📍 Karavali Maruta
  • LOGIN
  • BREAKING
    ಧಾರವಾಡದಲ್ಲಿ ಭೀಕರ LPG ಸಿಲಿಂಡರ್ ಸ್ಫೋಟ , ಹಲವು ಮೀಟರ್ ದೂರಕ್ಕೆ ಹಾರಿದ ಬೈಕ್‌! ಹಲವರಿಗೆ ಗಾಯ CCTVಯಲ್ಲಿ ಶಾಕಿಂಗ್ ದೃಶ್ಯ ದಯಾಮರಣ ಕೇಳಿದ್ದ ತುಮಕೂರು ರಾಬಿಯಾ ಇನ್ನಿಲ್ಲ …!ಪರಮೇಶ್ವರ್ ಮುಂದೆ ಕಣ್ಣೀರಿಟ್ಟಿದ್ದ ಮಹಿಳೆ ಇಬ್ಬರು ಮಕ್ಕಳೊಂದಿಗೆ ವಿಷಸೇವಿಸಿ ಕೊನೆಯುಸಿರು…‘ಮನೆ’ ಸಿಕ್ಕರೂ ಬದುಕು ಉಳಿಯಲಿಲ್ಲ! ನೇಪಾಳ ದುರಂತ: ಕಂಪ್ಲೀಟ್ ರಿಪೋರ್ಟ್ ಇಲ್ಲಿದೆ…ಕಣ್ಣೆದುರೇ ಕೊಚ್ಚಿಹೋದ ಬದುಕು… ಲೆಕ್ಕಕ್ಕೆ ಸಿಗದ ಸಾವು, ನೋವು!ಪ್ರವಾಹದ ರೌದ್ರದ ನಡುವೆ ಮೃತದೇಹದಿಂದಲೇ ಚಿನ್ನ ಕದಿಯಲು ಯತ್ನ… ಮಾನವೀಯತೆ ಮರೆತ ಕಿರಾತಕರು!ಇಬ್ಬರು ಅರೆಸ್ಟ್! ಮಹಿಳಾ ಕಾನ್ಸ್‌ಟೇಬಲ್ ಮೇಲೆ ಪೊಲೀಸ್ ಠಾಣೆಯಲ್ಲಿ ಮಾರಣಾಂತಿಕ ಹಲ್ಲೆ ವಾಜಪೇಯಿ ಸರ್ಕಾರದ  ಕನಸಿನ ಯೋಜನೆ ನದಿ ಜೋಡಣೆ ವಿರೋಧಿಸಿ ಶಿರಸಿಯಲ್ಲಿ ಸಹಿ ಸಂಗ್ರಹ ಅಭಿಯಾನ
    ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

    ಉಡುಪಿ ಜಿಲ್ಲಾಆಸ್ಪತ್ರೆಯಲ್ಲಿ ಹಗರಣ, ತಾರತಮ್ಯದ ಆರೋಪ: ವೀಣಾದೇವಿ ವಿರುದ್ಧದಕ್ರಮ ಕಣ್ಣೊರೆಸುವ ತಂತ್ರ

    ಉಡುಪಿ: ಜಿಲ್ಲಾ ಆಸ್ಪತ್ರೆಯ ಆಡಳಿತದಲ್ಲಿ ನಡೆಯುತ್ತಿರುವ ಅಕ್ರಮ ಮತ್ತು ತಾರತಮ್ಯದ ವಿರುದ್ಧ ಗಂಭೀರ ಆರೋಪಗಳು ಕೇಳಿಬಂದಿವೆ. ಬ್ಲಡ್ ಬ್ಯಾಂಕ್ ಅಧಿಕಾರಿ ವೀಣಾ ದೇವಿ ಅವರ ವಿರುದ್ಧ ಜಿಲ್ಲಾ ಶಸ್ತ್ರಚಿಕಿತ್ಸಕರು ವಿನಾಕಾರಣ ನೋಟಿಸ್ ನೀಡಿ ಅನಗತ್ಯವಾಗಿ ಸಿಲುಕಿಸುವ ಸಂಚು ರೂಪಿಸುತ್ತಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

    ಆದರೆ ಇದೇ ವೇಳೆ ಮೂಳೆ ರೋಗ ತಜ್ಞರಾದ ಡಾ. ಸಾಗರ್ ಅವರ ವಿರುದ್ಧ ಬಂದ ಗಂಭೀರ ದೂರುಗಳನ್ನು ಮುಚ್ಚಿ ಹಾಕಲಾಗುತ್ತಿದೆ ಎಂಬುದು ಸಾಮಾನ್ಯ ಜನರ ಆಕ್ರೋಶಕ್ಕೆ ಕಾರಣವಾಗಿದೆ.

    ತಾರತಮ್ಯದ ಆರೋಪ
    ವೀಣಾ ದೇವಿ ಅವರಿಗೆ ನೋಟಿಸ್ ನೀಡಲಾಗಿದ್ದರೆ, ಅದೇ ರೀತಿಯ ಗಂಭೀರ ದೂರು ಬಂದಿದ್ದರೂ ಡಾ. ಸಾಗರ್ ಅವರಿಗೆ ಯಾವುದೇ ವಿವರಣೆ ಕೇಳದೆ ರಕ್ಷಣೆ ನೀಡಲಾಗುತ್ತಿದೆ ಎಂದು ಆರೋಪಿಸಲಾಗಿದೆ.

    ವಿದ್ಯಾರ್ಥಿಗಳಿಂದ ಶಸ್ತ್ರಚಿಕಿತ್ಸೆ, ದೂರು

    ಡಾ. ಸಾಗರ್ ಅವರ ಮೇಲ್ವಿಚಾರಣೆಯಲ್ಲಿ ಕಲಿಯುವ ವಿದ್ಯಾರ್ಥಿಗಳೇ ರೋಗಿಗಳಿಗೆ ಶಸ್ತ್ರಚಿಕಿತ್ಸೆ ಮಾಡುತ್ತಿದ್ದಾರೆ ಎಂದು ರೋಗಿಯೊಬ್ಬರು ನೇರ ದೂರು ನೀಡಿದ್ದರು. ಆದರೆ ಈ ಕುರಿತು ಯಾವುದೇ ತನಿಖೆ ನಡೆದಿಲ್ಲ ಎನ್ನಲಾಗಿದೆ. ಈ ದೂರು ನೀಡಿದ ರೋಗಿಯನ್ನೇ “ಮಾನಸಿಕ ರೋಗಿ” ಎಂದು ಜಿಲ್ಲಾ ಶಸ್ತ್ರಚಿಕಿತ್ಸಕರು ವಿಡಿಯೋದಲ್ಲಿ ಹೇಳಿಕೆ ನೀಡಿ ಪ್ರಕರಣವನ್ನು ದಿಕ್ಕು ತಪ್ಪಿಸುತ್ತಿದ್ದಾರೆ ಎಂಬ ಆರೋಪವೂ ಇದೆ.

    • ಖಾಸಗಿ ಆಸ್ಪತ್ರೆಗೆ ರೆಫರ್: ಸರ್ಕಾರಿ ಆಸ್ಪತ್ರೆಗೆ ಬರುವ ಬಡ ರೋಗಿಗಳನ್ನು ಆಯುಷ್ಮಾನ್ ಯೋಜನೆಯ ಹೆಸರಿನಲ್ಲಿ ಕಮಿಷನ್ ಆಸೆಗಾಗಿ ಖಾಸಗಿ ಆಸ್ಪತ್ರೆಗಳಿಗೆ ಕಳುಹಿಸುತ್ತಿದ್ದಾರೆ.
    • ಹಾಜರಾತಿ ನಿಯಮ ಉಲ್ಲಂಘನೆ: ಸರಿಯಾದ ಸಮಯಕ್ಕೆ ಆಸ್ಪತ್ರೆಗೆ ಬಾರದಿರುವುದು ಮತ್ತು ಬಯೋಮೆಟ್ರಿಕ್ ಹಾಜರಾತಿ ಹಾಕದಿರುವುದು.
      ಖರೀದಿಯಲ್ಲಿ ಅವ್ಯವಹಾರ: ಮೂಳೆ ಶಸ್ತ್ರಚಿಕಿತ್ಸೆಯ ವೇಳೆ ಬಳಸುವ implant ಖರೀದಿಯಲ್ಲಿ ಗೋಲ್‌ಮಾಲ್ ನಡೆಯುತ್ತಿದೆ ಎಂದು ಸಿಬ್ಬಂದಿ ವಲಯದಲ್ಲಿ ಚರ್ಚೆಯಾಗುತ್ತಿದೆ.
      ಸಾರ್ವಜನಿಕರ ಪ್ರಶ್ನೆ:
      ಮೂಳೆ ಶಸ್ತ್ರಚಿಕಿತ್ಸೆಯ ದೊಡ್ಡ ಹಗರಣ ಮತ್ತು ಸಾರ್ವಜನಿಕ ಆಕ್ರೋಶದಿಂದ ಗಮನ ಬೇರೆಡೆಗೆ ತಿರುಗಿಸಲು ಈಗ ವೀಣಾ ದೇವಿ ಅವರ ವಿರುದ್ಧ ಸುಳ್ಳು ನಾಟಕವಾಡಲಾಗುತ್ತಿದೆಯೇ? ಪ್ರಾಮಾಣಿಕವಾಗಿ ಕೆಲಸ ಮಾಡುವವರನ್ನು ಟಾರ್ಗೆಟ್ ಮಾಡಿ, ತಪ್ಪಿತಸ್ಥರನ್ನು ರಕ್ಷಿಸುವ ಇಂತಹ ದ್ವಿಮುಖ ನೀತಿಯನ್ನು ಖಂಡಿಸಬೇಕಿದೆ.

    ಈ ಎಲ್ಲಾ ಆರೋಪಗಳ ಬಗ್ಗೆ ಉನ್ನತ ಮಟ್ಟದ ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ಧ ನಿರಪೇಕ್ಷ ಕ್ರಮ ಕೈಗೊಳ್ಳಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.

    ಉಡುಪಿ ಜಿಲ್ಲಾ ಸರ್ಜನ್ ಬಗ್ಗೆ ಸಾರ್ವಜನಿಕರಲ್ಲಿ ಏಕೆ ಹೆಚ್ಚುತ್ತಿದೆ ಅನುಮಾನ?ಉಡುಪಿ ಜಿಲ್ಲಾ ಸರ್ಜನ್ ಅಶೋಕ್ ಕುಮಾರ್ ಸುತ್ತ ರಾಜಕೀಯ, ವರ್ಗಾವಣೆ ಮತ್ತು ಪ್ರಶ್ನೆಗಳ ಸುಳಿಗಾಳಿ!

    ಉಡುಪಿ ಅಶೋಕ್ ಅವರನ್ನು ಅವರ ಹುಟ್ಟಿದ ಸಮಾಜದ ಕಾರಣಕ್ಕಾಗಿ ಸಹಿಸಿಕೊಳ್ಳಲಾಗುತ್ತಿದೆಯಾ ಎಂಬ ಸಂಶಯವಿದೆ. ಪಕ್ಷ ಭೇದ ಮರೆತು ಆ ಸಮಾಜದ ಮುಖಂಡರು ಈ ವ್ಯಕ್ತಿಯ ಜೊತೆಗೆ ಅನ್ಯೋನ್ಯತೆಯಿಂದ ಇದ್ದಾರೆ ಎನ್ನುವುದು ಸಾರ್ವಜನಿಕರ ಆರೋಪವಾಗಿದೆ. ತೀರಾ ಇತ್ತೀಚೆಗೆ ಈ ವ್ಯಕ್ತಿಗೆ ಆಡಳಿತ ಪಕ್ಷದ ಉಡುಪಿ ಬ್ಲಾಕ್ ನಿಂದ ಸನ್ಮಾನ ಬೇರೆ ಆಗಿದೆ ಅನ್ನುವುದು ಸಾರ್ವಜನಿಕರ ಬೇಗುದಿಯಾಗಿದೆ.

    ನಿಜ ಹೇಳಬೇಕು ಎಂದರೆ ಜಿಲ್ಲಾ ಸರ್ಜನ್ ಅಶೋಕ್ ಕುಮಾರ್ ಗೆ ಇಲ್ಲಿಂದ ವರ್ಗಾವಣೆಯಾಗಿತ್ತು .ಆದರೆ ಇಲ್ಲಿಂದ ಹೋಗಲು ಸುತಾರಾಂ ಒಪ್ಪುತ್ತಿಲ್ಲವಂತೆ ಎಲ್ಲೆಲ್ಲಿ ಯಾರ್ಯಾರನ್ನಾದರೂ ಹಿಡಿದು ಮತ್ತೆ ವಾಪಸ್ ಬಂದು ಇಲ್ಲಿಯೇ ಕೂರುತ್ತಾನೆ ಅನ್ನೋದು ಸಾರ್ವಜನಿಕವಾಗಿ ಹರಡಿಕೊಂಡಿರುವ ಸುದ್ದಿ. ಆ ಸುದ್ದಿ ನಿಜವೇ ಆಗಿರಬಹುದು ಅನ್ನುತ್ತದೆ ಅವರ ಇಲ್ಲಿನ ಜಂಡಾ ಸ್ಟೋರಿ..!

    COMMENTS

    Login with Gmail to comment

    ಇನ್ನಷ್ಟು ಸುದ್ದಿ

    ಜೈನ ಮುನಿ… ಇರಾನ್‌ನ ಇಸ್ಲಾಮಿಕ್ ಸರ್ವೋಚ್ಚ ನಾಯಕನ ಅಂತ್ಯಕ್ರಿಯೆಯಲ್ಲಿ?
    ಒಬ್ಬರೇ ಹಾಗಾಗಿ ಕಾರಿನಲ್ಲಿ ಯಾಕೆ? ಫ್ಲೈಟ್ ಫೇರ್ ಜಾಸ್ತಿ ಇದೆ..ಟ್ರೈನ್ ಲೇಟ್ ಆಗುತ್ತೆ..so ಹೆಗೋಗೋಣ….!? ಹೀಗೂ ಹೋಗ್ಬಹುದು ತಿಳ್ಕೊಳ್ಳಿ..
    ಉಡುಪಿಯಲ್ಲಿ ಪೊಲೀಸ್ ಅಧಿಕಾರಿಗಳ ಸೋಗಿನಲ್ಲಿ  ಮಹಿಳೆಗೆ ₹65 ಲಕ್ಷ ವಂಚನೆ
    ಹೆಚ್.ಪಿ.ವಿ. ಚುಚ್ಚು ಮದ್ದಿನ ಬಗ್ಗೆ ಗೊಂದಲ ಬೇಡ: ಜಿಲ್ಲಾ ಆರೋಗ್ಯಾಧಿಕಾರಿ ಸ್ಪಷ್ಟನೆ
    ಮದರಸಾದಲ್ಲಿ ದೌರ್ಜನ್ಯ ಮತ್ತು ಬಲವಂತದ ಕೂಲಿ ಆರೋಪ-24 ಮಕ್ಕಳ ರಕ್ಷಣೆ
    “ಕಾಂತರಾ” ಖ್ಯಾತಿಯ ಸಪ್ತಮಿ ಗೌಡ, ದುಮುಕಿದ್ದು  ಹೋರಾಟದ ಅಂಗಳಕ್ಕೆ
    ಮದುವೆ -ಜೀವನ ಬೇಸರವಾಯ್ತು ಆಸಕ್ತಿ ಇಲ್ಲ ಅಂದ್ರೆ ವಿಚ್ಛೇದನ ಸಿಗುತ್ತಾ ..! ಮಗಳು18 ದಾಟಿದರೂ ಶಿಕ್ಷಣದ ಹೊಣೆ ಯಾರಿಗೆ?
    ಭಾರತೀಯ ಸೇನೆಯ ನೆರವಿಗೆ ಡ್ರೋನ್ ನರ್ಸಿಂಗ್ ಹೋಮ್! ದುರ್ಗಮ ಪ್ರದೇಶಗಳಲ್ಲೂ ಸಿಗಲಿದೆ ಅತ್ಯಾಧುನಿಕ ವೈದ್ಯಕೀಯ ಚಿಕಿತ್ಸೆ
    ಚುನಾವಣಾ ಆಯೋಗ ಸರ್ವಾಧಿಕಾರಿಯಾಗುತ್ತಿದೆ ಎಂಬ ಅನುಮಾನದ ಸುತ್ತ….
    ಎಲ್ಪಿಜಿ ಗ್ಯಾಸ್ ದರದಲ್ಲಿ ಏರಿಕೆ:  ಮಧ್ಯಮ ವರ್ಗದವರಲ್ಲಿ ಹತಾಶೆ
    ಹವ್ಯಕ ಭಾಷಾ ಅಕಾಡೆಮಿ ಅಸ್ತಿತ್ವಕ್ಕೆ ಗ್ರೀನ್ ಸಿಗ್ನಲ್ 
    ಎಥೆನಾಲ್ ಮಿಶ್ರಿತ ಇಂಧನದಿಂದ ವಾಹನಗಳಿಗೆ ಸಮಸ್ಯೆ ಇಲ್ಲ – ನಿತಿನ್ ಗಡ್ಕರಿ
    ಜಗಳ ನಿಲ್ಲಿಸಲು ಹೋದವನ ಜೀವ ಹರಣ: ಮಾನವೀಯತೆ ಕುಸಿದರೆ ಸಮಾಜದ ನೆಮ್ಮದಿ ಎಲ್ಲಿ?”
    ವರದಕ್ಷಿಣ ಪ್ರಕರಣ:5.5 ತಿಂಗಳ ಮಗುವಿಗೂ ದೈಹಿಕ ಹಿಂಸೆ….!
    ತುರ್ತು ಎಚ್ಚರಿಕೆ ‼️ಹಿಪ್ನೋಟೈಸಿಂಗ್ ಸ್ವಾಮಿಗಳು ನಿಮ್ಮ ಬಳಿಯೂ ಬರಬಹುದು
    “ಕುಂಡೆ(ತಿಕ)ಯಲ್ಲಿ ಲಕ್ಷ್ಮಿ ಇರುತ್ತಾಳೆ” ಎಂಬ ಹೇಳಿಕೆ ವೈರಲ್! ಆರ್ಯವರ್ಧನ್ ಗುರೂಜಿ ವಿರುದ್ಧ ದೂರು, ಸೋಷಿಯಲ್ ಮೀಡಿಯಾದಲ್ಲಿ ಭಾರೀ ಚರ್ಚೆ
    ತುಮಕೂರಿನಲ್ಲಿ 10 ಲಕ್ಷದ ವಜ್ರಾಭರಣ ಕದ್ದ ಈ ಮಹಾಚೋರನ ಕಥೆ ಕೇಳಿದರೆ ನಿಜಕ್ಕೂ ಶಾಕ್ ಆಗ್ತೀರಾ!”
    ಮೋದಿ–ಶಾ ಆಡಳಿತದ ವಿರುದ್ಧ ಕಾಂಗ್ರೆಸ್‌ ವಾಗ್ದಾಳಿ: ತಪ್ಪಿತಸ್ಥರನ್ನು ರಕ್ಷಿಸಲು ಅಧಿಕಾರ ದುರ್ಬಳಕೆ ಆರೋಪ
    ಇನ್ನೂ ಏಳು ದಿನ ಕರ್ನಾಟಕದ ಸಿಎಂ ಕುರ್ಚಿ ಕಾಲಿ… ಜೂನ್ 5 ರಂದು ಡಿಕೆ ಶಿವಕುಮಾರ್ ಪ್ರಮಾಣ ವಚನ!
    ಬಿಡದಿ ಟೌನ್‌ಶಿಪ್‌ಗೆ ಮರುಜೀವ: ವಿಶ್ವದರ್ಜೆಯ ‘ಎಐ ಸಿಟಿ’ ನಿರ್ಮಾಣಕ್ಕೆ ಸರ್ಕಾರದ ಮಹತ್ವದ ಹೆಜ್ಜೆ .. ಜನರನ್ನು ಉದ್ದೇಶಿಸಿ ಮಾತನಾಡಿದ ಸಿಎಂ
    ಬಿಡದಿಗಾಗಿ ಗೌಡರ ಗುಡುಗು! ಹೋರಾಟ ನಿಲ್ಲದು ತೀವ್ರಗೊಳ್ಳಲಿದೆ“ಸುಮ್ಮನಿರಲ್ಲ” ಗೌಡರ ಖಡಕ್ ಎಚ್ಚರಿಕೆ..!
    “ದಪ್ಪ, ಕಪ್ಪು ಎಂಬ ಅವಹೇಳನ… ವರದಕ್ಷಿಣೆ ಕಿರುಕುಳ… ಕೊನೆಗೆ ಕತ್ತು ಹಿಸುಕಿ ಹತ್ಯೆ! ಧಾರವಾಡದ ಘಟನೆ ಸಮಾಜದ ಮನಸ್ಸನ್ನೇ ನಡುಗಿಸಿದೆ”
    ಬಾಂಗ್ಲಾದೇಶದಲ್ಲಿ ನಿವೃತ್ತ ಹಿಂದೂ ಶಿಕ್ಷಕ ಕುಟುಂಬದ ನಾಲ್ವರ ನಿಗೂಢ ಸಾವು…
    ಮುಂಜಾನೆ ಹೊತ್ತಿ ಉರಿದ ಆಸ್ಪತ್ರೆ…ಜೀವ ಉಳಿಸಿಕೊಳ್ಳಲು ರೋಗಿಗಳ ಪರದಾಟ.ಬಿಹಾರದಲ್ಲಿ ಹೃದಯವಿದ್ರಾವಕ ಘಟನೆ.
    594 ಕಿಮೀ ಗಂಗಾ ಎಕ್ಸ್‌ಪ್ರೆಸ್‌ ವೇ ..!ಮೀರಟ್‌ನಿಂದ ಪ್ರಯಾಗರಾಜ್‌ವರೆಗೆ -ದೇಶದ ಪ್ರಗತಿಗೆ ಮತ್ತೊಂದು ಮೈಲುಗಲ್ಲು 
    🔴ಬ್ರೇಕಿಂಗ್ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ನಾಳೆ ಜುಲೈ 8 ರಜೆ ಘೋಷಣೆ!
    ಪಶ್ಚಿಮ ಘಟ್ಟದ ಕಸ್ತೂರಿರಂಗನ್ ವರದಿಗೆ ಬ್ರೇಕ್?…ವಿಶೇಷ ಅಧಿವೇಶನಕ್ಕೆ ಸರ್ಕಾರ ಸಿದ್ಧತೆ
    ಬ್ರಹ್ಮಾವರ, ಮಂದಾರ್ತಿ ವ್ಯವಸಾಯ ಸೇವಾ ಸಹಕಾರಿ ಸಂಘಕ್ಕೆ ಹೇಳೋರು ಕೇಳೋರು ಯಾರು ಇಲ್ವಾ?
    “ಪ್ರೇಮ ಕಥೆ ತಿರುವು: ಗಂಡನ ಜೀವವೇ ಟಾರ್ಗೆಟ್!”ಬ್ಯಾಂಕ್ ಅಧಿಕಾರಿ ಪತ್ನಿ taxi ಚಾಲಕನೊಂದಿಗೆ ಸೇರಿ killing plan
    ಚಾಟ್‌ಜಿಪಿಟಿ ಹುಡುಕಾಟದ ಬಳಿಕ ಡಬಲ್ ಮರ್ಡರ್..!ತಾಯಿ-ಸಹೋದರನ ಹತ್ಯೆಗೆ AI ಹುಡುಕಾಟ..