📍 Karavali Maruta
LIVE | CONTACT
ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

ಉದ್ಯಮಿ, ಕಾಲೇಜ್ topper,  ಕೋಟ್ಯದೀಶರೇ…ಕಠಿಣ ಜೈನ ಸನ್ಯಾಸದತ್ತ…!

ದಾವಣಗೆರೆ ನಗರದ ಪ್ರಸಿದ್ಧ ಲಲಿತ್ ಗಾರ್ಮೆಂಟ್ಸ್ ಮಾಲೀಕರಾದ ಭರತ್ ಜೈನ್ (52) ಮತ್ತು ಅವರ ಪತ್ನಿ ಆರತಿ ಜೈನ್ (50) ಸನ್ಯಾಸ ಸ್ವೀಕರಿಸಲಿದ್ದು, ಇವರೊಂದಿಗೆ ಎಂಬಿಎ ಪದವೀಧರೆ ಕ್ರುನಾಲಿ ಜೈನ್ (30) ಹಾಗೂ ಬಿಕಾಂ ಪದವೀಧರೆ ದೀಕ್ಷಿತಾ ಜೈನ್ (28) ಸಹ ದೀಕ್ಷೆ ಪಡೆಯಲಿದ್ದಾರೆ. ಸಮುದಾಯದಲ್ಲಿ ಅಪರೂಪದ ಆಧ್ಯಾತ್ಮಿಕ ಘಟನೆಯೊಂದು ನಗರದಲ್ಲಿ ನಡೆಯಲಿದೆ.

ಜೈನ್ ಸಮಾಜದ ನಾಲ್ವರು ಸನ್ಯಾಸ ದೀಕ್ಷೆ ಸ್ವೀಕರಿಸಲು ನಿರ್ಧರಿಸಿದ್ದು, ಮಾರ್ಚ್ 4ರಂದು ನಗರದ (Davanagere) ಹೊಳೆಹೊನ್ನೂರು ತೋಟದಲ್ಲಿ ದೀಕ್ಷಾ ಮಹೋತ್ಸವ ಜರುಗಲಿದೆ. ಜೈನ ಗುರು ಅಭಯ್ ಶೇಖರ್ ಸುರೀಶ್ವರ ಮಹಾರಾಜ್ ಅವರ ಸಮ್ಮುಖದಲ್ಲಿ ಇಬ್ಬರು ಯುವತಿಯರು ಹಾಗೂ ಉದ್ಯಮಿ ದಂಪತಿ ಸನ್ಯಾಸ ಜೀವನಕ್ಕೆ ಕಾಲಿಡಲಿದ್ದಾರೆ.
ಮಕ್ಕಳ ಹಾದಿಯನ್ನೇ ಅನುಸರಿಸಿದ ದಂಪತಿ
ಕ್ರುನಾಲಿ ಜೈನ್ ಅವರು ಪುಣೆಯ ಸಿಂಬಯೋಸಿಸ್ ಕಾಲೇಜಿನಲ್ಲಿ ಎಂಬಿಎ ಪದವಿ ಪಡೆದಿದ್ದಾರೆ. ದೀಕ್ಷಿತಾ ಜೈನ್ ಅವರು ಮೂಲತಃ ದಾವಣಗೆರೆಯವರಾಗಿದ್ದು, ಅರುಣ್ ಕುಮಾರ್ ಜೈನ್ ಹಾಗೂ ಅನ್ನಪೂರ್ಣ ಬಾಯಿ ಅವರ ಪುತ್ರಿಯಾಗಿದ್ದಾರೆ.

ಕ್ರುನಾಲಿ ಅವರು ಕಮಲೇಶ್ ಜೈನ್ ಮತ್ತು ಬಬಿತಾ ಜೈನ್ ಅವರ ಪುತ್ರಿ. ವಿಶೇಷವೆಂದರೆ, ಭರತ್ ಜೈನ್ ಹಾಗೂ ಆರತಿ ದಂಪತಿಯ ಇಬ್ಬರು ಪುತ್ರರು ಮೂರು ವರ್ಷಗಳ ಹಿಂದೆ ಸನ್ಯಾಸ ದೀಕ್ಷೆ ಸ್ವೀಕರಿಸಿದ್ದರು. ಮಗ್ನಶೇಖರ್ ವಿಜಯ್ ಮಹಾರಾಜ್ (28) ಹಾಗೂ ಪೂರ್ಣಶೇಖರ್ ವಿಜಯ್ (25) ಈಗ ಧಾರ್ಮಿಕ ಕೈಂಕರ್ಯಗಳಲ್ಲಿ ತೊಡಗಿಸಿಕೊಂಡಿದ್ದಾರೆ. ತಮ್ಮ ಪುತ್ರರ ಮಾರ್ಗವನ್ನು ಅನುಸರಿಸಿ ದಂಪತಿಗಳೂ ಈಗ ಗ್ರಹಸ್ಥಾಶ್ರಮ ತ್ಯಜಿಸಿ ಧರ್ಮ ಮಾರ್ಗವನ್ನು ಆರಿಸಿಕೊಂಡಿದ್ದಾರೆ.

COMMENTS

Login with Gmail to comment

ಇನ್ನಷ್ಟು ಸುದ್ದಿ

ಗೃಹಸಚಿವ ಪ್ರಿಯಾಂಕ್ ಖರ್ಗೆಗೆ ಅವಹೇಳನ ಜಾತಿ ನಿಂದನೆ  ಆರೋಪದಲ್ಲಿ ಕಾರ್ಕಳ ವ್ಯಕ್ತಿಯ ಬಂಧನ !
ಮೀನುಗಳ ಮಾರಣಹೋಮ, ಕಪ್ಪಾದ ನೀರು,ಉಸಿರುಗಟ್ಟಿಸುವ ದುರ್ವಾಸನೆ — ಜನರ ಬದುಕಿಗೆ ದೊಡ್ಡ ಎಚ್ಚರಿಕೆ!
ಕೊಲೆ ಆರೋಪಿಯ ದೂರುದಾರನ ವಿಷ ಸೇವನೆಯ ಬಗ್ಗೆ  ಸ್ಪಷ್ಟನೆ
ಗೃಹಲಕ್ಷ್ಮಿ ಫಲಾನುಭವಿಗಳೇ ಗಮನಿಸಿ: ಹಣ ಕ್ರೆಡಿಟ್ ಆಗ್ಬೇಕಾದ್ರೆ ಇನ್ಮುಂದೆ ಬಯೋಮೆಟ್ರಿಕ್ ಕಡ್ಡಾಯ!
ಗ್ರಾಮೀಣ ಅಭಿವೃದ್ಧಿಯಲ್ಲಿ ಉಡುಪಿ ನಂ.1: ಐದು ಪಂಚಾಯಿತಿಗಳಿಗೆ ರಾಷ್ಟ್ರ ಗೌರವ-ಉಡುಪಿ ಬರೆದ ಸುವರ್ಣ ಇತಿಹಾಸ!
ತಿರುಮಲ ತಿಮ್ಮಪ್ಪನ 3,550 ಮೆಟ್ಟಿಲು ಹತ್ತಿದ 116 ವರ್ಷದ ನವನೀತಮ್ಮ ಕರ್ನಾಟಕದ ಶತಾಯುಷಿ!
ಕಸ ಎಸೆದರೆ ದುಪ್ಪಟ್ಟು ದಂಡ: ಬೆಂಗಳೂರು ಶುರು ಮಾಡಿದೆ, ಮಂಗಳೂರು ಯಾವಾಗ? ಈಗ ಮಾತಲ್ಲ, ಕಠಿಣ ಕಾರ್ಯಾಚರಣೆ ಬೇಕು,ಕಟ್ಟುನಿಟ್ಟಿನ ಕ್ರಮಗಳಾಗ್ಬೆಕ್ ..
ನಾಟಕ ಕಲಾವಿದೆ ಸೌಮ್ಯ ಶೆಟ್ಟಿ ಬಂಧನ
ಕೊನೆಕ್ಷಣದ ಹೃದಯ ಕಲುಕುವ ಹರೀಶ್ ರಾಣಾ – ದಯಾಮರಣvedio
ಬೈಂದೂರಿನಲ್ಲಿ ಹಳೆ ವೈಷಮ್ಯದಿಂದ ಮನೆಗೆ ನುಗ್ಗಿ ಹಲ್ಲೆಗೆ ಯತ್ನ
ಪುತ್ತೂರು ಅತ್ಯಾಚಾರ ಪ್ರಕರಣ: ಹೈಕೋರ್ಟ್‌ನಲ್ಲಿ ರಾಜಿ ಸಂಧಾನ ಪ್ರಸ್ತಾಪ..!
ಕುಂದಾಪುರದಲ್ಲಿ ಯುವತಿ ಆತ್ಮಹತ್ಯೆಗೆ ಪ್ರಿಯಕರನ ಕುಮ್ಮಕ್ಕು
ಆರ್‌ಸಿಬಿ ಎದುರಿಸಲು ರಾಯಲ್ಸ್ ರೆಡಿ??: ಕ್ರಿಕೆಟ್ ಜಗತ್ತಿಗೆ ಶಾಕ್ ಕೊಟ್ಟ ಬಿಹಾರದ ಬಾಲಕ-ಸಚಿನ್ ತೆಂಡೂಲ್ಕರ್ ಕೂಡ ಮೆಚ್ಚಿದ ಆ 29 ಎಸೆತಗಳ ರುದ್ರತಾಂಡವ!
ಕಂದಾಯ ಸಚಿವರ ದಕ್ಷಿಣ ಕನ್ನಡ ಜಿಲ್ಲಾ ಪ್ರವಾಸ
ಮುದ್ದಾದ ಅವಳಿ ಹೆಣ್ಣು ಮಕ್ಕಳನ್ನು ಕತ್ತು ಸೀಳಿ ಕೊಂದ ಪಾಪಿ ಅಪ್ಪ
ಯುದ್ಧದ ಹೊಡೆತ: ಹಣ ಕೊಟ್ಟರೂ ಗ್ಯಾಸ್ ಇಲ್ಲ! ಕಾರವಾರ ಬಂದರು ಸ್ತಬ್ಧ — ಜನಜೀವನ ಅಸ್ತವ್ಯಸ್ತ 🔥
ಎಲ್ಲೆಡೆ LPG ಗ್ಯಾಸ್ ಸಿಲಿಂಡರ್ ಸಂಕಷ್ಟ: ಇದು ಜೀವನೋಪಾಯದ ಪ್ರಶ್ನೆ… ತಕ್ಷಣ ಸಮರ್ಪಕ ಕ್ರಮ ಸರ್ಕಾರದ ಹೊಣೆ.
ದೇಶದ ಗಮನ ಸೆಳೆದ ಒಡಿಶಾದ ಐತಿಹಾಸಿಕ ಶಿಕ್ಷಣ ಕ್ರಾಂತಿ: LKGಯಿಂದ PGವರೆಗೆ ಸಂಪೂರ್ಣ ಉಚಿತ ಶಿಕ್ಷಣ ಘೋಷಣೆ… “ಶಿಕ್ಷಣ ಎಲ್ಲರ ಹಕ್ಕು”
ಅಮೆರಿಕ–ಇಸ್ರೇಲ್ ದಾಳಿ ಬಳಿಕ ಇರಾನ್‌ನಲ್ಲಿ ಉದ್ವಿಗ್ನತೆ ತಾರಕಕ್ಕೆ
ಹೊಸ ರಾಜಕೀಯ ಕ್ರಾಂತಿ! ಅಸ್ಸಾಂ ಕುದಿಯುತ್ತಿದೆ…ಹಿಂದುತ್ವ vs ಗುರುತು ರಾಜಕೀಯ…!
ಮಂಗಳೂರಲ್ಲಿ 10ನೇ ತರಗತಿ ತಾಯಿಯಿಲ್ಲದ ಬಾಲಕಿ ಮೇಲೆ ಜಲೀಲ್ ಎಂಬಾತ 7 ತಿಂಗಳು ನಿರಂತರ ದೌರ್ಜನ್ಯ! 
ಸಾರ್ವಜನಿಕರಲ್ಲಿ ವಿನಂತಿ …!
ದ್ವಿತೀಯ ಪಿ.ಯು.ಸಿ ಪರೀಕ್ಷಾ ಹಾಜರಾತಿ
ಕೆತ್ತಿಕಲ್‌ನಿಂದ ಚಾರ್ಮಾಡಿವರೆಗೆ ಅಪಾಯದ ಗಂಟೆ! ಭೂಕುಸಿತ ಭೀತಿಯಲ್ಲಿ ಕರಾವಳಿ ರಸ್ತೆಗಳು !ಮಳೆ ಬಂದ ಮೇಲೆ ಸಭೆ, ಪರಿಶೀಲನೆ… ಆದರೆ ಮುನ್ನೆಚ್ಚರಿಕೆ ಎಲ್ಲಿದೆ?
ಕೊಲೆ ಆರೋಪಿಗಳ ಕಾರು ಮಾಣಿಯಲ್ಲಿ ಪತ್ತೆ ….!
ಧುರಂಧರ್ 2 ಕ್ರೇಜ್ ಓವರ್‌ಫ್ಲೋ ಕಲೆಕ್ಷನ್‌ನಲ್ಲಿಕರ್ನಾಟಕವೇ ಟಾಪ್… ದಕ್ಷಿಣ ಭಾರತದಲ್ಲಿ 300 ಕೋಟಿ ಕ್ಲಬ್!
108 ವರ್ಷಗಳ ಇತಿಹಾಸದಲ್ಲಿ ಪಾಟ್ನಾವಿಶ್ವವಿದ್ಯಾಲಯದಲ್ಲಿ ಹೊಸ ಅಧ್ಯಾಯ- ಮಹಿಳೆಯರ ಐತಿಹಾಸಿಕ ಹೆಜ್ಜೆ!
ಒಂದು ಚಿನ್ನದ ಸರಕ್ಕಾಗಿ ನಿದ್ರೆಯಲ್ಲಿದ್ದ ಗೆಳತಿಯನ್ನೇ ಕೊಲ್ಲಲೆತ್ನಿಸಿದ ಆಕೆಗೆ ಜೈಲೆ ಗತಿ …..ನಂಬಿಕೆಯೇ ರಕ್ತಸಿಕ್ತವಾದ ಮಣಿಪಾಲದ ಭೀಕರ ಘಟನೆ…
ಎಲಾನ್ ಮಸ್ಕ್: ವಿಶ್ವದ ಮೊದಲ ಟ್ರಿಲಿಯನೇರ್‌ನಿಂದ ಇನ್ನೂ ಎತ್ತರದತ್ತ!
ಉಡುಪಿಯಲ್ಲಿ ಟ್ರೇಡಿಂಗ್ ಹೆಸರಲ್ಲಿ ಲಕ್ಷಗಟ್ಟಲೆ ಧೋಕಾ….