📍 Karavali Maruta
  • LOGIN
  • ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

    ಆರು ಲಕ್ಷ ರೂ. ಶುಲ್ಕದ ಸಂಕಷ್ಟಕ್ಕೆ ಮಾನವೀಯ ಸ್ಪಂದನೆ: ವಿದ್ಯಾರ್ಥಿನಿಯ ಕನಸಿಗೆ ಸಚಿವ ಬಾಲಕೃಷ್ಣ ಬೆನ್ನೆಲುಬು

    ಬೆಂಗಳೂರು: ಉನ್ನತ ಶಿಕ್ಷಣ ಪಡೆಯಬೇಕೆಂಬ ಕನಸು ಹೊತ್ತಿದ್ದ ವಿದ್ಯಾರ್ಥಿನಿಯೊಬ್ಬಳಿಗೆ ಪ್ರವೇಶಾತಿ ಪ್ರಕ್ರಿಯೆಯಲ್ಲಿನ ತಾಂತ್ರಿಕ ಸಮಸ್ಯೆಯೊಂದು ಸುಮಾರು ₹6 ಲಕ್ಷಗಳ ಆರ್ಥಿಕ ಹೊರೆಯಾಗುವ ಪರಿಸ್ಥಿತಿ ನಿರ್ಮಿಸಿತ್ತು. ಈ ಸಂದರ್ಭದಲ್ಲಿ ಸಚಿವ ಬಾಲಣ್ಣ ಅವರು ಮಾನವೀಯತೆ ಮೆರೆದು ವಿದ್ಯಾರ್ಥಿನಿಯ ಕುಟುಂಬದ ನೆರವಿಗೆ ಧಾವಿಸಿ, ಕೊನೆಗೂ ಆಕೆಯ ಪ್ರವೇಶಾತಿ ಸಮಸ್ಯೆ ಬಗೆಹರಿಯುವಂತೆ ಅಗತ್ಯ ಕ್ರಮ ಕೈಗೊಂಡಿದ್ದಾರೆ.

    ಭೀಮನ ಅಮಾವಾಸ್ಯೆಯ ಪೂಜೆಯನ್ನು ಮುಗಿಸಿ ಬೆಂಗಳೂರಿನ ನಿವಾಸಕ್ಕೆ ಆಗಮಿಸಿದ್ದ ಸಚಿವ ಬಾಲಣ್ಣ ಅವರನ್ನು ದಾಸರಹಳ್ಳಿ ಕ್ಷೇತ್ರದಿಂದ ತಂದೆ-ತಾಯಿಯೊಂದಿಗೆ ಆಗಮಿಸಿದ್ದ ವಿದ್ಯಾರ್ಥಿನಿಯೊಬ್ಬಳು ಭೇಟಿಯಾಗಿದ್ದಳು. ಆಕೆಯ ಮುಖದಲ್ಲಿದ್ದ ಆತಂಕವನ್ನು ಗಮನಿಸಿದ ಸಚಿವರು ಸಮಸ್ಯೆ ಏನೆಂದು ವಿಚಾರಿಸಿದಾಗ, ಆಕೆಯ ಉನ್ನತ ಶಿಕ್ಷಣದ ಕನಸಿಗೆ ಎದುರಾಗಿದ್ದ ಸಂಕಷ್ಟದ ವಿವರ ಹೊರಬಂದಿದೆ.

    Indian Council of Agricultural Research (ICAR) ವ್ಯಾಪ್ತಿಗೆ ಒಳಪಡುವ UHS ಬಾಗಲಕೋಟೆ ಕಾಲೇಜಿನಲ್ಲಿ ಪದವಿ ಪ್ರವೇಶ ಪಡೆಯಬೇಕಿದ್ದ ವಿದ್ಯಾರ್ಥಿನಿಗೆ, ಪೋರ್ಟಲ್‌ನಲ್ಲಿ ಭಾರತದಲ್ಲಿ ವಾಸಿಸುವ ದೃಢೀಕರಣ ಪತ್ರವನ್ನು ಆನ್‌ಲೈನ್‌ನಲ್ಲಿ ಸಲ್ಲಿಸಲು ಸಾಧ್ಯವಾಗಿರಲಿಲ್ಲ. ಇದರಿಂದಾಗಿ ಸುಮಾರು ₹6 ಲಕ್ಷ ಪ್ರವೇಶ ಶುಲ್ಕ ಪಾವತಿಸಬೇಕಾದ ಅನಿವಾರ್ಯ ಪರಿಸ್ಥಿತಿ ಎದುರಾಗಿತ್ತು.

    ಒಂದೆಡೆ ಉನ್ನತ ಶಿಕ್ಷಣದ ಕನಸು; ಮತ್ತೊಂದೆಡೆ ಆರು ಲಕ್ಷ ರೂಪಾಯಿಗಳ ಭಾರ.

    ವಿಷಯವನ್ನು ಕೇಳಿದ ಸಚಿವರು ಕೇವಲ ಭರವಸೆ ನೀಡಿ ಕಳುಹಿಸದೆ, ತಕ್ಷಣವೇ ತಮ್ಮ ಆಪ್ತ ಕಾರ್ಯದರ್ಶಿಗೆ ಸೂಚನೆ ನೀಡಿದರು. ವಿದ್ಯಾರ್ಥಿನಿ ಹಾಗೂ ಆಕೆಯ ತಂದೆಯನ್ನು ತಮ್ಮ ಕಾರಿನಲ್ಲೇ ಮುಖ್ಯಮಂತ್ರಿ ಗೃಹ ಕಚೇರಿ ‘ಕೃಷ್ಣಾ’ಗೆ ಕರೆದುಕೊಂಡು ಹೋಗಿ, ಮುಖ್ಯಮಂತ್ರಿ ಅವರ ಗಮನಕ್ಕೆ ಸಮಸ್ಯೆಯನ್ನು ತಂದರು. ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಈ ಕುರಿತು ಚರ್ಚಿಸಿ ಪರಿಹಾರ ಕಂಡುಕೊಳ್ಳುವ ಪ್ರಯತ್ನ ನಡೆಸಿದರು.

    ಆದರೂ ಸಚಿವರ ಪ್ರಯತ್ನ ಅಲ್ಲಿಗೆ ನಿಲ್ಲಲಿಲ್ಲ. ಕೇಂದ್ರ ಸರ್ಕಾರದ ಅಧೀನದಲ್ಲಿರುವ ಸಂಸ್ಥೆಗೆ ಸಂಬಂಧಿಸಿದ ವಿಚಾರವಾಗಿದ್ದರಿಂದ ಸಂಸದ ತೇಜಸ್ವಿ ಸೂರ್ಯ ಅವರನ್ನು ದೂರವಾಣಿ ಮೂಲಕ ಸಂಪರ್ಕಿಸಿ ಸಮಸ್ಯೆಯನ್ನು ವಿವರಿಸಿದರು. ದೆಹಲಿಯ ತಮ್ಮ ಕಚೇರಿಯ ಸಾಯಿ ಬಾಲಾಜಿ ಅವರಿಗೆ ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚಿಸಿ, ವಿದ್ಯಾರ್ಥಿನಿಯನ್ನು ದೆಹಲಿಗೆ ಕರೆಸಿಕೊಳ್ಳುವ ವ್ಯವಸ್ಥೆ ಮಾಡುವಂತೆ ತಿಳಿಸಿದರು.

    ಈ ವೇಳೆ ವಿದ್ಯಾರ್ಥಿನಿಯ ತಂದೆಯ ವೃತ್ತಿಯನ್ನೂ ಸಚಿವರು ವಿಚಾರಿಸಿದರು. “ಆಟೋ ಓಡಿಸುತ್ತಾರೆ ಸರ್” ಎಂಬ ಉತ್ತರ ಕೇಳಿದ ಸಚಿವರು, ಮಗಳ ವಿದ್ಯಾಭ್ಯಾಸಕ್ಕಾಗಿ ಶ್ರಮಿಸುತ್ತಿರುವ ಆ ತಂದೆಯ ಪರಿಸ್ಥಿತಿಯನ್ನು ಅರಿತುಕೊಂಡರು.

    ವಿದ್ಯಾರ್ಥಿನಿಯ ಭವಿಷ್ಯಕ್ಕೆ ಯಾವುದೇ ಅಡ್ಡಿಯಾಗಬಾರದು ಎಂಬ ಉದ್ದೇಶದಿಂದ ಸಚಿವ ಬಾಲಣ್ಣ ಅವರು ವಿದ್ಯಾರ್ಥಿನಿ ಹಾಗೂ ಆಕೆಯ ತಂದೆಗೆ ವಿಮಾನ ಟಿಕೆಟ್ ವ್ಯವಸ್ಥೆ ಮಾಡಿಸಿ, ದೆಹಲಿಯಲ್ಲಿ ವಸತಿ ಸೌಲಭ್ಯ ಕಲ್ಪಿಸುವಂತೆಯೂ ಕ್ರಮ ಕೈಗೊಂಡರು.

    ಮರುದಿನ ಬೆಳಗ್ಗೆಯೇ ವಿದ್ಯಾರ್ಥಿನಿಗೆ ದೂರವಾಣಿ ಕರೆ ಮಾಡಿದ ಸಚಿವರು, ಸಂಬಂಧಪಟ್ಟ ಅಧಿಕಾರಿಗಳನ್ನು ಭೇಟಿಯಾಗಿದ್ದಾರೆಯೇ, ಸಮಸ್ಯೆಯ ಕುರಿತು ಯಾವುದೇ ಪ್ರಗತಿ ಕಂಡಿದೆಯೇ ಎಂಬುದನ್ನು ಖುದ್ದಾಗಿ ವಿಚಾರಿಸಿದರು. ಅಲ್ಲದೆ ಕೇಂದ್ರ ಸಚಿವ ಸೋಮಣ್ಣ ಅವರ ಗಮನಕ್ಕೂ ವಿಷಯವನ್ನು ತಂದು, ಸಮಸ್ಯೆ ಪರಿಹಾರಕ್ಕೆ ಅಗತ್ಯ ಸಹಕಾರ ಕೋರಿದರು.

    ಅಂತಿಮವಾಗಿ ತೇಜಸ್ವಿ ಸೂರ್ಯ ಹಾಗೂ ಸೋಮಣ್ಣ ಅವರ ಸಹಕಾರದೊಂದಿಗೆ ವಿದ್ಯಾರ್ಥಿನಿಯ ಪ್ರವೇಶಾತಿ ಸಮಸ್ಯೆ ಬಗೆಹರಿದಿದ್ದು, ಆಕೆಯ ಉನ್ನತ ಶಿಕ್ಷಣದ ಕನಸಿಗೆ ಮತ್ತೆ ದಾರಿ ತೆರೆದಿದೆ.

    ಈ ಘಟನೆ ಕೇವಲ ಪ್ರವೇಶಾತಿ ಸಮಸ್ಯೆ ಬಗೆಹರಿಸಿದ ಪ್ರಕರಣವಾಗಿ ಮಾತ್ರ ಉಳಿಯುವುದಿಲ್ಲ. ಮಗಳ ಭವಿಷ್ಯಕ್ಕಾಗಿ ದುಡಿಯುತ್ತಿರುವ ಒಬ್ಬ ತಂದೆಯ ಹೋರಾಟಕ್ಕೆ ಸಿಕ್ಕ ಬೆಂಬಲ, ಉನ್ನತ ಶಿಕ್ಷಣದ ಕನಸು ಕಾಣುತ್ತಿದ್ದ ಒಬ್ಬ ವಿದ್ಯಾರ್ಥಿನಿಗೆ ದೊರೆತ ಭರವಸೆ ಹಾಗೂ ಸಂಕಷ್ಟದ ಸಂದರ್ಭದಲ್ಲಿ ಮಾನವೀಯವಾಗಿ ಸ್ಪಂದಿಸಿದ ಸಚಿವರ ನಡೆ ಸಾರ್ವಜನಿಕರ ಮೆಚ್ಚುಗೆಗೆ ಪಾತ್ರವಾಗಿದೆ.

    COMMENTS

    Login with Gmail to comment

    ಇನ್ನಷ್ಟು ಸುದ್ದಿ

    ದೆಹಲಿ ಭಾರೀ ದುರಂತದಿಂದ ಪಾರು!: ಏರ್ ಇಂಡಿಯಾ ವಿಮಾನಗಳು ಜಖಂಗೊಂಡರೂ ತಪ್ಪಿದ ಪ್ರಾಣಾಪಾಯ!
    ಹಿರಿಯಡ್ಕದ ಬಾರಿನಲ್ಲಿ ಸರಿ ಕುಡಿದು ಗುಂಡಾಗಿರಿ, ಬಿಯರ್ ಬಾಟಲಿಯಿಂದ ಹಲ್ಲೆ
    ಬಂಟ್ವಾಳದಲ್ಲಿ ಶಾಲಾ ಬಸ್ ಮೇಲೆ ಉರುಳಿದ ಬೃಹತ್ ಮರ; ಪುಟ್ಟ ಜೀವವೊಂದು ಬಲಿ.. ಕೆಲವು ಮಕ್ಕಳಿಗೆ ಗಾಯ..
    ರಾಜಕೀಯದಲ್ಲಿ ಅನುಭವ ಎಷ್ಟು ಮುಖ್ಯ?…  ತಮಿಳುನಾಡು ರಾಜಕಾರಣ ತೋರಿಸುತ್ತಿದೆ ನೋಡಿ
    ಸರ್ಕಾರಿ ಆಸ್ಪತ್ರೆಗಳಲ್ಲಿ ನಿರ್ಲಕ್ಷ್ಯಕ್ಕೆ ಬ್ರೇಕ್? ರೋಗಿಗಳ ಹಕ್ಕು ರಕ್ಷಣೆಗೆ 24×7 ನೇರ ಹೆಲ್ಪ್‌ಲೈನ್ – ಆರೋಗ್ಯ ಸಚಿವ ಯು.ಟಿ. ಖಾದರ್ ಮಹತ್ವದ ಘೋಷಣೆ
    🔴ಬ್ರೇಕಿಂಗ್ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ನಾಳೆ ಜುಲೈ 8 ರಜೆ ಘೋಷಣೆ!
    ಬಾಲ್ಯವಿವಾಹಕ್ಕೆ ಬ್ರೇಕ್ ಹಾಕಲು ಮಹಾರಾಷ್ಟ್ರದ ಮಾಸ್ಟರ್ ಪ್ಲಾನ್: ಇನ್ವಿಟೇಶನ್ ಕಾರ್ಡ್‌ನಲ್ಲಿ ಜನ್ಮ ದಿನಾಂಕ ಕಡ್ಡಾಯ!
    ಟೂರ್ plan ಮಾಡ್ತಿದ್ದೀರಾ ?ಸ್ಥಳವೇ ಇಲ್ಲದ address ಗೆ online book ಮಾಡಿ ಮೋಸ ಹೋಗ್ಬೇಡಿ…
    🚢 “ಹಾರ್ಮುಝ್‌ನಿಂದ ಮಂಗಳೂರುವರೆಗೆ – 46,000 MT ಎಲ್‌ಪಿಜಿ ಯಮಹಾಯಾತ್ರೆ!
    ಕರ್ನಾಟಕದಲ್ಲಿ ಈಗ ಏನು ಟ್ರೆಂಡಿಂಗ್ ಗೊತ್ತಾ…! ಸಾಲು ಸಾಲು ಹಗರಣ, ಲಂಚವತಾರ , ಅಕ್ರಮ ನೇಮಕಾತಿ,ಟ್ರಾನ್ಸ್‌ಫರ್ ಮಾಫಿಯಾ ..ಒಂದೋ ಎರಡೋ….!??
    ಸ್ವಂತ ತಂಗಿಯೊಂದಿಗೆ ಅಕ್ರಮ ಸಂಬಂಧ- ಕುಟುಂಬ ಹಾಗೂ ಸಮಾಜದಲ್ಲಿ ಆತಂಕ
    ಆಂಬ್ಯುಲೆನ್ಸ್‌ನಲ್ಲೇ ನಡೆದ ಭೀಕರ ಘಟನೆ… ನಂಬಲು ಕಷ್ಟ, ಆದರೆ ಸತ್ಯ!
    ಹಂತಕರ ಹಿಂದೆ ಯಾರಿದ್ದಾರೆ? ಉಡುಪಿ ಪೊಲೀಸರ ನೆಕ್ಸ್ಟ್ ಟಾರ್ಗೆಟ್…?
    ಸ್ಟೇಟ್ ಬ್ಯಾಂಕ್ ಮೀನು ಮಾರುಕಟ್ಟೆಗೆ ಭೇಟಿ ನೀಡಿದ ಡಾ. ನಾಗಲಕ್ಷ್ಮಿ ಚೌಧರಿ – ಮಹಿಳಾ ಮೀನುಗಾರರ ಸಮಸ್ಯೆ ಆಲಿಕೆ
    ಶಾಲಾ ವಾಹನಗಳ ಸುರಕ್ಷತೆ ಬಗ್ಗೆ ಜೆಡಿಎಸ್ ಆಗ್ರಹ
    Maths hate ಮಾಡ್ತಿರಾ ? ಹಾಗಾದ್ರೆ ಈ ವರದಿ ನೋಡಿ ಸಮಸ್ಯೆ ನಿಮ್ಮಲ್ಲಿಲ್ಲ … research ಹೇಳುತ್ತೆ ಸಂಖ್ಯೆಗಳಲ್ಲಿ ಇದೆ!”
    ಮಂಗಳೂರು ಶಾಲಾ ದಾಖಲಾತಿ ಅಂದೋಲನ-ಎಲ್ಲ ಮಕ್ಕಳಿಗೂ ಶಾಲೆಯ ಹಕ್ಕು …
    ನೀವೂ ತಿಳಿದಿರಬೇಕಾದ ವಿಷಯ:ಬರುವ ಆರ್ಥಿಕ ಸಂಕಷ್ಟಕ್ಕೆ ಈಗಲೇ ಸಿದ್ಧರಾಗಿ!
    ಸಂಸತ್ತಿನಲ್ಲಿ ಪ್ರಶ್ನೆಪತ್ರಿಕೆ ಸೋರಿಕೆ ವಿರುದ್ಧ ಚರ್ಚೆ-ಕಾನೂನು ಬರೋ ಮುನ್ನವೇ ಮತ್ತೊಂದು ಲೀಕ್!
    ಶಿಶಿಲದಲ್ಲಿ ವಿಷಪೂರಿತ ಹಾವು ಕಚ್ಚಿ 65 ವರ್ಷದ ರೈತ ಮೃತ್ಯು
    ಬೃಹತ್ ಅಭಿಯಾನ….5.51 ಟನ್ ವಸ್ತುಗಳು..!5000ಕ್ಕೂ ಹೆಚ್ಚು ದೇವರ ಫೋಟೋಗಳು
    “ದಪ್ಪ, ಕಪ್ಪು ಎಂಬ ಅವಹೇಳನ… ವರದಕ್ಷಿಣೆ ಕಿರುಕುಳ… ಕೊನೆಗೆ ಕತ್ತು ಹಿಸುಕಿ ಹತ್ಯೆ! ಧಾರವಾಡದ ಘಟನೆ ಸಮಾಜದ ಮನಸ್ಸನ್ನೇ ನಡುಗಿಸಿದೆ”
    ದೆಹಲಿ: ₹21.40 ಕೋಟಿ ಮೌಲ್ಯದ 15 ಕೆ.ಜಿ. ಚಿನ್ನ ವಶ ಅಂತರರಾಷ್ಟ್ರೀಯ ಕಳ್ಳಸಾಗಣೆ ಜಾಲ ಭೇದಿಸಿದ DR
    ಕಾಂಗ್ರೆಸ್ ಹೈಕಮಾಂಡ್ ಖಡಕ್ ವಾರ್ನಿಂಗ್: ಸ್ವಾಮೀಜಿ, ಧಾರ್ಮಿಕ ಮುಖಂಡರ ಶಿಫಾರಸುಗಳಿಗೆ ಸಿಗಲ್ಲ ಮನ್ನಣೆ!
    ಸುಳ್ಳು ಸ್ಟೇಟ್ಮೆಂಟ್ ನೀಡಿದ ಎಚ್ ಪಿ ಸಿ ಎಲ್
    30ಕ್ಕೂ ಹೆಚ್ಚು ರಾಕ್ಷಸರ ಕಪಿಮುಷ್ಟಿಯಲ್ಲಿ ನಲುಗಿದ 13 ವರ್ಷದ ಮಗು!-ಶ್ರೀಗಂಗಾನಗರದ ಪೈಶಾಚಿಕ ಕೃತ್ಯ
    ಗೋವಾ ಕ್ಯಾಲಂಗಟ್ ರೆಸಾರ್ಟ್‌ನಲ್ಲಿ ಕರಾವಳಿಯ ಯುವಕನ ನಿಗೂಢ ಸಾವು ಪ್ರಕರಣಕ್ಕೆ ಹೊಸ ತಿರುವು ನಾಪತ್ತೆಯಾದ ಆ ಮಹಿಳೆಗಾಗಿ ತೀವ್ರ ಶೋಧ…
    ಕಸ ಸಾಗಾಣಿಕೆ ಟೆಂಡರ್‌ನಲ್ಲಿ ₹133 ಕೋಟಿ ಅಕ್ರಮ ಆರೋಪ
    ಡ್ರೋನ್ ದಾಳಿಯ ನಂತರ ಬಹ್ರೇನ್‌ನಲ್ಲಿ ಕನಿಷ್ಠ 32 ಜನರಿಗೆ ಗಾಯ
    ಇ-ಸಿಗರೇಟ್‌ಗೆ ಭಾರಿ ಡಿಮ್ಯಾಂಡ್ – ಗೋಣಿ ಚೀಲದಲ್ಲಿಸಂಗ್ರಹಿಸಿಟ್ಟ ಆರೋಪಿ ಬಂಧನ..!