📍 Karavali Maruta
LIVE | CONTACT
ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

ಉಡುಪಿಯಲ್ಲಿ ಆಡಳಿತ ನಡೆಸುತ್ತಿರುವುದು ಜನವಿರೋಧಿ ಜಿಲ್ಲಾಡಳಿತವೇ?

ಬ್ರಹ್ಮಾವರ ತಾಲೂಕಿನ ಕೋಟ ಹೆರಾಡಿ ಪರಿಸರದ ಹೊಸಾಳ ಗ್ರಾಮ ವ್ಯಾಪ್ತಿಯ ನಾಗರಮಠ ಎಂಬಲ್ಲಿ ಸೀತಾನದಿ ಪಾತ್ರದಲ್ಲಿನ, ಮರಳು ತೆಗೆಯಲು ಜಿಲ್ಲಾಡಳಿತವು ಅವೈಜ್ಞಾನಿಕವಾಗಿ ಸ್ಥಳೀಯರ ಗಮನಕ್ಕೂ ತಾರದೆ ಮರಳು ತೆಗೆಯಲು ಪರ್ಮಿಷನ್ ನೀಡುವ ಮೂಲಕ ಜನ ವಿರೋಧಿ ಆಡಳಿತ ನಡೆಸುತ್ತಿದೆ ಎಂದು  ಆರೋಪಿಸುತ್ತಿದ್ದಾರೆ ಸ್ಥಳೀಯ ಜನರು.

ಸ್ವತಃ ಜಿಲ್ಲಾಧಿಕಾರಿಗಳೇ ಖುದ್ದಾಗಿ ಬಂದು ಇಲ್ಲಿನ ಪರಿಸ್ಥಿತಿಯನ್ನು ಅವಲೋಕಿಸಿ, ಜನರ ಅಳಲನ್ನು ಆಲಿಸಿ  ಆನಂತರ ಮರಳು ತೆಗೆಯಲು ಪರ್ಮಿಷನ್ ಕೊಡಬೇಕೇ ಬೇಡವೇ ಎಂದು ಆಲೋಚಿಸಲಿ. ಅದು ಬಿಟ್ಟು ಸ್ಥಳೀಯ ಪರಿಸರದ ಬಗ್ಗೆ ಗಂಧ ಗಾಳಿಯೂ ಗೊತ್ತಿಲ್ಲದ, ಯಾರದೋ ಅಣತಿಯಂತೆ ಜಿಲ್ಲಾ ಕೇಂದ್ರದಲ್ಲಿ ಕುಳಿತು ಪರ್ಮಿಷನ್ ಕೊಡುವ ಮೂಲಕ ಜನರ ಹೊಟ್ಟೆಯ ಮೇಲೆ ಹೊಡೆಯಬೇಡಿ ಎಂದು ನೋವಿನಿಂದಲೇ ಆಗ್ರಹಿಸುತ್ತಿದ್ದಾರೆ ಇಲ್ಲಿನ ಜನರು.

ನಾಗರಮಠದ ನಾಗರಿಕರು ಬಹಳ ಸಮಯದಿಂದ ಈ ಒಂದು ಅಕ್ರಮದ ವಿರುದ್ಧ ಧ್ವನಿ ಎತ್ತುತ್ತಿದ್ದಾರೆ. ಅವರ ಧ್ವನಿಯನ್ನು ಸ್ವತಹ ಮರಳು ವ್ಯಾಪಾರಸ್ಥರು ಮತ್ತು ಆಡಳಿತ ವ್ಯವಸ್ಥೆಯು ಒಟ್ಟಾಗಿ ಸೇರಿ ಬಲವಂತವಾಗಿ ಅಡಗಿಸುವ ಪ್ರಯತ್ನವನ್ನು ಮಾಡುತ್ತಿರುವುದು ಅಕ್ಷಮ್ಯ ಎಂಬ ಆಕ್ರೋಶದ ಮಾತುಗಳು ಕೇಳಿ ಬರುತ್ತಿವೆ.

ಸೀತಾ ನದಿಯ ಅಕ್ಕ ಪಕ್ಕದಲ್ಲಿ ನೂರಾರು ಎಕರೆ ಜಾಗದಲ್ಲಿ ಕೃಷಿ ಚಟುವಟಿಕೆ ನಡೆಯುತ್ತದೆ. ಸ್ಥಳೀಯ ಕೃಷಿಕರ ಭೂಮಿಯಲ್ಲಿ ಯಾರ ಪರ್ಮಿಷನ್ ಇಲ್ಲದೆ ತಾತ್ಕಾಲಿಕ ರಸ್ತೆಯನ್ನು ಮಾಡಿಕೊಂಡು ಮರಳನ್ನು ಹೊತ್ತೊಯ್ಯುತ್ತಿದ್ದಾರೆ. ಇದರಿಂದ ಸ್ಥಳೀಯರಿಗೆ ಓಡಾಡಲು ಕಷ್ಟವಾಗುತ್ತಿದೆ. ದಬ್ಬಾಳಿಕೆ ಪ್ರಶ್ನಿಸಿದವರ  ಮೇಲೆ ಬೆದರಿಕೆ ಹಾಕುತ್ತಿದ್ದಾರೆ. ಈ ಬಗ್ಗೆ ದೂರು ದಾಖಲಿಸಲು ಹೋದರೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗುತ್ತಿಲ್ಲ. ಬದಲಿಗೆ ಊರಿನ ನಾಗರಿಕರ ವಿರುದ್ಧವೇ ದೂರು ದಾಖಲಾಗುತ್ತಿದೆ ಎಂದು ಆರೋಪಿಸುತ್ತಿದ್ದಾರೆ.

ಈ ಮರಳುಗಾರಿಕೆಯಿಂದಾಗಿ ಸ್ಥಳೀಯ ಕುಡಿಯುವ ನೀರಿನ ಬಾವಿಗಳಲ್ಲಿ ಉಪ್ಪು ನೀರುಗಳ ಶೇಖರಣೆ ಜಾಸ್ತಿ ಆಗುತ್ತಿದೆ ಎನ್ನುವುದು ಸ್ಥಳೀಯ ಮಹಿಳೆಯರ ಆರೋಪ. ಆ ಮಹಿಳೆಯರು ಖುದ್ದಾಗಿ, ನಮ್ಮ ಮೇಲೆ ಇಷ್ಟೆಲ್ಲ ದೌರ್ಜನ್ಯ ನಡೆಸುತ್ತಿರುವ ಜಿಲ್ಲಾಡಳಿತ,  ನಮ್ಮನ್ನೆಲ್ಲರನ್ನು ಮುಗಿಸಿ ಮರಳನ್ನು ತೆಗೆದುಕೊಂಡು ಹೋಗಲಿ ಎಂದು ನೋವಿನಿಂದ ಆಗ್ರಹಿಸುತ್ತಿದ್ದಾರೆ. ನಮ್ಮ ವಿರುದ್ಧ, ಸ್ಥಳೀಯರಲ್ಲದವರು ಎಂಬ ಆರೋಪ ಮಾಡುತ್ತಿದ್ದಾರೆ. ನಾವು ಇಲ್ಲಿಯವರೆ ಅನ್ನುವುದಕ್ಕೆ ಸಾಕಷ್ಟು ಪುರಾವೆಗಳಿದೆ. ಸರ್ಕಾರ ಹಾಗೂ ಜಿಲ್ಲಾಡಳಿತ ನೀಡಿದ ಪುರಾವೆಗಳೇ ಇದೆ. ಆದರೂ ನಮ್ಮ ವಿರುದ್ಧ ಸ್ಥಳೀಯರಲ್ಲದವರು ಎಂಬ ಲೇಬಲ್ ಅಂಟಿಸಿ ನಮ್ಮನ್ನು ಹಿಮ್ಮೆಟ್ಟಿಸುವ ಪ್ರಯತ್ನ ನಡೆಸುತ್ತಿರುವುದು ಮರಳು ಮಾಫಿಯಾ, ಜೊತೆಗೆ ವ್ಯವಸ್ಥೆಯೂ ಕೈಜೋಡಿಸಿದೆ ಎನ್ನುತ್ತಾರೆ.

ಇಷ್ಟಾದರೂ ಜಿಲ್ಲಾ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಅಧಿಕಾರಿಗಳಾಗಲಿ, ಜಿಲ್ಲಾಧಿಕಾರಿಗಳಾಗಲಿ ಖುದ್ದಾಗಿ ಸ್ಥಳಕ್ಕೆ ಹೋಗಿ ನಾಗರಮಠದ ನಾಗರಿಕರ ಅಹವಾಲನ್ನು ಕೇಳುವ ಪ್ರಯತ್ನವನ್ನು ಮಾಡಿಲ್ಲ. ಇಡೀ ಜಿಲ್ಲೆ ನಮ್ಮದು ಎಂಬ ಅಹಂಕಾರದಲ್ಲಿ ನಡೆದುಕೊಳ್ಳುತ್ತಿದೆ ಜಿಲ್ಲಾಡಳಿತ ಎನ್ನುವುದು ಸ್ಥಳೀಯ ಯುವಕರ ಗಂಭೀರವಾದಂತಹ ಆರೋಪ. 

ಮರಳುಗಾರಿಕೆ ಅವೈಜ್ಞಾನಿಕ ವಾಗಿ ಆಗಕೂಡದು. ಅದರಿಂದ ಸ್ಥಳೀಯ ಪರಿಸರಕ್ಕೆ ಮಾರಕವಾಗುತ್ತದೆ. ನದಿ ಪಾತ್ರದ ಭೂಮಿಗಳು ಕುಸಿಯುವ ಅಪಾಯವಿರುತ್ತದೆ. ಹಾಗಾಗಿ ಆಯಾ ಪರಿಸರದ ಸ್ಥಳೀಯ ಜನರನ್ನು  ವಿಶ್ವಾಸಕ್ಕೆ ತೆಗೆದುಕೊಂಡು ಆ ನಂತರ ಪರ್ಮಿಷನ್ ನೀಡುವ ಕೆಲಸ ಮಾಡಬೇಕು. ಇದ್ಯಾವುದನ್ನು ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಮಾಡಿಲ್ಲ. ಪ್ರಕೃತಿದತ್ತ ವಾಗಿರುವಂತಹ ಪರಿಸರದ ಮೇಲೆ ಜಿಲ್ಲಾಡಳಿತಕ್ಕೆ ಎಷ್ಟು ಹಕ್ಕು ಇದೆಯೋ, ಅಷ್ಟೇ ಹಕ್ಕು ಪರಿಸರದ ನಾಗರಿಕರಿಗೂ ಇದೆ ಎನ್ನುವುದನ್ನು ಅರ್ಥ ಮಾಡಿಕೊಳ್ಳಬೇಕು. ಅದು ಬಿಟ್ಟು ವ್ಯವಸ್ಥೆಯ ಪವರ್ ಬಳಸಿಕೊಂಡು ಜನರನ್ನು ಹತ್ತಿಕ್ಕುವ ಕೆಲಸ ಈ ಹಿಂದೆ ಬ್ರಿಟಿಷ್ ಆಡಳಿತ ಮಾಡುತ್ತಿತ್ತು. ಅದು ಮುಂದುವರೆಯಬಾರದು ತಾನೇ? ಕೋಟ ಶ್ರೀನಿವಾಸ್ ಪೂಜಾರಿ ಸ್ಥಳೀಯ ನಾಯಕರಾಗಿದ್ದಾರೆ. ಜಯಪ್ರಕಾಶ್ ಹೆಗಡೆ ಈ ಭಾಗದ ನಾಯಕರು ಹಾಗೂ ಮಾಜಿ ಜನಪ್ರತಿನಿದಿ, ಸ್ಥಳೀಯ ಶಾಸಕರು ಹಾಗೂ ಅನೇಕ ನಾಯಕರುಗಳು ಇದ್ದರೂ ಅವರ್ಯಾರು ನಾಗರಮಠದ ನಾಗರಿಕರ ಪರವಾಗಿ ಇಲ್ಲಿಯವರೆಗೆ ಬಾರದಿರುವುದು ನೋಡಿದರೆ ಆಶ್ಚರ್ಯವಾಗುತ್ತದೆ.

COMMENTS

Login with Gmail to comment

ಇನ್ನಷ್ಟು ಸುದ್ದಿ

ಪಿವಿ ಎಸ್ ಸಂಸ್ಥೆಯ ಆಡಳಿತದಲ್ಲಿ ಯಾರ ಹಸ್ತಕ್ಷೇಪವು ಇಲ್ಲ – ಸರೋಜಿನಿ ಕುಶೆ
ಕಣ್ಣೀರಾದ ಕಣ್ಣಾಲಿಗಳು ಹೊಟ್ಟೆ ತುಂಬಾ ಊಟ ಮಾಡಿ ನಿದ್ರಿಸುವಂತೆ ಮಾಡುವ  “ಕಾರುಣ್ಯ ಸೇವಾಕ್ಕೀಗ 3000 ದಿನಗಳು…!!!”
ಇದು IPLನಲ್ಲಿ ಹೊಸ ಹೀರೋ ಹುಟ್ಟಿದಂತೇ…ಆದ್ರೆ ಕ್ರಿಕೆಟ್ ಅಲ್ಲ, ಬಾಕ್ಸಿಂಗ್‌ನಲ್ಲಿ! 🥊🔥
ಬಾಲಕಾರ್ಮಿಕ ಪತ್ತೆ : ಮಾಲೀಕನಿಗೆ ಜೈಲು, ದಂಡ
ಅಪ್ರಾಪ್ತನ ಕ್ರೌರ್ಯಕ್ಕೆ ಬಳ್ಳಾರಿ ವಸತಿ ಶಾಲೆಯ ದೌರ್ಜನ್ಯವೇ ಸಾಕ್ಷಿ… ಈ ಕ್ರೌರ್ಯದ ಹಿಂದೆ ಮನೋರೋಗ ಅಡಗಿದೆಯಾ? 
ಸಂಸತ್ತಿನಲ್ಲಿ ಇತಿಹಾಸ ಸೃಷ್ಟಿಸುವ ಚರ್ಚೆ-ಮಹಿಳಾ ಮೀಸಲು ಬಿಲ್ಲಿನ ಸುತ್ತ ಕಂಗೊಳಿಸಿದ ಸಂಸತ್ !
2026 ವಿಧಾನಸಭೆ ಚುನಾವಣೆ – ಮುಖ್ಯ ಮಾಹಿತಿ
ಸಾರ್ವಜನಿಕ ಸ್ಥಳದಲ್ಲಿ ಕೈಕೈ ಮಿಲಾಯಿಸಿ ಜಗಳ ಮಾಡಿದ್ರೇ ಹುಷಾರ್…!
ಅಮೆರಿಕಾ ಭಾರತವನ್ನು ಬ್ಲ್ಯಾಕ್‌ಮೇಲ್ ಮಾಡುತ್ತಿದೆ” – ಕೆ.ಸಿ. ವೇಣುಗೋಪಾಲ್
17ನೇ ಆಯವ್ಯಯ ಮಂಡನೆ ಮಾಡುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ
ಪ್ರಮೋದ್ ಮಧ್ವರಾಜ್ ಅವರಿಗೆ ಕೊನೆಗೂ ಸಿಕ್ಕಿತು ಗೌರವ
ಕಾರ್ಕಳ ಮಹಾಮಸ್ತಕಾಭಿಷೇಕಕ್ಕೆ ₹1.59 ಕೋಟಿ ಅನುದಾನ: ಮೊದಲ ಕಂತು ಬಿಡುಗಡೆ…
ಸಚಿವ ಜಮೀರ್ ಅಹಮದ್ ಹಚ್ಚಿದ ಪಟಾಕಿಗೆ ಕಾಂಗ್ರೆಸ್ ಕೋಟೆಯಲ್ಲಿ ಬಿರುಕು..!?
ರಾಜಕೀಯ ಬದಲಾಗುತ್ತಿದೆ -ಪಂಚರಾಜ್ಯ election ರಿಸಲ್ಟ್ “ಗೆಲುವು-ಸೋಲಿನ ಶಕ್ತಿ ಪಕ್ಷದಲ್ಲಲ್ಲ… ಜನರ ಕೈಯಲ್ಲಿ”
ಮೂಡಬಿದ್ರೆ: ಅಕ್ರಮ ಜಾನುವಾರು ಸಾಗಾಟ -ಆರೋಪಿಗಳ ಬಂಧನ, ವಾಹನ ಹಾಗೂ ಕರು ವಶಕ್ಕೆ.
ಅಮೆರಿಕಾ ವಿರುದ್ಧ ‘ಪೈರಸಿ’ ಆರೋಪ: ಇರಾನ್ ಯುಎನ್‌ಗೆ ದೂರು
ಒಂದು ರಾಷ್ಟ್ರ, ಒಂದು ಚುನಾವಣೆ’ಗೆ ಡಿಕೆಶಿ ಸಿಡಿದೆದ್ದೇಕೆ?
ವಿಟ್ಲ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಕಚೇರಿಯಲ್ಲಿ ಗಲಾಟೆ:
ಡ್ರೋನ್ ದಾಳಿಯ ನಂತರ ಬಹ್ರೇನ್‌ನಲ್ಲಿ ಕನಿಷ್ಠ 32 ಜನರಿಗೆ ಗಾಯ
🚨 ಸಾರ್ವಜನಿಕರಿಗೆ ತುರ್ತು ಎಚ್ಚರಿಕೆ – ಕಟಪಾಡಿ ರಾಷ್ಟ್ರೀಯ ಹೆದ್ದಾರಿ ಅಪಘಾತ
War update-ಕಂಪ್ಲೀಟ್ ಡೀಟೇಲ್ಸ್ …ಮುಂದೇನು? ceasefire ಮುಂದುವರಿಯುತ್ತದೆಯಾ?ಶಾಂತಿ ಅಥವಾ ಸಂಘರ್ಷ? ಮುಂದಿನ ಕೆಲ ದಿನಗಳು ವಿಶ್ವದ ಭವಿಷ್ಯ ತೀರ್ಮಾನಿಸುತ್ತದೆ.
19 ವರ್ಷದ ಆಯಾನ್ ಅಹ್ಮದ್ ತನ್ವೀರ್ ಅಹ್ಮದ್ ವಿರುದ್ಧ ಗಂಭೀರ ಸೈಬರ್ ಲೈಂಗಿಕ ಶೋಷಣೆ ..!ಅಮರಾವತಿ ಭೀಕರ ಪ್ರಕರಣ-
ಕುಂದಾಪುರದಲ್ಲಿ ಎರಡು ಮಕ್ಕಳ ತಾಯಿ ನಾಪತ್ತೆ. ಸ್ನೇಹಿತರ ಜೊತೆಯಲ್ಲಿ ಹೋಗಿರುವ ಶಂಕೆ
ಆಪಲ್‌ಗೆ ಭಾರತದಲ್ಲಿ ದೊಡ್ಡ ಕಾನೂನು ಶಾಕ್? App Store ನಿಯಮಗಳ ಮೇಲೆ ಆಪಲ್ vs ಭಾರತ CCI ಜಟಾಪಟಿ 
ಇತಿಹಾಸ ಸೇರಿತು ಮಂಗಳೂರಿನ ಮೋತಿ ಮಹಲ್…..
ಇನ್ನು ಮುಂದೆ ದೇವಸ್ಥಾನ ಆಸ್ತಿಗೆ ದಾಖಲೆಗಳಲ್ಲಿ ದೇವರ ಹೆಸರೇ ಮಾಲೀಕ….34 ಸಾವಿರಕ್ಕೂ ಹೆಚ್ಚುಮುಜರಾಯಿ ದೇವಸ್ಥಾನಗಳ ಆಸ್ತಿ ರಕ್ಷಣೆ:
🔴 ಯುದ್ಧದ ಹೊತ್ತಿನಲ್ಲಿ ಮಾನವೀಯ ರಾಜತಾಂತ್ರಿಕತೆ: ಇರಾನ್‌ಗೆ ಭಾರತದಿಂದ ಮೊದಲ ವೈದ್ಯಕೀಯ ನೆರವು:
ಕಾರ್ಕಳದಲ್ಲಿ 2027ರ ಬಾಹುಬಲಿ ಮಹಾ ಮಜ್ಜನದ ಮಹೋತ್ಸವಕ್ಕೆ ದಿನ ಘೋಷಣೆ!
ಭರ್ಜರಿ ಬಿಜೆಪಿ ವಿಜಯೋತ್ಸವ ಬೆಂಗಳೂರಲ್ಲಿ ..!ಪ್ರಧಾನಿ ಮೋದಿ ಬರ್ತಿದ್ದಾರೆ.
ಶಿಕ್ಷಣ ಸುಧಾರಣೆಗೆ ರಾಜ್ಯ ಸರ್ಕಾರದ ಭರ್ಜರಿ ಪ್ಲಾನ್ ಬಹಿರಂಗ!