📍 Karavali Maruta
LIVE | CONTACT
ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

ಆನ್ ಲೈನ್ ವಂಚನೆ ಶಿರ್ವದ ಯುವತಿಗೆ ಲಕ್ಷ ಲಕ್ಷ ಉಂಡೆನಾಮ… ಬ್ಯಾಂಕ್ ನಿಯಮ ವಂಚಕರಿಗೆ  ಸಹಕಾರಿ?

ಉಡುಪಿ ಜಿಲ್ಲೆಯ ಶಿರ್ವ ಪರಿಸರದ  ಯುವತಿಗೆ ಗಿಫ್ಟ್ ಕೋರಿಯರ್ ಹೆಸರಿನಲ್ಲಿ ₹13.99 ಲಕ್ಷ ಮೋಸ ಆದ ಘಟನೆ ನಡೆದಿದೆ. ಈ ಒಂದು ಆನ್ಲೈನ್ ವಂಚನೆಯ ಜಾಲಕ್ಕೆ ಎಲ್ಲೋ ಒಂದು ಕಡೆ ಬ್ಯಾಂಕಿನ ನಿಯಮಗಳು ಸಹಕಾರಿಯಾಗುತ್ತಿದೆ ಎಂಬ ಭಾವನೆ ಜನಸಾಮಾನ್ಯರಲ್ಲಿ ಬರಲು ಕಾರಣವಾಗುತ್ತಿದೆ. ಬ್ಯಾಂಕ್ ಮೂಲಕ ನಡೆಯುವ ವ್ಯವಹಾರ ಯಾವತ್ತೂ ಸೇಫ್ ಎನ್ನುವ ಭಾವನೆ ಇತ್ತು. ಈಗ ಪದೇ ಪದೇ ಇಂತಹ ಆನ್ ಲೈನ್ ವಂಚನೆಗಳು ಬ್ಯಾಂಕ್ ಗಳ ಮೂಲಕವೇ ನಡೆಯುತ್ತಿರುವುದರಿಂದ ಹಾಗೆ ಜನಸಾಮಾನ್ಯರಲ್ಲಿ ಈ ರೀತಿಯ ಅನುಮಾನ ಹುಟ್ಟಲು ಕಾರಣವಾಗಿದೆ.

  ವಿದೇಶದಿಂದ ಗಿಫ್ಟ್ ಕೋರಿಯರ್ ಬಂದಿದೆ ಎಂದು ನಂಬಿಸಿ ಮಹಿಳೆಯೊಬ್ಬರಿಂದ ₹13,99,700/- ಹಣವನ್ನು ಆನ್‌ಲೈನ್ ಮೂಲಕ ಪಡೆದು ಮೋಸ ಮಾಡಲಾಗಿದೆ ಎಂದು ತಡವಾಗಿ ದೂರು ದಾಖಲಾಗಿದೆ.
ವಿದ್ಯಾ (ಹೆಸರು ಬದಲಿಸಲಾಗಿದೆ) ಅವರು Canara Bankನಲ್ಲಿ ಖಾತೆ ಹೊಂದಿದ್ದಾರೆ. ಸುಮಾರು ಒಂದು ತಿಂಗಳ ಹಿಂದೆ ಮೊಬೈಲ್ ಮೂಲಕ ಪರಿಚಯವಾದ ವ್ಯಕ್ತಿಯೊಬ್ಬನು ತಾನು ವಿದೇಶದಲ್ಲಿದ್ದು, ತಮ್ಮ ಹೆಸರಿನಲ್ಲಿ ಗಿಫ್ಟ್ ಕೋರಿಯರ್ ಕಳುಹಿಸಿದ್ದೇನೆ ಎಂದು 22/02/2026ರಂದು ವಾಟ್ಸ್‌ಆಪ್ ಮೂಲಕ ಅದರ ಛಾಯಾಚಿತ್ರ ಕಳುಹಿಸಿದ್ದಾನೆ.
23/02/2026ರಂದು ಬೆಳಿಗ್ಗೆ ಸುಮಾರು 10 ಗಂಟೆಗೆ, ದೂರುದಾರಳಾದ ವಿದ್ಯಾಳ  ಮೊಬೈಲ್‌ಗೆ ಮಹಿಳೆಯೊಬ್ಬಳು ಕರೆ ಮಾಡಿ, “ನಿಮ್ಮ ಹೆಸರಿನಲ್ಲಿ ವಿದೇಶದಿಂದ ಕೋರಿಯರ್ ಬಂದಿದೆ. ವಿಮಾನ ನಿಲ್ದಾಣದಿಂದ ಬಿಡುಗಡೆಗೊಳಿಸಲು ₹49,700/- ಪಾವತಿಸಬೇಕು” ಎಂದು ತಿಳಿಸಿದ್ದಾಳೆ. ಆಕೆಯ ಸೂಚನೆಯಂತೆ ಪಿರ್ಯಾದಿದಾರರು IDBI Bank, ದೆಹಲಿ ಶಾಖೆಯ ಖಾತೆಗೆ ಉಡುಪಿ ಕೆನರಾ ಬ್ಯಾಂಕ್ ಶಾಖೆಯ ಮೂಲಕ ₹49,700/- ಕಳುಹಿಸಿದ್ದಾರೆ.
ನಂತರ ಕೋರಿಯರ್ ಪರಿಶೀಲನೆಗಾಗಿ ಮತ್ತಷ್ಟು ಹಣ ಅಗತ್ಯವಿದೆ ಎಂದು ತಿಳಿಸಿ, ಕೋರಿಯರ್‌ನಲ್ಲಿ 30,000 ಪೌಂಡ್ ವಿದೇಶಿ ನಗದು ಇದೆ, ಇದನ್ನು ಕಳುಹಿಸುವುದು ಕಾನೂನುಬಾಹಿರವಾಗಿರುವುದರಿಂದ ₹1,89,000/- ಪಾವತಿಸಬೇಕೆಂದು ಮೂರು ವಿಭಿನ್ನ ಖಾತೆ ಸಂಖ್ಯೆಗಳು ನೀಡಲಾಗಿದೆ. ಪಿರ್ಯಾದಿದಾರರು ಸೂಚಿಸಿದಂತೆ ಒಟ್ಟು ₹1,89,000/- ಹಣ ವರ್ಗಾವಣೆ ಮಾಡಿದ್ದಾರೆ.
ಅದೇ ದಿನ ಸಂಜೆ “ಮನಿ ಎಕ್ಸ್‌ಚೇಂಜ್” ಹಾಗೂ “ಡಾಕ್ಯುಮೆಂಟೇಶನ್” ಶುಲ್ಕಗಳ ಹೆಸರಿನಲ್ಲಿ ಹಂತ ಹಂತವಾಗಿ ₹62,500/-ರಂತೆ ಒಟ್ಟು ₹2,50,000/- ಹಣ ಕಳುಹಿಸುವಂತೆ ಹೇಳಿ ಪಡೆದುಕೊಂಡಿದ್ದಾರೆ. 23/02/2026ರಿಂದ 27/02/2026ರವರೆಗೆ ವಿವಿಧ ಬ್ಯಾಂಕ್ ಖಾತೆಗಳಿಗೆ ಒಟ್ಟು ₹13,99,700/- ಹಣ ವರ್ಗಾವಣೆ ಮಾಡಲಾಗಿದೆ.
ಇನ್ನೊಂದೆಡೆ, “ಮಿಲರ್ ಗೇರ್ ಹಾರ್ಡ್” ಎಂದು ಪರಿಚಯಿಸಿಕೊಂಡ ವ್ಯಕ್ತಿಯು ಕೋರಿಯರ್‌ನಲ್ಲಿ 30,000 ಪೌಂಡ್ ಕಳುಹಿಸಿದ್ದೇನೆ ಎಂದು ತಿಳಿಸಿದ್ದಾನೆ. ಕರೆ ಮಾಡಿದ ಮಹಿಳೆ ಈ ಮೊತ್ತವು ಭಾರತೀಯ ರೂಪಾಯಿಗೆ ಸುಮಾರು ₹37 ಲಕ್ಷ ಆಗುತ್ತದೆ ಎಂದು ಹೇಳಿ ನಂಬಿಸಿದ್ದಾಳೆ. ಆದರೆ ಕೋರಿಯರ್ ಆಗಮಿಸದೇ ಇರುವುದರಿಂದ ತಾನು ಮೋಸ ಹೋಗಿರುವುದನ್ನು ಪಿರ್ಯಾದಿದಾರರು ಅರಿತು ದೂರು ನೀಡಿದ್ದಾರೆ.
ದೂರಿನ ಮೇರೆಗೆ ಶಿರ್ವಾ ಪೊಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 22/2026 ಅಡಿಯಲ್ಲಿ ಐಟಿ ಕಾಯಿದೆ ಕಲಂ 66(ಡಿ) ಹಾಗೂ ಬಿಎನ್‌ಎಸ್ ಕಲಂ 316(2), 318(4) r/w 3(5) ಅನ್ವಯ ಪ್ರಕರಣ ದಾಖಲಿಸಿ ತನಿಖೆ ಆರಂಭಿಸಲಾಗಿದೆ.

ಪೊಲೀಸರು ಸಾರ್ವಜನಿಕರಿಗೆ ಎಚ್ಚರಿಕೆ ನೀಡಿದ್ದು, ವಿದೇಶದಿಂದ ಗಿಫ್ಟ್, ಲಾಟರಿ, ಕೋರಿಯರ್ ಹೆಸರಿನಲ್ಲಿ ಹಣ ಕೇಳುವ ಅಪರಿಚಿತರ ಕರೆಗಳನ್ನು ನಂಬಬಾರದು ಎಂದು ಸೂಚಿಸಿದ್ದಾರೆ.

COMMENTS

Login with Gmail to comment

ಇನ್ನಷ್ಟು ಸುದ್ದಿ

50ಕ್ಕೂ ಹೆಚ್ಚು ಆಟೋ ಚಾಲಕರ ದಿನನಿತ್ಯದ ಆರೋಗ್ಯದ ಬದುಕಿಗೆ ಮುಳುವಾದ ದೇರಳಕಟ್ಟೆ ಜಂಕ್ಷನ್ ದುರ್ನಾತ! 
ಹುಬ್ಬಳ್ಳಿಯಲ್ಲಿ ಲವ್ ಜಿಹಾದ್ ಹೆಸರಲ್ಲಿ ನಡಿತಿರೋದೇನು?
💊 ಜೀವರಕ್ಷಕ ಕ್ಯಾನ್ಸರ್ ಔಷಧಗಳು ದುಬಾರಿ: ಏಕೆ ಬೆಲೆ ಹೆಚ್ಚಳ ಅನಿವಾರ್ಯವಾಯಿತು?ಅಸಲಿ ಕಾರಣ ಗೊತ್ತೇ?
ಮುಂಬೈ ಬೀದಿಯಲ್ಲಿ ನಾರಿ ಶಕ್ತಿಯ ಸಿಡಿಲು!ಜನರ ಬದುಕು ಅಡ್ಡಗಟ್ಟಿದರೆ ಎದುರಿಸುವವರು ಹೀಗೆ ಒಬ್ಬೊಬ್ಬರೇ ಇನ್ನೂ ಹುಟ್ಟುತ್ತಾರೆ..
ಕುಂದಾಪುರದಲ್ಲಿ ಎರಡು ಮಕ್ಕಳ ತಾಯಿ ನಾಪತ್ತೆ. ಸ್ನೇಹಿತರ ಜೊತೆಯಲ್ಲಿ ಹೋಗಿರುವ ಶಂಕೆ
ಮಂಗಳೂರಿಗರಿಗೆ ಎಚ್ಚರಿಕೆ: ನೀರನ್ನು ಜಾಣ್ಮೆಯಿಂದ ಬಳಸಿ –ಮಾರ್ಚ್ ನಲ್ಲೇ ರೇಷನಿಂಗ್ ಮಾಡುವ ಪರಿಸ್ಥಿತಿ ಇದೆ…
ಭಾರತ ಮುಸ್ಲಿಂ ದೇಶವಾಗುವುದೇ?- ನಾಳೆ ಪುಸ್ತಕ ಬಿಡುಗಡೆಯ ಕಾರ್ಯಕ್ರಮ
Side Income ಇಂದು ಆಯ್ಕೆ ಅಲ್ಲ, ಅಗತ್ಯ …ಹಣ ಗಳಿಸಿ… ನಿದ್ರೆಯಲ್ಲೂ!ಒಂದು ಸಂಬಳ ಸಾಕಾಗದ ಕಾಲ ಇದು.
ಜೀವನ್ಮರಣ ಹೋರಾಟದಲ್ಲೂ ಗೆಳೆಯರ ಬದುಕಿಸಿದ 14ರ ಬಾಲಕನ ರೋಚಕ  ಸ್ಟೋರಿ 
sdfdf
ಮೂರನೇ ಮಹಾಯುದ್ಧದ ಭೀತಿ: ಇರಾನ್ ಹೊಸ ನಾಯಕನಾಗಿ ಮೊಜ್ತಬಾ ಖಮೇನಿ –ನೂತನ ನಾಯಕನಿಗೆ ರಷ್ಯಾ, ಚೀನಾ ಬೆಂಬಲ
ಮಹಿಳಾ ಟಿ20 ವಿಶ್ವಕಪ್‌ಗೂ ಮುನ್ನ ಭಾರತ-ಪಾಕ್ ಹೈಪ್ ನಡುವೆ ಮಂಧಾನಾ ಮಾತು ವೈರಲ್…
ಇರಾನ್–ಇಸ್ರೇಲ್ ಯುದ್ಧ: ಯುದ್ಧ ನಿಲ್ಲಿಸಲು ಇರಾನ್‌ನ 3 ಷರತ್ತುಗಳು… ಅಮೇರಿಕಾ ಕಂಗಾಲು
ಒಂದೇ ಫ್ಲಾಟ್ ಇಬ್ಬಿಬ್ಬಿರ ಹೆಸರಲ್ಲಿ ..!ಡಬಲ್ ಡಾಕ್ಯುಮೆಂಟ್ ದಂಧೆ ಬಯಲು –ಕೋಟಿ ಕೋಟಿ ವಂಚನೆ ಮಾಡಿ ಆರೋಪಿ ಪರಾರಿ! ರಿಯಲ್ ಎಸ್ಟೇಟ್ ಶಾಕ್….
ಏಪ್ರಿಲ್ 1, 2026ರಿಂದಲೇ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ
ಹಳಿಯಾಳದಲ್ಲಿ ನೀರಿನ ಹಾಹಾಕಾರ… ಮಾರ್ಚ್ 16ರಂದು ಬೃಹತ್ ಪ್ರತಿಭಟನೆ 
24 ಭಾರತೀಯರಿದ್ದ ಹಡಗಿನ ಮೇಲೆ ಅಮೆರಿಕಾ ದಾಳಿ: 3 ನಾವಿಕರ ಜೀವ ಬಲಿ
ಶಿರಾಡಿ ಗ್ರಾ.ಪಂ PDO ಸಹಿ ನಕಲು ….6 ತಿಂಗಳಾದರೂ ದೂರು ದಾಖಲಾಗಿಲ್ಲ!
ದ.ಕ ಜಿಲ್ಲಾಡಳಿತದಿಂದ ಮಂಗಳಮುಖಿಯರಲ್ಲದವರಿಗೂ ಗುರುತಿನ ಚೀಟಿ ವಿತರಣೆ – ಗಂಭೀರ ಆರೋಪ
“ಪಾಲಕ್ಕಾಡ್‌ನಲ್ಲಿ ಮೋದಿ ಚಂಡೆ ಸದ್ದು—ಕೇರಳದಲ್ಲಿ ಚುನಾವಣಾ ಕಹಳೆ!” 
ಶಿಶಿಲದಲ್ಲಿ ವಿಷಪೂರಿತ ಹಾವು ಕಚ್ಚಿ 65 ವರ್ಷದ ರೈತ ಮೃತ್ಯು
ಬೆಚ್ಚಿಬಿದ್ದ ರಾಷ್ಟ್ರ ರಾಜಧಾನಿ, ಯಂಗ್ ಜಡ್ಜ್ ಆತ್ಮಹತ್ಯೆ
ಒಂದು ಸಹಿ… ಲಕ್ಷಾಂತರ ರೂ. ಹೊಣೆಗಾರಿಕೆಯ ಶಾಕ್!ಸಹಕಾರ ಸಂಸ್ಥೆಯಲ್ಲಿ ನಡೆದ ಅಕ್ರಮದ ಸತ್ಯ ಬಯಲು..
ಸ್ಟೇಟ್ ಬ್ಯಾಂಕ್ ಮೀನು ಮಾರುಕಟ್ಟೆಗೆ ಭೇಟಿ ನೀಡಿದ ಡಾ. ನಾಗಲಕ್ಷ್ಮಿ ಚೌಧರಿ – ಮಹಿಳಾ ಮೀನುಗಾರರ ಸಮಸ್ಯೆ ಆಲಿಕೆ
 ಡಿಗ್ರಿಗೂ ಮುನ್ನ ಹ್ಯಾಕರ್ ಗೆ IIT ಉದ್ಯೋಗ! ಪ್ರತಿಭೆ ಇದ್ದರೆ ಅವಕಾಶವೇ ನಿಮ್ಮ ಮನೆ ಬಾಗಿಲು ತಟ್ಟುತ್ತದೆ!” ಅನ್ನೋದಕ್ಕೆ ಸ್ಫೂರ್ತಿ ಈ ನಿಸರ್ಗ ಅಧಿಕಾರಿ..
ಕೊಲೆ ಆರೋಪಿಯ ದೂರುದಾರನ ವಿಷ ಸೇವನೆಯ ಬಗ್ಗೆ  ಸ್ಪಷ್ಟನೆ
ಜುಲೈ 1ರಿಂದ ದೇಶದಲ್ಲಿ ಹಲವು ಹೊಸ ನಿಯಮಗಳು ಜಾರಿ…ಪಾಸ್‌ಪೋರ್ಟ್, ರೈಲ್ವೆ, ಕ್ರೆಡಿಟ್ ಕಾರ್ಡ್, ಬ್ಯಾಂಕ್… ಒಂದೇ ದಿನದಲ್ಲಿ ಹಲವು ದೊಡ್ಡ ಬದಲಾವಣೆಗಳು
ಒಂದು ದೇಶವನ್ನೇ ಮಟ್ಟಾಶ್ ಮಾಡುವಷ್ಟು ನ್ಯೂಕ್ಲಿಯರ್ ಪವರ್ stock ಇರಾನ್ನಲ್ಲಿ ಇದ್ಯಾ !?
ಮುಂದಿನ ಕೆಲವು ದಿನ ಭಾರಿ ಗಾಳಿ ಮಳೆ ಗುಡುಗು -ಮಿಂಚಿನ ಎಚ್ಚರಿಕೆ 
ಪುತ್ತೂರು ಘಟನೆ ಚಾಕು ಕಂಡು ಆತಂಕ…ಏನಾಯಿತು?ತನಿಖೆಯಲ್ಲಿ ಬಯಲಾಯ್ತು ಮತ್ತೊಂದು ಸತ್ಯ!
ಭಾರತದಲ್ಲಿ ಎಚ್‌ಪಿವಿ (HPV) ಲಸಿಕೆ ಕಾರ್ಯಕ್ರಮ ಹೆಣ್ಣೆತ್ತವರು ತಿಳಿದುಕೊಳ್ಳಲೇಬೇಕಾದ ವಿಚಾರ