📍 Karavali Maruta
  • LOGIN
  • BREAKING
    ಧಾರವಾಡದಲ್ಲಿ ಭೀಕರ LPG ಸಿಲಿಂಡರ್ ಸ್ಫೋಟ , ಹಲವು ಮೀಟರ್ ದೂರಕ್ಕೆ ಹಾರಿದ ಬೈಕ್‌! ಹಲವರಿಗೆ ಗಾಯ CCTVಯಲ್ಲಿ ಶಾಕಿಂಗ್ ದೃಶ್ಯ ದಯಾಮರಣ ಕೇಳಿದ್ದ ತುಮಕೂರು ರಾಬಿಯಾ ಇನ್ನಿಲ್ಲ …!ಪರಮೇಶ್ವರ್ ಮುಂದೆ ಕಣ್ಣೀರಿಟ್ಟಿದ್ದ ಮಹಿಳೆ ಇಬ್ಬರು ಮಕ್ಕಳೊಂದಿಗೆ ವಿಷಸೇವಿಸಿ ಕೊನೆಯುಸಿರು…‘ಮನೆ’ ಸಿಕ್ಕರೂ ಬದುಕು ಉಳಿಯಲಿಲ್ಲ! ನೇಪಾಳ ದುರಂತ: ಕಂಪ್ಲೀಟ್ ರಿಪೋರ್ಟ್ ಇಲ್ಲಿದೆ…ಕಣ್ಣೆದುರೇ ಕೊಚ್ಚಿಹೋದ ಬದುಕು… ಲೆಕ್ಕಕ್ಕೆ ಸಿಗದ ಸಾವು, ನೋವು!ಪ್ರವಾಹದ ರೌದ್ರದ ನಡುವೆ ಮೃತದೇಹದಿಂದಲೇ ಚಿನ್ನ ಕದಿಯಲು ಯತ್ನ… ಮಾನವೀಯತೆ ಮರೆತ ಕಿರಾತಕರು!ಇಬ್ಬರು ಅರೆಸ್ಟ್! ಮಹಿಳಾ ಕಾನ್ಸ್‌ಟೇಬಲ್ ಮೇಲೆ ಪೊಲೀಸ್ ಠಾಣೆಯಲ್ಲಿ ಮಾರಣಾಂತಿಕ ಹಲ್ಲೆ ವಾಜಪೇಯಿ ಸರ್ಕಾರದ  ಕನಸಿನ ಯೋಜನೆ ನದಿ ಜೋಡಣೆ ವಿರೋಧಿಸಿ ಶಿರಸಿಯಲ್ಲಿ ಸಹಿ ಸಂಗ್ರಹ ಅಭಿಯಾನ
    ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

    ಆನ್ ಲೈನ್ ವಂಚನೆ ಶಿರ್ವದ ಯುವತಿಗೆ ಲಕ್ಷ ಲಕ್ಷ ಉಂಡೆನಾಮ… ಬ್ಯಾಂಕ್ ನಿಯಮ ವಂಚಕರಿಗೆ  ಸಹಕಾರಿ?

    ಉಡುಪಿ ಜಿಲ್ಲೆಯ ಶಿರ್ವ ಪರಿಸರದ  ಯುವತಿಗೆ ಗಿಫ್ಟ್ ಕೋರಿಯರ್ ಹೆಸರಿನಲ್ಲಿ ₹13.99 ಲಕ್ಷ ಮೋಸ ಆದ ಘಟನೆ ನಡೆದಿದೆ. ಈ ಒಂದು ಆನ್ಲೈನ್ ವಂಚನೆಯ ಜಾಲಕ್ಕೆ ಎಲ್ಲೋ ಒಂದು ಕಡೆ ಬ್ಯಾಂಕಿನ ನಿಯಮಗಳು ಸಹಕಾರಿಯಾಗುತ್ತಿದೆ ಎಂಬ ಭಾವನೆ ಜನಸಾಮಾನ್ಯರಲ್ಲಿ ಬರಲು ಕಾರಣವಾಗುತ್ತಿದೆ. ಬ್ಯಾಂಕ್ ಮೂಲಕ ನಡೆಯುವ ವ್ಯವಹಾರ ಯಾವತ್ತೂ ಸೇಫ್ ಎನ್ನುವ ಭಾವನೆ ಇತ್ತು. ಈಗ ಪದೇ ಪದೇ ಇಂತಹ ಆನ್ ಲೈನ್ ವಂಚನೆಗಳು ಬ್ಯಾಂಕ್ ಗಳ ಮೂಲಕವೇ ನಡೆಯುತ್ತಿರುವುದರಿಂದ ಹಾಗೆ ಜನಸಾಮಾನ್ಯರಲ್ಲಿ ಈ ರೀತಿಯ ಅನುಮಾನ ಹುಟ್ಟಲು ಕಾರಣವಾಗಿದೆ.

      ವಿದೇಶದಿಂದ ಗಿಫ್ಟ್ ಕೋರಿಯರ್ ಬಂದಿದೆ ಎಂದು ನಂಬಿಸಿ ಮಹಿಳೆಯೊಬ್ಬರಿಂದ ₹13,99,700/- ಹಣವನ್ನು ಆನ್‌ಲೈನ್ ಮೂಲಕ ಪಡೆದು ಮೋಸ ಮಾಡಲಾಗಿದೆ ಎಂದು ತಡವಾಗಿ ದೂರು ದಾಖಲಾಗಿದೆ.
    ವಿದ್ಯಾ (ಹೆಸರು ಬದಲಿಸಲಾಗಿದೆ) ಅವರು Canara Bankನಲ್ಲಿ ಖಾತೆ ಹೊಂದಿದ್ದಾರೆ. ಸುಮಾರು ಒಂದು ತಿಂಗಳ ಹಿಂದೆ ಮೊಬೈಲ್ ಮೂಲಕ ಪರಿಚಯವಾದ ವ್ಯಕ್ತಿಯೊಬ್ಬನು ತಾನು ವಿದೇಶದಲ್ಲಿದ್ದು, ತಮ್ಮ ಹೆಸರಿನಲ್ಲಿ ಗಿಫ್ಟ್ ಕೋರಿಯರ್ ಕಳುಹಿಸಿದ್ದೇನೆ ಎಂದು 22/02/2026ರಂದು ವಾಟ್ಸ್‌ಆಪ್ ಮೂಲಕ ಅದರ ಛಾಯಾಚಿತ್ರ ಕಳುಹಿಸಿದ್ದಾನೆ.
    23/02/2026ರಂದು ಬೆಳಿಗ್ಗೆ ಸುಮಾರು 10 ಗಂಟೆಗೆ, ದೂರುದಾರಳಾದ ವಿದ್ಯಾಳ  ಮೊಬೈಲ್‌ಗೆ ಮಹಿಳೆಯೊಬ್ಬಳು ಕರೆ ಮಾಡಿ, “ನಿಮ್ಮ ಹೆಸರಿನಲ್ಲಿ ವಿದೇಶದಿಂದ ಕೋರಿಯರ್ ಬಂದಿದೆ. ವಿಮಾನ ನಿಲ್ದಾಣದಿಂದ ಬಿಡುಗಡೆಗೊಳಿಸಲು ₹49,700/- ಪಾವತಿಸಬೇಕು” ಎಂದು ತಿಳಿಸಿದ್ದಾಳೆ. ಆಕೆಯ ಸೂಚನೆಯಂತೆ ಪಿರ್ಯಾದಿದಾರರು IDBI Bank, ದೆಹಲಿ ಶಾಖೆಯ ಖಾತೆಗೆ ಉಡುಪಿ ಕೆನರಾ ಬ್ಯಾಂಕ್ ಶಾಖೆಯ ಮೂಲಕ ₹49,700/- ಕಳುಹಿಸಿದ್ದಾರೆ.
    ನಂತರ ಕೋರಿಯರ್ ಪರಿಶೀಲನೆಗಾಗಿ ಮತ್ತಷ್ಟು ಹಣ ಅಗತ್ಯವಿದೆ ಎಂದು ತಿಳಿಸಿ, ಕೋರಿಯರ್‌ನಲ್ಲಿ 30,000 ಪೌಂಡ್ ವಿದೇಶಿ ನಗದು ಇದೆ, ಇದನ್ನು ಕಳುಹಿಸುವುದು ಕಾನೂನುಬಾಹಿರವಾಗಿರುವುದರಿಂದ ₹1,89,000/- ಪಾವತಿಸಬೇಕೆಂದು ಮೂರು ವಿಭಿನ್ನ ಖಾತೆ ಸಂಖ್ಯೆಗಳು ನೀಡಲಾಗಿದೆ. ಪಿರ್ಯಾದಿದಾರರು ಸೂಚಿಸಿದಂತೆ ಒಟ್ಟು ₹1,89,000/- ಹಣ ವರ್ಗಾವಣೆ ಮಾಡಿದ್ದಾರೆ.
    ಅದೇ ದಿನ ಸಂಜೆ “ಮನಿ ಎಕ್ಸ್‌ಚೇಂಜ್” ಹಾಗೂ “ಡಾಕ್ಯುಮೆಂಟೇಶನ್” ಶುಲ್ಕಗಳ ಹೆಸರಿನಲ್ಲಿ ಹಂತ ಹಂತವಾಗಿ ₹62,500/-ರಂತೆ ಒಟ್ಟು ₹2,50,000/- ಹಣ ಕಳುಹಿಸುವಂತೆ ಹೇಳಿ ಪಡೆದುಕೊಂಡಿದ್ದಾರೆ. 23/02/2026ರಿಂದ 27/02/2026ರವರೆಗೆ ವಿವಿಧ ಬ್ಯಾಂಕ್ ಖಾತೆಗಳಿಗೆ ಒಟ್ಟು ₹13,99,700/- ಹಣ ವರ್ಗಾವಣೆ ಮಾಡಲಾಗಿದೆ.
    ಇನ್ನೊಂದೆಡೆ, “ಮಿಲರ್ ಗೇರ್ ಹಾರ್ಡ್” ಎಂದು ಪರಿಚಯಿಸಿಕೊಂಡ ವ್ಯಕ್ತಿಯು ಕೋರಿಯರ್‌ನಲ್ಲಿ 30,000 ಪೌಂಡ್ ಕಳುಹಿಸಿದ್ದೇನೆ ಎಂದು ತಿಳಿಸಿದ್ದಾನೆ. ಕರೆ ಮಾಡಿದ ಮಹಿಳೆ ಈ ಮೊತ್ತವು ಭಾರತೀಯ ರೂಪಾಯಿಗೆ ಸುಮಾರು ₹37 ಲಕ್ಷ ಆಗುತ್ತದೆ ಎಂದು ಹೇಳಿ ನಂಬಿಸಿದ್ದಾಳೆ. ಆದರೆ ಕೋರಿಯರ್ ಆಗಮಿಸದೇ ಇರುವುದರಿಂದ ತಾನು ಮೋಸ ಹೋಗಿರುವುದನ್ನು ಪಿರ್ಯಾದಿದಾರರು ಅರಿತು ದೂರು ನೀಡಿದ್ದಾರೆ.
    ದೂರಿನ ಮೇರೆಗೆ ಶಿರ್ವಾ ಪೊಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 22/2026 ಅಡಿಯಲ್ಲಿ ಐಟಿ ಕಾಯಿದೆ ಕಲಂ 66(ಡಿ) ಹಾಗೂ ಬಿಎನ್‌ಎಸ್ ಕಲಂ 316(2), 318(4) r/w 3(5) ಅನ್ವಯ ಪ್ರಕರಣ ದಾಖಲಿಸಿ ತನಿಖೆ ಆರಂಭಿಸಲಾಗಿದೆ.

    ಪೊಲೀಸರು ಸಾರ್ವಜನಿಕರಿಗೆ ಎಚ್ಚರಿಕೆ ನೀಡಿದ್ದು, ವಿದೇಶದಿಂದ ಗಿಫ್ಟ್, ಲಾಟರಿ, ಕೋರಿಯರ್ ಹೆಸರಿನಲ್ಲಿ ಹಣ ಕೇಳುವ ಅಪರಿಚಿತರ ಕರೆಗಳನ್ನು ನಂಬಬಾರದು ಎಂದು ಸೂಚಿಸಿದ್ದಾರೆ.

    COMMENTS

    Login with Gmail to comment

    ಇನ್ನಷ್ಟು ಸುದ್ದಿ

    ಈಶ್ವರ್ ಮಲ್ಪೆ ತಂಡಕ್ಕೆ MAHE ಸಂಸ್ಥೆಯಿಂದ ಅಮೂಲ್ಯ ರಕ್ಷಣಾ ವಾಹನ ಕೊಡುಗೆ-ಜೀವ ಉಳಿಸುವ ಸೇವೆಗೆ ಮತ್ತಷ್ಟು ಶಕ್ತಿ
    ಅಂದೊಮ್ಮೆ ಬಾಲಿವುಡ್‌ನಲ್ಲಿ ಕಡೆಗಣಿಸಿದ  ಪ್ರಿಯಾಂಕಾ ಚೋಪ್ರಾ ಇಂದು ವಿಶ್ವದ ಪ್ರತಿಷ್ಠಿತ ಬ್ರಾಂಡ್ ರೋಲೆಕ್ಸ್‌ನ ಅಂಬಾಸಿಡರ್! 
    ಅಮಿತ್ ಶಾ- “UCC ಜಾರಿಗೆ ತಂದು ನಾಲ್ಕು ಮದುವೆ ಪದ್ಧತಿ ನಿಷೇಧ” — ಪಶ್ಚಿಮ ಬಂಗಾಳದಲ್ಲಿ ದೊಡ್ಡ ಘೋಷಣೆ
    ಗ್ರಾಮೀಣ ವಿದ್ಯಾರ್ಥಿಗಳಿಗೂ AI ಶಿಕ್ಷಣ: ಕರ್ನಾಟಕ ಸರ್ಕಾರದ ಐತಿಹಾಸಿಕ ಹೆಜ್ಜೆ..50 ಸರ್ಕಾರಿ ಕಾಲೇಜುಗಳಲ್ಲಿ AI ಲ್ಯಾಬ್‌ಗಳು!
    ಮೇ 29ರಿಂದ ತಣ್ಣೀರುಬಾವಿ ಬೀಚ್‌ನಲ್ಲಿ ಮೂರು ದಿನಗಳ ರಾಷ್ಟ್ರಮಟ್ಟದ ಸರ್ಫಿಂಗ್ ಸ್ಪರ್ಧೆ…
     ಆಸ್ಪತ್ರೆಯಲ್ಲಿ ಡಾಕ್ಟರ್ “mistakeಎಡವಟ್”…ಅಚ್ಚರಿಯೂ ಮೀರಿದ ಆಘಾತ!
    ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ಮಾತ್ರ (ಅ)ವ್ಯವಸ್ಥೆ ಎಚ್ಚರಗೊಳ್ಳಬೇಕೇ? ಯಾರು ಹೊಣೆ? ಏನು ಕ್ರಮ?
    ನಾಳೆ ಮಂಗಳೂರಲ್ಲಿ ಇಡೀ ದಿನ ಕರೆಂಟಿಲ್ಲ Power Cut.. ಎಲ್ಲೆಲ್ಲಿ?
    ಕದನ ವಿರಾಮ ಹೇಳಿಕೆ ಮಾತ್ರ…“Middle East ಮತ್ತೆ ಸ್ಫೋಟಕ
    2047ರ ಕನಸಿನ ಭಾರತಕ್ಕಾಗಿ ದೆಹಲಿಯಲ್ಲಿ ಮೆಗಾ ಮಂಥನ… ಏನಿದೆ ಈ ಮಾಸ್ಟರ್ ಪ್ಲಾನ್‌ನಲ್ಲಿ?
    ಮಕ್ಕಳಿಗೆ ಪ್ರಕೃತಿ ಮತ್ತು ಸಕಲ ಜೀವಿಗಳನ್ನು ಪ್ರೀತಿಸುವುದನ್ನು ಕಲಿಸಿ
    165 ಹೆಣ್ಮಕ್ಕಳು ತಮ್ಮದಲ್ಲದ ತಪ್ಪಿಗೆ ಹತ್ಯೆಗೆ ಒಳಗಾದರು 
    ಕೇಂದ್ರ ಸಚಿವ ಸೋಮಣ್ಣರ ವಿರುದ್ಧ  ವಾಗ್ದಾಳಿ: “ನಡೆದು ಬಂದ ದಾರಿ ಮರೆತು ಮಾತನಾಡಬೇಡಿ”
    ವಾಜಪೇಯಿ ಸರ್ಕಾರದ  ಕನಸಿನ ಯೋಜನೆ ನದಿ ಜೋಡಣೆ ವಿರೋಧಿಸಿ ಶಿರಸಿಯಲ್ಲಿ ಸಹಿ ಸಂಗ್ರಹ ಅಭಿಯಾನ
    🔥 ಮಧ್ಯಪ್ರಾಚ್ಯ ಯುದ್ಧ: 17ನೇ ದಿನಕ್ಕೆ- ದುಬೈ ವಿಮಾನ ನಿಲ್ದಾಣದ ಬಳಿ ಬೆಂಕಿ!
    ಉಮ್ಮತ್ತಿ ಹಣ್ಣು ಆನ್‌ಲೈನ್‌ನಲ್ಲೂ ಸಿಗುತ್ತಾ? ಗ್ರಾಹಕರೇ ಎಚ್ಚರ!
    ಕರ್ನಾಟಕದಲ್ಲಿ ಹೆಚ್ಚುತ್ತಿರುವ ಹೆಚ್‌ಐವಿ ಪ್ರಕರಣಗಳು..!ಯುವ ಪೀಳಿಗೆಯನ್ನು ಗುರಿಯಾಗಿಸಿ “ಹೈ-ಅಲರ್ಟ್ ಘೋಷಿಸಿದ ಆರೋಗ್ಯ ಇಲಾಖೆ.”
    AYS TROPHY–2026 ಯಶಸ್ವಿಯಾಗಿಸಲು ನಿಮ್ಮ ಉಪಸ್ಥಿತಿ ಅಗತ್ಯ.
    ಕೇರಳ ಹೈಕೋರ್ಟ್ ಬಿಗ್ ರೂಲಿಂಗ್: ಅಧಿಕೃತ ಪ್ರಮಾಣವಚನದಲ್ಲಿ ‘ದೇವತೆಗಳು’, ‘ಹುತಾತ್ಮರ’ ಹೆಸರು ಹೇಳುವಾಗಿಲ್ಲ…
    ಹೈಕೋರ್ಟ್ ತೀರ್ಪಿನಿಂದ ದಕ್ಷಿಣ ಕನ್ನಡ ಇ-ರಿಕ್ಷಾ ಚಾಲಕರಿಗೆ favour
    ಬೆಳಗ್ಗೆಯೇ ಲೋಕಾಯುಕ್ತ ಬಿಗ್ ಬ್ಲಾಸ್ಟ್!54 ಕಡೆ ಏಕಕಾಲದಲ್ಲಿ ರೇಡ್… ಚಿನ್ನ, ನಗದು, ಮನೆ, ಜಮೀನುಗಳ ಮಹಾಪರ್ವತ ಪತ್ತೆ!
    ಉಡುಪಿ ನಗರ ಅಭಿವೃದ್ಧಿ ಪ್ರಾಧಿಕಾರ ಮತ್ತು ನಗರ ಸಭೆ ಎರಡೂ ಕಮಾಯಿಗೆ ಕುಳಿತು ಕೊಂಡಿದೆಯಾ?
    Political Heatwave 2026:ದಕ್ಷಿಣದಲ್ಲಿ ಅಧಿಕಾರ ಆಟ, ಅಸ್ಸಾಂನಲ್ಲಿ ಅಬ್ಬರ..!
    ಡಿಜಿಟಲ್ ಡಿಟಾಕ್ಸ್‌ಗೆ ಮಾದರಿಯಾದ ಸಿಇಒ: ಯುವಜನತೆಗೆ ಹೊಸ ಸಂದೇಶ!
    ಶಾಲಾ ವಾಹನಗಳ ಸುರಕ್ಷತೆ ಬಗ್ಗೆ ಜೆಡಿಎಸ್ ಆಗ್ರಹ
    ಉಡುಪಿ ಸಬ್ ರಿಜಿಸ್ಟರ್ ಕಚೇರಿಯಲ್ಲಿ ಕಾನೂನುಬಾಹಿರ ಚಟುವಟಿಕೆ
    ಗೃಹಲಕ್ಷ್ಮಿ ಹಣ ಉಳಿಸಿ ದೇವಿಗೆ ₹17 ಲಕ್ಷ ದೇಣಿಗೆ!
    ಒಂದು ವಾಟ್ಸ್ಯಾಪ್ ಮೆಸೇಜ್… ಕೋರ್ಟ್ ವರೆಗೂ ಎಳೆದ ಶಾಕ್ ಘಟನೆಯ ಸುತ್ತ..
    ಪಕ್ಷದಿಂದ ಪಕ್ಕಕ್ಕೆ? ರಾಘವ್ ಚಡ್ಡಾ ಹಿಂದೆ ಏನಿದೆ ದೊಡ್ಡ ರಾಜಕೀಯ ಆಟ!”ಮೌನಗೊಳಿಸಿದರೂ ನಿಲ್ಲದ ಧ್ವನಿ – ರಾಘವ್ ಚಡ್ಡಾ!”
    ಒಂದು ರಾಷ್ಟ್ರ, ಒಂದು ಚುನಾವಣೆ’ಗೆ ಡಿಕೆಶಿ ಸಿಡಿದೆದ್ದೇಕೆ?