📍 Karavali Maruta
  • LOGIN
  • ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

    ಆರು ಲಕ್ಷ ರೂ. ಶುಲ್ಕದ ಸಂಕಷ್ಟಕ್ಕೆ ಮಾನವೀಯ ಸ್ಪಂದನೆ: ವಿದ್ಯಾರ್ಥಿನಿಯ ಕನಸಿಗೆ ಸಚಿವ ಬಾಲಕೃಷ್ಣ ಬೆನ್ನೆಲುಬು

    ಬೆಂಗಳೂರು: ಉನ್ನತ ಶಿಕ್ಷಣ ಪಡೆಯಬೇಕೆಂಬ ಕನಸು ಹೊತ್ತಿದ್ದ ವಿದ್ಯಾರ್ಥಿನಿಯೊಬ್ಬಳಿಗೆ ಪ್ರವೇಶಾತಿ ಪ್ರಕ್ರಿಯೆಯಲ್ಲಿನ ತಾಂತ್ರಿಕ ಸಮಸ್ಯೆಯೊಂದು ಸುಮಾರು ₹6 ಲಕ್ಷಗಳ ಆರ್ಥಿಕ ಹೊರೆಯಾಗುವ ಪರಿಸ್ಥಿತಿ ನಿರ್ಮಿಸಿತ್ತು. ಈ ಸಂದರ್ಭದಲ್ಲಿ ಸಚಿವ ಬಾಲಣ್ಣ ಅವರು ಮಾನವೀಯತೆ ಮೆರೆದು ವಿದ್ಯಾರ್ಥಿನಿಯ ಕುಟುಂಬದ ನೆರವಿಗೆ ಧಾವಿಸಿ, ಕೊನೆಗೂ ಆಕೆಯ ಪ್ರವೇಶಾತಿ ಸಮಸ್ಯೆ ಬಗೆಹರಿಯುವಂತೆ ಅಗತ್ಯ ಕ್ರಮ ಕೈಗೊಂಡಿದ್ದಾರೆ.

    ಭೀಮನ ಅಮಾವಾಸ್ಯೆಯ ಪೂಜೆಯನ್ನು ಮುಗಿಸಿ ಬೆಂಗಳೂರಿನ ನಿವಾಸಕ್ಕೆ ಆಗಮಿಸಿದ್ದ ಸಚಿವ ಬಾಲಣ್ಣ ಅವರನ್ನು ದಾಸರಹಳ್ಳಿ ಕ್ಷೇತ್ರದಿಂದ ತಂದೆ-ತಾಯಿಯೊಂದಿಗೆ ಆಗಮಿಸಿದ್ದ ವಿದ್ಯಾರ್ಥಿನಿಯೊಬ್ಬಳು ಭೇಟಿಯಾಗಿದ್ದಳು. ಆಕೆಯ ಮುಖದಲ್ಲಿದ್ದ ಆತಂಕವನ್ನು ಗಮನಿಸಿದ ಸಚಿವರು ಸಮಸ್ಯೆ ಏನೆಂದು ವಿಚಾರಿಸಿದಾಗ, ಆಕೆಯ ಉನ್ನತ ಶಿಕ್ಷಣದ ಕನಸಿಗೆ ಎದುರಾಗಿದ್ದ ಸಂಕಷ್ಟದ ವಿವರ ಹೊರಬಂದಿದೆ.

    Indian Council of Agricultural Research (ICAR) ವ್ಯಾಪ್ತಿಗೆ ಒಳಪಡುವ UHS ಬಾಗಲಕೋಟೆ ಕಾಲೇಜಿನಲ್ಲಿ ಪದವಿ ಪ್ರವೇಶ ಪಡೆಯಬೇಕಿದ್ದ ವಿದ್ಯಾರ್ಥಿನಿಗೆ, ಪೋರ್ಟಲ್‌ನಲ್ಲಿ ಭಾರತದಲ್ಲಿ ವಾಸಿಸುವ ದೃಢೀಕರಣ ಪತ್ರವನ್ನು ಆನ್‌ಲೈನ್‌ನಲ್ಲಿ ಸಲ್ಲಿಸಲು ಸಾಧ್ಯವಾಗಿರಲಿಲ್ಲ. ಇದರಿಂದಾಗಿ ಸುಮಾರು ₹6 ಲಕ್ಷ ಪ್ರವೇಶ ಶುಲ್ಕ ಪಾವತಿಸಬೇಕಾದ ಅನಿವಾರ್ಯ ಪರಿಸ್ಥಿತಿ ಎದುರಾಗಿತ್ತು.

    ಒಂದೆಡೆ ಉನ್ನತ ಶಿಕ್ಷಣದ ಕನಸು; ಮತ್ತೊಂದೆಡೆ ಆರು ಲಕ್ಷ ರೂಪಾಯಿಗಳ ಭಾರ.

    ವಿಷಯವನ್ನು ಕೇಳಿದ ಸಚಿವರು ಕೇವಲ ಭರವಸೆ ನೀಡಿ ಕಳುಹಿಸದೆ, ತಕ್ಷಣವೇ ತಮ್ಮ ಆಪ್ತ ಕಾರ್ಯದರ್ಶಿಗೆ ಸೂಚನೆ ನೀಡಿದರು. ವಿದ್ಯಾರ್ಥಿನಿ ಹಾಗೂ ಆಕೆಯ ತಂದೆಯನ್ನು ತಮ್ಮ ಕಾರಿನಲ್ಲೇ ಮುಖ್ಯಮಂತ್ರಿ ಗೃಹ ಕಚೇರಿ ‘ಕೃಷ್ಣಾ’ಗೆ ಕರೆದುಕೊಂಡು ಹೋಗಿ, ಮುಖ್ಯಮಂತ್ರಿ ಅವರ ಗಮನಕ್ಕೆ ಸಮಸ್ಯೆಯನ್ನು ತಂದರು. ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಈ ಕುರಿತು ಚರ್ಚಿಸಿ ಪರಿಹಾರ ಕಂಡುಕೊಳ್ಳುವ ಪ್ರಯತ್ನ ನಡೆಸಿದರು.

    ಆದರೂ ಸಚಿವರ ಪ್ರಯತ್ನ ಅಲ್ಲಿಗೆ ನಿಲ್ಲಲಿಲ್ಲ. ಕೇಂದ್ರ ಸರ್ಕಾರದ ಅಧೀನದಲ್ಲಿರುವ ಸಂಸ್ಥೆಗೆ ಸಂಬಂಧಿಸಿದ ವಿಚಾರವಾಗಿದ್ದರಿಂದ ಸಂಸದ ತೇಜಸ್ವಿ ಸೂರ್ಯ ಅವರನ್ನು ದೂರವಾಣಿ ಮೂಲಕ ಸಂಪರ್ಕಿಸಿ ಸಮಸ್ಯೆಯನ್ನು ವಿವರಿಸಿದರು. ದೆಹಲಿಯ ತಮ್ಮ ಕಚೇರಿಯ ಸಾಯಿ ಬಾಲಾಜಿ ಅವರಿಗೆ ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚಿಸಿ, ವಿದ್ಯಾರ್ಥಿನಿಯನ್ನು ದೆಹಲಿಗೆ ಕರೆಸಿಕೊಳ್ಳುವ ವ್ಯವಸ್ಥೆ ಮಾಡುವಂತೆ ತಿಳಿಸಿದರು.

    ಈ ವೇಳೆ ವಿದ್ಯಾರ್ಥಿನಿಯ ತಂದೆಯ ವೃತ್ತಿಯನ್ನೂ ಸಚಿವರು ವಿಚಾರಿಸಿದರು. “ಆಟೋ ಓಡಿಸುತ್ತಾರೆ ಸರ್” ಎಂಬ ಉತ್ತರ ಕೇಳಿದ ಸಚಿವರು, ಮಗಳ ವಿದ್ಯಾಭ್ಯಾಸಕ್ಕಾಗಿ ಶ್ರಮಿಸುತ್ತಿರುವ ಆ ತಂದೆಯ ಪರಿಸ್ಥಿತಿಯನ್ನು ಅರಿತುಕೊಂಡರು.

    ವಿದ್ಯಾರ್ಥಿನಿಯ ಭವಿಷ್ಯಕ್ಕೆ ಯಾವುದೇ ಅಡ್ಡಿಯಾಗಬಾರದು ಎಂಬ ಉದ್ದೇಶದಿಂದ ಸಚಿವ ಬಾಲಣ್ಣ ಅವರು ವಿದ್ಯಾರ್ಥಿನಿ ಹಾಗೂ ಆಕೆಯ ತಂದೆಗೆ ವಿಮಾನ ಟಿಕೆಟ್ ವ್ಯವಸ್ಥೆ ಮಾಡಿಸಿ, ದೆಹಲಿಯಲ್ಲಿ ವಸತಿ ಸೌಲಭ್ಯ ಕಲ್ಪಿಸುವಂತೆಯೂ ಕ್ರಮ ಕೈಗೊಂಡರು.

    ಮರುದಿನ ಬೆಳಗ್ಗೆಯೇ ವಿದ್ಯಾರ್ಥಿನಿಗೆ ದೂರವಾಣಿ ಕರೆ ಮಾಡಿದ ಸಚಿವರು, ಸಂಬಂಧಪಟ್ಟ ಅಧಿಕಾರಿಗಳನ್ನು ಭೇಟಿಯಾಗಿದ್ದಾರೆಯೇ, ಸಮಸ್ಯೆಯ ಕುರಿತು ಯಾವುದೇ ಪ್ರಗತಿ ಕಂಡಿದೆಯೇ ಎಂಬುದನ್ನು ಖುದ್ದಾಗಿ ವಿಚಾರಿಸಿದರು. ಅಲ್ಲದೆ ಕೇಂದ್ರ ಸಚಿವ ಸೋಮಣ್ಣ ಅವರ ಗಮನಕ್ಕೂ ವಿಷಯವನ್ನು ತಂದು, ಸಮಸ್ಯೆ ಪರಿಹಾರಕ್ಕೆ ಅಗತ್ಯ ಸಹಕಾರ ಕೋರಿದರು.

    ಅಂತಿಮವಾಗಿ ತೇಜಸ್ವಿ ಸೂರ್ಯ ಹಾಗೂ ಸೋಮಣ್ಣ ಅವರ ಸಹಕಾರದೊಂದಿಗೆ ವಿದ್ಯಾರ್ಥಿನಿಯ ಪ್ರವೇಶಾತಿ ಸಮಸ್ಯೆ ಬಗೆಹರಿದಿದ್ದು, ಆಕೆಯ ಉನ್ನತ ಶಿಕ್ಷಣದ ಕನಸಿಗೆ ಮತ್ತೆ ದಾರಿ ತೆರೆದಿದೆ.

    ಈ ಘಟನೆ ಕೇವಲ ಪ್ರವೇಶಾತಿ ಸಮಸ್ಯೆ ಬಗೆಹರಿಸಿದ ಪ್ರಕರಣವಾಗಿ ಮಾತ್ರ ಉಳಿಯುವುದಿಲ್ಲ. ಮಗಳ ಭವಿಷ್ಯಕ್ಕಾಗಿ ದುಡಿಯುತ್ತಿರುವ ಒಬ್ಬ ತಂದೆಯ ಹೋರಾಟಕ್ಕೆ ಸಿಕ್ಕ ಬೆಂಬಲ, ಉನ್ನತ ಶಿಕ್ಷಣದ ಕನಸು ಕಾಣುತ್ತಿದ್ದ ಒಬ್ಬ ವಿದ್ಯಾರ್ಥಿನಿಗೆ ದೊರೆತ ಭರವಸೆ ಹಾಗೂ ಸಂಕಷ್ಟದ ಸಂದರ್ಭದಲ್ಲಿ ಮಾನವೀಯವಾಗಿ ಸ್ಪಂದಿಸಿದ ಸಚಿವರ ನಡೆ ಸಾರ್ವಜನಿಕರ ಮೆಚ್ಚುಗೆಗೆ ಪಾತ್ರವಾಗಿದೆ.

    COMMENTS

    Login with Gmail to comment

    ಇನ್ನಷ್ಟು ಸುದ್ದಿ

    ಪ್ರಧಾನಿ ಮೋದಿ ಇಂದು ಬಂಟ್ವಾಳ ಸೇರಿ ಕರ್ನಾಟಕದ 4 ನವೀಕೃತ ರೈಲುನಿಲ್ದಾಣಗಳು ಲೋಕಾರ್ಪಣೆ..!
    ಇದು IPLನಲ್ಲಿ ಹೊಸ ಹೀರೋ ಹುಟ್ಟಿದಂತೇ…ಆದ್ರೆ ಕ್ರಿಕೆಟ್ ಅಲ್ಲ, ಬಾಕ್ಸಿಂಗ್‌ನಲ್ಲಿ! 🥊🔥
    ಮೂಡಬಿದಿರೆ ಇನ್‌ಸ್ಪೆಕ್ಟರ್ ಪ್ರಕರಣಕ್ಕೆ ಟ್ವಿಸ್ಟ್: ಆರೋಪ ಮಾಡಿದ ಮಹಿಳೆಯ ವಿರುದ್ಧವೇ ಸಹೋದರಿಯ ಬಾಂಬ್!
    ನೀರು ಪೋಲು ಬೇಡ….ಈಗಲೇ ಎಚ್ಚೆತ್ತುಕೊಳ್ಳಿ!ಇಂದು ನಿರ್ಲಕ್ಷ್ಯ,ನಾಳೆ ಜಲ ಸಂಕಷ್ಟದ ಎಚ್ಚರಿಕೆ…!
    “ಜೈ ಶ್ರೀರಾಮ್” ಘೋಷಣೆಯಿಂದ ನಡುಗಿದ ಢಾಕಾ! 
    ನಿಶ್ಶಬ್ದ ಕೊಠಡಿ ಹೇಳುವ ನಿಗೂಢ ರಹಸ್ಯ …!ಮನೆಯ ಗೋಡೆಗಳ ಮೇಲೆ ಬರಹ,ಕಾಗದಗಳು ನೂರಾರು…! ಅಸಹಜ ಮರಣದ ಹಿಂದೆ ಅಡಗಿರುವ ಸತ್ಯ ಇನ್ನೂ ಅನಾವರಣವಾಗಿಲ್ಲ…”
    ದಿವಾ ಉತ್ಕರ್ಷ ಬೆಂಗಳೂರಿನ ಕೇವಲ 17 ವರ್ಷದ ಹೆಣ್ಣುಮಗಳಕಾರ್ಯಕ್ಕೆ ಪ್ರಪಂಚವೇ ಫಿದಾ…ಫೋರ್ಬ್ಸ್ ಟಾಪ್ ಪಟ್ಟಿಯಲ್ಲಿ ಯುವಸ್ಪೂರ್ತಿ ಹೆಸರು ಯಾಕೆ ಬಂತು ..!?
    ಆಹಾರ ಬೆಲೆ ಏರಿಕೆ: ಸಾಮಾನ್ಯರ ಅಡಿಗೆ ಮನೆಗೆ ಮತ್ತೆ ಹೊರೆ?
    ಇಸ್ರೇಲ್ ಸ್ಥಿತಿ ಶೋಚನೀಯ ಸೈನ್ಯದಲ್ಲೇ ಅಸಮಾಧಾನ
    ED ₹2,178 ಕೋಟಿ ಆಸ್ತಿ ಜಪ್ತಿ ನಿರವ್ ಮೋದಿ–ವಿಜಯ್ ಮಲ್ಯ ಸೇರಿ 21 ಜನರ ಆರ್ಥಿಕ ಅಪರಾಧಿಗಳ ವಿರುದ್ಧ ದೊಡ್ಡ ಮಟ್ಟದ ಕ್ರಮ
    ಸಾಲದ ಹಣ ಕೇಳಿದ ವಿಚಾರಕ್ಕೆ ಚೂರಿಯಿಂದ ಕೊಲೆ ಯತ್ನ..
    ತುಮಕೂರಿನಲ್ಲಿ 10 ಲಕ್ಷದ ವಜ್ರಾಭರಣ ಕದ್ದ ಈ ಮಹಾಚೋರನ ಕಥೆ ಕೇಳಿದರೆ ನಿಜಕ್ಕೂ ಶಾಕ್ ಆಗ್ತೀರಾ!”
    ಅಜಿತ್ ಅಗರ್ಕರ್ ಗೆ ಜಾಕ್ಪಾಟ್
    ಕಮ್ ಬ್ಯಾಕ್ ಮಾಡಿದ ಮುಂಬೈ ಇಂಡಿಯನ್, ಕ್ಯಾಪ್ಟನ್ ಪ್ರೇರಣೆಗೆ ವರ್ಮಾ ಬ್ಯಾಟಿನಿಂದ  ಮೊದಲ ಸೆಂಚುರಿ
    ನಾಗಪ್ರತಿಷ್ಠಾ ಮಂಟಪದ ಎದುರು ನಡೆದಾಡಲು ಸ್ಥಳವಿಲ್ಲದಷ್ಟು ಭಕ್ತಾದಿಗಳು …
    ಸುಳ್ಳು ಸ್ಟೇಟ್ಮೆಂಟ್ ನೀಡಿದ ಎಚ್ ಪಿ ಸಿ ಎಲ್
    ಲಿವ್-ಇನ್ ಸಂಬಂಧಗಳಲ್ಲಿ ಕಾನೂನು ಮಿತಿ ಎಲ್ಲಿದೆ?-ಸುಪ್ರೀಂ ಕೋರ್ಟ್‌ನ ಮಹತ್ವದ ಪ್ರಶ್ನೆ
    ಥಾರ್ ಕಾರ್ ನಲ್ಲಿ ಬಂದು ದೇವಸ್ಥಾನದಲ್ಲಿ ವಿಕೃತಿ ಮೆರೆದ ಕಿಡಿಗೇಡಿ!
    ಶಿಶಿಲದಲ್ಲಿ ವಿಷಪೂರಿತ ಹಾವು ಕಚ್ಚಿ 65 ವರ್ಷದ ರೈತ ಮೃತ್ಯು
    ಕರಾವಳಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್: ಬಿಸಿಲಿಗೆ ಎಚ್ಚರ!
    ಮನೆಯ ಲಾಕ್ ವ್ಯವಸ್ಥೆ ಇದ್ದರೂ, ಸುರಕ್ಷತೆ ಭೇದಿಸಲಾಗಿದೆ….!ಕುಟುಂಬ ದೇವಸ್ಥಾನಕ್ಕೆ -ಕಳ್ಳರು ಅದೇ ಮನೆ ಟಾರ್ಗೆಟ್..!
    ಎಲ್ಲೆಡೆ LPG ಗ್ಯಾಸ್ ಸಿಲಿಂಡರ್ ಸಂಕಷ್ಟ: ಇದು ಜೀವನೋಪಾಯದ ಪ್ರಶ್ನೆ… ತಕ್ಷಣ ಸಮರ್ಪಕ ಕ್ರಮ ಸರ್ಕಾರದ ಹೊಣೆ.
    “ಬೆಡ್‌ರೂಮ್ ರಾಜಕೀಯ”ಪಪ್ಪು ಯಾದವ್ ಹೇಳಿಕೆ ಸ್ಫೋಟಕ ಚರ್ಚೆ…!ಪಪ್ಪು ತಪ್ಪಾಗ್ ಮಾತಾಡಿದ್ದು ತಪ್ಪು 
    ಮಂಗಳೂರು ಕಮಿಷನರ್ ವಿರುದ್ಧ ಎಸ್ಪಿ ಕಾಶಿನಾಥ್ ದೂರು ಕೊಡುತ್ತಿರುವುದು ಯಾಕೆ?
    Pahalgam ದಾಳಿಗೆ ಪ್ರತೀಕಾರ ತೀರಿಸಿದ್ದ ‘ಆಪರೇಷನ್ ಸಿಂದೂರ್’: ವರ್ಷದ ಬಳಿಕ ಹುತಾತ್ಮ ಯೋಧರ ವಿವರ ಬಿಡುಗಡೆ ಮಾಡಿದ ಕೇಂದ್ರ ಸರ್ಕಾರ…
    ಮಂಗಳೂರಿಗೆ “ಅಮ್ಮ”ನ ಆಗಮನ ಭಕ್ತರಲ್ಲಿ ಸಡಗರವೂ ಸಡಗರ….. ನಾಳೆ ನಗರಕ್ಕೆ ಇಬ್ಬರು ಕೇಂದ್ರ ಸಚಿವರ ಆಗಮನ
    ಕರಾವಳಿಯಲ್ಲಿ ಅಕ್ರಮ 109 ಹೋಂಸ್ಟೇಗಳು, 21ರೆಸಾರ್ಟ್‌ಗಳಿಗೆ ಶಾಕ್ ಲೋಕಾಯುಕ್ತ ಬೀಗ!ರೆಸಾರ್ಟ್‌ಗಳು ಬಂದ್!
    ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ….!!!!
    “ವಕೀಲರೇ ಎಚ್ಚರ! ಕೋರ್ಟ್‌ನಲ್ಲಿ ನಕಲಿ AI ರೆಫರೆನ್ಸ್ ನೀಡಿದರೆ ಕಠಿಣ ಶಿಸ್ತು ಕ್ರಮ: BCIಗೆ ಸುಪ್ರೀಂ ಕೋರ್ಟ್ ಮಹತ್ವದ ನಿರ್ದೇಶನ”
    ಸಿಟಿ ಬಸ್ ಫೋಲ್ಡಿಂಗ್ ಬಾಗಿಲು ಕಡ್ಡಾಯ: ಸುರಕ್ಷತೆಗೆ ಹೆಜ್ಜೆ, ಆದರೆ ಸವಾಲುಗಳೇನು? ಪರಿಹಾರ ಹೇಗೆ?