📍 Karavali Maruta
  • LOGIN
  • BREAKING
    ‘ಮೇಡ್ ಇನ್ ಮಂಗಳೂರು’ ಹಡಗು ಜರ್ಮನ್ ಸಂಸ್ಥೆಯ ತೆಕ್ಕೆಗೆ; ವಿಶ್ವದ ಗಮನ ಸೆಳೆದ ಚೌಗುಲೆ ಶಿಪ್‌ಯಾರ್ಡ್! ಧಾರವಾಡದಲ್ಲಿ ಭೀಕರ LPG ಸಿಲಿಂಡರ್ ಸ್ಫೋಟ , ಹಲವು ಮೀಟರ್ ದೂರಕ್ಕೆ ಹಾರಿದ ಬೈಕ್‌! ಹಲವರಿಗೆ ಗಾಯ CCTVಯಲ್ಲಿ ಶಾಕಿಂಗ್ ದೃಶ್ಯ ದಯಾಮರಣ ಕೇಳಿದ್ದ ತುಮಕೂರು ರಾಬಿಯಾ ಇನ್ನಿಲ್ಲ …!ಪರಮೇಶ್ವರ್ ಮುಂದೆ ಕಣ್ಣೀರಿಟ್ಟಿದ್ದ ಮಹಿಳೆ ಇಬ್ಬರು ಮಕ್ಕಳೊಂದಿಗೆ ವಿಷಸೇವಿಸಿ ಕೊನೆಯುಸಿರು…‘ಮನೆ’ ಸಿಕ್ಕರೂ ಬದುಕು ಉಳಿಯಲಿಲ್ಲ! ನೇಪಾಳ ದುರಂತ: ಕಂಪ್ಲೀಟ್ ರಿಪೋರ್ಟ್ ಇಲ್ಲಿದೆ…ಕಣ್ಣೆದುರೇ ಕೊಚ್ಚಿಹೋದ ಬದುಕು… ಲೆಕ್ಕಕ್ಕೆ ಸಿಗದ ಸಾವು, ನೋವು!ಪ್ರವಾಹದ ರೌದ್ರದ ನಡುವೆ ಮೃತದೇಹದಿಂದಲೇ ಚಿನ್ನ ಕದಿಯಲು ಯತ್ನ… ಮಾನವೀಯತೆ ಮರೆತ ಕಿರಾತಕರು!ಇಬ್ಬರು ಅರೆಸ್ಟ್! ಮಹಿಳಾ ಕಾನ್ಸ್‌ಟೇಬಲ್ ಮೇಲೆ ಪೊಲೀಸ್ ಠಾಣೆಯಲ್ಲಿ ಮಾರಣಾಂತಿಕ ಹಲ್ಲೆ
    ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

    ಆಡುತ್ತಾ ಆಡುತ್ತಲೇ ಜೀವ ಬಿಟ್ಟ ಫಿಟ್ ಆಗಿದ್ದ ಯುವಕ್ರಿಕೆಟಿಗ… ನೀರು ಕುಡಿದ ತಕ್ಷಣವೇ ಕುಸಿದು ಬಿದ್ದ ರಣಜಿ ಆಟಗಾರ… 

    ಕ್ರಿಕೆಟ್ ಮೈದಾನದಲ್ಲೇ ಕುಸಿದ ಕನಸುಶಿವಮೊಗ್ಗದ ಅಕ್ಷಯ್ ಎಸ್.ಎಲ್ ಹೃದಯಾಘಾತಕ್ಕೆ ಬಲಿ!

    ಬೆಂಗಳೂರು ನಗರದ ಎಸ್ಎಲ್ಆರ್ ಕ್ರೀಡಾಂಗಣದಲ್ಲಿ ನಡೆದ ಕೆಎಸ್‌ಸಿಎ 3rd ಡಿವಿಷನ್ ಲೀಗ್ ಪಂದ್ಯಾವಳಿ ಮಧ್ಯೆ ಸಂಭವಿಸಿದ ದಾರುಣ ಘಟನೆ ಕ್ರಿಕೆಟ್ ವಲಯವನ್ನು ಶಾಕ್‌ಗೆ ಗುರಿಮಾಡಿದೆ. ಶಿವಮೊಗ್ಗ ಮೂಲದ ಕ್ರಿಕೆಟಿಗ ಅಕ್ಷಯ್ ಎಸ್.ಎಲ್, ಪಂದ್ಯ ಆಡುತ್ತಿರುವಾಗಲೇ ಹೃದಯಾಘಾತಕ್ಕೊಳಗಾಗಿ ಮೃತಪಟ್ಟಿದ್ದಾರೆ.

    ಅಕ್ಷಯ್ ಕೇವಲ ಸ್ಥಳೀಯ ಆಟಗಾರ ಮಾತ್ರವಲ್ಲ… ಕರ್ನಾಟಕ ಕ್ರಿಕೆಟ್ ವಲಯದಲ್ಲಿ ತನ್ನದೇ ಆದ ಗುರುತು ಮೂಡಿಸಿದ್ದ ಪ್ರತಿಭಾವಂತ ಆಟಗಾರ. 2015ರಲ್ಲಿ ರಣಜಿ ಟ್ರೋಫಿ ಗೆದ್ದ ಕರ್ನಾಟಕ ತಂಡದ ಸದಸ್ಯನಾಗಿದ್ದ ಅವರು, ಕರ್ನಾಟಕ ಪರ 6 ರಣಜಿ ಹಾಗೂ 3 ಏಕದಿನ ಪಂದ್ಯಗಳನ್ನು ಆಡಿದ್ದರು. ಶಿವಮೊಗ್ಗದಲ್ಲೇ ಉತ್ತರ ಪ್ರದೇಶ ವಿರುದ್ಧ ಕರ್ನಾಟಕ ತಂಡದ ಪರ ಪಾದಾರ್ಪಣೆ ಮಾಡಿದ್ದ ಅಕ್ಷಯ್, ಮಧ್ಯಮ ವೇಗದ ಬೌಲರ್ ಜೊತೆಗೆ ಭರವಸೆಯ ಬ್ಯಾಟರ್ ಆಗಿಯೂ ಹೆಸರು ಮಾಡಿದ್ದರು.

    ಘಟನೆಯ ದಿನವೂ ಅಕ್ಷಯ್ ಅತ್ಯಂತ ಉತ್ಸಾಹದಿಂದ ಪಂದ್ಯದಲ್ಲಿ ಭಾಗಿಯಾಗಿದ್ದರು. ನಾಲ್ಕು ಓವರ್ ಬೌಲಿಂಗ್ ಮಾಡಿ 19 ರನ್ ನೀಡಿ ಒಂದು ಪ್ರಮುಖ ವಿಕೆಟ್ ಪಡೆದಿದ್ದರು. ಆದರೆ ಆಟದ ಮಧ್ಯೆ ಏಕಾಏಕಿ ಎದೆನೋವು ಕಾಣಿಸಿಕೊಂಡಿದ್ದು, ತಕ್ಷಣವೇ ಅಂಪೈರ್‌ಗೆ ಮಾಹಿತಿ ನೀಡಿದ್ದರು ಎನ್ನಲಾಗಿದೆ.

    ಅದಾದ ಬಳಿಕ ನೀರು ಕುಡಿದ ತಕ್ಷಣವೇ ಅಕ್ಷಯ್ ಮೈದಾನದಲ್ಲೇ ಕುಸಿದು ಬಿದ್ದಿದ್ದಾರೆ. ಅಲ್ಲಿ ಇದ್ದ ಆಟಗಾರರು ಮತ್ತು ಸಿಬ್ಬಂದಿ ತಕ್ಷಣ ಆಸ್ಪತ್ರೆಗೆ ಕರೆದೊಯ್ಯಲು ಮುಂದಾದರೂ, ಮಾರ್ಗ ಮಧ್ಯೆಯೇ ಅವರು ಕೊನೆಯುಸಿರೆಳೆದಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

    ಈ ದುರ್ಘಟನೆ ಇದೀಗ ಕ್ರೀಡಾಪಟುಗಳ ಆರೋಗ್ಯದ ಬಗ್ಗೆ ದೊಡ್ಡ ಚರ್ಚೆಗೆ ಕಾರಣವಾಗಿದೆ. ಹೊರಗೆ ಫಿಟ್ ಆಗಿ ಕಾಣಿಸುವ ಯುವ ಆಟಗಾರರಲ್ಲೂ ಹೃದಯ ಸಂಬಂಧಿ ಸಮಸ್ಯೆಗಳು ಹೆಚ್ಚುತ್ತಿರುವುದು ಆತಂಕ ಮೂಡಿಸಿದೆ. ನಿರಂತರ ಫಿಟ್ನೆಸ್, ಒತ್ತಡದ ಜೀವನಶೈಲಿ, ದೇಹದ ಒಳಗಿನ ಅಜ್ಞಾತ ಆರೋಗ್ಯ ಸಮಸ್ಯೆಗಳು ಇಂತಹ ದುರಂತಗಳಿಗೆ ಕಾರಣವಾಗಬಹುದು ಎಂದು ವೈದ್ಯರು ಎಚ್ಚರಿಸುತ್ತಿದ್ದಾರೆ.

    ಕ್ರಿಕೆಟ್ ಮೇಲಿನ ಅಪಾರ ಪ್ರೀತಿಯ ಜೊತೆ ಬ್ಯಾಂಕ್ ಉದ್ಯೋಗಿಯಾಗಿ ಕೆಲಸ ನಿರ್ವಹಿಸುತ್ತಿದ್ದ ಅಕ್ಷಯ್, ಶಿವಮೊಗ್ಗದ ದುರ್ಗಿಗುಡಿ ಕ್ರಿಕೆಟ್ ಕ್ಲಬ್‌ನ ಹೆಮ್ಮೆಯ ಆಟಗಾರರಾಗಿದ್ದರು. ಅವರ ಅಕಾಲಿಕ ನಿಧನಕ್ಕೆ ಕೆಎಸ್‌ಸಿಎ ಹಾಗೂ ಶಿವಮೊಗ್ಗ ಕ್ರಿಕೆಟ್ ವಲಯದಿಂದ ಭಾರೀ ಸಂತಾಪ ವ್ಯಕ್ತವಾಗಿದೆ.

    ಒಬ್ಬ ಪ್ರತಿಭಾವಂತ ಕ್ರಿಕೆಟಿಗನ ಬದುಕು ಮೈದಾನದಲ್ಲೇ ಅಂತ್ಯವಾದ ಘಟನೆ ಇದೀಗ ಎಲ್ಲರ ಮನಸ್ಸನ್ನೂ ಭಾರವಾಗಿಸಿದೆ 🕯️

    ##Shivamogga #CricketNews #HeartAttack #BreakingNews #SportsTragedy #KSCA

    COMMENTS

    Login with Gmail to comment

    ಇನ್ನಷ್ಟು ಸುದ್ದಿ

    ಒಂದು ಕ್ಲಿಕ್, ಒಂದು ಆಟ… ಕುಟುಂಬದ ಭವಿಷ್ಯವೇ ನಾಶವಾಗುವ ಅಪಾಯದ ಬೆಟ್ಟಿಂಗ್ ಜಾಲ -!ಸಾವಿರಾರು ಬೆಟ್ಟಿಂಗ್ ಆ್ಯಪ್‌ಗಳಿಗೆ ಸದ್ಯದಲ್ಲೇ ಬ್ರೇಕ್ ….
    ಹೊಲದಲ್ಲಿ ಹೂತಿಟ್ಟ ₹5 ಲಕ್ಷ… ತೆರೆದಾಗ ಶಾಕ್!
    ರೆಸ್ಯೂಮ್ ಅಲ್ಲ, ಪ್ರಾಜೆಕ್ಟ್ ಮಾತಾಡಿತು! ಒಂದೇ ವರ್ಷದಲ್ಲಿ ₹10 ಲಕ್ಷ ಸಂಬಳದಿಂದ ₹80 LPA ಗಳಿಸಿದ ಯುವತಿಯ ಯಶಸ್ಸಿನ ಸೂತ್ರ ವೈರಲ್..!!
    ಪ್ರಮೋದ್ ಮಧ್ವರಾಜ್ ಅವರಿಗೆ ಕೊನೆಗೂ ಸಿಕ್ಕಿತು ಗೌರವ
    ಸಂಸತ್ ವಿಶೇಷ ಅಧಿವೇಶನ: ಮಹಿಳಾ ಮೀಸಲಾತಿಗೆ ಒಗ್ಗಟ್ಟು, ಡಿಲಿಮಿಟೇಶನ್ ಮೇಲೆ ಭಾರಿ ವಿವಾದ – ಕರ್ನಾಟಕಕ್ಕೂ ಪರಿಣಾಮದ ಚರ್ಚೆ 🔥
    ಬ್ರೇಕಿಂಗ್ ನ್ಯೂಸ್..!final‘ಸಚಿವರ ಪಟ್ಟಿ’ ವೈರಲ್: ಕರ್ನಾಟಕ ರಾಜಕೀಯದಲ್ಲಿ ಹೊಸ ಸಂಚಲನ!
    ‘ನನ್ನ ಮೇಲ್‌ಗೆ ಉತ್ತರವೇ ಬರಲಿಲ್ಲ…’ ಸಭೆಯಲ್ಲೇ ಮಹಿಳೆಯ ಪ್ರಶ್ನೆ; ನಿಖಿಲ್ ಕಾಮತ್ ನೀಡಿದ ಪ್ರತಿಕ್ರಿಯೆಗೆ ದೇಶವೇ ಫಿದಾ!
    ಗೋಲ್ಡ್ ಪ್ರಿಯರಿಗೆ ಗುಡ್ ನ್ಯೂಸ್! ಇಳಿದ ಚಿನ್ನದ ಬೆಲೆ….!ಖರೀದಿದಾರರಿಗೆ ಬಂಪರ್ ರಿಲೀಫ್.
    ಘೋರ ಭಾನುವಾರ, ಒಂದೇ ಕುಟುಂಬದ ಎಂಟು ಮಹಿಳೆಯರ ದುರ್ಮರಣ
    ಕಂಬಳಕ್ಕೆ ಘೋಷಿತ ಅನುದಾನ ಕೊಡುವಂತೆ ಸಚಿವರಿಗೆ ಶಾಸಕ ಅಶೋಕ್ ರೈ ಮನವಿ..
    ದೆಹಲಿ: ₹21.40 ಕೋಟಿ ಮೌಲ್ಯದ 15 ಕೆ.ಜಿ. ಚಿನ್ನ ವಶ ಅಂತರರಾಷ್ಟ್ರೀಯ ಕಳ್ಳಸಾಗಣೆ ಜಾಲ ಭೇದಿಸಿದ DR
    ಬೆಂಗಳೂರು ನಗರದ ಸಮಗ್ರ ಅಭಿವೃದ್ಧಿ ಕುರಿತು ಕಾಂಗ್ರೆಸ್‌ ನಾಯಕರ ಸಭೆ
    ದಯಾಮರಣ ಕೇಳಿದ್ದ ತುಮಕೂರು ರಾಬಿಯಾ ಇನ್ನಿಲ್ಲ …!ಪರಮೇಶ್ವರ್ ಮುಂದೆ ಕಣ್ಣೀರಿಟ್ಟಿದ್ದ ಮಹಿಳೆ ಇಬ್ಬರು ಮಕ್ಕಳೊಂದಿಗೆ ವಿಷಸೇವಿಸಿ ಕೊನೆಯುಸಿರು…‘ಮನೆ’ ಸಿಕ್ಕರೂ ಬದುಕು ಉಳಿಯಲಿಲ್ಲ!
    ಮಂಗಳೂರಿನಲ್ಲಿ ಮುಂಜಾನೆ ನಡೆದ ರೌಡಿಶೀಟರ್ ಹತ್ಯೆ – ದುಷ್ಕರ್ಮಿಗಳ  ಜಾಡು ಬೆನ್ನಟ್ಟಿದ ಪೊಲೀಸ್‌ ಪಡೆ….ಮಹತ್ವದ ಸುಳಿವು…..!
    ಅಮಾವಾಸ್ಯೆ ಬೈಲ್ ಪೊಲೀಸ್ ಠಾಣೆಯಲ್ಲಿ ಜೀವ ಬೆದರಿಕೆ ಹಾಗೂ ನಿಂದನೆಯ ಪ್ರಕರಣ ದಾಖಲು
    108 ವರ್ಷಗಳ ಇತಿಹಾಸದಲ್ಲಿ ಪಾಟ್ನಾವಿಶ್ವವಿದ್ಯಾಲಯದಲ್ಲಿ ಹೊಸ ಅಧ್ಯಾಯ- ಮಹಿಳೆಯರ ಐತಿಹಾಸಿಕ ಹೆಜ್ಜೆ!
    ಮಂಗಳೂರು ವಿಮಾನ ನಿಲ್ದಾಣಕ್ಕೆ ಪ್ಲಾಟಿನಂ ಕಿರೀಟ!
    ರೇಪ್ ಆರೋಪಿಗೆ ಹೂಮಳೆ, ಹೂವಿನಹಾರ,ಘೋಷಣೆ, ರಾಜಕೀಯ ರೀತಿ ರೋಡ್ ಶೋ! ಉತ್ತರ ಪ್ರದೇಶದ ವೈರಲ್ ವಿಡಿಯೋಗೆ ದೇಶಾದ್ಯಂತ ಆಕ್ರೋಶ
    ನೈಸ್ ಟೋಲ್ ವಿವಾದ: ಕುಮಾರಸ್ವಾಮಿ ಹೇಳಿಕೆಗೆ ಅಶೋಕ್ ಖೇಣಿ ತಿರುಗೇಟು.. ಇವರಿಬ್ಬರಲ್ಲಿ ಸತ್ಯವಂತರು ಯಾರು?
    ಬೋಗಸ್ ದೂರು ಕೊಡುವವರ ಮೇಲೆ ಕಠಿಣ ಕ್ರಮ ಕೈಗೊಳ್ಳದಿದ್ದರೆ ಗಂಡಾಂತರ ಗ್ಯಾರೆಂಟಿ
    ದಕ್ಷಿಣ ಕನ್ನಡದ 14 ವರ್ಷದ ಎಲ್ಲ ಬಾಲಕಿಯರು ಉಚಿತ HPV ಲಸಿಕೆ ಹಾಕಿಸಿಕೊಳ್ಳಲು ಸಂಸದರ ಕರೆ
    ವಂದೇ ಮಾತರಂ ವಿವಾದ ದೇಶಭಕ್ತಿಯ ಸಂಕೇತವೇ, ರಾಜಕೀಯ ಅಸ್ತ್ರವೇ?
    ಜಸ್ಟ್ one click ನಲ್ಲೇ ಎಲ್ಲಾ ಸರ್ಟಿಫಿಕೇಟ್…!2026–27ರಿಂದ ಅಂಕಪಟ್ಟಿ ಹಾರ್ಡ್ ಕಾಪಿ ಇಲ್ಲ..
    ಮೂಡಿಗೆರೆ ತಾಲ್ಲೂಕಿನಲ್ಲಿ ಭಾರಿ ಗಾಳಿ-ಮಳೆ ಅಬ್ಬರ
    ಉಡುಪಿಯಲ್ಲಿ  ಹರಿಕಥಾ ಕಾರ್ಯಕ್ರಮದಲ್ಲಿ ಶ್ರೀ ಜಗದ್ಗುರು ಶಂಕರಾಚಾರ್ಯರ ಬಗ್ಗೆ ಆಕ್ಷೇಪಾರ್ಹ ಹೇಳಿಕೆ- ಯುಟಿಕ್ಷಮೆ ಯಾಚನೆ
    ಹೆಸರು ಬದಲಾವಣೆ ಪಶ್ಚಿಮ ಬಂಗಾಳ ಪೆಂಡಿಂಗ್, ಕೇರಳ ಪ್ರಗತಿಯಲ್ಲಿ
    ಆಕಾಂಕ್ಷಳ ಪತ್ರ “ಮಮ್ಮಿ-ಪಾಪಾ, ನನಗೆ ಮತ್ತೆ ನೀಟ್ ಪರೀಕ್ಷೆ ಬರೆಯುವ ಧೈರ್ಯವಿಲ್ಲ” 3 ಲಕ್ಷ ಸಾಲ, ಡಾಕ್ಟರ್ ಆಗುವ ಆ ಕನಸುಗಳು…650 ಅಂಕಗಳ ನಿರೀಕ್ಷೆ..ಆದರೆ…ಕೊನೆಗೆ ಹೀಗೊಂದು ವಿದಾಯ ಪತ್ರ!
    ಎಲಾನ್ ಮಸ್ಕ್: ವಿಶ್ವದ ಮೊದಲ ಟ್ರಿಲಿಯನೇರ್‌ನಿಂದ ಇನ್ನೂ ಎತ್ತರದತ್ತ!
    “ನಿಮ್ಮ ಮಗಳನ್ನು ನಾನು ಸಾಯಿಸಿದ್ದೇನೆ…ನಾಳೆ ನನ್ನ ಹೆಣವನ್ನೂ ನೋಡುತ್ತೀರಿ” ಎಂದ ಚೇತನ್!ಲಾವಣ್ಯಳ ತಂದೆಗೆ ಕರೆ ಮಾಡಿ ಶಾಕ್ ನೀಡಿದ ಆರೋಪಿ ಚೇತನ್ ಪೊಲೀಸ್ ವಶಕ್ಕೆ..!
    ಬೃಹತ್ ಅಭಿಯಾನ….5.51 ಟನ್ ವಸ್ತುಗಳು..!5000ಕ್ಕೂ ಹೆಚ್ಚು ದೇವರ ಫೋಟೋಗಳು