📍 Karavali Maruta
  • LOGIN
  • BREAKING
    ಧಾರವಾಡದಲ್ಲಿ ಭೀಕರ LPG ಸಿಲಿಂಡರ್ ಸ್ಫೋಟ , ಹಲವು ಮೀಟರ್ ದೂರಕ್ಕೆ ಹಾರಿದ ಬೈಕ್‌! ಹಲವರಿಗೆ ಗಾಯ CCTVಯಲ್ಲಿ ಶಾಕಿಂಗ್ ದೃಶ್ಯ ದಯಾಮರಣ ಕೇಳಿದ್ದ ತುಮಕೂರು ರಾಬಿಯಾ ಇನ್ನಿಲ್ಲ …!ಪರಮೇಶ್ವರ್ ಮುಂದೆ ಕಣ್ಣೀರಿಟ್ಟಿದ್ದ ಮಹಿಳೆ ಇಬ್ಬರು ಮಕ್ಕಳೊಂದಿಗೆ ವಿಷಸೇವಿಸಿ ಕೊನೆಯುಸಿರು…‘ಮನೆ’ ಸಿಕ್ಕರೂ ಬದುಕು ಉಳಿಯಲಿಲ್ಲ! ನೇಪಾಳ ದುರಂತ: ಕಂಪ್ಲೀಟ್ ರಿಪೋರ್ಟ್ ಇಲ್ಲಿದೆ…ಕಣ್ಣೆದುರೇ ಕೊಚ್ಚಿಹೋದ ಬದುಕು… ಲೆಕ್ಕಕ್ಕೆ ಸಿಗದ ಸಾವು, ನೋವು!ಪ್ರವಾಹದ ರೌದ್ರದ ನಡುವೆ ಮೃತದೇಹದಿಂದಲೇ ಚಿನ್ನ ಕದಿಯಲು ಯತ್ನ… ಮಾನವೀಯತೆ ಮರೆತ ಕಿರಾತಕರು!ಇಬ್ಬರು ಅರೆಸ್ಟ್! ಮಹಿಳಾ ಕಾನ್ಸ್‌ಟೇಬಲ್ ಮೇಲೆ ಪೊಲೀಸ್ ಠಾಣೆಯಲ್ಲಿ ಮಾರಣಾಂತಿಕ ಹಲ್ಲೆ ವಾಜಪೇಯಿ ಸರ್ಕಾರದ  ಕನಸಿನ ಯೋಜನೆ ನದಿ ಜೋಡಣೆ ವಿರೋಧಿಸಿ ಶಿರಸಿಯಲ್ಲಿ ಸಹಿ ಸಂಗ್ರಹ ಅಭಿಯಾನ
    ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

    ಆಸಿಡ್ ದಾಳಿಗೊಳಗಾದ ಮಹಿಳೆಯರಿಗೆ ₹50 ಸಾವಿರ ಮಾಸಾಶನ: ಆಸಿಡ್ ಮಾರಾಟಕ್ಕೆ ಕಡಿವಾಣ ಹಾಕಲು ಸರ್ಕಾರ ಕ್ರಮ

    ಆಸಿಡ್ ದಾಳಿಗೆ ಒಳಗಾದ ಮಹಿಳೆಯರ ಜೀವನ ನಿರ್ವಹಣೆಗೆ ರಾಜ್ಯ ಸರ್ಕಾರದಿಂದ ಮಹತ್ವದ ನೆರವು ನೀಡಲು ಕ್ರಮ ಕೈಗೊಳ್ಳಲಾಗುತ್ತಿದೆ. ಆಸಿಡ್ ದಾಳಿಗೊಳಗಾದ ಮಹಿಳೆಯರಿಗೆ ಪ್ರತಿ ತಿಂಗಳು ₹50 ಸಾವಿರ ಮಾಸಾಶನ, ಉಚಿತ ವಸತಿ ಸೌಲಭ್ಯ ಹಾಗೂ ಸ್ವಯಂ ಉದ್ಯೋಗ ಆರಂಭಿಸಲು ₹5 ಲಕ್ಷ ಹಣಕಾಸು ನೆರವು ನೀಡುವ ಬಗ್ಗೆ ಚರ್ಚೆ ನಡೆಯುತ್ತಿದೆ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ತಿಳಿಸಿದ್ದಾರೆ.

    ವಿಧಾನ ಪರಿಷತ್ತಿನಲ್ಲಿ ನಡೆದ ಚರ್ಚೆಯಲ್ಲಿ ಸದಸ್ಯರು ಆಸಿಡ್ ದಾಳಿಗೊಳಗಾದ ಮಹಿಳೆಯರು ಎದುರಿಸುತ್ತಿರುವ ಸಂಕಷ್ಟಗಳನ್ನು ಗಮನಕ್ಕೆ ತಂದ ಹಿನ್ನೆಲೆಯಲ್ಲಿ ಸಚಿವರು ಈ ಭರವಸೆ ನೀಡಿದರು.

    ಪ್ರಸ್ತುತ ₹10 ಸಾವಿರ ಮಾತ್ರ ಪಿಂಚಣಿ

    ಸಚಿವರು ನೀಡಿದ ಮಾಹಿತಿಯ ಪ್ರಕಾರ, 2022ರ ಏಪ್ರಿಲ್ 11ರಂದು ಹೊರಡಿಸಿದ ಸರ್ಕಾರದ ಆದೇಶದಂತೆ ಸದ್ಯ ರಾಜ್ಯದಲ್ಲಿ 59 ಆಸಿಡ್ ಸಂತ್ರಸ್ತರಿಗೆ ಪ್ರತಿ ತಿಂಗಳು ₹10 ಸಾವಿರ ಪಿಂಚಣಿ ನೀಡಲಾಗುತ್ತಿದೆ.

    ಆದರೆ ರಾಜ್ಯದಲ್ಲಿ ಒಟ್ಟು 169 ಆಸಿಡ್ ದಾಳಿ ಸಂತ್ರಸ್ತರು ಗುರುತಿಸಲ್ಪಟ್ಟಿದ್ದಾರೆ. ಈ ಎಲ್ಲರಿಗೂ ನೆರವು ವಿಸ್ತರಿಸುವ ಕುರಿತು ಸರ್ಕಾರ ಚರ್ಚೆ ನಡೆಸಲಿದೆ ಎಂದು ಸಚಿವರು ಹೇಳಿದರು.

    “ಮಾಸಾಶನವನ್ನು ₹50 ಸಾವಿರಕ್ಕೆ ಹೆಚ್ಚಿಸುವ ಬಗ್ಗೆ ಹಾಗೂ ಎಲ್ಲಾ 169 ಸಂತ್ರಸ್ತರಿಗೂ ನೀಡುವ ಕುರಿತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯೊಂದಿಗೆ ಚರ್ಚೆ ನಡೆಸಲಾಗುವುದು,” ಎಂದು ಡಾ. ಪರಮೇಶ್ವರ್ ತಿಳಿಸಿದ್ದಾರೆ.

    ವಿಧಾನ ಪರಿಷತ್ತಿನಲ್ಲಿ ಭಾವುಕ ಚರ್ಚೆ

    ಪರಿಷತ್ ಸದಸ್ಯ ಕೆ. ಶಿವಕುಮಾರ್ ನಿಯಮ 72ರಡಿ ವಿಷಯವನ್ನು ಮುಂದಿಟ್ಟು ಆಸಿಡ್ ದಾಳಿಗೊಳಗಾದ ಮಹಿಳೆಯರ ಸಂಕಷ್ಟಗಳನ್ನು ವಿವರಿಸಿದರು. ಇದಕ್ಕೆ ಕಾಂಗ್ರೆಸ್ ಹಾಗೂ ಬಿಜೆಪಿ ಸದಸ್ಯರು ಸಹ ಧ್ವನಿಗೂಡಿಸಿ ಸರ್ಕಾರ ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

    ಸದಸ್ಯರು ಮುಖ್ಯವಾಗಿ ಈ ಸಮಸ್ಯೆಗಳನ್ನು ಉಲ್ಲೇಖಿಸಿದರು:

    ಸಂತ್ರಸ್ತರಿಗೆ ಸರಿಯಾದ ಪರಿಹಾರ ಮತ್ತು ಮಾಸಾಶನ ಸಿಗುತ್ತಿಲ್ಲ

    ಆರೋಪಿಗಳಿಗೆ ಶಿಕ್ಷೆಯಾಗುವ ಪ್ರಮಾಣ ಕಡಿಮೆ ಯಾಸಿಡ್ ದಾಳಿ ನಡೆಸಿರುವ ಆರೋಪಿಗಳಿಗೆ ಶಿಕ್ಷೆ ಆಗುವುದು ವಿರಳವಾಗಿದೆ ಎಂಬ ವಿಚಾರ ಗಂಭೀರವಾಗಿ ಚರ್ಚೆಗೆ ಬಂತು

    ಸರ್ಕಾರ ಭರವಸೆ ನೀಡಿದರೂ ಇಲ್ಲಿಯವರೆಗೆ ಮನೆ ನೀಡಿಲ್ಲ

    ವಸತಿ ಹಾಗೂ ಸ್ವಯಂ ಉದ್ಯೋಗಕ್ಕೆ ನೆರವು…ಸಂತ್ರಸ್ತರ ಪುನರ್ವಸತಿ ಉದ್ದೇಶದಿಂದ ಸರ್ಕಾರ ಹಲವು ಕ್ರಮಗಳನ್ನು ಕೈಗೊಳ್ಳಲು ಮುಂದಾಗಿದೆ.ಸಂತ್ರಸ್ತರ ವಾಸಸ್ಥಳಗಳಲ್ಲೇ ವಸತಿ ಸೌಲಭ್ಯ ಕಲ್ಪಿಸುವುದು

    ಸ್ವಯಂ ಉದ್ಯೋಗಕ್ಕಾಗಿ ₹5 ಲಕ್ಷ ನೆರವು ನೀಡುವುದು

    ಈಗಿರುವ ನೆರವಿನ ಮಾನದಂಡಗಳನ್ನು ಸರಳೀಕರಿಸುವುದು  ಆಸಿಡ್ ಮಾರಾಟಕ್ಕೆ ಕಟ್ಟುನಿಟ್ಟಿನ ನಿಯಂತ್ರಣ  ಆಸಿಡ್ ದಾಳಿ ಪ್ರಕರಣಗಳನ್ನು ತಡೆಯುವ ಉದ್ದೇಶದಿಂದ ಆಸಿಡ್ ಮಾರಾಟದ ಮೇಲೆ ಕಟ್ಟುನಿಟ್ಟಿನ ನಿಯಂತ್ರಣ ತರಲಾಗುವುದು ಎಂದು ಸರ್ಕಾರ ತಿಳಿಸಿದೆ.

    ವಿಶೇಷ ತ್ವರಿತ ನ್ಯಾಯಾಲಯಗಳ ಸ್ಥಾಪನೆ

    ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮಾತನಾಡಿ, ಆಸಿಡ್ ದಾಳಿ ಪ್ರಕರಣಗಳ ಶೀಘ್ರ ವಿಚಾರಣೆಗೆ ವಿಶೇಷ ತ್ವರಿತ ನ್ಯಾಯಾಲಯಗಳನ್ನು (ಫಾಸ್ಟ್ ಟ್ರ್ಯಾಕ್ ಕೋರ್ಟ್) ಸ್ಥಾಪಿಸಲಾಗುವುದು ಎಂದು ಹೇಳಿದರು.

    ಹೆಚ್ಚುವರಿ ನೆರವು

    ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರು, ಅಸಂಘಟಿತ ಕಾರ್ಮಿಕರ ಕಲ್ಯಾಣ ಮಂಡಳಿಯಿಂದ ಆಸಿಡ್ ದಾಳಿಗೊಳಗಾದ ಮಹಿಳೆಯರಿಗೆ ₹2 ಲಕ್ಷವರೆಗೆ ನೆರವು ನೀಡಲಾಗುವುದು ಎಂದು ಘೋಷಿಸಿದರು

    COMMENTS

    Login with Gmail to comment

    ಇನ್ನಷ್ಟು ಸುದ್ದಿ

    ರಾಷ್ಟ್ರೀಯ ಭದ್ರತೆಗೆ ಎದುರಾಗುವ ಬೆದರಿಕೆಗಳನ್ನು ಮೊಳಕೆಯಲ್ಲೇ ಚಿವುಟಿ ಹಾಕಲು ಭದ್ರತಾ ಪಡೆ ಮುಖ್ಯಸ್ಥರಿಗೆ ಗೃಹ ಸಚಿವ ‘ಶಾ’ ಸೂಚನೆ
    ಇನ್ನೂ ಏಳು ದಿನ ಕರ್ನಾಟಕದ ಸಿಎಂ ಕುರ್ಚಿ ಕಾಲಿ… ಜೂನ್ 5 ರಂದು ಡಿಕೆ ಶಿವಕುಮಾರ್ ಪ್ರಮಾಣ ವಚನ!
    ಬಂಟ್ವಾಳದಲ್ಲಿ ಬೆಚ್ಚಿಬೀಳಿಸಿದ ಮಚ್ಚು ದಾಳಿ: ಕಾಲೇಜಿಗೆ ತೆರಳುತ್ತಿದ್ದ ಪಿಯುಸಿ ವಿದ್ಯಾರ್ಥಿನಿ ಮೇಲೆ ಹಲ್ಲೆ; ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲು
    ದೇವರ ಮುಂದೆ ಸಾಲಿನಲ್ಲಿ ನಿಲ್ಲಲೇಬೇಕು! ಮಂತ್ರಿ ಇರಲಿ, ಸೆಲೆಬ್ರಿಟಿ ಇರಲಿ…ಅಧಿಕಾರ ಇರಲಿ, ಅಂತಸ್ತು ಇರಲಿ…”ವಿಐಪಿ ದರ್ಶನ”ಕ್ಕೆ ಹೈಕೋರ್ಟ್ ಕೊಟ್ಟ ಚಾವಟಿ ಏಟು!
    ಮಂಗಳೂರಿನ ಆಡಳಿತ ವೈಫಲ್ಯ ಸರ್ಕಾರಿ ಕಚೇರಿಗಳಲ್ಲಿ ಸಾಲು…ಪಾಲಿಕೆ ಸೇವೆಗಳ ವಿಳಂಬ, ಭೂಪರಿವರ್ತನೆ ಗೊಂದಲ: ರಾಜ್ಯ ಸರ್ಕಾರದ ವಿರುದ್ಧ ಶಾಸಕ ವೇದವ್ಯಾಸ ಕಾಮತ್ ಆಕ್ರೋಶ ..
    ತೈಲ ಟ್ಯಾಂಕರ್ ಮೇಲೆ ಇರಾನ್ ಆತ್ಮಹತ್ಯಾ ದೋಣಿ ದಾಳಿ – ಭಾರತೀಯ ನಾವಿಕ ಸಾವು
    ಮಹಿಳೆಯ ಮೇಲೆ ಮಾರಣಾಂತಿಕ ಹಲ್ಲೆ
    ಶಿರಾಡಿ ಗ್ರಾ.ಪಂ PDO ಸಹಿ ನಕಲು ….6 ತಿಂಗಳಾದರೂ ದೂರು ದಾಖಲಾಗಿಲ್ಲ!
    🚨4 ವರ್ಷಗಳಿಂದ ಪೊಲೀಸರಿಗೆ ತಪ್ಪಿಸಿಕೊಂಡಿದ್ದ 17 ಪ್ರಕರಣಗಳ ಆರೋಪಿಯ ಡ್ರಾಮಾಟಿಕ್ ಬಂಧನ!
    ಒಂದೆಡೆ ‘ನಶಾ ಮುಕ್ತ ಯುವ ಭಾರತ’ ಅಭಿಯಾನ; ಮತ್ತೊಂದೆಡೆ ಪಬ್ ಸಂಸ್ಕೃತಿಯ ಸೆಳೆತ..! ಮಣಿಪಾಲದಲ್ಲಿ ಅಪ್ರಾಪ್ತರ ಮದ್ಯಪಾನ ಬಯಲು
    ಪ್ರತಿಭಟನಾ ಶಕ್ತಿಯನ್ನೇ ಕಳೆದುಕೊಂಡ ಭಾರತ… ನಿಶ್ಯಕ್ತವಾದ ವಿರೋಧ ಪಕ್ಷಗಳು
    ಡಿಜಿಟಲ್ ದಿಗ್ಗಜರಿಗೆ ₹2 ಕೋಟಿ ಲೀಗಲ್ ನೋಟಿಸ್ ಶಾಕ್!ಯೂಟ್ಯೂಬ್ ಸ್ಟಾರ್ vs ಟಿವಿ ಸ್ಟಾರ್ ನಡುವಿನ ಕಾನೂನು ಸಮರ!
    24 ಭಾರತೀಯರಿದ್ದ ಹಡಗಿನ ಮೇಲೆ ಅಮೆರಿಕಾ ದಾಳಿ: 3 ನಾವಿಕರ ಜೀವ ಬಲಿ
    ಮಹಿಳಾ ಟಿ20 ವಿಶ್ವಕಪ್‌ಗೂ ಮುನ್ನ ಭಾರತ-ಪಾಕ್ ಹೈಪ್ ನಡುವೆ ಮಂಧಾನಾ ಮಾತು ವೈರಲ್…
    ಮಂಗಳೂರಿಗರಿಗೆ ಎಚ್ಚರಿಕೆ: ನೀರನ್ನು ಜಾಣ್ಮೆಯಿಂದ ಬಳಸಿ –ಮಾರ್ಚ್ ನಲ್ಲೇ ರೇಷನಿಂಗ್ ಮಾಡುವ ಪರಿಸ್ಥಿತಿ ಇದೆ…
    ಕಪ್ಪು ಸಮುದ್ರದಲ್ಲಿ ಸರಕು ಹಡಗಿನ ಮೇಲೆ ರಷ್ಯಾ ದಾಳಿ: ನಾಲ್ವರು ಭಾರತೀಯರು ಸಾವು
    ಡಾನ್ -3 ಸಿನಿಮಾ ಕಥೆ ಗೋವಿಂದ….!
    “ನನ್ನ ಮೇಲೆ ನಂಬಿಕೆ ಇಲ್ಲದಿದ್ದರೆ ನಾನು ಅಧ್ಯಕ್ಷ ಸ್ಥಾನ ಬಿಡಲು ಸಿದ್ಧ”!-ಉದ್ಧವ್ ಠಾಕ್ರೆ ಕಣ್ಣೀರಿನ ಮನವಿ.
    ಭೀಕರ ಅಪಘಾತ ಮಹಿಳೆ ಬಲಿ
    ಸರ್ಕಾರಿ ಆಸ್ಪತ್ರೆಗಳ ಖಾಸಗೀಕರಣಕ್ಕೆ ಆಪ್ ತೀವ್ರ ವಿರೋಧ-ಒಪ್ಪಂದ ಬಹಿರಂಗಪಡಿಸುವಂತೆ ಆಗ್ರಹ
    ಮಹೇಶ್ ಶೆಟ್ಟಿ ತಿಮರೋಡಿಗೆ ಮೂರನೇ ಬಾರಿ ಗಡಿಪಾರು ಆದೇಶ….
    ಬೀಡಿ, ಗೋಡಂಬಿ ಮತ್ತು ಸ್ಕೀಮ್ ಕಾರ್ಮಿಕರಿಗೆ ಕನಿಷ್ಠ ಕೂಲಿ ನೀಡಿ: ಮಂಗಳೂರಿನಲ್ಲಿ ಬೃಹತ್ ಪ್ರತಿಭಟನೆ.
    ಕಾರ್ಕಳದ ವಂಚನೆ ಪ್ರಕರಣ, ದೂರುದಾರನ ಮೇಲೂ ಶಂಕೆ
    ಹವ್ಯಕ ಭಾಷಾ ಅಕಾಡೆಮಿ ಅಸ್ತಿತ್ವಕ್ಕೆ ಗ್ರೀನ್ ಸಿಗ್ನಲ್ 
    ಸಾರ್ವಜನಿಕರಲ್ಲಿ ವಿನಂತಿ …!
    ಅರೆಬೈಲ್ ಘಾಟ್ ನ ಕಾರು ಅಫಘಾತ ವ್ಯವಸ್ಥಿತ ಕೊಲೆ…!
    ಹಿರಿಯಡ್ಕದ ಬಾರಿನಲ್ಲಿ ಸರಿ ಕುಡಿದು ಗುಂಡಾಗಿರಿ, ಬಿಯರ್ ಬಾಟಲಿಯಿಂದ ಹಲ್ಲೆ
    ಗಂಡನನ್ನು ಕೊಂದ ಪತಿವ್ರತೆ… ಮೂರು ವರ್ಷದ ಮಗು ಅನಾಥ
    ‘ಅಮರ್ ಜವಾನ್ ಪಾರ್ಕ್’ಗೆ ಯುದ್ಧ ಟ್ಯಾಂಕ್, ಯುದ್ಧವಿಮಾನ ಸ್ಥಾಪನೆಗೆ ರಕ್ಷಣಾ ಸಚಿವರಿಗೆ ಸಂಸದೆ ಪ್ರಭಾ ಮಲ್ಲಿಕಾರ್ಜುನ ಮನವಿ
    ಜಸ್ಟ್ one click ನಲ್ಲೇ ಎಲ್ಲಾ ಸರ್ಟಿಫಿಕೇಟ್…!2026–27ರಿಂದ ಅಂಕಪಟ್ಟಿ ಹಾರ್ಡ್ ಕಾಪಿ ಇಲ್ಲ..