📍 Karavali Maruta
LIVE | CONTACT
ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

ಆನ್ ಲೈನ್ ವಂಚನೆ ಶಿರ್ವದ ಯುವತಿಗೆ ಲಕ್ಷ ಲಕ್ಷ ಉಂಡೆನಾಮ… ಬ್ಯಾಂಕ್ ನಿಯಮ ವಂಚಕರಿಗೆ  ಸಹಕಾರಿ?

ಉಡುಪಿ ಜಿಲ್ಲೆಯ ಶಿರ್ವ ಪರಿಸರದ  ಯುವತಿಗೆ ಗಿಫ್ಟ್ ಕೋರಿಯರ್ ಹೆಸರಿನಲ್ಲಿ ₹13.99 ಲಕ್ಷ ಮೋಸ ಆದ ಘಟನೆ ನಡೆದಿದೆ. ಈ ಒಂದು ಆನ್ಲೈನ್ ವಂಚನೆಯ ಜಾಲಕ್ಕೆ ಎಲ್ಲೋ ಒಂದು ಕಡೆ ಬ್ಯಾಂಕಿನ ನಿಯಮಗಳು ಸಹಕಾರಿಯಾಗುತ್ತಿದೆ ಎಂಬ ಭಾವನೆ ಜನಸಾಮಾನ್ಯರಲ್ಲಿ ಬರಲು ಕಾರಣವಾಗುತ್ತಿದೆ. ಬ್ಯಾಂಕ್ ಮೂಲಕ ನಡೆಯುವ ವ್ಯವಹಾರ ಯಾವತ್ತೂ ಸೇಫ್ ಎನ್ನುವ ಭಾವನೆ ಇತ್ತು. ಈಗ ಪದೇ ಪದೇ ಇಂತಹ ಆನ್ ಲೈನ್ ವಂಚನೆಗಳು ಬ್ಯಾಂಕ್ ಗಳ ಮೂಲಕವೇ ನಡೆಯುತ್ತಿರುವುದರಿಂದ ಹಾಗೆ ಜನಸಾಮಾನ್ಯರಲ್ಲಿ ಈ ರೀತಿಯ ಅನುಮಾನ ಹುಟ್ಟಲು ಕಾರಣವಾಗಿದೆ.

  ವಿದೇಶದಿಂದ ಗಿಫ್ಟ್ ಕೋರಿಯರ್ ಬಂದಿದೆ ಎಂದು ನಂಬಿಸಿ ಮಹಿಳೆಯೊಬ್ಬರಿಂದ ₹13,99,700/- ಹಣವನ್ನು ಆನ್‌ಲೈನ್ ಮೂಲಕ ಪಡೆದು ಮೋಸ ಮಾಡಲಾಗಿದೆ ಎಂದು ತಡವಾಗಿ ದೂರು ದಾಖಲಾಗಿದೆ.
ವಿದ್ಯಾ (ಹೆಸರು ಬದಲಿಸಲಾಗಿದೆ) ಅವರು Canara Bankನಲ್ಲಿ ಖಾತೆ ಹೊಂದಿದ್ದಾರೆ. ಸುಮಾರು ಒಂದು ತಿಂಗಳ ಹಿಂದೆ ಮೊಬೈಲ್ ಮೂಲಕ ಪರಿಚಯವಾದ ವ್ಯಕ್ತಿಯೊಬ್ಬನು ತಾನು ವಿದೇಶದಲ್ಲಿದ್ದು, ತಮ್ಮ ಹೆಸರಿನಲ್ಲಿ ಗಿಫ್ಟ್ ಕೋರಿಯರ್ ಕಳುಹಿಸಿದ್ದೇನೆ ಎಂದು 22/02/2026ರಂದು ವಾಟ್ಸ್‌ಆಪ್ ಮೂಲಕ ಅದರ ಛಾಯಾಚಿತ್ರ ಕಳುಹಿಸಿದ್ದಾನೆ.
23/02/2026ರಂದು ಬೆಳಿಗ್ಗೆ ಸುಮಾರು 10 ಗಂಟೆಗೆ, ದೂರುದಾರಳಾದ ವಿದ್ಯಾಳ  ಮೊಬೈಲ್‌ಗೆ ಮಹಿಳೆಯೊಬ್ಬಳು ಕರೆ ಮಾಡಿ, “ನಿಮ್ಮ ಹೆಸರಿನಲ್ಲಿ ವಿದೇಶದಿಂದ ಕೋರಿಯರ್ ಬಂದಿದೆ. ವಿಮಾನ ನಿಲ್ದಾಣದಿಂದ ಬಿಡುಗಡೆಗೊಳಿಸಲು ₹49,700/- ಪಾವತಿಸಬೇಕು” ಎಂದು ತಿಳಿಸಿದ್ದಾಳೆ. ಆಕೆಯ ಸೂಚನೆಯಂತೆ ಪಿರ್ಯಾದಿದಾರರು IDBI Bank, ದೆಹಲಿ ಶಾಖೆಯ ಖಾತೆಗೆ ಉಡುಪಿ ಕೆನರಾ ಬ್ಯಾಂಕ್ ಶಾಖೆಯ ಮೂಲಕ ₹49,700/- ಕಳುಹಿಸಿದ್ದಾರೆ.
ನಂತರ ಕೋರಿಯರ್ ಪರಿಶೀಲನೆಗಾಗಿ ಮತ್ತಷ್ಟು ಹಣ ಅಗತ್ಯವಿದೆ ಎಂದು ತಿಳಿಸಿ, ಕೋರಿಯರ್‌ನಲ್ಲಿ 30,000 ಪೌಂಡ್ ವಿದೇಶಿ ನಗದು ಇದೆ, ಇದನ್ನು ಕಳುಹಿಸುವುದು ಕಾನೂನುಬಾಹಿರವಾಗಿರುವುದರಿಂದ ₹1,89,000/- ಪಾವತಿಸಬೇಕೆಂದು ಮೂರು ವಿಭಿನ್ನ ಖಾತೆ ಸಂಖ್ಯೆಗಳು ನೀಡಲಾಗಿದೆ. ಪಿರ್ಯಾದಿದಾರರು ಸೂಚಿಸಿದಂತೆ ಒಟ್ಟು ₹1,89,000/- ಹಣ ವರ್ಗಾವಣೆ ಮಾಡಿದ್ದಾರೆ.
ಅದೇ ದಿನ ಸಂಜೆ “ಮನಿ ಎಕ್ಸ್‌ಚೇಂಜ್” ಹಾಗೂ “ಡಾಕ್ಯುಮೆಂಟೇಶನ್” ಶುಲ್ಕಗಳ ಹೆಸರಿನಲ್ಲಿ ಹಂತ ಹಂತವಾಗಿ ₹62,500/-ರಂತೆ ಒಟ್ಟು ₹2,50,000/- ಹಣ ಕಳುಹಿಸುವಂತೆ ಹೇಳಿ ಪಡೆದುಕೊಂಡಿದ್ದಾರೆ. 23/02/2026ರಿಂದ 27/02/2026ರವರೆಗೆ ವಿವಿಧ ಬ್ಯಾಂಕ್ ಖಾತೆಗಳಿಗೆ ಒಟ್ಟು ₹13,99,700/- ಹಣ ವರ್ಗಾವಣೆ ಮಾಡಲಾಗಿದೆ.
ಇನ್ನೊಂದೆಡೆ, “ಮಿಲರ್ ಗೇರ್ ಹಾರ್ಡ್” ಎಂದು ಪರಿಚಯಿಸಿಕೊಂಡ ವ್ಯಕ್ತಿಯು ಕೋರಿಯರ್‌ನಲ್ಲಿ 30,000 ಪೌಂಡ್ ಕಳುಹಿಸಿದ್ದೇನೆ ಎಂದು ತಿಳಿಸಿದ್ದಾನೆ. ಕರೆ ಮಾಡಿದ ಮಹಿಳೆ ಈ ಮೊತ್ತವು ಭಾರತೀಯ ರೂಪಾಯಿಗೆ ಸುಮಾರು ₹37 ಲಕ್ಷ ಆಗುತ್ತದೆ ಎಂದು ಹೇಳಿ ನಂಬಿಸಿದ್ದಾಳೆ. ಆದರೆ ಕೋರಿಯರ್ ಆಗಮಿಸದೇ ಇರುವುದರಿಂದ ತಾನು ಮೋಸ ಹೋಗಿರುವುದನ್ನು ಪಿರ್ಯಾದಿದಾರರು ಅರಿತು ದೂರು ನೀಡಿದ್ದಾರೆ.
ದೂರಿನ ಮೇರೆಗೆ ಶಿರ್ವಾ ಪೊಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 22/2026 ಅಡಿಯಲ್ಲಿ ಐಟಿ ಕಾಯಿದೆ ಕಲಂ 66(ಡಿ) ಹಾಗೂ ಬಿಎನ್‌ಎಸ್ ಕಲಂ 316(2), 318(4) r/w 3(5) ಅನ್ವಯ ಪ್ರಕರಣ ದಾಖಲಿಸಿ ತನಿಖೆ ಆರಂಭಿಸಲಾಗಿದೆ.

ಪೊಲೀಸರು ಸಾರ್ವಜನಿಕರಿಗೆ ಎಚ್ಚರಿಕೆ ನೀಡಿದ್ದು, ವಿದೇಶದಿಂದ ಗಿಫ್ಟ್, ಲಾಟರಿ, ಕೋರಿಯರ್ ಹೆಸರಿನಲ್ಲಿ ಹಣ ಕೇಳುವ ಅಪರಿಚಿತರ ಕರೆಗಳನ್ನು ನಂಬಬಾರದು ಎಂದು ಸೂಚಿಸಿದ್ದಾರೆ.

COMMENTS

Login with Gmail to comment

ಇನ್ನಷ್ಟು ಸುದ್ದಿ

 ಮಗಳ ಗಂಡನೇ …ಅತ್ತೆಯ ಗಂಡ! ಹೌದು…ಅಳಿಯ-ಅತ್ತೆಯ ಪ್ರೇಮಕಥೆ ವೈರಲ್!ಕುಟುಂಬ ಸಂಬಂಧಗಳೇ ತಲೆಕೆಳಗು! ಉತ್ತರ ಪ್ರದೇಶದ ಈ ಮದುವೆ ಹಿಂದಿನ ರಹಸ್ಯ ಏನು?
“ನನ್ನ ಮೇಲೆ ನಂಬಿಕೆ ಇಲ್ಲದಿದ್ದರೆ ನಾನು ಅಧ್ಯಕ್ಷ ಸ್ಥಾನ ಬಿಡಲು ಸಿದ್ಧ”!-ಉದ್ಧವ್ ಠಾಕ್ರೆ ಕಣ್ಣೀರಿನ ಮನವಿ.
ಉಡುಪಿ ನಗರ ಅಭಿವೃದ್ಧಿ ಪ್ರಾಧಿಕಾರ ಮತ್ತು ನಗರ ಸಭೆ ಎರಡೂ ಕಮಾಯಿಗೆ ಕುಳಿತು ಕೊಂಡಿದೆಯಾ?
AI ಡೀಪ್‌ಫೇಕ್ ಕೇವಲ ಸಿನಿಮಾ ನಟಿಯರಿಗೆ ಸೀಮಿತವಾಗಿಲ್ಲ .
ಸುಪ್ರೀಂ ಕೋರ್ಟ್‌ನಲ್ಲಿ ಗದ್ದಲ: ದಾಖಲೆ ಎಸೆದು ಅವಾಚ್ಯ ಶಬ್ದ ಬಳಕೆ ಯಾಕೆ?- ಅರ್ಜಿದಾರನ ಅರ್ಜಿ ವಜಾ
ಮೈ ಜುಮ್ಮೆನ್ನಿಸುವ ಬೈಕ್–ಲಾರಿ ಡಿಕ್ಕಿ ಅಪಘಾತ… ಕ್ಷಣಾರ್ಧದಲ್ಲೇ ಜೀವ ಹೋದ ಹೃದಯವಿದ್ರಾವಕ ರಸ್ತೆ ದುರಂತ
ಅಮೇರಿಕಾ ಅಧ್ಯಕ್ಷರ ಮೇಲೆ ಎರಡನೆಯ ಬಾರಿ ಗುಂಡಿನ ದಾಳಿ
8 ವರ್ಷಗಳಿಂದ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿಯ ಬಂಧನ
ಮಂಡ್ಯಒಂದೇ ಕುಟುಂಬದ ಐವರ ಜಲಸಮಾಧಿ: ಕಾವೇರಿ ಒಡಲಲ್ಲಿವಿಧಿಯ ಕ್ರೂರ ಆಟಕ್ಕೆ ಕಣ್ಣೀರ ಕಡಲಾದ ಮುತ್ತತ್ತಿ!
ಕೌಶಾಂಬಿಯಲ್ಲಿ ಭೀಕರ LPG ಟ್ಯಾಂಕರ್ ದುರಂತ: ಸಿಸಿಟಿವಿಯಲ್ಲಿ ಸೆರೆಯಾದ ಜೀವಭಯದ ಕ್ಷಣಗಳು – ಮೃತರ ಸಂಖ್ಯೆ 4ಕ್ಕೆ ಏರಿಕೆ
ಬಾಲಕಾರ್ಮಿಕ ಪತ್ತೆ : ಮಾಲೀಕನಿಗೆ ಜೈಲು, ದಂಡ
ಮಂಗಳೂರಿಗೆ “ಅಮ್ಮ”ನ ಆಗಮನ ಭಕ್ತರಲ್ಲಿ ಸಡಗರವೂ ಸಡಗರ….. ನಾಳೆ ನಗರಕ್ಕೆ ಇಬ್ಬರು ಕೇಂದ್ರ ಸಚಿವರ ಆಗಮನ
ಟೆಕ್ಸಾಸ್‌ನಲ್ಲಿ ತ್ರಿವರ್ಣ ಧ್ವಜ ಹರಿದು ಹಾಕಿದ ವಿಡಿಯೋ ವೈರಲ್ …ಅಮೆರಿಕದಲ್ಲಿ ಹೆಚ್ಚುತ್ತಿದೆಯೇ ಭಾರತ ವಿರೋಧಿ ಮನೋಭಾವ?
ನೂರರ ಸಂಭ್ರಮದಲ್ಲಿ “ಜೈ” ತುಳು ಸಿನಿಮಾ
ಬೆಳ್ತಂಗಡಿ ಸ್ನಾನಕ್ಕೆ ತೆರಳಿದ್ದ ಬಾಲಕ ನೀರಿನಲ್ಲಿ ಮುಳುಗಿ ಸಾವು…
ಪರಮೇಶ್ವರ ವಿರುದ್ಧ FIR-₹500 ಬೆಟ್ಟಿಂಗ್ ಹೇಳಿಕೆಗೆ ಕಾನೂನು ಕ್ರಮ.
ಬಂಗಾಳದ ಸಿಂಹಾಸನಕ್ಕೆ ಸುವೇಂದು ಏರಿಕೆ — 15 ವರ್ಷದ ಮಮತಾ ಯುಗಕ್ಕೆ ಬ್ರೇಕ್!ಟಿಎಂಸಿ ಕೋಟೆ ಕುಸಿತ…
ತಿಮರೋಡಿ ಸೇರಿ ನಾಲ್ವರಿಗೆ ಕೇಸ್…
ಗಂಡನನ್ನು ಕೊಂದ ಪತಿವ್ರತೆ… ಮೂರು ವರ್ಷದ ಮಗು ಅನಾಥ
ಆಪಲ್‌ಗೆ ಭಾರತದಲ್ಲಿ ದೊಡ್ಡ ಕಾನೂನು ಶಾಕ್? App Store ನಿಯಮಗಳ ಮೇಲೆ ಆಪಲ್ vs ಭಾರತ CCI ಜಟಾಪಟಿ 
ಭಾರತೀಯರ ಟ್ರಾವೆಲ್ ಲಿಸ್ಟ್‌ನಿಂದ ಯುರೋಪ್ ಔಟ್.. ಲಂಡನ್, ಪ್ಯಾರಿಸ್ ಬಿಟ್ಟು ಥೈಲ್ಯಾಂಡ್, ಮಲೇಷ್ಯಾ ಜಪಾನ್‌ನತ್ತ ಪ್ರವಾಸಿಗರ ದಂಡು ..
ವಿಶ್ವ ಸಂಸ್ಥೆಯು ಯಾವ ಪುರುಷಾರ್ಥಕ್ಕೆ? ಬಲವರ್ಧನೆಯ  ಅಗತ್ಯತೆ
ಸುಬ್ರಹ್ಮಣ್ಯ ಅಭಿವೃದ್ಧಿ — ಸ್ಥಳೀಯರ ಜೊತೆಗೂಡಿ ಮಾತ್ರ ಸಾಧ್ಯ!”
ವಿಷಪ್ರಾಶನ  ಪ್ರಕರಣದಲ್ಲಿ ಕಾರ್ಕಳ ಗಜರಿಯ ಹಾಸ್ಪಿಟಲ್ ತಪ್ಪು ಮಾಡಿತೇ?
ಮಹೇಶ್ ಶೆಟ್ಟಿ ತಿಮರೋಡಿಗೆ ಮೂರನೇ ಬಾರಿ ಗಡಿಪಾರು ಆದೇಶ….
ದೆಹಲಿ: ₹21.40 ಕೋಟಿ ಮೌಲ್ಯದ 15 ಕೆ.ಜಿ. ಚಿನ್ನ ವಶ ಅಂತರರಾಷ್ಟ್ರೀಯ ಕಳ್ಳಸಾಗಣೆ ಜಾಲ ಭೇದಿಸಿದ DR
ಕೊಲೆ ಆರೋಪಿಗಳ ಕಾರು ಮಾಣಿಯಲ್ಲಿ ಪತ್ತೆ ….!
ಸತೀಶ್’ ಆಗಿ ಹೋದವ, ‘ಸಲೀಂ’ ಆಗಿ ವಾಪಸ್ …!26 ವರ್ಷಗಳ ಬಳಿಕ ತಾಯಿಯ ಮಡಿಲಿಗೆ ಮರಳಿದ ಮಗನ ಭಾವುಕ ಕಥೆ
ಮೂಡಬಿದಿರೆ ಇನ್‌ಸ್ಪೆಕ್ಟರ್ ಪ್ರಕರಣಕ್ಕೆ ಟ್ವಿಸ್ಟ್: ಆರೋಪ ಮಾಡಿದ ಮಹಿಳೆಯ ವಿರುದ್ಧವೇ ಸಹೋದರಿಯ ಬಾಂಬ್!
ಇನ್ನು ಹೈವೇಯಲ್ಲಿ ಲಿಮಿಟ್ ಗಿಂತ ವೇಗವಾಗಿ ಹೋಗುವವರು ಹುಷಾರಾಗಿರಿ…