📍 Karavali Maruta
LIVE | CONTACT
ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

ಜಿಲ್ಲಾ ಸರ್ಜನ್ ಡಾ. ಅಶೋಕ್ರನ್ನು ತಕ್ಷಣವೇ ಅಮಾನತು ಮಾಡಿ- ದ.ಸಂ.ಸ. ಆಗ್ರಹ

ಉಡುಪಿ: ಉಡುಪಿ ಜಿಲ್ಲಾ ಆಸ್ಪತ್ರೆಯಲ್ಲಿ ನಡೆಯುತ್ತಿರುವ “ರಾತ್ರಿ ರಕ್ತ ವ್ಯಾಪಾರ” ಪ್ರಕರಣದ ಹಿನ್ನೆಲೆಯಲ್ಲಿ ಜಿಲ್ಲಾ ಸರ್ಜನ್ ಡಾ. ಅಶೋಕ್ ಅವರನ್ನು ಕೂಡಲೇ ಅಮಾನತು ಮಾಡಬೇಕೆಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್ ವಾದದ ರಾಜ್ಯ ಸಂಘಟನಾ ಸಂಚಾಲಕ ಸುಂದರ ಮಾಸ್ಟರ್ ಆಗ್ರಹಿಸಿದ್ದಾರೆ.

ಸುಂದರ ಮಾಸ್ಟರ್ ಅವರು ಬುಧವಾರ ಬಿಡುಗಡೆ ಮಾಡಿದ ಪತ್ರಿಕಾ ಪ್ರಕಟನೆಯಲ್ಲಿ, ಸಾಮಾಜಿಕ ಜಾಲತಾಣಗಳಲ್ಲಿ ಜಿಲ್ಲಾ ಆಸ್ಪತ್ರೆಯ ರಾತ್ರಿ ರಕ್ತ ವ್ಯಾಪಾರದ ಕುರಿತು ಸುದ್ದಿ ಹರಿದಾಡುತ್ತಿದೆ ಮತ್ತು ಈ ಬಗ್ಗೆ ದೂರೂ ದಾಖಲಾಗಿದೆ ಎಂದು ತಿಳಿಸಿದ್ದಾರೆ.

ಗಂಭೀರ ಆರೋಪಗಳು

ಡಾ. ಅಶೋಕ್ ಅವರು ಸ್ವತಃ ಹಣ ಕೊಟ್ಟು ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ ಹರಡಿಸಿ, ಈಗ ತನಿಖೆ ತಮ್ಮ ವಿರುದ್ಧ ತಿರುಗುತ್ತಿದ್ದಂತೆ ರಿವರ್ಸ್ ಹೊಡೆದು ಸ್ಪಷ್ಟೀಕರಣ ನೀಡುತ್ತಿರುವುದು “ಹಾಸ್ಯಾಸ್ಪದ” ಎಂದು ಅವರು ಟೀಕಿಸಿದ್ದಾರೆ.

“ಬಡವರ, ದಲಿತರ, ಮಹಿಳೆಯರ ಪರ ಎಂದು ಹೇಳುವ ಸರ್ಕಾರವೇ ಇಂತಹ ಮಹಿಳಾ ವಿರೋಧಿ, ದಲಿತ ವಿರೋಧಿ ಜಿಲ್ಲಾ ಸರ್ಜನ್ ಅವರನ್ನು ರಕ್ಷಿಸುತ್ತಿರುವುದು ಅಕ್ಷಮ್ಯ” ಎಂದು ಸುಂದರ ಮಾಸ್ಟರ್ ಆರೋಪಿಸಿದ್ದಾರೆ.

ಅವರು ಮುಂದೆ, ಮಂಗಳೂರಿನಲ್ಲಿ ಸೇವೆ ಸಲ್ಲಿಸುತ್ತಿದ್ದ ವೇಳೆ ಡಾ. ಅಶೋಕ್ ಅವರು ಸಹ ಮಹಿಳಾ ಸಿಬ್ಬಂದಿಗೆ ಕಿರುಕುಳ ನೀಡಿದ ಆರೋಪ ತನಿಖೆಯಲ್ಲಿ ಸಾಬೀತಾಗಿ ಹಲವು ಇಂಕ್ರಿಮೆಂಟ್‌ಗಳನ್ನು ಕಡಿತಗೊಳಿಸಿಕೊಂಡಿದ್ದಾರೆ ಎಂದು ಹೇಳಿದರು.

ಅರ್ಹತೆ ಮತ್ತು ಅಧಿಕಾರ ದುರ್ಬಳಕೆ ಆರೋಪ

ಡಾ. ಅಶೋಕ್ ಅವರಿಗೆ ಜಿಲ್ಲಾ ಸರ್ಜನ್ ಆಗಲು ಅರ್ಹತೆಯೇ ಇಲ್ಲ. ಅವರು ಕೇವಲ ಎಂಬಿಬಿಎಸ್ ಪದವೀಧರರಾಗಿದ್ದು, ಈ ಹುದ್ದೆಗೆ ಸ್ನಾತಕೋತ್ತರ ಪದವಿ ಕಡ್ಡಾಯವಾಗಿದೆ. ಉಡುಪಿ ಜಿಲ್ಲಾ ಆಸ್ಪತ್ರೆಯಲ್ಲಿ ಅವರಿಗಿಂತ ಸೀನಿಯರ್ ಮತ್ತು ಉನ್ನತ ಪದವಿ ಹೊಂದಿರುವವರು ಇದ್ದರೂ ರಾಜಕೀಯ ಪಿತೂರಿ ಮೂಲಕ ಹುದ್ದೆ ಪಡೆದಿದ್ದಾರೆ ಎಂದು ಅವರು ಆರೋಪಿಸಿದರು.

“ತಮ್ಮ ಸಹ ಸಿಬ್ಬಂದಿಗಳ ಮೇಲೆ ಅನಗತ್ಯ ಕೇಸು ದಾಖಲಿಸಿ, ಕಿರುಕುಳ ನೀಡಿ, ಕೆಎಟಿ ಯಲ್ಲಿ ತಡೆಯಾಜ್ಞೆ ತಂದು ಹುದ್ದೆಯಲ್ಲಿ ಮುಂದುವರಿಯುತ್ತಿದ್ದಾರೆ” ಎಂದು ಅವರು ಹೇಳಿದರು.

ಜಿಲ್ಲಾಧಿಕಾರಿಗಳು ವರ್ಗಾವಣೆ ಆದೇಶ ನೀಡಿದರೂ ಅದನ್ನು ಧಿಕ್ಕರಿಸಿ, ವರ್ಗಾವಣೆಯಾದ ನಂತರವೂ ರಾತ್ರಿ ಪಾಳಿಯಲ್ಲಿ ಜಿಲ್ಲಾ ಆಸ್ಪತ್ರೆಗೆ ಬಂದು ರೌಂಡ್ಸ್ ಹಾಕುತ್ತಿರುವುದು ಸಿಸಿಟಿವಿಯಲ್ಲಿ ದಾಖಲಾಗಿದೆ ಎಂದೂ ಅವರು ಆರೋಪಿಸಿದರು.

ಕೆಲವು ಸಂಘಟನೆಗಳ ನಾಯಕರಿಗೆ ಹಣದ ಆಮಿಷ ತೋರಿಸಿ, ಮಹಿಳಾ ಸಿಬ್ಬಂದಿ ವಿರುದ್ಧ ನಕಲಿ ಲೆಟರ್ ಹೆಡ್‌ನಲ್ಲಿ ದೂರು ದಾಖಲಿಸಿರುವುದಕ್ಕೆ ಪುರಾವೆ ತಮ್ಮ ಬಳಿ ಇದೆ ಎಂದೂ ಸುಂದರ ಮಾಸ್ಟರ್ ಹೇಳಿದ್ದಾರೆ.

ಎಚ್ಚರಿಕೆ

“ಇಷ್ಟೆಲ್ಲಾ ಆರೋಪ ಹೊತ್ತಿರುವ ಮಹಿಳಾ ಪೀಡಕ ಎಂಬ ಆರೋಪವನ್ನು ಹೊತ್ತಿದವ ರನ್ನು ತಕ್ಷಣ ಅಮಾನತು ಮಾಡಬೇಕು. ಇಲ್ಲದಿದ್ದರೆ ಕರ್ನಾಟಕ ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್ ವಾದ ತೀವ್ರ ಪ್ರತಿಭಟನೆ ಹಮ್ಮಿಕೊಳ್ಳಲಿದೆ” ಎಂದು ಅವರು ಎಚ್ಚರಿಕೆ ನೀಡಿದರು.

ಗಮನ: ಈ ಆರೋಪಗಳ ಕುರಿತು ಸಂಬಂಧಪಟ್ಟ ಅಧಿಕಾರಿಗಳಿಂದ ಪ್ರತಿಕ್ರಿಯೆ ನಿರೀಕ್ಷಿಸಲಾಗಿದೆ.


COMMENTS

Login with Gmail to comment

ಇನ್ನಷ್ಟು ಸುದ್ದಿ

ಒಂದು ವಾಟ್ಸ್ಯಾಪ್ ಮೆಸೇಜ್… ಕೋರ್ಟ್ ವರೆಗೂ ಎಳೆದ ಶಾಕ್ ಘಟನೆಯ ಸುತ್ತ..
ನಾಟಕ ಕಲಾವಿದೆ ಸೌಮ್ಯ ಶೆಟ್ಟಿ ಬಂಧನ
ಖಾಸಗಿ ಆಸ್ಪತ್ರೆಯ ಜೊತೆಗಿನ ಒಪ್ಪಂದ ರದ್ದುಪಡಿಸಲು ಆಗ್ರಹಿಸಿ ಪ್ರತಿಭಟನೆ
ಮಕ್ಕಳ ಕೈಯಿಂದ ಮೊಬೈಲ್ ಕಸಿಯಲು ಮುಂದಾದ ಬ್ರಿಟನ್!ಯುಕೆಯ ನಿರ್ಧಾರಕ್ಕೆ ವಿಶ್ವದ ಗಮನ…
ನೀರು ಪೋಲು ಬೇಡ….ಈಗಲೇ ಎಚ್ಚೆತ್ತುಕೊಳ್ಳಿ!ಇಂದು ನಿರ್ಲಕ್ಷ್ಯ,ನಾಳೆ ಜಲ ಸಂಕಷ್ಟದ ಎಚ್ಚರಿಕೆ…!
ಶಿಶಿಲದಲ್ಲಿ ವಿಷಪೂರಿತ ಹಾವು ಕಚ್ಚಿ 65 ವರ್ಷದ ರೈತ ಮೃತ್ಯು
ಪಿಸ್ತೂಲ್ ತೋರಿಸಿ ಬೆದರಿಸಿ ಪರಾರಿಯಾಗಿದ್ದ ಯುವಕ ಬಂಧನ
ಮಂಗಳೂರಿಗೆ “ಅಮ್ಮ”ನ ಆಗಮನ ಭಕ್ತರಲ್ಲಿ ಸಡಗರವೂ ಸಡಗರ….. ನಾಳೆ ನಗರಕ್ಕೆ ಇಬ್ಬರು ಕೇಂದ್ರ ಸಚಿವರ ಆಗಮನ
ಕೊನೆಗೂ ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿದ ನಿತೀಶ್ ಕುಮಾರ್
ಎಥೆನಾಲ್ ಮಿಶ್ರಿತ ಇಂಧನದಿಂದ ವಾಹನಗಳಿಗೆ ಸಮಸ್ಯೆ ಇಲ್ಲ – ನಿತಿನ್ ಗಡ್ಕರಿ
ಜನಿವಾರಕ್ಕೆ ಕೈ ಹಾಕಿದವರು, ಪರ್ಮನೆಂಟ್ ಮನೆಗೆ ಹೋಗುವ ದಾರಿಯಲ್ಲಿ….
ಏರ್ ಇಂಡಿಯಾ ವಿಮಾನ ಸೇವೆ ಸ್ಥಗಿತ…40,000ಕ್ಕೂ ಹೆಚ್ಚು ಟೆಲ್ ಅವೀವ್‌ ಭಾರತೀಯರ ಪ್ರಯಾಣ ಅತಂತ್ರ…!
ಅಹಮದಾಬಾದ್ ಬಾಂಬ್ ಸ್ಫೋಟ:38 ಮಂದಿಗೆ ಗಲ್ಲು ಎತ್ತಿಹಿಡಿದ ಹೈಕೋರ್ಟ್
ದ್ವಿತೀಯ ಪಿ.ಯು.ಸಿ ಪರೀಕ್ಷಾ ಹಾಜರಾತಿ
ಪರಿಸರ ನಾಶಕ್ಕಾಗಿ ಸುಳ್ಳು ಸರ್ಟಿಫಿಕೇಟ್ ರೆಡಿಮಾಡಿಕೊಂಡು ಒಂದು ಊರನ್ನೇ ಭಯದಲ್ಲಿರಿಸಿದ ಉಡುಪಿ ಜಿಲ್ಲಾ ಆಡಳಿತ
146 ವರ್ಷಗಳಲ್ಲೇ ಅತ್ಯಂತ ಒಣ ಜೂನ್..ದೇಶಾದ್ಯಂತ 46% ಮಳೆ ಕೊರತೆ!
ಗುರು ಬ್ರಹ್ಮ – ಗುರು ವಿಷ್ಣು ಅನ್ನುವ ಕಾಲ ಮುಗಿದು ಹೋಯ್ತೇ?
ಕಾಂಗ್ರೆಸ್ ಜನರ ವಿಶ್ವಾಸದಿಂದ ದಿನದಿಂದ ದಿನಕ್ಕೂ ದೂರ ಹೋಗುತ್ತಿರುವುದಕ್ಕೆ ಸಾಕ್ಷಿನೇ ಇದು
ಡಿಕೆಶಿ ಸೈಲೆಂಟ್ ಆಪರೇಷನ್ ಮಿಸ್ ಫೈರ್ ಆಗಿದ್ದೆಲ್ಲಿ?ರಾಷ್ಟ್ರ ರಾಜಧಾನಿಯಲ್ಲಿ ಕರ್ನಾಟಕ ಕಾಂಗ್ರೆಸ್ ಹೈ-ವೋಲ್ಟೇಜ್ ಹರಟೆ…!
ಸೋಶಿಯಲ್ ಮೀಡಿಯಾದ ವೈರಲ್ ವಿಡಿಯೋದಿಂದ ಕೋರ್ಟ್ ತನಕ..!ರಸ್ತೆ ರೇಜ್ ಪ್ರಕರಣದಲ್ಲಿ ಹೊಸ ತಿರುವು
ಉತ್ತರ ಪ್ರದೇಶದಲ್ಲಿ ಸುಮಾರು 90ಕ್ಕೂ ಹೆಚ್ಚು ಜನರು ಬಲಿ ಹೃದಯವಿದ್ರಾವಕ ಪರಿಸ್ಥಿತಿ…ಭಾರೀ ಮಳೆ, ಬಿರುಗಾಳಿ ಮತ್ತು ಕುಸಿದ ಮನೆಗಳು
ದಿಲ್ಲಿಯಲ್ಲಿ ವಾಗ್ದಾಳಿ.. ಗಲ್ಲಿಯಲ್ಲಿ ಒಪ್ಪಂದ?! ದೇಶದ ಅತ್ಯಂತ ಕಾಂಟ್ರವರ್ಸಿಯಲ್ ಬಿಡ್ ತೆರೆಮರೆಯಲ್ಲಿ ನಡೆದ ಆ ಒಂದು ನಡೆ ಕಾಂಗ್ರೆಸ್ ಸರ್ಕಾರಕ್ಕೆ ನುಂಗಲಾರದ ತುತ್ತಾಗಿ ಪರಿಣಮಿಸಿದ್ದು ಯಾಕೆ?!
ಬಂಗಾಳದ ಸಿಂಹಾಸನಕ್ಕೆ ಸುವೇಂದು ಏರಿಕೆ — 15 ವರ್ಷದ ಮಮತಾ ಯುಗಕ್ಕೆ ಬ್ರೇಕ್!ಟಿಎಂಸಿ ಕೋಟೆ ಕುಸಿತ…
ಎಲ್ಲರಿಗೂ ಯುಗಾದಿ ಹಬ್ಬ… ಆದರೆ ಈ ಗ್ರಾಮಗಳಲ್ಲಿ ಭಯ ಮೌನ…ಹಬ್ಬ ಇಲ್ಲ…!ಒಂದು ವಿಚಿತ್ರ ಕಥೆ!
ಸಚಿನ್ ತೆಂಡೂಲ್ಕರ್ ಮಗಳ ಜಪಾನೀಸ್ ಕನೆಕ್ಷನ್ ಈಗ ದೇಶದ ಗಮನ ಸೆಳೆಯುತ್ತಿದೆ…ಸಾರಾ ಹೊಸ ಒಪ್ಪಂದ ಚರ್ಚೆಯಲ್ಲಿ
ಪ್ರಧಾನಿ ಮೋದಿ ನೆದರ್ಲ್ಯಾಂಡ್ ಭೇಟಿ ಭಾರತ ಸಹಕಾರದ ಸೇತುವೆ ಕಟ್ಟುವ ದ್ವಿಪಕ್ಷೀಯ ಸಂಬಂಧಗಳ ವಿಸ್ತರಣೆ…
ಮನೆಯ ಮೇಲೆ ಪೊಲೀಸರ  ದಾಳಿ  ಮಾರಾಟಕ್ಕೆ ಇಡಲಾದ ಮಾದಕ ವಸ್ತು ಹಾಗೂ ಮಾರಕ ಆಯುಧ ವಶ
ಇದು IPLನಲ್ಲಿ ಹೊಸ ಹೀರೋ ಹುಟ್ಟಿದಂತೇ…ಆದ್ರೆ ಕ್ರಿಕೆಟ್ ಅಲ್ಲ, ಬಾಕ್ಸಿಂಗ್‌ನಲ್ಲಿ! 🥊🔥
ಬಂಗಾಳದಲ್ಲಿ ಈಗಲೂ ದೀದಿನೇ ಫೇವರೆಟ್, ಬಲ ಹೆಚ್ಚಿಸಿ ಕೊಂಡ ಬಿಜೆಪಿ
ಬ್ರೇಕಿಂಗ್ ನ್ಯೂಸ್