📍 Karavali Maruta
LIVE | CONTACT
ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

ಉಡುಪಿ ಜಿಲ್ಲಾಆಸ್ಪತ್ರೆಯಲ್ಲಿ ಹಗರಣ, ತಾರತಮ್ಯದ ಆರೋಪ: ವೀಣಾದೇವಿ ವಿರುದ್ಧದಕ್ರಮ ಕಣ್ಣೊರೆಸುವ ತಂತ್ರ

ಉಡುಪಿ: ಜಿಲ್ಲಾ ಆಸ್ಪತ್ರೆಯ ಆಡಳಿತದಲ್ಲಿ ನಡೆಯುತ್ತಿರುವ ಅಕ್ರಮ ಮತ್ತು ತಾರತಮ್ಯದ ವಿರುದ್ಧ ಗಂಭೀರ ಆರೋಪಗಳು ಕೇಳಿಬಂದಿವೆ. ಬ್ಲಡ್ ಬ್ಯಾಂಕ್ ಅಧಿಕಾರಿ ವೀಣಾ ದೇವಿ ಅವರ ವಿರುದ್ಧ ಜಿಲ್ಲಾ ಶಸ್ತ್ರಚಿಕಿತ್ಸಕರು ವಿನಾಕಾರಣ ನೋಟಿಸ್ ನೀಡಿ ಅನಗತ್ಯವಾಗಿ ಸಿಲುಕಿಸುವ ಸಂಚು ರೂಪಿಸುತ್ತಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

ಆದರೆ ಇದೇ ವೇಳೆ ಮೂಳೆ ರೋಗ ತಜ್ಞರಾದ ಡಾ. ಸಾಗರ್ ಅವರ ವಿರುದ್ಧ ಬಂದ ಗಂಭೀರ ದೂರುಗಳನ್ನು ಮುಚ್ಚಿ ಹಾಕಲಾಗುತ್ತಿದೆ ಎಂಬುದು ಸಾಮಾನ್ಯ ಜನರ ಆಕ್ರೋಶಕ್ಕೆ ಕಾರಣವಾಗಿದೆ.

ತಾರತಮ್ಯದ ಆರೋಪ
ವೀಣಾ ದೇವಿ ಅವರಿಗೆ ನೋಟಿಸ್ ನೀಡಲಾಗಿದ್ದರೆ, ಅದೇ ರೀತಿಯ ಗಂಭೀರ ದೂರು ಬಂದಿದ್ದರೂ ಡಾ. ಸಾಗರ್ ಅವರಿಗೆ ಯಾವುದೇ ವಿವರಣೆ ಕೇಳದೆ ರಕ್ಷಣೆ ನೀಡಲಾಗುತ್ತಿದೆ ಎಂದು ಆರೋಪಿಸಲಾಗಿದೆ.

ವಿದ್ಯಾರ್ಥಿಗಳಿಂದ ಶಸ್ತ್ರಚಿಕಿತ್ಸೆ, ದೂರು

ಡಾ. ಸಾಗರ್ ಅವರ ಮೇಲ್ವಿಚಾರಣೆಯಲ್ಲಿ ಕಲಿಯುವ ವಿದ್ಯಾರ್ಥಿಗಳೇ ರೋಗಿಗಳಿಗೆ ಶಸ್ತ್ರಚಿಕಿತ್ಸೆ ಮಾಡುತ್ತಿದ್ದಾರೆ ಎಂದು ರೋಗಿಯೊಬ್ಬರು ನೇರ ದೂರು ನೀಡಿದ್ದರು. ಆದರೆ ಈ ಕುರಿತು ಯಾವುದೇ ತನಿಖೆ ನಡೆದಿಲ್ಲ ಎನ್ನಲಾಗಿದೆ. ಈ ದೂರು ನೀಡಿದ ರೋಗಿಯನ್ನೇ “ಮಾನಸಿಕ ರೋಗಿ” ಎಂದು ಜಿಲ್ಲಾ ಶಸ್ತ್ರಚಿಕಿತ್ಸಕರು ವಿಡಿಯೋದಲ್ಲಿ ಹೇಳಿಕೆ ನೀಡಿ ಪ್ರಕರಣವನ್ನು ದಿಕ್ಕು ತಪ್ಪಿಸುತ್ತಿದ್ದಾರೆ ಎಂಬ ಆರೋಪವೂ ಇದೆ.

  • ಖಾಸಗಿ ಆಸ್ಪತ್ರೆಗೆ ರೆಫರ್: ಸರ್ಕಾರಿ ಆಸ್ಪತ್ರೆಗೆ ಬರುವ ಬಡ ರೋಗಿಗಳನ್ನು ಆಯುಷ್ಮಾನ್ ಯೋಜನೆಯ ಹೆಸರಿನಲ್ಲಿ ಕಮಿಷನ್ ಆಸೆಗಾಗಿ ಖಾಸಗಿ ಆಸ್ಪತ್ರೆಗಳಿಗೆ ಕಳುಹಿಸುತ್ತಿದ್ದಾರೆ.
  • ಹಾಜರಾತಿ ನಿಯಮ ಉಲ್ಲಂಘನೆ: ಸರಿಯಾದ ಸಮಯಕ್ಕೆ ಆಸ್ಪತ್ರೆಗೆ ಬಾರದಿರುವುದು ಮತ್ತು ಬಯೋಮೆಟ್ರಿಕ್ ಹಾಜರಾತಿ ಹಾಕದಿರುವುದು.
    ಖರೀದಿಯಲ್ಲಿ ಅವ್ಯವಹಾರ: ಮೂಳೆ ಶಸ್ತ್ರಚಿಕಿತ್ಸೆಯ ವೇಳೆ ಬಳಸುವ implant ಖರೀದಿಯಲ್ಲಿ ಗೋಲ್‌ಮಾಲ್ ನಡೆಯುತ್ತಿದೆ ಎಂದು ಸಿಬ್ಬಂದಿ ವಲಯದಲ್ಲಿ ಚರ್ಚೆಯಾಗುತ್ತಿದೆ.
    ಸಾರ್ವಜನಿಕರ ಪ್ರಶ್ನೆ:
    ಮೂಳೆ ಶಸ್ತ್ರಚಿಕಿತ್ಸೆಯ ದೊಡ್ಡ ಹಗರಣ ಮತ್ತು ಸಾರ್ವಜನಿಕ ಆಕ್ರೋಶದಿಂದ ಗಮನ ಬೇರೆಡೆಗೆ ತಿರುಗಿಸಲು ಈಗ ವೀಣಾ ದೇವಿ ಅವರ ವಿರುದ್ಧ ಸುಳ್ಳು ನಾಟಕವಾಡಲಾಗುತ್ತಿದೆಯೇ? ಪ್ರಾಮಾಣಿಕವಾಗಿ ಕೆಲಸ ಮಾಡುವವರನ್ನು ಟಾರ್ಗೆಟ್ ಮಾಡಿ, ತಪ್ಪಿತಸ್ಥರನ್ನು ರಕ್ಷಿಸುವ ಇಂತಹ ದ್ವಿಮುಖ ನೀತಿಯನ್ನು ಖಂಡಿಸಬೇಕಿದೆ.

ಈ ಎಲ್ಲಾ ಆರೋಪಗಳ ಬಗ್ಗೆ ಉನ್ನತ ಮಟ್ಟದ ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ಧ ನಿರಪೇಕ್ಷ ಕ್ರಮ ಕೈಗೊಳ್ಳಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.

ಉಡುಪಿ ಜಿಲ್ಲಾ ಸರ್ಜನ್ ಬಗ್ಗೆ ಸಾರ್ವಜನಿಕರಲ್ಲಿ ಏಕೆ ಹೆಚ್ಚುತ್ತಿದೆ ಅನುಮಾನ?ಉಡುಪಿ ಜಿಲ್ಲಾ ಸರ್ಜನ್ ಅಶೋಕ್ ಕುಮಾರ್ ಸುತ್ತ ರಾಜಕೀಯ, ವರ್ಗಾವಣೆ ಮತ್ತು ಪ್ರಶ್ನೆಗಳ ಸುಳಿಗಾಳಿ!

ಉಡುಪಿ ಅಶೋಕ್ ಅವರನ್ನು ಅವರ ಹುಟ್ಟಿದ ಸಮಾಜದ ಕಾರಣಕ್ಕಾಗಿ ಸಹಿಸಿಕೊಳ್ಳಲಾಗುತ್ತಿದೆಯಾ ಎಂಬ ಸಂಶಯವಿದೆ. ಪಕ್ಷ ಭೇದ ಮರೆತು ಆ ಸಮಾಜದ ಮುಖಂಡರು ಈ ವ್ಯಕ್ತಿಯ ಜೊತೆಗೆ ಅನ್ಯೋನ್ಯತೆಯಿಂದ ಇದ್ದಾರೆ ಎನ್ನುವುದು ಸಾರ್ವಜನಿಕರ ಆರೋಪವಾಗಿದೆ. ತೀರಾ ಇತ್ತೀಚೆಗೆ ಈ ವ್ಯಕ್ತಿಗೆ ಆಡಳಿತ ಪಕ್ಷದ ಉಡುಪಿ ಬ್ಲಾಕ್ ನಿಂದ ಸನ್ಮಾನ ಬೇರೆ ಆಗಿದೆ ಅನ್ನುವುದು ಸಾರ್ವಜನಿಕರ ಬೇಗುದಿಯಾಗಿದೆ.

ನಿಜ ಹೇಳಬೇಕು ಎಂದರೆ ಜಿಲ್ಲಾ ಸರ್ಜನ್ ಅಶೋಕ್ ಕುಮಾರ್ ಗೆ ಇಲ್ಲಿಂದ ವರ್ಗಾವಣೆಯಾಗಿತ್ತು .ಆದರೆ ಇಲ್ಲಿಂದ ಹೋಗಲು ಸುತಾರಾಂ ಒಪ್ಪುತ್ತಿಲ್ಲವಂತೆ ಎಲ್ಲೆಲ್ಲಿ ಯಾರ್ಯಾರನ್ನಾದರೂ ಹಿಡಿದು ಮತ್ತೆ ವಾಪಸ್ ಬಂದು ಇಲ್ಲಿಯೇ ಕೂರುತ್ತಾನೆ ಅನ್ನೋದು ಸಾರ್ವಜನಿಕವಾಗಿ ಹರಡಿಕೊಂಡಿರುವ ಸುದ್ದಿ. ಆ ಸುದ್ದಿ ನಿಜವೇ ಆಗಿರಬಹುದು ಅನ್ನುತ್ತದೆ ಅವರ ಇಲ್ಲಿನ ಜಂಡಾ ಸ್ಟೋರಿ..!

COMMENTS

Login with Gmail to comment

ಇನ್ನಷ್ಟು ಸುದ್ದಿ

ಮಂಗಳೂರು ಯೂಟ್ಯೂಬರ್‌ಗಳ ವಿರುದ್ಧ ಬಿಎನ್‌ಎಸ್ ಅಸ್ತ್ರ ಪ್ರಯೋಗಿಸಿದ ಖಾಕಿ!….
ಕೇವಲ “Aunty” ಅಂತ ಅಂದಿದಕ್ಕೆ 2 ಲಕ್ಷ ದಂಡ…!
ಟಾಟಾ ಸನ್ಸ್ IPOಗೆ ಒತ್ತಾಯ: ಟ್ರಸ್ಟಿಗಳಲ್ಲಿ ಭಿನ್ನಾಭಿಪ್ರಾಯ ಹೆಚ್ಚಳ…!
ಐಪಿಎಲ್ ಇತಿಹಾಸದಲ್ಲೇ ಸುಮಾರು ₹230 ಕೋಟಿಗೂ ಅಧಿಕ ಒಟ್ಟು ಸಂಭಾವನೆ ಪಡೆದ ಆಟಗಾರನಾಗಿ ಕೊಹ್ಲಿ ದಾಖಲೆ…ಯ ಹಿಂದಿರುವ ಅಸಲಿ ಕಥೆ…!
ಹುಡುಗಾಟಿಕೆ ಆಡುತ್ತಿರುವ ರಾಮಲಿಂಗಾರೆಡ್ಡಿ-ಕ್ಷೇತ್ರದ ಜನರಲ್ಲಿ ಅಸಮಾಧಾನ
ಹೆಡ್‌ಲೈಟ್ ಇಲ್ಲ… ಮೊಬೈಲ್ ಟಾರ್ಚ್‌ನಲ್ಲೇ ಓಡಿದ ಸರ್ಕಾರಿ ಬಸ್!
🔥 ಮಧ್ಯಪ್ರಾಚ್ಯ ಯುದ್ಧ: 17ನೇ ದಿನಕ್ಕೆ- ದುಬೈ ವಿಮಾನ ನಿಲ್ದಾಣದ ಬಳಿ ಬೆಂಕಿ!
ಸಾಲದ ಹಣ ಕೇಳಿದ ವಿಚಾರಕ್ಕೆ ಚೂರಿಯಿಂದ ಕೊಲೆ ಯತ್ನ..
ಬೈಂದೂರಿನಲ್ಲಿ ಹಳೆ ವೈಷಮ್ಯದಿಂದ ಮನೆಗೆ ನುಗ್ಗಿ ಹಲ್ಲೆಗೆ ಯತ್ನ
ಎಲ್ಲರಿಗೂ ಯುಗಾದಿ ಹಬ್ಬ… ಆದರೆ ಈ ಗ್ರಾಮಗಳಲ್ಲಿ ಭಯ ಮೌನ…ಹಬ್ಬ ಇಲ್ಲ…!ಒಂದು ವಿಚಿತ್ರ ಕಥೆ!
ವೆಟ್-ವೆಲ್‌ಗಳ ಕಳಪೆ ನಿರ್ವಹಣೆಚರಂಡಿ-ಬಾವಿಗಳಿಗೆ ಡ್ರೈನೇಜ್ ನೀರು..
ಪುತ್ತೂರಿನ ದೇವಸ್ಥಾನ ಪದಾಧಿಕಾರಿಗಳ ವಿರುದ್ಧ FIR ..!
ಕರ್ನಾಟಕದಲ್ಲಿ ಮಳೆ ಅಲರ್ಟ್! 13 ಜಿಲ್ಲೆಗಳಿಗೆ ಯೆಲ್ಲೋ ವಾರ್ನಿಂಗ್ – ಜನರು ಎಚ್ಚರಿಕೆ ಅಗತ್ಯ
AAP ಸದ್ದು ಮಂಗಳೂರಲ್ಲೂ! ಜನರ ಸಮಸ್ಯೆಗೆ ನೇರ ಹೋರಾಟ
ಆದಾಯ ತೆರಿಗೆ ಬದಲಾವಣೆಗಳನ್ನು ತಿಳಿದುಕೊಳ್ಳಿ, ತಪ್ಪುಗಳನ್ನು ತಪ್ಪಿಸಿ…ಹೊಸ ITR ನಿಯಮಗಳು
ನದಿಯಲ್ಲ ರಸ್ತೆ..!ಕೈಕಂಬದ ಕಂದಾವರದ ಈ ರಸ್ತೆ ಕೆರೆಯಾಗಿ ನೀರಿನಲ್ಲಿ ಮುಳುಗಿದೆ!ಶಾಲಾ ಮಕ್ಕಳಿಂದ ವೃದ್ಧರವರೆಗೆ ಎಲ್ಲರಿಗೂ ಜೀವಭಯ!
ದೇವರ ಮುಂದೆ ಸಾಲಿನಲ್ಲಿ ನಿಲ್ಲಲೇಬೇಕು! ಮಂತ್ರಿ ಇರಲಿ, ಸೆಲೆಬ್ರಿಟಿ ಇರಲಿ…ಅಧಿಕಾರ ಇರಲಿ, ಅಂತಸ್ತು ಇರಲಿ…”ವಿಐಪಿ ದರ್ಶನ”ಕ್ಕೆ ಹೈಕೋರ್ಟ್ ಕೊಟ್ಟ ಚಾವಟಿ ಏಟು!
PTCL ಕಾಯ್ದೆ ಉಲ್ಲಂಘಿಸಿದ ಅಧಿಕಾರಿಗಳ ವಿರುದ್ಧ ಶಿಸ್ತುಕ್ರಮಕ್ಕೆ ಒತ್ತಾಯ – ಕಂದಾಯ ಸಚಿವರಿಗೆ ದಲಿತ ನಾಯಕರ ಮನವಿ
ಮನೆಯವರಿಂದಲೇ 16 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕಳವು! ಪೊಲೀಸರಿಗೆ ದೂರು 🚨
ಕಾರ್ಕಳದಲ್ಲಿ 2027ರ ಬಾಹುಬಲಿ ಮಹಾ ಮಜ್ಜನದ ಮಹೋತ್ಸವಕ್ಕೆ ದಿನ ಘೋಷಣೆ!
“ಪಾಲಕ್ಕಾಡ್‌ನಲ್ಲಿ ಮೋದಿ ಚಂಡೆ ಸದ್ದು—ಕೇರಳದಲ್ಲಿ ಚುನಾವಣಾ ಕಹಳೆ!” 
ಸುರತ್ಕಲ್ ಹುಡುಗಿ ವಿಚಾರದಲ್ಲಿ ಹಲ್ಲೆ
ಹಾರ್ಮುಜ್ ಬಳಿ ಹಡಗುಗಳ ಹಿಂತಿರುಗುವ ಸರಣಿ!ಜಾಗತಿಕ ತೈಲ ಸರಬರಾಜಿಗೆ ಶಾಕ್ ⚠️
8 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ
ಹಾರರ್ ಸಿನಿಮಾ ಸೀನ್ ಅಂತ ಅನಿಸ್ತು… ಆದರೆ ಇದು ನಿಜ ಘಟನೆ! ಟಾಯ್ಲೆಟ್ ಒಳಗಿಂದ ತಲೆ ಎತ್ತಿದ ವಿಷದ ರಾಜ…
ದೇಶದ ಹಲವೆಡೆ ಭಾರೀ ಮಳೆ ಎಚ್ಚರಿಕೆ: ರೆಡ್ ಅಲರ್ಟ್ ಅಂದ್ರೆ ಮಳೆ ಗ್ಯಾರಂಟಿ ಅಲ್ಲ…IMD ಮುನ್ಸೂಚನೆಯನ್ನು ನಿರ್ಲಕ್ಷಿಸಬೇಡಿ!ಅದು  “ಅಪಾಯದ ಸಾಧ್ಯತೆಯ ಎಚ್ಚರಿಕೆ!”
ರಾಜ್ಯ ಪೊಲೀಸ್ ಇಲಾಖೆಯಲ್ಲಿ “ಕಲೋನಿಯಲ್ ಆರ್ಡರ್ಲಿ” ‘ಆಡಲ್’ (Adal) ಪದ್ದತಿ ರದ್ದು
ಮೊಹಾಲಿ ಬೆಚ್ಚಿಬೀಳಿಸಿದ ಕಚೇರಿ ಕೊಲೆ: ಮಹಿಳೆ ಮೇಲೆ ಮಾರಣಾಂತಿಕ ದಾಳಿ, ದೇಶಾದ್ಯಂತ ಆಕ್ರೋಶ…
Online payments ಹೊಸ ಸುರಕ್ಷತಾ ನಿಯಮಗಳು: ನಿಮ್ಮ ಹಣಕ್ಕೆ ‘ಅದೃಶ್ಯ ಕವಚ’
ಕುಡಿತದ ಅಮಲಿನಲ್ಲಿ ಹೆತ್ತ ತಾಯಿಯನ್ನೇ ಕೊಂದ ಮಗಳು, ಮೊಮ್ಮಗ: ಕೆಂಗೇರಿಯಲ್ಲಿ ಕರುಳು ಹರಿಯುವ ಕೃತ್ಯ!