📍 Karavali Maruta
  • LOGIN
  • BREAKING
    ಧಾರವಾಡದಲ್ಲಿ ಭೀಕರ LPG ಸಿಲಿಂಡರ್ ಸ್ಫೋಟ , ಹಲವು ಮೀಟರ್ ದೂರಕ್ಕೆ ಹಾರಿದ ಬೈಕ್‌! ಹಲವರಿಗೆ ಗಾಯ CCTVಯಲ್ಲಿ ಶಾಕಿಂಗ್ ದೃಶ್ಯ ದಯಾಮರಣ ಕೇಳಿದ್ದ ತುಮಕೂರು ರಾಬಿಯಾ ಇನ್ನಿಲ್ಲ …!ಪರಮೇಶ್ವರ್ ಮುಂದೆ ಕಣ್ಣೀರಿಟ್ಟಿದ್ದ ಮಹಿಳೆ ಇಬ್ಬರು ಮಕ್ಕಳೊಂದಿಗೆ ವಿಷಸೇವಿಸಿ ಕೊನೆಯುಸಿರು…‘ಮನೆ’ ಸಿಕ್ಕರೂ ಬದುಕು ಉಳಿಯಲಿಲ್ಲ! ನೇಪಾಳ ದುರಂತ: ಕಂಪ್ಲೀಟ್ ರಿಪೋರ್ಟ್ ಇಲ್ಲಿದೆ…ಕಣ್ಣೆದುರೇ ಕೊಚ್ಚಿಹೋದ ಬದುಕು… ಲೆಕ್ಕಕ್ಕೆ ಸಿಗದ ಸಾವು, ನೋವು!ಪ್ರವಾಹದ ರೌದ್ರದ ನಡುವೆ ಮೃತದೇಹದಿಂದಲೇ ಚಿನ್ನ ಕದಿಯಲು ಯತ್ನ… ಮಾನವೀಯತೆ ಮರೆತ ಕಿರಾತಕರು!ಇಬ್ಬರು ಅರೆಸ್ಟ್! ಮಹಿಳಾ ಕಾನ್ಸ್‌ಟೇಬಲ್ ಮೇಲೆ ಪೊಲೀಸ್ ಠಾಣೆಯಲ್ಲಿ ಮಾರಣಾಂತಿಕ ಹಲ್ಲೆ ವಾಜಪೇಯಿ ಸರ್ಕಾರದ  ಕನಸಿನ ಯೋಜನೆ ನದಿ ಜೋಡಣೆ ವಿರೋಧಿಸಿ ಶಿರಸಿಯಲ್ಲಿ ಸಹಿ ಸಂಗ್ರಹ ಅಭಿಯಾನ
    ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

    ಅಲ್ಲಿ ಸೌಮೆಂದು ಅಧಿಕಾರಿ…. ಇಲ್ಲಿ ಸಾಮ್ರಾಟ್ ಚೌದರಿ, ಹೆಲ್ತ್ ಮಿನಿಸ್ಟರ್ ನಿಶಾಂತ್….

    ಉತ್ತರ ಭಾರತದ ಪ್ರಮುಖ ಎರಡು ರಾಜ್ಯದಲ್ಲಿ ನ ಸರ್ಕಾರದಲ್ಲಿ ಕಾಣಿಸಿಕೊಂಡಿರುವ ಮುಖಗಳ ಬಗ್ಗೆ ದೇಶದಾದ್ಯಂತ ಚರ್ಚೆಯಾಗುತ್ತಿದೆ ಇವತ್ತು. ಅಷ್ಟಕ್ಕೂ ಆ ಎರಡೂರಾಜ್ಯ ಯಾವುದು ಗೊತ್ತಾ? ಮೊನ್ನೆ ಮೊನ್ನೆಯಷ್ಟೇ, ಅಲ್ಲಿನ ಅಧಿಕಾರ( cm) ಬದಲಾವಣೆಯಾಗಿದೆ. ಒಂದು ಕಾಲದಲ್ಲಿ ಜಂಗಲ್ ರಾಜ್ಯ ಎಂದೇ ಹೆಸರು ಪಡೆದಂತಹ ರಾಜ್ಯ ಬಿಹಾರ್. ಬಿಹಾರ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಭಾರತೀಯ ಜನತಾ ಪಕ್ಷವು ತಂದು ಕೂರಿಸಿದಂತಹ ವ್ಯಕ್ತಿಯ ಬಗ್ಗೆ ಮಾತನಾಡಲಾಗುತ್ತಿದೆ. ಅದರ ಜೊತೆಜೊತೆಗೆನೇ ಅನ್ ಫಿಟ್ಟಾಗಿ ಕಾಣುತ್ತಿರುವ ಮಾಜಿ ಮುಖ್ಯಮಂತ್ರಿ ನಿತೀಶ್ ಕುಮಾರ್ ಪುತ್ರ ನಿಶಾಂತ್ ಅವರನ್ನು ಬಿಹಾರ ರಾಜ್ಯದ ಆರೋಗ್ಯ ಸಚಿವರನ್ನಾಗಿ ಮಾಡಿರುವುದು. ಈ ಎರಡು ವಿಚಾರವೂ ಚರ್ಚೆಯಲ್ಲಿದೆ. ನಿಶಾಂತ್ ಆರೋಗ್ಯ ಸಚಿವ ಆಗಿರುವ ಬಗ್ಗೆ ಸಾಕಷ್ಟು ಟ್ರೋಲ್ ಮತ್ತು ಟೀಕೆಗೆ  ಗುರಿಯಾಗುತ್ತಿದೆ.

    ಮತ್ತೊಂದೆಡೆ, ಈಗಷ್ಟೇ ಚುನಾವಣೆ ಮುಗಿದು, ಮೊದಲ ಬಾರಿಗೆ ರಾಜ್ಯವನ್ನು ತನ್ನ ಕೈವಶ ಮಾಡಿಕೊಂಡಿರುವ ಬಿಜೆಪಿ, ಆರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಆಯ್ಕೆ ಮಾಡಿದ ವ್ಯಕ್ತಿಯ ವಿಚಾರವಾಗಿ ಚರ್ಚೆ ನಡೆಯುತ್ತಿದೆ. ಆ ರಾಜ್ಯ ಬೇರೆ ಯಾವುದೂ ಅಲ್ಲ, ಅದು ಪಶ್ಚಿಮಬಂಗಾಳ. ಕಳೆದ ಹತ್ತು ವರ್ಷದಿಂದ ಈ ರಾಜ್ಯವನ್ನು ವಶ ಪಡಿಸಿಕೊಳ್ಳಲು ನಡೆಸಿದ ತಂತ್ರಗಾರಿಕೆ ಹೋರಾಟದಲ್ಲಿ ಸಫಲಗೊಂಡಿದೆ ಈಗ. ಮೊದಲ ಬಿಜೆಪಿಯ ಮುಖ್ಯಮಂತ್ರಿ ಯಾರಾಗಿದ್ದಾರೆ ಎಂದರೆ,  ಸೌಮೇಂದು ಅಧಿಕಾರಿ.

    ಸೌಮೆಂದು ಅಧಿಕಾರಿ ಮೂಲತಹ ಬಿಜೆಪಿಗರಲ್ಲ, ಟಿಎಂಸಿಯಲ್ಲಿರುವಾಗ, ಶಾರದಾ ಚಿಟ್ ಫಂಡ್ ಹಗರಣದಲ್ಲಿ ಹೆಸರು ಕಾಣಿಸಿಕೊಂಡಿತ್ತು. ಕುಟುಕು ಕಾರ್ಯಾಚರಣೆಯೊಂದರಲ್ಲಿ ಅಧಿಕಾರಿ ಸಹಿತ ಐದು ಮಂದಿ ಸಂಸದರು ಸಿಕ್ಕಾಕಿಕೊಂಡಿದ್ದರು. ಪರಿಣಾಮ ಇಡಿ ದಾಳಿಗೂ ಒಳಗಾಗಿದ್ದರು. ಈ ದಾಳಿಗೆ ಒಳಗಾಗುತ್ತಿದ್ದಂತೆಯೇ, ಅಧಿಕಾರಿ ಟಿಎಂಸಿಗೆ ಗುಡ್ ಬೈ ಹೇಳಿ ಬಿಜೆಪಿಗೆ ಸೇರ್ಪಡೆಯಾಗುತ್ತಾರೆ. ಅಲ್ಲಿಂದ ಇಲ್ಲಿಯತನಕ ಮತ್ತೆ ಯಾವುದೇ ವಿಚಾರಣೆ ಎದುರಿಸಲಿಲ್ಲ!!. ಟಿಎಂಸಿ ಯನ್ನು ಸೋಲಿಸಲು ಅಧಿಕಾರಿ ಗುರಾಣಿಯಾದರು . ಇವತ್ತು ಅದೇ ಅಧಿಕಾರಿ ಬಿಜೆಪಿ ನೇತೃತ್ವದ ಸರ್ಕಾರದ ಪಶ್ಚಿಮ ಬಂಗಾಳದ ಮೊದಲ ಸಿ ಎಂ ಆಗಿದ್ದಾರೆ.

    ಭ್ರಷ್ಟಾಚಾರ ಹಾಗೂ ಅಪರಾಧ ಚಟುವಟಿಕೆಯ ವಿರುದ್ಧ ದೂರುತ್ತಲೆ ಬಂದಿರುವಂತಹ ಬಿಜೆಪಿಯು, ಬಿಹಾರದಲ್ಲಿ ಅಪರಾಧ ಹಿನ್ನೆಲೆಯನ್ನು ಹೊಂದಿರುವಂತಹ ಸಾಮ್ರಾಟ್ ಚೌದರಿ ಅವರಿಗೆ ಮುಖ್ಯಮಂತ್ರಿಯನ್ನಾಗಿ ನಿಯುಕ್ತಿ ಗೊಳಿಸಿದರೆ, ಪಶ್ಚಿಮ ಬಂಗಾಳದಲ್ಲಿ, ಭ್ರಷ್ಟಾಚಾರದ ಆರೋಪದಲ್ಲಿ ಇವರದೇ ಸರ್ಕಾರದ ಅವಧಿಯಲ್ಲಿ ಇಡಿಯ ದಾಳಿಗೂ ಒಳಗಾದಂತಹ ವ್ಯಕ್ತಿಯನ್ನು ಬಿಜೆಪಿಗೆ ಕರೆತಂದು ಮುಖ್ಯಮಂತ್ರಿ ಮಾಡಿದ್ದಾರೆ ಎಂಬ ವಿಚಾರದಲ್ಲಿ ಸಾರ್ವಜನಿಕ ಚರ್ಚೆಗಳು ಪ್ರಾರಂಭವಾಗಿದೆ.

    ಪಶ್ಚಿಮ ಬಂಗಾಳದಲ್ಲಿ, ಭಾರತೀಯ ಜನತಾ ಪಕ್ಷವನ್ನು 30- 40 ವರ್ಷದಿಂದ ಪೋಷಿಸಿಕೊಂಡು ಬೆಳೆಸಿಕೊಂಡು ಬಂದಂತಹ ನಾಯಕರು ಅಲ್ಲಿದ್ದಾರೆ. ಅವರ ಕೈ ಹಾಗೂ ಬಾಯಿ, ಎರಡೂ ಶುದ್ಧವಾಗಿದ್ದವು. ಸಂಘ ಪರಿವಾರದ ಹಿನ್ನೆಲೆಯನ್ನು ಹೊಂದಿರುವಂತಹ ಅಂತಹ ನಾಯಕರ ಕೈಗೆ ಬಂಗಾಳದ ಅಧಿಕಾರ ನೀಡಿದ್ದರೆ ಗೌರವ ಹೆಚ್ಚುತ್ತಿತ್ತು ಎಂಬ ವಿಚಾರ ಆ ಚರ್ಚೆಯಲ್ಲಿ ಪ್ರಸ್ತಾಪವಾಗುತ್ತಿದೆ.

    ಬಿಹಾರದಲ್ಲಿ ಮತ್ತೊಂದು ಎಡವಟ್ಟು ಕಾಣಿಸಿಕೊಂಡಿದೆ, ನಿತೀಶ್ ಕುಮಾರ್ ಅವರ ಪುತ್ರ ನಿಶಾಂತ್ ಅವರಿಗೆ ಸಚಿವ ಸ್ಥಾನವನ್ನು ನೀಡಲಾಗಿದ್ದು, ಅವರ ನಡೆ ಹಾಗೂ ನುಡಿಯ ಬಗ್ಗೆ ಸಾಕಷ್ಟು ಗೊಂದಲವನ್ನುಂಟು ಮಾಡುತ್ತಿದೆ. ನಿಶಾಂತ್ ಗೆ ಬಿಹಾರದ ಆರೋಗ್ಯ ಖಾತೆಯನ್ನು ನೀಡಲಾಗಿದೆ. ಸಾರ್ವಜನಿಕವಾಗಿಯೇ ತೂರಾಡುತ್ತಿರುವಂತೆ ಕಾಣುವ ನಿಶಾಂತ್, ಮಾತನಾಡುವುದರಲ್ಲಿಯೂ ಸಾಕಷ್ಟು ಎಡವೂತ್ತಿದ್ದಾರೆ. ಈ ವಿಚಾರ ಸಾರ್ವಜನಿಕವಾಗಿ ನಗೆಪಾಟಲಿಗೆ ಈಡಾಗುತ್ತಿದೆ. ಅಷ್ಟೇ ಅಲ್ಲ, ತೀವ್ರ ಟೀಕೆಗೋ ಗುರಿಯಾಗುತ್ತಿದೆ. ಕೇವಲ ನಿತೀಶ್ ಕುಮಾರ್ ರವರನ್ನು ಸಂತೋಷಪಡಿಸುವುದಕ್ಕೋಸ್ಕರ ಸಚಿವ ಸ್ಥಾನ ನೀಡಲಾಗಿದೆ ಎನ್ನಲಾಗುತ್ತಿದೆಯಾದರೂ, ಅದು ಬಿಹಾರದ ಸರ್ಕಾರವಾದ್ದರಿಂದ, ನಿತೇಶ್ ಕುಮಾರ್ ಸಂತೋಷ್ ಮುಖ್ಯವಲ್ಲ, ರಾಜ್ಯದ ಘನತೆ ಹಾಗೂ ಸ್ಥಿರತೆ ಮುಖ್ಯವೆನಿಸಿಕೊಳ್ಳುತ್ತದೆ. ಮೇಲ್ನೋಟಕ್ಕೆ ಅನ್ಫಿಟ್ ವ್ಯಕ್ತಿಯಂತೆ ಕಾಣುವ ನಿಶಾಂತ್ ರವರಿಗೆ ಸಚಿವಸ್ಥಾನ ನೀಡಿರುವಂತದ್ದು ಸರಿಯಲ್ಲಾ ಎಂಬ ನೇರ ಆರೋಪವು ಬಿಹಾರದಿಂದ ಕೇಳಿ ಬರುತ್ತಿದೆ.

    ಒಟ್ಟಿನಲ್ಲಿ ಎರಡು ರಾಜ್ಯದ ಕಡೆಯಿಂದಲೂ ಬಿಜೆಪಿಯ ನಡೆಯ ಬಗ್ಗೆ ಮೊದಲ ಬಾರಿಗೆ ಅಪಸ್ವರ ವ್ಯಕ್ತವಾಗುತ್ತಿದೆ.

    COMMENTS

    Login with Gmail to comment

    ಇನ್ನಷ್ಟು ಸುದ್ದಿ

    ಫೇಸ್‌ಬುಕ್ ‘ಸುಂದರಿ’ಅವಳಲ್ಲ ಅವನು!ಲವ್ ಮಾಡಿ ಹೆಂಡತಿ ಅಂದುಕೊಂಡವನು ಗಂಡಸು ಅಂತ ಗೊತ್ತಾದಾಗ ನಡೆದಿದ್ದೇ ಬೇರೆ!
    ಶಾಮ್ ಇನ್ಸ್ಟಿಟ್ಯೂಶನ್ ಪ್ರಸ್ತುತ ಪಡಿಸಿದ “ಕಜ್ಜ” ತುಳು ಸಿನಿಮಾದ ಆಡಿಯೋ, ಟೇಲರ್ ಬಿಡುಗಡೆ
    “ಬೆಡ್‌ರೂಮ್ ರಾಜಕೀಯ”ಪಪ್ಪು ಯಾದವ್ ಹೇಳಿಕೆ ಸ್ಫೋಟಕ ಚರ್ಚೆ…!ಪಪ್ಪು ತಪ್ಪಾಗ್ ಮಾತಾಡಿದ್ದು ತಪ್ಪು 
    ಕರಾವಳಿಯಲ್ಲಿ ಮತ್ತೆ ಸೈಬರ್ ವಂಚಕರ ಅಟ್ಟಹಾಸ: 3 ಪ್ರಕರಣಗಳಲ್ಲಿ ₹12 ಲಕ್ಷಕ್ಕೂ ಅಧಿಕ ಹಣ ಕಳೆದುಕೊಂಡ ಜನ!
    “ಅಮ್ಮ”ನ ಕಾರ್ಯಕ್ರಮದಲ್ಲಿ  ಕೇಂದ್ರ ಸಚಿವರಿಂದ ರಾಜಕೀಯ ಭಾಷಣ
    Must read…ನಾಗಪ್ರಸನ್ನರ ನ್ಯಾಯಾಲಯದಲ್ಲಿ ‘ಸುಳ್ಳು ಜಾತಿ-ಆದಾಯ ಪ್ರಮಾಣಪತ್ರ ಮುಂದಿಟ್ಟ ಸಾಹುಕಾರ್ ಪುತ್ರಿಗೆ ಕ್ಲಾಸ್! ಅರುಣ್ ಶ್ಯಾಮ್ ವಾದಕ್ಕೆ ನಾಗಪ್ರಸನ್ನರ ಒಂದೊಂದು ಪ್ರಶ್ನೆಯೂ ವ್ಯವಸ್ಥೆಗೆ ಕನ್ನಡಿಯಾಯಿತು!”
    ಬೆಂಗಳೂರು ಮಾತ್ರವಲ್ಲ… ಮಂಗಳೂರಿನಿಂದಲೂ Startup ಹಾರಾಟ! ₹9.5 ಕೋಟಿಗೂ ಅಧಿಕ ಹೂಡಿಕೆಯ K-Combinatorಗೆ ಚಾಲನೆ
    ಮಂಗಳೂರಿನಲ್ಲಿ ವಕೀಲರೊಬ್ಬರ ನಕಲಿ ದುಷ್ಕೃತ್ಯ ಬಯಲಿಗೆ?
    ಉಂಡ ಮನೆಗೇ ಕನ್ನ ಹಾಕಿದ ದ್ರೋಹಿಗಳು 
    ಶಾಲಾ ಶಿಕ್ಷಕಿಯರ ಹೆಸರಿನಲ್ಲಿ ಡ್ರಗ್ಸ್ ಜಾಲ ..! ತನಿಖೆಯಲ್ಲಿ ಬೆಚ್ಚಿಬೀಳಿಸುವ ಕೊಂಡಿಗಳು ಇನ್‌ಸ್ಟಾಗ್ರಾಮ್‌ನಿಂದ ಗ್ರಾಹಕರ ಸೆಳೆತ, ಗಲ್ಫ್ ನಂಬರ್ ಮೂಲಕ ಬುಕ್ಕಿಂಗ್
    ಪರಸ್ತ್ರೀ ಹುಂಡಿಗೆ  ಒಂದುವರೆ ಕೋಟಿ ಅಪಾರ್ಟ್ಮೆಂಟ್, ಮಾಜಿ ಶಾಸಕನ ರಂಗಿನಾಟ 
    ಎಲಾನ್ ಮಸ್ಕ್: ವಿಶ್ವದ ಮೊದಲ ಟ್ರಿಲಿಯನೇರ್‌ನಿಂದ ಇನ್ನೂ ಎತ್ತರದತ್ತ!
    ಮೇ 29ರಿಂದ ತಣ್ಣೀರುಬಾವಿ ಬೀಚ್‌ನಲ್ಲಿ ಮೂರು ದಿನಗಳ ರಾಷ್ಟ್ರಮಟ್ಟದ ಸರ್ಫಿಂಗ್ ಸ್ಪರ್ಧೆ…
    “ಪ್ರೇಮ ಕಥೆ ತಿರುವು: ಗಂಡನ ಜೀವವೇ ಟಾರ್ಗೆಟ್!”ಬ್ಯಾಂಕ್ ಅಧಿಕಾರಿ ಪತ್ನಿ taxi ಚಾಲಕನೊಂದಿಗೆ ಸೇರಿ killing plan
     “ಮೀನುಗಾರರ ಡೀಸೆಲ್ & ಸಿಲಿಂಡರ್ ಸಮಸ್ಯೆಗೆ ಸರ್ಕಾರದ ತುರ್ತು ಹಸ್ತಕ್ಷೇಪ -ಇಂಧನ ಭರವಸೆ: ಮಂಗಳೂರು ಬಂದರಿನಲ್ಲಿ ತುರ್ತು ಕ್ರಮ”-
    ಹಾಸನದಲ್ಲಿ ಮೀಸಲಾತಿ ವಿಚಾರಕ್ಕೆ ವಾಕ್ಸಮರ: ರೇವಣ್ಣ–ಶಿವಲಿಂಗೇಗೌಡ ತಿರುಗೇಟು
    🚢 “ಹಾರ್ಮುಝ್‌ನಿಂದ ಮಂಗಳೂರುವರೆಗೆ – 46,000 MT ಎಲ್‌ಪಿಜಿ ಯಮಹಾಯಾತ್ರೆ!
    ಮಹಿಳಾ ಕುಸ್ತಿಪಟುಗಳ ಲೈಂಗಿಕ ಕಿರುಕುಳ ಪ್ರಕರಣ: ಬ್ರಿಜ್ ಭೂಷಣ್ ಸಿಂಗ್‌ಗೆ ದೆಹಲಿ ಕೋರ್ಟ್‌ನಿಂದ ಖುಲಾಸೆ
    ರಾಮಮಂದಿರ ಟ್ರಸ್ಟ್‌ನ ಮಹತ್ವದ ಹೇಳಿಕೆ!ಎಲ್ಲಾ ಕಾಣಿಕೆಗಳು ,ದೇಣಿಗೆ,ಚಿನ್ನ-ಬೆಳ್ಳಿ ಸೇರಿ 2,800 ಅಮೂಲ್ಯ ವಸ್ತುಗಳುಸುರಕ್ಷಿತ
    “ಕೃಷ್ಣ ಜೆ. ರಾವ್‌ ಡಿಎನ್ಎ ಸತ್ಯ ಬಯಲು — ಮಗುವಿಗೆ ನ್ಯಾಯ ಬೇಕು ಎಂದ ಹೈಕೋರ್ಟ್!”
    ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ….!!!!
    “ಆ್ಯಕ್ಷನ್ ಸಿಎಂ” ಡಿಕೆ ಶಿವಕುಮಾರ್ ತಾಳ್ಮೆಯಿಂದ ತಾಕತ್ತಿನವರೆಗೆ…ಆಡಳಿತದ ಅಬ್ಬರ ಶುರು!ಏನೇನ್ ಹೇಳಿದ್ರು ?ಕರ್ನಾಟಕದಲ್ಲಿ ಹೊಸ ಆಡಳಿತ ಶೈಲಿಯ ಆರಂಭವೇ?
    ಅಹಮದಾಬಾದ್ ಬಾಂಬ್ ಸ್ಫೋಟ:38 ಮಂದಿಗೆ ಗಲ್ಲು ಎತ್ತಿಹಿಡಿದ ಹೈಕೋರ್ಟ್
    “ವಾಹನ ಮಾರಾಟ-RC ಬದಲಾವಣೆ  ಅಗತ್ಯ.. ಇಲ್ಲವಾದರೆ ಕಾನೂನು ಸಮಸ್ಯೆಗಳು ತಪ್ಪಿದ್ದಲ್ಲ..!” ಹೈಕೋರ್ಟ್
    ಇಂಧನ ಬೆಲೆ ಏರಿಕೆ ಹೊಡೆತ Air India ಹೊಸ ತೀರ್ಮಾನ ಶಾಕಿಂಗ್ …!
    “ಯೋಗೇಶ್ ಗೌಡ ಪ್ರಕರಣದಲ್ಲಿ ಕಾನೂನು ಗರ್ಜನೆ!”ಕಾನೂನು ಕಾಯುವವರೇ ಬೂಟು ನೆಕ್ಕಿಕಾನೂನು ಮುರಿದಾಗ-7 ವರ್ಷಗಳ ಜೈಲು!ಕಾನೂನು ಇನ್ನೂ ಜೀವಂತ!”
    ಮೈ ಜುಮ್ಮೆನ್ನಿಸುವ ಬೈಕ್–ಲಾರಿ ಡಿಕ್ಕಿ ಅಪಘಾತ… ಕ್ಷಣಾರ್ಧದಲ್ಲೇ ಜೀವ ಹೋದ ಹೃದಯವಿದ್ರಾವಕ ರಸ್ತೆ ದುರಂತ
    ನಾಲ್ಕು ದಶಕಗಳ ಕಾಲ ರೋಗಿಗಳಿಗೆ ಜೀವ ನೀಡಿದ ವೈದ್ಯನೇ ಇಂದು ಯಾಕೆ ತನ್ನ ಜೀವ ತಾನೇ ತೆಗೆದುಕೊಂಡರು …
    ಧೂಮಪಾನ ಮಾಡುತ್ತಿದ್ದೀರಾ? ನಿಮ್ಮ ಮುಖ ನಿಧಾನವಾಗಿ ನಾಶವಾಗುತ್ತಿದೆ…
    ಉಡುಪಿಯ ಸಾಯಿ ರಾಜ್ ಕೋ ಆಪರೇಟಿವ್ ಸೊಸೈಟಿ ಸಿಇಒ ಆತ್ಮ ಹತ್ಯೆಗೆ ಯಾರು ಕಾರಣ?