📍 Karavali Maruta
LIVE | CONTACT
ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

ಅಲ್ಪಸಂಖ್ಯಾತರ ಘಟಕ ಬರ್ಕಾಸ್ತು- ಡಿಕೆ ಶಿವಕುಮಾರ್ ಗಟ್ಟಿ ನಿರ್ಧಾರ.

ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಅಲ್ಪಸಂಖ್ಯಾತ ಘಟಕವನ್ನು ತಕ್ಷಣವೇ ಬರ್ಕಾಸ್ತು ಮಾಡುವ ಘೋಷಣೆಯನ್ನು ಕೆಪಿಸಿಸಿ ಅಧ್ಯಕ್ಷರಾದ ಡಿಕೆ ಶಿವಕುಮಾರ್ ಮಾಡಿದ್ದಾರೆ.

ವಿಧಾನಪರಿಷತ್ ಸದಸ್ಯ ಅಬ್ದುಲ್ ಜಬ್ಬಾರ್, ಈಗಾಗಲೇ ರಾಜೀನಾಮೆ ಸಲ್ಲಿಸಿದ್ದಾರೆ. ರಾಜೀನಾಮೆ ಸಲ್ಲಿಸುವಾಗ ಒಂದಷ್ಟು ಸಿಂಪತಿ ಗಿಟ್ಟಿಸಿಕೊಳ್ಳುವ ಮಾತನ್ನಾಡಿದ್ದರು. ಈ ಸಂದರ್ಭವನ್ನು ಇನ್ನೂ ಕೆಲವರು ತಮ್ಮ ಬೇಳೆ ಬೇಯಿಸಿಕೊಳ್ಳಲು  ಬಳಸುವ ಪ್ರಯತ್ನ ಮಾಡಿದರು. ಅಂದರೆ, ಅಬ್ದುಲ್ ಜಬ್ಬಾರ್ ಅವರ ರಾಜೀನಾಮೆಗೆ ಆಕ್ರೋಶ ವ್ಯಕ್ತಪಡಿಸುವ ಹಾಗೆ ತಾವೂ ರಾಜೀನಾಮೆ ಕೊಡುತ್ತೇವೆ ರಾಜೀನಾಮೆಯ ನಾಟಕ ಶುರು ಮಾಡಿದ್ದರು. ಹೇಗಂದರೂ ರಾಜೀನಾಮೆ ಅಕ್ಸೆಪ್ಟ್ ಆಗುವುದಿಲ್ಲ, ನಮ್ಮನ್ನು ಅವರು ಸಂತೈಸುತ್ತಾರೆ ಅಂತಲೇ ಅವರ ಪ್ಲಾನ್ ಆಗಿತ್ತು. ಈ ಸಂದರ್ಭವನ್ನು ತಮ್ಮ ಲಾಭಕ್ಕೆ ಬಳಸಿಕೊಳ್ಳಬೇಕು ಅನ್ನುವುದು ಆ ಎಲ್ಲಾ ನಾಟಕಕಾರರ ಲೆಕ್ಕಾಚಾರ ಆಗಿತ್ತು. ಅವರ ಮಾತನ್ನು ಕೇಳುತ್ತಾ ಹೋದರೆ  ಅದರಿಂದ ಆಗುವಬಹುದಾದ ಡ್ಯಾಮೇಜ್ ಎಷ್ಟಾಗಬಹುದು ಎನ್ನುವುದನ್ನು  ಅರಿತ ಕೆಪಿಸಿಸಿ ಅಧ್ಯಕ್ಷ ಹಾಗೂ ಕರ್ನಾಟಕದ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಗಟ್ಟಿ ಮನಸ್ಸು ಮಾಡಿ, ಇಡೀ ಅಲ್ಪಸಂಖ್ಯಾತಕ ಘಟಕವನ್ನೇ ತತಕ್ಷಣದಿಂದಲೇ  ಬರ್ಕಾಸ್ತು ಮಾಡಿ ಆದೇಶ ಹೊರಡಿಸಿದ್ದಾರೆ.

ಇತ್ತ, ಶಾಸಕ ರೀಜ್ವಾನ್ ಹರ್ಷದ್ ತಮ್ಮ ಒಪಿನಿಯನ್ನನ್ನು ಗಟ್ಟಿಯಾಗಿ ಹೇಳಿದ್ದಾರೆ. ನಮಗೆ ಪಕ್ಷಕ್ಕಿಂತ ದೊಡ್ಡದು ಯಾವುದೂ ಇಲ್ಲ. ಪಕ್ಷವು ಎಲ್ಲರಿಗೂ ಒಮ್ಮೆಲೆನೆ ಮಣೆ ಹಾಕಲು ಆಗುವುದಿಲ್ಲ. ನಿಜವಾಗಿಯೂ ದಾವಣಗೆರೆ ದಕ್ಷಿಣದಲ್ಲಿ ಸಮುದಾಯದವರಿಗೆ ಟಿಕೆಟ್ ಕೇಳಿದ್ದು ನಿಜ. ಆದರೆ ಅಲ್ಲಿ ಒಬ್ಬ ವ್ಯಕ್ತಿಗೇ ಟಿಕೆಟ್ ನೀಡಬೇಕು ಎಂಬ ಒತ್ತಡ ಹೆಚ್ಚಾಯಿತು. ಸಮುದಾಯದ ಮೂರು ನಾಲ್ಕು ಕ್ಯಾಂಡಿಡೇಟ್ ಗಳ ಹೆಸರನ್ನು ಕಳುಹಿಸಿದ್ದರೆ ಆಗ ಅವು ಪರಿಗಣನೆಗೆ ಒಳಪಡುತ್ತಿದ್ದವು. ಆದರೆ ಇಲ್ಲಿ, ಒಬ್ಬ ವ್ಯಕ್ತಿಗೋಸ್ಕರ ಸಮುದಾಯದ ಹೆಸರನ್ನು ಬಳಸಿಕೊಳ್ಳುತ್ತಿರುವುದು ಮೇಲ್ನೋಟಕ್ಕೆ ಕಂಡು ಬಂತು. ಅದು ಸರಿಯಲ್ಲ ಎಂದು ಸ್ವತಹ ಶಾಸಕ ರಿಜ್ವಾನ್ ಹರ್ಷದ್ ಆರೋಪಿಸಿದ್ದಾರೆ. ಈ ರೀತಿಯಾಗಿ ಪ್ಲಾನ್ ಮಾಡಿದ ಒಬ್ಬ ಮಹಾನ್ ವ್ಯಕ್ತಿ ಇಲ್ಲಿದ್ದಾರೆ. ಪಕ್ಷದ ಅಧಿಕೃತ ಅಭ್ಯರ್ಥಿಯನ್ನು ಸೋಲಿಸುವ ನಿಟ್ಟಿನಲ್ಲಿ ಕೆಲಸ ಮಾಡಿದರವರು. ಇಂಥವರು ಪಕ್ಷದಲ್ಲೇ ಇರಬಾರದು. ಇದ್ದರೆ ಪಕ್ಷಕ್ಕೆ ಡ್ಯಾಮೇಜ್ ಖಚಿತ. ಪಕ್ಷದ ಒಳಗಿದ್ದು ಕೊಂಡೆ ಪಕ್ಷಕ್ಕೆ ಡ್ಯಾಮೇಜ್ ಮಾಡುತ್ತಿರುವ ಇಂತಹ ವ್ಯಕ್ತಿಗಳ ವಿರುದ್ಧ ಪಕ್ಷವು ಕಠಿಣ ಕ್ರಮ ತೆಗೆದುಕೊಳ್ಳಲೇಬೇಕು ಎಂಬ ಆಗ್ರಹವನ್ನು ಶಾಸಕ ರಿಜ್ವಾನ್ ಮಾಡಿದ್ದಾರೆ. ಅವರು ಸಚಿವ ಜಮೀರ್ ಅಹಮದ್ ಹೆಸರನ್ನು ಹೇಳದೆಯೇ ಈ ರೀತಿಯ ಆಕ್ರೋಶದ ಮಾತನ್ನು ಆಡಿದ್ದಾರೆ.

ಸಚಿವ ಜಮೀರ್ ಅಹಮದ್ ಮುಖ್ಯಮಂತ್ರಿಗಳ ಆಪ್ತ ವಲಯದಲ್ಲಿ ಕಾಣಿಸಿಕೊಳ್ಳುವಂತಹ ವ್ಯಕ್ತಿ. ಈ ವ್ಯಕ್ತಿಯ ವಿಚಾರದಲ್ಲಿ ಪಕ್ಷದ ಅನೇಕ ಮುಸ್ಲಿಂ ನಾಯಕರಲ್ಲಿ ಅಸಮಾಧಾನವಿದೆ. ಮುಖ್ಯಮಂತ್ರಿಗಳ ವಿಶ್ವಾಸವನ್ನು ಗಳಿಸಿಕೊಂಡು ತಮ್ಮನ್ನು ತಾವು ಮುಸ್ಲಿಂ ಸಮಾಜದ ಪ್ರಶ್ನತೀತ  ನಾಯಕ ಅಂತ ಬಿಂಬಿಸಿಕೊಳ್ಳಲು ಹೋಗುತ್ತಿರುವ ಬಗ್ಗೆ ಅಸಮಾಧಾನವಿದೆ. ಮೂಲ ಕಾಂಗ್ರೆಸ್ಸಿನ ಯಾವೊಬ್ಬ ನಾಯಕರೂ ಸಹ, ಪಕ್ಷಕ್ಕಿಂತ ಜಾತಿ ಹಾಗೂ ಸಮುದಾಯವೇ ದೊಡ್ಡದು ಅಂತ ಹೇಳುವುದಿಲ್ಲ. ಹಾಗೆಯೇ ಯಾರು ಸಹ, ಪಕ್ಷದ ಅಭ್ಯರ್ಥಿಯನ್ನು ಪಕ್ಷದಲ್ಲಿ ಇದ್ದುಕೊಂಡೆ ಸೋಲಿಸುವಂತಹ ಕೆಲಸ ಮಾಡುವುದಿಲ್ಲ. ಆದರೆ ದುರ್ದೈವ, ದಾವಣಗೆರೆ ಉಪಚುನಾವಣೆಯಲ್ಲಿ ಅಂತಹ ಪ್ರಯತ್ನವನ್ನು ನಮ್ಮವರೇ ಒಂದಿಷ್ಟು ಜನರು ಮಾಡಿದ್ದಾರೆ ಎಂದು ಅವರುಗಳು ಹೇಳುತ್ತಿರುವುದರ ಹಿಂದೆ ಅಸಮಾಧಾನದ ಬುಗ್ಗೆಯೇ ಇದೆ.

ಇದೆಲ್ಲವದವನ್ನು ಗಮನಿಸಿ ಕೆಪಿಸಿಸಿ ಅಧ್ಯಕ್ಷರು, ತಕ್ಷಣವೇ ಪಕ್ಷದ ಅಲ್ಪಸಂಖ್ಯಾತ ಘಟಕವನ್ನು ವಿಸರ್ಜಿಸಿದ್ದಾರೆ. ಹೊಸದಾಗಿ ಆ ಘಟಕಕ್ಕೆ ನೇಮಕ ಪ್ರಕ್ರಿಯೆ ನಡೆಯುತ್ತದೆ ಎಂದು ಅವರು ಈ ಸಂದರ್ಭದಲ್ಲಿ ತಿಳಿಸಿದ್ದಾರೆ ಕೂಡ.

ಡಿಕೆ ಶಿವಕುಮಾರ್ ಅವರ ಈ ನಿರ್ಧಾರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಯಾವ ರೀತಿಯ ದಾಳ ಉರುಳಿಸುತ್ತಾರೆ ನೋಡಬೇಕಿದೆ. ತಮ್ಮ ಆಪ್ತ ವಲಯದಲ್ಲಿರುವ ಜಮೀರ್ ಅಹ್ಮದ್ ಉಳಿಸಿಕೊಳ್ಳಲು ಏನು ಮಾಡಬಹುದು ಎಂಬ ಕುತೂಹಲವೂ ಇದೆ. ಈಗಾಗಲೇ ತಮ್ಮ ವಲಯದಲ್ಲಿದ್ದ ರಾಜಣ್ಣರನ್ನು ಕಳೆದುಕೊಂಡಾಗಿದೆ. ಈಗ ಜಮೀರ್ ಅವರನ್ನು ಕಳೆದುಕೊಂಡರೆ ತಮ್ಮ ಹಿಡಿತ ಸಡಿಲವಾಗುತ್ತಿದೆ ಎಂಬ ಮೆಸೇಜ್ ಹೋಗುವುದರಿಂದಾಗಿ ಡಿಕೆ ಶಿವಕುಮಾರ್ ತಂಡ ಬಲಿಷ್ಠವಾಗುತ್ತದೆ. ಇದು ತಮ್ಮ ರಾಜಕೀಯ ಹಿಡಿತದ ಮೇಲೆ ದೊಡ್ಡ ಪ್ರಭಾವ ಬೀರುತ್ತದೆ ಎಂಬುದನ್ನು ಅರಿಯದಷ್ಟು ದಡ್ಡರಲ್ಲ. ಹಾಗಾಗಿ ಈಗ ಯಾವ ರೀತಿಯ ದಾಳ ಉರುಳಿಸಬಹುದು ಎಂಬುದೇ ಪ್ರಶ್ನೆಯಾಗಿದೆ

COMMENTS

Login with Gmail to comment

ಇನ್ನಷ್ಟು ಸುದ್ದಿ

ಮಾಜಿ ಮುಖ್ಯಮಂತ್ರಿಯ ಮೇಲೆ ಗುಂಡಿನ ದಾಳಿ,- Z+ ಭದ್ರತೆಯ ನಡುವೆ ದಾಳಿಕೋರ ಹೇಗೆ  ಬಂದ?
ಮಂತ್ರಾಲಯದ ಮಠದ ಹೆಸರಲ್ಲಿ 3 ಲಕ್ಷ ಆಸೆ ತೋರಿಸಿ ವಂಚನೆ..!
ಜಾಗತಿಕ ಸಂಘರ್ಷದ ಮಧ್ಯೆ ಭಾರತ–ಯುಎಇ ಬಿಗ್ ಡೀಲ್! ತಂತ್ರಜ್ಞಾನ, ಇಂಧನ ಮತ್ತು ಭದ್ರತೆಯಲ್ಲಿ ಐತಿಹಾಸಿಕ ಒಗ್ಗಟ್ಟು.
ಘೋರ ಭಾನುವಾರ, ಒಂದೇ ಕುಟುಂಬದ ಎಂಟು ಮಹಿಳೆಯರ ದುರ್ಮರಣ
ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ಮಾತ್ರ (ಅ)ವ್ಯವಸ್ಥೆ ಎಚ್ಚರಗೊಳ್ಳಬೇಕೇ? ಯಾರು ಹೊಣೆ? ಏನು ಕ್ರಮ?
ಜೈನ ಸನ್ಯಾಸ ದೀಕ್ಷೆ ನಿಯಮಗಳು ಏನು ಗೊತ್ತಾ?
ಪಾಕಿಸ್ತಾನದಲ್ಲಿ ಹಿಂದೂ ಯುವತಿಯ ಸಾಧನೆ
ಇತಿಹಾಸ ಸೃಷ್ಟಿಸಿದ ಈಶಾಂಕ್ ಸಮುದ್ರವನ್ನೇ ಸವಾಲಾಗಿ ತೆಗೆದುಕೊಂಡ 7 ವರ್ಷದ ಹೀರೋ ..!
ಇಂದು ದಕ್ಷಿಣ ಕನ್ನಡ ಜಿಲ್ಲಾ ಮಹಿಳಾ ಕಾಂಗ್ರೆಸ್ ನಿಂದ ಪ್ರತಿಭಟನೆ
ಕಾರ್ಕಳದಲ್ಲಿ  ಜಾಗ ಕಿತ್ತುಕೊಳ್ಳಲು ಮಾಡಿದ ಪ್ಲಾನ್, ರಿವರ್ಸಾಗಿ ಪೊಲೀಸ್ ಠಾಣೆ ಮೆಟ್ಟಿಲು ಹತ್ತಿದೆ
Anticipatory Bail ಗೆ ಹೊಸ ರಕ್ಷಣೆ: ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಆಕ್ಷೇಪ
ದೇಶಾದ್ಯಂತ ಇಂದು ಮೊಬೈಲ್‌ನಲ್ಲಿ ತುರ್ತು ಎಚ್ಚರಿಕೆ ಡ್ರಿಲ್ – ಗಾಬರಿ ಬೇಡ
21 ವರ್ಷದ ಆಡಳಿತಕ್ಕೆ ತೆರೆ: ನಿತೀಶ್ ಕುಮಾರ್ ಹೊರಟರೇ?ಸಿಎಂ ಕುರ್ಚಿ ಖಾಲಿ-ಬಿಜೆಪಿ ಹೊಸ ಮುಖ ಮುಂದಿನ ಸಿಎಂ??
ತಮಿಳುನಾಡು ರಾಜಕೀಯದಲ್ಲಿ ಮೆಗಾ ಟ್ವಿಸ್ಟ್…ಸ್ಟಾಲಿನ್ DMKತಂಡದ ವಾಕ್‌ಔಟ್ ರಾಜಕೀಯ ಲೆಕ್ಕಾಚಾರವಾ?
ಎಂಡೋಸಲ್ಫಾನ್ ಸಂತ್ರಸ್ತರಿಗೆ ವಿಶೇಷ ಆರೋಗ್ಯ ತಪಾಸಣಾ ಶಿಬಿರ
ಇನ್ನೂ ಏಳು ದಿನ ಕರ್ನಾಟಕದ ಸಿಎಂ ಕುರ್ಚಿ ಕಾಲಿ… ಜೂನ್ 5 ರಂದು ಡಿಕೆ ಶಿವಕುಮಾರ್ ಪ್ರಮಾಣ ವಚನ!
ಇನ್ನು ಹೈವೇಯಲ್ಲಿ ಲಿಮಿಟ್ ಗಿಂತ ವೇಗವಾಗಿ ಹೋಗುವವರು ಹುಷಾರಾಗಿರಿ…
“ಪ್ರಜಾಪ್ರಭುತ್ವದ ಮೇಲೆ ದಾಳಿ”ಸುಪ್ರೀಂ ಕೋರ್ಟ್ ಕಿಡಿ: ಇದು ಪ್ರತಿಭಟನೆ ಅಲ್ಲ, ಸಂಚು!”
ತಿರುಪತಿಯಲ್ಲಿ ಒಂದಿಡೀ ಕುಟುಂಬವೇ ನಾಶ!
ಬೆಂಗಳೂರಿನಿಂದ ಚೆನ್ನೈಗೆ ಹೊರಟ ವಿಮಾನದಲ್ಲಿ ಹೊಗೆ — ಎಲ್ಲಾ ವಿಮಾನಗಳು ವಿಳಂಬ ಪ್ರಯಾಣಿಕರಿಗೆ ತೊಂದರೆ
ಅರೆಬೈಲ್ ಘಾಟ್ ನ ಕಾರು ಅಫಘಾತ ವ್ಯವಸ್ಥಿತ ಕೊಲೆ…!
ಜಮೀರ್ ಅಹಮದ್ ಉಚ್ಛಾಟನೆಗೆ ಕ್ಷಣಗಣನೆ
ಹೆತ್ತ ಮಗಳನ್ನೇ ಉಸಿರುಗಟ್ಟಿಸಿ ಕೊಂದ  ಪಾಪಿ ತಾಯಿ
“ಧುರಂಧರ್” ನಟ ರಣವೀರ್ ಸಿಂಗ್‌ ವಿರುದ್ಧ ಇಡೀ ಬಾಲಿವುಡ್ ಒಕ್ಕೂಟವೇ ತಿರುಗಿಬಿದ್ದಿದ್ದೇಕೆ? shocking ₹45 ಕೋಟಿ ವಿವಾದದ ಅಸಲಿ ಕಥೆ ಇಲ್ಲಿದೆ!
ಸಿಲಿಂಡರ್ ಪಡೆಯಲು ಹೊಸ ಶರತ್ತುಗಳು – ಈಗಲೇ ತಿಳಿದುಕೊಳ್ಳಿ, …
ನಿಮ್ಮ ಮಾತು ಕೇಳಿ ರಾಜೀನಾಮೆ ನೀಡಿದ್ದೇನೆ. ಈಗ ನನ್ನ ಬೇಡಿಕೆ ಈಡೇರಿಸುವುದು ನಿಮ್ಮ ಸರದಿ  ಎಂದ ಸಿದ್ದರಾಮಯ್ಯ
ಹವ್ಯಕ ಭಾಷಾ ಅಕಾಡೆಮಿ ಸ್ಥಾಪನೆಯ ಕ್ರೆಡಿಟ್ ಪಡೆದುಕೊಳ್ಳಲು ಶುರುವಾಯಿತು ಫೈಟ್
80 ಲಕ್ಷ ವಂಚನೆ ಪ್ರಕರಣ ದೂರು ದಾಖಲು
ಉಡುಪಿಯಲ್ಲಿ ಟ್ರೇಡಿಂಗ್ ಹೆಸರಲ್ಲಿ ಲಕ್ಷಗಟ್ಟಲೆ ಧೋಕಾ….
ಜೀವನ್ಮರಣ ಹೋರಾಟದಲ್ಲೂ ಗೆಳೆಯರ ಬದುಕಿಸಿದ 14ರ ಬಾಲಕನ ರೋಚಕ  ಸ್ಟೋರಿ