📍 Karavali Maruta
  • LOGIN
  • ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

    ಉಡುಪಿಯಲ್ಲಿ  ಬೆಟ್ಟಿಂಗ್ ಮಾಫಿಯಾದ ಚಟುವಟಿಕೆಯನ್ನು ಡೆತ್ ನೋಟ್ ರಿವಿಲ್ ಮಾಡಿತೇ?

    ಉಡುಪಿ ಜಿಲ್ಲೆಯಲ್ಲಿ ಬೆಟ್ಟಿಂಗ್ ವ್ಯವಹಾರ ನಡೆಸುತ್ತಿರುವವರ ಒಂದು ತಂಡ ವ್ಯವಸ್ಥಿತವಾಗಿ ಕಾರ್ಯಚರಿಸುತ್ತಿದೆ ಅನ್ನುವುದು ಮತ್ತೊಂದು ಪ್ರಕರಣದಿಂದ ಬಯಲಿಗೆ ಬಂದಿದೆ.

    ಸಾಯಿ ರಾಜ್ ಕೋಆಪರೇಟಿವ್ ಸೊಸೈಟಿಯ ಕಾರ್ಯನಿರ್ವಹಣಾಧಿಕಾರಿ ಸಚಿನ್ ಶೆಟ್ಟಿ ಆತ್ಮಹತ್ಯೆಗೆ ಸಂಬಂಧಿಸಿದಂತೆ ಡೆತ್ ನೋಟ್ ಒಂದು ಸಿಕ್ಕಿದೆಯಂತೆ.  ಅದರಲ್ಲಿ ಕ್ರಿಕೆಟ್ ಬೆಟ್ಟಿಂಗ್ ವಿಚಾರವಾಗಿ ಸಾಕಷ್ಟು ದೊಡ್ಡ ಮೊತ್ತದ ಹಣವನ್ನು ಕಳೆದುಕೊಂಡಿರುವುದಾಗಿ ಆ ಒಂದು ಡೆತ್ ನೋಟ್ ನಲ್ಲಿ ಸಚಿನ್ ಶೆಟ್ಟಿ ಬರೆದಿದ್ದಾರಂತೆ.

    ಇದರರ್ಥ ಉಡುಪಿ ಜಿಲ್ಲೆಯಲ್ಲಿ ಕ್ರಿಕೆಟ್ ಹಾಗೂ ಇತರೆ ಬೆಟ್ಟಿಂಗ್ ಮಾಫಿಯಾ ಕಾರ್ಯಾಚರಿಸುತ್ತಿದೆ, ಎಲ್ಲಿಯೋ ಕುಳಿತು ಮೊಬೈಲ್ ಮೂಲಕವೇ ಇದೆಲ್ಲವನ್ನು ಈ ಮಾಫಿಯಾ ಮ್ಯಾನೇಜ್ ಮಾಡುತ್ತಿದೆ ಅನ್ನುವ ಸುದ್ದಿಯು ಮತ್ತೊಮ್ಮೆ ಈ ಪ್ರಕರಣದಿಂದಾಗಿ ಮುನ್ನೆಲೆಗೆ ಬರುತ್ತಿದೆ.

    ಕುಂದಾಪುರ ತಾಲೂಕು, ಹಾಗೂ ಬ್ರಹ್ಮಾವರ ತಾಲೂಕು ಮತ್ತು ಹೆಬ್ರಿ ತಾಲೂಕ ವ್ಯಾಪ್ತಿಯಲ್ಲಿ ಅತಿ ಹೆಚ್ಚು ಬೆಟ್ಟಿಂಗ್ ಕಿಂಗ್ ಪಿನ್ಗಳು ಇದ್ದು, ಅವರು ಅತ್ಯಂತ ವ್ಯವಸ್ಥಿತವಾಗಿ ತಮ್ಮ ಜಾಲವನ್ನು ವಿಸ್ತರಿಸಿಕೊಂಡಿದ್ದಾರೆ. ಹಾಗೆಯೇ ಕೋಟ್ಯಾಂತರ ರೂ ಹಣವನ್ನು ಗಳಿಸಿದ್ದಾರೆ ಎನ್ನುವ ಸುದ್ದಿ ಹೊಸತಲ್ಲ. ಈ ಹಿಂದೆ ಎರಡು ಮೂರು ಇನ್ಸಿಡೆಂಟ್ ಈ ಭಾಗದಲ್ಲಿ ಆಗಿದೆ. ಅದೆಲ್ಲವೂ ಬೆಟ್ಟಿಂಗ್ ಮಾಫಿಯಾಕ್ಕೆ ಸಂಬಂಧಪಟ್ಟ ವ್ಯವಹಾರವೇ ಆಗಿತ್ತು ಅನ್ನುವುದು ಇಂಟರ್ನಲ್ ಮಾಹಿತಿಯು ಹೇಳುತ್ತಿತ್ತು.

    ಅದೇನೆ ಇರಲಿ, ಸಚಿನ್ ಶೆಟ್ಟಿ ಸಾವಿಗೆ ಈ ಒಂದು ಬೆಟ್ಟಿಂಗ್ ವಿಚಾರ ಹೊರತುಪಡಿಸಿ ಅವರ ವ್ಯವಹಾರಿಕ ವಿಚಾರವೂ ಅಡಗಿದೆ ಎಂಬ ಸುದ್ದಿಯು ಇರುವುದರಿಂದ ಈ ಬಗ್ಗೆ ಅಮೂಲಾಗ್ರ ತನಿಖೆಯಾಗಬೇಕಿದೆ. ಹಾಗೆಯೇ ಜಿಲ್ಲೆಯಲ್ಲಿ ಈ ಬೆಟ್ಟಿಂಗ್ ಹುಳಗಳನ್ನು ಬಗ್ಗು ಬಡಿಯುವ ಕೆಲಸ ಅತಿ ವೇಗವಾಗಿ ಆಗಬೇಕೆಂಬ ಆಗ್ರಹಾವು ಜನಸಾಮಾನ್ಯರಿಂದ ಕೇಳಿ ಬರುತ್ತಿದೆ. ಇನ್ನೊಬ್ಬ ಸಚಿನ್ ಶೆಟ್ಟಿಯ ಸಾವು ಈ ಬೆಟ್ಟಿಂಗ್ ನಿಂದಾಗಿ ಆಗುವುದು ಬೇಡ ಅನ್ನುವುದು ಸಾರ್ವಜನಿಕರ ಅಭಿಪ್ರಾಯ.

    COMMENTS

    Login with Gmail to comment

    ಇನ್ನಷ್ಟು ಸುದ್ದಿ

    ಮಕ್ಕಳ ಕೈಯಿಂದ ಮೊಬೈಲ್ ಕಸಿಯಲು ಮುಂದಾದ ಬ್ರಿಟನ್!ಯುಕೆಯ ನಿರ್ಧಾರಕ್ಕೆ ವಿಶ್ವದ ಗಮನ…
    ಒಂದೆಡೆ ‘ನಶಾ ಮುಕ್ತ ಯುವ ಭಾರತ’ ಅಭಿಯಾನ; ಮತ್ತೊಂದೆಡೆ ಪಬ್ ಸಂಸ್ಕೃತಿಯ ಸೆಳೆತ..! ಮಣಿಪಾಲದಲ್ಲಿ ಅಪ್ರಾಪ್ತರ ಮದ್ಯಪಾನ ಬಯಲು
    ನಾರ್ವೇ ಪತ್ರಕರ್ತರಿಗೆ ತಿರುಗೇಟು: “ಭಾರತದ ವಾಸ್ತವತೆ ಅರಿವಿಲ್ಲ” ಎಂದ MEA ಕಾರ್ಯದರ್ಶಿ ಸಿಬಿ ಜಾರ್ಜ್…
    ನಾಲ್ಕು ವರ್ಷದ ಬಾಲಕಿ  ಅಪಹರಿಸಿ, ಲೈಂಗಿಕ ದೌರ್ಜನ್ಯ ನಡೆಸಿ ಕೊಲೆಗೈದ ಆರೋಪಿಯನ್ನು ಎನ್ಕೌಂಟರ್ ಮಾಡಿದ ಪೊಲೀಸರು
    ಖಾಸಗಿ ಬಸ್ಸಿನಲ್ಲಿ ಮಹಿಳೆಯ ಮಂಗಳಸೂತ್ರ ಏಗರಿಸಿದ್ರಾ?
    ದಾವೂದ್ ಇಬ್ರಾಹಿಂನ ಆಪ್ತ. ಸಲೀಂ ಡೋಲಾ ಬಂದನ ವಿದೇಶದಲ್ಲಿ ಅಡಗಿದ್ದರೂ ಕಾನೂನಿನಿಂದ ತಪ್ಪಿಸಿಕೊಳ್ಳಲಾಗಲಿಲ್ಲ
    ಮಣಿಪಾಲ ಜೆಇಇ ಮೇನ್ಸ್ ಪರೀಕ್ಷಾ ಕೇಂದ್ರದಲ್ಲಿ ಅಕ್ರಮ ಪ್ರಯತ್ನ….
    ನೀವೂ ತಿಳಿದಿರಬೇಕಾದ ವಿಷಯ:ಬರುವ ಆರ್ಥಿಕ ಸಂಕಷ್ಟಕ್ಕೆ ಈಗಲೇ ಸಿದ್ಧರಾಗಿ!
    ದೆಹಲಿ ಕೆಂಪುಕೋಟೆ ಸ್ಫೋಟಕ್ಕೆ AQIS ಸಂಪರ್ಕ: UNSC ವರದಿಯಿಂದ ಬೆಚ್ಚಿಬಿದ್ದ ಭದ್ರತಾ ವಲಯ
    ಫ್ರಿಡ್ಜ್ ರಿಪೇರಿಗೆ ಬಂದವ ಮನೆ ಲೂಟಿ ಪರಾರಿ…!ಬಿ ಅಲರ್ಟ್ ‼️
    ಬಾಲಕಾರ್ಮಿಕ ಪತ್ತೆ : ಮಾಲೀಕನಿಗೆ ಜೈಲು, ದಂಡ
    ಜಯದೇವ ಆಸ್ಪತ್ರೆಯಲ್ಲಿ ಒಂದೇ ದಿನ 11 ರೋಗಿಗಳಿಗೆ heartattack !!!..ಐಸಿಯು ಮತ್ತು ಸಿಸಿಟಿವಿ ದೃಶ್ಯಗಳಲ್ಲಿದೆ ಕ್ಲಾರಿಟಿ!
    ಪಾಕಿಸ್ತಾನದಿಂದ ನೀರಿನ ವಿಚಾರದಲ್ಲಿ ಕಠಿಣ ಎಚ್ಚರಿಕೆ; ನೀರಿಗಾಗಿ ಯುದ್ದಕ್ಕೂ ಸಿದ್ದವೆಂದ ಪಾಕ್ ….!
    ಇನ್‌ಸ್ಟಾಗ್ರಾಮ್ ಬ್ಲಾಕ್ ಆದ ಕ್ಷಣದಿಂದ ಹೊರಬಂತು ರಹಸ್ಯ!
    ಆಂಧ್ರದ ಪುಟ್ಟಪರ್ತಿಯಲ್ಲಿ ಅಡಗಿದೆ ಆ ದೊಡ್ಡ ರಹಸ್ಯ!ಆಕಾಶದಲ್ಲಿ ಕಣ್ಣಿಗೆ ಕಾಣದಂತೆ ಬೇಟೆಯಾಡುವ ಸಮಯ ಹತ್ತಿರದಲ್ಲಿದೆ!
    ಆಹಾರ ಬೆಲೆ ಏರಿಕೆ: ಸಾಮಾನ್ಯರ ಅಡಿಗೆ ಮನೆಗೆ ಮತ್ತೆ ಹೊರೆ?
    ವಿಶಾಖಪಟ್ಟಣಂ ಉಕ್ಕಿನ ಕಾರ್ಖಾನೆ ದುರಂತ:ಕೆಲವೇ ಕ್ಷಣಗಳಲ್ಲಿ ಎಂಟು ಜೀವಗಳನ್ನು ನುಂಗಿದ ಉಕ್ಕಿನ ಬೆಂಕಿ!ಕೆಲಸಕ್ಕೆ ಹೋದವರು ಮನೆಗೆ ಮರಳಲಿಲ್ಲ… 
    ಅಮೆರಿಕದ ಭೀಕರ ವಾಯು ದಾಳಿ: ಇರಾನ್‌ನ ಆರ್ಥಿಕ ಹೃದಯ ‘ಖಾರ್ಗ್ ದ್ವೀಪ’ದ ಸೇನಾ ನೆಲೆಗಳು ಧ್ವಂಸ – ಪ್ರತಿದಾಳಿ ಮಾಡಿದರೆ ತೈಲ ಕೇಂದ್ರಗಳೇ ಮುಂದಿನ ಗುರಿ ಎಂದು ಟ್ರಂಪ್ ಕಠಿಣ ಎಚ್ಚರಿಕೆ
    ತಸ್ಲಿಮಳ ಹಣೆಗೆ ಸಿಂಧೂರವಿಟ್ಟ ಕೇಶವ, ಬುರ್ಖಾ ತೆಗೆದಿಟ್ಟ ತಸ್ಲೀಮಾ
    ಕರಾವಳಿಯಲ್ಲಿ ವಾಪಸ್ ಆದ ಮುಂಗಾರು: ಜುಲೈ 6ರವರೆಗೆ ಆರೆಂಜ್ ಅಲರ್ಟ್ – ಜನರಿಗೆ ಎಚ್ಚರಿಕೆ
    ಜಮ್ಮು-ಕಾಶ್ಮೀರದಲ್ಲಿ ಖಾಕಿ ಮೇಲೆ ಖಾಕಿ ದಾಳಿ? ಹೈಡ್ರಾಮಾ: ಕರ್ನಲ್, ಮೇಜರ್ ಸೇರಿ 40 ಸೇನಾ ಸಿಬ್ಬಂದಿ ವಿರುದ್ಧ ಎಫ್‌ಐಆರ್ ದಾಖಲು.
     ಡೊನಾಲ್ಡ್ ಟ್ರಂಪ್ ಟೆರರ್ ನಡೆ      ವಿಶ್ವದ ಆರ್ಥಿಕತೆ ಪಾತಾಳದ ಕೆಡೆ
    ಮಂಗಳೂರು ಏರ್‌ಪೋರ್ಟ್‌ನಲ್ಲಿ ಉಬರ್ …
    ಸ್ಟೇಟ್ ಬ್ಯಾಂಕ್ ಮೀನು ಮಾರುಕಟ್ಟೆಗೆ ಭೇಟಿ ನೀಡಿದ ಡಾ. ನಾಗಲಕ್ಷ್ಮಿ ಚೌಧರಿ – ಮಹಿಳಾ ಮೀನುಗಾರರ ಸಮಸ್ಯೆ ಆಲಿಕೆ
    ಶಿಕ್ಷಕರು ಹೊಡೆಯುತ್ತಾರೆಂಬ ಭಯಕ್ಕೆ ಮನೆ ಬಿಟ್ಟ 9ನೇ–10ನೇ ತರಗತಿ ವಿದ್ಯಾರ್ಥಿನಿಯರು..!ಎಲ್ಲಿದ್ದರು ಗೊತ್ತಾ..!
    ಹುಡುಗಾಟಿಕೆ ಆಡುತ್ತಿರುವ ರಾಮಲಿಂಗಾರೆಡ್ಡಿ-ಕ್ಷೇತ್ರದ ಜನರಲ್ಲಿ ಅಸಮಾಧಾನ
    “ಬೇಕಾದರೇ ನನಗೆ ಪೊರಕೆಲಿ ಹೊಡಿರಿ ಆದ್ರೆ ಅಧಿಕಾರಿಗಳಿಗಲ್ಲ”- ಡಿಕೆಶಿ “ಭೂಮಿ ಉಳಿಸಿಕೊಳ್ಳಲು ಹೋರಾಡಿದ ರೈತರ ಮೇಲೆ ಕೊಲೆ ಕೇಸ್? ಬಿಡದಿ ವಿವಾದದ ಬಗ್ಗೆ ರಾಜ್ಯಾದ್ಯಂತ ಆಕ್ರೋಶ!
    ಬಂಟ್ವಾಳದಲ್ಲಿ ಶಾಲಾ ಬಸ್ ಮೇಲೆ ಉರುಳಿದ ಬೃಹತ್ ಮರ; ಪುಟ್ಟ ಜೀವವೊಂದು ಬಲಿ.. ಕೆಲವು ಮಕ್ಕಳಿಗೆ ಗಾಯ..
    17 ವರ್ಷದ ಯುವಕ ಸಂಸತ್ತಿನ ಕದ ತಟ್ಟಬಲ್ಲ ಎಂದಾದರೆ, ನಿಮ್ಮ ಧ್ವನಿಗೆ ಎಷ್ಟು ಶಕ್ತಿಯಿದೆ ಯೋಚಿಸಿ!..ವ್ಯವಸ್ಥೆಯ ಲೋಪದ ವಿರುದ್ಧ ಧ್ವನಿ ಎತ್ತದಿದ್ದರೆ ಬದಲಾವಣೆ ಸಾಧ್ಯವಿಲ್ಲ.
    ಇಂದು ಬೆಳ್ಳಂ ಬೆಳಗ್ಗೆ ಪಲ್ಟಿ ಯಾದ ಬಸ್… ಒಬ್ಬ ಸಾವು ಹಲವರಿಗೆ ಗಾಯ