📍 Karavali Maruta
LIVE | CONTACT
ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

ಆಡುತ್ತಾ ಆಡುತ್ತಲೇ ಜೀವ ಬಿಟ್ಟ ಫಿಟ್ ಆಗಿದ್ದ ಯುವಕ್ರಿಕೆಟಿಗ… ನೀರು ಕುಡಿದ ತಕ್ಷಣವೇ ಕುಸಿದು ಬಿದ್ದ ರಣಜಿ ಆಟಗಾರ… 

ಕ್ರಿಕೆಟ್ ಮೈದಾನದಲ್ಲೇ ಕುಸಿದ ಕನಸುಶಿವಮೊಗ್ಗದ ಅಕ್ಷಯ್ ಎಸ್.ಎಲ್ ಹೃದಯಾಘಾತಕ್ಕೆ ಬಲಿ!

ಬೆಂಗಳೂರು ನಗರದ ಎಸ್ಎಲ್ಆರ್ ಕ್ರೀಡಾಂಗಣದಲ್ಲಿ ನಡೆದ ಕೆಎಸ್‌ಸಿಎ 3rd ಡಿವಿಷನ್ ಲೀಗ್ ಪಂದ್ಯಾವಳಿ ಮಧ್ಯೆ ಸಂಭವಿಸಿದ ದಾರುಣ ಘಟನೆ ಕ್ರಿಕೆಟ್ ವಲಯವನ್ನು ಶಾಕ್‌ಗೆ ಗುರಿಮಾಡಿದೆ. ಶಿವಮೊಗ್ಗ ಮೂಲದ ಕ್ರಿಕೆಟಿಗ ಅಕ್ಷಯ್ ಎಸ್.ಎಲ್, ಪಂದ್ಯ ಆಡುತ್ತಿರುವಾಗಲೇ ಹೃದಯಾಘಾತಕ್ಕೊಳಗಾಗಿ ಮೃತಪಟ್ಟಿದ್ದಾರೆ.

ಅಕ್ಷಯ್ ಕೇವಲ ಸ್ಥಳೀಯ ಆಟಗಾರ ಮಾತ್ರವಲ್ಲ… ಕರ್ನಾಟಕ ಕ್ರಿಕೆಟ್ ವಲಯದಲ್ಲಿ ತನ್ನದೇ ಆದ ಗುರುತು ಮೂಡಿಸಿದ್ದ ಪ್ರತಿಭಾವಂತ ಆಟಗಾರ. 2015ರಲ್ಲಿ ರಣಜಿ ಟ್ರೋಫಿ ಗೆದ್ದ ಕರ್ನಾಟಕ ತಂಡದ ಸದಸ್ಯನಾಗಿದ್ದ ಅವರು, ಕರ್ನಾಟಕ ಪರ 6 ರಣಜಿ ಹಾಗೂ 3 ಏಕದಿನ ಪಂದ್ಯಗಳನ್ನು ಆಡಿದ್ದರು. ಶಿವಮೊಗ್ಗದಲ್ಲೇ ಉತ್ತರ ಪ್ರದೇಶ ವಿರುದ್ಧ ಕರ್ನಾಟಕ ತಂಡದ ಪರ ಪಾದಾರ್ಪಣೆ ಮಾಡಿದ್ದ ಅಕ್ಷಯ್, ಮಧ್ಯಮ ವೇಗದ ಬೌಲರ್ ಜೊತೆಗೆ ಭರವಸೆಯ ಬ್ಯಾಟರ್ ಆಗಿಯೂ ಹೆಸರು ಮಾಡಿದ್ದರು.

ಘಟನೆಯ ದಿನವೂ ಅಕ್ಷಯ್ ಅತ್ಯಂತ ಉತ್ಸಾಹದಿಂದ ಪಂದ್ಯದಲ್ಲಿ ಭಾಗಿಯಾಗಿದ್ದರು. ನಾಲ್ಕು ಓವರ್ ಬೌಲಿಂಗ್ ಮಾಡಿ 19 ರನ್ ನೀಡಿ ಒಂದು ಪ್ರಮುಖ ವಿಕೆಟ್ ಪಡೆದಿದ್ದರು. ಆದರೆ ಆಟದ ಮಧ್ಯೆ ಏಕಾಏಕಿ ಎದೆನೋವು ಕಾಣಿಸಿಕೊಂಡಿದ್ದು, ತಕ್ಷಣವೇ ಅಂಪೈರ್‌ಗೆ ಮಾಹಿತಿ ನೀಡಿದ್ದರು ಎನ್ನಲಾಗಿದೆ.

ಅದಾದ ಬಳಿಕ ನೀರು ಕುಡಿದ ತಕ್ಷಣವೇ ಅಕ್ಷಯ್ ಮೈದಾನದಲ್ಲೇ ಕುಸಿದು ಬಿದ್ದಿದ್ದಾರೆ. ಅಲ್ಲಿ ಇದ್ದ ಆಟಗಾರರು ಮತ್ತು ಸಿಬ್ಬಂದಿ ತಕ್ಷಣ ಆಸ್ಪತ್ರೆಗೆ ಕರೆದೊಯ್ಯಲು ಮುಂದಾದರೂ, ಮಾರ್ಗ ಮಧ್ಯೆಯೇ ಅವರು ಕೊನೆಯುಸಿರೆಳೆದಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಈ ದುರ್ಘಟನೆ ಇದೀಗ ಕ್ರೀಡಾಪಟುಗಳ ಆರೋಗ್ಯದ ಬಗ್ಗೆ ದೊಡ್ಡ ಚರ್ಚೆಗೆ ಕಾರಣವಾಗಿದೆ. ಹೊರಗೆ ಫಿಟ್ ಆಗಿ ಕಾಣಿಸುವ ಯುವ ಆಟಗಾರರಲ್ಲೂ ಹೃದಯ ಸಂಬಂಧಿ ಸಮಸ್ಯೆಗಳು ಹೆಚ್ಚುತ್ತಿರುವುದು ಆತಂಕ ಮೂಡಿಸಿದೆ. ನಿರಂತರ ಫಿಟ್ನೆಸ್, ಒತ್ತಡದ ಜೀವನಶೈಲಿ, ದೇಹದ ಒಳಗಿನ ಅಜ್ಞಾತ ಆರೋಗ್ಯ ಸಮಸ್ಯೆಗಳು ಇಂತಹ ದುರಂತಗಳಿಗೆ ಕಾರಣವಾಗಬಹುದು ಎಂದು ವೈದ್ಯರು ಎಚ್ಚರಿಸುತ್ತಿದ್ದಾರೆ.

ಕ್ರಿಕೆಟ್ ಮೇಲಿನ ಅಪಾರ ಪ್ರೀತಿಯ ಜೊತೆ ಬ್ಯಾಂಕ್ ಉದ್ಯೋಗಿಯಾಗಿ ಕೆಲಸ ನಿರ್ವಹಿಸುತ್ತಿದ್ದ ಅಕ್ಷಯ್, ಶಿವಮೊಗ್ಗದ ದುರ್ಗಿಗುಡಿ ಕ್ರಿಕೆಟ್ ಕ್ಲಬ್‌ನ ಹೆಮ್ಮೆಯ ಆಟಗಾರರಾಗಿದ್ದರು. ಅವರ ಅಕಾಲಿಕ ನಿಧನಕ್ಕೆ ಕೆಎಸ್‌ಸಿಎ ಹಾಗೂ ಶಿವಮೊಗ್ಗ ಕ್ರಿಕೆಟ್ ವಲಯದಿಂದ ಭಾರೀ ಸಂತಾಪ ವ್ಯಕ್ತವಾಗಿದೆ.

ಒಬ್ಬ ಪ್ರತಿಭಾವಂತ ಕ್ರಿಕೆಟಿಗನ ಬದುಕು ಮೈದಾನದಲ್ಲೇ ಅಂತ್ಯವಾದ ಘಟನೆ ಇದೀಗ ಎಲ್ಲರ ಮನಸ್ಸನ್ನೂ ಭಾರವಾಗಿಸಿದೆ 🕯️

##Shivamogga #CricketNews #HeartAttack #BreakingNews #SportsTragedy #KSCA

COMMENTS

Login with Gmail to comment

ಇನ್ನಷ್ಟು ಸುದ್ದಿ

“ಮಂಜಿನ ನಡುವೆ ಕ್ಷಣಾರ್ಧದಲ್ಲಿ ಮಾಯವಾದ ಮಗಳು”ಶ್ರೀನಂದಾ ಶವವಾಗಿ ಪತ್ತೆ…!
ವಯನಾಡಿನ ಮೇಪ್ಪಾಡಿ ವಲಯದಲ್ಲಿ ಮರುಕಳಿಸಿದ 2024ರ ಭೂಕುಸಿತದ ಕರಾಳತೆ
ನಿರ್ಮಾಣ ಹಂತದ ಗಾಲ್ಫ್ ಕೋರ್ಸ್‌ನ ಕೆರೆಯಲ್ಲಿ ತೇಲಿದ ಮೂವರು ಬಾಲಕರ ಶವಗಳು..!
ಪರಮೇಶ್ವರ ವಿರುದ್ಧ FIR-₹500 ಬೆಟ್ಟಿಂಗ್ ಹೇಳಿಕೆಗೆ ಕಾನೂನು ಕ್ರಮ.
2 ನಿಮಿಷ ತಡವಾದರೆ ಒಂದು ವರ್ಷ ಶಿಕ್ಷೆಯೇ? –ವಿದ್ಯಾರ್ಥಿಯ ಭವಿಷ್ಯಕ್ಕಿಂತ ಗಡಿಯಾರದ ಮುಳ್ಳು ದೊಡ್ಡದಾಯಿತೇ? 
ಉಡುಪಿ ಜಿಲ್ಲಾಆಸ್ಪತ್ರೆಯಲ್ಲಿ ಹಗರಣ, ತಾರತಮ್ಯದ ಆರೋಪ: ವೀಣಾದೇವಿ ವಿರುದ್ಧದಕ್ರಮ ಕಣ್ಣೊರೆಸುವ ತಂತ್ರ
ಇಂದು ಮಾಜಿ ಸಚಿವರಿಂದ ಸೌಹಾರ್ದ ಇಫ್ತಾರ್ ಕೂಟ 
“ವಚನಾನಂದ ಶ್ರೀ ಸರದಿ ಸಾಲಿನಲ್ಲಿ ಮಕ್ಕಳನ್ನು ಕರೆಯುತ್ತಿದ್ದರು”– ಪೀಠದಿಂದ ಉಚ್ಚಾಟನೆ ಬಳಿಕ ಪೋಕ್ಸೋ ಕೇಸ್ ಶಾಕ್..ಮಠದಲ್ಲಿ ಭಾರೀ ಸಂಚಲನ .. ಭೇಟಿ ನೀಡಿದ ಮಕ್ಕಳ ಕಲ್ಯಾಣ ಸಮಿತಿ
ದೆಹಲಿ ಜಂತರ್ ಮಂತರ್‌ನಲ್ಲಿ ಏನಾಗುತ್ತಿದೆ?ವಿದ್ಯಾರ್ಥಿಗಳ ಕೋಪದ ಸ್ಫೋಟಕ್ಕೆ ದೆಹಲಿ ಸಾಕ್ಷಿ!
ಗುರು ಬ್ರಹ್ಮ – ಗುರು ವಿಷ್ಣು ಅನ್ನುವ ಕಾಲ ಮುಗಿದು ಹೋಯ್ತೇ?
ನನ್ನನ್ನು ದುರ್ಬಲ ವ್ಯಕ್ತಿ ಅಂದುಕೊಳ್ಳಬೇಡಿ- U.T ಖಾದರ್
ಡೆಲಿವರಿ ಬಾಯ್‌ಗೆ ಅಡ್ಡಗಟ್ಟಿ ಹಲ್ಲೆ – ಪ್ರಕರಣ ದಾಖಲು
ಆಪಲ್‌ಗೆ ಭಾರತದಲ್ಲಿ ದೊಡ್ಡ ಕಾನೂನು ಶಾಕ್? App Store ನಿಯಮಗಳ ಮೇಲೆ ಆಪಲ್ vs ಭಾರತ CCI ಜಟಾಪಟಿ 
ತೈಲ ಟ್ಯಾಂಕರ್ ಮೇಲೆ ಇರಾನ್ ಆತ್ಮಹತ್ಯಾ ದೋಣಿ ದಾಳಿ – ಭಾರತೀಯ ನಾವಿಕ ಸಾವು
ಜಮೀರ್ ಅಹಮದ್ ಉಚ್ಛಾಟನೆಗೆ ಕ್ಷಣಗಣನೆ
ಹೋಳಿ ಮತ್ತು ರಂಜಾನ್ ಒಂದು ಜೀವವನ್ನೇ ನುಂಗಿತು..!
ಆನ್ ಲೈನ್ ವಂಚನೆ ಶಿರ್ವದ ಯುವತಿಗೆ ಲಕ್ಷ ಲಕ್ಷ ಉಂಡೆನಾಮ… ಬ್ಯಾಂಕ್ ನಿಯಮ ವಂಚಕರಿಗೆ  ಸಹಕಾರಿ?
ಬಾವಿ ಮುಖ್ಯಮಂತ್ರಿ ಆಪ್ತನ ಭೀಕರ ಹತ್ಯೆ ಹಿಂದೆ ಯಾರು?
Trump ಮಾತಿಗೆ Iran ಸಂಸತ್ ಸ್ಪೀಕರ್‌ನ ಕಠಿಣ ಸಂದೇಶ ವಿಶ್ವದ ಗಮನ ಸೆಳೆದಿದೆ!
ಬ್ರಹ್ಮಾವರ ಅಪಾರ್ಟ್‌ಮೆಂಟ್ ರೂಮಿನಲ್ಲಿ ಯುವತಿಯ ನಿಗೂಢ ಸಾವು
ಅಕ್ರಮ ಪ್ರವೇಶ, ದೌರ್ಜನ್ಯ, ಹಾಗೂ ಕೃಷಿ ಚಟುವಟಿಕೆಗೆ ತಡೆಯ ಬಗ್ಗೆ ದೂರು ದಾಖಲು
ಸುಳ್ಯದಲ್ಲಿ ಚಿನ್ನಾಭರಣ ಕಳವು,  ಮಹಿಳೆಯ ಮೇಲೆ ಶಂಕೆ
ಅಮೆರಿಕ–ಇಸ್ರೇಲ್ ದಾಳಿ ಬಳಿಕ ಇರಾನ್‌ನಲ್ಲಿ ಉದ್ವಿಗ್ನತೆ ತಾರಕಕ್ಕೆ
ಮಂಗಳೂರಿನಲ್ಲಿ ಮುಂಜಾನೆ ನಡೆದ ರೌಡಿಶೀಟರ್ ಹತ್ಯೆ – ದುಷ್ಕರ್ಮಿಗಳ  ಜಾಡು ಬೆನ್ನಟ್ಟಿದ ಪೊಲೀಸ್‌ ಪಡೆ….ಮಹತ್ವದ ಸುಳಿವು…..!
ಬೆಂಗಳೂರು ಟು ಮುಂಬೈ  ಐದೇ ಘಂಟೆ ಪ್ರಯಾಣ- ಎಕ್ಸ್ಪ್ರೆಸ್ ಹೈವೇಗೆ ಅಸ್ತು
ಸ್ಟರ್ಲಿಂಗ್ ವಸತಿ ಶಾಲೆಯ ಶಿಸ್ತಿನ ಹೆಸರಲ್ಲಿ 12 ವರ್ಷದ ಮುಗ್ಧನ ಜೀವ ಕಸಿದ ಕ್ರೌರ್ಯ!ಅನುಮಾನಾಸ್ಪದ ಸಾವಿನ ಸುತ್ತ ಹರಡಿದ ಆಘಾತಕಾರಿ ಸತ್ಯ…ಇಲ್ಲಿದೆ
ಏರ್ ಇಂಡಿಯಾದಿಂದ ದೈನಂದಿನ ವಿಮಾನ ಹಾರಾಟದ ಬಗ್ಗೆ ನೂತನ ಪ್ರಕಟಣೆ
ಸಿಎಂ ಕುರ್ಚಿಯನ್ನು, ಡಿಕೆಗೆ ಮಗ್ಗಲ ಮುಳ್ಳನ್ನಾಗಿಸಲು ಸಕಲ ತಯಾರಿ
ಪ್ರಧಾನಿ ಮೋದಿ ಯವರಿಗೆ ಡೈರೆಕ್ಟ್ ಬೆದರಿಕೆ ಹಾಕಿದ ಹೆಂಗಸು!!
ಬಂಗಾಳದಲ್ಲಿ ಬಿಜೆಪಿಯ ಯುದ್ಧೋನ್ಮಾದ, ದೀದಿಯ ರಚ್ಚೆ…