📍 Karavali Maruta
  • LOGIN
  • BREAKING
    ಧಾರವಾಡದಲ್ಲಿ ಭೀಕರ LPG ಸಿಲಿಂಡರ್ ಸ್ಫೋಟ , ಹಲವು ಮೀಟರ್ ದೂರಕ್ಕೆ ಹಾರಿದ ಬೈಕ್‌! ಹಲವರಿಗೆ ಗಾಯ CCTVಯಲ್ಲಿ ಶಾಕಿಂಗ್ ದೃಶ್ಯ ದಯಾಮರಣ ಕೇಳಿದ್ದ ತುಮಕೂರು ರಾಬಿಯಾ ಇನ್ನಿಲ್ಲ …!ಪರಮೇಶ್ವರ್ ಮುಂದೆ ಕಣ್ಣೀರಿಟ್ಟಿದ್ದ ಮಹಿಳೆ ಇಬ್ಬರು ಮಕ್ಕಳೊಂದಿಗೆ ವಿಷಸೇವಿಸಿ ಕೊನೆಯುಸಿರು…‘ಮನೆ’ ಸಿಕ್ಕರೂ ಬದುಕು ಉಳಿಯಲಿಲ್ಲ! ನೇಪಾಳ ದುರಂತ: ಕಂಪ್ಲೀಟ್ ರಿಪೋರ್ಟ್ ಇಲ್ಲಿದೆ…ಕಣ್ಣೆದುರೇ ಕೊಚ್ಚಿಹೋದ ಬದುಕು… ಲೆಕ್ಕಕ್ಕೆ ಸಿಗದ ಸಾವು, ನೋವು!ಪ್ರವಾಹದ ರೌದ್ರದ ನಡುವೆ ಮೃತದೇಹದಿಂದಲೇ ಚಿನ್ನ ಕದಿಯಲು ಯತ್ನ… ಮಾನವೀಯತೆ ಮರೆತ ಕಿರಾತಕರು!ಇಬ್ಬರು ಅರೆಸ್ಟ್! ಮಹಿಳಾ ಕಾನ್ಸ್‌ಟೇಬಲ್ ಮೇಲೆ ಪೊಲೀಸ್ ಠಾಣೆಯಲ್ಲಿ ಮಾರಣಾಂತಿಕ ಹಲ್ಲೆ ವಾಜಪೇಯಿ ಸರ್ಕಾರದ  ಕನಸಿನ ಯೋಜನೆ ನದಿ ಜೋಡಣೆ ವಿರೋಧಿಸಿ ಶಿರಸಿಯಲ್ಲಿ ಸಹಿ ಸಂಗ್ರಹ ಅಭಿಯಾನ
    ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

    ಅವಮಾನವೇ ಯಶಸ್ಸಿನ ಇಂಧನ: ಕೋಮಲ್ ಗನಾತ್ರಾ ಎಂಬ ಅದಮ್ಯ ಚೇತನ ಕೇವಲ 2 ವಾರಗಳ ಸಂಸಾರ, ನಂತರ ಜೀವಮಾನದ ಸಾಧನೆ!

    ಕೋಮಲ್ ಗನಾತ್ರಾ ಅವರ ಜೀವನದ ಈ ನಿಜವಾದ ಹೋರಾಟದ ಕಥೆ ಪ್ರತಿಯೊಬ್ಬರಿಗೂ ಸ್ಫೂರ್ತಿ ನೀಡುವಂತದ್ದು. ಕಷ್ಟಗಳ ಸುಳಿಯಿಂದ ಎದ್ದು ಬಂದು ಸಾಧನೆಯ ಶಿಖರ ಏರಿದ ಅವರ lifestory…

    ಕನಸು ನುಚ್ಚುನೂರಾದ ಕ್ಷಣ

    ಗುಜರಾತ್ ಮೂಲದ ಕೋಮಲ್ ಗನಾತ್ರಾ ಅವರಿಗೆ ನ್ಯೂಝಿಲ್ಯಾಂಡ್‌ನಲ್ಲಿ ನೆಲೆಸಿದ್ದ ಉದ್ಯಮಿಯೊಬ್ಬರ ಜೊತೆ ಮದುವೆಯಾಯಿತು. ಹೊಸ ಜೀವನದ ಸಾವಿರಾರು ಕನಸುಗಳೊಂದಿಗೆ ಗಂಡನ ಮನೆಗೆ ಹೋದ ಕೋಮಲ್‌ಗೆ ಕಾಯುತ್ತಿದ್ದುದು ವರದಕ್ಷಿಣೆ ಕಿರುಕುಳ. ಮದುವೆಯಾದ ಕೇವಲ ಎರಡೇ ವಾರಗಳಲ್ಲಿ, ಆಕೆಯ ಗಂಡ ಕೋಮಲ್ ಅವರನ್ನ ಒಂಟಿಯಾಗಿ ಬಿಟ್ಟು ಯಾರಿಗೂ ಹೇಳದೆ ನ್ಯೂಝಿಲ್ಯಾಂಡ್‌ಗೆ ಓಡಿಹೋದನು. ಆ ಬಳಿಕ ಯಾವುದೇ ಸಂಪರ್ಕಕ್ಕೂ ಸಿಗಲಿಲ್ಲ.

    ಸಮಾಜದ ಮೂದಲಿಕೆ ಮತ್ತು ತವರೂರಿನ ದುಃಖ

    ಪೊಲೀಸ್, ಸರ್ಕಾರ ಯಾರಿಂದಲೂ ಕೋಮಲ್ ಅವರಿಗೆ ಸಹಾಯ ಸಿಗಲಿಲ್ಲ. ಕೊನೆಗೆ ಬೇರೆ ದಾರಿಯಿಲ್ಲದೆ ತವರು ಮನೆಗೆ ಮರಳಿದಾಗ, ಅವರಿಗೆ ಎದುರಾಗಿದ್ದು ಸಮಾಜದ ಕುಹಕದ ಮಾತುಗಳು ಮತ್ತು ಸಂಬಂಧಿಕರ ಟೀಕೆಗಳು. ಇಂತಹ ಕಠಿಣ ಪರಿಸ್ಥಿತಿಯಲ್ಲಿ ಧೃತಿಗೆಡದ ಕೋಮಲ್, ಕಣ್ಣೀರು ಹಾಕುತ್ತಾ ಕೂರುವ ಬದಲಿಗೆ ತನ್ನ ಕಾಲ ಮೇಲೆ ತಾನು ನಿಲ್ಲಲು ನಿರ್ಧರಿಸಿದರು.

    ಹಳ್ಳಿಯ ಶಾಲೆಯಿಂದ ಶುರುವಾದ ಹೊಸ ಪಯಣ

    ಮಾನಸಿಕ ನೆಮ್ಮದಿಗಾಗಿ ಕೋಮಲ್ ತನ್ನ ಊರಿನಿಂದ 40 ಕಿಲೋಮೀಟರ್ ದೂರದಲ್ಲಿದ್ದ ಒಂದು ಸಣ್ಣ ಹಳ್ಳಿಯ ಪ್ರಾಥಮಿಕ ಶಾಲೆಗೆ ತಿಂಗಳಿಗೆ ಕೇವಲ 5,000 ರೂಪಾಯಿ ಸಂಬಳಕ್ಕೆ ಶಿಕ್ಷಕಿಯಾಗಿ ಸೇರಿದರು. ಇದರ ಜೊತೆಯಲ್ಲೇ ಅಂಚೆ ತೆರಪಿನ ಶಿಕ್ಷಣದ (Correspondence) ಮೂಲಕ ಬಿ.ಎ. ಪದವಿಯನ್ನೂ ಮುಗಿಸಿದರು.

    ವ್ಯವಸ್ಥೆಯನ್ನು ಬದಲಿಸುವ ಛಲ

    ಒಂದು ದಿನ ಕೋಮಲ್ ಅವರಿಗೆ ಅನಿಸಿತು—”ಸಂಕಷ್ಟದಲ್ಲಿದ್ದಾಗ ನನಗೆ ಸಹಾಯ ಮಾಡದ ಈ ಸರ್ಕಾರಿ ವ್ಯವಸ್ಥೆಯ ವಿರುದ್ಧ ಅಳುತ್ತಾ ಕೂರುವುದಕ್ಕಿಂತ, ನಾನೇ ಆ ವ್ಯವಸ್ಥೆಯ ಭಾಗವಾಗಿ ಸಮಾಜಕ್ಕೆ ಯಾಕೆ ಒಳ್ಳೆಯದು ಮಾಡಬಾರದು?” ಎಂದು. ಅವಮಾನ ಮಾಡಿದ ಜನರಿಗೆ ತನ್ನ ಯಶಸ್ಸಿನ ಮೂಲಕವೇ ಉತ್ತರ ನೀಡಲು ಕಠಿಣವಾದ UPSC (ಐಎಎಸ್/ಐಪಿಎಸ್) ಪರೀಕ್ಷೆ ಬರೆಯಲು ತೀರ್ಮಾನಿಸಿದರು.

    ಸೌಲಭ್ಯಗಳಿಲ್ಲದ ಹಳ್ಳಿಯಲ್ಲೇ ಕಠಿಣ ತಪಸ್ಸು

    ಅವರು ಇದ್ದ ಹಳ್ಳಿಯಲ್ಲಿ ಸರಿಯಾದ ವಿದ್ಯುತ್ ಇರಲಿಲ್ಲ, ಓದಲು ಇಂಗ್ಲಿಷ್ ಪತ್ರಿಕೆಗಳೂ ಸಿಗುತ್ತಿರಲಿಲ್ಲ. ಆದರೂ ಸಿಕ್ಕ ಅತ್ಯಲ್ಪ ಸೌಲಭ್ಯಗಳಲ್ಲೇ ಹಗಲಿರುಳು ಓದಿದರು. ಮೊದಲ ಮೂರು ಪ್ರಯತ್ನಗಳಲ್ಲಿ ಸೋಲು ಎದುರಾದರೂ ಅವರು ಹಿಂದೆ ಸರಿಯಲಿಲ್ಲ. ಕೊನೆಗೆ 2012ರಲ್ಲಿ, ತಮ್ಮ 4ನೇ ಪ್ರಯತ್ನದಲ್ಲಿ ದೇಶದಲ್ಲೇ 591ನೇ ರಾಂಕ್ ಪಡೆದು IRS (ಇಂಡಿಯನ್ ರೆವಿನ್ಯೂ ಸರ್ವಿಸ್) ಅಧಿಕಾರಿಯಾಗಿ ಆಯ್ಕೆಯಾದರು.

    ಹೊಸ ಬದುಕು, ಹೊಸ ಆಶಾಕಿರಣ

    ಇಂದು ಕೋಮಲ್ ಗನಾತ್ರಾ ಅವರು ಯಶಸ್ವಿ ಐಆರ್‌ಎಸ್ ಅಧಿಕಾರಿಯಾಗಿ ದೇಶ ಸೇವೆ ಮಾಡುತ್ತಿದ್ದಾರೆ. ಜೀವನ ಅವರಿಗೆ ಮತ್ತೊಂದು ಸುಂದರ ಅವಕಾಶ ನೀಡಿದ್ದು, ಪ್ರಸ್ತುತ ನ್ಯಾಯಾಧೀಶರಾದ ಮೋಹಿತ್ ಶರ್ಮಾ ಅವರನ್ನು ವಿವಾಹವಾಗಿ, ಮುದ್ದಾದ ಮಗಳೊಂದಿಗೆ ಸಂತೋಷದ ಸಂಸಾರ ನಡೆಸುತ್ತಿದ್ದಾರೆ.

    ಈ ಕಥೆ ನೀಡುವ ಸಂದೇಶ:

    ಜೀವನದಲ್ಲಿ ಒಂದು ಬಾಗಿಲು ಮುಚ್ಚಿದರೆ ಬದುಕು ಮುಗಿಯುವುದಿಲ್ಲ, ಮತ್ತೊಂದು ಹೊಸ ಬಾಗಿಲು ತೆರೆದೇ ಇರುತ್ತದೆ. ಶಿಕ್ಷಣ, ಧೃಢಸಂಕಲ್ಪ ಮತ್ತು ಕಠಿಣ ಪರಿಶ್ರಮವಿದ್ದರೆ ಜಗತ್ತಿನಲ್ಲಿ ಯಾವುದೇ ಸೋಲು ಶಾಶ್ವತವಲ್ಲ ಎಂಬುದಕ್ಕೆ ಕೋಮಲ್ ಅವರೇ ಸಾಕ್ಷಿ.

    ##InspirationalStoryKannada #WomenEmpowerment #UPSC_Motivation #ಕೋಮಲ್‌ಗನಾತ್ರಾ #ಛಲದಬಿರುಗಾಳಿ #ಸಾಧನೆಯಹಾದಿ

    COMMENTS

    Login with Gmail to comment

    ಇನ್ನಷ್ಟು ಸುದ್ದಿ

    ಮುದ್ದಾದ ಅವಳಿ ಹೆಣ್ಣು ಮಕ್ಕಳನ್ನು ಕತ್ತು ಸೀಳಿ ಕೊಂದ ಪಾಪಿ ಅಪ್ಪ
    ಸೂರತ್‌ನಲ್ಲಿ ಮಳೆಯ ರೌದ್ರನರ್ತನ: 200ಕ್ಕೂ ಹೆಚ್ಚು ಅಂಗಡಿಗಳಿಗೆ ನೀರು ನುಗ್ಗಿ ₹200 ಕೋಟಿ ನಷ್ಟ – ಕಣ್ಣೀರಿನಲ್ಲಿ ಮುಳುಗಿದ ವ್ಯಾಪಾರಿಗಳು
    ಜೂನ್ 30,ಪ್ಲಾಸ್ಟಿಕ್ ನೋಟುಗಳು ಬರುತ್ತಿವೆಯೇ? – ವೈರಲ್ ಸುದ್ದಿಯ ಹಿಂದಿನ ವಿಷಯ
    ಜೀವನ್ಮರಣ ಹೋರಾಟದಲ್ಲೂ ಗೆಳೆಯರ ಬದುಕಿಸಿದ 14ರ ಬಾಲಕನ ರೋಚಕ  ಸ್ಟೋರಿ 
    ಅನಾಥ ಪುಟ್ಟ ಬಾಲಕಿಯರ ಮೇಲೆ ವರ್ಷಗಳ ಕಾಲ ಲೈಂಗಿಕ ದೌರ್ಜನ್ಯ:ರಾಕ್ಷಸ ಮನಸ್ಸುಗಳಿಗೆ ಅಂತ್ಯ ಯಾವಾಗ?
    ತಿರುಮಲ ತಿಮ್ಮಪ್ಪನ 3,550 ಮೆಟ್ಟಿಲು ಹತ್ತಿದ 116 ವರ್ಷದ ನವನೀತಮ್ಮ ಕರ್ನಾಟಕದ ಶತಾಯುಷಿ!
     ಡೊನಾಲ್ಡ್ ಟ್ರಂಪ್ ಟೆರರ್ ನಡೆ      ವಿಶ್ವದ ಆರ್ಥಿಕತೆ ಪಾತಾಳದ ಕೆಡೆ
    ತಾಯಿಯನ್ನೇ ಮದುವೆಗೆ ಆಹ್ವಾನಿಸದ ಕಾರಣಕ್ಕೆ ಉದ್ಯೋಗ ಕಳೆದುಕೊಂಡ ಯುವಕ…!
    ಸದ್ಯದಲ್ಲೇ ಬರುತ್ತೆ ತಣ್ಣೀರ್ಬಾವಿ ಬೀಚ್‌ಗೆ shortcut ಮಾರ್ಗ!30 ನಿಮಿಷ ಕಡಿಮೆ ಪ್ರಯಾಣ..!
    ಡಿಕೆಶಿ ಸೈಲೆಂಟ್ ಆಪರೇಷನ್ ಮಿಸ್ ಫೈರ್ ಆಗಿದ್ದೆಲ್ಲಿ?ರಾಷ್ಟ್ರ ರಾಜಧಾನಿಯಲ್ಲಿ ಕರ್ನಾಟಕ ಕಾಂಗ್ರೆಸ್ ಹೈ-ವೋಲ್ಟೇಜ್ ಹರಟೆ…!
    ಸಾರ್ವಜನಿಕರಲ್ಲಿ ವಿನಂತಿ …!
    ಕ್ಲೌಡ್ ಮಾರುಕಟ್ಟೆಗೆ ಮಾರ್ಕ್ ಜುಕರ್‌ಬರ್ಗ್ ಎಂಟ್ರಿ!?ಇಡೀ ಟೆಕ್ ಪ್ರಪಂಚವೇ ಬೆಚ್ಚಿಬೀಳುವಂತಿದೆ ಜುಕರ್‌ಬರ್ಗ್ ಮುಂದಿನ ನಡೆ!
    19 ವರ್ಷದ ಆಯಾನ್ ಅಹ್ಮದ್ ತನ್ವೀರ್ ಅಹ್ಮದ್ ವಿರುದ್ಧ ಗಂಭೀರ ಸೈಬರ್ ಲೈಂಗಿಕ ಶೋಷಣೆ ..!ಅಮರಾವತಿ ಭೀಕರ ಪ್ರಕರಣ-
    “ಕಣ್ಣು ಮುಚ್ಚಿಸಿ ಕಟ್ಟಿ ಹಾಕಿ ಬೆಂಕಿ ಹಚ್ಚಿದಳು: ರೋಲ್ ಪ್ಲೇ ಹೆಸರಿನಲ್ಲಿ ಪ್ರಿಯಕರನ ಭೀಕರ ಕೊಲೆ-ಬೆಚ್ಚಿಬೀಳಿಸುವ ಘಟನೆ”
    ಕರ್ನಾಟಕದಲ್ಲಿ ಈಗ ಏನು ಟ್ರೆಂಡಿಂಗ್ ಗೊತ್ತಾ…! ಸಾಲು ಸಾಲು ಹಗರಣ, ಲಂಚವತಾರ , ಅಕ್ರಮ ನೇಮಕಾತಿ,ಟ್ರಾನ್ಸ್‌ಫರ್ ಮಾಫಿಯಾ ..ಒಂದೋ ಎರಡೋ….!??
    ಕರ್ನಾಟಕದಲ್ಲೇ ಮೊದಲು-ಕಿಚ್ಚ ಸುದೀಪ್ ಕೈಯಿಂದ ಗ್ರಾಂಡ್ ಓಪನಿಂಗ್!₹130 ಕೋಟಿ ವೆಚ್ಚದ ವಿಶ್ವದರ್ಜೆಯ ‘MR-Linac’ ತಂತ್ರಜ್ಞಾನ ಹೈಟೆಕ್ ಕ್ಯಾನ್ಸರ್ ಆಸ್ಪತ್ರೆ!
    ಮಹಿಳಾ ದಿನಾಚರಣೆಯಲ್ಲಿ ಮಹಿಳಾ ಸಂಪನ್ಮೂಲ ಕೇಂದ್ರ ಉದ್ಘಾಟನೆ, ಜಾಗೃತಿ ಕಾರ್ಯಕ್ರಮ
    ಸ್ಪೀಕರ್ ಯುಟಿ ಖಾದರ್‌ಗೆ ಮುತ್ತಿಗೆ: 11 ಜನರ ವಿರುದ್ಧ FIR
    ಸ್ಮಾರ್ಟ್ ಲಾಕ್ ಇದ್ದ ಸುರಕ್ಷಿತ ಮನೆಯಲ್ಲೇ ಯುವತಿಯ ರೇಪ್ ಅಂಡ್ ಮರ್ಡರ್…!ನಗರವನ್ನು ಬೆಚ್ಚಿಬೀಳಿಸಿದ ಘಟನೆ”
    ದವಳ ಕೋ- ಆಪರೇಟಿವ್ನ ಈ ಸಾಲಿನ ವ್ಯವಹಾರ ಎರಡುನೂರು ಕೋಟಿ
    ಕರಾವಳಿಯಲ್ಲಿ ಮತ್ತೆ ಸೈಬರ್ ವಂಚಕರ ಅಟ್ಟಹಾಸ: 3 ಪ್ರಕರಣಗಳಲ್ಲಿ ₹12 ಲಕ್ಷಕ್ಕೂ ಅಧಿಕ ಹಣ ಕಳೆದುಕೊಂಡ ಜನ!
    ಕೇಂದ್ರದ ಮೌನ ಮತ್ತು ಪ್ರಜಾಪ್ರಭುತ್ವದ ಅಣಕಕ್ಕೆ ಜಂತರ್ ಮಂತರ್‌ನಲ್ಲಿ ಧಗಧಗಿಸುತ್ತದ ನೀಟ್ (NEET) ಕಿಚ್ಚು…!
    ಉಡುಪಿ ಸಬ್ ರಿಜಿಸ್ಟರ್ ಕಚೇರಿಯಲ್ಲಿ ಕಾನೂನುಬಾಹಿರ ಚಟುವಟಿಕೆ
    ಹೆಣ್ಣು ಎಂಬ ಕನಿಕರ, ಸಿಗದ ಹಾಗೆ ಮಾಡಿದ ಮಾಯಾಂಗನೇ…
    ನಿವೇಶನ ಮೋಸದ ಆರೋಪ: ಶಾಸಕ ಎಸ್ ಟಿ ಸೋಮಶೇಖರ್ ಬೆಂಬಲಿಗ ಕೇಬಲ್ ಕೃಷ್ಣನ ಮೇಲೆ ಹಿಗ್ಗಾಮುಗ್ಗಾ ಹಲ್ಲೆ..!
    NEET ಹಂಗಾಮ ನೀಟಾಗಿ ಅಂತ್ಯ ಕಾಣುತ್ತಾ…?!ಮೋದಿಯ ‘ತಡವಾದ ಪ್ರತಿಕ್ರಿಯೆ’-ಕೊನೆಗೂ ವಾಂಗ್ಚುಕ್ ಉಪವಾಸ ಅಂತ್ಯ… ಆದರೆ … ‘ಕಾಕ್ರೋಚ್’ ಹೋರಾಟ ಮುಂದುವರಿಕೆ!ಮುಂದೇನು??
    ಬೈಂದೂರಿನಲ್ಲಿ ಹಳೆ ವೈಷಮ್ಯದಿಂದ ಮನೆಗೆ ನುಗ್ಗಿ ಹಲ್ಲೆಗೆ ಯತ್ನ
    ಬೈಜು ರವೀಂದ್ರನ್ ಗೆ ಕೊನೆಗೂ ಜೈಲು ಶಿಕ್ಷೆ …!ಮುಳುಗಿಯೇ ಹೋಯ್ತು ಬೈಜೂಸ್!ಕೋಟಿ ಕೋಟಿ ಲೂಟಿ ಮಾಡಿ ಕ್ರಿಕೆಟ್ ಜರ್ಸಿಯಿಂದ ಜೈಲಿನ ಕೈದಿ ನಂಬರ್ ವರೆಗೆ….ಬೈಜೂಸ್ ಸಾಮ್ರಾಜ್ಯದ ರೋಚಕ ಪತನದ inside story
    ಮಂಗಳೂರು ದಸರಾ ಮೆರವಣಿಗೆಗೆ ವಿದ್ಯುತ್ ತಂತಿಗಳ ಸಮಸ್ಯೆಗೆ ಗುಡ್‌ಬೈ!