    ಪಿಸ್ತೂಲ್ ತೋರಿಸಿ ಬೆದರಿಸಿ ಪರಾರಿಯಾಗಿದ್ದ ಯುವಕ ಬಂಧನ
    ರಸ್ತೆಯ ವಿಚಾರಕ್ಕೆ ನೆರೆಹೊರೆಯರ ನಡುವೆ ಬಾರಿ ಗಲಾಟೆ !
    ನಂದಿಬೆಟ್ಟದ ಬಳಿ ಪ್ರೇಯಸಿ ಕೊಲೆಗೈದು ಪ್ರಿಯಕರನ ಆತ್ಮಹತ್ಯೆ ಯತ್ನ?ಲವ್ ಜಿಹಾದ್’ ಆರೋಪ ಹೊರಿಸಿದ ತಾಯಿ!