📍 Karavali Maruta
  • LOGIN
  • BREAKING
    ಧಾರವಾಡದಲ್ಲಿ ಭೀಕರ LPG ಸಿಲಿಂಡರ್ ಸ್ಫೋಟ , ಹಲವು ಮೀಟರ್ ದೂರಕ್ಕೆ ಹಾರಿದ ಬೈಕ್‌! ಹಲವರಿಗೆ ಗಾಯ CCTVಯಲ್ಲಿ ಶಾಕಿಂಗ್ ದೃಶ್ಯ ದಯಾಮರಣ ಕೇಳಿದ್ದ ತುಮಕೂರು ರಾಬಿಯಾ ಇನ್ನಿಲ್ಲ …!ಪರಮೇಶ್ವರ್ ಮುಂದೆ ಕಣ್ಣೀರಿಟ್ಟಿದ್ದ ಮಹಿಳೆ ಇಬ್ಬರು ಮಕ್ಕಳೊಂದಿಗೆ ವಿಷಸೇವಿಸಿ ಕೊನೆಯುಸಿರು…‘ಮನೆ’ ಸಿಕ್ಕರೂ ಬದುಕು ಉಳಿಯಲಿಲ್ಲ! ನೇಪಾಳ ದುರಂತ: ಕಂಪ್ಲೀಟ್ ರಿಪೋರ್ಟ್ ಇಲ್ಲಿದೆ…ಕಣ್ಣೆದುರೇ ಕೊಚ್ಚಿಹೋದ ಬದುಕು… ಲೆಕ್ಕಕ್ಕೆ ಸಿಗದ ಸಾವು, ನೋವು!ಪ್ರವಾಹದ ರೌದ್ರದ ನಡುವೆ ಮೃತದೇಹದಿಂದಲೇ ಚಿನ್ನ ಕದಿಯಲು ಯತ್ನ… ಮಾನವೀಯತೆ ಮರೆತ ಕಿರಾತಕರು!ಇಬ್ಬರು ಅರೆಸ್ಟ್! ಮಹಿಳಾ ಕಾನ್ಸ್‌ಟೇಬಲ್ ಮೇಲೆ ಪೊಲೀಸ್ ಠಾಣೆಯಲ್ಲಿ ಮಾರಣಾಂತಿಕ ಹಲ್ಲೆ ವಾಜಪೇಯಿ ಸರ್ಕಾರದ  ಕನಸಿನ ಯೋಜನೆ ನದಿ ಜೋಡಣೆ ವಿರೋಧಿಸಿ ಶಿರಸಿಯಲ್ಲಿ ಸಹಿ ಸಂಗ್ರಹ ಅಭಿಯಾನ
    ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

    ಉಡುಪಿಯಲ್ಲಿ ಆಡಳಿತ ನಡೆಸುತ್ತಿರುವುದು ಜನವಿರೋಧಿ ಜಿಲ್ಲಾಡಳಿತವೇ?

    ಬ್ರಹ್ಮಾವರ ತಾಲೂಕಿನ ಕೋಟ ಹೆರಾಡಿ ಪರಿಸರದ ಹೊಸಾಳ ಗ್ರಾಮ ವ್ಯಾಪ್ತಿಯ ನಾಗರಮಠ ಎಂಬಲ್ಲಿ ಸೀತಾನದಿ ಪಾತ್ರದಲ್ಲಿನ, ಮರಳು ತೆಗೆಯಲು ಜಿಲ್ಲಾಡಳಿತವು ಅವೈಜ್ಞಾನಿಕವಾಗಿ ಸ್ಥಳೀಯರ ಗಮನಕ್ಕೂ ತಾರದೆ ಮರಳು ತೆಗೆಯಲು ಪರ್ಮಿಷನ್ ನೀಡುವ ಮೂಲಕ ಜನ ವಿರೋಧಿ ಆಡಳಿತ ನಡೆಸುತ್ತಿದೆ ಎಂದು  ಆರೋಪಿಸುತ್ತಿದ್ದಾರೆ ಸ್ಥಳೀಯ ಜನರು.

    ಸ್ವತಃ ಜಿಲ್ಲಾಧಿಕಾರಿಗಳೇ ಖುದ್ದಾಗಿ ಬಂದು ಇಲ್ಲಿನ ಪರಿಸ್ಥಿತಿಯನ್ನು ಅವಲೋಕಿಸಿ, ಜನರ ಅಳಲನ್ನು ಆಲಿಸಿ  ಆನಂತರ ಮರಳು ತೆಗೆಯಲು ಪರ್ಮಿಷನ್ ಕೊಡಬೇಕೇ ಬೇಡವೇ ಎಂದು ಆಲೋಚಿಸಲಿ. ಅದು ಬಿಟ್ಟು ಸ್ಥಳೀಯ ಪರಿಸರದ ಬಗ್ಗೆ ಗಂಧ ಗಾಳಿಯೂ ಗೊತ್ತಿಲ್ಲದ, ಯಾರದೋ ಅಣತಿಯಂತೆ ಜಿಲ್ಲಾ ಕೇಂದ್ರದಲ್ಲಿ ಕುಳಿತು ಪರ್ಮಿಷನ್ ಕೊಡುವ ಮೂಲಕ ಜನರ ಹೊಟ್ಟೆಯ ಮೇಲೆ ಹೊಡೆಯಬೇಡಿ ಎಂದು ನೋವಿನಿಂದಲೇ ಆಗ್ರಹಿಸುತ್ತಿದ್ದಾರೆ ಇಲ್ಲಿನ ಜನರು.

    ನಾಗರಮಠದ ನಾಗರಿಕರು ಬಹಳ ಸಮಯದಿಂದ ಈ ಒಂದು ಅಕ್ರಮದ ವಿರುದ್ಧ ಧ್ವನಿ ಎತ್ತುತ್ತಿದ್ದಾರೆ. ಅವರ ಧ್ವನಿಯನ್ನು ಸ್ವತಹ ಮರಳು ವ್ಯಾಪಾರಸ್ಥರು ಮತ್ತು ಆಡಳಿತ ವ್ಯವಸ್ಥೆಯು ಒಟ್ಟಾಗಿ ಸೇರಿ ಬಲವಂತವಾಗಿ ಅಡಗಿಸುವ ಪ್ರಯತ್ನವನ್ನು ಮಾಡುತ್ತಿರುವುದು ಅಕ್ಷಮ್ಯ ಎಂಬ ಆಕ್ರೋಶದ ಮಾತುಗಳು ಕೇಳಿ ಬರುತ್ತಿವೆ.

    ಸೀತಾ ನದಿಯ ಅಕ್ಕ ಪಕ್ಕದಲ್ಲಿ ನೂರಾರು ಎಕರೆ ಜಾಗದಲ್ಲಿ ಕೃಷಿ ಚಟುವಟಿಕೆ ನಡೆಯುತ್ತದೆ. ಸ್ಥಳೀಯ ಕೃಷಿಕರ ಭೂಮಿಯಲ್ಲಿ ಯಾರ ಪರ್ಮಿಷನ್ ಇಲ್ಲದೆ ತಾತ್ಕಾಲಿಕ ರಸ್ತೆಯನ್ನು ಮಾಡಿಕೊಂಡು ಮರಳನ್ನು ಹೊತ್ತೊಯ್ಯುತ್ತಿದ್ದಾರೆ. ಇದರಿಂದ ಸ್ಥಳೀಯರಿಗೆ ಓಡಾಡಲು ಕಷ್ಟವಾಗುತ್ತಿದೆ. ದಬ್ಬಾಳಿಕೆ ಪ್ರಶ್ನಿಸಿದವರ  ಮೇಲೆ ಬೆದರಿಕೆ ಹಾಕುತ್ತಿದ್ದಾರೆ. ಈ ಬಗ್ಗೆ ದೂರು ದಾಖಲಿಸಲು ಹೋದರೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗುತ್ತಿಲ್ಲ. ಬದಲಿಗೆ ಊರಿನ ನಾಗರಿಕರ ವಿರುದ್ಧವೇ ದೂರು ದಾಖಲಾಗುತ್ತಿದೆ ಎಂದು ಆರೋಪಿಸುತ್ತಿದ್ದಾರೆ.

    ಈ ಮರಳುಗಾರಿಕೆಯಿಂದಾಗಿ ಸ್ಥಳೀಯ ಕುಡಿಯುವ ನೀರಿನ ಬಾವಿಗಳಲ್ಲಿ ಉಪ್ಪು ನೀರುಗಳ ಶೇಖರಣೆ ಜಾಸ್ತಿ ಆಗುತ್ತಿದೆ ಎನ್ನುವುದು ಸ್ಥಳೀಯ ಮಹಿಳೆಯರ ಆರೋಪ. ಆ ಮಹಿಳೆಯರು ಖುದ್ದಾಗಿ, ನಮ್ಮ ಮೇಲೆ ಇಷ್ಟೆಲ್ಲ ದೌರ್ಜನ್ಯ ನಡೆಸುತ್ತಿರುವ ಜಿಲ್ಲಾಡಳಿತ,  ನಮ್ಮನ್ನೆಲ್ಲರನ್ನು ಮುಗಿಸಿ ಮರಳನ್ನು ತೆಗೆದುಕೊಂಡು ಹೋಗಲಿ ಎಂದು ನೋವಿನಿಂದ ಆಗ್ರಹಿಸುತ್ತಿದ್ದಾರೆ. ನಮ್ಮ ವಿರುದ್ಧ, ಸ್ಥಳೀಯರಲ್ಲದವರು ಎಂಬ ಆರೋಪ ಮಾಡುತ್ತಿದ್ದಾರೆ. ನಾವು ಇಲ್ಲಿಯವರೆ ಅನ್ನುವುದಕ್ಕೆ ಸಾಕಷ್ಟು ಪುರಾವೆಗಳಿದೆ. ಸರ್ಕಾರ ಹಾಗೂ ಜಿಲ್ಲಾಡಳಿತ ನೀಡಿದ ಪುರಾವೆಗಳೇ ಇದೆ. ಆದರೂ ನಮ್ಮ ವಿರುದ್ಧ ಸ್ಥಳೀಯರಲ್ಲದವರು ಎಂಬ ಲೇಬಲ್ ಅಂಟಿಸಿ ನಮ್ಮನ್ನು ಹಿಮ್ಮೆಟ್ಟಿಸುವ ಪ್ರಯತ್ನ ನಡೆಸುತ್ತಿರುವುದು ಮರಳು ಮಾಫಿಯಾ, ಜೊತೆಗೆ ವ್ಯವಸ್ಥೆಯೂ ಕೈಜೋಡಿಸಿದೆ ಎನ್ನುತ್ತಾರೆ.

    ಇಷ್ಟಾದರೂ ಜಿಲ್ಲಾ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಅಧಿಕಾರಿಗಳಾಗಲಿ, ಜಿಲ್ಲಾಧಿಕಾರಿಗಳಾಗಲಿ ಖುದ್ದಾಗಿ ಸ್ಥಳಕ್ಕೆ ಹೋಗಿ ನಾಗರಮಠದ ನಾಗರಿಕರ ಅಹವಾಲನ್ನು ಕೇಳುವ ಪ್ರಯತ್ನವನ್ನು ಮಾಡಿಲ್ಲ. ಇಡೀ ಜಿಲ್ಲೆ ನಮ್ಮದು ಎಂಬ ಅಹಂಕಾರದಲ್ಲಿ ನಡೆದುಕೊಳ್ಳುತ್ತಿದೆ ಜಿಲ್ಲಾಡಳಿತ ಎನ್ನುವುದು ಸ್ಥಳೀಯ ಯುವಕರ ಗಂಭೀರವಾದಂತಹ ಆರೋಪ. 

    ಮರಳುಗಾರಿಕೆ ಅವೈಜ್ಞಾನಿಕ ವಾಗಿ ಆಗಕೂಡದು. ಅದರಿಂದ ಸ್ಥಳೀಯ ಪರಿಸರಕ್ಕೆ ಮಾರಕವಾಗುತ್ತದೆ. ನದಿ ಪಾತ್ರದ ಭೂಮಿಗಳು ಕುಸಿಯುವ ಅಪಾಯವಿರುತ್ತದೆ. ಹಾಗಾಗಿ ಆಯಾ ಪರಿಸರದ ಸ್ಥಳೀಯ ಜನರನ್ನು  ವಿಶ್ವಾಸಕ್ಕೆ ತೆಗೆದುಕೊಂಡು ಆ ನಂತರ ಪರ್ಮಿಷನ್ ನೀಡುವ ಕೆಲಸ ಮಾಡಬೇಕು. ಇದ್ಯಾವುದನ್ನು ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಮಾಡಿಲ್ಲ. ಪ್ರಕೃತಿದತ್ತ ವಾಗಿರುವಂತಹ ಪರಿಸರದ ಮೇಲೆ ಜಿಲ್ಲಾಡಳಿತಕ್ಕೆ ಎಷ್ಟು ಹಕ್ಕು ಇದೆಯೋ, ಅಷ್ಟೇ ಹಕ್ಕು ಪರಿಸರದ ನಾಗರಿಕರಿಗೂ ಇದೆ ಎನ್ನುವುದನ್ನು ಅರ್ಥ ಮಾಡಿಕೊಳ್ಳಬೇಕು. ಅದು ಬಿಟ್ಟು ವ್ಯವಸ್ಥೆಯ ಪವರ್ ಬಳಸಿಕೊಂಡು ಜನರನ್ನು ಹತ್ತಿಕ್ಕುವ ಕೆಲಸ ಈ ಹಿಂದೆ ಬ್ರಿಟಿಷ್ ಆಡಳಿತ ಮಾಡುತ್ತಿತ್ತು. ಅದು ಮುಂದುವರೆಯಬಾರದು ತಾನೇ? ಕೋಟ ಶ್ರೀನಿವಾಸ್ ಪೂಜಾರಿ ಸ್ಥಳೀಯ ನಾಯಕರಾಗಿದ್ದಾರೆ. ಜಯಪ್ರಕಾಶ್ ಹೆಗಡೆ ಈ ಭಾಗದ ನಾಯಕರು ಹಾಗೂ ಮಾಜಿ ಜನಪ್ರತಿನಿದಿ, ಸ್ಥಳೀಯ ಶಾಸಕರು ಹಾಗೂ ಅನೇಕ ನಾಯಕರುಗಳು ಇದ್ದರೂ ಅವರ್ಯಾರು ನಾಗರಮಠದ ನಾಗರಿಕರ ಪರವಾಗಿ ಇಲ್ಲಿಯವರೆಗೆ ಬಾರದಿರುವುದು ನೋಡಿದರೆ ಆಶ್ಚರ್ಯವಾಗುತ್ತದೆ.

    COMMENTS

    Login with Gmail to comment

    ಇನ್ನಷ್ಟು ಸುದ್ದಿ

    “ನಿಮ್ಮ ಮಗಳನ್ನು ನಾನು ಸಾಯಿಸಿದ್ದೇನೆ…ನಾಳೆ ನನ್ನ ಹೆಣವನ್ನೂ ನೋಡುತ್ತೀರಿ” ಎಂದ ಚೇತನ್!ಲಾವಣ್ಯಳ ತಂದೆಗೆ ಕರೆ ಮಾಡಿ ಶಾಕ್ ನೀಡಿದ ಆರೋಪಿ ಚೇತನ್ ಪೊಲೀಸ್ ವಶಕ್ಕೆ..!
    ಚುನಾವಣೆ ಗೆಲ್ಲುವುದು ಸಾಕಿನ್ನು, ರಾಷ್ಟ್ರದ ಸಣ್ಣ ಮತ್ತು ಮಧ್ಯಮ ವ್ಯವಹಾರ ಸ್ಥರ ಹಿತ ಕಾಪಾಡಿ
    ಜಸ್ಟ್ one click ನಲ್ಲೇ ಎಲ್ಲಾ ಸರ್ಟಿಫಿಕೇಟ್…!2026–27ರಿಂದ ಅಂಕಪಟ್ಟಿ ಹಾರ್ಡ್ ಕಾಪಿ ಇಲ್ಲ..
    ಗ್ರಾಮೀಣ ವಿದ್ಯಾರ್ಥಿಗಳಿಗೂ AI ಶಿಕ್ಷಣ: ಕರ್ನಾಟಕ ಸರ್ಕಾರದ ಐತಿಹಾಸಿಕ ಹೆಜ್ಜೆ..50 ಸರ್ಕಾರಿ ಕಾಲೇಜುಗಳಲ್ಲಿ AI ಲ್ಯಾಬ್‌ಗಳು!
    ಕಸ ಸಾಗಾಣಿಕೆ ಟೆಂಡರ್‌ನಲ್ಲಿ ₹133 ಕೋಟಿ ಅಕ್ರಮ ಆರೋಪ
    ನೇಪಾಳ ಪ್ರವಾಹ: ಪ್ರಧಾನಿ ನರೇಂದ್ರ ಮೋದಿಯವರಿಂದ ಸಂತಾಪ- ನೇಪಾಳ ಪ್ರಧಾನಿಗೆ ಸಹಕಾರದ ಭರವಸೆ
    ಮೊಹಾಲಿ ಬೆಚ್ಚಿಬೀಳಿಸಿದ ಕಚೇರಿ ಕೊಲೆ: ಮಹಿಳೆ ಮೇಲೆ ಮಾರಣಾಂತಿಕ ದಾಳಿ, ದೇಶಾದ್ಯಂತ ಆಕ್ರೋಶ…
    ಮುಂದಿನ ಕೆಲವು ದಿನ ಭಾರಿ ಗಾಳಿ ಮಳೆ ಗುಡುಗು -ಮಿಂಚಿನ ಎಚ್ಚರಿಕೆ 
    ಮೊಬೈಲ್ ನೋಡುತ್ತಿದ್ದ ಉಡುಪಿ ಡಿಸಿ ವಿರುದ್ಧ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಕಿಡಿ
    “ಟೀಕೆ ಮಾಡಿ, ತೇಜೋವಧೆ ಬೇಡ” – ಹೈಕೋರ್ಟ್‌ನಿಂದ ಗಿರೀಶ್ ಮಟ್ಟೆಣ್ಣನವರ್‌ಗೆ ಖಡಕ್ ಎಚ್ಚರಿಕೆ
    ಅಮಿತ್ ಶಾ- “UCC ಜಾರಿಗೆ ತಂದು ನಾಲ್ಕು ಮದುವೆ ಪದ್ಧತಿ ನಿಷೇಧ” — ಪಶ್ಚಿಮ ಬಂಗಾಳದಲ್ಲಿ ದೊಡ್ಡ ಘೋಷಣೆ
    ಭರತ್ ತಿವಾರಿ ಎನ್‌ಕೌಂಟರ್ -ಬಿಹಾರ ಎಡಿಜಿಪಿಯಿಂದಲೇ ಪೊಲೀಸ್ ಲೋಪದ ಒಪ್ಪಿಗೆ: ಶಾಹಪುರ SHO ಸೇರಿ 5 ಅಧಿಕಾರಿಗಳು ಸಸ್ಪೆಂಡ್!
    ನಾಟೆಕಲ್ ತಿರುವಿನಲ್ಲಿ ಪಿ.ಎ. ಕಾಲೇಜು ಬಸ್ ಅಪಘಾತ: ಬಸ್‌ನಡಿ ಸಿಲುಕಿ ಬೈಕ್ ಸವಾರ ಗಂಭೀರ ಗಾಯಗೊಂಡು ಸಾವು
    ಒಂದು ಕ್ಷಣದಲ್ಲಿ ನಗು, ಇನ್ನೊಂದು ಕ್ಷಣದಲ್ಲಿ ನಿಶ್ಶಬ್ದ ಕಣ್ಣೀರು…
    ಶಾಮ್ ಇನ್ಸ್ಟಿಟ್ಯೂಶನ್ ಪ್ರಸ್ತುತ ಪಡಿಸಿದ “ಕಜ್ಜ” ತುಳು ಸಿನಿಮಾದ ಆಡಿಯೋ, ಟೇಲರ್ ಬಿಡುಗಡೆ
    ಉದ್ಯಮಿ ಧೀರಜ್ ಜೈನ್ ಗಪ್ ಚುಪ್ಪಾಗಿ ನಡೆಸಿದ ಮಾನವೀಯ ನಡೆಗೆ ಸಾಕ್ಷಿ ನೋಡಿ
    ನನ್ನನ್ನು ದುರ್ಬಲ ವ್ಯಕ್ತಿ ಅಂದುಕೊಳ್ಳಬೇಡಿ- U.T ಖಾದರ್
    ಎಲ್ಪಿಜಿ ಗ್ಯಾಸ್ ದರದಲ್ಲಿ ಏರಿಕೆ:  ಮಧ್ಯಮ ವರ್ಗದವರಲ್ಲಿ ಹತಾಶೆ
    ತಿರುಪತಿಗೆ ಹೋದ ಗಂಡ… ಗೋವಾಗೆ ಹೋದ ಯುವಕ…! ಮನೆಗೆ ಬಂದದ್ದು ಶವವಾಗಿ! ಪ್ರವಾಸವೇ ಭಯ ಹುಟ್ಟಿಸುತ್ತಿದೆಯೇ?
    ಕರ್ನಾಟಕದ ಮಾಜಿ ಸಚಿವರಿಗೆ ಜೈಲು ಜೈಲು ಶಿಕ್ಷೆಗೆ ಉಪಮುಖ್ಯಮಂತ್ರಿ ಡಿಕೆಯ ಶಾಕ್ ಸ್ಟೇಟ್ಮೆಂಟ್
    ಒಂದು ಕ್ಲಿಕ್, ಒಂದು ಆಟ… ಕುಟುಂಬದ ಭವಿಷ್ಯವೇ ನಾಶವಾಗುವ ಅಪಾಯದ ಬೆಟ್ಟಿಂಗ್ ಜಾಲ -!ಸಾವಿರಾರು ಬೆಟ್ಟಿಂಗ್ ಆ್ಯಪ್‌ಗಳಿಗೆ ಸದ್ಯದಲ್ಲೇ ಬ್ರೇಕ್ ….
    ತಿಮರೋಡಿ ಸೇರಿ ನಾಲ್ವರಿಗೆ ಕೇಸ್…
    ಮಹಿಳಾ ಟಿ20 ವಿಶ್ವಕಪ್‌ಗೂ ಮುನ್ನ ಭಾರತ-ಪಾಕ್ ಹೈಪ್ ನಡುವೆ ಮಂಧಾನಾ ಮಾತು ವೈರಲ್…
    ಕಾರು ಸ್ಟೀರಿಂಗ್ ಹಿಡಿದ ಬಾಲಕಿ… ಪಕ್ಕದಲ್ಲೇ ಕುಳಿತಿದ್ದ ಪೊಲೀಸ್ ಅಧಿಕಾರಿ! ವೈರಲ್ ವಿಡಿಯೋ ಎಬ್ಬಿಸಿದ ದೊಡ್ಡ ಪ್ರಶ್ನೆ
    ಆಕಾಂಕ್ಷಳ ಪತ್ರ “ಮಮ್ಮಿ-ಪಾಪಾ, ನನಗೆ ಮತ್ತೆ ನೀಟ್ ಪರೀಕ್ಷೆ ಬರೆಯುವ ಧೈರ್ಯವಿಲ್ಲ” 3 ಲಕ್ಷ ಸಾಲ, ಡಾಕ್ಟರ್ ಆಗುವ ಆ ಕನಸುಗಳು…650 ಅಂಕಗಳ ನಿರೀಕ್ಷೆ..ಆದರೆ…ಕೊನೆಗೆ ಹೀಗೊಂದು ವಿದಾಯ ಪತ್ರ!
    ವಂದೇ ಮಾತರಂ ವಿವಾದ ದೇಶಭಕ್ತಿಯ ಸಂಕೇತವೇ, ರಾಜಕೀಯ ಅಸ್ತ್ರವೇ?
    ಮಿಸೆಸ್ ಕೇರಳ ಈಗ ‘ಡ್ರಗ್ ಕ್ವೀನ್’…!?ಕೋಟಿ ಮೌಲ್ಯದ ಡ್ರಗ್ಸ್ ಜೊತೆ ಮಾಜಿ ‘ಮಿಸೆಸ್ ಕೇರಳ’ ಅರೆಸ್ಟ್!”
    ಮಂಗಳೂರು ಕುಕ್ಕರ್ ಬಾಂಬ್ ಪ್ರಕರಣಕ್ಕೆ ಅಂತಿಮ ತೀರ್ಪು – ಶಾರೀಕ್ ಗೆ 10 ವರ್ಷ ಜೈಲು..
    ₹6,695 ಕೋಟಿಯ ಮೆಗಾ ಪ್ರಾಜೆಕ್ಟ್‌ಗೆ ಮಳೆಯ ಅಗ್ನಿಪರೀಕ್ಷೆ-ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇಯಲ್ಲಿ ಭೂಕುಸಿತ
    ಮುಂಬೈನಲ್ಲಿ ಮಳೆ ರುದ್ರನರ್ತನ: ಕುರ್ಲಾದಲ್ಲಿ ಭೂಕುಸಿತ, ಇಬ್ಬರು ಬಲಿ!