📍 Karavali Maruta
  • LOGIN
  • ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

    ಉಡುಪಿಯಲ್ಲಿ ಪೊಲೀಸ್ ಅಧಿಕಾರಿಗಳ ಸೋಗಿನಲ್ಲಿ  ಮಹಿಳೆಗೆ ₹65 ಲಕ್ಷ ವಂಚನೆ

    ಉಡುಪಿ: ಮುಂಬೈ ಕೊಲಾಬಾ ಪೊಲೀಸ್ ಇನ್ಸ್‌ಪೆಕ್ಟರ್ ಎಂದು ನಂಬಿಸಿ, 66 ವರ್ಷದ ಮಹಿಳೆಯೊಬ್ಬರಿಗೆ ಬೆದರಿಕೆ ಹಾಕಿ ₹65 ಲಕ್ಷ ಹಣವನ್ನು ವರ್ಗಾವಣೆ ಮಾಡಿಸಿಕೊಂಡು ಸೈಬರ್ ವಂಚನೆ ನಡೆಸಿರುವ ಘಟನೆ ಉಡುಪಿಯಲ್ಲಿ ನಡೆದಿದೆ.

    ಉಡುಪಿಯ ಶೀಲಾ (66) ಅವರಿಗೆ ಜುಲೈ 13ರಂದು ಬೆಳಿಗ್ಗೆ ಮುಂಬೈ ಪೊಲೀಸ್ ಇಲಾಖೆಯ ಹೆಸರಿನಲ್ಲಿ ವಾಟ್ಸ್‌ಆ್ಯಪ್ ಸಂದೇಶ ಬಂದಿತ್ತು. ಬಳಿಕ ಅದೇ ಸಂಖ್ಯೆಯಿಂದ ವಿಡಿಯೋ ಕರೆ ಮಾಡಿದ್ದ ವ್ಯಕ್ತಿಯೊಬ್ಬ ಪೊಲೀಸ್ ಸಮವಸ್ತ್ರದಲ್ಲಿದ್ದು, ತಾನು ಮುಂಬೈ ಕೊಲಾಬಾ ಪೊಲೀಸ್ ಇನ್ಸ್‌ಪೆಕ್ಟರ್ ಎಂದು ಪರಿಚಯಿಸಿಕೊಂಡಿದ್ದಾನೆ ಎನ್ನಲಾಗಿದೆ.

    ಮಹಿಳೆಯ ಬ್ಯಾಂಕ್ ಖಾತೆಗೆ ₹20 ಕೋಟಿ ಹಣ ಜಮೆಯಾಗಿದ್ದು, ಈ ಸಂಬಂಧ ಪ್ರಕರಣ ದಾಖಲಾಗಿದ್ದು, ಅವರ ವಿರುದ್ಧ ವಾರೆಂಟ್ ಇದೆ. ಮಂಗಳೂರು ಪೊಲೀಸರು ನಿಮ್ಮನ್ನು ಬಂಧಿಸಲಿದ್ದಾರೆ ಎಂದು ಆರೋಪಿಗಳು ಬೆದರಿಸಿದ್ದಾರೆ. ಬಳಿಕ ಮಹಿಳೆಯಿಂದ ವಿವಿಧ ಬ್ಯಾಂಕ್ ಖಾತೆಗಳ ವಿವರಗಳನ್ನು ಪಡೆದುಕೊಂಡು, ದಾಖಲೆಗಳ ಫೋಟೋಗಳನ್ನು ಬಲವಂತವಾಗಿ ತೆಗೆಸಿಕೊಂಡಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

    ವಂಚನೆಯಿಂದ ತಪ್ಪಿಸಿಕೊಳ್ಳಬೇಕಾದರೆ ಖಾತೆಯಲ್ಲಿರುವ ಹಣದ ನೋಟುಗಳ ಸೀರಿಯಲ್ ನಂಬರ್ ಪರಿಶೀಲನೆ ನಡೆಸಬೇಕಿದೆ ಎಂದು ಹೇಳಿ, ಆರೋಪಿಗಳು ಸೂಚಿಸಿದ ಬ್ಯಾಂಕ್ ಖಾತೆಗೆ ಹಣ ವರ್ಗಾವಣೆ ಮಾಡುವಂತೆ ಮಹಿಳೆಗೆ ತಿಳಿಸಿದ್ದಾರೆ. ಇದನ್ನು ನಂಬಿದ ಮಹಿಳೆ ಜುಲೈ 13ರಿಂದ 17ರವರೆಗೆ ಪದೇಪದೇ ನಡೆದ ವಾಟ್ಸ್‌ಆ್ಯಪ್ ಕರೆಗಳ ಹಿನ್ನೆಲೆಯಲ್ಲಿ ಹಂತ ಹಂತವಾಗಿ ಒಟ್ಟು ₹65 ಲಕ್ಷ ಹಣವನ್ನು ಆರೋಪಿಗಳು ಸೂಚಿಸಿದ ಖಾತೆಗಳಿಗೆ ವರ್ಗಾವಣೆ ಮಾಡಿದ್ದಾರೆ ಎನ್ನಲಾಗಿದೆ.

    ನಂತರ ತಾನು ಸೈಬರ್ ವಂಚನೆಗೆ ಒಳಗಾಗಿರುವುದನ್ನು ಅರಿತ ಮಹಿಳೆ ಪೊಲೀಸರಿಗೆ ದೂರು ನೀಡಿದ್ದಾರೆ. ಮುಂಬೈ ಕೊಲಾಬಾ ಪೊಲೀಸ್ ಇನ್ಸ್‌ಪೆಕ್ಟರ್ ಎಂದು ನಂಬಿಸಿ, ಬೆದರಿಕೆ ಹಾಕಿ ಬ್ಯಾಂಕ್ ಖಾತೆಗಳ ಮಾಹಿತಿ ಪಡೆದು ₹65 ಲಕ್ಷ ಹಣವನ್ನು ಮೋಸದಿಂದ ವರ್ಗಾವಣೆ ಮಾಡಿಸಿಕೊಂಡಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.

    ಈ ಸಂಬಂಧ ಉಡುಪಿ ಸೆನ್ ಅಪರಾಧ ಪೊಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 30/2026ರಂತೆ ಐಟಿ ಕಾಯ್ದೆಯ ಕಲಂ 66(D) ಹಾಗೂ ಭಾರತೀಯ ನ್ಯಾಯ ಸಂಹಿತೆ (BNS)ಯ ಸಂಬಂಧಿತ ಕಲಂಗಳಡಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

    ಪೊಲೀಸ್ ಅಧಿಕಾರಿಗಳ ಹೆಸರಿನಲ್ಲಿ ವಿಡಿಯೋ ಕರೆ ಮಾಡಿ ಬೆದರಿಸುವುದು, ಹಣ ವರ್ಗಾವಣೆ ಮಾಡುವಂತೆ ಒತ್ತಾಯಿಸುವುದು ಸೇರಿದಂತೆ ಇಂತಹ ಸೈಬರ್ ವಂಚನೆ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರು ಎಚ್ಚರಿಕೆ ವಹಿಸುವಂತೆ ಪೊಲೀಸರು ಆಗಾಗ ಸೂಚಿಸುತ್ತಿದ್ದಾರೆ.

    COMMENTS

    Login with Gmail to comment

    ಇನ್ನಷ್ಟು ಸುದ್ದಿ

    BRICS ನ ಡಿಜಿಟಲ್ ಕರೆನ್ಸಿ ವಿಶ್ವ ಆರ್ಥಿಕತೆಯನ್ನೇ ಬೆರಗಾಗಿಸುತ್ತಾ..?
    ತಿರುಮಲ ತಿಮ್ಮಪ್ಪನ 3,550 ಮೆಟ್ಟಿಲು ಹತ್ತಿದ 116 ವರ್ಷದ ನವನೀತಮ್ಮ ಕರ್ನಾಟಕದ ಶತಾಯುಷಿ!
    Trump ಮಾತಿಗೆ Iran ಸಂಸತ್ ಸ್ಪೀಕರ್‌ನ ಕಠಿಣ ಸಂದೇಶ ವಿಶ್ವದ ಗಮನ ಸೆಳೆದಿದೆ!
    ಪಿವಿ ಎಸ್ ಸಂಸ್ಥೆಯ ಆಡಳಿತದಲ್ಲಿ ಯಾರ ಹಸ್ತಕ್ಷೇಪವು ಇಲ್ಲ – ಸರೋಜಿನಿ ಕುಶೆ
    ಬೆಳಗ್ಗೆಯೇ ಲೋಕಾಯುಕ್ತ ಬಿಗ್ ಬ್ಲಾಸ್ಟ್!54 ಕಡೆ ಏಕಕಾಲದಲ್ಲಿ ರೇಡ್… ಚಿನ್ನ, ನಗದು, ಮನೆ, ಜಮೀನುಗಳ ಮಹಾಪರ್ವತ ಪತ್ತೆ!
    KPSC ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ ಅಮಾನತ್
    ಟೆಕ್ಸಾಸ್‌ನಲ್ಲಿ ತ್ರಿವರ್ಣ ಧ್ವಜ ಹರಿದು ಹಾಕಿದ ವಿಡಿಯೋ ವೈರಲ್ …ಅಮೆರಿಕದಲ್ಲಿ ಹೆಚ್ಚುತ್ತಿದೆಯೇ ಭಾರತ ವಿರೋಧಿ ಮನೋಭಾವ?
    “ಆ್ಯಕ್ಷನ್ ಸಿಎಂ” ಡಿಕೆ ಶಿವಕುಮಾರ್ ತಾಳ್ಮೆಯಿಂದ ತಾಕತ್ತಿನವರೆಗೆ…ಆಡಳಿತದ ಅಬ್ಬರ ಶುರು!ಏನೇನ್ ಹೇಳಿದ್ರು ?ಕರ್ನಾಟಕದಲ್ಲಿ ಹೊಸ ಆಡಳಿತ ಶೈಲಿಯ ಆರಂಭವೇ?
    ಮೊಹಾಲಿ ಬೆಚ್ಚಿಬೀಳಿಸಿದ ಕಚೇರಿ ಕೊಲೆ: ಮಹಿಳೆ ಮೇಲೆ ಮಾರಣಾಂತಿಕ ದಾಳಿ, ದೇಶಾದ್ಯಂತ ಆಕ್ರೋಶ…
    “ವಕೀಲರೇ ಎಚ್ಚರ! ಕೋರ್ಟ್‌ನಲ್ಲಿ ನಕಲಿ AI ರೆಫರೆನ್ಸ್ ನೀಡಿದರೆ ಕಠಿಣ ಶಿಸ್ತು ಕ್ರಮ: BCIಗೆ ಸುಪ್ರೀಂ ಕೋರ್ಟ್ ಮಹತ್ವದ ನಿರ್ದೇಶನ”
    ಭಾರತದಲ್ಲಿ ಎಚ್‌ಪಿವಿ (HPV) ಲಸಿಕೆ ಕಾರ್ಯಕ್ರಮ ಹೆಣ್ಣೆತ್ತವರು ತಿಳಿದುಕೊಳ್ಳಲೇಬೇಕಾದ ವಿಚಾರ
    ಶಾಲೆಗಳ ದುಸ್ಥಿತಿ ತೋರಿಸಲು CJP ಸಜ್ಜು; ‘ಹೊರಗಿನವರಿಗೆ ನೋ ಎಂಟ್ರಿ’ ಎಂದ ರಾಜಸ್ಥಾನ ಸರ್ಕಾರ!
    ಮಹಿಳಾ ಮೀಸಲಾತಿ ಮತ್ತು ಕ್ಷೇತ್ರ ಪುನರ್ ವಿಂಗಡಣೆ ನಡುವೆ ಮಹಿಳಾ ಮಿಸಲಿಗೆ ಸೋಲು….
    ಮೇ 29ರಿಂದ ತಣ್ಣೀರುಬಾವಿ ಬೀಚ್‌ನಲ್ಲಿ ಮೂರು ದಿನಗಳ ರಾಷ್ಟ್ರಮಟ್ಟದ ಸರ್ಫಿಂಗ್ ಸ್ಪರ್ಧೆ…
    ನಿಮ್ಮ ಮಾತು ಕೇಳಿ ರಾಜೀನಾಮೆ ನೀಡಿದ್ದೇನೆ. ಈಗ ನನ್ನ ಬೇಡಿಕೆ ಈಡೇರಿಸುವುದು ನಿಮ್ಮ ಸರದಿ  ಎಂದ ಸಿದ್ದರಾಮಯ್ಯ
    ಎಲ್ಲರಿಗೂ ಯುಗಾದಿ ಹಬ್ಬ… ಆದರೆ ಈ ಗ್ರಾಮಗಳಲ್ಲಿ ಭಯ ಮೌನ…ಹಬ್ಬ ಇಲ್ಲ…!ಒಂದು ವಿಚಿತ್ರ ಕಥೆ!
    ನಿಶ್ಶಬ್ದ ಕೊಠಡಿ ಹೇಳುವ ನಿಗೂಢ ರಹಸ್ಯ …!ಮನೆಯ ಗೋಡೆಗಳ ಮೇಲೆ ಬರಹ,ಕಾಗದಗಳು ನೂರಾರು…! ಅಸಹಜ ಮರಣದ ಹಿಂದೆ ಅಡಗಿರುವ ಸತ್ಯ ಇನ್ನೂ ಅನಾವರಣವಾಗಿಲ್ಲ…”
    ಇನ್‌ಸ್ಟಾಗ್ರಾಮ್ ಬ್ಲಾಕ್ ಆದ ಕ್ಷಣದಿಂದ ಹೊರಬಂತು ರಹಸ್ಯ!
    ಬೆಂಗಳೂರಿನಿಂದ ಚೆನ್ನೈಗೆ ಹೊರಟ ವಿಮಾನದಲ್ಲಿ ಹೊಗೆ — ಎಲ್ಲಾ ವಿಮಾನಗಳು ವಿಳಂಬ ಪ್ರಯಾಣಿಕರಿಗೆ ತೊಂದರೆ
    ಹೈಕೋರ್ಟ್ ಸಂಚಾರಿ ಪೀಠ ಸ್ಥಾಪನೆ ನಿರ್ಧಾರ ಬದಲಾಗುತ್ತದೆಯೇ? ಕರಾವಳಿ ಕಾದಿದೆ ಉಸಿರು ಹಿಡಿದು!
    ಕೊಲೆ ಆರೋಪಿಗಳ ಕಾರು ಮಾಣಿಯಲ್ಲಿ ಪತ್ತೆ ….!
    ಅಣ್ಣಾ ಹಜಾರೆಗೆ ಲೈವ್, ಸೋನಂ ವಾಂಗ್ಚುಕ್‌ಗೆ ಮೌನವೇಕೆ?”  ದ್ವಂದ್ವ ನೀತಿಯ ಬಗ್ಗೆ ಪ್ರಶ್ನೆ
    ಮನೆಯ ಲಾಕ್ ವ್ಯವಸ್ಥೆ ಇದ್ದರೂ, ಸುರಕ್ಷತೆ ಭೇದಿಸಲಾಗಿದೆ….!ಕುಟುಂಬ ದೇವಸ್ಥಾನಕ್ಕೆ -ಕಳ್ಳರು ಅದೇ ಮನೆ ಟಾರ್ಗೆಟ್..!
    Lokayukta Raid In Hassan: ಬಾಗಿಲು ತೆರೆಯದೆ AEE ಹೈಡ್ರಾಮಾ, ಮನೆ ಏರಿದ ಲೋಕಾ ಪೊಲೀಸರು | AEE Satyanarayan
    ಮಕ್ಕಳಿಲ್ಲದ ನೋವನ್ನು ಮರಗಳ ಪ್ರೀತಿಯಾಗಿ ಬದಲಿಸಿ ಬರಡು ಭೂಮಿಯನ್ನು ಹಸಿರು ಕಾಡಾಗಿಸಿದ ದಂಪತಿಗಳ ಅದ್ಭುತ ಜೀವನಗಾಥೆ
    ಹವ್ಯಕ ಭಾಷಾ ಅಕಾಡೆಮಿ ಸ್ಥಾಪನೆಯ ಕ್ರೆಡಿಟ್ ಪಡೆದುಕೊಳ್ಳಲು ಶುರುವಾಯಿತು ಫೈಟ್
    ತುಮಕೂರಿನಲ್ಲಿ ಬೆಚ್ಚಿಬೀಳಿಸುವ ತಂದೆ-ಮಗಳು ದುರಂತ
    ಕುಂದಾಪುರ ಗಂಗೊಳ್ಳಿಯಲ್ಲಿ ಕತ್ತಿ  ದೊಣ್ಣೆಗಳಿಂದ ಮಾರಾಮಾರಿ; ವೈರಲ್ ವಿಡಿಯೋದಿಂದ ಪ್ರಕರಣಕ್ಕೆ ಹೊಸ ತಿರುವು?
    🚨 “ಮಂಗಳೂರು ಜಿಲ್ಲಾಕಾರಾಗೃಹದಲ್ಲಿ ಗಲಾಟೆ: ಜೈಲು ಅಧೀಕ್ಷಕರ ಮೇಲೆಯೇ ಕೈದಿಗಳ ಹಲ್ಲೆಯತ್ನ!”
    717 ಮದ್ಯದಂಗಡಿಗಳಿಗೆ ವಿಜಯ್ ಬ್ರೇಕ್‌! ತಮಿಳುನಾಡು ಖಜಾನೆಗೆ ಸಾವಿರಾರು ಕೋಟಿ ಶಾಕ್!