📍 Karavali Maruta
LIVE | CONTACT
ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

“ಅಮ್ಮ”ನ ಕಾರ್ಯಕ್ರಮದಲ್ಲಿ  ಕೇಂದ್ರ ಸಚಿವರಿಂದ ರಾಜಕೀಯ ಭಾಷಣ

ಮಂಗಳೂರಿನ ಬೋಳೂರು ಅಮೃತಾನಂದಮಯಿ ಮಠದಲ್ಲಿ ನಡೆಯುತ್ತಿರುವ ಧಾರ್ಮಿಕ ಹಾಗೂ ಆಧ್ಯಾತ್ಮಿಕ ಮತ್ತು ಸಾಮಾಜಿಕ ಸೇವಾ ಕೈಂಕರ್ಯಾದ  ಕಾರ್ಯಕ್ರಮದ ವೇದಿಕೆಯನ್ನು ತಮ್ಮ ರಾಜಕೀಯ ಲಾಭಕ್ಕೆ ಬಳಸಿಕೊಳ್ಳಲು ಕೇಂದ್ರ ಸಚಿವರು ಯತ್ನಿಸಿದ್ದಾರೆ ಎಂಬ ಆರೋಪ ಕೇಳಿಬರುತ್ತದೆ.

ಇಂದು ಮತ್ತು ನಾಳೆ ಮಾತಾ ಅಮೃತಾನಂದಮಯಿ ದೇವಿ ಇವರ ಸತ್ಸಂಗ ಸೇರಿದಂತೆ ವಿವಿಧ ಧಾರ್ಮಿಕ ಹಾಗೂ ಸೇವಾ ಕಾರ್ಯಗಳ ಚಟುವಟಿಕೆಗಳು ನಗರದ ಬೋಳೂರಿನ ಶ್ರೀ ಮಾತಾ ಅಮೃತಾನಂದಮಯಿ ಮಠದಲ್ಲಿ ಜಗುರುಗುತ್ತಿದೆ.  ಧರ್ಮ ಜಾತಿ ಮತ ಭೇದವಿಲ್ಲದೆ ನಡೆಯುತ್ತಿ ರುವ ಕಾರ್ಯಕ್ರಮದಲ್ಲಿ ಸಹಸ್ರಾರು ಜನರು ಭಕ್ತಿಯಿಂದ ಭಾಗವಹಿಸಿದ್ದಾರೆ. ಎರಡು ದಿನದ ಈ ಕಾರ್ಯಕ್ರಮದಲ್ಲಿ ಸುಮಾರು 50 ಸಾವಿರಕ್ಕೂ ಹೆಚ್ಚು ಜನರು ಭಾಗವಹಿಸಲಿದ್ದಾರೆಂದು ಆಯೋಜಕರು ತಿಳಿಸಿದ್ದಾರೆ.

ಇಂತಹ ಕಾರ್ಯಕ್ರಮದ ಸಾರ್ವಜನಿಕ ವೇದಿಕೆಯಲ್ಲಿ, ವಿವಿಧ ಗಣ್ಯರು ಭಾಗವಹಿಸಿದ್ದರು. ಅದರಲ್ಲೂ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಕರ್ನಾಟಕ ವಿಧಾನಸಭೆಯ ಸಭಾಪತಿ ಯುಟಿ ಖಾದರ್, ಸಂಸದ ಬ್ರಿಜೇಶ್ ಟೌಟ, ಶಾಸಕ ಯಶ್ ಪಾಲ್ ಸುವರ್ಣ, ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

ಇಂತಹ ವೇದಿಕೆಯನ್ನು, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿಯವರು  ರಾಜಕೀಯೆತರ ಹಾಗೂ ಜಾತಿ ಮತವಿಲ್ಲದ ವೇದಿಕೆಯನ್ನು ತಮ್ಮ ರಾಜಕೀಯ ಲಾಭಕ್ಕೆ ಬಳಸಿಕೊಳ್ಳಲು ಯತ್ನಿಸಿದರು ಎನ್ನುವ ಗಂಭೀರ ಆರೋಪ ಕೇಳಿಬಂದಿದೆ.

ಸಚಿವ ಪ್ರಹಲ್ಲಾದ್ ಜೋಶಿ ಅವರು, ತಮ್ಮ ಭಾಷಣದ ಪ್ರಾರಂಭದಲ್ಲಿ ಮಾತಾ ಅಮೃತಾನಂದಮಯಿ ಅವರ ಆಧ್ಯಾತ್ಮಿಕ ಚಿಂತನೆ ಹಾಗೂ ಜ್ಞಾನಾರ್ಜನೆಯ ವಿಚಾರವಾಗಿ ಪ್ರಶಂಶಿಸಿ ಮಾತನಾಡಿದರು. ಬಡ ಮೀನುಗಾರರ ಕುಟುಂಬದಲ್ಲಿ ಜನಿಸಿದ ಅಮ್ಮನವರು, ಇವತ್ತು ಜಗತ್ತಿಗೆ ಜ್ಞಾನವನ್ನು ಕೊಡುತ್ತಿರುವಂತಹ ಕರುಣಾಮಯಿ  ಅಮ್ಮ ಆಗಿದ್ದಾರೆ ಎಂದು ಹೇಳಿದ ಸಚಿವರು, ಸಾಕಷ್ಟು ಬಡ ಕುಟುಂಬಗಳಿಗೆ ಸೂರನ್ನು ಕೊಟ್ಟಿದ್ದಾರೆ, ಉಚಿತ ಶಿಕ್ಷಣವನ್ನು ಕೊಡುತ್ತಿದ್ದಾರೆ, ಆರೋಗ್ಯ ಭಾಗ್ಯ ಕರುಣಿಸುತ್ತಿದ್ದಾರೆ ಎಂದು ಪ್ರಶಾಂತಿಸಿದರು. ಆನಂತರ ಮಾತನಾಡಿದ್ದು ಮಾತ್ರ ಸರಿಯಲ್ಲ ಅನ್ನೋದು ಸಾರ್ವಜನಿಕರಿಂದ ಕೇಳಿ ಬಂತು. 

ಅಷ್ಟಕ್ಕೂ ಏನು ಮಾತನಾಡಿದರು? ಈ ವೇದಿಕೆಗೆ ಬರುವುದಕ್ಕಿಂತ ಮೊದಲು ಅಮ್ಮನವರನ್ನು ಭೇಟಿಯಾದಾಗ ಅಮ್ಮನವರು ನನ್ನಲ್ಲಿ ಹೇಳುತ್ತಾರೆ. ಈಗ ನೀವು ತುಂಬಾ ಕಷ್ಟವನ್ನ ಎದುರಿಸುತ್ತಿದ್ದೀರಿ. ಇಡೀ ಜಗತ್ತು ಅನೇಕ ವಿಚಾರದಿಂದ ಕಷ್ಟದಲ್ಲಿದೆ. ಮೋದಿಯವರು ಭಾರತವನ್ನು ಆ ಕಷ್ಟದಿಂದ ತಪ್ಪಿಸುವುದಕೋಸ್ಕರ ಶ್ರಮ ಪಡುತ್ತಿದ್ದಾರೆ. ಅವರ ಶ್ರಮಕ್ಕೆ ಬಲವಾಗಿ ನಾವು ನಿಮ್ಮ ಜೊತೆಗೆ ಇದ್ದೇವೆ ಯಾವುದಕ್ಕೂ ಹೆದರುವುದು ಬೇಡ. ಮೋದಿಯವರಿಗೆ ನಮ್ಮ ಸಂದೇಶ ತಿಳಿಸಿ ಎಂದು ನನಗೆ  ಅಮ್ಮ ಹೇಳಿದರು ಎಂದು ವೇದಿಕೆಯಲ್ಲಿ ಭಾಷಣ ಮಾಡಿದರು. ಈ ಭಾಷಣಕ್ಕೆ ಒಂದಷ್ಟು ಚಪ್ಪಾಳೆಯು ಬಂತು. ಹಾಗೆಯೇ ಮತ್ತೊಂದು ಕಡೆಯಲ್ಲಿ ಈ ಭಾಷಣದ ಬಗ್ಗೆ ಅಪಸ್ವರ ಎದ್ದಿದ್ದು ಅಲ್ಲಲ್ಲಿ ಕಂಡುಬಂತು.

ಸಚಿವರು  ಧಾರ್ಮಿಕ ಸಾಮಾಜಿಕ ಆಧ್ಯಾತ್ಮ ವಿಚಾರವಾಗಿ ಸೇವೆಯ ವಿಚಾರವಾಗಿ ಮಾತನಾಡಿದ್ದು ಚೆನ್ನಾಗಿತ್ತು, ಆದರೆ ಅವರ ಭಾಷಣದ ಕೊನೆಯಲ್ಲಿ ಚುನಾವಣಾ ಭಾಷಣದ ತರ ಮಾತನಾಡಿದ್ದು ಸರಿಯಲ್ಲ ಎಂಬ ಮಾತು ಕೇಳಿ ಬಂತು. ಪಕ್ಷದ ವೇದಿಕೆಯಲ್ಲಿ ಅವರು ಇಂತಹ ಮಾತುಗಳನ್ನಾಡಿಕೊಳ್ಳಲಿ ಅದು ಬಿಟ್ಟು ಅಮ್ಮನ ಕಾರ್ಯಕ್ರಮದ ವೇದಿಕೆಯಲ್ಲಿ ಸಚಿವರು ಈ ರೀತಿಯ ಮಾತನಾಡಿದ್ದು ಸರಿಯಲ್ಲ ಎಂಬುದು ಅವರ ಅಭಿಪ್ರಾಯ.

COMMENTS

Login with Gmail to comment

ಇನ್ನಷ್ಟು ಸುದ್ದಿ

17 ವರ್ಷದ ಯುವಕ ಸಂಸತ್ತಿನ ಕದ ತಟ್ಟಬಲ್ಲ ಎಂದಾದರೆ, ನಿಮ್ಮ ಧ್ವನಿಗೆ ಎಷ್ಟು ಶಕ್ತಿಯಿದೆ ಯೋಚಿಸಿ!..ವ್ಯವಸ್ಥೆಯ ಲೋಪದ ವಿರುದ್ಧ ಧ್ವನಿ ಎತ್ತದಿದ್ದರೆ ಬದಲಾವಣೆ ಸಾಧ್ಯವಿಲ್ಲ.
ಸರ್ಕಾರಿ ಆಸ್ಪತ್ರೆಗಳಲ್ಲಿ ನಿರ್ಲಕ್ಷ್ಯಕ್ಕೆ ಬ್ರೇಕ್? ರೋಗಿಗಳ ಹಕ್ಕು ರಕ್ಷಣೆಗೆ 24×7 ನೇರ ಹೆಲ್ಪ್‌ಲೈನ್ – ಆರೋಗ್ಯ ಸಚಿವ ಯು.ಟಿ. ಖಾದರ್ ಮಹತ್ವದ ಘೋಷಣೆ
Top 5, ಹೆಚ್ಚು ಅನುದಾನ ಪಡೆದ ಇಲಾಖೆಗಳು ಯಾವವು ಗೊತ್ತಾ?
ಕಾಂಗ್ರೆಸ್ ಜನರ ವಿಶ್ವಾಸದಿಂದ ದಿನದಿಂದ ದಿನಕ್ಕೂ ದೂರ ಹೋಗುತ್ತಿರುವುದಕ್ಕೆ ಸಾಕ್ಷಿನೇ ಇದು
ಚುನಾವಣಾ ಆಯೋಗ ಸರ್ವಾಧಿಕಾರಿಯಾಗುತ್ತಿದೆ ಎಂಬ ಅನುಮಾನದ ಸುತ್ತ….
ಉಪಚುನಾವಣೆ ಮುಗಿಯುತಿದ್ದಂತೆಯೇ, ವಿದ್ಯುತ್ ದರ ಏರಿಸುತ್ತಿರುವ ರಾಜ್ಯ ಸರ್ಕಾರ
ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ….!!!!
ಆಯುಷ್ ಎಚ್ಚರಿಕೆ ಬಳಿಕ ಅಶ್ವಗಂಧ ನಿಯಂತ್ರಣ ಕ್ರಮಕ್ಕೆ ತಡೆ: ಹೈಕೋರ್ಟ್ ಮಹತ್ವದ ಆದೇಶ
ಬೆಂಗಳೂರಿನಲ್ಲಿ ಉದ್ಯಮಿಯ₹1.9 ಕೋಟಿ ದರೋಡೆ:ಬೆಚ್ಚಿಬೀಳಿಸಿದ ಥ್ರಿಲ್ಲರ್ ಸಿನಿಮಾವನ್ನೇ ಮೀರಿಸಿದ ಸಸ್ಪೆನ್ಸ್!
ಇತಿಹಾಸ ಸೇರಿತು ಮಂಗಳೂರಿನ ಮೋತಿ ಮಹಲ್…..
ಇತಿಹಾಸ ಸೃಷ್ಟಿಸಿದ ಈಶಾಂಕ್ ಸಮುದ್ರವನ್ನೇ ಸವಾಲಾಗಿ ತೆಗೆದುಕೊಂಡ 7 ವರ್ಷದ ಹೀರೋ ..!
ತೆರಿಗೆ ನಮ್ಮದು… ಪಾಲು ಬೇರೆ ರಾಜ್ಯಗಳಿಗೆ!
ಬಂಗಾಳ ಚುನಾವಣೆ ಫಲಿತಾಂಶವೇ ಬದಲಾಗಿತ್ತಾ?ಬಂಗಾಳ ರಾಜಕೀಯದಲ್ಲಿ ಹೊಸ ಬಾಂಬ್!ಸುಪ್ರೀಂ ಕೋರ್ಟ್ ಮುಂದೆ ಬಿಜೆಪಿ ಜಯದ ಮೇಲೆ ಟಿಎಂಸಿ ದೊಡ್ಡ ಪ್ರಶ್ನೆ!
ಹಾರ್ಮುಜ್ ಬಳಿ ಹಡಗುಗಳ ಹಿಂತಿರುಗುವ ಸರಣಿ!ಜಾಗತಿಕ ತೈಲ ಸರಬರಾಜಿಗೆ ಶಾಕ್ ⚠️
HSRP ರಿಲೀಫ್ + PUCC ಫೈನ್ ಮುಕ್ತ…ಡೀಟೇಲ್ಸ್ ಇಲ್ಲಿದೆ ಕರ್ನಾಟಕದ ಎಲ್ಲ ಡ್ರೈವರ್‌ಗಳಿಗೆ ಡಬಲ್ ಗುಡ್ ನ್ಯೂಸ್!???
ಕೆತ್ತಿಕಲ್‌ನಿಂದ ಚಾರ್ಮಾಡಿವರೆಗೆ ಅಪಾಯದ ಗಂಟೆ! ಭೂಕುಸಿತ ಭೀತಿಯಲ್ಲಿ ಕರಾವಳಿ ರಸ್ತೆಗಳು !ಮಳೆ ಬಂದ ಮೇಲೆ ಸಭೆ, ಪರಿಶೀಲನೆ… ಆದರೆ ಮುನ್ನೆಚ್ಚರಿಕೆ ಎಲ್ಲಿದೆ?
ಉಡುಪಿ ನಗರ ಅಭಿವೃದ್ಧಿ ಪ್ರಾಧಿಕಾರ ಮತ್ತು ನಗರ ಸಭೆ ಎರಡೂ ಕಮಾಯಿಗೆ ಕುಳಿತು ಕೊಂಡಿದೆಯಾ?
ರಾಜಕೀಯ ಸುದ್ದಿ ಅಂದರೆ ಬೋರ್ ಅಂತ ಅನ್ನಿಸುವರಿಗೆ ಇದು ಒಂದು ಪಕ್ಕಾ ಎಂಟರ್‌ಟೈನ್‌ಮೆಂಟ್ ಎಪಿಸೋಡ್!!!
ಹಾರ್ಮುಜ್‌ನಲ್ಲಿ ಹಡಗು ಸಂಚಾರ ಹೆಚ್ಚಳ—ಇಂಧನ ಪೂರೈಕೆಗೆ ದೊಡ್ಡ ಮುನ್ನಡೆ 🚢
ಹೆತ್ತ ಮಗಳನ್ನೇ ಉಸಿರುಗಟ್ಟಿಸಿ ಕೊಂದ  ಪಾಪಿ ತಾಯಿ
24 ಭಾರತೀಯರಿದ್ದ ಹಡಗಿನ ಮೇಲೆ ಅಮೆರಿಕಾ ದಾಳಿ: 3 ನಾವಿಕರ ಜೀವ ಬಲಿ
ಮಂಗಳೂರು ಶಾಕ್ ! ನೇತ್ರಾವತಿ ತೀರದ ನದಿಯಲ್ಲಿ ತೇಲಿ ಬಂದ ರಾಶಿ ರಾಶಿ ಆಧಾರ್ ಕಾರ್ಡ್‌ಗಳು !!!ಹೊಣೆ ಯಾರು?
ಕದನ ವಿರಾಮ ಚೂರುಚೂರು-ಮಧ್ಯಪ್ರಾಚ್ಯ ಮತ್ತೆ ಯುದ್ಧದ ಅಂಚಿನಲ್ಲಿ!ಜೋರ್ಡಾನ್, ಬಹ್ರೇನ್, ಕುವೈತ್‌ನಲ್ಲಿ ಕ್ಷಿಪಣಿ ಅಲರ್ಟ್ !!
ಮಹಿಳೆಯ ಮೇಲೆ ಮಾರಣಾಂತಿಕ ಹಲ್ಲೆ
ಮಂಗಳೂರು ನೀರಿನ ಸಂಕಷ್ಟ:ಮಳೆಯಿಲ್ಲದೆ ಮುಂದಿನ 1–2 ತಿಂಗಳು ಗಂಭೀರ ನೀರಿನ ಕೊರತೆ ಸಂಭವ ಸಾಧ್ಯತೆ.
ಪಿಸ್ತೂಲ್ ತೋರಿಸಿ ಬೆದರಿಸಿ ಪರಾರಿಯಾಗಿದ್ದ ಯುವಕ ಬಂಧನ
ಎಲ್ಲೆಡೆ LPG ಗ್ಯಾಸ್ ಸಿಲಿಂಡರ್ ಸಂಕಷ್ಟ: ಇದು ಜೀವನೋಪಾಯದ ಪ್ರಶ್ನೆ… ತಕ್ಷಣ ಸಮರ್ಪಕ ಕ್ರಮ ಸರ್ಕಾರದ ಹೊಣೆ.
ಕೊಲೆ ಆರೋಪಿಯ ದೂರುದಾರನ ವಿಷ ಸೇವನೆಯ ಬಗ್ಗೆ  ಸ್ಪಷ್ಟನೆ
ವಿಟ್ಲ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಕಚೇರಿಯಲ್ಲಿ ಗಲಾಟೆ:
ಹೈ ಪ್ರೋಫೈಲ್ ಕೇಸ್ ಬಿಹಾರದಿಂದ UPವರೆಗೆ CID ಚೇಸ್… ಕೊನೆಗೂ ಸಿಕ್ಕಿದ ಸುಪಾರಿ ಕಿಲ್ಲರ್ಸ್!ಸಿನಿಮಾ ಸ್ಟೈಲ್ ಮರ್ಡರ್ ಮಿಸ್ಟರಿ: ಹೈಟೆಕ್ ಪ್ಲಾನ್ ಮಾಡಿದ ಹಂತಕರು…