📍 Karavali Maruta
  • LOGIN
  • ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

    ಇಬ್ಬರ ಸಣ್ಣ ಜಗಳದ ಎಫೆಕ್ಟ್ ನೋಡಿ..ಕಡಬದಲ್ಲಿ ಹೈಡ್ರಾಮಾ!ಸಿಲ್ಲಿAngry ಮೂಡ್‌ನಲ್ಲಿ ಎಸೆದ car ಕೀ ಚರಂಡಿಗೆ…

    1 ಗಂಟೆಯ ‘ಸರ್ಚ್ ಆಪರೇಷನ್’ಗೆ ಇಡೀ ಊರನ್ನೇ ಹುಡುಕಾಟಕ್ಕೆ ಇಳಿಸಿದ ಯುವತಿ ! 

    ಕಡಬ:ಈಶ್ವರಮಂಗಲ ಮೂಲದ ಯುವಕನೋರ್ವ ಕಡಬದ ತನ್ನ ಪ್ರೇಯಸಿ ಎನ್ನಲಾದ ಯುವತಿಯ ಜನ್ಮದಿನದ ಅಂಗವಾಗಿ ಶುಭಾಶಯ ಕೋರಲು ಬಾಡಿಗೆ ಕಾರಿನಲ್ಲಿ ಆಗಮಿಸಿದ್ದ ಎನ್ನಲಾಗಿದೆ. ಕಡಬ ಸಂತೆಕಟ್ಟೆ ಬಳಿ ಇಬ್ಬರೂ ಭೇಟಿಯಾದಾಗ, ಯಾವುದೋ ವಿಷಯಕ್ಕೆ ಸಂಬಂಧಿಸಿದಂತೆ ಇಬ್ಬರ ನಡುವೆ ಸಣ್ಣ ವಾಗ್ವಾದ ನಡೆದಿದೆ ಎನ್ನಲಾಗಿದೆ.ಈ ವೇಳೆ ಸಣ್ಣ ವಿಚಾರಕ್ಕೆ ಕೋಪಗೊಂಡ ಯುವತಿ ಕಾರಿನ ಕೀಯನ್ನು ಕಸಿದುಕೊಂಡು ಸಮೀಪದ ಚರಂಡಿಗೆ ಎಸೆದಿದ್ದಾಳೆ ಎನ್ನಲಾಗಿದೆ.

    ಕೆಲವೊಮ್ಮೆ ಕೋಪದ ಕ್ಷಣದಲ್ಲಿ ಮಾಡುವ ಸಣ್ಣ ಕೆಲಸವೇ ಪಜೀತಿಗೆ ಕಾರಣವಾಗುತ್ತೆ ಯುವಕ-ಯುವತಿಯ ನಡುವಿನ ಸಣ್ಣ ಮಾತಿನ ಚಕಮಕಿಯಲ್ಲಿ, ಚರಂಡಿಗೆ ಬಿದ್ದ ಕಾರಿನ ಕೀ ಪತ್ತೆಹಚ್ಚಲು ಒಂದು ಗಂಟೆಗೂ ಹೆಚ್ಚು ಕಾಲ ಹುಡುಕಾಟ ನಡೆಸಿದ ಪ್ರಸಂಗ ನಡೆದಿದೆ.

     ನಂತರ ‘ಸರ್ಚ್ ಆಪರೇಷನ್’ ಶುರುವಾಯಿತು! ಕಾರಿನ ಕೀ ಚರಂಡಿಗೆ ಬಿದ್ದಿದ್ದರಿಂದ ಕಾರನ್ನು ಅಲ್ಲಿಂದ ಕದಲಿಸಲು ಸಾಧ್ಯವಾಗದೆ, ಏನು ತೋಚದೇ ಯುವಕ ಹಾಗೂ ಸ್ಥಳೀಯರು ಕೀ ಪತ್ತೆಗಾಗಿ ಚರಂಡಿಯ ಸುತ್ತಮುತ್ತ ಹುಡುಕಾಟ ಆರಂಭಿಸಿದರು.ಒಂದು ಗಂಟೆಗೂ ಹೆಚ್ಚು ಕಾಲ ಚರಂಡಿಯ ಕೊಳಚೆ ನೀರು, ಹೂಳು ಹಾಗೂ ಗಿಡಗಂಟಿಗಳ ನಡುವೆ ಹುಡುಕಾಟ ನಡೆಸಲಾಯಿತು. ಸ್ಥಳೀಯರು ಕೂಡ ಈ ವಿಚಿತ್ರ ಪ್ರಸಂಗವನ್ನು ನೋಡಲು ಜಮಾಯಿಸಿದ್ದು, ಕೆಲವರು ಹುಡುಕಾಟದಲ್ಲೂ ಕೈಜೋಡಿಸಿದರು. ಸಣ್ಣ ಕೋಪದ ಕ್ಷಣದಲ್ಲಿ ಎಸೆದ ಒಂದು ಕೀ, ಇಡೀ ಪ್ರದೇಶದಲ್ಲಿ ದೊಡ್ಡ ಗೊಂದಲವನ್ನೇ ಸೃಷ್ಟಿಸಿತು!

    ಈ ಘಟನೆಯ ದೃಶ್ಯಗಳು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, “ಕೋಪದಲ್ಲಿ ಕೀ ಎಸೆದರೆ, ಬಳಿಕ ಹುಡುಕಾಟಕ್ಕೆ ಇಡೀ ಊರೇ ಬೇಕಾಗಬಹುದು!” ಇದೇ ನಿತ್ಯದ ಜೀವನ ಪಾಠ… ಎಂಬ ರೀತಿಯ ಪ್ರತಿಕ್ರಿಯೆಗಳು ವ್ಯಕ್ತವಾಗುತ್ತಿವೆ.

    ಜನನಿಬಿಡ ಪ್ರದೇಶವಾದ ಸಂತೆಕಟ್ಟೆಯಲ್ಲಿ ಚರಂಡಿಯೊಳಗೆ ಕಾರಿನ ಕೀ ಹುಡುಕುತ್ತಿರುವ ದೃಶ್ಯ ಕಂಡು ಸಾರ್ವಜನಿಕರು ಕುತೂಹಲದಿಂದ ಜಮಾಯಿಸಿದರು. ಕೀ ಸಿಗದ ಕಾರಣ ಹುಡುಕಾಟವನ್ನು ಸದ್ಯ ಸ್ಥಗಿತಗೊಳಿಸಲಾಗಿದೆ.ಹಲವು ಗಂಟೆಗಳ ಕಾಲನಡೆದಹುಡುಕಾಟವೂ ಫಲ ನೀಡದ
    ಹಿನ್ನೆಲೆಯಲ್ಲಿ ಯುವಕ ಕಾರನ್ನು ಅಲ್ಲಿಯೇ ಬಿಟ್ಟು, ಸಂಜೆ ಸುಮಾರು 7.30ರ ವೇಳೆಗೆ ರಿಕ್ಷಾದಲ್ಲಿ ಮನೆಗೆ ತೆರಳಿದ್ದಾನೆ ಎಂದು ತಿಳಿದುಬಂದಿದೆ. ಘಟನೆ ಹಾಸ್ಯಾಸ್ಪದ ತಿರುವು ಪಡೆದಿದ್ದರೂ, ಸಂತೆಕಟ್ಟೆಯಲ್ಲಿ ಕೆಲಕಾಲ ಕುತೂಹಲದ ವಾತಾವರಣ ನಿರ್ಮಾಣವಾಗಿತ್ತು.

    ##Kadaba #CarKeyDrama #ViralVideo #FunnyIncident #KarnatakaNews #LocalNews #TrendingNews

    COMMENTS

    Login with Gmail to comment

    ಇನ್ನಷ್ಟು ಸುದ್ದಿ

    ಮಂಗಳೂರಿಗೆ “ಅಮ್ಮ”ನ ಆಗಮನ ಭಕ್ತರಲ್ಲಿ ಸಡಗರವೂ ಸಡಗರ….. ನಾಳೆ ನಗರಕ್ಕೆ ಇಬ್ಬರು ಕೇಂದ್ರ ಸಚಿವರ ಆಗಮನ
    ಆನ್ಲೈನ್ ವಂಚಕರಿಂದ ಮಂಗಳೂರು ಡಾಕ್ಟರ್ ಒಬ್ಬರ ಏಳು ದಿನಗಳ ಕಾಲ ಹೌಸ್ ಅರೆಸ್ಟ್
    “ಅಮ್ಮನ ನೋವು ನೋಡಲಾಗಲಿಲ್ಲ…” ನಾಲ್ಕನೇ ಮಹಡಿಯಿಂದ ತಳ್ಳಿದ ಮಗ …
    ತೈಲ ಟ್ಯಾಂಕರ್ ಮೇಲೆ ಇರಾನ್ ಆತ್ಮಹತ್ಯಾ ದೋಣಿ ದಾಳಿ – ಭಾರತೀಯ ನಾವಿಕ ಸಾವು
    ಅಕ್ರಮ ಗಡಿ ದಾಟಿದವರಿಗೆ ಈಗ ಭಾರತದಲ್ಲಿ ನೋ ಎಂಟ್ರಿ!ಬಾಂಗ್ಲಾ ಗಡಿಯಲ್ಲಿ ಎನ್‌ಆರ್‌ಸಿ ಅಸ್ತ್ರ: ರಾಜಕೀಯಕ್ಕಿಂತ ರಾಷ್ಟ್ರೀಯ ಭದ್ರತೆ ಮುಖ್ಯ
    ಕಾಂಗ್ರೆಸ್‌ಗೆ ಹೊಸ ತಲೆನೋವು? ಅಹಿಂದ ಸಂಘಟನೆಯಿಂದ ‘ಪಕ್ಷ ವಿಭಜನೆ’ ಎಚ್ಚರಿಕೆ!
    ಶಿಕ್ಷಕರು ಹೊಡೆಯುತ್ತಾರೆಂಬ ಭಯಕ್ಕೆ ಮನೆ ಬಿಟ್ಟ 9ನೇ–10ನೇ ತರಗತಿ ವಿದ್ಯಾರ್ಥಿನಿಯರು..!ಎಲ್ಲಿದ್ದರು ಗೊತ್ತಾ..!
    ವರದಕ್ಷಿಣೆ ಕಿರುಕುಳ ಪ್ರಕರಣ ಹೈಕೋರ್ಟ್‌ನ ಮಹತ್ವದ ತೀರ್ಪು…!ಕಾನೂನಿನ ದುರುಪಯೋಗಕ್ಕೆ ಹೈಕೋರ್ಟ್ ಬ್ರೇಕ್..!
    ಮಿಜಾರಿನಲ್ಲಿ ರಸ್ತೆ ಕುಸಿತ, ಸಾರ್ವಜನಿಕರಲ್ಲಿ ಆತಂಕ ಮೊದಲ ಮಳೆಯಲ್ಲೇ ಕೊಚ್ಚಿಹೋಯ್ತು ಹೆದ್ದಾರಿ! ಕೋಟಿ ಕೋಟಿ ಕಾಮಗಾರಿಯ ಅಸಲಿ ಮುಖ ಬಯಲು? 
    ಕೊನೆಗೂ ಸೋತ ಖಾಕಿ….!!!
    ಕ್ಲೀನ್ ಮಂಗಳೂರು ಕನಸು ನಿಮ್ಮದಾಗಿದ್ದರೆ ಇಲ್ಲಿದೆ ದಾರಿ…ಸ್ವಚ್ಛ ಮಂಗಳೂರು ಅಭಿಯಾನ: ನಾಗರಿಕರ ಕೈಗೆ ಸಿಕ್ಕಿತು ವಾಟ್ಸಾಪ್ ಅಸ್ತ್ರ….!
    ವಿವಾಹಿತ ದಂಪತಿಗಳಿಗೆ ಜಂಟಿ ITR ವ್ಯವಸ್ಥೆ ತರಲು- ಸಂಸತ್ತಿನಲ್ಲಿ Raghav Chadha ಆಗ್ರಹ.
    ಪ್ರಕೃತಿಯ ಮುನಿಸಿಗೆ ಕರಗುತ್ತಿದೆ ಯುರೋಪ್ ….!ತಂತ್ರಜ್ಞಾನದ ಅಹಂಕಾರವನ್ನು ಸುಟ್ಟು ಬೂದಿ ಮಾಡುತ್ತಿರುವ ಯುರೋಪ್ ಹೀಟ್‌ವೇವ್!
    “ಅಮ್ಮ”ನ ಕಾರ್ಯಕ್ರಮದಲ್ಲಿ  ಕೇಂದ್ರ ಸಚಿವರಿಂದ ರಾಜಕೀಯ ಭಾಷಣ
    5 ವರ್ಷದಲ್ಲಿ ಮನೆ ಕಟ್ಟದಿದ್ದರೆ ಸರ್ಕಾರಿ ಸೈಟ್ ವಾಪಸ್..! ಸರ್ಕಾರದ ಹೊಸ ಕಠಿಣ ನಿಯಮ
    ಇಂದು ಮಾಜಿ ಸಚಿವರಿಂದ ಸೌಹಾರ್ದ ಇಫ್ತಾರ್ ಕೂಟ 
    ಸಮಾಜಸೇವಕನ ಮುಖವಾಡದ ಹಿಂದೆ ಡ್ರಗ್ಸ್ ದಂಧೆ?ಅದು ಆ್ಯಂಬುಲೆನ್ಸ್ ನಲ್ಲಿ ..!ಚಾಲಕ ಜಲೀಲ್ ಬಾಬಾ ಪರಾರಿ!ಆತನಿಗೆ ಆಶ್ರಯ ಅಥವಾ ಪರಾರಿಯಾಗಲು ಸಹಾಯ ಮಾಡಿದವರ ಮೇಲೂ ಕಾನೂನು ಕ್ರಮ
    ನಾಲ್ಕು ಮಕ್ಕಳನ್ನು ಹೆತ್ತ ಮಹಾತಾಯಿ, ಸದ್ಯಕ್ಕೆ ತಾಯಿ ಮಕ್ಕಳು ಸೇಫ್
    ಮ್ಯಾರಥಾನ್ ನಲ್ಲಿ ಇರುವಾಗಲೇ ಹೃದಯಾಘಾತದಿಂದ  ಸಬ್ ಇನ್ಸ್ಪೆಕ್ಟರ್ ನಿಧನ
    “ಕುಂಡೆ(ತಿಕ)ಯಲ್ಲಿ ಲಕ್ಷ್ಮಿ ಇರುತ್ತಾಳೆ” ಎಂಬ ಹೇಳಿಕೆ ವೈರಲ್! ಆರ್ಯವರ್ಧನ್ ಗುರೂಜಿ ವಿರುದ್ಧ ದೂರು, ಸೋಷಿಯಲ್ ಮೀಡಿಯಾದಲ್ಲಿ ಭಾರೀ ಚರ್ಚೆ
    ಗೋವಾದಲ್ಲಿ ಪ್ರವಾಸಿಗರ ಬೋಟ್ ಮುಳುಗಡೆ?!!??ವೈರಲ್ ವಿಡಿಯೋದ ಹಿಂದಿನ ಅಸಲಿ ಸತ್ಯ ಬಿಚ್ಚಿಟ್ಟ ಗೋವಾ ಪೊಲೀಸರು!
    ಹನಿಟ್ರ್ಯಾಪ್ ಕ್ವೀನ್ ಜೀನತ್ ಇಬ್ರಾಹಿಂ ಗೆ ನ್ಯಾಯಾಂಗ ಬಂಧನ- ಟ್ರ್ಯಾಪ್ ನಲ್ಲಿ ಹೊಸ ಹೊಸ ಹೆಸರುಗಳು !!!?
    ಬೇಕಾದಾಗ, ಬೇಕಾದಂಗೆ ಸಂವಿಧಾನದ ಜಪ
    ಕೂದಲೆಳೆ ಅಂತರದಲ್ಲಿ ಪಾರಾದ ಗುಜರಾತ್ ಟೈಟಾನ್ಸ್!ಕ್ಷಣಾರ್ಧ ತಡವಾಗಿದ್ದರೂ ಸಂಭವಿಸುತ್ತಿತ್ತು ಘೋರ ಅಗ್ನಿ ದುರಂತ!
    ಫೇಸ್‌ಬುಕ್ ‘ಸುಂದರಿ’ಅವಳಲ್ಲ ಅವನು!ಲವ್ ಮಾಡಿ ಹೆಂಡತಿ ಅಂದುಕೊಂಡವನು ಗಂಡಸು ಅಂತ ಗೊತ್ತಾದಾಗ ನಡೆದಿದ್ದೇ ಬೇರೆ!
    ಒಂದು ಕ್ಷಣದಲ್ಲಿ ನಗು, ಇನ್ನೊಂದು ಕ್ಷಣದಲ್ಲಿ ನಿಶ್ಶಬ್ದ ಕಣ್ಣೀರು…
    ನಾಸಿಕ್ TCS ಪ್ರಕರಣ-ಸತ್ಯ ಮರೆಮಾಚಿದವರಾರು?ಕಾರ್ಪೊರೇಟ್ ಜಗತ್ತಿನ ಕತ್ತಲೆ ಮುಖ:HRಮಹಿಳೆಯಾಗಿಯೂ…..
    ಉಡುಪಿ ಜಿಲ್ಲಾಆಸ್ಪತ್ರೆಯಲ್ಲಿ ಹಗರಣ, ತಾರತಮ್ಯದ ಆರೋಪ: ವೀಣಾದೇವಿ ವಿರುದ್ಧದಕ್ರಮ ಕಣ್ಣೊರೆಸುವ ತಂತ್ರ
    ವಿಶ್ವದ ನಂಬರ್ ವನ್ ಜನನಾಯಕನಾದ ಪ್ರಧಾನಿ ಮೋದಿ
    ಕಪ್ಪೆ ಚಿಪ್ಪು ದುರಂತಕ್ಕೆ ಮತ್ತೆರಡು ಜೀವ ಬಲಿ, ಬಲಿಯ ಸಂಖ್ಯೆ ಏರುವ ಸಾಧ್ಯತೆ