📍 Karavali Maruta
LIVE | CONTACT
ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

ಇನ್ನು ಹೈವೇಯಲ್ಲಿ ಲಿಮಿಟ್ ಗಿಂತ ವೇಗವಾಗಿ ಹೋಗುವವರು ಹುಷಾರಾಗಿರಿ…

ಉಡುಪಿ ಜಿಲ್ಲೆಯ ವ್ಯಾಪ್ತಿಯಲ್ಲಿನ ಹೈವೇಯಲ್ಲಿ ಇನ್ನು ಮುಂದೆ ಮನಸ್ಸಿಗೆ ಬಂದಷ್ಟು ವೇಗವಾಗಿ ಚಲಿಸುವ ಹಾಗಿಲ್ಲ. ಒಂದೊಮ್ಮೆ ಲಿಮಿಟ್ ಗಿಂತ ಹೆಚ್ಚು ವೇಗವಾಗಿ ಚಲಿಸಿದರೆ ನಿಮ್ಮ ಮನೆಗೆ ನೋಟಿಸ್ ಬರುವುದು ಪಕ್ಕ.

ಉಡುಪಿ ಜಿಲ್ಲೆಯ ವ್ಯಾಪ್ತಿಯಲ್ಲಿನ ಹೈವೇಯಲ್ಲಿ ಇನ್ನು ಮುಂದೆ 80 ಕಿಲೋಮೀಟರ್ಗಿಂತ ಹೆಚ್ಚು ವೇಗದಲ್ಲಿ ಚಲಿಸುವ ಹಾಗಿಲ್ಲ. ಹೈವೆಯ ಸುಮಾರು 10 ಕಡೆ ಹೈ ಕ್ವಾಲಿಟಿಯ ಸ್ಪೀಡ್ ರಾಡರ್ ಕ್ಯಾಮೆರಾವನ್ನು ಅಳವಡಿಸಲಾಗಿದೆ. ಇದನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿಯಲ್ಲಿಯೇ ಮಾನಿಟರಿಂಗ್ ಮಾಡಲಾಗುತ್ತದೆ. ಅಲ್ಲಿಂದಲೇ ಯಾರು, ಯಾವ ವಾಹನ, ಅತಿ ವೇಗವಾಗಿ ಚಲಿಸುತ್ತಿದೆ ಅನ್ನುವುದನ್ನು ಪಕ್ಕ ತಿಳಿಸಿಬಿಡುತ್ತದೆ.. 80 ಕಿಲೋಮೀಟರ್ಗಿಂತ ಜಾಸ್ತಿ ವೇಗದಲ್ಲಿ ಚಲಿಸಿದರೆ ಒಂದೇ ವಾರದಲ್ಲಿ ಮನೆ ಎಲ್ಲಿಯೇ ಇರಲಿ, ಪೊಲೀಸ್ ನೋಟಿಸ್ ಮನೆ ತಲುಪುತ್ತದೆ.

ಕೇವಲ ಇಷ್ಟೇ ಅಲ್ಲ, ಆ ಸ್ಪೀಡ್ ರಾಡರ್ ಕ್ಯಾಮೆರಾ, ಕೇವಲ ವೇಗವನ್ನು ಮಾತ್ರ ಅಳೆಯುವುದಿಲ್ಲ. ಸೀಟ್ ಬೆಲ್ಟ್ ಹಾಕಿದ್ದಾರಾ ಇಲ್ವಾ ಅನ್ನುವುದನ್ನು ಪಕ್ಕಾ ವಿಡಿಯೋ ಸಹಿತ ಹೇಳುತ್ತದೆ. ಡ್ರೈವಿಂಗ್ ಮಾಡುವಾಗ ಮೊಬೈಲ್ ಯೂಸ್ ಮಾಡುತ್ತಿದ್ದರೆ ಅದನ್ನೂ ಆ ಕ್ಯಾಮರಾ ಕ್ಯಾಪ್ಚರ್ ಮಾಡದೇ ಬಿಡುವುದಿಲ್ಲ. ದ್ವಿಚಕ್ರವಾಹನದ ಸವಾರರು ಹೆಲ್ಮೆಟ್ ಇಲ್ಲದೆ ಹೋದರೆ ಅದಕ್ಕೂ ನೋಟಿಸ್ ಪಕ್ಕಾ ಬರುತ್ತದೆ.

ಕೇವಲ ಈ ಹೈವೇಗೆ ಮಾತ್ರ ಸೀಮಿತವಾಗಿಲ್ಲ, ಕಾರ್ಕಳ ಟು ಉಡುಪಿ ರಸ್ತೆಗೂ ಸಹಿತ ಸ್ಪೀಡ್ ಲಿಮಿಟ್ 60 ಕಿಲೋ ಮೀಟರ್ ಅಂತ ನಿರ್ಧರಿಸಲಾಗಿದೆ. ಅದಕ್ಕೂ  ಜಾಸ್ತಿ ವೇಗದಲ್ಲಿ ಹೋಗಲು ನಿರ್ಬಂಧಿಸಲಾಗಿದೆ. ಹೀಗಾಗಿ ಇನ್ನು ಈ ರಸ್ತೆಯಲ್ಲಿ ಓಡಾಡುವವರು ರಸ್ತೆ ನಿಯಮವನ್ನು ಪಾಲನೆ ಮಾಡಲೇಬೇಕಾಗುತ್ತದೆ ಮಾಡದಿದ್ದರೆ ದಂಡವನ್ನು ತೆತ್ತಲೇ ಬೇಕು.

ಒಟ್ಟಿನಲ್ಲಿ ಉಡುಪಿಯ ಪೊಲೀಸರು ಡಿಜಿಟಲ್ ವ್ಯವಸ್ಥೆಯನ್ನು ಸರಿಯಾಗಿ ಬಳಸಿಕೊಳ್ಳಲು ತೀರ್ಮಾನಿಸಿದ್ದಾರೆ ಅನ್ನುವುದು ಸಂತೋಷಕರ ವಿಚಾರ. ಈ ಬಗ್ಗೆ ಲಾಂಗ್ ರೂಟ್ ಹೋಗುವವರು 80 ಕಿಲೋಮೀಟರ್ ಮಿತಿ ಹಾಕಿರುವುದನ್ನು ನೂರು ಕಿಲೋಮೀಟರ್ಗೆ ಹೆಚ್ಚಿಸಬೇಕಿತ್ತು ಅಂತ ಅಭಿಪ್ರಾಯ ವ್ಯಕ್ತಪಡಿಸುತ್ತಿದ್ದಾರೆ. ಅದೆಲ್ಲ ಏನೇ ಇರಲಿ, ಸಮಾಜಕ್ಕೆ ಒಳಿತಾಗಲಿ ಎಂಬ ಕಾರಣಕ್ಕೆ ಈ ವ್ಯವಸ್ಥೆಯನ್ನು ಜಾರಿಗೆ ತರಲಾಗುತ್ತದೆ. ಅದನ್ನು ಪಾಲಿಸಬೇಕಾದದ್ದು ನಮ್ಮೆಲ್ಲರ ಕರ್ತವ್ಯವೂ ಆಗಿದೆ.

COMMENTS

Login with Gmail to comment

ಇನ್ನಷ್ಟು ಸುದ್ದಿ

ಮಹಿಳಾ ಕ್ರೀಡಾಪಟುಗಳ ಹೋರಾಟಕ್ಕೆ ಹೊಸ ತಿರುವು ಕೊಟ್ಟ ದೆಹಲಿ ಹೈಕೋರ್ಟ್!
₹10,000ಕ್ಕೆ NEET-UG 2026 ಪ್ರಶ್ನೆಪತ್ರಿಕೆ? ದೇಶವೇ ಬೆಚ್ಚಿಬಿದ್ದ ಲೀಕ್ ಸ್ಕಾಂಡಲ್!ಟೆಲಿಗ್ರಾಂ ಸೀಕ್ರೆಟ್ ಚಾಟ್ ವೈರಲ್…22 ಲಕ್ಷ ವಿದ್ಯಾರ್ಥಿಗಳ ಕನಸಿಗೆ ದೊಡ್ಡ ಹೊಡೆತ — NEET 2026 ರದ್ದು!
ಎಸ್ ಪಿ ಅರುಣ್ ಕುಮಾರ್ ಗೆ ಮುಖ್ಯಮಂತ್ರಿ ಪದಕ
ಬೆಳ್ತಂಗಡಿ ಸ್ನಾನಕ್ಕೆ ತೆರಳಿದ್ದ ಬಾಲಕ ನೀರಿನಲ್ಲಿ ಮುಳುಗಿ ಸಾವು…
ಹೊಸ ರಾಜಕೀಯ ಕ್ರಾಂತಿ! ಅಸ್ಸಾಂ ಕುದಿಯುತ್ತಿದೆ…ಹಿಂದುತ್ವ vs ಗುರುತು ರಾಜಕೀಯ…!
ಅಗತ್ಯ ಮಾಹಿತಿ ಇಲ್ಲಿದೆ ಓದಿ..!“ಎಲ್‌ಪಿಜಿ ಬುಕಿಂಗ್‌ಗೆ ಹೊಸ ನಂಬರ್‌ಗಳು: ಆತಂಕ ಬೇಡ, ಸರಬರಾಜು ಶೀಘ್ರ ಸಾಮಾನ್ಯಕ್ಕೆ!”
ಮಂಗಳೂರು, ಮೈಸೂರಿಗೂ ‘Amazon Now’ 2,800 ಕೋಟಿ ಹೂಡಿಕೆ-
NEET ಗೊಂದಲ, ಮರುಪರೀಕ್ಷೆ, ಮೌಲ್ಯಮಾಪನ ದೋಷಗಳು ಮತ್ತು ವಿದ್ಯಾರ್ಥಿ ಜೀವನದ ನೋವು..
ವಿಟ್ಲ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಕಚೇರಿಯಲ್ಲಿ ಗಲಾಟೆ:
HSRP ರಿಲೀಫ್ + PUCC ಫೈನ್ ಮುಕ್ತ…ಡೀಟೇಲ್ಸ್ ಇಲ್ಲಿದೆ ಕರ್ನಾಟಕದ ಎಲ್ಲ ಡ್ರೈವರ್‌ಗಳಿಗೆ ಡಬಲ್ ಗುಡ್ ನ್ಯೂಸ್!???
ದೊಡ್ಡ ಬಜೇಟ್  ತುಳು ಸಿನಿಮಾ`ಗಜಾನನ ಕ್ರಿಕೆಟರ್ಸ್’ ಮೇ 22 ರಂದು ತೆರೆಗೆ
ಕಾರ್ಕಳದ ವೈದ್ಯಕೀಯ ವಿದ್ಯಾರ್ಥಿನಿ ಭೀಕರ  ಅಪಘಾತಕ್ಕೆ ಬಲಿ
ಯಕ್ಷಗಾನದಲ್ಲಿ ಶಿಳ್ಳೆ ಹಾಕ್ಲಿಕ್ಕೆ ಪರ್ಮಿಶನ್ ಬೇಕಾ..…!?
BRICS ಸಭೆಯಲ್ಲಿ UAE ಮೇಲೆ ಇರಾನ್ ಕಿಡಿ! ಇಸ್ರೇಲ್–ಇರಾನ್ ಯುದ್ಧ – ಇಸ್ರೇಲ್‌ಗೆ UAE ಗುಪ್ತ ಬೆಂಬಲವೇ?
ಬಾಲಕಾರ್ಮಿಕ ಪತ್ತೆ : ಮಾಲೀಕನಿಗೆ ಜೈಲು, ದಂಡ
ಪಾಕಿಸ್ತಾನದಲ್ಲಿ ಹಿಂದೂ ಯುವತಿಯ ಸಾಧನೆ
ಮಾರ್ಚ್ 7 ರಂದು ಜಿಲ್ಲೆಗೆ ಸಿಎಂ ಸಿದ್ದರಾಮಯ್ಯ ಆಗಮನ
ಸಂಸದ ಸಂಜಯ್ ಅರೋರ ಬಂಧನ…. ಉಳಿದ ಮೂರು ಸಂಸದರನ್ನು ಸೆಳೆಯಲು ಈ ಅನೈತಿಕ ಮಾರ್ಗ ಎಂದು ಎಎಪಿ.
ರಾಜ್ಯದ 800 ಶಾಲೆಗಳನ್ನು ಕರ್ನಾಟಕ ಪಬ್ಲಿಕ್ ಸ್ಕೂಲ್ ಗಳಾಗಿ ಉನ್ನತೀಕರಿಸಲು 3900 ಕೋಟಿ ಮೀಸಲು
KSRTC ಬಸ್ ಪಲ್ಟಿಯಾಗಿ ಕಂದಕಕ್ಕೆ — ಐವರು ದುರ್ಮರಣ, ಹಲವರಿಗೆ ಗಂಭೀರ ಗಾಯ-ಜಹೀರಾಬಾದ್ ಸಮೀಪ ಭೀಕರ ರಸ್ತೆ ಅಪಘಾತ
ಮರಣದಂಡನೆ ಶಿಕ್ಷೆಗೆ ಈಡಾದ  ತಮಿಳುನಾಡು   ಪೊಲೀಸರು
ನಾಟಕ ಕಲಾವಿದೆ ಸೌಮ್ಯ ಶೆಟ್ಟಿ ಬಂಧನ
ಕಾರ್ಕಳದಲ್ಲಿ  ಜಾಗ ಕಿತ್ತುಕೊಳ್ಳಲು ಮಾಡಿದ ಪ್ಲಾನ್, ರಿವರ್ಸಾಗಿ ಪೊಲೀಸ್ ಠಾಣೆ ಮೆಟ್ಟಿಲು ಹತ್ತಿದೆ
ಧುರಂಧರ್ 2 ಕ್ರೇಜ್ ಓವರ್‌ಫ್ಲೋ ಕಲೆಕ್ಷನ್‌ನಲ್ಲಿಕರ್ನಾಟಕವೇ ಟಾಪ್… ದಕ್ಷಿಣ ಭಾರತದಲ್ಲಿ 300 ಕೋಟಿ ಕ್ಲಬ್!
ಪರಸ್ತ್ರೀ ಹುಂಡಿಗೆ  ಒಂದುವರೆ ಕೋಟಿ ಅಪಾರ್ಟ್ಮೆಂಟ್, ಮಾಜಿ ಶಾಸಕನ ರಂಗಿನಾಟ 
ಜಸ್ಟ್ one click ನಲ್ಲೇ ಎಲ್ಲಾ ಸರ್ಟಿಫಿಕೇಟ್…!2026–27ರಿಂದ ಅಂಕಪಟ್ಟಿ ಹಾರ್ಡ್ ಕಾಪಿ ಇಲ್ಲ..
“ಪ್ರೇಮ ಕಥೆ ತಿರುವು: ಗಂಡನ ಜೀವವೇ ಟಾರ್ಗೆಟ್!”ಬ್ಯಾಂಕ್ ಅಧಿಕಾರಿ ಪತ್ನಿ taxi ಚಾಲಕನೊಂದಿಗೆ ಸೇರಿ killing plan
ಗುರು ಬ್ರಹ್ಮ – ಗುರು ವಿಷ್ಣು ಅನ್ನುವ ಕಾಲ ಮುಗಿದು ಹೋಯ್ತೇ?
ಹೆಚ್.ಪಿ.ವಿ. ಚುಚ್ಚು ಮದ್ದಿನ ಬಗ್ಗೆ ಗೊಂದಲ ಬೇಡ: ಜಿಲ್ಲಾ ಆರೋಗ್ಯಾಧಿಕಾರಿ ಸ್ಪಷ್ಟನೆ