📍 Karavali Maruta
  • LOGIN
  • BREAKING
    ಧಾರವಾಡದಲ್ಲಿ ಭೀಕರ LPG ಸಿಲಿಂಡರ್ ಸ್ಫೋಟ , ಹಲವು ಮೀಟರ್ ದೂರಕ್ಕೆ ಹಾರಿದ ಬೈಕ್‌! ಹಲವರಿಗೆ ಗಾಯ CCTVಯಲ್ಲಿ ಶಾಕಿಂಗ್ ದೃಶ್ಯ ದಯಾಮರಣ ಕೇಳಿದ್ದ ತುಮಕೂರು ರಾಬಿಯಾ ಇನ್ನಿಲ್ಲ …!ಪರಮೇಶ್ವರ್ ಮುಂದೆ ಕಣ್ಣೀರಿಟ್ಟಿದ್ದ ಮಹಿಳೆ ಇಬ್ಬರು ಮಕ್ಕಳೊಂದಿಗೆ ವಿಷಸೇವಿಸಿ ಕೊನೆಯುಸಿರು…‘ಮನೆ’ ಸಿಕ್ಕರೂ ಬದುಕು ಉಳಿಯಲಿಲ್ಲ! ನೇಪಾಳ ದುರಂತ: ಕಂಪ್ಲೀಟ್ ರಿಪೋರ್ಟ್ ಇಲ್ಲಿದೆ…ಕಣ್ಣೆದುರೇ ಕೊಚ್ಚಿಹೋದ ಬದುಕು… ಲೆಕ್ಕಕ್ಕೆ ಸಿಗದ ಸಾವು, ನೋವು!ಪ್ರವಾಹದ ರೌದ್ರದ ನಡುವೆ ಮೃತದೇಹದಿಂದಲೇ ಚಿನ್ನ ಕದಿಯಲು ಯತ್ನ… ಮಾನವೀಯತೆ ಮರೆತ ಕಿರಾತಕರು!ಇಬ್ಬರು ಅರೆಸ್ಟ್! ಮಹಿಳಾ ಕಾನ್ಸ್‌ಟೇಬಲ್ ಮೇಲೆ ಪೊಲೀಸ್ ಠಾಣೆಯಲ್ಲಿ ಮಾರಣಾಂತಿಕ ಹಲ್ಲೆ ವಾಜಪೇಯಿ ಸರ್ಕಾರದ  ಕನಸಿನ ಯೋಜನೆ ನದಿ ಜೋಡಣೆ ವಿರೋಧಿಸಿ ಶಿರಸಿಯಲ್ಲಿ ಸಹಿ ಸಂಗ್ರಹ ಅಭಿಯಾನ
    ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

    ಇನ್‌ಸ್ಟಾಗ್ರಾಮ್ ಬ್ಲಾಕ್ ಆದ ಕ್ಷಣದಿಂದ ಹೊರಬಂತು ರಹಸ್ಯ!

    ಶಿವಮೊಗ್ಗ ಶಾಕ್..ಇನ್‌ಸ್ಟಾಗ್ರಾಮ್ ಪರಿಚಯಪತಿಯ ಸ್ನೇಹಿತನೆಂಬ ನಂಬಿಕೆಬಳಿಕ ನಡೆದಿದ್ದು…

    ಭದ್ರಾವತಿಯಲ್ಲಿ 23 ವರ್ಷದ ವಿವಾಹಿತ ಮಹಿಳೆಯ ಮೇಲೆ ಅತ್ಯಾಚಾರ ಹಾಗೂ ಬ್ಲ್ಯಾಕ್‌ಮೇಲ್ ಆರೋಪ ಕೇಳಿಬಂದಿದ್ದು, ಬಿಜೆಪಿ ಯುವ ಮೋರ್ಚಾ ಮುಖಂಡ ಹಾಗೂ ವಕೀಲನ ವಿರುದ್ಧ ಕೇಸ್ ದಾಖಲಾಗಿದೆ.

    ಆರೋಪಿ ಭರತ್ ಬಿ.ಎಸ್ ಎಂಬಾತ, ಇನ್‌ಸ್ಟಾಗ್ರಾಮ್ ಮೂಲಕ ಮಹಿಳೆಯೊಂದಿಗೆ ಪರಿಚಯ ಬೆಳೆಸಿಕೊಂಡಿದ್ದಾನೆ ಎನ್ನಲಾಗಿದೆ. ಬಳಿಕ “ಪತಿಯ ಸ್ನೇಹಿತ” ಎಂದು ನಂಬಿಸಿ ಮಹಿಳೆಯ ದಿನಸಿ ಅಂಗಡಿಗೆ ಪದೇ ಪದೇ ಭೇಟಿ ನೀಡುತ್ತಿದ್ದ ಆತ, ಆರಂಭದಲ್ಲಿ ಸ್ನೇಹದ ಹೆಸರಿನಲ್ಲಿ ವರ್ತಿಸಿ ನಂತರ ಕಿರುಕುಳ ನೀಡಲು ಆರಂಭಿಸಿದ್ದಾನೆ ಎಂಬ ಆರೋಪ ಕೇಳಿಬಂದಿದೆ.

    ಇದಾದ ಬಳಿಕ, ಕಳೆದ ಏಪ್ರಿಲ್ 11ರಂದು “ಭರತ್ ಮನೆಗೆ ಬರ್ತಾನೆ, ಹಣ ಕೊಡು” ಎಂದು ಪತಿ ಹೇಳಿದ್ದ ಹಿನ್ನೆಲೆ ಮಹಿಳೆ ಹಣ ನೀಡಲು ಹೋಗಿದ್ದ ವೇಳೆ, ಒಂಟಿಯಾಗಿದ್ದ ಮಹಿಳೆಯ ಮೇಲೆ ಆರೋಪಿ ಬಲವಂತವಾಗಿ ದೌರ್ಜನ್ಯ ಎಸಗಿದ್ದಾನೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

    ಘಟನೆ ಬಳಿಕ “ಯಾರಿಗಾದರೂ ಹೇಳಿದರೆ ಮಾನಹಾನಿ ಮಾಡುತ್ತೇನೆ” ಎಂದು ಬೆದರಿಕೆ ಹಾಕಿ, ಅಲ್ಲಿಂದ ಹಣದೊಂದಿಗೆ ಪರಾರಿಯಾಗಿದ್ದಾನೆ ಎನ್ನಲಾಗಿದೆ.

    ಆದರೆ ಕಥೆ ಅಲ್ಲಿ ಮುಗಿದಿಲ್ಲ…!
    ಕೆಲ ದಿನಗಳ ಬಳಿಕ ಮತ್ತೆ ಅಂಗಡಿಗೆ ಬಂದ ಆರೋಪಿ, ಮಹಿಳೆಗೆ ಮತ್ತೊಮ್ಮೆ ಕಿರುಕುಳ ನೀಡಲು ಯತ್ನಿಸಿದ್ದಾನೆ ಎಂಬ ಆರೋಪ ಕೇಳಿಬಂದಿದೆ.

    ಇನ್ನೊಂದು ಟ್ವಿಸ್ಟ್ ಏನಂದ್ರೆ…
    ಮಹಿಳೆಯ ಇನ್‌ಸ್ಟಾಗ್ರಾಮ್ ಅಕೌಂಟ್ ಬ್ಲಾಕ್ ಆಗಿರುವುದನ್ನು ಗಮನಿಸಿದ ಪತಿ ಅನುಮಾನಪಟ್ಟಿದ್ದಾನೆ. ಪ್ರಶ್ನಿಸಿದಾಗ ಪತ್ನಿ ಕಣ್ಣೀರು ಹಾಕುತ್ತಾ ನಡೆದ ಘಟನೆಗಳನ್ನು ಬಿಚ್ಚಿಟ್ಟಿದ್ದಾಳೆ ಎನ್ನಲಾಗಿದೆ.

    ಅಷ್ಟೇ ಅಲ್ಲ, ಪತ್ನಿಯ ಹೆಸರಿನಲ್ಲಿ ವಾಟ್ಸಾಪ್ ಚಾಟ್ ಮಾಡಿದ ಪತಿ, ಆರೋಪಿಯ ಅಸಲಿ ಮುಖವನ್ನು ಬಹಿರಂಗಪಡಿಸಿದ್ದಾನೆ ಎಂಬ ಮಾಹಿತಿ ಲಭ್ಯವಾಗಿದೆ.

    ಈ ಕುರಿತು ಸಂತ್ರಸ್ತೆ ದಂಪತಿ ಭದ್ರಾವತಿಯ ಪೇಪರ್ ಟೌನ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಪ್ರಕರಣ ದಾಖಲಾಗುತ್ತಿದ್ದಂತೆ ಆರೋಪಿ ತಲೆಮರೆಸಿಕೊಂಡಿದ್ದಾನೆ.

    ಪ್ರಸ್ತುತ ಆರೋಪಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ.

    ##ಶಿವಮೊಗ್ಗ #ಭದ್ರಾವತಿ #BreakingNews #CrimeNews #KarnatakaNews #ViralNews

    COMMENTS

    Login with Gmail to comment

    ಇನ್ನಷ್ಟು ಸುದ್ದಿ

    ಯಾರದ್ದೋ ಹಠ, ಮತ್ತ್ಯಾರದೋ ಚಟ, ಹೆತ್ತವರ ಜಗಳಕ್ಕೆ ಬಲಿಯಾಯ್ತು ಮಗುವಿನ ಬಾಲ್ಯ -ಭವಿಷ್ಯ!
    ಗೋವಾ ಕ್ಯಾಲಂಗಟ್ ರೆಸಾರ್ಟ್‌ನಲ್ಲಿ ಕರಾವಳಿಯ ಯುವಕನ ನಿಗೂಢ ಸಾವು ಪ್ರಕರಣಕ್ಕೆ ಹೊಸ ತಿರುವು ನಾಪತ್ತೆಯಾದ ಆ ಮಹಿಳೆಗಾಗಿ ತೀವ್ರ ಶೋಧ…
    ಐಟಿ ಕ್ಷೇತ್ರದಲ್ಲಿ ಮತ್ತೆ ಲೇಆಫ್ ಭೀತಿ!
    ಕದನ ವಿರಾಮ ಹೇಳಿಕೆ ಮಾತ್ರ…“Middle East ಮತ್ತೆ ಸ್ಫೋಟಕ
    ನೇಪಾಳದಲ್ಲಿ ಭೀಕರ ಫ್ಲ್ಯಾಶ್ ಫ್ಲಡ್: 95 ಮಂದಿ ಸಾವು, 384 ಪ್ರಯಾಣಿಕರು ನಾಪತ್ತೆ; 105 ಭಾರತೀಯರೂ ಸಂಪರ್ಕಕ್ಕೆ ಸಿಗದೆ ಆತಂಕ!
    ಸಾರ್ವಜನಿಕರಲ್ಲಿ ವಿನಂತಿ …!
    ಭೀಕರ ಅಪಘಾತಕ್ಕೆ ಸ್ಥಳೀಯ ನಾಯಕ ಸೇರಿ ಇಬ್ಬರು ದುರ್ಮರಣ 
    ರಾಹುಲ್ ಗಾಂಧಿ ಪ್ರಕರಣಕ್ಕೆ ಸುಪ್ರೀಂ ಕೋರ್ಟ್ ಬ್ರೇಕ್!
    ಡಿಜಿಟಲ್ ದಿಗ್ಗಜರಿಗೆ ₹2 ಕೋಟಿ ಲೀಗಲ್ ನೋಟಿಸ್ ಶಾಕ್!ಯೂಟ್ಯೂಬ್ ಸ್ಟಾರ್ vs ಟಿವಿ ಸ್ಟಾರ್ ನಡುವಿನ ಕಾನೂನು ಸಮರ!
    ಲಕ್ನೋ ಕೋಚಿಂಗ್ ಸೆಂಟರ್‌ನಲ್ಲಿ ಭೀಕರ ಬೆಂಕಿ,15 ವಿದ್ಯಾರ್ಥಿಗಳು ಸಜೀವ ದಹನ ಹೃದಯವಿದ್ರಾವಕ ದುರಂತ
    ಬಾಲಿವುಡ್‌ ಮಿಸ್ಟರ್ ಪರ್ಫೆಕ್ಷನಿಸ್ಟ್ ಆಮೀರ್ ಖಾನ್ ಗೆ 60ರ ವಯಸ್ಸಿನಲ್ಲಿ  ಸಿಕ್ಕ ಪರ್ಫೆಕ್ಟ್ ಸಂಗಾತಿ……?!ಎಷ್ಟನೇ ಮದುವೆ?!
    ಉಡುಪಿ ನಗರಸಭೆಗೆ ನೂತನ ಪೌರಾಯುಕ್ತರಾಗಿ ಸಂತೋಷ್ ಡಿ.ಎಸ್. ನೇಮಕ
    ಈ ‘ಗೋಲ್ಡನ್ ಇನ್ನರ್‌ವೇರ್ ಸೆಟ್ ‘ಯಾರದ್ದು ?ಜಗತ್ತನ್ನೇ ಬೆಚ್ಚಿಬೀಳಿಸಿದ ಇರಾಕ್ ಸಂಸದೆ ಅಲಿಯಾ ನಸೀಫ್ ದ್ದಾ ..!?
    ಉಡುಪಿಯ ಆರು ತಹಶೀಲ್ದಾರ್ ಕಚೇರಿಗಳಿಗೆ ಲೋಕಾಯುಕ್ತ ಪೊಲೀಸರ ದಾಳಿ… ದಾಳಿಯ ಬಿಸಿ ತಟ್ಟುತ್ತದಾ ಅಧಿಕಾರಿಗಳಿಗೆ?
    ಬೆಂಗಳೂರು ಟು ಮುಂಬೈ  ಐದೇ ಘಂಟೆ ಪ್ರಯಾಣ- ಎಕ್ಸ್ಪ್ರೆಸ್ ಹೈವೇಗೆ ಅಸ್ತು
    Political Heatwave 2026:ದಕ್ಷಿಣದಲ್ಲಿ ಅಧಿಕಾರ ಆಟ, ಅಸ್ಸಾಂನಲ್ಲಿ ಅಬ್ಬರ..!
    KSRTC ಬಸ್ ಪಲ್ಟಿಯಾಗಿ ಕಂದಕಕ್ಕೆ — ಐವರು ದುರ್ಮರಣ, ಹಲವರಿಗೆ ಗಂಭೀರ ಗಾಯ-ಜಹೀರಾಬಾದ್ ಸಮೀಪ ಭೀಕರ ರಸ್ತೆ ಅಪಘಾತ
    ದಾವೂದ್ ಇಬ್ರಾಹಿಂನ ಆಪ್ತ. ಸಲೀಂ ಡೋಲಾ ಬಂದನ ವಿದೇಶದಲ್ಲಿ ಅಡಗಿದ್ದರೂ ಕಾನೂನಿನಿಂದ ತಪ್ಪಿಸಿಕೊಳ್ಳಲಾಗಲಿಲ್ಲ
    ಕಾಂಗ್ರೆಸ್‌ಗೆ ದಾವಣಗೆರೆ ಬಿಸಿ ತುಪ್ಪ!..“ಸಮುದಾಯದ ಹೆಸರಿನಲ್ಲಿ ರಾಜಕೀಯ… ಅಥವಾ ರಾಜಕೀಯದ ಹೆಸರಿನಲ್ಲಿ ಸಮುದಾಯ?”
    ಪ್ರಜ್ಞಾನಂದನ ದಿಗ್ವಿಜಯ…ಚೆಸ್ ಚಕ್ರವ್ಯೂಹದಲ್ಲಿ ದಿಗ್ಗಜರನ್ನೆಲ್ಲಾ ಮಣಿಸಿ ಸಿಂಹಾಸನಕ್ಕೇರಿದ ಭಾರತೀಯ ಬಾಲಪ್ರತಿಭೆ! 
    ಬೊಬ್ಬೆ ಕೇಳುತ್ತಿದ್ದಂತೆಯೇ ಓಡಿ ಜೀವ ಉಳಿಸಿದ!ಸಮಯಪ್ರಜ್ಞೆ ಎಂದರೆ ಇದು; ಐದನೇ ತರಗತಿಯ ಬಾಲಕನ ಕ್ಷಿಪ್ರ ನಿರ್ಧಾರದಿಂದ ತಪ್ಪಿದ ಅನಾಹುತ!
    ಕೇರಳ ಹೈಕೋರ್ಟ್ ಬಿಗ್ ರೂಲಿಂಗ್: ಅಧಿಕೃತ ಪ್ರಮಾಣವಚನದಲ್ಲಿ ‘ದೇವತೆಗಳು’, ‘ಹುತಾತ್ಮರ’ ಹೆಸರು ಹೇಳುವಾಗಿಲ್ಲ…
    ₹5ಕ್ಕೆ ಇಡ್ಲಿ… 56 ವರ್ಷಗಳಿಂದ ಅದೇ ರುಚಿ! 70ರ ಹರೆಯದಲ್ಲೂ ಪ್ರತಿದಿನ 1,500 ಇಡ್ಲಿ ಮಾಡಿ ಜನರ ಮನ ಗೆದ್ದ ಕರ್ನಾಟಕದ ಅನ್ನದಾತ…
    ಡೇಟಾದಲ್ಲಿ ಸತ್ತಿದ್ದಾರೆ: ಬಡ ಮಹಿಳೆ ತಾನು ಜೀವಂತ ಸಾಬೀತುಪಡಿಸಲು ಹರಸಾಹಸ…ಬಡಜನರು “ಡೇಟಾ” ಅಲ್ಲ — ಅವರು ಜೀವಂತ ಮಾನವರು. 
    8 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ
    ಜಪಾನ್ ಟೆಕ್ನಾಲಜಿ ಬಳ್ಳಾರಿಗೆ ಎಂಟ್ರಿ!ನಿರ್ಮಲಾ ಸೀತಾರಾಮನ್ ಹಸಿರು ಕ್ರಾಂತಿಗೆ ಚಾಲನೆ… ಇದು ಸಾಮಾನ್ಯ ಯೋಜನೆ ಅಲ್ಲ.1 ಲಕ್ಷ ಸಸಿಗಳು, 300 ಎಕರೆ ಭೂಮಿ ..
    ಘರ್ ವಾಪ್ಸಿ ಯಾದ ಯೋಗೇಶ್ ಶೆಟ್ಟಿ ಜೆಪ್ಪು
    ಈಶ್ವರ್ ಮಲ್ಪೆ ತಂಡಕ್ಕೆ MAHE ಸಂಸ್ಥೆಯಿಂದ ಅಮೂಲ್ಯ ರಕ್ಷಣಾ ವಾಹನ ಕೊಡುಗೆ-ಜೀವ ಉಳಿಸುವ ಸೇವೆಗೆ ಮತ್ತಷ್ಟು ಶಕ್ತಿ
    KIOCL ಮತ್ತು NDMC ವಿಲೀನಕ್ಕೆ ಶಾಸಕ ಡಾ. ಭರತ್ ಶೆಟ್ಟಿಯಿಂದ ಕೇಂದ್ರ ಸಚಿವರಿಗೆ ಮನವಿ
    ವಿಶ್ವದ ಅತ್ಯುತ್ತಮ ಶಾಲೆಗಳ ಪಟ್ಟಿಯಲ್ಲಿ ಭಾರತದ 7 ಶಾಲೆಗಳು …!ವಿಶ್ವದ ಗಮನ ಸೆಳೆದ ಸಾಧನೆ ಅಂಥದ್ದೇನಿದೆ!?