📍 Karavali Maruta
LIVE | CONTACT
ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

ಉಡುಪಿ ಸಬ್ ರಿಜಿಸ್ಟರ್ ಕಚೇರಿಯಲ್ಲಿ ಕಾನೂನುಬಾಹಿರ ಚಟುವಟಿಕೆ

ಉಡುಪಿ ಜಿಲ್ಲಾ ಸಬ್ ರಿಜಿಸ್ಟರ್ ಕಚೇರಿಯಲ್ಲಿ ಇಬ್ಬರು ಹೊರಗುತ್ತಿಗೆ ನೌಕರರು ತಮ್ಮ ಇತಿಮಿತಿಯನ್ನು ಮೀರಿ ನಡೆದುಕೊಳ್ಳುತ್ತಿರುವುದಲ್ಲದೆ ಅಪರಾಧಿಕ ಹಾಗೂ  ದುರ್ನಡತೆಯ ನಡೆಯನ್ನು ಪ್ರದರ್ಶಿಸುತ್ತಿದ್ದು ದರ ಬಗ್ಗೆ ಲೋಕಾಯುಕ್ತ ಪೊಲೀಸ್  ಉಪಾಧೀಕ್ಷರ ದೂರಿನ ಮೇಲೆ ಪ್ರಕರಣ ದಾಖಲಾಗಿದೆ.

ಲೋಕಾಯುಕ್ತ ಪೊಲೀಸ್ ಉಪಾಧೀಕ್ಷರಾದ ಹಾಲಮೂರ್ತಿ ರಾವ್ ವಿ ಎಸ್ ರವರ ದೂರಿನ ಮೇಲೆ ಬಿಎನ್ಎಸ್ ಸೆಕ್ಷನ್ ನಿನಂತೆ ಪ್ರಕರಣ ದಾಖಲಾಗಿದೆ.

27.02.2026ರಂದು ಅನಿರೀಕ್ಷಿತವಾಗಿ ಲೋಕಾಯುಕ್ತ ಪೊಲೀಸರು ಮೂಡನಿಣಂಬೂರು ಬನ್ನಂಜೆ ಯಲ್ಲಿರುವ ತಾಲೂಕ ಆಫೀಸಿನ  ಸಂಕೀರ್ಣದಲ್ಲಿರುವ ಸಬ್ ರಿಜಿಸ್ಟರ್  ಕಚೇರಿಗೆ ಭೇಟಿ ನೀಡಿದ್ದಾರೆ. ಈ ಸಂದರ್ಭದಲ್ಲಿ  ಹೊರಗುತ್ತಿಗೆಯ ಅಡಿಯಲ್ಲಿ ಕೆಲಸ ಮಾಡುತ್ತಿರುವ ಸುಕೇಶ್ ಹಾಗೂ ಸುನಿಲ್ ಎಂಬವರು ದರ್ಪ ಹಾಗೂ ಅನಾಗರಿಕತೆಯಲ್ಲಿ ನಡೆದುಕೊಳ್ಳುತ್ತಿರುವುದನ್ನು ಲೋಕಾಯುಕ್ತ ಪೊಲೀಸ್ಸರು ಗಮನಿಸಿದ್ದಾರೆ. ಹಾಗೆಯೇ ಅವರ ಪರ್ಸನಲ್ ಬ್ಯಾಗಿನಲ್ಲಿ ಆಸ್ತಿಪಾಸ್ತಿ ನೋಂದಾವಣೆ, ಹಾಗೂ ಮ್ಯಾರೇಜ್ ನೋಂದಾವಣಿಗೆ ಸಂಬಂಧಿಸಿದ ಒಟ್ಟು 43 ಕಡತಗಳು ಅವರಿಬ್ಬರ ಬ್ಯಾಗಿನಲ್ಲಿ ಪತ್ತೆಯಾಗಿದೆ. ಸುಕೇಶ್ ಅವರ ಬ್ಯಾಗಿನಲ್ಲಿ ಎಂಟು ಫೈಲ್ ಹಾಗೂ ಸುನಿಲ್ ಅವರ ಬ್ಯಾಗಿನಲ್ಲಿ 35 ಫೈಲ್ ರೆಡ್ ಹ್ಯಾಂಡಾಗೆ ಸಿಕ್ಕಿದೆ.

ಆ ಕಡತಗಳಿಗೆ ಸಂಬಂಧಿಸಿದಂತೆ ಕಚೇರಿಯ ರಿಜಿಸ್ಟರ್ ಪುಸ್ತಕದಲ್ಲಿ  ನಮೂದೆ ಆಗಿರಲಿಲ್ಲ,  ಅನ್ನುವುದು ಗೊತ್ತಾಗಿದೆ. ಇದರರ್ಥ ಇಲ್ಲಿ ಸಾಕಷ್ಟು ಗೋಲ್ಮಾಲ್ ಗಳು ಎಪ್ರಾತಪ್ರಾ ನಡೆಯುತ್ತಿದೆ ಅನ್ನುವುದು ಲೋಕಾಯುಕ್ತ ಪೊಲೀಸರ ಗಮನಕ್ಕೆ ಬಂದಿದೆ.

ಅಷ್ಟೇ ಅಲ್ಲ,ಈ ಹೊರಗುತ್ತಿಗೆ ನೌಕರರು ಸರ್ಕಾರಿ ನೌಕರರಿಗಿಂತಲೂ ಹೆಚ್ಚು ದರ್ಪದಿಂದ ಅಧಿಕಾರಸ್ತರಾಗಿ ನಡೆದುಕೊಳ್ಳುತ್ತಿರುವುದನ್ನು ಗಮನಿಸಬಹುದಾಗಿತ್ತು. ಇದೆಲ್ಲವೂ ನೇರವಾಗಿ ಕಾಣುತ್ತಿದ್ದರೂ ಸಹ ಜಿಲ್ಲಾ ಸಬರಿಜಿಸ್ಟರ್ ಗಿರೀಶ್ ರವರು ತಮಗೇನೂ ಗೊತ್ತಿಲ್ಲ ಎಂಬಂತೆ ಇರುವುದು ಲೋಕಾಯುಕ್ತ ಪೊಲೀಸ್ರಿಗೂ ಆಶ್ಚರ್ಯ ಉಂಟು ಮಾಡಿದೆ. ಈ ಎಲ್ಲಾ ಚಟುವಟಿಕೆಗಳನ್ನು ಸ್ವತಹ ನೋಡಿದ ಲೋಕಾಯುಕ್ತ ಪೊಲೀಸರ ಉಪಾಧೀಕ್ಷರಾದ ಹಾಲಮೂರ್ತಿ ರಾವ್ ರವರೆ ಸ್ವಯಂ ದೂರು ದಾಖಲಿಸಿ ಮುಂದಿನ ಕಾನೂನು ಕ್ರಮ ಕೈಗೊಂಡಿದ್ದಾರೆ.

COMMENTS

Login with Gmail to comment

ಇನ್ನಷ್ಟು ಸುದ್ದಿ

ಭೀಕರ ಅಪಘಾತ ಮಹಿಳೆ ಬಲಿ
 “ಮೀನುಗಾರರ ಡೀಸೆಲ್ & ಸಿಲಿಂಡರ್ ಸಮಸ್ಯೆಗೆ ಸರ್ಕಾರದ ತುರ್ತು ಹಸ್ತಕ್ಷೇಪ -ಇಂಧನ ಭರವಸೆ: ಮಂಗಳೂರು ಬಂದರಿನಲ್ಲಿ ತುರ್ತು ಕ್ರಮ”-
ಅಕ್ರಮ ಡಿಸೇಲ್ ದಾಸ್ತಾನು ಪ್ರಕರಣ: 4,175 ಲೀಟರ್ ಡಿಸೇಲ್ ಕಂದಾಯ ಇಲಾಖೆಯಿಂದ ಹರಾಜು – ₹2.35 ಲಕ್ಷಕ್ಕೆ ಮಾರಾಟ!
ಮಂಗಳೂರು ಸರ್ಕಾರಿ ಕಾಲೇಜಿನಲ್ಲಿ ಎಬಿವಿಪಿ, ಎನ್ ಎಸ್ ಯು ಐ ವಿದ್ಯಾರ್ಥಿಗಳ ಘರ್ಷಣೆ 
ಇದು IPLನಲ್ಲಿ ಹೊಸ ಹೀರೋ ಹುಟ್ಟಿದಂತೇ…ಆದ್ರೆ ಕ್ರಿಕೆಟ್ ಅಲ್ಲ, ಬಾಕ್ಸಿಂಗ್‌ನಲ್ಲಿ! 🥊🔥
ಮಹಿಳೆಯ ಸ್ಕೂಟಿಯನ್ನೇ ಕದ್ದ ಕಳ್ಳರು….. ಹೆಚ್ಚುತ್ತಿರುವ ವಾಹನ ಕಳ್ಳತನ
“ಮಂಜಿನ ನಡುವೆ ಕ್ಷಣಾರ್ಧದಲ್ಲಿ ಮಾಯವಾದ ಮಗಳು”ಶ್ರೀನಂದಾ ಶವವಾಗಿ ಪತ್ತೆ…!
ವೆಟ್-ವೆಲ್‌ಗಳ ಕಳಪೆ ನಿರ್ವಹಣೆಚರಂಡಿ-ಬಾವಿಗಳಿಗೆ ಡ್ರೈನೇಜ್ ನೀರು..
80 ಲಕ್ಷ ವಂಚನೆ ಪ್ರಕರಣ ದೂರು ದಾಖಲು
ಎಲ್ಲರಿಗೂ ಯುಗಾದಿ ಹಬ್ಬ… ಆದರೆ ಈ ಗ್ರಾಮಗಳಲ್ಲಿ ಭಯ ಮೌನ…ಹಬ್ಬ ಇಲ್ಲ…!ಒಂದು ವಿಚಿತ್ರ ಕಥೆ!
ಸ್ಟೇಟ್ ಬ್ಯಾಂಕ್ ಮೀನು ಮಾರುಕಟ್ಟೆಗೆ ಭೇಟಿ ನೀಡಿದ ಡಾ. ನಾಗಲಕ್ಷ್ಮಿ ಚೌಧರಿ – ಮಹಿಳಾ ಮೀನುಗಾರರ ಸಮಸ್ಯೆ ಆಲಿಕೆ
ಮಂಗಳೂರಿಗರಿಗೆ ಎಚ್ಚರಿಕೆ: ನೀರನ್ನು ಜಾಣ್ಮೆಯಿಂದ ಬಳಸಿ –ಮಾರ್ಚ್ ನಲ್ಲೇ ರೇಷನಿಂಗ್ ಮಾಡುವ ಪರಿಸ್ಥಿತಿ ಇದೆ…
ಸಾರ್ವಜನಿಕರಲ್ಲಿ ವಿನಂತಿ …!
ರೀಲ್ಸ್ ಮಾಡುವ ಕನಸು… ಕ್ಷಣದಲ್ಲೇ ದುರ್ಘಟನೆ,  ಜೀವವನ್ನೇ ಕಳೆದುಕೊಂಡ ಬಾಲಕ.
“ಬರ್ಕಾಸ್ತು ಘಟಕಕ್ಕೆ ‘ಬೋಗಸ್ ನಾಯಕತ್ವ’ – ಕರವೇ ಮಹಿಳಾ ಘಟಕದಲ್ಲಿ ಭಿನ್ನಮತ ಸ್ಫೋಟ!”
ಫ್ರಿಡ್ಜ್ ರಿಪೇರಿಗೆ ಬಂದವ ಮನೆ ಲೂಟಿ ಪರಾರಿ…!ಬಿ ಅಲರ್ಟ್ ‼️
ವಿಟ್ಲ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಕಚೇರಿಯಲ್ಲಿ ಗಲಾಟೆ:
ಪ್ರತೀಕಾರದ ದಾಳಿಗೆ ‘ ರೌಡಿಶೀಟರ್ ಟ್ಯಾಬ್ಲೆಟ್’ ಆರೀಫ್ ಖತಂ .!
ಇಸ್ರೇಲ್ ಸ್ಥಿತಿ ಶೋಚನೀಯ ಸೈನ್ಯದಲ್ಲೇ ಅಸಮಾಧಾನ
ಒಂದು ದೇಶವನ್ನೇ ಮಟ್ಟಾಶ್ ಮಾಡುವಷ್ಟು ನ್ಯೂಕ್ಲಿಯರ್ ಪವರ್ stock ಇರಾನ್ನಲ್ಲಿ ಇದ್ಯಾ !?
“ವಾಹನ ಮಾರಾಟ-RC ಬದಲಾವಣೆ  ಅಗತ್ಯ.. ಇಲ್ಲವಾದರೆ ಕಾನೂನು ಸಮಸ್ಯೆಗಳು ತಪ್ಪಿದ್ದಲ್ಲ..!” ಹೈಕೋರ್ಟ್
ಮಂತ್ರಾಲಯದ ಮಠದ ಹೆಸರಲ್ಲಿ 3 ಲಕ್ಷ ಆಸೆ ತೋರಿಸಿ ವಂಚನೆ..!
ದರೆಗುಡ್ಡೆಯಲ್ಲಿ ಬಾರಿ ಅಗ್ನಿ ಅವಗಡ…!
17ನೇ ಆಯವ್ಯಯ ಮಂಡನೆ ಮಾಡುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ
ಸುಳ್ಯದಲ್ಲಿ ಚಿನ್ನಾಭರಣ ಕಳವು,  ಮಹಿಳೆಯ ಮೇಲೆ ಶಂಕೆ
ಹಳ್ಳಿಯಿಂದ ಡೆಲ್ಲಿ ತನಕ ಉರಿ ಬಿಸಿಲು, ಮಾರ್ಚ್ ಆರಂಭದಲ್ಲೇ ಜನ ತತ್ತರ”
🚨 ಮಂಗಳೂರು ನಿವಾಸಿಗಳಿಗೆ ಮಹತ್ವದ ಮಾಹಿತಿ – 2026 ಘನತ್ಯಾಜ್ಯ ನಿರ್ವಹಣೆ ಹೊಸ ನಿಯಮ  🚨
Top 5, ಹೆಚ್ಚು ಅನುದಾನ ಪಡೆದ ಇಲಾಖೆಗಳು ಯಾವವು ಗೊತ್ತಾ?
ಭಾರತದಲ್ಲಿ ಎಚ್‌ಪಿವಿ (HPV) ಲಸಿಕೆ ಕಾರ್ಯಕ್ರಮ ಹೆಣ್ಣೆತ್ತವರು ತಿಳಿದುಕೊಳ್ಳಲೇಬೇಕಾದ ವಿಚಾರ
ಆನ್ ಲೈನ್ ವಂಚನೆ ಶಿರ್ವದ ಯುವತಿಗೆ ಲಕ್ಷ ಲಕ್ಷ ಉಂಡೆನಾಮ… ಬ್ಯಾಂಕ್ ನಿಯಮ ವಂಚಕರಿಗೆ  ಸಹಕಾರಿ?