📍 Karavali Maruta
LIVE | CONTACT
ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

ಆನ್ ಲೈನ್ ವಂಚನೆ ಶಿರ್ವದ ಯುವತಿಗೆ ಲಕ್ಷ ಲಕ್ಷ ಉಂಡೆನಾಮ… ಬ್ಯಾಂಕ್ ನಿಯಮ ವಂಚಕರಿಗೆ  ಸಹಕಾರಿ?

ಉಡುಪಿ ಜಿಲ್ಲೆಯ ಶಿರ್ವ ಪರಿಸರದ  ಯುವತಿಗೆ ಗಿಫ್ಟ್ ಕೋರಿಯರ್ ಹೆಸರಿನಲ್ಲಿ ₹13.99 ಲಕ್ಷ ಮೋಸ ಆದ ಘಟನೆ ನಡೆದಿದೆ. ಈ ಒಂದು ಆನ್ಲೈನ್ ವಂಚನೆಯ ಜಾಲಕ್ಕೆ ಎಲ್ಲೋ ಒಂದು ಕಡೆ ಬ್ಯಾಂಕಿನ ನಿಯಮಗಳು ಸಹಕಾರಿಯಾಗುತ್ತಿದೆ ಎಂಬ ಭಾವನೆ ಜನಸಾಮಾನ್ಯರಲ್ಲಿ ಬರಲು ಕಾರಣವಾಗುತ್ತಿದೆ. ಬ್ಯಾಂಕ್ ಮೂಲಕ ನಡೆಯುವ ವ್ಯವಹಾರ ಯಾವತ್ತೂ ಸೇಫ್ ಎನ್ನುವ ಭಾವನೆ ಇತ್ತು. ಈಗ ಪದೇ ಪದೇ ಇಂತಹ ಆನ್ ಲೈನ್ ವಂಚನೆಗಳು ಬ್ಯಾಂಕ್ ಗಳ ಮೂಲಕವೇ ನಡೆಯುತ್ತಿರುವುದರಿಂದ ಹಾಗೆ ಜನಸಾಮಾನ್ಯರಲ್ಲಿ ಈ ರೀತಿಯ ಅನುಮಾನ ಹುಟ್ಟಲು ಕಾರಣವಾಗಿದೆ.

  ವಿದೇಶದಿಂದ ಗಿಫ್ಟ್ ಕೋರಿಯರ್ ಬಂದಿದೆ ಎಂದು ನಂಬಿಸಿ ಮಹಿಳೆಯೊಬ್ಬರಿಂದ ₹13,99,700/- ಹಣವನ್ನು ಆನ್‌ಲೈನ್ ಮೂಲಕ ಪಡೆದು ಮೋಸ ಮಾಡಲಾಗಿದೆ ಎಂದು ತಡವಾಗಿ ದೂರು ದಾಖಲಾಗಿದೆ.
ವಿದ್ಯಾ (ಹೆಸರು ಬದಲಿಸಲಾಗಿದೆ) ಅವರು Canara Bankನಲ್ಲಿ ಖಾತೆ ಹೊಂದಿದ್ದಾರೆ. ಸುಮಾರು ಒಂದು ತಿಂಗಳ ಹಿಂದೆ ಮೊಬೈಲ್ ಮೂಲಕ ಪರಿಚಯವಾದ ವ್ಯಕ್ತಿಯೊಬ್ಬನು ತಾನು ವಿದೇಶದಲ್ಲಿದ್ದು, ತಮ್ಮ ಹೆಸರಿನಲ್ಲಿ ಗಿಫ್ಟ್ ಕೋರಿಯರ್ ಕಳುಹಿಸಿದ್ದೇನೆ ಎಂದು 22/02/2026ರಂದು ವಾಟ್ಸ್‌ಆಪ್ ಮೂಲಕ ಅದರ ಛಾಯಾಚಿತ್ರ ಕಳುಹಿಸಿದ್ದಾನೆ.
23/02/2026ರಂದು ಬೆಳಿಗ್ಗೆ ಸುಮಾರು 10 ಗಂಟೆಗೆ, ದೂರುದಾರಳಾದ ವಿದ್ಯಾಳ  ಮೊಬೈಲ್‌ಗೆ ಮಹಿಳೆಯೊಬ್ಬಳು ಕರೆ ಮಾಡಿ, “ನಿಮ್ಮ ಹೆಸರಿನಲ್ಲಿ ವಿದೇಶದಿಂದ ಕೋರಿಯರ್ ಬಂದಿದೆ. ವಿಮಾನ ನಿಲ್ದಾಣದಿಂದ ಬಿಡುಗಡೆಗೊಳಿಸಲು ₹49,700/- ಪಾವತಿಸಬೇಕು” ಎಂದು ತಿಳಿಸಿದ್ದಾಳೆ. ಆಕೆಯ ಸೂಚನೆಯಂತೆ ಪಿರ್ಯಾದಿದಾರರು IDBI Bank, ದೆಹಲಿ ಶಾಖೆಯ ಖಾತೆಗೆ ಉಡುಪಿ ಕೆನರಾ ಬ್ಯಾಂಕ್ ಶಾಖೆಯ ಮೂಲಕ ₹49,700/- ಕಳುಹಿಸಿದ್ದಾರೆ.
ನಂತರ ಕೋರಿಯರ್ ಪರಿಶೀಲನೆಗಾಗಿ ಮತ್ತಷ್ಟು ಹಣ ಅಗತ್ಯವಿದೆ ಎಂದು ತಿಳಿಸಿ, ಕೋರಿಯರ್‌ನಲ್ಲಿ 30,000 ಪೌಂಡ್ ವಿದೇಶಿ ನಗದು ಇದೆ, ಇದನ್ನು ಕಳುಹಿಸುವುದು ಕಾನೂನುಬಾಹಿರವಾಗಿರುವುದರಿಂದ ₹1,89,000/- ಪಾವತಿಸಬೇಕೆಂದು ಮೂರು ವಿಭಿನ್ನ ಖಾತೆ ಸಂಖ್ಯೆಗಳು ನೀಡಲಾಗಿದೆ. ಪಿರ್ಯಾದಿದಾರರು ಸೂಚಿಸಿದಂತೆ ಒಟ್ಟು ₹1,89,000/- ಹಣ ವರ್ಗಾವಣೆ ಮಾಡಿದ್ದಾರೆ.
ಅದೇ ದಿನ ಸಂಜೆ “ಮನಿ ಎಕ್ಸ್‌ಚೇಂಜ್” ಹಾಗೂ “ಡಾಕ್ಯುಮೆಂಟೇಶನ್” ಶುಲ್ಕಗಳ ಹೆಸರಿನಲ್ಲಿ ಹಂತ ಹಂತವಾಗಿ ₹62,500/-ರಂತೆ ಒಟ್ಟು ₹2,50,000/- ಹಣ ಕಳುಹಿಸುವಂತೆ ಹೇಳಿ ಪಡೆದುಕೊಂಡಿದ್ದಾರೆ. 23/02/2026ರಿಂದ 27/02/2026ರವರೆಗೆ ವಿವಿಧ ಬ್ಯಾಂಕ್ ಖಾತೆಗಳಿಗೆ ಒಟ್ಟು ₹13,99,700/- ಹಣ ವರ್ಗಾವಣೆ ಮಾಡಲಾಗಿದೆ.
ಇನ್ನೊಂದೆಡೆ, “ಮಿಲರ್ ಗೇರ್ ಹಾರ್ಡ್” ಎಂದು ಪರಿಚಯಿಸಿಕೊಂಡ ವ್ಯಕ್ತಿಯು ಕೋರಿಯರ್‌ನಲ್ಲಿ 30,000 ಪೌಂಡ್ ಕಳುಹಿಸಿದ್ದೇನೆ ಎಂದು ತಿಳಿಸಿದ್ದಾನೆ. ಕರೆ ಮಾಡಿದ ಮಹಿಳೆ ಈ ಮೊತ್ತವು ಭಾರತೀಯ ರೂಪಾಯಿಗೆ ಸುಮಾರು ₹37 ಲಕ್ಷ ಆಗುತ್ತದೆ ಎಂದು ಹೇಳಿ ನಂಬಿಸಿದ್ದಾಳೆ. ಆದರೆ ಕೋರಿಯರ್ ಆಗಮಿಸದೇ ಇರುವುದರಿಂದ ತಾನು ಮೋಸ ಹೋಗಿರುವುದನ್ನು ಪಿರ್ಯಾದಿದಾರರು ಅರಿತು ದೂರು ನೀಡಿದ್ದಾರೆ.
ದೂರಿನ ಮೇರೆಗೆ ಶಿರ್ವಾ ಪೊಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 22/2026 ಅಡಿಯಲ್ಲಿ ಐಟಿ ಕಾಯಿದೆ ಕಲಂ 66(ಡಿ) ಹಾಗೂ ಬಿಎನ್‌ಎಸ್ ಕಲಂ 316(2), 318(4) r/w 3(5) ಅನ್ವಯ ಪ್ರಕರಣ ದಾಖಲಿಸಿ ತನಿಖೆ ಆರಂಭಿಸಲಾಗಿದೆ.

ಪೊಲೀಸರು ಸಾರ್ವಜನಿಕರಿಗೆ ಎಚ್ಚರಿಕೆ ನೀಡಿದ್ದು, ವಿದೇಶದಿಂದ ಗಿಫ್ಟ್, ಲಾಟರಿ, ಕೋರಿಯರ್ ಹೆಸರಿನಲ್ಲಿ ಹಣ ಕೇಳುವ ಅಪರಿಚಿತರ ಕರೆಗಳನ್ನು ನಂಬಬಾರದು ಎಂದು ಸೂಚಿಸಿದ್ದಾರೆ.

COMMENTS

Login with Gmail to comment

ಇನ್ನಷ್ಟು ಸುದ್ದಿ

ನ್ಯಾಯಾಂಗಕ್ಕೆ ಕಳಂಕ ತರುವುದನ್ನು ನೋಡಿಯೂ ಕೈಕಟ್ಟಿ ಕೂರಲಾಗದು
ಕನ್ನಡದ ನೆಲದಲ್ಲಿ ಕನ್ನಡಕ್ಕೇ ಗೇಟ್ ಪಾಸ್: ಇವರು ಕರ್ನಾಟಕದ ಸಚಿವರೊ⁉️ಇಂಗ್ಲೆಂಡಿನ ಪ್ರತಿನಿಧಿಯೋ?
ಕಿಡ್ನಿ ಕಾಯಿಲೆಯ ಬಗ್ಗೆ ಎಚ್ಚರಿಕೆ ಅಗತ್ಯ- ಡಾಕ್ಟರ್ ಅಶೋಕ್ ಭಟ್
ಜಗಳ ನಿಲ್ಲಿಸಲು ಹೋದವನ ಜೀವ ಹರಣ: ಮಾನವೀಯತೆ ಕುಸಿದರೆ ಸಮಾಜದ ನೆಮ್ಮದಿ ಎಲ್ಲಿ?”
ಕ್ರಿಕೆಟ್ pad gloves ಒಳಗೆ ಕೋಟಿ ಕೋಟಿ ಕೊಕೇನ್!
ಮಂಗಳೂರು ನಗರದಲ್ಲಿ ಭಾರೀ ಪ್ರಮಾಣದ MDMA ವಶ – ಇಬ್ಬರು ಡ್ರಗ್ ಪೆಡ್ಲರ್‌ಗಳ ಬಂಧನ…
₹3 ಕೋಟಿ ಹೂಡಿಕೆ ಮಾಡಿದ ಶಾಲೆಗೀಗ 20ಕ್ಕೂ ಹೆಚ್ಚು ಭಾಷೆಗಳಲ್ಲಿ ಮಾತನಾಡುವ ಸುಂದರಿ “ಐರಿಸ್” ಮೇಡಂ…ಸರ್ಕಾರಿ ಶಾಲೆ ನೋಡಿ ದೇಶವೇ ಶಾಕ್!
ಕೊನೆಗೂ ಸೋತ ಖಾಕಿ….!!!
ಕೇವಲ “Aunty” ಅಂತ ಅಂದಿದಕ್ಕೆ 2 ಲಕ್ಷ ದಂಡ…!
ಹೈ ಪ್ರೋಫೈಲ್ ಕೇಸ್ ಬಿಹಾರದಿಂದ UPವರೆಗೆ CID ಚೇಸ್… ಕೊನೆಗೂ ಸಿಕ್ಕಿದ ಸುಪಾರಿ ಕಿಲ್ಲರ್ಸ್!ಸಿನಿಮಾ ಸ್ಟೈಲ್ ಮರ್ಡರ್ ಮಿಸ್ಟರಿ: ಹೈಟೆಕ್ ಪ್ಲಾನ್ ಮಾಡಿದ ಹಂತಕರು… 
ದೇಶಕ್ಕಾಗಿ ಹಾರಿದ ಯುವ ಪೈಲಟ್: ಅಸ್ಸಾಂ ದುರಂತದಲ್ಲಿ ಐಎಎಫ್ ಅಧಿಕಾರಿ ವೀರಮರಣ
ಮೋದಿ ಅವರ ನಿರ್ಧಾರಗಳು“ದೀರ್ಘಕಾಲೀನ ಅಭಿವೃದ್ಧಿಗೆ ಜವಾಬ್ದಾರಿಯುತ ನೀತಿಗಳು” ಆತಂಕದ ಸೂಚನೆ ಅಲ್ಲ-ಎಸ್.ಎಸ್. ನಾಯಕ್
40 ವರ್ಷದ ಹಳೆಯ ಕೊಲೆಕೇಸ್‌ಗೆ ಅಂತಿಮ ಕೀ ಆಗಿ ಸಾಕ್ಷಿ ಆಗಿದ್ದು ತಿಂದು ಉಗುಳಿದ ಚೂಯಿಂಗ್ ಗಮ್ …!ಏನಿದು realstory..
ಮಾರ್ಚ್ 17 :ಮಂಗಳೂರಿನಲ್ಲಿ ವಿಶ್ವ ಗ್ರಾಹಕರ ದಿನಾಚರಣೆ-ಗ್ರಾಹಕರ ಹಕ್ಕುಗಳ ಜಾಗೃತಿ ಕಾರ್ಯಕ್ರಮ
ಕರ್ನಾಟಕ ಎಸ್‌ಎಸ್‌ಎಲ್‌ಸಿ 2026 ಫಲಿತಾಂಶ: ಇತಿಹಾಸದ ಅತ್ಯಧಿಕ ಉತ್ತೀರ್ಣ ಪ್ರಮಾಣ ಮತ್ತು ಟಾಪರ್‌ಗಳ ಸಾಧನೆ
ಗಂಜಿಮಠದತ್ತಿರ ಕಣ್ಣಿಗೆ ಖಾರದ ಪುಡಿ ಎರಚಿ ಹಣ ದೋಚಿ ಪರಾರಿಯಾದ ಆರೋಪಿಗಳು ರಸ್ತೆ ಮಧ್ಯೆ ಯೋಜಿತ ದರೋಡೆ …!
ಕರ್ನಾಟಕದಲ್ಲಿ ಯುಗಾದಿ ಹಬ್ಬಕ್ಕೂ ಮುನ್ನವೇ  ಮುಂಗಾರು  ಮಳೆರಂಗು – 5 ಜಿಲ್ಲೆಗಳಲ್ಲಿ ಆಲಿಕಲ್ಲು ಅಬ್ಬರ!
ಸರಕಾರಿ ಆಸ್ಪತ್ರೆಗಳ ಖಾಸಗೀಕರಣ ವಿರೋಧಿಸಿ ಸಿಪಿಐಎಂ ರಣಕಹಳೆ!”
ಅನಾಥ ಪುಟ್ಟ ಬಾಲಕಿಯರ ಮೇಲೆ ವರ್ಷಗಳ ಕಾಲ ಲೈಂಗಿಕ ದೌರ್ಜನ್ಯ:ರಾಕ್ಷಸ ಮನಸ್ಸುಗಳಿಗೆ ಅಂತ್ಯ ಯಾವಾಗ?
ಏರ್ ಇಂಡಿಯಾ ವಿಮಾನ ಸೇವೆ ಸ್ಥಗಿತ…40,000ಕ್ಕೂ ಹೆಚ್ಚು ಟೆಲ್ ಅವೀವ್‌ ಭಾರತೀಯರ ಪ್ರಯಾಣ ಅತಂತ್ರ…!
ಹೊರಗೆ ಕ್ಯಾಂಟೀನ್…ಆದ್ರೆ ಒಳಗೆ ನಡೆಯುತ್ತಿತ್ತು ಬೇರೆದ್ದೇ ಆಟ..!ಬಯಲಾಯ್ತು ಬೆಚ್ಚಿಬೀಳಿಸುವ ದಂಧೆ. 
ಟೂರಿಸಂ ಡೆವಲಪ್‌ಮೆಂಟ್‌ಗೆ ಅಧಿಕಾರಿಗಳೇ ಮಾರಕ
book ಮಾಡಿದ ನಿಮ್ಮ ಹೊಸ ಕಾರು-ಬೈಕ್ ಇನ್ನೂ ಬಂದಿಲ್ವಾ?ಪಶ್ಚಿಮ ಏಷ್ಯಾ ಯುದ್ಧದಿಂದ ಸರಬರಾಜು ವಿಳಂಬ…!
ಘರ್ ವಾಪ್ಸಿ ಯಾದ ಯೋಗೇಶ್ ಶೆಟ್ಟಿ ಜೆಪ್ಪು
ಕನಕಪುರ ಬಂಡೆ ಬಿಜೆಪಿಗೆ ಎಂಬ ಬೋಗಸ್ ಸುದ್ದಿ
₹10,000ಕ್ಕೆ NEET-UG 2026 ಪ್ರಶ್ನೆಪತ್ರಿಕೆ? ದೇಶವೇ ಬೆಚ್ಚಿಬಿದ್ದ ಲೀಕ್ ಸ್ಕಾಂಡಲ್!ಟೆಲಿಗ್ರಾಂ ಸೀಕ್ರೆಟ್ ಚಾಟ್ ವೈರಲ್…22 ಲಕ್ಷ ವಿದ್ಯಾರ್ಥಿಗಳ ಕನಸಿಗೆ ದೊಡ್ಡ ಹೊಡೆತ — NEET 2026 ರದ್ದು!
ಕಾಂಗ್ರೆಸ್‌ಗೆ ಹೊಸ ತಲೆನೋವು? ಅಹಿಂದ ಸಂಘಟನೆಯಿಂದ ‘ಪಕ್ಷ ವಿಭಜನೆ’ ಎಚ್ಚರಿಕೆ!
“ತಲೈವಾ”ಗೂ ಭಯವಾ? ಹೂವಿನ ಚೆಂಡು ಕಂಡು ವಿಜಯ್ ರನ್! ಒಂದು ಕ್ಷಣದ ಥ್ರಿಲ್ಲರ್!
ಐಟಿ ಕ್ಷೇತ್ರದಲ್ಲಿ ಮತ್ತೆ ಲೇಆಫ್ ಭೀತಿ!
🔴 ಯುದ್ಧದ ಹೊತ್ತಿನಲ್ಲಿ ಮಾನವೀಯ ರಾಜತಾಂತ್ರಿಕತೆ: ಇರಾನ್‌ಗೆ ಭಾರತದಿಂದ ಮೊದಲ ವೈದ್ಯಕೀಯ ನೆರವು: