📍 Karavali Maruta
  • LOGIN
  • BREAKING
    ‘ಮೇಡ್ ಇನ್ ಮಂಗಳೂರು’ ಹಡಗು ಜರ್ಮನ್ ಸಂಸ್ಥೆಯ ತೆಕ್ಕೆಗೆ; ವಿಶ್ವದ ಗಮನ ಸೆಳೆದ ಚೌಗುಲೆ ಶಿಪ್‌ಯಾರ್ಡ್! ಧಾರವಾಡದಲ್ಲಿ ಭೀಕರ LPG ಸಿಲಿಂಡರ್ ಸ್ಫೋಟ , ಹಲವು ಮೀಟರ್ ದೂರಕ್ಕೆ ಹಾರಿದ ಬೈಕ್‌! ಹಲವರಿಗೆ ಗಾಯ CCTVಯಲ್ಲಿ ಶಾಕಿಂಗ್ ದೃಶ್ಯ ದಯಾಮರಣ ಕೇಳಿದ್ದ ತುಮಕೂರು ರಾಬಿಯಾ ಇನ್ನಿಲ್ಲ …!ಪರಮೇಶ್ವರ್ ಮುಂದೆ ಕಣ್ಣೀರಿಟ್ಟಿದ್ದ ಮಹಿಳೆ ಇಬ್ಬರು ಮಕ್ಕಳೊಂದಿಗೆ ವಿಷಸೇವಿಸಿ ಕೊನೆಯುಸಿರು…‘ಮನೆ’ ಸಿಕ್ಕರೂ ಬದುಕು ಉಳಿಯಲಿಲ್ಲ! ನೇಪಾಳ ದುರಂತ: ಕಂಪ್ಲೀಟ್ ರಿಪೋರ್ಟ್ ಇಲ್ಲಿದೆ…ಕಣ್ಣೆದುರೇ ಕೊಚ್ಚಿಹೋದ ಬದುಕು… ಲೆಕ್ಕಕ್ಕೆ ಸಿಗದ ಸಾವು, ನೋವು!ಪ್ರವಾಹದ ರೌದ್ರದ ನಡುವೆ ಮೃತದೇಹದಿಂದಲೇ ಚಿನ್ನ ಕದಿಯಲು ಯತ್ನ… ಮಾನವೀಯತೆ ಮರೆತ ಕಿರಾತಕರು!ಇಬ್ಬರು ಅರೆಸ್ಟ್! ಮಹಿಳಾ ಕಾನ್ಸ್‌ಟೇಬಲ್ ಮೇಲೆ ಪೊಲೀಸ್ ಠಾಣೆಯಲ್ಲಿ ಮಾರಣಾಂತಿಕ ಹಲ್ಲೆ
    ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

    ಅಲ್ಪಸಂಖ್ಯಾತರ ಘಟಕ ಬರ್ಕಾಸ್ತು- ಡಿಕೆ ಶಿವಕುಮಾರ್ ಗಟ್ಟಿ ನಿರ್ಧಾರ.

    ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಅಲ್ಪಸಂಖ್ಯಾತ ಘಟಕವನ್ನು ತಕ್ಷಣವೇ ಬರ್ಕಾಸ್ತು ಮಾಡುವ ಘೋಷಣೆಯನ್ನು ಕೆಪಿಸಿಸಿ ಅಧ್ಯಕ್ಷರಾದ ಡಿಕೆ ಶಿವಕುಮಾರ್ ಮಾಡಿದ್ದಾರೆ.

    ವಿಧಾನಪರಿಷತ್ ಸದಸ್ಯ ಅಬ್ದುಲ್ ಜಬ್ಬಾರ್, ಈಗಾಗಲೇ ರಾಜೀನಾಮೆ ಸಲ್ಲಿಸಿದ್ದಾರೆ. ರಾಜೀನಾಮೆ ಸಲ್ಲಿಸುವಾಗ ಒಂದಷ್ಟು ಸಿಂಪತಿ ಗಿಟ್ಟಿಸಿಕೊಳ್ಳುವ ಮಾತನ್ನಾಡಿದ್ದರು. ಈ ಸಂದರ್ಭವನ್ನು ಇನ್ನೂ ಕೆಲವರು ತಮ್ಮ ಬೇಳೆ ಬೇಯಿಸಿಕೊಳ್ಳಲು  ಬಳಸುವ ಪ್ರಯತ್ನ ಮಾಡಿದರು. ಅಂದರೆ, ಅಬ್ದುಲ್ ಜಬ್ಬಾರ್ ಅವರ ರಾಜೀನಾಮೆಗೆ ಆಕ್ರೋಶ ವ್ಯಕ್ತಪಡಿಸುವ ಹಾಗೆ ತಾವೂ ರಾಜೀನಾಮೆ ಕೊಡುತ್ತೇವೆ ರಾಜೀನಾಮೆಯ ನಾಟಕ ಶುರು ಮಾಡಿದ್ದರು. ಹೇಗಂದರೂ ರಾಜೀನಾಮೆ ಅಕ್ಸೆಪ್ಟ್ ಆಗುವುದಿಲ್ಲ, ನಮ್ಮನ್ನು ಅವರು ಸಂತೈಸುತ್ತಾರೆ ಅಂತಲೇ ಅವರ ಪ್ಲಾನ್ ಆಗಿತ್ತು. ಈ ಸಂದರ್ಭವನ್ನು ತಮ್ಮ ಲಾಭಕ್ಕೆ ಬಳಸಿಕೊಳ್ಳಬೇಕು ಅನ್ನುವುದು ಆ ಎಲ್ಲಾ ನಾಟಕಕಾರರ ಲೆಕ್ಕಾಚಾರ ಆಗಿತ್ತು. ಅವರ ಮಾತನ್ನು ಕೇಳುತ್ತಾ ಹೋದರೆ  ಅದರಿಂದ ಆಗುವಬಹುದಾದ ಡ್ಯಾಮೇಜ್ ಎಷ್ಟಾಗಬಹುದು ಎನ್ನುವುದನ್ನು  ಅರಿತ ಕೆಪಿಸಿಸಿ ಅಧ್ಯಕ್ಷ ಹಾಗೂ ಕರ್ನಾಟಕದ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಗಟ್ಟಿ ಮನಸ್ಸು ಮಾಡಿ, ಇಡೀ ಅಲ್ಪಸಂಖ್ಯಾತಕ ಘಟಕವನ್ನೇ ತತಕ್ಷಣದಿಂದಲೇ  ಬರ್ಕಾಸ್ತು ಮಾಡಿ ಆದೇಶ ಹೊರಡಿಸಿದ್ದಾರೆ.

    ಇತ್ತ, ಶಾಸಕ ರೀಜ್ವಾನ್ ಹರ್ಷದ್ ತಮ್ಮ ಒಪಿನಿಯನ್ನನ್ನು ಗಟ್ಟಿಯಾಗಿ ಹೇಳಿದ್ದಾರೆ. ನಮಗೆ ಪಕ್ಷಕ್ಕಿಂತ ದೊಡ್ಡದು ಯಾವುದೂ ಇಲ್ಲ. ಪಕ್ಷವು ಎಲ್ಲರಿಗೂ ಒಮ್ಮೆಲೆನೆ ಮಣೆ ಹಾಕಲು ಆಗುವುದಿಲ್ಲ. ನಿಜವಾಗಿಯೂ ದಾವಣಗೆರೆ ದಕ್ಷಿಣದಲ್ಲಿ ಸಮುದಾಯದವರಿಗೆ ಟಿಕೆಟ್ ಕೇಳಿದ್ದು ನಿಜ. ಆದರೆ ಅಲ್ಲಿ ಒಬ್ಬ ವ್ಯಕ್ತಿಗೇ ಟಿಕೆಟ್ ನೀಡಬೇಕು ಎಂಬ ಒತ್ತಡ ಹೆಚ್ಚಾಯಿತು. ಸಮುದಾಯದ ಮೂರು ನಾಲ್ಕು ಕ್ಯಾಂಡಿಡೇಟ್ ಗಳ ಹೆಸರನ್ನು ಕಳುಹಿಸಿದ್ದರೆ ಆಗ ಅವು ಪರಿಗಣನೆಗೆ ಒಳಪಡುತ್ತಿದ್ದವು. ಆದರೆ ಇಲ್ಲಿ, ಒಬ್ಬ ವ್ಯಕ್ತಿಗೋಸ್ಕರ ಸಮುದಾಯದ ಹೆಸರನ್ನು ಬಳಸಿಕೊಳ್ಳುತ್ತಿರುವುದು ಮೇಲ್ನೋಟಕ್ಕೆ ಕಂಡು ಬಂತು. ಅದು ಸರಿಯಲ್ಲ ಎಂದು ಸ್ವತಹ ಶಾಸಕ ರಿಜ್ವಾನ್ ಹರ್ಷದ್ ಆರೋಪಿಸಿದ್ದಾರೆ. ಈ ರೀತಿಯಾಗಿ ಪ್ಲಾನ್ ಮಾಡಿದ ಒಬ್ಬ ಮಹಾನ್ ವ್ಯಕ್ತಿ ಇಲ್ಲಿದ್ದಾರೆ. ಪಕ್ಷದ ಅಧಿಕೃತ ಅಭ್ಯರ್ಥಿಯನ್ನು ಸೋಲಿಸುವ ನಿಟ್ಟಿನಲ್ಲಿ ಕೆಲಸ ಮಾಡಿದರವರು. ಇಂಥವರು ಪಕ್ಷದಲ್ಲೇ ಇರಬಾರದು. ಇದ್ದರೆ ಪಕ್ಷಕ್ಕೆ ಡ್ಯಾಮೇಜ್ ಖಚಿತ. ಪಕ್ಷದ ಒಳಗಿದ್ದು ಕೊಂಡೆ ಪಕ್ಷಕ್ಕೆ ಡ್ಯಾಮೇಜ್ ಮಾಡುತ್ತಿರುವ ಇಂತಹ ವ್ಯಕ್ತಿಗಳ ವಿರುದ್ಧ ಪಕ್ಷವು ಕಠಿಣ ಕ್ರಮ ತೆಗೆದುಕೊಳ್ಳಲೇಬೇಕು ಎಂಬ ಆಗ್ರಹವನ್ನು ಶಾಸಕ ರಿಜ್ವಾನ್ ಮಾಡಿದ್ದಾರೆ. ಅವರು ಸಚಿವ ಜಮೀರ್ ಅಹಮದ್ ಹೆಸರನ್ನು ಹೇಳದೆಯೇ ಈ ರೀತಿಯ ಆಕ್ರೋಶದ ಮಾತನ್ನು ಆಡಿದ್ದಾರೆ.

    ಸಚಿವ ಜಮೀರ್ ಅಹಮದ್ ಮುಖ್ಯಮಂತ್ರಿಗಳ ಆಪ್ತ ವಲಯದಲ್ಲಿ ಕಾಣಿಸಿಕೊಳ್ಳುವಂತಹ ವ್ಯಕ್ತಿ. ಈ ವ್ಯಕ್ತಿಯ ವಿಚಾರದಲ್ಲಿ ಪಕ್ಷದ ಅನೇಕ ಮುಸ್ಲಿಂ ನಾಯಕರಲ್ಲಿ ಅಸಮಾಧಾನವಿದೆ. ಮುಖ್ಯಮಂತ್ರಿಗಳ ವಿಶ್ವಾಸವನ್ನು ಗಳಿಸಿಕೊಂಡು ತಮ್ಮನ್ನು ತಾವು ಮುಸ್ಲಿಂ ಸಮಾಜದ ಪ್ರಶ್ನತೀತ  ನಾಯಕ ಅಂತ ಬಿಂಬಿಸಿಕೊಳ್ಳಲು ಹೋಗುತ್ತಿರುವ ಬಗ್ಗೆ ಅಸಮಾಧಾನವಿದೆ. ಮೂಲ ಕಾಂಗ್ರೆಸ್ಸಿನ ಯಾವೊಬ್ಬ ನಾಯಕರೂ ಸಹ, ಪಕ್ಷಕ್ಕಿಂತ ಜಾತಿ ಹಾಗೂ ಸಮುದಾಯವೇ ದೊಡ್ಡದು ಅಂತ ಹೇಳುವುದಿಲ್ಲ. ಹಾಗೆಯೇ ಯಾರು ಸಹ, ಪಕ್ಷದ ಅಭ್ಯರ್ಥಿಯನ್ನು ಪಕ್ಷದಲ್ಲಿ ಇದ್ದುಕೊಂಡೆ ಸೋಲಿಸುವಂತಹ ಕೆಲಸ ಮಾಡುವುದಿಲ್ಲ. ಆದರೆ ದುರ್ದೈವ, ದಾವಣಗೆರೆ ಉಪಚುನಾವಣೆಯಲ್ಲಿ ಅಂತಹ ಪ್ರಯತ್ನವನ್ನು ನಮ್ಮವರೇ ಒಂದಿಷ್ಟು ಜನರು ಮಾಡಿದ್ದಾರೆ ಎಂದು ಅವರುಗಳು ಹೇಳುತ್ತಿರುವುದರ ಹಿಂದೆ ಅಸಮಾಧಾನದ ಬುಗ್ಗೆಯೇ ಇದೆ.

    ಇದೆಲ್ಲವದವನ್ನು ಗಮನಿಸಿ ಕೆಪಿಸಿಸಿ ಅಧ್ಯಕ್ಷರು, ತಕ್ಷಣವೇ ಪಕ್ಷದ ಅಲ್ಪಸಂಖ್ಯಾತ ಘಟಕವನ್ನು ವಿಸರ್ಜಿಸಿದ್ದಾರೆ. ಹೊಸದಾಗಿ ಆ ಘಟಕಕ್ಕೆ ನೇಮಕ ಪ್ರಕ್ರಿಯೆ ನಡೆಯುತ್ತದೆ ಎಂದು ಅವರು ಈ ಸಂದರ್ಭದಲ್ಲಿ ತಿಳಿಸಿದ್ದಾರೆ ಕೂಡ.

    ಡಿಕೆ ಶಿವಕುಮಾರ್ ಅವರ ಈ ನಿರ್ಧಾರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಯಾವ ರೀತಿಯ ದಾಳ ಉರುಳಿಸುತ್ತಾರೆ ನೋಡಬೇಕಿದೆ. ತಮ್ಮ ಆಪ್ತ ವಲಯದಲ್ಲಿರುವ ಜಮೀರ್ ಅಹ್ಮದ್ ಉಳಿಸಿಕೊಳ್ಳಲು ಏನು ಮಾಡಬಹುದು ಎಂಬ ಕುತೂಹಲವೂ ಇದೆ. ಈಗಾಗಲೇ ತಮ್ಮ ವಲಯದಲ್ಲಿದ್ದ ರಾಜಣ್ಣರನ್ನು ಕಳೆದುಕೊಂಡಾಗಿದೆ. ಈಗ ಜಮೀರ್ ಅವರನ್ನು ಕಳೆದುಕೊಂಡರೆ ತಮ್ಮ ಹಿಡಿತ ಸಡಿಲವಾಗುತ್ತಿದೆ ಎಂಬ ಮೆಸೇಜ್ ಹೋಗುವುದರಿಂದಾಗಿ ಡಿಕೆ ಶಿವಕುಮಾರ್ ತಂಡ ಬಲಿಷ್ಠವಾಗುತ್ತದೆ. ಇದು ತಮ್ಮ ರಾಜಕೀಯ ಹಿಡಿತದ ಮೇಲೆ ದೊಡ್ಡ ಪ್ರಭಾವ ಬೀರುತ್ತದೆ ಎಂಬುದನ್ನು ಅರಿಯದಷ್ಟು ದಡ್ಡರಲ್ಲ. ಹಾಗಾಗಿ ಈಗ ಯಾವ ರೀತಿಯ ದಾಳ ಉರುಳಿಸಬಹುದು ಎಂಬುದೇ ಪ್ರಶ್ನೆಯಾಗಿದೆ

    COMMENTS

    Login with Gmail to comment

    ಇನ್ನಷ್ಟು ಸುದ್ದಿ

    ಲಾರ್ಡ್ಸ್‌ನಲ್ಲಿ ಭಾರತ ಮಹಿಳಾ ತಂಡದ ಐತಿಹಾಸಿಕ ಟೆಸ್ಟ್ ಜಯ; ದೇಶದಲ್ಲಿ ಕ್ರಿಕೆಟ್‌ನಿಂದ ಟೆನಿಸ್‌ವರೆಗೆ… ಕ್ರೀಡೆಗಳತ್ತ ಹೆಚ್ಚುತ್ತಿರುವ ಆಸಕ್ತಿ..!
    ಸಚಿನ್ ತೆಂಡೂಲ್ಕರ್ ಮಗಳ ಜಪಾನೀಸ್ ಕನೆಕ್ಷನ್ ಈಗ ದೇಶದ ಗಮನ ಸೆಳೆಯುತ್ತಿದೆ…ಸಾರಾ ಹೊಸ ಒಪ್ಪಂದ ಚರ್ಚೆಯಲ್ಲಿ
    ಬೆಂಗಳೂರು ಟು ಮುಂಬೈ  ಐದೇ ಘಂಟೆ ಪ್ರಯಾಣ- ಎಕ್ಸ್ಪ್ರೆಸ್ ಹೈವೇಗೆ ಅಸ್ತು
    ಮೇ 20ರ ಬಸ್ ಸ್ಟ್ರೈಕ್‌ಗೆ ಹೈಕೋರ್ಟ್ ಬ್ರೇಕ್..! KSRTC-BMTC ಬಸ್‌ಗಳು ನಿಲ್ಲೋದಿಲ್ಲ! ಹೈಕೋರ್ಟ್ ಮಹತ್ವದ ಆದೇಶ..
    ಅಮೆರಿಕ–ಇರಾನ್ ಸಂಘರ್ಷಕ್ಕೆ ಮತ್ತೆ ಹೊತ್ತಿ ಉರಿದ ಮಧ್ಯಪ್ರಾಚ್ಯ! ಕದನ ವಿರಾಮ ಸಂಪೂರ್ಣ ವಿಫಲ..
    ಐಸಿಸ್ ನೆರವು ಜಾಲದ ಮೇಲೆ ಇ.ಡಿ ಸರ್ಜಿಕಲ್ ಸ್ಟ್ರೈಕ್..! ಬೆಂಗಳೂರಿನ 8 ಕಡೆ ಏಕಕಾಲಕ್ಕೆ ದಾಳಿ
    Must read…ನಾಗಪ್ರಸನ್ನರ ನ್ಯಾಯಾಲಯದಲ್ಲಿ ‘ಸುಳ್ಳು ಜಾತಿ-ಆದಾಯ ಪ್ರಮಾಣಪತ್ರ ಮುಂದಿಟ್ಟ ಸಾಹುಕಾರ್ ಪುತ್ರಿಗೆ ಕ್ಲಾಸ್! ಅರುಣ್ ಶ್ಯಾಮ್ ವಾದಕ್ಕೆ ನಾಗಪ್ರಸನ್ನರ ಒಂದೊಂದು ಪ್ರಶ್ನೆಯೂ ವ್ಯವಸ್ಥೆಗೆ ಕನ್ನಡಿಯಾಯಿತು!”
    ಬ್ರಹ್ಮಾವರದ ಹಲಸು ಮೇಳ ಮಾಡಿದ ಹೊಲಸು – ಸಾರ್ವಜನಿಕರ ಆಕ್ರೋಶ
    ಅರ್ಧರಾತ್ರಿ ತಾಯಿ-ಮಗುವಿನ ಅಕ್ರಮ ಬಂಧನ: ಇಡೀ ಪೊಲೀಸ್ ಠಾಣೆಯನ್ನೇ ಸಸ್ಪೆಂಡ್ ಮಾಡಿದ ಜಡ್ಜ್!
    ತುಳು ವಿಕಿಪೀಡಿಯಾಗೆ ದಶಮಾನೋತ್ಸವ ಸಂಭ್ರಮ
    ಟ್ರಂಪ್ ಇರಾನ್ ಡೀಲ್ ಕಥೆ ಏನು?ಒಪ್ಪಂದವಾಗುತ್ತಾ? ಅಥವಾ ಯುದ್ಧ ಮುಂದುವರೆಯುತ್ತಾ?
    ಆನ್ಲೈನ್ ಶೇರಿಂಗ್ ಹಗರಣ: ಇಬ್ಬರು ಆರೋಪಿಗಳ ವಿರುದ್ಧ ಪ್ರಕರಣ ದಾಖಲು.
    108 ಆರೋಗ್ಯ ಕವಚ'”ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ಇನ್ಮುಂದೆ ಆಂಬ್ಯುಲೆನ್ಸ್ ನಿಮ್ಮ ಮನೆಬಾಗಿಲಿಗೆ! 
    ಹುಡುಗಾಟಿಕೆ ಆಡುತ್ತಿರುವ ರಾಮಲಿಂಗಾರೆಡ್ಡಿ-ಕ್ಷೇತ್ರದ ಜನರಲ್ಲಿ ಅಸಮಾಧಾನ
    Lokayukta Raid In Hassan: ಬಾಗಿಲು ತೆರೆಯದೆ AEE ಹೈಡ್ರಾಮಾ, ಮನೆ ಏರಿದ ಲೋಕಾ ಪೊಲೀಸರು | AEE Satyanarayan
    ಫೇಸ್‌ಬುಕ್ ಜಾಹೀರಾತು ನಂಬಿ ₹32.68 ಲಕ್ಷ ಕಳೆದುಕೊಂಡ ಕಾರ್ಕಳದ ವ್ಯಕ್ತಿ!
    ಮಂಗಳೂರು, ಮೈಸೂರಿಗೂ ‘Amazon Now’ 2,800 ಕೋಟಿ ಹೂಡಿಕೆ-
    ಅವಿವಾಹಿತಗೆ ಗರ್ಭ ದಾನ ಮಾಡಿದವ ಜೈಲಿಗೆ
    ತುರ್ತು ಎಚ್ಚರಿಕೆ ‼️ಹಿಪ್ನೋಟೈಸಿಂಗ್ ಸ್ವಾಮಿಗಳು ನಿಮ್ಮ ಬಳಿಯೂ ಬರಬಹುದು
    ಇರಾನ್ ಬಿಕ್ಕಟ್ಟು ವೀಸಾ ವಿಸ್ತರಿಸಲು ವಿದೇಶಿ ಪ್ರಜೆಗಳು ಹತ್ತಿರದ FRRO ಅನ್ನು ಸಂಪರ್ಕಿಸಲು ಭಾರತ ಸಲಹೆ
    ಏರ್ ಇಂಡಿಯಾ ವಿಮಾನ ಸೇವೆ ಸ್ಥಗಿತ…40,000ಕ್ಕೂ ಹೆಚ್ಚು ಟೆಲ್ ಅವೀವ್‌ ಭಾರತೀಯರ ಪ್ರಯಾಣ ಅತಂತ್ರ…!
    ಸೆಲೆಬ್ರಿಟಿಗಳು–ಇನ್‌ಫ್ಲುವೆನ್ಸರ್‌ಗಳಿಗೆ FSSAI ನೋಟಿಸ್ ….!ಹಣಕ್ಕಾಗಿ ಜಾಹೀರಾತು, ಜನರ ಆರೋಗ್ಯದ ಜೊತೆ ಆಟವೇ?
    2 ಲಕ್ಷಕ್ಕೆ ಮಗುವಿನ ಜೀವದ ಬೆಲೆ ಕಟ್ಟಬೇಡಿ!” – ಹೈಕೋರ್ಟ್ ನ್ಯಾಯಮೂರ್ತಿ ಎಂ. ನಾಗಪ್ರಸನ್ನರ ಮಾನವೀಯ ನಿಲುವಿಗೆ ದೇಶಾದ್ಯಂತ ಮೆಚ್ಚುಗೆ
    ಟಾಟಾ ಸನ್ಸ್ IPOಗೆ ಒತ್ತಾಯ: ಟ್ರಸ್ಟಿಗಳಲ್ಲಿ ಭಿನ್ನಾಭಿಪ್ರಾಯ ಹೆಚ್ಚಳ…!
    ಸಿದ್ದು vs ಕೃಷ್ಣ -ಸಿದ್ಧು ವಿರುದ್ಧ ನೇರ ಸವಾಲು: ‘ಬಿ’ ರಿಪೋರ್ಟ್ ಪ್ರಶ್ನಿಸಿ ಸ್ನೇಹಮಯಿ ಕೃಷ್ಣನ ನಡೆ ಭ್ರಷ್ಟ ವ್ಯವಸ್ಥೆಗೆ ಬಿಗಿ ಹೊಡೆತ!”
    ಕುಂದಾಪುರ ಗಂಗೊಳ್ಳಿಯಲ್ಲಿ ಕತ್ತಿ  ದೊಣ್ಣೆಗಳಿಂದ ಮಾರಾಮಾರಿ; ವೈರಲ್ ವಿಡಿಯೋದಿಂದ ಪ್ರಕರಣಕ್ಕೆ ಹೊಸ ತಿರುವು?
    ಮಕ್ಕಳ ಸುರಕ್ಷತೆಯೇ ಮುಖ್ಯ – ಸಂದೇಶ ಕೊಟ್ಟ ಹೈಕೋರ್ಟ್
    ಪ್ರತಿಭಟನೆಯ ಹಕ್ಕು ಸಂವಿಧಾನ ನೀಡಿದೆ… ಆದರೆ ಅದರ ಹೆಸರಿನಲ್ಲಿ ನಡೆದ ಎಲ್ಲವನ್ನೂ ತನಿಖೆ ಮಾಡುವುದು ಸರ್ಕಾರದ ಕರ್ತವ್ಯ!
    “ಬಾದಾಮಿ ತಿಂದರೆ ಮೆಮೊರಿ ಹೆಚ್ಚಾಗಿ, ನನ್ನ ಫೈಲ್ ಎಲ್ಲಿ ಇದೆ ಎಂದು ನೆನಪಾಗಬಹುದು”-ಹಣ ಕೊಡದೇ ಕೆಲಸ ಆಗೋದಿಲ್ಲ ಎಂಬ ಭ್ರಷ್ಟ ವ್ಯವಸ್ಥೆ ಇನ್ನೂ ಬಲವಾಗಿ ಜೀವಂತವಾಗಿದೆ…!
    ಇತಿಹಾಸ ಸೃಷ್ಟಿಸಿದ ಈಶಾಂಕ್ ಸಮುದ್ರವನ್ನೇ ಸವಾಲಾಗಿ ತೆಗೆದುಕೊಂಡ 7 ವರ್ಷದ ಹೀರೋ ..!