📍 Karavali Maruta
LIVE | CONTACT
ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

ಅಲ್ಲಿ ಸೌಮೆಂದು ಅಧಿಕಾರಿ…. ಇಲ್ಲಿ ಸಾಮ್ರಾಟ್ ಚೌದರಿ, ಹೆಲ್ತ್ ಮಿನಿಸ್ಟರ್ ನಿಶಾಂತ್….

ಉತ್ತರ ಭಾರತದ ಪ್ರಮುಖ ಎರಡು ರಾಜ್ಯದಲ್ಲಿ ನ ಸರ್ಕಾರದಲ್ಲಿ ಕಾಣಿಸಿಕೊಂಡಿರುವ ಮುಖಗಳ ಬಗ್ಗೆ ದೇಶದಾದ್ಯಂತ ಚರ್ಚೆಯಾಗುತ್ತಿದೆ ಇವತ್ತು. ಅಷ್ಟಕ್ಕೂ ಆ ಎರಡೂರಾಜ್ಯ ಯಾವುದು ಗೊತ್ತಾ? ಮೊನ್ನೆ ಮೊನ್ನೆಯಷ್ಟೇ, ಅಲ್ಲಿನ ಅಧಿಕಾರ( cm) ಬದಲಾವಣೆಯಾಗಿದೆ. ಒಂದು ಕಾಲದಲ್ಲಿ ಜಂಗಲ್ ರಾಜ್ಯ ಎಂದೇ ಹೆಸರು ಪಡೆದಂತಹ ರಾಜ್ಯ ಬಿಹಾರ್. ಬಿಹಾರ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಭಾರತೀಯ ಜನತಾ ಪಕ್ಷವು ತಂದು ಕೂರಿಸಿದಂತಹ ವ್ಯಕ್ತಿಯ ಬಗ್ಗೆ ಮಾತನಾಡಲಾಗುತ್ತಿದೆ. ಅದರ ಜೊತೆಜೊತೆಗೆನೇ ಅನ್ ಫಿಟ್ಟಾಗಿ ಕಾಣುತ್ತಿರುವ ಮಾಜಿ ಮುಖ್ಯಮಂತ್ರಿ ನಿತೀಶ್ ಕುಮಾರ್ ಪುತ್ರ ನಿಶಾಂತ್ ಅವರನ್ನು ಬಿಹಾರ ರಾಜ್ಯದ ಆರೋಗ್ಯ ಸಚಿವರನ್ನಾಗಿ ಮಾಡಿರುವುದು. ಈ ಎರಡು ವಿಚಾರವೂ ಚರ್ಚೆಯಲ್ಲಿದೆ. ನಿಶಾಂತ್ ಆರೋಗ್ಯ ಸಚಿವ ಆಗಿರುವ ಬಗ್ಗೆ ಸಾಕಷ್ಟು ಟ್ರೋಲ್ ಮತ್ತು ಟೀಕೆಗೆ  ಗುರಿಯಾಗುತ್ತಿದೆ.

ಮತ್ತೊಂದೆಡೆ, ಈಗಷ್ಟೇ ಚುನಾವಣೆ ಮುಗಿದು, ಮೊದಲ ಬಾರಿಗೆ ರಾಜ್ಯವನ್ನು ತನ್ನ ಕೈವಶ ಮಾಡಿಕೊಂಡಿರುವ ಬಿಜೆಪಿ, ಆರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಆಯ್ಕೆ ಮಾಡಿದ ವ್ಯಕ್ತಿಯ ವಿಚಾರವಾಗಿ ಚರ್ಚೆ ನಡೆಯುತ್ತಿದೆ. ಆ ರಾಜ್ಯ ಬೇರೆ ಯಾವುದೂ ಅಲ್ಲ, ಅದು ಪಶ್ಚಿಮಬಂಗಾಳ. ಕಳೆದ ಹತ್ತು ವರ್ಷದಿಂದ ಈ ರಾಜ್ಯವನ್ನು ವಶ ಪಡಿಸಿಕೊಳ್ಳಲು ನಡೆಸಿದ ತಂತ್ರಗಾರಿಕೆ ಹೋರಾಟದಲ್ಲಿ ಸಫಲಗೊಂಡಿದೆ ಈಗ. ಮೊದಲ ಬಿಜೆಪಿಯ ಮುಖ್ಯಮಂತ್ರಿ ಯಾರಾಗಿದ್ದಾರೆ ಎಂದರೆ,  ಸೌಮೇಂದು ಅಧಿಕಾರಿ.

ಸೌಮೆಂದು ಅಧಿಕಾರಿ ಮೂಲತಹ ಬಿಜೆಪಿಗರಲ್ಲ, ಟಿಎಂಸಿಯಲ್ಲಿರುವಾಗ, ಶಾರದಾ ಚಿಟ್ ಫಂಡ್ ಹಗರಣದಲ್ಲಿ ಹೆಸರು ಕಾಣಿಸಿಕೊಂಡಿತ್ತು. ಕುಟುಕು ಕಾರ್ಯಾಚರಣೆಯೊಂದರಲ್ಲಿ ಅಧಿಕಾರಿ ಸಹಿತ ಐದು ಮಂದಿ ಸಂಸದರು ಸಿಕ್ಕಾಕಿಕೊಂಡಿದ್ದರು. ಪರಿಣಾಮ ಇಡಿ ದಾಳಿಗೂ ಒಳಗಾಗಿದ್ದರು. ಈ ದಾಳಿಗೆ ಒಳಗಾಗುತ್ತಿದ್ದಂತೆಯೇ, ಅಧಿಕಾರಿ ಟಿಎಂಸಿಗೆ ಗುಡ್ ಬೈ ಹೇಳಿ ಬಿಜೆಪಿಗೆ ಸೇರ್ಪಡೆಯಾಗುತ್ತಾರೆ. ಅಲ್ಲಿಂದ ಇಲ್ಲಿಯತನಕ ಮತ್ತೆ ಯಾವುದೇ ವಿಚಾರಣೆ ಎದುರಿಸಲಿಲ್ಲ!!. ಟಿಎಂಸಿ ಯನ್ನು ಸೋಲಿಸಲು ಅಧಿಕಾರಿ ಗುರಾಣಿಯಾದರು . ಇವತ್ತು ಅದೇ ಅಧಿಕಾರಿ ಬಿಜೆಪಿ ನೇತೃತ್ವದ ಸರ್ಕಾರದ ಪಶ್ಚಿಮ ಬಂಗಾಳದ ಮೊದಲ ಸಿ ಎಂ ಆಗಿದ್ದಾರೆ.

ಭ್ರಷ್ಟಾಚಾರ ಹಾಗೂ ಅಪರಾಧ ಚಟುವಟಿಕೆಯ ವಿರುದ್ಧ ದೂರುತ್ತಲೆ ಬಂದಿರುವಂತಹ ಬಿಜೆಪಿಯು, ಬಿಹಾರದಲ್ಲಿ ಅಪರಾಧ ಹಿನ್ನೆಲೆಯನ್ನು ಹೊಂದಿರುವಂತಹ ಸಾಮ್ರಾಟ್ ಚೌದರಿ ಅವರಿಗೆ ಮುಖ್ಯಮಂತ್ರಿಯನ್ನಾಗಿ ನಿಯುಕ್ತಿ ಗೊಳಿಸಿದರೆ, ಪಶ್ಚಿಮ ಬಂಗಾಳದಲ್ಲಿ, ಭ್ರಷ್ಟಾಚಾರದ ಆರೋಪದಲ್ಲಿ ಇವರದೇ ಸರ್ಕಾರದ ಅವಧಿಯಲ್ಲಿ ಇಡಿಯ ದಾಳಿಗೂ ಒಳಗಾದಂತಹ ವ್ಯಕ್ತಿಯನ್ನು ಬಿಜೆಪಿಗೆ ಕರೆತಂದು ಮುಖ್ಯಮಂತ್ರಿ ಮಾಡಿದ್ದಾರೆ ಎಂಬ ವಿಚಾರದಲ್ಲಿ ಸಾರ್ವಜನಿಕ ಚರ್ಚೆಗಳು ಪ್ರಾರಂಭವಾಗಿದೆ.

ಪಶ್ಚಿಮ ಬಂಗಾಳದಲ್ಲಿ, ಭಾರತೀಯ ಜನತಾ ಪಕ್ಷವನ್ನು 30- 40 ವರ್ಷದಿಂದ ಪೋಷಿಸಿಕೊಂಡು ಬೆಳೆಸಿಕೊಂಡು ಬಂದಂತಹ ನಾಯಕರು ಅಲ್ಲಿದ್ದಾರೆ. ಅವರ ಕೈ ಹಾಗೂ ಬಾಯಿ, ಎರಡೂ ಶುದ್ಧವಾಗಿದ್ದವು. ಸಂಘ ಪರಿವಾರದ ಹಿನ್ನೆಲೆಯನ್ನು ಹೊಂದಿರುವಂತಹ ಅಂತಹ ನಾಯಕರ ಕೈಗೆ ಬಂಗಾಳದ ಅಧಿಕಾರ ನೀಡಿದ್ದರೆ ಗೌರವ ಹೆಚ್ಚುತ್ತಿತ್ತು ಎಂಬ ವಿಚಾರ ಆ ಚರ್ಚೆಯಲ್ಲಿ ಪ್ರಸ್ತಾಪವಾಗುತ್ತಿದೆ.

ಬಿಹಾರದಲ್ಲಿ ಮತ್ತೊಂದು ಎಡವಟ್ಟು ಕಾಣಿಸಿಕೊಂಡಿದೆ, ನಿತೀಶ್ ಕುಮಾರ್ ಅವರ ಪುತ್ರ ನಿಶಾಂತ್ ಅವರಿಗೆ ಸಚಿವ ಸ್ಥಾನವನ್ನು ನೀಡಲಾಗಿದ್ದು, ಅವರ ನಡೆ ಹಾಗೂ ನುಡಿಯ ಬಗ್ಗೆ ಸಾಕಷ್ಟು ಗೊಂದಲವನ್ನುಂಟು ಮಾಡುತ್ತಿದೆ. ನಿಶಾಂತ್ ಗೆ ಬಿಹಾರದ ಆರೋಗ್ಯ ಖಾತೆಯನ್ನು ನೀಡಲಾಗಿದೆ. ಸಾರ್ವಜನಿಕವಾಗಿಯೇ ತೂರಾಡುತ್ತಿರುವಂತೆ ಕಾಣುವ ನಿಶಾಂತ್, ಮಾತನಾಡುವುದರಲ್ಲಿಯೂ ಸಾಕಷ್ಟು ಎಡವೂತ್ತಿದ್ದಾರೆ. ಈ ವಿಚಾರ ಸಾರ್ವಜನಿಕವಾಗಿ ನಗೆಪಾಟಲಿಗೆ ಈಡಾಗುತ್ತಿದೆ. ಅಷ್ಟೇ ಅಲ್ಲ, ತೀವ್ರ ಟೀಕೆಗೋ ಗುರಿಯಾಗುತ್ತಿದೆ. ಕೇವಲ ನಿತೀಶ್ ಕುಮಾರ್ ರವರನ್ನು ಸಂತೋಷಪಡಿಸುವುದಕ್ಕೋಸ್ಕರ ಸಚಿವ ಸ್ಥಾನ ನೀಡಲಾಗಿದೆ ಎನ್ನಲಾಗುತ್ತಿದೆಯಾದರೂ, ಅದು ಬಿಹಾರದ ಸರ್ಕಾರವಾದ್ದರಿಂದ, ನಿತೇಶ್ ಕುಮಾರ್ ಸಂತೋಷ್ ಮುಖ್ಯವಲ್ಲ, ರಾಜ್ಯದ ಘನತೆ ಹಾಗೂ ಸ್ಥಿರತೆ ಮುಖ್ಯವೆನಿಸಿಕೊಳ್ಳುತ್ತದೆ. ಮೇಲ್ನೋಟಕ್ಕೆ ಅನ್ಫಿಟ್ ವ್ಯಕ್ತಿಯಂತೆ ಕಾಣುವ ನಿಶಾಂತ್ ರವರಿಗೆ ಸಚಿವಸ್ಥಾನ ನೀಡಿರುವಂತದ್ದು ಸರಿಯಲ್ಲಾ ಎಂಬ ನೇರ ಆರೋಪವು ಬಿಹಾರದಿಂದ ಕೇಳಿ ಬರುತ್ತಿದೆ.

ಒಟ್ಟಿನಲ್ಲಿ ಎರಡು ರಾಜ್ಯದ ಕಡೆಯಿಂದಲೂ ಬಿಜೆಪಿಯ ನಡೆಯ ಬಗ್ಗೆ ಮೊದಲ ಬಾರಿಗೆ ಅಪಸ್ವರ ವ್ಯಕ್ತವಾಗುತ್ತಿದೆ.

COMMENTS

Login with Gmail to comment

ಇನ್ನಷ್ಟು ಸುದ್ದಿ

ಸಚಿವ ಜಮೀರ್ ಅಹಮದ್ ಹಚ್ಚಿದ ಪಟಾಕಿಗೆ ಕಾಂಗ್ರೆಸ್ ಕೋಟೆಯಲ್ಲಿ ಬಿರುಕು..!?
ಉಡುಪಿಯಲ್ಲಿ ಟ್ರೇಡಿಂಗ್ ಹೆಸರಲ್ಲಿ ಲಕ್ಷಗಟ್ಟಲೆ ಧೋಕಾ….
ಆಸ್ಪತ್ರೆಯಲ್ಲೇ ಮೂರನೇ ಮಹಡಿಯಿಂದ ಬಿದ್ದು ಸಾವುನಿರ್ಲಕ್ಷ್ಯವೇ? ಸುರಕ್ಷತೆ ಪ್ರಶ್ನೆಗೊಳಗಾಗಿದೆ!
🚨 ಬೈಂದೂರಿನಲ್ಲಿ ಭಯಾನಕ ದಾಳಿ! ಕತ್ತಿಯಿಂದ ಹಲ್ಲೆ – ಆರೋಪಿ ಬಂಧನ
ಕರ್ನಾಟಕದ ಮಾಜಿ ಸಚಿವರಿಗೆ ಜೈಲು ಜೈಲು ಶಿಕ್ಷೆಗೆ ಉಪಮುಖ್ಯಮಂತ್ರಿ ಡಿಕೆಯ ಶಾಕ್ ಸ್ಟೇಟ್ಮೆಂಟ್
ಮುಂಬಯಿಯಲ್ಲಿ ಪಹಲ್ಗಾಮ್ ಮಾದರಿ ದಾಳಿ ಯತ್ನ: ಉಗ್ರ ಚಟುವಟಿಕೆ ಯತ್ನ ವಿಫಲ…!
ಗೃಹಲಕ್ಷ್ಮಿ ಫಲಾನುಭವಿಗಳೇ ಗಮನಿಸಿ: ಹಣ ಕ್ರೆಡಿಟ್ ಆಗ್ಬೇಕಾದ್ರೆ ಇನ್ಮುಂದೆ ಬಯೋಮೆಟ್ರಿಕ್ ಕಡ್ಡಾಯ!
ಪಹಲ್ಗಾಂಮ್ ದಾಳಿಯ ಒಂದು ವರ್ಷ: ಇನ್ನೂ ಮುಗಿಯದ ನೋವು, ಮರೆಯಲಾಗದ ನೆನಪುಗಳು
ಘೋರ ಭಾನುವಾರ, ಒಂದೇ ಕುಟುಂಬದ ಎಂಟು ಮಹಿಳೆಯರ ದುರ್ಮರಣ
ಕಾರಿಗೆ ಮಹಿಳೆ ಡಿಕ್ಕಿ..ಗುಳಿಗಜ್ಜನೆ ಕಾಪಾಡಿದ್ದ..! ಎದೆ ಜಲ್ಲೆನಿಸುವ ದೃಶ್ಯ
ಮಂಗಳೂರು ಕಮಿಷನರ್ ವಿರುದ್ಧ ಎಸ್ಪಿ ಕಾಶಿನಾಥ್ ದೂರು ಕೊಡುತ್ತಿರುವುದು ಯಾಕೆ?
ಲಿವ್-ಇನ್ ಸಂಬಂಧಗಳಲ್ಲಿ ಕಾನೂನು ಮಿತಿ ಎಲ್ಲಿದೆ?-ಸುಪ್ರೀಂ ಕೋರ್ಟ್‌ನ ಮಹತ್ವದ ಪ್ರಶ್ನೆ
ಅನ್ನಭಾಗ್ಯ ಅಕ್ಕಿಯ ಅಕ್ರಮ ದಾಸ್ತಾನು ಪತ್ತೆ – ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು
ಮೇ 20ರ ಬಸ್ ಸ್ಟ್ರೈಕ್‌ಗೆ ಹೈಕೋರ್ಟ್ ಬ್ರೇಕ್..! KSRTC-BMTC ಬಸ್‌ಗಳು ನಿಲ್ಲೋದಿಲ್ಲ! ಹೈಕೋರ್ಟ್ ಮಹತ್ವದ ಆದೇಶ..
ದಾವಣಗೆರೆ & ಬಾಗಲಕೋಟೆ ಬೈಎಲೆಕ್ಷನ್ ಬಿಗ್ ಬ್ಲಾಸ್ಟ್!
ಹಲವು ಗಂಭೀರ ಅಪರಾಧ ಪ್ರಕರಣಗಳಲ್ಲಿ ಆರೋಪಿಯಾಗಿ ಕಳೆದ 8 ವರ್ಷಗಳಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯನ್ನು ಕೊನೆಗೂ ಪತ್ತೆ ಹಚ್ಚಲಾಗಿದೆ.
KSRTC ಬಸ್ ಪಲ್ಟಿಯಾಗಿ ಕಂದಕಕ್ಕೆ — ಐವರು ದುರ್ಮರಣ, ಹಲವರಿಗೆ ಗಂಭೀರ ಗಾಯ-ಜಹೀರಾಬಾದ್ ಸಮೀಪ ಭೀಕರ ರಸ್ತೆ ಅಪಘಾತ
ಒಂದು ರಾಷ್ಟ್ರ, ಒಂದು ಚುನಾವಣೆ’ಗೆ ಡಿಕೆಶಿ ಸಿಡಿದೆದ್ದೇಕೆ?
ಸಹೋದರಿಯ ಎಲುಬುಗಳೊಂದಿಗೆ ಬ್ಯಾಂಕ್ ಗೆ ಬಂದ ಅಣ್ಣ…!ದಾಖಲೆ ನಿಯಮಗಳ ನಡುವೆ ಸೋತ ಮಾನವೀಯತೆ”
ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬ್ಯಾಂಕಾಕ್‌ನಿಂದ ಬಂದ ಪ್ರಯಾಣಿಕನ ಬ್ಯಾಗ್‌ನಲ್ಲಿ 47 ಜೀವಂತ ಅಪರೂಪದ ಪ್ರಾಣಿಗಳು ಪತ್ತೆ! 
ವಿಜಯ್ ತಳಪತಿ ಸಂಗೀತಾ ವಿಚ್ಛೇದನ ವಿಚಾರ: 27 ವರ್ಷದ ದಾಂಪತ್ಯಕ್ಕೆ ತೆರೆ? ₹250 ಕೋಟಿ ಸೆಟ್ಲ್‌ಮೆಂಟ್ ಚರ್ಚೆ!!
ಹತ್ತು ವರ್ಷದಿಂದ ಪೊಲೀಸರಿಗೆ ಬೇಕಾದ ಆರೋಪಿಯನ್ನು ಕೊನೆಗೂ ಬಂಧಿಸಿದ ಪೊಲೀಸರು
ಅಮೆರಿಕಾ ವಿರುದ್ಧ ‘ಪೈರಸಿ’ ಆರೋಪ: ಇರಾನ್ ಯುಎನ್‌ಗೆ ದೂರು
ಮುಂಬೈ ಬೀದಿಯಲ್ಲಿ ನಾರಿ ಶಕ್ತಿಯ ಸಿಡಿಲು!ಜನರ ಬದುಕು ಅಡ್ಡಗಟ್ಟಿದರೆ ಎದುರಿಸುವವರು ಹೀಗೆ ಒಬ್ಬೊಬ್ಬರೇ ಇನ್ನೂ ಹುಟ್ಟುತ್ತಾರೆ..
ಎಲ್ಲೆಡೆ LPG ಗ್ಯಾಸ್ ಸಿಲಿಂಡರ್ ಸಂಕಷ್ಟ: ಇದು ಜೀವನೋಪಾಯದ ಪ್ರಶ್ನೆ… ತಕ್ಷಣ ಸಮರ್ಪಕ ಕ್ರಮ ಸರ್ಕಾರದ ಹೊಣೆ.
ದೇಶಕ್ಕಾಗಿ ಹಾರಿದ ಯುವ ಪೈಲಟ್: ಅಸ್ಸಾಂ ದುರಂತದಲ್ಲಿ ಐಎಎಫ್ ಅಧಿಕಾರಿ ವೀರಮರಣ
ರಾಜಿ ಮಾಡಲು ಬಂದವನಿಗೇ ಚೂರಿ ಇರಿತ
ನ್ಯಾಯಾಂಗಕ್ಕೆ ಕಳಂಕ ತರುವುದನ್ನು ನೋಡಿಯೂ ಕೈಕಟ್ಟಿ ಕೂರಲಾಗದು
ಹೆತ್ತ ಮಗಳನ್ನೇ ವೇಶ್ಯಾವಾಟಿಕೆಗೆ ದೂಡಲು ಯತ್ನಿಸಿದ ತಾಯಿಯ ಜೊತೆಗೆ ಮಗಳನ್ನು ಕಳುಹಿಸಲು ಕೋರ್ಟ್ ನಕಾರ 
War update-ಕಂಪ್ಲೀಟ್ ಡೀಟೇಲ್ಸ್ …ಮುಂದೇನು? ceasefire ಮುಂದುವರಿಯುತ್ತದೆಯಾ?ಶಾಂತಿ ಅಥವಾ ಸಂಘರ್ಷ? ಮುಂದಿನ ಕೆಲ ದಿನಗಳು ವಿಶ್ವದ ಭವಿಷ್ಯ ತೀರ್ಮಾನಿಸುತ್ತದೆ.