📍 Karavali Maruta
LIVE | CONTACT
ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

ಇನ್‌ಸ್ಟಾಗ್ರಾಮ್ ವ್ಯಾಮೋಹಕ್ಕೆ ಹೆತ್ತ ತಾಯಿಗೇ ವಿಷವಿಕ್ಕಿದ ಮಗಳು..ಪ್ರೀತಿಯ ಹೆಸರಲ್ಲಿ ಹಾದಿ ತಪ್ಪಿದ ಹದಿಹರೆಯ ಮುಂದೇನಾಯತು?

ಉತ್ತರ ಪ್ರದೇಶದ ಲಕ್ನೋದಲ್ಲಿ ನಡೆದ ಈ ಘಟನೆ ಇಂದಿನ ಡಿಜಿಟಲ್ ಯುಗದ ಕರಾಳ ಮುಖ ಹಾಗೂ ಹದಿಹರೆಯದ ಮಕ್ಕಳ ಹಾದಿ ತಪ್ಪುತ್ತಿರುವ ರೀತಿಗೆ ಕನ್ನಡಿ ಹಿಡಿದಿದೆ.

ಸಾಮಾನ್ಯವಾಗಿ ಹೆಣ್ಣುಮಕ್ಕಳಿಗೆ ತಾಯಿ ಎಂದರೆ ಜೀವ. ಆದರೆ ಉತ್ತರ ಪ್ರದೇಶದ ಲಕ್ನೋದ ಕೃಷ್ಣಾನಗರದಲ್ಲಿ ನಡೆದ ಘಟನೆ ಇಡೀ ಸಮಾಜ ತಲೆತಗ್ಗಿಸುವಂತೆ ಮಾಡಿದೆ. ಇನ್‌ಸ್ಟಾಗ್ರಾಮ್ ಪ್ರಿಯಕರನ ಜೊತೆ ತಡರಾತ್ರಿಯವರೆಗೆ ಗುಟ್ಟಾಗಿ ಚಾಟಿಂಗ್ ಮಾಡಲು, ೧೫ ವರ್ಷದ ಅಪ್ರಾಪ್ತ ಮಗಳೊಬ್ಬಳು ಹೆತ್ತ ತಾಯಿಯ ಊಟದಲ್ಲಿ ದಿನವೂ ನಿದ್ದೆ ಮಾತ್ರೆ ಬೆರೆಸುತ್ತಿದ್ದ ಘೋರ ಸತ್ಯ ತಡವಾಗಿ ಬೆಳಕಿಗೆ ಬಂದಿದೆ. ಈ ದ್ರೋಹವನ್ನು ಕಂಡು ಹೆತ್ತ ಕರುಳು ಕಣ್ಣೀರು ಹಾಕಿದೆ.

ಮೂರು ತಿಂಗಳ ಕರಾಳ ಕೃತ್ಯ: ಬುಟಿಕ್ ಹಾಗೂ ಟಿಫಿನ್ ಸರ್ವೀಸ್ ನಡೆಸಿ ಕಷ್ಟಪಟ್ಟು ಸಂಸಾರ ತೂಗಿಸುತ್ತಿದ್ದ ಆ ತಾಯಿಗೆ ಕಳೆದ ಮೂರು ತಿಂಗಳಿಂದ ತೀವ್ರ ನಿಶ್ಯಕ್ತಿ, ಅತಿಯಾದ ನಿದ್ದೆ ಹಾಗೂ ತಲೆಸುತ್ತು ಕಾಣಿಸಿಕೊಳ್ಳುತ್ತಿತ್ತು. ಕಷ್ಟಪಟ್ಟು ದುಡಿಯುತ್ತಿರುವುದರಿಂದಲೇ ಆಯಾಸವಾಗುತ್ತಿದೆ ಎಂದು ಅವರು ಭಾವಿಸಿದ್ದರು. ಆದರೆ ದಿನದಿಂದ ದಿನಕ್ಕೆ ಆರೋಗ್ಯ ಕ್ಷೀಣಿಸಿದಾಗ ಅನುಮಾನಗೊಂಡು ವೈದ್ಯರನ್ನು ಸಂಪರ್ಕಿಸಿ ರಕ್ತ ಪರೀಕ್ಷೆ ಮಾಡಿಸಿದಾಗ, ಅವರ ರಕ್ತದಲ್ಲಿ ಅತಿಯಾದ ನಿದ್ದೆ ಮಾತ್ರೆಯ (Sleeping Pills) ಅಂಶಗಳು ಪತ್ತೆಯಾಗಿ ವೈದ್ಯರೇ ದಿಗ್ಭ್ರಮೆಗೊಂಡಿದ್ದರು.

ಪ್ರೀತಿಯ ಜಾಲ ಮತ್ತು ಸಂಚು: ವೈದ್ಯರ ವರದಿ ಬಂದ ನಂತರ ಮನೆಯಲ್ಲಿ ತೀವ್ರ ವಿಚಾರಣೆ ನಡೆಸಿದಾಗ ಅಸಲಿ ಅಪರಾಧಿ ಸ್ವಂತ ಮಗಳೇ ಎಂಬುದು ಬಯಲಾಗಿದೆ. ಇನ್‌ಸ್ಟಾಗ್ರಾಮ್ ಮೂಲಕ ಪರಿಚಯವಾಗಿದ್ದ ಪಕ್ಕದ ಮನೆಯ ಹುಡುಗನ ಜೊತೆ ರಾತ್ರಿ ಇಡೀ ಮಾತನಾಡಲು, ಅಮ್ಮ ತನಗೆ ತಡೆಯಾಗಬಾರದು ಎಂದು ಈ ಕೃತ್ಯ ಎಸಗಿರುವುದಾಗಿ ಬಾಲಕಿ ಒಪ್ಪಿಕೊಂಡಿದ್ದಾಳೆ. ಅಷ್ಟೇ ಅಲ್ಲದೆ, ಆ ಹುಡುಗನೇ ತನಗೆ ನಿದ್ದೆ ಮಾತ್ರೆಗಳನ್ನು ತಂದುಕೊಟ್ಟು, ಈ ಹಾದಿ ತಪ್ಪಿಸುವ ಐಡಿಯಾ ನೀಡಿದ್ದಾಗಿ ಹೆದರುತ್ತಲೇ ವಿವರಿಸಿದ್ದಾಳೆ.

ಕೌನ್ಸೆಲಿಂಗ್ ಕೇಂದ್ರದಲ್ಲಿ ಬಾಲಕಿ: ವಿಷಯ ತಿಳಿಯುತ್ತಿದ್ದಂತೆ ಬಾಲಕಿಯನ್ನು ಲಕ್ನೋದ ಲೋಕಬಂಧು ಆಸ್ಪತ್ರೆಯ ‘ಒನ್ ಸ್ಟಾಪ್ ಸೆಂಟರ್’ಗೆ ಕೌನ್ಸೆಲಿಂಗ್‌ಗಾಗಿ ದಾಖಲಿಸಲಾಗಿದೆ. ಸೆಂಟರ್ ಮ್ಯಾನೇಜರ್ ಅರ್ಚನಾ ಸಿಂಗ್ ಅವರ ಪ್ರಕಾರ, ಮೊಬೈಲ್ ಮತ್ತು ಸಾಮಾಜಿಕ ಜಾಲತಾಣಗಳ ಅತಿಯಾದ ವ್ಯಸನದಿಂದ ಬಾಲಕಿ ಇಂತಹ ಕ್ರೂರ ನಿರ್ಧಾರ ತಳೆದಿದ್ದಾಳೆ. ಸದ್ಯ ಆಕೆಗೆ ತಜ್ಞರಿಂದ ಮಾನಸಿಕ ತಿಳುವಳಿಕೆ ಮೂಡಿಸಲಾಗುತ್ತಿದ್ದು, ನಡವಳಿಕೆಯಲ್ಲಿ ಸುಧಾರಣೆ ಕಂಡುಬರುತ್ತಿದೆ.

ಕ್ಷಮಿಸಿದ ತಾಯಿ – ಸಮಾಜಕ್ಕೆ ದೊಡ್ಡ ಪಾಠ: ತನ್ನ ಮಗಳು ತನಗೆ ನಿಧಾನವಾಗಿ ವಿಷ ನೀಡುತ್ತಿದ್ದಳು ಎಂಬ ಸತ್ಯ ತಿಳಿದರೂ, ಆ ತಾಯಿ ಕರುಳಿನ ಕುಡಿತಿನ ಮೇಲೆ ಯಾವುದೇ ಪೊಲೀಸ್ ಕೇಸ್ ಜರುಗಿಸಲು ನಿರಾಕರಿಸಿದ್ದಾರೆ. ಮಗಳನ್ನು ಜೈಲಿಗೆ ಕಳುಹಿಸುವ ಬದಲು, ಆಕೆಯನ್ನು ತಿದ್ದಿ ಬುದ್ಧಿ ಕಲಿಸಿ ಒಳ್ಳೆಯ ದಾರಿಗೆ ತರುವುದೇ ಸರಿಯಾದ ಮಾರ್ಗ ಎಂದು ತಾಯಿ ನಿರ್ಧರಿಸಿದ್ದಾರೆ. ಸದ್ಯ ಬಾಲಕಿಗೆ ಮೊಬೈಲ್‌ನಿಂದ ದೂರವಿರಲು ಸೂಚಿಸಲಾಗಿದ್ದು, ಇಂದಿನ ಡಿಜಿಟಲ್ ಯುಗದಲ್ಲಿ ಪೋಷಕರು ತಮ್ಮ ಮಕ್ಕಳ ಮೊಬೈಲ್ ಚಟುವಟಿಕೆಗಳ ಮೇಲೆ ತೀವ್ರ ನಿಗಾ ಇಡಬೇಕು ಎಂದು ತಜ್ಞರು ಎಚ್ಚರಿಸಿದ್ದಾರೆ.

##FamilyFirst #ParentingAlert #DigitalAddiction##TeensMentalHealth #LucknowIncident

COMMENTS

Login with Gmail to comment

ಇನ್ನಷ್ಟು ಸುದ್ದಿ

“ನನ್ನ ಮಗಳನ್ನೂ ಅದೇ ಕೋಟೆಯಿಂದ ಕೆಳಗೆ ತಳ್ಳಿ!” – ನಿಶ್ಚಿತ ವರನ ಹತ್ಯೆಗೈದ ಸಿಯಾ ಹೆತ್ತವರ ಆಕ್ರೋಶದ ಹೇಳಿಕೆ
ಹೋಟೆಲ್ ಉದ್ಯಮ ಉಳಿಸಲು ಜಿಎಸ್‌ಟಿ ಕಡಿತ ಅಗತ್ಯ-ಕರ್ನಾಟಕ ಹೋಟೆಲ್ ಸಂಘದ ಆಗ್ರಹ
ಅರೆಬೈಲ್ ಘಾಟ್ ನ ಕಾರು ಅಫಘಾತ ವ್ಯವಸ್ಥಿತ ಕೊಲೆ…!
ತುರ್ತು ಎಚ್ಚರಿಕೆ ‼️ಹಿಪ್ನೋಟೈಸಿಂಗ್ ಸ್ವಾಮಿಗಳು ನಿಮ್ಮ ಬಳಿಯೂ ಬರಬಹುದು
“ಹಿಜಾಬ್ ಆದೇಶಕ್ಕೆ ಕರಾವಳಿಯಲ್ಲಿ ಬಿಜೆಪಿ ಸಿಡಿದೆದ್ದಿದೆ!ಓಲೈಕೆಗಾಗಿ ಶಿಕ್ಷಣವನ್ನೇ ಬಲಿ ಕೊಟ್ಟ ಕಾಂಗ್ರೆಸ್” – ಬಿಜೆಪಿ ವಾಗ್ದಾಳಿ.
“ವಾಹನ ಮಾರಾಟ-RC ಬದಲಾವಣೆ  ಅಗತ್ಯ.. ಇಲ್ಲವಾದರೆ ಕಾನೂನು ಸಮಸ್ಯೆಗಳು ತಪ್ಪಿದ್ದಲ್ಲ..!” ಹೈಕೋರ್ಟ್
ಧರ್ಮಸ್ಥಳ-ಚಿಕ್ಕಮಗಳೂರು ಟ್ರಿಪ್‌ಗೆ ಹೊರಟ ಸ್ವಿಗ್ಗಿ ಡೆಲಿವರಿ ಬಾಯ್ಸ್… ಅರಬೈಲ್ ಘಾಟ್‌ನಲ್ಲಿ ಭೀಕರ ಅಪಘಾತ, 6 ಜೀವಗಳು ಅಂತ್ಯ!
PoKನಲ್ಲಿ ರಕ್ತಪಾತ-ಪಾಕಿಸ್ತಾನದ ವಿರುದ್ಧ ಭಾರತದ ತೀವ್ರ ಆಕ್ರೋಶ!ಗುಂಡಿನ ಮಳೆಯ ನಡುವೆ ಜೀವ ಕಳೆದುಕೊಂಡ ಪ್ರತಿಭಟನಾಕಾರರು!
ಕಪ್ಪೆ ಚಿಪ್ಪು ದುರಂತಕ್ಕೆ ಮತ್ತೆರಡು ಜೀವ ಬಲಿ, ಬಲಿಯ ಸಂಖ್ಯೆ ಏರುವ ಸಾಧ್ಯತೆ
ಜೀವನ್ಮರಣ ಹೋರಾಟದಲ್ಲೂ ಗೆಳೆಯರ ಬದುಕಿಸಿದ 14ರ ಬಾಲಕನ ರೋಚಕ  ಸ್ಟೋರಿ 
ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು: ದಯಾ ಮರಣಕ್ಕೆ ಅನುಮತಿ
“ಮಾರಿಕೊಂಡ ಮಾಧ್ಯಮದವರು ಯಾರು?” ಪ್ರಶ್ನೆಗೆ ಪ್ರಕಾಶ್ ರಾಜ್ ನಿರುತ್ತರ”ಪತ್ರಿಕಾಗೋಷ್ಠಿಯಲ್ಲೇ ಶುರುವಾದ ಭಾರೀ ವಿವಾದ ಏನು?
ಆಡುತ್ತಾ ಆಡುತ್ತಲೇ ಜೀವ ಬಿಟ್ಟ ಫಿಟ್ ಆಗಿದ್ದ ಯುವಕ್ರಿಕೆಟಿಗ… ನೀರು ಕುಡಿದ ತಕ್ಷಣವೇ ಕುಸಿದು ಬಿದ್ದ ರಣಜಿ ಆಟಗಾರ… 
ಕರ್ನಾಟಕ ಎಸ್‌ಎಸ್‌ಎಲ್‌ಸಿ 2026 ಫಲಿತಾಂಶ: ಇತಿಹಾಸದ ಅತ್ಯಧಿಕ ಉತ್ತೀರ್ಣ ಪ್ರಮಾಣ ಮತ್ತು ಟಾಪರ್‌ಗಳ ಸಾಧನೆ
ಮಂಗಳೂರು ವಿಮಾನ ನಿಲ್ದಾಣಕ್ಕೆ ಪ್ಲಾಟಿನಂ ಕಿರೀಟ!
ಗೃಹ ಬಳಕೆಯ LPG ಗ್ರಾಹಕರಿಗೆ Aadhaar e-KYC ಕಡ್ಡಾಯ – PMUY ಫಲಾನುಭವಿಗಳಿಗೆ ವಾರ್ಷಿಕ ಬಯೋಮೆಟ್ರಿಕ್ ಪರಿಶೀಲನೆ
ಒಂದು ಸಹಿ… ಲಕ್ಷಾಂತರ ರೂ. ಹೊಣೆಗಾರಿಕೆಯ ಶಾಕ್!ಸಹಕಾರ ಸಂಸ್ಥೆಯಲ್ಲಿ ನಡೆದ ಅಕ್ರಮದ ಸತ್ಯ ಬಯಲು..
ಬಾಲಿವುಡ್‌ ಮಿಸ್ಟರ್ ಪರ್ಫೆಕ್ಷನಿಸ್ಟ್ ಆಮೀರ್ ಖಾನ್ ಗೆ 60ರ ವಯಸ್ಸಿನಲ್ಲಿ  ಸಿಕ್ಕ ಪರ್ಫೆಕ್ಟ್ ಸಂಗಾತಿ……?!ಎಷ್ಟನೇ ಮದುವೆ?!
ದಾವಣಗೆರೆ & ಬಾಗಲಕೋಟೆ ಬೈಎಲೆಕ್ಷನ್ ಬಿಗ್ ಬ್ಲಾಸ್ಟ್!
₹1270 ಕೋಟಿ ಕಾನ್ಟ್ರಾಕ್ಟ್ ಹಗರಣ -CM ಖಾಂಡು ಕುಟುಂಬ ವಿಚಾರಣೆ-ಸುಪ್ರೀಂಕೋರ್ಟ್ ಸಿಬಿಐಗೆ ಆದೇಶ..
ದೊಡ್ಡ ಬಜೇಟ್  ತುಳು ಸಿನಿಮಾ`ಗಜಾನನ ಕ್ರಿಕೆಟರ್ಸ್’ ಮೇ 22 ರಂದು ತೆರೆಗೆ
ಜನಪ್ರತಿನಿಧಿಗಳಿಗೆ ಕೆಲಸ ,ಜನಸೇವೆ ಬೇಡ ,ಪ್ಲೆಕ್ಸ್ ಮಾತ್ರ ಫುಲ್ ಸೈಜ್ …ಕಾನೂನು ಇದೆ… ಪಾಲನೆ ಮಾತ್ರ ಇಲ್ಲ!
ನಾಸಿಕ್‌ನ Tata Consultancy Services ಕಚೇರಿಯಲ್ಲಿ ಗಂಭೀರ ಆರೋಪಗಳ ನಡುವೆ ಉದ್ಯೋಗಿಗಳಿಗೆ ವರ್ಕ್ ಫ್ರಮ್ ಹೋಮ್ — ಸುರಕ್ಷತೆಗೆ ಮೊದಲ ಆದ್ಯತೆ.
ಹುಬ್ಬಳ್ಳಿ ಲವ್ ಜಿಹಾದ್..!?ಮೂರು ವರ್ಷದ ಸಂಬಂಧ, friendship, ಫ್ಯಾಮಿಲಿ closeness-ಕ್ಷಣದಲ್ಲೇ ಬಾರಿ ಸಂಘರ್ಷ..!
ಮಂಗಳೂರು ಏರ್‌ಪೋರ್ಟ್ ಬಳಿ ಬರ್ತಿದೆ ಲಕ್ಸುರಿ ಇಂಟರ್‌ನ್ಯಾಷನಲ್ ಹೋಟೆಲ್!
ಉಡುಪಿಯ ಪ್ರತಿಷ್ಠಿತರನ್ನೇ ಟಾರ್ಗೆಟ್ ಮಾಡಿದ ಜೀನತ್ ವಿರುದ್ಧ ಮತ್ತೊಂದು ದೂರು? ₹15 ಲಕ್ಷ ಮೋಸದ ಹೊಸ ಆರೋಪ!?
165 ಹೆಣ್ಮಕ್ಕಳು ತಮ್ಮದಲ್ಲದ ತಪ್ಪಿಗೆ ಹತ್ಯೆಗೆ ಒಳಗಾದರು 
“ಮಂಜಿನ ನಡುವೆ ಕ್ಷಣಾರ್ಧದಲ್ಲಿ ಮಾಯವಾದ ಮಗಳು”ಶ್ರೀನಂದಾ ಶವವಾಗಿ ಪತ್ತೆ…!
ಒಂದು ದೇಶವನ್ನೇ ಮಟ್ಟಾಶ್ ಮಾಡುವಷ್ಟು ನ್ಯೂಕ್ಲಿಯರ್ ಪವರ್ stock ಇರಾನ್ನಲ್ಲಿ ಇದ್ಯಾ !?
ಸಚಿವ ಜಮೀರ್ ಅಹಮದ್ ಹಚ್ಚಿದ ಪಟಾಕಿಗೆ ಕಾಂಗ್ರೆಸ್ ಕೋಟೆಯಲ್ಲಿ ಬಿರುಕು..!?