📍 Karavali Maruta
LIVE | CONTACT
ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

ಆನ್‌ಲೈನ್ ಕೇರಳ ಲಾಟರಿ ಹೆಸರಿನಲ್ಲಿ 1.85 ಲಕ್ಷ ವಂಚನೆ – ಸೈಬರ್ ವಂಚಕರ ಜಾಲ ಪತ್ತೆ

ಮಂಗಳೂರು: ಫೇಸ್‌ಬುಕ್‌ನಲ್ಲಿ ಬಂದ ಕೇರಳ ಲಾಟರಿ ಜಾಹೀರಾತು ನಂಬಿ ಆನ್‌ಲೈನ್ ಮೂಲಕ ಹಂತಹಂತವಾಗಿ 1,85,636 ರೂ. ಕಳೆದುಕೊಂಡು ಮೋಸಹೋದ ಘಟನೆ ಮಂಗಳೂರು ನಗರದ ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವರದಿಯಾಗಿದೆ. ವಂಚಕರು “ತೆರಿಗೆ”, “ಪ್ರೋಸೆಸಿಂಗ್ ಫೀ” ಎಂದು ವಿವಿಧ ಹೆಸರಿನಲ್ಲಿ ಹಣ ಪಡೆದು ಮೋಸ ಮಾಡಿದ್ದಾರೆ.

ವಂಚನೆಗಳಿಗಾದವರು ದಿನಾಂಕ 29-05-2026 ರಂದು ಬೆಳಿಗ್ಗೆ ಮನೆಯಲ್ಲಿ ಮೊಬೈಲ್‌ನಲ್ಲಿ ಫೇಸ್‌ಬುಕ್ ನೋಡುತ್ತಿದ್ದಾಗ ಕೇರಳ ಲಾಟರಿ ಜಾಹೀರಾತು ಕಾಣಿಸಿದೆ. “50 ರೂ ಟಿಕೆಟ್, ಸಂಜೆ ಡ್ರಾ” ಎಂದು ಜಾಹೀರಾತಿನಲ್ಲಿದ್ದ ಲಿಂಕ್‌ನ ನಂಬರ್‌ಗೆ ಕರೆ ಮಾಡಿದ್ದಾರೆ.

ಕರೆ ಸ್ವೀಕರಿಸಿದ “ನವೀನ್” ಹೆಸರಿನ ಅಪರಿಚಿತ ವ್ಯಕ್ತಿ, ಲಾಟರಿ ನಂಬರ್ ಕಳುಹಿಸಿ, 2 ನಂಬರ್ ಆಯ್ಕೆ ಮಾಡಿಸಿಕೊಂಡಿದ್ದಾನೆ. ನಂತರ ಸ್ಕ್ಯಾನರ್ ಕಳುಹಿಸಿ ಬೆಳಿಗ್ಗೆ 10:00 ಗಂಟೆಗೆ 100 ರೂ. GPay ಮಾಡಿಸಿಕೊಂಡಿದ್ದಾನೆ.

ಸಂಜೆ 4:00 ಗಂಟೆಗೆ “1 ನಂಬರ್‌ಗೆ 12 ಲಕ್ಷ ಬಹುಮಾನ ಬಂದಿದೆ” ಎಂದು ನಂಬಿಸಿದ್ದಾನೆ. UIDAI ಕಾರ್ಡ್, ಬ್ಯಾಂಕ್ ಖಾತೆ, IFSC ಕೋಡ್ ಪಡೆದುಕೊಂಡಿದ್ದಾನೆ. “12 ಲಕ್ಷಕ್ಕೆ 1% ಫೀ 12,000 ರೂ” ಎಂದು “ದೀಪಕ್” ಹೆಸರಿನ GPay ನಂ 9729838069 ಗೆ ಪಾವತಿಸಿಕೊಂಡಿದ್ದಾನೆ.

ದಿನಾಂಕ 30-05-2026 ರಂದು ಬೆಳಿಗ್ಗೆ 11:33 ಗಂಟೆಗೆ “24,981 ರೂ ತೆರಿಗೆ” ಎಂದು ಅದೇ ನಂಬರ್‌ಗೆ ಮತ್ತೆ GPay ಮಾಡಿಸಿಕೊಂಡಿದ್ದಾನೆ. ನಂತರ “58,760 ರೂ ತೆರಿಗೆ ಬಾಂಡ್” ಎಂದು “ರಾಜ್ ಕುಮಾರ್” ಹೆಸರಿನ GPay ನಂ 9523765412 ಗೆ ಹಣ ಹಾಕಿಸಿಕೊಂಡಿದ್ದಾನೆ.

ಕೊನೆಗೆ “89,895 ರೂ ಕೊನೆಯ ತೆರಿಗೆ” ಎಂದು “ಚಿಯಸ್ ಬಯಿದಿ” ಹೆಸರಿನ Indian Overseas Bank ಖಾತೆ ನಂ 272201000005603 ಗೆ NEFT ಮಾಡಿಸಿಕೊಂಡಿದ್ದಾನೆ.

ಒಟ್ಟು 1,85,636 ರೂ. ಕಳೆದುಕೊಂಡ ನಂತರ ಅನುಮಾನ ಬಂದ ಪಿರ್ಯಾದಿದಾರರು ಕೇರಳದ ತ್ರಿವೇಂಡ್ರಮ್‌ಗೆ ತೆರಳಿ “ಲಾಟರಿ ಆಫೀಸ್” ವಿಚಾರಿಸಿದ್ದಾರೆ. ಅದು ಫೇಕ್ ಆಫೀಸ್ ಎಂದು ಗೊತ್ತಾಗಿ ಮೋಸವಾಗಿದೆ ಎಂದು ಇದೀಗ ದೂರು ನೀಡಿದ್ದಾರೆ.

ಪೊಲೀಸರ ಸೂಚನೆ

ಯಾವುದೇ ಲಾಟರಿ ಬಹುಮಾನಕ್ಕೆ “ಪ್ರೋಸೆಸಿಂಗ್ ಫೀ, ತೆರಿಗೆ, ರಿಜಿಸ್ಟ್ರೇಷನ್ ಫೀ” ಎಂದು ಮುಂಗಡ ಹಣ ಕೇಳಿದರೆ ಅದು 100% ವಂಚನೆ ಎಂದೆ ತಿಳಿಯಬೇಕು

ಫೋನ್/ವಾಟ್ಸಾಪ್‌ನಲ್ಲಿ UIDAI, ಬ್ಯಾಂಕ್ ಡಿಟೇಲ್ಸ್ ಯಾರಿಗೂ ಕಳುಹಿಸಬೇಡಿ. ಫೇಸ್‌ಬುಕ್/ಯೂಟ್ಯೂಬ್ ಜಾಹೀರಾತು ಲಿಂಕ್ ಕ್ಲಿಕ್ ಮಾಡಿ ಲಾಟರಿ ಆಡಬೇಡಿ. ಅನುಮಾನ ಬಂದ ತಕ್ಷಣ 1930 ಸೈಬರ್ ಹೆಲ್ಪ್‌ಲೈನ್‌ಗೆ ಕರೆ ಮಾಡಿ ಅಥವಾ cybercrime.gov.in ನಲ್ಲಿ ದೂರು ದಾಖಲಿಸಿ.

ಈ ಮೇಲಿನ ದೂರಿನ ಬಗ್ಗೆ  ಪ್ರಕರಣ ದಾಖಲಾಗಿದ್ದು, ಪೊಲೀಸರು ಮೊಬೈಲ್ ನಂ 9032823911, GPay ನಂ 9729838069, 9523765412 ಹಾಗೂ ಬ್ಯಾಂಕ್ ಖಾತೆ ವಿವರದ ಆಧಾರದಲ್ಲಿ ತನಿಖೆ ನಡೆಸುತ್ತಿದ್ದಾರೆ.

ಲಾಟರಿ ಬಹುಮಾನ ಬಂದರೆ ಸರ್ಕಾರವೇ ನೇರವಾಗಿ ಫಲಾನುಭವಿಯ ಖಾತೆಗೆ ಜಮಾ ಮಾಡುತ್ತದೆ. ಮುಂಗಡ ಹಣ ಕೇಳುವ ಯಾವುದೇ ಕರೆ, ಮೆಸೇಜ್ ನಂಬಬೇಡಿ ಎಂದು ಪೊಲೀಸರೇ ತಿಳಿಸಿದ್ದಾರೆ.

COMMENTS

Login with Gmail to comment

ಇನ್ನಷ್ಟು ಸುದ್ದಿ

ಪ್ರಮೋದ್ ಮಧ್ವರಾಜ್ ಅವರಿಗೆ ಕೊನೆಗೂ ಸಿಕ್ಕಿತು ಗೌರವ
War update-ಕಂಪ್ಲೀಟ್ ಡೀಟೇಲ್ಸ್ …ಮುಂದೇನು? ceasefire ಮುಂದುವರಿಯುತ್ತದೆಯಾ?ಶಾಂತಿ ಅಥವಾ ಸಂಘರ್ಷ? ಮುಂದಿನ ಕೆಲ ದಿನಗಳು ವಿಶ್ವದ ಭವಿಷ್ಯ ತೀರ್ಮಾನಿಸುತ್ತದೆ.
ಸ್ಪೇನ್ ಅಧ್ಯಕ್ಷರ ವಿರುದ್ಧ ಟ್ರಂಪ್ ಗುಡುಗು 
ಕರ್ನಾಟಕದಲ್ಲಿ ತಾಪಮಾನ ಅಪಾಯ ಮಟ್ಟಕ್ಕೆ!ಆಸ್ಪತ್ರೆಗಳಲ್ಲಿ ವಿಶೇಷ ಹೀಟ್ ಸ್ಟ್ರೋಕ್ ರೂಮ್‌ಗಳು-ಆರೋಗ್ಯ ಇಲಾಖೆ ತುರ್ತು ಕ್ರಮ ಜಾರಿ
ವೆಟ್-ವೆಲ್‌ಗಳ ಕಳಪೆ ನಿರ್ವಹಣೆಚರಂಡಿ-ಬಾವಿಗಳಿಗೆ ಡ್ರೈನೇಜ್ ನೀರು..
ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು: ದಯಾ ಮರಣಕ್ಕೆ ಅನುಮತಿ
ಕೂದಲೆಳೆ ಅಂತರದಲ್ಲಿ ಪಾರಾದ ಗುಜರಾತ್ ಟೈಟಾನ್ಸ್!ಕ್ಷಣಾರ್ಧ ತಡವಾಗಿದ್ದರೂ ಸಂಭವಿಸುತ್ತಿತ್ತು ಘೋರ ಅಗ್ನಿ ದುರಂತ!
ಬೆಳ್ತಂಗಡಿ ಸ್ನಾನಕ್ಕೆ ತೆರಳಿದ್ದ ಬಾಲಕ ನೀರಿನಲ್ಲಿ ಮುಳುಗಿ ಸಾವು…
ಬೆಳಗಾವಿ ₹4500 ಕೋಟಿ ವಂಚನೆ ಪ್ರಕರಣ – CID ತನಿಖೆಯಿಂದ ಹೊರಬರುತ್ತಿರುವ ಕತ್ತಲೆಯ ಜಾಲ – ಯಾರು ನಿಜವಾದ ಮಾಸ್ಟರ್ ಮೈಂಡ್?
book ಮಾಡಿದ ನಿಮ್ಮ ಹೊಸ ಕಾರು-ಬೈಕ್ ಇನ್ನೂ ಬಂದಿಲ್ವಾ?ಪಶ್ಚಿಮ ಏಷ್ಯಾ ಯುದ್ಧದಿಂದ ಸರಬರಾಜು ವಿಳಂಬ…!
ಮಂಗಳೂರು ಸರ್ಕಾರಿ ಕಾಲೇಜಿನಲ್ಲಿ ಎಬಿವಿಪಿ, ಎನ್ ಎಸ್ ಯು ಐ ವಿದ್ಯಾರ್ಥಿಗಳ ಘರ್ಷಣೆ 
ಆರ್‌ಸಿಬಿ ಎದುರಿಸಲು ರಾಯಲ್ಸ್ ರೆಡಿ??: ಕ್ರಿಕೆಟ್ ಜಗತ್ತಿಗೆ ಶಾಕ್ ಕೊಟ್ಟ ಬಿಹಾರದ ಬಾಲಕ-ಸಚಿನ್ ತೆಂಡೂಲ್ಕರ್ ಕೂಡ ಮೆಚ್ಚಿದ ಆ 29 ಎಸೆತಗಳ ರುದ್ರತಾಂಡವ!
ಉದ್ಯಮಿ, ಕಾಲೇಜ್ topper,  ಕೋಟ್ಯದೀಶರೇ…ಕಠಿಣ ಜೈನ ಸನ್ಯಾಸದತ್ತ…!
Tata Consultancy Services (TCS) ನಾಶಿಕ್ ವಿವಾದ-ಬೆಚ್ಚಿಬೀಳಿಸಿದ 30 ದಿನಗಳ ಗುಪ್ತ ಪೊಲೀಸ್ ಆಪರೇಷನ್‌ ರಹಸ್ಯಗಳು…!
ಪಿಸ್ತೂಲ್ ತೋರಿಸಿ ಬೆದರಿಸಿ ಪರಾರಿಯಾಗಿದ್ದ ಯುವಕ ಬಂಧನ
ಮಾಜಿ ಮುಖ್ಯಮಂತ್ರಿಯ ಮೇಲೆ ಗುಂಡಿನ ದಾಳಿ,- Z+ ಭದ್ರತೆಯ ನಡುವೆ ದಾಳಿಕೋರ ಹೇಗೆ  ಬಂದ?
ಶಿರಸಿ ಮಾರಿಯಮ್ಮನ ಜಾತ್ರೆ ಪ್ರಾರಂಭ
ಆನ್ಲೈನ್ ಶೇರಿಂಗ್ ಹಗರಣ: ಇಬ್ಬರು ಆರೋಪಿಗಳ ವಿರುದ್ಧ ಪ್ರಕರಣ ದಾಖಲು.
ಭಾರತ ಬಗ್ಗೆ ಟ್ರಂಪ್ ಡಬಲ್ ಸ್ಟ್ಯಾಂಡ್…!ವಿವಾದ ಸೃಷ್ಟಿಸಿ, ಬಳಿಕ ಸಮಾಧಾನದ ಮಾತು
ಇರಾನ್ ದಾಳಿಗೆ ಬೆಂಜಿಮನೇತನ್ಯಹೋ ಕೊಲ್ಲಲ್ಪಟ್ಟಿದ್ದಾರಾ?
ಟ್ರಂಪ್ ಇರಾನ್ ಡೀಲ್ ಕಥೆ ಏನು?ಒಪ್ಪಂದವಾಗುತ್ತಾ? ಅಥವಾ ಯುದ್ಧ ಮುಂದುವರೆಯುತ್ತಾ?
ಹೈ ಪ್ರೋಫೈಲ್ ಕೇಸ್ ಬಿಹಾರದಿಂದ UPವರೆಗೆ CID ಚೇಸ್… ಕೊನೆಗೂ ಸಿಕ್ಕಿದ ಸುಪಾರಿ ಕಿಲ್ಲರ್ಸ್!ಸಿನಿಮಾ ಸ್ಟೈಲ್ ಮರ್ಡರ್ ಮಿಸ್ಟರಿ: ಹೈಟೆಕ್ ಪ್ಲಾನ್ ಮಾಡಿದ ಹಂತಕರು… 
ಮಂಗಳೂರಿಗೆ “ಅಮ್ಮ”ನ ಆಗಮನ ಭಕ್ತರಲ್ಲಿ ಸಡಗರವೂ ಸಡಗರ….. ನಾಳೆ ನಗರಕ್ಕೆ ಇಬ್ಬರು ಕೇಂದ್ರ ಸಚಿವರ ಆಗಮನ
ಅರೆಬೈಲ್ ಘಾಟ್ ನ ಕಾರು ಅಫಘಾತ ವ್ಯವಸ್ಥಿತ ಕೊಲೆ…!
ಆಂಬುಲೆನ್ಸ್ ಡ್ರೈವರ್ ನ ಸಮಾಜ ಸೇವೆಯ ಕಾರ್ಯ ಶ್ಲಾಘನಿಯ – ಸುದೇಶ್ ಕುಮಾರ್
ಸದ್ಯದಲ್ಲೇ ಬರುತ್ತೆ ತಣ್ಣೀರ್ಬಾವಿ ಬೀಚ್‌ಗೆ shortcut ಮಾರ್ಗ!30 ನಿಮಿಷ ಕಡಿಮೆ ಪ್ರಯಾಣ..!
ಪಹಲ್ಗಾಮ್ ದಾಳಿಗೆ ವರ್ಷ : ಮೋದಿ ಶ್ರದ್ಧಾಂಜಲಿ, ಉಗ್ರರಿಗೆ ಎಚ್ಚರಿಕೆ
ಅಂಡಮಾನ್ ಸಮುದ್ರದಲ್ಲಿ ಸಿಕ್ಕಿದ ಖಜಾನೆ! ಭಾರತದ ಇಂಧನ ಭವಿಷ್ಯ ಬದಲಾಗುತ್ತಿದೆಯೇ?
ಪಂಜಿಮೊಗರುವಿನಲ್ಲಿ ಹೆಂಡತಿಯ ಅಕ್ರಮ ಸಂಬಂಧಕ್ಕೆ, ಗಂಡ ಫಿನಿಶ್!
ಸಹೋದರಿಯ ಎಲುಬುಗಳೊಂದಿಗೆ ಬ್ಯಾಂಕ್ ಗೆ ಬಂದ ಅಣ್ಣ…!ದಾಖಲೆ ನಿಯಮಗಳ ನಡುವೆ ಸೋತ ಮಾನವೀಯತೆ”