📍 Karavali Maruta
LIVE | CONTACT
ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

“ಅಮ್ಮ”ನ ಕಾರ್ಯಕ್ರಮದಲ್ಲಿ  ಕೇಂದ್ರ ಸಚಿವರಿಂದ ರಾಜಕೀಯ ಭಾಷಣ

ಮಂಗಳೂರಿನ ಬೋಳೂರು ಅಮೃತಾನಂದಮಯಿ ಮಠದಲ್ಲಿ ನಡೆಯುತ್ತಿರುವ ಧಾರ್ಮಿಕ ಹಾಗೂ ಆಧ್ಯಾತ್ಮಿಕ ಮತ್ತು ಸಾಮಾಜಿಕ ಸೇವಾ ಕೈಂಕರ್ಯಾದ  ಕಾರ್ಯಕ್ರಮದ ವೇದಿಕೆಯನ್ನು ತಮ್ಮ ರಾಜಕೀಯ ಲಾಭಕ್ಕೆ ಬಳಸಿಕೊಳ್ಳಲು ಕೇಂದ್ರ ಸಚಿವರು ಯತ್ನಿಸಿದ್ದಾರೆ ಎಂಬ ಆರೋಪ ಕೇಳಿಬರುತ್ತದೆ.

ಇಂದು ಮತ್ತು ನಾಳೆ ಮಾತಾ ಅಮೃತಾನಂದಮಯಿ ದೇವಿ ಇವರ ಸತ್ಸಂಗ ಸೇರಿದಂತೆ ವಿವಿಧ ಧಾರ್ಮಿಕ ಹಾಗೂ ಸೇವಾ ಕಾರ್ಯಗಳ ಚಟುವಟಿಕೆಗಳು ನಗರದ ಬೋಳೂರಿನ ಶ್ರೀ ಮಾತಾ ಅಮೃತಾನಂದಮಯಿ ಮಠದಲ್ಲಿ ಜಗುರುಗುತ್ತಿದೆ.  ಧರ್ಮ ಜಾತಿ ಮತ ಭೇದವಿಲ್ಲದೆ ನಡೆಯುತ್ತಿ ರುವ ಕಾರ್ಯಕ್ರಮದಲ್ಲಿ ಸಹಸ್ರಾರು ಜನರು ಭಕ್ತಿಯಿಂದ ಭಾಗವಹಿಸಿದ್ದಾರೆ. ಎರಡು ದಿನದ ಈ ಕಾರ್ಯಕ್ರಮದಲ್ಲಿ ಸುಮಾರು 50 ಸಾವಿರಕ್ಕೂ ಹೆಚ್ಚು ಜನರು ಭಾಗವಹಿಸಲಿದ್ದಾರೆಂದು ಆಯೋಜಕರು ತಿಳಿಸಿದ್ದಾರೆ.

ಇಂತಹ ಕಾರ್ಯಕ್ರಮದ ಸಾರ್ವಜನಿಕ ವೇದಿಕೆಯಲ್ಲಿ, ವಿವಿಧ ಗಣ್ಯರು ಭಾಗವಹಿಸಿದ್ದರು. ಅದರಲ್ಲೂ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಕರ್ನಾಟಕ ವಿಧಾನಸಭೆಯ ಸಭಾಪತಿ ಯುಟಿ ಖಾದರ್, ಸಂಸದ ಬ್ರಿಜೇಶ್ ಟೌಟ, ಶಾಸಕ ಯಶ್ ಪಾಲ್ ಸುವರ್ಣ, ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

ಇಂತಹ ವೇದಿಕೆಯನ್ನು, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿಯವರು  ರಾಜಕೀಯೆತರ ಹಾಗೂ ಜಾತಿ ಮತವಿಲ್ಲದ ವೇದಿಕೆಯನ್ನು ತಮ್ಮ ರಾಜಕೀಯ ಲಾಭಕ್ಕೆ ಬಳಸಿಕೊಳ್ಳಲು ಯತ್ನಿಸಿದರು ಎನ್ನುವ ಗಂಭೀರ ಆರೋಪ ಕೇಳಿಬಂದಿದೆ.

ಸಚಿವ ಪ್ರಹಲ್ಲಾದ್ ಜೋಶಿ ಅವರು, ತಮ್ಮ ಭಾಷಣದ ಪ್ರಾರಂಭದಲ್ಲಿ ಮಾತಾ ಅಮೃತಾನಂದಮಯಿ ಅವರ ಆಧ್ಯಾತ್ಮಿಕ ಚಿಂತನೆ ಹಾಗೂ ಜ್ಞಾನಾರ್ಜನೆಯ ವಿಚಾರವಾಗಿ ಪ್ರಶಂಶಿಸಿ ಮಾತನಾಡಿದರು. ಬಡ ಮೀನುಗಾರರ ಕುಟುಂಬದಲ್ಲಿ ಜನಿಸಿದ ಅಮ್ಮನವರು, ಇವತ್ತು ಜಗತ್ತಿಗೆ ಜ್ಞಾನವನ್ನು ಕೊಡುತ್ತಿರುವಂತಹ ಕರುಣಾಮಯಿ  ಅಮ್ಮ ಆಗಿದ್ದಾರೆ ಎಂದು ಹೇಳಿದ ಸಚಿವರು, ಸಾಕಷ್ಟು ಬಡ ಕುಟುಂಬಗಳಿಗೆ ಸೂರನ್ನು ಕೊಟ್ಟಿದ್ದಾರೆ, ಉಚಿತ ಶಿಕ್ಷಣವನ್ನು ಕೊಡುತ್ತಿದ್ದಾರೆ, ಆರೋಗ್ಯ ಭಾಗ್ಯ ಕರುಣಿಸುತ್ತಿದ್ದಾರೆ ಎಂದು ಪ್ರಶಾಂತಿಸಿದರು. ಆನಂತರ ಮಾತನಾಡಿದ್ದು ಮಾತ್ರ ಸರಿಯಲ್ಲ ಅನ್ನೋದು ಸಾರ್ವಜನಿಕರಿಂದ ಕೇಳಿ ಬಂತು. 

ಅಷ್ಟಕ್ಕೂ ಏನು ಮಾತನಾಡಿದರು? ಈ ವೇದಿಕೆಗೆ ಬರುವುದಕ್ಕಿಂತ ಮೊದಲು ಅಮ್ಮನವರನ್ನು ಭೇಟಿಯಾದಾಗ ಅಮ್ಮನವರು ನನ್ನಲ್ಲಿ ಹೇಳುತ್ತಾರೆ. ಈಗ ನೀವು ತುಂಬಾ ಕಷ್ಟವನ್ನ ಎದುರಿಸುತ್ತಿದ್ದೀರಿ. ಇಡೀ ಜಗತ್ತು ಅನೇಕ ವಿಚಾರದಿಂದ ಕಷ್ಟದಲ್ಲಿದೆ. ಮೋದಿಯವರು ಭಾರತವನ್ನು ಆ ಕಷ್ಟದಿಂದ ತಪ್ಪಿಸುವುದಕೋಸ್ಕರ ಶ್ರಮ ಪಡುತ್ತಿದ್ದಾರೆ. ಅವರ ಶ್ರಮಕ್ಕೆ ಬಲವಾಗಿ ನಾವು ನಿಮ್ಮ ಜೊತೆಗೆ ಇದ್ದೇವೆ ಯಾವುದಕ್ಕೂ ಹೆದರುವುದು ಬೇಡ. ಮೋದಿಯವರಿಗೆ ನಮ್ಮ ಸಂದೇಶ ತಿಳಿಸಿ ಎಂದು ನನಗೆ  ಅಮ್ಮ ಹೇಳಿದರು ಎಂದು ವೇದಿಕೆಯಲ್ಲಿ ಭಾಷಣ ಮಾಡಿದರು. ಈ ಭಾಷಣಕ್ಕೆ ಒಂದಷ್ಟು ಚಪ್ಪಾಳೆಯು ಬಂತು. ಹಾಗೆಯೇ ಮತ್ತೊಂದು ಕಡೆಯಲ್ಲಿ ಈ ಭಾಷಣದ ಬಗ್ಗೆ ಅಪಸ್ವರ ಎದ್ದಿದ್ದು ಅಲ್ಲಲ್ಲಿ ಕಂಡುಬಂತು.

ಸಚಿವರು  ಧಾರ್ಮಿಕ ಸಾಮಾಜಿಕ ಆಧ್ಯಾತ್ಮ ವಿಚಾರವಾಗಿ ಸೇವೆಯ ವಿಚಾರವಾಗಿ ಮಾತನಾಡಿದ್ದು ಚೆನ್ನಾಗಿತ್ತು, ಆದರೆ ಅವರ ಭಾಷಣದ ಕೊನೆಯಲ್ಲಿ ಚುನಾವಣಾ ಭಾಷಣದ ತರ ಮಾತನಾಡಿದ್ದು ಸರಿಯಲ್ಲ ಎಂಬ ಮಾತು ಕೇಳಿ ಬಂತು. ಪಕ್ಷದ ವೇದಿಕೆಯಲ್ಲಿ ಅವರು ಇಂತಹ ಮಾತುಗಳನ್ನಾಡಿಕೊಳ್ಳಲಿ ಅದು ಬಿಟ್ಟು ಅಮ್ಮನ ಕಾರ್ಯಕ್ರಮದ ವೇದಿಕೆಯಲ್ಲಿ ಸಚಿವರು ಈ ರೀತಿಯ ಮಾತನಾಡಿದ್ದು ಸರಿಯಲ್ಲ ಎಂಬುದು ಅವರ ಅಭಿಪ್ರಾಯ.

COMMENTS

Login with Gmail to comment

ಇನ್ನಷ್ಟು ಸುದ್ದಿ

ನಾಸಿಕ್ TCS ಪ್ರಕರಣ-ಸತ್ಯ ಮರೆಮಾಚಿದವರಾರು?ಕಾರ್ಪೊರೇಟ್ ಜಗತ್ತಿನ ಕತ್ತಲೆ ಮುಖ:HRಮಹಿಳೆಯಾಗಿಯೂ…..
ತೈಲ, ಯುದ್ಧ ಮತ್ತು ಆರ್ಥಿಕತೆ: ಭಾರತದ ಮುಂದೆ ಹೊಸ ಸವಾಲು
ಯುವ ಜನಾಂಗದ ಹೋರಾಟ ಕಿಚ್ಚಾಗದಂತೆ ನೋಡಿಕೊಳ್ಳಿ
ಮಂಗಳೂರಿನಲ್ಲಿ ಪಕ್ಕಪ್ಲಾನ್ ಡ್ ಅಟ್ಯಾಕ್ ..!ರೌಡಿ ಶೀಟರ್ ಬರ್ಬರ ಹತ್ಯೆ…ವಿಶೇಷ ತಂಡ ರಚನೆ..!
ಶಂಕರಾಚಾರ್ಯರ ಹೊಸ ಯೋಜನೆ ದೇಶವನ್ನೇ ಚರ್ಚೆಗೆ ತಳ್ಳಿದ ಕಾರಣ ಏನು?Go-LXಒಂದು ಕ್ಲಿಕ್‌ನಲ್ಲಿ ಹಸು ಮಾರಾಟ…
Maths hate ಮಾಡ್ತಿರಾ ? ಹಾಗಾದ್ರೆ ಈ ವರದಿ ನೋಡಿ ಸಮಸ್ಯೆ ನಿಮ್ಮಲ್ಲಿಲ್ಲ … research ಹೇಳುತ್ತೆ ಸಂಖ್ಯೆಗಳಲ್ಲಿ ಇದೆ!”
🚨 “ಮಂಗಳೂರು ಜಿಲ್ಲಾಕಾರಾಗೃಹದಲ್ಲಿ ಗಲಾಟೆ: ಜೈಲು ಅಧೀಕ್ಷಕರ ಮೇಲೆಯೇ ಕೈದಿಗಳ ಹಲ್ಲೆಯತ್ನ!”
ಬೇಜವಾಬ್ದಾರಿ ಸ್ಟೇಟ್ಮೆಂಟ್ ಪಾಸ್ ಮಾಡಿದ ಕೇಂದ್ರ ಸಚಿವ- ಜೋಶಿ
ಒಂದೇ ಫ್ಲಾಟ್ ಇಬ್ಬಿಬ್ಬಿರ ಹೆಸರಲ್ಲಿ ..!ಡಬಲ್ ಡಾಕ್ಯುಮೆಂಟ್ ದಂಧೆ ಬಯಲು –ಕೋಟಿ ಕೋಟಿ ವಂಚನೆ ಮಾಡಿ ಆರೋಪಿ ಪರಾರಿ! ರಿಯಲ್ ಎಸ್ಟೇಟ್ ಶಾಕ್….
ಕನಕಪುರ ಬಂಡೆ ಬಿಜೆಪಿಗೆ ಎಂಬ ಬೋಗಸ್ ಸುದ್ದಿ
AI ಹವಾ-ಬೇಗನೆ ಫೈನಾನ್ಷಿಯಲ್ ಇಂಡಿಪೆಂಡೆಂಟ್ ಆಗೋ ಟ್ರೆಂಡ್- ಕೈಬಿಟ್ಟ  ಓದು!! ಇದು ಗಂಭೀರ ಸೂಚನೆ….
ಬಾಲಗರ್ಭಿಣಿಯರ ಸಂಖ್ಯೆ 5975….!!
ರಾಪಿಡೊ ಚಾಲಕನ ಖಾತೆಯಲ್ಲಿ 300 ಕೋಟಿ ರೂ. ವಹಿವಾಟು! ಶಾಕ್ ಅದ ED
ಎಸ್ ಪಿ ಅರುಣ್ ಕುಮಾರ್ ಗೆ ಮುಖ್ಯಮಂತ್ರಿ ಪದಕ
ನ್ಯಾಯಾಂಗಕ್ಕೆ ಕಳಂಕ ತರುವುದನ್ನು ನೋಡಿಯೂ ಕೈಕಟ್ಟಿ ಕೂರಲಾಗದು
ಶೈಕ್ಷಣಿಕ ವರ್ಷ ಆರಂಭ, ನೋಟ್‌ಬುಕ್‌ನಿಂದ ಆಟೋವರೆಗೆ ಎಲ್ಲ ಖರ್ಚು ಗಗನಕ್ಕೆ….ಪೋಷಕರಿಗೆ ದುಬಾರಿ ಹೊರೆ
ಧುರಂಧರ್ 2 ಕ್ರೇಜ್ ಓವರ್‌ಫ್ಲೋ ಕಲೆಕ್ಷನ್‌ನಲ್ಲಿಕರ್ನಾಟಕವೇ ಟಾಪ್… ದಕ್ಷಿಣ ಭಾರತದಲ್ಲಿ 300 ಕೋಟಿ ಕ್ಲಬ್!
ಸಾರ್ವಜನಿಕರಲ್ಲಿ ವಿನಂತಿ …!
ಮೂಡಿಗೆರೆ ತಾಲ್ಲೂಕಿನಲ್ಲಿ ಭಾರಿ ಗಾಳಿ-ಮಳೆ ಅಬ್ಬರ
ಸುಳ್ಯ:  ಕರ್ತವ್ಯದಲ್ಲಿದ್ದ ಉಪನ್ಯಾಸಕ ಕುಸಿದು ಬಿದ್ದು ಸಾವು
17ನೇ ಆಯವ್ಯಯ ಮಂಡನೆ ಮಾಡುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ
ಅಕ್ರಮ ಮರಳುಗಾರಿಕೆ, ಕ್ರಮ ಕೈಗೊಂಡ ವೇಣೂರು ಪೊಲೀಸರು
ಕರ್ನಾಟಕ ಎಸ್‌ಎಸ್‌ಎಲ್‌ಸಿ 2026 ಫಲಿತಾಂಶ: ಇತಿಹಾಸದ ಅತ್ಯಧಿಕ ಉತ್ತೀರ್ಣ ಪ್ರಮಾಣ ಮತ್ತು ಟಾಪರ್‌ಗಳ ಸಾಧನೆ
ಇಂದು ಆನ್‌ಲೈನ್ ಔಷಧ ಮಾರಾಟ ವಿರುದ್ಧ ದೇಶವ್ಯಾಪಿ ಆಕ್ರೋಶ!ದಕ್ಷಿಣ ಕನ್ನಡದಲ್ಲಿ 1100 ಮೆಡಿಕಲ್ ಶಾಪ್ ಬಂದ್!
ಯುದ್ಧ: ಯಾವುದೇ ಜಾಗತಿಕ ನಾಯಕರ ಮಾತುಕತೆ ಫಲಪ್ರದವಾಗದೇ?!
ಬ್ರೇಕಿಂಗ್ ನ್ಯೂಸ್
ಸೂರ್ಯನ ತಾಪಕ್ಕೆ ಜೋಗ ಜಲಪಾತ ದೊಡ್ಡ ಬಂಡೆಯೇ ಒಡೆಯಿತು..ಮಾನವನಿಗೆ ಅಪಾಯ ಇನ್ನಷ್ಟು!
ಬೆಳಗಾವಿ ₹4500 ಕೋಟಿ ವಂಚನೆ ಪ್ರಕರಣ – CID ತನಿಖೆಯಿಂದ ಹೊರಬರುತ್ತಿರುವ ಕತ್ತಲೆಯ ಜಾಲ – ಯಾರು ನಿಜವಾದ ಮಾಸ್ಟರ್ ಮೈಂಡ್?
ವೈರಲ್ ವೀಡಿಯೊ ….ನಗು ಆರೋಗ್ಯಕ್ಕೆ ಒಳ್ಳೆಯದು, ಆದ್ರೆ ಹೆಣ್ಣುಮಗುವಿನ ಹೆಣದ ಮುಂದೆ ನಕ್ಕರೆ.. ಏನಂತಾರೆ?ತಮಿಳುನಾಡಿನ ಜನ ಕಣ್ಣೀರಲ್ಲಿರುವಾಗ ಇವರಿಗೆ ಜೋಕ್ಸ್‌ ನೆನಪಾಯ್ತಾ? ಏನದು ಅಂತ ಜೋಕ್ಸ್ …
ಇರಾನ್ ದಾಳಿಗೆ ಬೆಂಜಿಮನೇತನ್ಯಹೋ ಕೊಲ್ಲಲ್ಪಟ್ಟಿದ್ದಾರಾ?