📍 Karavali Maruta
LIVE | CONTACT
ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

ಅಲ್ಪಸಂಖ್ಯಾತರ ಘಟಕ ಬರ್ಕಾಸ್ತು- ಡಿಕೆ ಶಿವಕುಮಾರ್ ಗಟ್ಟಿ ನಿರ್ಧಾರ.

ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಅಲ್ಪಸಂಖ್ಯಾತ ಘಟಕವನ್ನು ತಕ್ಷಣವೇ ಬರ್ಕಾಸ್ತು ಮಾಡುವ ಘೋಷಣೆಯನ್ನು ಕೆಪಿಸಿಸಿ ಅಧ್ಯಕ್ಷರಾದ ಡಿಕೆ ಶಿವಕುಮಾರ್ ಮಾಡಿದ್ದಾರೆ.

ವಿಧಾನಪರಿಷತ್ ಸದಸ್ಯ ಅಬ್ದುಲ್ ಜಬ್ಬಾರ್, ಈಗಾಗಲೇ ರಾಜೀನಾಮೆ ಸಲ್ಲಿಸಿದ್ದಾರೆ. ರಾಜೀನಾಮೆ ಸಲ್ಲಿಸುವಾಗ ಒಂದಷ್ಟು ಸಿಂಪತಿ ಗಿಟ್ಟಿಸಿಕೊಳ್ಳುವ ಮಾತನ್ನಾಡಿದ್ದರು. ಈ ಸಂದರ್ಭವನ್ನು ಇನ್ನೂ ಕೆಲವರು ತಮ್ಮ ಬೇಳೆ ಬೇಯಿಸಿಕೊಳ್ಳಲು  ಬಳಸುವ ಪ್ರಯತ್ನ ಮಾಡಿದರು. ಅಂದರೆ, ಅಬ್ದುಲ್ ಜಬ್ಬಾರ್ ಅವರ ರಾಜೀನಾಮೆಗೆ ಆಕ್ರೋಶ ವ್ಯಕ್ತಪಡಿಸುವ ಹಾಗೆ ತಾವೂ ರಾಜೀನಾಮೆ ಕೊಡುತ್ತೇವೆ ರಾಜೀನಾಮೆಯ ನಾಟಕ ಶುರು ಮಾಡಿದ್ದರು. ಹೇಗಂದರೂ ರಾಜೀನಾಮೆ ಅಕ್ಸೆಪ್ಟ್ ಆಗುವುದಿಲ್ಲ, ನಮ್ಮನ್ನು ಅವರು ಸಂತೈಸುತ್ತಾರೆ ಅಂತಲೇ ಅವರ ಪ್ಲಾನ್ ಆಗಿತ್ತು. ಈ ಸಂದರ್ಭವನ್ನು ತಮ್ಮ ಲಾಭಕ್ಕೆ ಬಳಸಿಕೊಳ್ಳಬೇಕು ಅನ್ನುವುದು ಆ ಎಲ್ಲಾ ನಾಟಕಕಾರರ ಲೆಕ್ಕಾಚಾರ ಆಗಿತ್ತು. ಅವರ ಮಾತನ್ನು ಕೇಳುತ್ತಾ ಹೋದರೆ  ಅದರಿಂದ ಆಗುವಬಹುದಾದ ಡ್ಯಾಮೇಜ್ ಎಷ್ಟಾಗಬಹುದು ಎನ್ನುವುದನ್ನು  ಅರಿತ ಕೆಪಿಸಿಸಿ ಅಧ್ಯಕ್ಷ ಹಾಗೂ ಕರ್ನಾಟಕದ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಗಟ್ಟಿ ಮನಸ್ಸು ಮಾಡಿ, ಇಡೀ ಅಲ್ಪಸಂಖ್ಯಾತಕ ಘಟಕವನ್ನೇ ತತಕ್ಷಣದಿಂದಲೇ  ಬರ್ಕಾಸ್ತು ಮಾಡಿ ಆದೇಶ ಹೊರಡಿಸಿದ್ದಾರೆ.

ಇತ್ತ, ಶಾಸಕ ರೀಜ್ವಾನ್ ಹರ್ಷದ್ ತಮ್ಮ ಒಪಿನಿಯನ್ನನ್ನು ಗಟ್ಟಿಯಾಗಿ ಹೇಳಿದ್ದಾರೆ. ನಮಗೆ ಪಕ್ಷಕ್ಕಿಂತ ದೊಡ್ಡದು ಯಾವುದೂ ಇಲ್ಲ. ಪಕ್ಷವು ಎಲ್ಲರಿಗೂ ಒಮ್ಮೆಲೆನೆ ಮಣೆ ಹಾಕಲು ಆಗುವುದಿಲ್ಲ. ನಿಜವಾಗಿಯೂ ದಾವಣಗೆರೆ ದಕ್ಷಿಣದಲ್ಲಿ ಸಮುದಾಯದವರಿಗೆ ಟಿಕೆಟ್ ಕೇಳಿದ್ದು ನಿಜ. ಆದರೆ ಅಲ್ಲಿ ಒಬ್ಬ ವ್ಯಕ್ತಿಗೇ ಟಿಕೆಟ್ ನೀಡಬೇಕು ಎಂಬ ಒತ್ತಡ ಹೆಚ್ಚಾಯಿತು. ಸಮುದಾಯದ ಮೂರು ನಾಲ್ಕು ಕ್ಯಾಂಡಿಡೇಟ್ ಗಳ ಹೆಸರನ್ನು ಕಳುಹಿಸಿದ್ದರೆ ಆಗ ಅವು ಪರಿಗಣನೆಗೆ ಒಳಪಡುತ್ತಿದ್ದವು. ಆದರೆ ಇಲ್ಲಿ, ಒಬ್ಬ ವ್ಯಕ್ತಿಗೋಸ್ಕರ ಸಮುದಾಯದ ಹೆಸರನ್ನು ಬಳಸಿಕೊಳ್ಳುತ್ತಿರುವುದು ಮೇಲ್ನೋಟಕ್ಕೆ ಕಂಡು ಬಂತು. ಅದು ಸರಿಯಲ್ಲ ಎಂದು ಸ್ವತಹ ಶಾಸಕ ರಿಜ್ವಾನ್ ಹರ್ಷದ್ ಆರೋಪಿಸಿದ್ದಾರೆ. ಈ ರೀತಿಯಾಗಿ ಪ್ಲಾನ್ ಮಾಡಿದ ಒಬ್ಬ ಮಹಾನ್ ವ್ಯಕ್ತಿ ಇಲ್ಲಿದ್ದಾರೆ. ಪಕ್ಷದ ಅಧಿಕೃತ ಅಭ್ಯರ್ಥಿಯನ್ನು ಸೋಲಿಸುವ ನಿಟ್ಟಿನಲ್ಲಿ ಕೆಲಸ ಮಾಡಿದರವರು. ಇಂಥವರು ಪಕ್ಷದಲ್ಲೇ ಇರಬಾರದು. ಇದ್ದರೆ ಪಕ್ಷಕ್ಕೆ ಡ್ಯಾಮೇಜ್ ಖಚಿತ. ಪಕ್ಷದ ಒಳಗಿದ್ದು ಕೊಂಡೆ ಪಕ್ಷಕ್ಕೆ ಡ್ಯಾಮೇಜ್ ಮಾಡುತ್ತಿರುವ ಇಂತಹ ವ್ಯಕ್ತಿಗಳ ವಿರುದ್ಧ ಪಕ್ಷವು ಕಠಿಣ ಕ್ರಮ ತೆಗೆದುಕೊಳ್ಳಲೇಬೇಕು ಎಂಬ ಆಗ್ರಹವನ್ನು ಶಾಸಕ ರಿಜ್ವಾನ್ ಮಾಡಿದ್ದಾರೆ. ಅವರು ಸಚಿವ ಜಮೀರ್ ಅಹಮದ್ ಹೆಸರನ್ನು ಹೇಳದೆಯೇ ಈ ರೀತಿಯ ಆಕ್ರೋಶದ ಮಾತನ್ನು ಆಡಿದ್ದಾರೆ.

ಸಚಿವ ಜಮೀರ್ ಅಹಮದ್ ಮುಖ್ಯಮಂತ್ರಿಗಳ ಆಪ್ತ ವಲಯದಲ್ಲಿ ಕಾಣಿಸಿಕೊಳ್ಳುವಂತಹ ವ್ಯಕ್ತಿ. ಈ ವ್ಯಕ್ತಿಯ ವಿಚಾರದಲ್ಲಿ ಪಕ್ಷದ ಅನೇಕ ಮುಸ್ಲಿಂ ನಾಯಕರಲ್ಲಿ ಅಸಮಾಧಾನವಿದೆ. ಮುಖ್ಯಮಂತ್ರಿಗಳ ವಿಶ್ವಾಸವನ್ನು ಗಳಿಸಿಕೊಂಡು ತಮ್ಮನ್ನು ತಾವು ಮುಸ್ಲಿಂ ಸಮಾಜದ ಪ್ರಶ್ನತೀತ  ನಾಯಕ ಅಂತ ಬಿಂಬಿಸಿಕೊಳ್ಳಲು ಹೋಗುತ್ತಿರುವ ಬಗ್ಗೆ ಅಸಮಾಧಾನವಿದೆ. ಮೂಲ ಕಾಂಗ್ರೆಸ್ಸಿನ ಯಾವೊಬ್ಬ ನಾಯಕರೂ ಸಹ, ಪಕ್ಷಕ್ಕಿಂತ ಜಾತಿ ಹಾಗೂ ಸಮುದಾಯವೇ ದೊಡ್ಡದು ಅಂತ ಹೇಳುವುದಿಲ್ಲ. ಹಾಗೆಯೇ ಯಾರು ಸಹ, ಪಕ್ಷದ ಅಭ್ಯರ್ಥಿಯನ್ನು ಪಕ್ಷದಲ್ಲಿ ಇದ್ದುಕೊಂಡೆ ಸೋಲಿಸುವಂತಹ ಕೆಲಸ ಮಾಡುವುದಿಲ್ಲ. ಆದರೆ ದುರ್ದೈವ, ದಾವಣಗೆರೆ ಉಪಚುನಾವಣೆಯಲ್ಲಿ ಅಂತಹ ಪ್ರಯತ್ನವನ್ನು ನಮ್ಮವರೇ ಒಂದಿಷ್ಟು ಜನರು ಮಾಡಿದ್ದಾರೆ ಎಂದು ಅವರುಗಳು ಹೇಳುತ್ತಿರುವುದರ ಹಿಂದೆ ಅಸಮಾಧಾನದ ಬುಗ್ಗೆಯೇ ಇದೆ.

ಇದೆಲ್ಲವದವನ್ನು ಗಮನಿಸಿ ಕೆಪಿಸಿಸಿ ಅಧ್ಯಕ್ಷರು, ತಕ್ಷಣವೇ ಪಕ್ಷದ ಅಲ್ಪಸಂಖ್ಯಾತ ಘಟಕವನ್ನು ವಿಸರ್ಜಿಸಿದ್ದಾರೆ. ಹೊಸದಾಗಿ ಆ ಘಟಕಕ್ಕೆ ನೇಮಕ ಪ್ರಕ್ರಿಯೆ ನಡೆಯುತ್ತದೆ ಎಂದು ಅವರು ಈ ಸಂದರ್ಭದಲ್ಲಿ ತಿಳಿಸಿದ್ದಾರೆ ಕೂಡ.

ಡಿಕೆ ಶಿವಕುಮಾರ್ ಅವರ ಈ ನಿರ್ಧಾರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಯಾವ ರೀತಿಯ ದಾಳ ಉರುಳಿಸುತ್ತಾರೆ ನೋಡಬೇಕಿದೆ. ತಮ್ಮ ಆಪ್ತ ವಲಯದಲ್ಲಿರುವ ಜಮೀರ್ ಅಹ್ಮದ್ ಉಳಿಸಿಕೊಳ್ಳಲು ಏನು ಮಾಡಬಹುದು ಎಂಬ ಕುತೂಹಲವೂ ಇದೆ. ಈಗಾಗಲೇ ತಮ್ಮ ವಲಯದಲ್ಲಿದ್ದ ರಾಜಣ್ಣರನ್ನು ಕಳೆದುಕೊಂಡಾಗಿದೆ. ಈಗ ಜಮೀರ್ ಅವರನ್ನು ಕಳೆದುಕೊಂಡರೆ ತಮ್ಮ ಹಿಡಿತ ಸಡಿಲವಾಗುತ್ತಿದೆ ಎಂಬ ಮೆಸೇಜ್ ಹೋಗುವುದರಿಂದಾಗಿ ಡಿಕೆ ಶಿವಕುಮಾರ್ ತಂಡ ಬಲಿಷ್ಠವಾಗುತ್ತದೆ. ಇದು ತಮ್ಮ ರಾಜಕೀಯ ಹಿಡಿತದ ಮೇಲೆ ದೊಡ್ಡ ಪ್ರಭಾವ ಬೀರುತ್ತದೆ ಎಂಬುದನ್ನು ಅರಿಯದಷ್ಟು ದಡ್ಡರಲ್ಲ. ಹಾಗಾಗಿ ಈಗ ಯಾವ ರೀತಿಯ ದಾಳ ಉರುಳಿಸಬಹುದು ಎಂಬುದೇ ಪ್ರಶ್ನೆಯಾಗಿದೆ

COMMENTS

Login with Gmail to comment

ಇನ್ನಷ್ಟು ಸುದ್ದಿ

ನಾಟಕ ಕಲಾವಿದೆ ಸೌಮ್ಯ ಶೆಟ್ಟಿ ಬಂಧನ
ಉಂಡ ಮನೆಗೇ ಕನ್ನ ಹಾಕಿದ ದ್ರೋಹಿಗಳು 
ನ್ಯಾಯಾಂಗಕ್ಕೆ ಕಳಂಕ ತರುವುದನ್ನು ನೋಡಿಯೂ ಕೈಕಟ್ಟಿ ಕೂರಲಾಗದು
ರಾಜಿ ಮಾಡಲು ಬಂದವನಿಗೇ ಚೂರಿ ಇರಿತ
ಮಹಿಳಾ ದಿನಾಚರಣೆಯಲ್ಲಿ ಮಹಿಳಾ ಸಂಪನ್ಮೂಲ ಕೇಂದ್ರ ಉದ್ಘಾಟನೆ, ಜಾಗೃತಿ ಕಾರ್ಯಕ್ರಮ
ಅಕ್ರಮ ಪ್ರವೇಶ, ದೌರ್ಜನ್ಯ, ಹಾಗೂ ಕೃಷಿ ಚಟುವಟಿಕೆಗೆ ತಡೆಯ ಬಗ್ಗೆ ದೂರು ದಾಖಲು
ಸಭೆಯ ನಡುವೆ ಬ್ಲಾಕ್ ಅಧ್ಯಕ್ಷ ಕಾಣೆ …ಕಾರ್ಯಕರ್ತರು ಗುಸು ಗುಸು – ಪಿಸುಪಿಸು
ಟೂರಿಸಂ ಡೆವಲಪ್‌ಮೆಂಟ್‌ಗೆ ಅಧಿಕಾರಿಗಳೇ ಮಾರಕ
ಚಿಕ್ಕಸ್ವಾಮಿ-ದೊಡ್ಡಸ್ವಾಮಿ ಭಕ್ತರ ಮಿಲನ! ಕಾಶಿಮಠ ವಿವಾದಕ್ಕೆ ಸಂಯಮೇ೦ದ್ರ ಮದ್ದು
ರೀಲ್ಸ್ ಮಾಡುವ ಕನಸು… ಕ್ಷಣದಲ್ಲೇ ದುರ್ಘಟನೆ,  ಜೀವವನ್ನೇ ಕಳೆದುಕೊಂಡ ಬಾಲಕ.
ಹೆಚ್.ಪಿ.ವಿ. ಚುಚ್ಚು ಮದ್ದಿನ ಬಗ್ಗೆ ಗೊಂದಲ ಬೇಡ: ಜಿಲ್ಲಾ ಆರೋಗ್ಯಾಧಿಕಾರಿ ಸ್ಪಷ್ಟನೆ
ಆಸಿಡ್ ದಾಳಿಗೊಳಗಾದ ಮಹಿಳೆಯರಿಗೆ ₹50 ಸಾವಿರ ಮಾಸಾಶನ: ಆಸಿಡ್ ಮಾರಾಟಕ್ಕೆ ಕಡಿವಾಣ ಹಾಕಲು ಸರ್ಕಾರ ಕ್ರಮ
ಸನ್ಯಾಸಿಗೆ ಕಾಡಿದ ಸುಂದರಿಯ  ಬಂಧನ
ಮಂಗಳೂರಿನಲ್ಲಿ ವಕೀಲರೊಬ್ಬರ ನಕಲಿ ದುಷ್ಕೃತ್ಯ ಬಯಲಿಗೆ?
🚨 ಸಾರ್ವಜನಿಕರಿಗೆ ತುರ್ತು ಎಚ್ಚರಿಕೆ – ಕಟಪಾಡಿ ರಾಷ್ಟ್ರೀಯ ಹೆದ್ದಾರಿ ಅಪಘಾತ
ರಾಜ್ಯ ಪೊಲೀಸ್ ಇಲಾಖೆಯಲ್ಲಿ “ಕಲೋನಿಯಲ್ ಆರ್ಡರ್ಲಿ” ‘ಆಡಲ್’ (Adal) ಪದ್ದತಿ ರದ್ದು
ಮಂಗಳೂರಿಗರಿಗೆ ಎಚ್ಚರಿಕೆ: ನೀರನ್ನು ಜಾಣ್ಮೆಯಿಂದ ಬಳಸಿ –ಮಾರ್ಚ್ ನಲ್ಲೇ ರೇಷನಿಂಗ್ ಮಾಡುವ ಪರಿಸ್ಥಿತಿ ಇದೆ…
ಕಾರಿಗೆ ಮಹಿಳೆ ಡಿಕ್ಕಿ..ಗುಳಿಗಜ್ಜನೆ ಕಾಪಾಡಿದ್ದ..! ಎದೆ ಜಲ್ಲೆನಿಸುವ ದೃಶ್ಯ
ಹತ್ತು ವರ್ಷದಿಂದ ಪೊಲೀಸರಿಗೆ ಬೇಕಾದ ಆರೋಪಿಯನ್ನು ಕೊನೆಗೂ ಬಂಧಿಸಿದ ಪೊಲೀಸರು
🔴 ಯುದ್ಧದ ಹೊತ್ತಿನಲ್ಲಿ ಮಾನವೀಯ ರಾಜತಾಂತ್ರಿಕತೆ: ಇರಾನ್‌ಗೆ ಭಾರತದಿಂದ ಮೊದಲ ವೈದ್ಯಕೀಯ ನೆರವು:
ಭಾರತ ಮುಸ್ಲಿಂ ದೇಶವಾಗುವುದೇ?- ನಾಳೆ ಪುಸ್ತಕ ಬಿಡುಗಡೆಯ ಕಾರ್ಯಕ್ರಮ
ಇ-ಸಿಗರೇಟ್‌ಗೆ ಭಾರಿ ಡಿಮ್ಯಾಂಡ್ – ಗೋಣಿ ಚೀಲದಲ್ಲಿಸಂಗ್ರಹಿಸಿಟ್ಟ ಆರೋಪಿ ಬಂಧನ..!
🚨 ದೇಶಾದ್ಯಂತ ಉಗ್ರ ಜಾಲದ ಮೇಲೆ ದೊಡ್ಡ ದಾಳಿ: ಕರ್ನಾಟಕದ ಬಳ್ಳಾರಿಯ ಅಬ್ದುಲ್ ಸಲಾಂ ಸೇರಿದಂತೆ 7 ರಾಜ್ಯಗಳಲ್ಲಿ 12 ಮಂದಿ ಬಂಧನ — ಯುವಕರಿಗೆ ಎಚ್ಚರಿಕೆ!
ಐಸಿಸಿ ಟ್ವೆಂಟಿ-20 ವಿಶ್ವಕಪ್ ಮೂಡಿಗೇರಿಸಿಕೊಂಡ ಭಾರತ
ಮಂತ್ರಾಲಯದ ಮಠದ ಹೆಸರಲ್ಲಿ 3 ಲಕ್ಷ ಆಸೆ ತೋರಿಸಿ ವಂಚನೆ..!
8 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ
“ಮಂಜಿನ ನಡುವೆ ಕ್ಷಣಾರ್ಧದಲ್ಲಿ ಮಾಯವಾದ ಮಗಳು”ಶ್ರೀನಂದಾ ಶವವಾಗಿ ಪತ್ತೆ…!
ಮೆಡಿಕಲ್ ಕಾಲೇಜು ಆಸ್ಪತ್ರೆಯಲ್ಲಿ ಭೀಕರ ಅಗ್ನಿ ಅವಘಡ – 10 ರೋಗಿಗಳ ದುರ್ಮರಣ-11 ಸಿಬ್ಬಂದಿಗೆ ಗಾಯ
ಕೊನೆಗೂ ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿದ ನಿತೀಶ್ ಕುಮಾರ್
ಸುಳ್ಯ:  ಕರ್ತವ್ಯದಲ್ಲಿದ್ದ ಉಪನ್ಯಾಸಕ ಕುಸಿದು ಬಿದ್ದು ಸಾವು