📍 Karavali Maruta
  • LOGIN
  • BREAKING
    ಧಾರವಾಡದಲ್ಲಿ ಭೀಕರ LPG ಸಿಲಿಂಡರ್ ಸ್ಫೋಟ , ಹಲವು ಮೀಟರ್ ದೂರಕ್ಕೆ ಹಾರಿದ ಬೈಕ್‌! ಹಲವರಿಗೆ ಗಾಯ CCTVಯಲ್ಲಿ ಶಾಕಿಂಗ್ ದೃಶ್ಯ ದಯಾಮರಣ ಕೇಳಿದ್ದ ತುಮಕೂರು ರಾಬಿಯಾ ಇನ್ನಿಲ್ಲ …!ಪರಮೇಶ್ವರ್ ಮುಂದೆ ಕಣ್ಣೀರಿಟ್ಟಿದ್ದ ಮಹಿಳೆ ಇಬ್ಬರು ಮಕ್ಕಳೊಂದಿಗೆ ವಿಷಸೇವಿಸಿ ಕೊನೆಯುಸಿರು…‘ಮನೆ’ ಸಿಕ್ಕರೂ ಬದುಕು ಉಳಿಯಲಿಲ್ಲ! ನೇಪಾಳ ದುರಂತ: ಕಂಪ್ಲೀಟ್ ರಿಪೋರ್ಟ್ ಇಲ್ಲಿದೆ…ಕಣ್ಣೆದುರೇ ಕೊಚ್ಚಿಹೋದ ಬದುಕು… ಲೆಕ್ಕಕ್ಕೆ ಸಿಗದ ಸಾವು, ನೋವು!ಪ್ರವಾಹದ ರೌದ್ರದ ನಡುವೆ ಮೃತದೇಹದಿಂದಲೇ ಚಿನ್ನ ಕದಿಯಲು ಯತ್ನ… ಮಾನವೀಯತೆ ಮರೆತ ಕಿರಾತಕರು!ಇಬ್ಬರು ಅರೆಸ್ಟ್! ಮಹಿಳಾ ಕಾನ್ಸ್‌ಟೇಬಲ್ ಮೇಲೆ ಪೊಲೀಸ್ ಠಾಣೆಯಲ್ಲಿ ಮಾರಣಾಂತಿಕ ಹಲ್ಲೆ ವಾಜಪೇಯಿ ಸರ್ಕಾರದ  ಕನಸಿನ ಯೋಜನೆ ನದಿ ಜೋಡಣೆ ವಿರೋಧಿಸಿ ಶಿರಸಿಯಲ್ಲಿ ಸಹಿ ಸಂಗ್ರಹ ಅಭಿಯಾನ
    ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

    ಇನ್‌ಸ್ಟಾಗ್ರಾಮ್ ವ್ಯಾಮೋಹಕ್ಕೆ ಹೆತ್ತ ತಾಯಿಗೇ ವಿಷವಿಕ್ಕಿದ ಮಗಳು..ಪ್ರೀತಿಯ ಹೆಸರಲ್ಲಿ ಹಾದಿ ತಪ್ಪಿದ ಹದಿಹರೆಯ ಮುಂದೇನಾಯತು?

    ಉತ್ತರ ಪ್ರದೇಶದ ಲಕ್ನೋದಲ್ಲಿ ನಡೆದ ಈ ಘಟನೆ ಇಂದಿನ ಡಿಜಿಟಲ್ ಯುಗದ ಕರಾಳ ಮುಖ ಹಾಗೂ ಹದಿಹರೆಯದ ಮಕ್ಕಳ ಹಾದಿ ತಪ್ಪುತ್ತಿರುವ ರೀತಿಗೆ ಕನ್ನಡಿ ಹಿಡಿದಿದೆ.

    ಸಾಮಾನ್ಯವಾಗಿ ಹೆಣ್ಣುಮಕ್ಕಳಿಗೆ ತಾಯಿ ಎಂದರೆ ಜೀವ. ಆದರೆ ಉತ್ತರ ಪ್ರದೇಶದ ಲಕ್ನೋದ ಕೃಷ್ಣಾನಗರದಲ್ಲಿ ನಡೆದ ಘಟನೆ ಇಡೀ ಸಮಾಜ ತಲೆತಗ್ಗಿಸುವಂತೆ ಮಾಡಿದೆ. ಇನ್‌ಸ್ಟಾಗ್ರಾಮ್ ಪ್ರಿಯಕರನ ಜೊತೆ ತಡರಾತ್ರಿಯವರೆಗೆ ಗುಟ್ಟಾಗಿ ಚಾಟಿಂಗ್ ಮಾಡಲು, ೧೫ ವರ್ಷದ ಅಪ್ರಾಪ್ತ ಮಗಳೊಬ್ಬಳು ಹೆತ್ತ ತಾಯಿಯ ಊಟದಲ್ಲಿ ದಿನವೂ ನಿದ್ದೆ ಮಾತ್ರೆ ಬೆರೆಸುತ್ತಿದ್ದ ಘೋರ ಸತ್ಯ ತಡವಾಗಿ ಬೆಳಕಿಗೆ ಬಂದಿದೆ. ಈ ದ್ರೋಹವನ್ನು ಕಂಡು ಹೆತ್ತ ಕರುಳು ಕಣ್ಣೀರು ಹಾಕಿದೆ.

    ಮೂರು ತಿಂಗಳ ಕರಾಳ ಕೃತ್ಯ: ಬುಟಿಕ್ ಹಾಗೂ ಟಿಫಿನ್ ಸರ್ವೀಸ್ ನಡೆಸಿ ಕಷ್ಟಪಟ್ಟು ಸಂಸಾರ ತೂಗಿಸುತ್ತಿದ್ದ ಆ ತಾಯಿಗೆ ಕಳೆದ ಮೂರು ತಿಂಗಳಿಂದ ತೀವ್ರ ನಿಶ್ಯಕ್ತಿ, ಅತಿಯಾದ ನಿದ್ದೆ ಹಾಗೂ ತಲೆಸುತ್ತು ಕಾಣಿಸಿಕೊಳ್ಳುತ್ತಿತ್ತು. ಕಷ್ಟಪಟ್ಟು ದುಡಿಯುತ್ತಿರುವುದರಿಂದಲೇ ಆಯಾಸವಾಗುತ್ತಿದೆ ಎಂದು ಅವರು ಭಾವಿಸಿದ್ದರು. ಆದರೆ ದಿನದಿಂದ ದಿನಕ್ಕೆ ಆರೋಗ್ಯ ಕ್ಷೀಣಿಸಿದಾಗ ಅನುಮಾನಗೊಂಡು ವೈದ್ಯರನ್ನು ಸಂಪರ್ಕಿಸಿ ರಕ್ತ ಪರೀಕ್ಷೆ ಮಾಡಿಸಿದಾಗ, ಅವರ ರಕ್ತದಲ್ಲಿ ಅತಿಯಾದ ನಿದ್ದೆ ಮಾತ್ರೆಯ (Sleeping Pills) ಅಂಶಗಳು ಪತ್ತೆಯಾಗಿ ವೈದ್ಯರೇ ದಿಗ್ಭ್ರಮೆಗೊಂಡಿದ್ದರು.

    ಪ್ರೀತಿಯ ಜಾಲ ಮತ್ತು ಸಂಚು: ವೈದ್ಯರ ವರದಿ ಬಂದ ನಂತರ ಮನೆಯಲ್ಲಿ ತೀವ್ರ ವಿಚಾರಣೆ ನಡೆಸಿದಾಗ ಅಸಲಿ ಅಪರಾಧಿ ಸ್ವಂತ ಮಗಳೇ ಎಂಬುದು ಬಯಲಾಗಿದೆ. ಇನ್‌ಸ್ಟಾಗ್ರಾಮ್ ಮೂಲಕ ಪರಿಚಯವಾಗಿದ್ದ ಪಕ್ಕದ ಮನೆಯ ಹುಡುಗನ ಜೊತೆ ರಾತ್ರಿ ಇಡೀ ಮಾತನಾಡಲು, ಅಮ್ಮ ತನಗೆ ತಡೆಯಾಗಬಾರದು ಎಂದು ಈ ಕೃತ್ಯ ಎಸಗಿರುವುದಾಗಿ ಬಾಲಕಿ ಒಪ್ಪಿಕೊಂಡಿದ್ದಾಳೆ. ಅಷ್ಟೇ ಅಲ್ಲದೆ, ಆ ಹುಡುಗನೇ ತನಗೆ ನಿದ್ದೆ ಮಾತ್ರೆಗಳನ್ನು ತಂದುಕೊಟ್ಟು, ಈ ಹಾದಿ ತಪ್ಪಿಸುವ ಐಡಿಯಾ ನೀಡಿದ್ದಾಗಿ ಹೆದರುತ್ತಲೇ ವಿವರಿಸಿದ್ದಾಳೆ.

    ಕೌನ್ಸೆಲಿಂಗ್ ಕೇಂದ್ರದಲ್ಲಿ ಬಾಲಕಿ: ವಿಷಯ ತಿಳಿಯುತ್ತಿದ್ದಂತೆ ಬಾಲಕಿಯನ್ನು ಲಕ್ನೋದ ಲೋಕಬಂಧು ಆಸ್ಪತ್ರೆಯ ‘ಒನ್ ಸ್ಟಾಪ್ ಸೆಂಟರ್’ಗೆ ಕೌನ್ಸೆಲಿಂಗ್‌ಗಾಗಿ ದಾಖಲಿಸಲಾಗಿದೆ. ಸೆಂಟರ್ ಮ್ಯಾನೇಜರ್ ಅರ್ಚನಾ ಸಿಂಗ್ ಅವರ ಪ್ರಕಾರ, ಮೊಬೈಲ್ ಮತ್ತು ಸಾಮಾಜಿಕ ಜಾಲತಾಣಗಳ ಅತಿಯಾದ ವ್ಯಸನದಿಂದ ಬಾಲಕಿ ಇಂತಹ ಕ್ರೂರ ನಿರ್ಧಾರ ತಳೆದಿದ್ದಾಳೆ. ಸದ್ಯ ಆಕೆಗೆ ತಜ್ಞರಿಂದ ಮಾನಸಿಕ ತಿಳುವಳಿಕೆ ಮೂಡಿಸಲಾಗುತ್ತಿದ್ದು, ನಡವಳಿಕೆಯಲ್ಲಿ ಸುಧಾರಣೆ ಕಂಡುಬರುತ್ತಿದೆ.

    ಕ್ಷಮಿಸಿದ ತಾಯಿ – ಸಮಾಜಕ್ಕೆ ದೊಡ್ಡ ಪಾಠ: ತನ್ನ ಮಗಳು ತನಗೆ ನಿಧಾನವಾಗಿ ವಿಷ ನೀಡುತ್ತಿದ್ದಳು ಎಂಬ ಸತ್ಯ ತಿಳಿದರೂ, ಆ ತಾಯಿ ಕರುಳಿನ ಕುಡಿತಿನ ಮೇಲೆ ಯಾವುದೇ ಪೊಲೀಸ್ ಕೇಸ್ ಜರುಗಿಸಲು ನಿರಾಕರಿಸಿದ್ದಾರೆ. ಮಗಳನ್ನು ಜೈಲಿಗೆ ಕಳುಹಿಸುವ ಬದಲು, ಆಕೆಯನ್ನು ತಿದ್ದಿ ಬುದ್ಧಿ ಕಲಿಸಿ ಒಳ್ಳೆಯ ದಾರಿಗೆ ತರುವುದೇ ಸರಿಯಾದ ಮಾರ್ಗ ಎಂದು ತಾಯಿ ನಿರ್ಧರಿಸಿದ್ದಾರೆ. ಸದ್ಯ ಬಾಲಕಿಗೆ ಮೊಬೈಲ್‌ನಿಂದ ದೂರವಿರಲು ಸೂಚಿಸಲಾಗಿದ್ದು, ಇಂದಿನ ಡಿಜಿಟಲ್ ಯುಗದಲ್ಲಿ ಪೋಷಕರು ತಮ್ಮ ಮಕ್ಕಳ ಮೊಬೈಲ್ ಚಟುವಟಿಕೆಗಳ ಮೇಲೆ ತೀವ್ರ ನಿಗಾ ಇಡಬೇಕು ಎಂದು ತಜ್ಞರು ಎಚ್ಚರಿಸಿದ್ದಾರೆ.

    ##FamilyFirst #ParentingAlert #DigitalAddiction##TeensMentalHealth #LucknowIncident

    COMMENTS

    Login with Gmail to comment

    ಇನ್ನಷ್ಟು ಸುದ್ದಿ

    ಜೂನ್ 30,ಪ್ಲಾಸ್ಟಿಕ್ ನೋಟುಗಳು ಬರುತ್ತಿವೆಯೇ? – ವೈರಲ್ ಸುದ್ದಿಯ ಹಿಂದಿನ ವಿಷಯ
    ಫ್ರಿಡ್ಜ್ ರಿಪೇರಿಗೆ ಬಂದವ ಮನೆ ಲೂಟಿ ಪರಾರಿ…!ಬಿ ಅಲರ್ಟ್ ‼️
    ವಿಜಯ್ ತಳಪತಿ ಸಂಗೀತಾ ವಿಚ್ಛೇದನ ವಿಚಾರ: 27 ವರ್ಷದ ದಾಂಪತ್ಯಕ್ಕೆ ತೆರೆ? ₹250 ಕೋಟಿ ಸೆಟ್ಲ್‌ಮೆಂಟ್ ಚರ್ಚೆ!!
    ಮೂಡಿಗೆರೆ ತಾಲ್ಲೂಕಿನಲ್ಲಿ ಭಾರಿ ಗಾಳಿ-ಮಳೆ ಅಬ್ಬರ
    ಸಾಲದ ಭಾರವೂ ಶಿಸ್ತಿನ ಮುಂದೆ ಸೋಲುತ್ತದೆ…! ಇದಕ್ಕೆ ಸಾಕ್ಷಿಯೇ ಸಾಕ್ಷಿ..!₹80 ಲಕ್ಷ ಸಾಲ-1 ವರ್ಷ ಮತ್ತು ಒಂದು ಡೆಡಿಕೇಟೆಡ್ ಟಾರ್ಗೆಟ್..!
    ಚಾಟ್‌ಜಿಪಿಟಿ ಹುಡುಕಾಟದ ಬಳಿಕ ಡಬಲ್ ಮರ್ಡರ್..!ತಾಯಿ-ಸಹೋದರನ ಹತ್ಯೆಗೆ AI ಹುಡುಕಾಟ..
    ಗೃಹ ಜ್ಯೋತಿ ….ಯೋಜನೆ ಪರಿಶೀಲನೆಗೆ ಜುಲೈ 31 ಅಂತಿಮ ಗಡುವಲ್ಲ; ಮೆಸ್ಕಾಂ ವ್ಯಾಪ್ತಿಯಲ್ಲೂ ಆಗಸ್ಟ್ ಅಂತ್ಯದವರೆಗೆ ಸರ್ವೇ ಮುಂದುವರಿಕೆ
    ಬರ್ಗಿ ಅಣೆಕಟ್ಟಿನಲ್ಲಿ ಭೀಕರ ದುರಂತ-ಕರುಳು ಹಿಂಡುವ ದೃಶ್ಯ ಅಮ್ಮ-ಮಗು ಅಪ್ಪಿಕೊಂಡೇ ಜಲಸಮಾದಿ ಸಂತೋಷದ ಪ್ರವಾಸದಿಂದ ಶೋಕದ ಸಾಗರಕ್ಕೆ
    ಭೀಕರ ಅಪಘಾತಕ್ಕೆ ಸ್ಥಳೀಯ ನಾಯಕ ಸೇರಿ ಇಬ್ಬರು ದುರ್ಮರಣ 
    ದೆಹಲಿ ಜಂತರ್ ಮಂತರ್‌ನಲ್ಲಿ ಏನಾಗುತ್ತಿದೆ?ವಿದ್ಯಾರ್ಥಿಗಳ ಕೋಪದ ಸ್ಫೋಟಕ್ಕೆ ದೆಹಲಿ ಸಾಕ್ಷಿ!
    594 ಕಿಮೀ ಗಂಗಾ ಎಕ್ಸ್‌ಪ್ರೆಸ್‌ ವೇ ..!ಮೀರಟ್‌ನಿಂದ ಪ್ರಯಾಗರಾಜ್‌ವರೆಗೆ -ದೇಶದ ಪ್ರಗತಿಗೆ ಮತ್ತೊಂದು ಮೈಲುಗಲ್ಲು 
    ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರನ್ನು ಭೇಟಿಯಾದ ಡಾ. ಮೋಹನ್ ಆಳ್ವ
    ಮಳೆ ಬರುತ್ತದೆ ಎಂದಾಗ ರಜೆ ಇಲ್ಲ… ರಜೆ ಕೊಟ್ಟ ದಿನ ಮಳೆಯೇ ಇಲ್ಲ!ಹವಾಮಾನ ಮುನ್ಸೂಚನೆನಾ? ಖಚಿತ ಭವಿಷ್ಯವಾಣಿಯಾ? ಮಳೆ–ರಜೆ ಗೊಂದಲಕ್ಕೆ ಕಾರಣವೇನು?
    ಉಮ್ಮತ್ತಿ ಹಣ್ಣು ಆನ್‌ಲೈನ್‌ನಲ್ಲೂ ಸಿಗುತ್ತಾ? ಗ್ರಾಹಕರೇ ಎಚ್ಚರ!
    ಮಂಗಳೂರಿನಲ್ಲಿ ಮುಂಜಾನೆ ನಡೆದ ರೌಡಿಶೀಟರ್ ಹತ್ಯೆ – ದುಷ್ಕರ್ಮಿಗಳ  ಜಾಡು ಬೆನ್ನಟ್ಟಿದ ಪೊಲೀಸ್‌ ಪಡೆ….ಮಹತ್ವದ ಸುಳಿವು…..!
    ಜಿಮ್,“ಫಿಟ್ನೆಸ್ ಸೆಂಟರ್‌ಗಳಲ್ಲಿ ಹೆಚ್ಚುತ್ತಿರುವ ಅಪಾಯಕಾರಿ ಸಂಬಂಧಗಳು: ಜಿಮ್ ಟ್ರೈನರ್ ಆತ್ಮಹತ್ಯೆ
    🛑 ನಾಗರಮಠದಲ್ಲಿ ಅವೈಜ್ಞಾನಿಕ ಮರಳುಗಾರಿಕೆ ವಿರುದ್ಧ ಗ್ರಾಮಸ್ಥರ ಆಕ್ರೋಶ
    ಹೆಡ್‌ಲೈಟ್ ಇಲ್ಲ… ಮೊಬೈಲ್ ಟಾರ್ಚ್‌ನಲ್ಲೇ ಓಡಿದ ಸರ್ಕಾರಿ ಬಸ್!
    108 ಆರೋಗ್ಯ ಕವಚ'”ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ಇನ್ಮುಂದೆ ಆಂಬ್ಯುಲೆನ್ಸ್ ನಿಮ್ಮ ಮನೆಬಾಗಿಲಿಗೆ! 
    ಅಮೆರಿಕದ ಪರ್ಡ್ಯೂ ವಿಶ್ವವಿದ್ಯಾಲಯದಲ್ಲಿ ಯು.ಟಿ. ಖಾದರ್ – ಕಳಪೆ ಆಹಾರಕ್ಕೆ ಕಟ್ಟುನಿಟ್ಟು,ಕರ್ನಾಟಕದ ಆಹಾರ ಸುರಕ್ಷತೆಗೆ ಜಾಗತಿಕ ಮಟ್ಟದ ಯೋಜನೆ!
    ಸಂಸದ ಸಂಜಯ್ ಅರೋರ ಬಂಧನ…. ಉಳಿದ ಮೂರು ಸಂಸದರನ್ನು ಸೆಳೆಯಲು ಈ ಅನೈತಿಕ ಮಾರ್ಗ ಎಂದು ಎಎಪಿ.
    ಅಕ್ರಮವಾಗಿ ಲಕ್ಷಾಂತರ ಮೌಲ್ಯದ ಎತ್ತುಗಳನ್ನು ವಧೆಗೆ….!
    ಯುಎಇಯಿಂದ ಯುರೋಪ್ ತನಕ ಮೋದಿ ಐತಿಹಾಸಿಕ ವಿದೇಶ ಪ್ರವಾಸ…ಡಿಪ್ಲೊಮಸಿ – ತೈಲದಿಂದ ತಂತ್ರಜ್ಞಾನವರೆಗೆ ಇದು ಭಾರತದ ಭವಿಷ್ಯದ ತಂತ್ರಾತ್ಮಕ ನಡೆ ?!
    ನಂದಿಬೆಟ್ಟದ ಬಳಿ ಪ್ರೇಯಸಿ ಕೊಲೆಗೈದು ಪ್ರಿಯಕರನ ಆತ್ಮಹತ್ಯೆ ಯತ್ನ?ಲವ್ ಜಿಹಾದ್’ ಆರೋಪ ಹೊರಿಸಿದ ತಾಯಿ!
    Political Heatwave 2026:ದಕ್ಷಿಣದಲ್ಲಿ ಅಧಿಕಾರ ಆಟ, ಅಸ್ಸಾಂನಲ್ಲಿ ಅಬ್ಬರ..!
    ಸುಳ್ಯ:  ಕರ್ತವ್ಯದಲ್ಲಿದ್ದ ಉಪನ್ಯಾಸಕ ಕುಸಿದು ಬಿದ್ದು ಸಾವು
    ಕರಾವಳಿಯ ಭವಿಷ್ಯ ರೂಪಿಸಲು ಸಿಎಂನ ಮಾಸ್ಟರ್ ಪ್ಲಾನ್! ಹೆಲಿ ಟೂರಿಸಂನಿಂದ ಹಿಡಿದು ಸಾವಿರಾರು ಉದ್ಯೋಗಗಳವರೆಗೆ…ಕ್ಯಾಬಿನೆಟ್ ಸಭೆ ಮೇಲೆ ಎಲ್ಲರ ಕಣ್ಣು.
    ವೈರಲ್ ಆದ ಒಂದೇ ಒಂದು ಪಂಚ್ … ಐಸಿಯು ಕೋಮಾವರೆಗೆ ! ಬೆಚ್ಚಿಬೀಳಿಸಿದ ಜಿಮ್ ಪಂಚ್ ವೀಡಿಯೋ.ದೇಹ ಗಟ್ಟಿಯಾಗಿತ್ತು… ಮನಸ್ಸು ದುರ್ಬಲವಾಗಿತ್ತು!
    ಸಿಐಡಿ ಹೆಸರಿನಲ್ಲಿ ಡಿಜಿಟಲ್ ಅರೆಸ್ಟ್: ವಂಚಕರ ಬಲೆಯಿಂದ ಜಸ್ಟ್ ಎಸ್ಕೇಪ್
    ಭಾರತ ಬಗ್ಗೆ ಟ್ರಂಪ್ ಡಬಲ್ ಸ್ಟ್ಯಾಂಡ್…!ವಿವಾದ ಸೃಷ್ಟಿಸಿ, ಬಳಿಕ ಸಮಾಧಾನದ ಮಾತು