📍 Karavali Maruta
LIVE | CONTACT
ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

ಇಂದು ಆನ್‌ಲೈನ್ ಔಷಧ ಮಾರಾಟ ವಿರುದ್ಧ ದೇಶವ್ಯಾಪಿ ಆಕ್ರೋಶ!ದಕ್ಷಿಣ ಕನ್ನಡದಲ್ಲಿ 1100 ಮೆಡಿಕಲ್ ಶಾಪ್ ಬಂದ್!

ಬೆಂಗಳೂರು, ಮೇ 20: ಆನ್‌ಲೈನ್ ಮೂಲಕ ನಡೆಯುತ್ತಿರುವ ಔಷಧ ಮಾರಾಟ ವಿರೋಧಿಸಿ ಅಖಿಲ ಭಾರತ ಔಷಧ ವ್ಯಾಪಾರಿಗಳ ಸಂಘ (AIOCD) ಇಂದು ದೇಶವ್ಯಾಪಿ ಮೆಡಿಕಲ್ ಶಾಪ್ ಬಂದ್‌ಗೆ ಕರೆ ನೀಡಿತ್ತು. ಆದರೆ ಕರ್ನಾಟಕದಲ್ಲಿ ಈ ಹೋರಾಟಕ್ಕೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ.

ರಾಜ್ಯದ ಕೆಲವು ವ್ಯಾಪಾರ ಸಂಘಟನೆಗಳು ಸಂಪೂರ್ಣ ಬಂದ್‌ಗೆ ಬೆಂಬಲ ನೀಡಿದರೆ, ಇನ್ನೂ ಕೆಲವು ಸಂಘಟನೆಗಳು ಕಪ್ಪುಪಟ್ಟಿ ಧರಿಸಿ ನೈತಿಕ ಬೆಂಬಲ ಸೂಚಿಸಿ ಅಂಗಡಿಗಳನ್ನು ತೆರೆಯುವ ನಿರ್ಧಾರ ಕೈಗೊಂಡಿವೆ. ರಾಜ್ಯದಲ್ಲಿ ಸುಮಾರು 26 ಸಾವಿರಕ್ಕೂ ಅಧಿಕ ಮೆಡಿಕಲ್ ಶಾಪ್‌ಗಳಿದ್ದು, ಬೆಂಗಳೂರಿನಲ್ಲಿ ಶೇಕಡಾ 90ರಷ್ಟು ಅಂಗಡಿಗಳು ಎಂದಿನಂತೆ ಕಾರ್ಯನಿರ್ವಹಿಸುತ್ತಿವೆ.

ಇನ್ನೊಂದೆಡೆ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರತಿಭಟನೆಗೆ ಭಾರೀ ಬೆಂಬಲ ವ್ಯಕ್ತವಾಗಿದ್ದು, ಸುಮಾರು 1100ಕ್ಕೂ ಅಧಿಕ ಮೆಡಿಕಲ್ ಶಾಪ್‌ಗಳು ಬಂದ್ ಆಗಿವೆ. ಆದರೂ ಸಾರ್ವಜನಿಕರಿಗೆ ಔಷಧ ಕೊರತೆ ಉಂಟಾಗದಂತೆ 38 ಅಪೋಲೋ ಮೆಡಿಕಲ್ ಮಳಿಗೆಗಳು, 40 ಮೆಡ್ ಪ್ಲಸ್ ಶಾಪ್‌ಗಳು ಹಾಗೂ 130 ಪ್ರಧಾನ ಮಂತ್ರಿ ಜನ ಔಷಧಿ ಕೇಂದ್ರಗಳು ಕಾರ್ಯನಿರ್ವಹಿಸುತ್ತಿವೆ.

ಆರೋಗ್ಯ ಇಲಾಖೆ ಕೂಡ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದ್ದು, ತುರ್ತು ಅಗತ್ಯ ಇರುವ ರೋಗಿಗಳಿಗೆ ಔಷಧ ಲಭ್ಯವಾಗುವಂತೆ ಪರ್ಯಾಯ ವ್ಯವಸ್ಥೆ ಮಾಡಲಾಗಿದೆ ಎಂದು ತಿಳಿಸಿದೆ.

ವ್ಯಾಪಾರಿಗಳು ಜಿಎಸ್‌ಆರ್ 220(ಇ) ನಿಯಮವನ್ನು ಹಿಂಪಡೆಯಬೇಕು, ಅಕ್ರಮ ಇ-ಫಾರ್ಮಸಿಗಳನ್ನು ಬಂದ್ ಮಾಡಬೇಕು, ಅತಿಯಾದ ಡಿಸ್ಕೌಂಟ್‌ಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಹಾಗೂ ಸಣ್ಣ ಔಷಧ ವ್ಯಾಪಾರಿಗಳನ್ನು ರಕ್ಷಿಸಬೇಕು ಎಂದು ಆಗ್ರಹಿಸಿದ್ದಾರೆ.

ಆನ್‌ಲೈನ್ ಔಷಧ ಮಾರಾಟದಿಂದ ನಕಲಿ ಪ್ರಿಸ್ಕ್ರಿಪ್ಷನ್ ಬಳಕೆ, ಆಂಟಿಬಯೋಟಿಕ್ ಮತ್ತು ವ್ಯಸನಕಾರಿ ಔಷಧಿಗಳ ದುರುಪಯೋಗ, ರೋಗಿ ಮತ್ತು ಫಾರ್ಮಸಿಸ್ಟ್ ನಡುವಿನ ನೇರ ಸಂಪರ್ಕದ ಕೊರತೆ, ಸರಿಯಾದ ಸಂಗ್ರಹಣೆಯಿಲ್ಲದ ಔಷಧಿಗಳ ಅಪಾಯ ಹೆಚ್ಚುತ್ತಿದೆ ಎಂದು ವ್ಯಾಪಾರಿಗಳು ಆರೋಪಿಸಿದ್ದಾರೆ.

ಬೃಹತ್ ಬೆಂಗಳೂರು ಔಷಧ ವ್ಯಾಪಾರಿಗಳ ಸಂಘ ಕೇವಲ ನೈತಿಕ ಬೆಂಬಲ ಸೂಚಿಸಿದ್ದು, “ರೋಗಿಗಳ ಸೇವೆ ಅಡ್ಡಿಯಾಗಬಾರದು” ಎಂಬ ಕಾರಣಕ್ಕೆ ಮೆಡಿಕಲ್ ಶಾಪ್‌ಗಳನ್ನು ತೆರೆಯಲಾಗಿದೆ ಎಂದು ಸಂಘದ ಅಧ್ಯಕ್ಷ ಎಂ.ಕೆ. ಮಾಯಣ್ಣ ತಿಳಿಸಿದ್ದಾರೆ.

ಎಐಒಸಿಡಿ ಅಧ್ಯಕ್ಷ ಜೆ.ಎಸ್. ಶಿಂಧೆ ಹಾಗೂ ಪ್ರಧಾನ ಕಾರ್ಯದರ್ಶಿ ರಾಜೀವ್ ಸಿಂಘಾಲ್ ನೇತೃತ್ವದಲ್ಲಿ ನಡೆಯುತ್ತಿರುವ ಈ ಪ್ರತಿಭಟನೆ ಕೇವಲ ವ್ಯಾಪಾರಿಗಳ ಹೋರಾಟವಲ್ಲ, ರೋಗಿಗಳ ಆರೋಗ್ಯ ಮತ್ತು ಸುರಕ್ಷತೆಯ ಪ್ರಶ್ನೆಯೂ ಹೌದು ಎಂದು ಸಂಘಟನೆಗಳು ಅಭಿಪ್ರಾಯಪಟ್ಟಿವೆ.

“ಔಷಧಿಗಳು ಸಾಮಾನ್ಯ ವಸ್ತುಗಳಲ್ಲ. ವೈದ್ಯರ ಸಲಹೆ ಮತ್ತು ಅರ್ಹ ಫಾರ್ಮಸಿಸ್ಟ್ ಮಾರ್ಗದರ್ಶನದೊಂದಿಗೆ ಮಾತ್ರ ಬಳಸಬೇಕು. ಜನರು ಸ್ವಯಂ ಔಷಧ ಸೇವನೆ ತಪ್ಪಿಸಿ, ಅಧಿಕೃತ ಮತ್ತು ವಿಶ್ವಾಸಾರ್ಹ ವೇದಿಕೆಗಳಲ್ಲಿಯೇ ಔಷಧ ಖರೀದಿಸಬೇಕು” ಎಂದು ಆರೋಗ್ಯ ತಜ್ಞರು ಸಲಹೆ ನೀಡಿದ್ದಾರೆ.

##BreakingNews #MedicalShopBandh #OnlinePharmacy #Karnataka #DakshinaKannada #HealthSafety #MedicineAlert #AIOCD

COMMENTS

Login with Gmail to comment

ಇನ್ನಷ್ಟು ಸುದ್ದಿ

ಆಂಬ್ಯುಲೆನ್ಸ್‌ನಲ್ಲೇ ನಡೆದ ಭೀಕರ ಘಟನೆ… ನಂಬಲು ಕಷ್ಟ, ಆದರೆ ಸತ್ಯ!
ಭಾರತದ 9 ರಾಜ್ಯದ 8.18 ಕೋಟಿ ಮತದಾರರನ್ನು ಕೈ ಬಿಡಲಾಗಿದ್ದು ,ಅವರ ಕಥೆ ಏನು?
ಡೇಟಾದಲ್ಲಿ ಸತ್ತಿದ್ದಾರೆ: ಬಡ ಮಹಿಳೆ ತಾನು ಜೀವಂತ ಸಾಬೀತುಪಡಿಸಲು ಹರಸಾಹಸ…ಬಡಜನರು “ಡೇಟಾ” ಅಲ್ಲ — ಅವರು ಜೀವಂತ ಮಾನವರು. 
ಮಾರ್ಚ್ 7 ರಂದು ಜಿಲ್ಲೆಗೆ ಸಿಎಂ ಸಿದ್ದರಾಮಯ್ಯ ಆಗಮನ
₹168 ಕೋಟಿ ಆದಾಯದೊಂದಿಗೆ ಕುಕ್ಕೆ ಸುಬ್ರಹ್ಮಣ್ಯ 15ನೇ ವರ್ಷವೂ ಅಗ್ರಸ್ಥಾನದಲ್ಲಿ… ಕೋಟಿ ಕೋಟಿ ಕಾಣಿಕೆ – ಭಕ್ತಿಯ ಮಹಾಪ್ರವಾಹ ಕುಕ್ಕೆ ದೇವಾಲಯ…
ಹನಿಟ್ರ್ಯಾಪ್ ಕ್ವೀನ್ ಜೀನತ್ ಇಬ್ರಾಹಿಂ ಗೆ ನ್ಯಾಯಾಂಗ ಬಂಧನ- ಟ್ರ್ಯಾಪ್ ನಲ್ಲಿ ಹೊಸ ಹೊಸ ಹೆಸರುಗಳು !!!?
ಬಂಗಾಳದ ಸಿಂಹಾಸನಕ್ಕೆ ಸುವೇಂದು ಏರಿಕೆ — 15 ವರ್ಷದ ಮಮತಾ ಯುಗಕ್ಕೆ ಬ್ರೇಕ್!ಟಿಎಂಸಿ ಕೋಟೆ ಕುಸಿತ…
War update-ಕಂಪ್ಲೀಟ್ ಡೀಟೇಲ್ಸ್ …ಮುಂದೇನು? ceasefire ಮುಂದುವರಿಯುತ್ತದೆಯಾ?ಶಾಂತಿ ಅಥವಾ ಸಂಘರ್ಷ? ಮುಂದಿನ ಕೆಲ ದಿನಗಳು ವಿಶ್ವದ ಭವಿಷ್ಯ ತೀರ್ಮಾನಿಸುತ್ತದೆ.
ಬ್ರಹ್ಮಾವರದ ಹಲಸು ಮೇಳ ಮಾಡಿದ ಹೊಲಸು – ಸಾರ್ವಜನಿಕರ ಆಕ್ರೋಶ
ಉಡುಪಿ ಸಬ್ ರಿಜಿಸ್ಟರ್ ಕಚೇರಿಯಲ್ಲಿ ಕಾನೂನುಬಾಹಿರ ಚಟುವಟಿಕೆ
ಆಯುಷ್ ಎಚ್ಚರಿಕೆ ಬಳಿಕ ಅಶ್ವಗಂಧ ನಿಯಂತ್ರಣ ಕ್ರಮಕ್ಕೆ ತಡೆ: ಹೈಕೋರ್ಟ್ ಮಹತ್ವದ ಆದೇಶ
ಕೊನೆಗೂ ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿದ ನಿತೀಶ್ ಕುಮಾರ್
ರಾಜಿ ಮಾಡಲು ಬಂದವನಿಗೇ ಚೂರಿ ಇರಿತ
30 ದಿನ, 13 ನಗರಗಳು, ₹10 ಲಕ್ಷ ಖರ್ಚು! ಅಮೆರಿಕದ ದಂಪತಿಯ ಭಾರತ ಯಾತ್ರೆ ವೈರಲ್….ವೈರಲ್ ವಿಡಿಯೋದಲ್ಲಿ ಹೊರಬಿದ್ದ ಅಚ್ಚರಿಯ ಲೆಕ್ಕ!
ಹುಬ್ಬಳ್ಳಿಯಲ್ಲಿ ಲವ್ ಜಿಹಾದ್ ಹೆಸರಲ್ಲಿ ನಡಿತಿರೋದೇನು?
ಉಪಚುನಾವಣೆ ಮುಗಿಯುತಿದ್ದಂತೆಯೇ, ವಿದ್ಯುತ್ ದರ ಏರಿಸುತ್ತಿರುವ ರಾಜ್ಯ ಸರ್ಕಾರ
ನಾಲ್ಕು ದಶಕಗಳ ಕಾಲ ರೋಗಿಗಳಿಗೆ ಜೀವ ನೀಡಿದ ವೈದ್ಯನೇ ಇಂದು ಯಾಕೆ ತನ್ನ ಜೀವ ತಾನೇ ತೆಗೆದುಕೊಂಡರು …
ಡಿಕೆಶಿ ಸೈಲೆಂಟ್ ಆಪರೇಷನ್ ಮಿಸ್ ಫೈರ್ ಆಗಿದ್ದೆಲ್ಲಿ?ರಾಷ್ಟ್ರ ರಾಜಧಾನಿಯಲ್ಲಿ ಕರ್ನಾಟಕ ಕಾಂಗ್ರೆಸ್ ಹೈ-ವೋಲ್ಟೇಜ್ ಹರಟೆ…!
ಚುನಾವಣೆ ಗೆಲ್ಲುವುದು ಸಾಕಿನ್ನು, ರಾಷ್ಟ್ರದ ಸಣ್ಣ ಮತ್ತು ಮಧ್ಯಮ ವ್ಯವಹಾರ ಸ್ಥರ ಹಿತ ಕಾಪಾಡಿ
ಕೊಪ್ಪ ತಹಸಿಲ್ದಾರ್ ಲಿಖಿತಾ ಮೋಹನ್, ಅಧಿಕಾರ ದುರುಪಯೋಗ ಮಾಡಿಕೊಂಡರಾ?
ವಿಷಪ್ರಾಶನ  ಪ್ರಕರಣದಲ್ಲಿ ಕಾರ್ಕಳ ಗಜರಿಯ ಹಾಸ್ಪಿಟಲ್ ತಪ್ಪು ಮಾಡಿತೇ?
🔴 ಪೊಲೀಸರ ಮೇಲಿನ ಹಿಡಿತ ಕಠಿಣ: PEBಗೆ ಹೆಚ್ಚಿದ ಅಧಿಕಾರ — ರಾಜ್ಯದ ದೊಡ್ಡ ಆಡಳಿತಾತ್ಮಕ ತೀರ್ಮಾನ
ದ್ವಿತೀಯ ಪಿ.ಯು.ಸಿ ಪರೀಕ್ಷಾ ಹಾಜರಾತಿ
ಬಂಗಾಳ ರಾಜಕೀಯದಲ್ಲಿ ಭಾರಿ ಟ್ವಿಸ್ಟ್ ಮೇಲೆ ಟ್ವಿಸ್ಟ್..! ಸುವೇಂದು ಪ್ರಮಾಣವಚನಕ್ಕೂ ಬ್ರೇಕ್ ಬೀಳುತ್ತಾ?ಸುಪ್ರೀಂ ಕೋರ್ಟ್ ಎಂಟ್ರಿ ಆಗುತ್ತಾ?
ಸಾಮಾಜಿಕ ಜಾಲತಾಣದಲ್ಲಿ ಕೋಮು ಪ್ರಚೋದನೆಯ ಪೋಸ್ಟ್ ಗಳನ್ನು ಹಾಕಿದ ಆರೋಪಿಯ ಬಂಧನ
ಹವ್ಯಕ ಭಾಷಾ ಅಕಾಡೆಮಿ ಸ್ಥಾಪನೆಯ ಕ್ರೆಡಿಟ್ ಪಡೆದುಕೊಳ್ಳಲು ಶುರುವಾಯಿತು ಫೈಟ್
ಕರಾವಳಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್: ಬಿಸಿಲಿಗೆ ಎಚ್ಚರ!
ED ₹2,178 ಕೋಟಿ ಆಸ್ತಿ ಜಪ್ತಿ ನಿರವ್ ಮೋದಿ–ವಿಜಯ್ ಮಲ್ಯ ಸೇರಿ 21 ಜನರ ಆರ್ಥಿಕ ಅಪರಾಧಿಗಳ ವಿರುದ್ಧ ದೊಡ್ಡ ಮಟ್ಟದ ಕ್ರಮ
ಸಾರ್ವಜನಿಕರಲ್ಲಿ ವಿನಂತಿ …!
ಒಂದು ವಾಟ್ಸ್ಯಾಪ್ ಮೆಸೇಜ್… ಕೋರ್ಟ್ ವರೆಗೂ ಎಳೆದ ಶಾಕ್ ಘಟನೆಯ ಸುತ್ತ..