📍 Karavali Maruta
LIVE | CONTACT
ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

ಉದ್ಯಮಿ ಸಿಜೆ ರಾಯ್ ಆತ್ಮಹತ್ಯೆ, ನಿರೀಕ್ಷಿತ ತನಿಖೆ

ರಿಯಲ್ ಎಸ್ಟೇಟ್ ಉದ್ಯಮಿ ಸಿಜೆ ರಾಯ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲವು ಕಡೆಗಳಿಂದ ಹಲವು ರೀತಿಯ ಅನುಮಾನಗಳು ಹುಟ್ಟಿಕೊಂಡಿದ್ದವು. ಆ ಅನುಮಾನಗಳಿಗೆಲ್ಲ ತೆರೆ ಎಳೆಯುವ ನಿಟ್ಟಿನಲ್ಲಿ ತನಿಖಾ ರಿಪೋರ್ಟ್ ಬಂದಿದೆ. ಸ್ಪೆಷಲ್ ಇನ್ವೆಸ್ಟಿಗೇಷನ್ ಟೀಮ್ ನಡೆಸಿದಂತಹ ಈ ತನಿಖೆಯಲ್ಲಿ, ಸಿಜೆ ರಾಯ್ ಮಾನಸಿಕ ಖಿನ್ನತೆಯ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬ ರಿಪೋರ್ಟ್ ಬಂದಿದೆ.

ನಿರೀಕ್ಷಿತವಾದಂತಹ ರಿಪೋರ್ಟ್ ಅದು ಅನ್ನುವುದು ಸಾರ್ವಜನಿಕರ ವಲಯದಿಂದ ಕೇಳಿ ಬರುತ್ತಿರುವಂತಹ ಮೊದಲ ಮಾತಾಗಿದೆ. ಉದ್ಯಮಿ ಸಿಜೆ ರಾಯ್  ಆತ್ಮಹತ್ಯೆ ಮಾಡಿಕೊಳ್ಳುತ್ತಿರುವಂತಹ ಸಂದರ್ಭದಲ್ಲಿ, ಅವರ ಸಂಸ್ಥೆಯ ಮೇಲೆ ಈಡಿ ರೈಡ್ ಮಾಡಿತ್ತು. ಅದೇ ಸಂದರ್ಭದಲ್ಲಿ ಉದ್ಯಮಿ ತಮ್ಮದೇ ರಿವಲ್ವಾರಿನಿಂದ ಆತ್ಮಹತ್ಯೆ ಮಾಡಿಕೊಂಡಿದ್ದರು.

ಮಾನಸಿಕ ಖಿನ್ನತೆ ಕಾರಣಕ್ಕೆ ಉದ್ಯಮಿಯು ಆತ್ಮಹತ್ಯೆ ಮಾಡಿಕೊಂಡಿದ್ದು ಅನ್ನುವುದನ್ನು ಈಗ ಬಂದಿರೋ ತನಿಖಾ ರಿಪೋರ್ಟ್ ಹೇಳುತ್ತಿದೆ. ಆ ಮಾನಸಿಕ ಖಿನ್ನತೆ ಯಾವ ಕಾರಣದಿಂದ, ಯಾವ ಕಾರಣಕ್ಕೆ ಆತ್ಮಹತ್ಯೆಯ ಮಟ್ಟಕ್ಕೆ ಹೋಗುವಂತೆ ಮಾಡಿತು? ಯಾವ ಕಾರಣಕ್ಕೆ ಆ ಖಿನ್ನತೆಯು  ಈಡಿ ದಾಳಿಯ ಸಮಯದಲ್ಲೇ ಸ್ಪೋಟಗೊಂಡಿತು? ಇದರ ಹಿಂದಿನ ಮರ್ಮವನ್ನು ತನಿಖಾ ತಂಡವು ಬಿಚ್ಚಿಡಲಿಲ್ಲ ಅನ್ನುವುದು ಇಲ್ಲಿ ಇಂಪಾರ್ಟೆಂಟ್. ಉದ್ಯಮಿಯು ಬೇರೆ ಯಾವುದೋ ಖಿನ್ನತೆಯಿಂದ ಬಳಲುತ್ತಿದ್ದರೆ, ಒತ್ತಡಕ್ಕೆ ಒಳಗಾಗಿದ್ದರೆ ಈ ಡಿ ದಾಳಿಯ ಸಂದರ್ಭವನ್ನೇ ತಮ್ಮ ಆತ್ಮಹತ್ಯೆಗೆ ಆಯ್ಕೆ ಮಾಡಿಕೊಂಡಿದ್ದು ಯಾಕೆ? ಮಾನಸಿಕ ಖಿನ್ನತೆಯನ್ನು ಒಳಗೊಂಡ ವ್ಯಕ್ತಿ, ಇದಕ್ಕೂ ಮೊದಲು ಆತ್ಮಹತ್ಯೆಗೆ ಪ್ರಯತ್ನಿಸಿದ್ದರೆ? ಪ್ರಯತ್ನಿಸಿದ್ದರೆ ಅಂತಹ ಪ್ರಯತ್ನಗಳು ಎಷ್ಟು ಬಾರಿ ಆಗಿದ್ದವು? ಅವೆಲ್ಲವೂ ತನಿಖಾ ರಿಪೋರ್ಟಿನಲ್ಲಿ ಬಂದಿರಬೇಕು ತಾನೆ? ಇವೆಲ್ಲವನ್ನು ಒಳಗೊಂಡ ರಿಪೋರ್ಟ್ ಅದಾಗಿದ್ದರೆ ಖಂಡಿತವಾಗಿಯೂ ರಾಜ್ಯದ ಜನರು ಅದನ್ನು ಒಪ್ಪಿಕೊಳ್ಳುತ್ತಾರೆ. ಅದಿಲ್ಲದಿದ್ದರೆ ಜನಸಾಮಾನ್ಯರಲ್ಲಿನ ಅನುಮಾನ ಹೋಗುವುದೇ ಇಲ್ಲ. ಡಿಕೆ ರವಿ ಪ್ರಕರಣಕ್ಕೆ ಸಂಬಂಧಿಸಿದಂತೆ ಅನುಮಾನದ ಹುತ್ತವೇ ಜನಸಾಮಾನ್ಯರಲ್ಲಿ ಇದೆ. ಅದನ್ನು ಹೋಗಲಾಡಿಸುವ ಪ್ರಯತ್ನ ಸರ್ಕಾರದಿಂದ ಆಗಲೇ ಇಲ್ಲ. ತನಿಕಾ ಸಂಸ್ಥೆಗಳ ತನಿಖೆಯನ್ನು ಜನರು ಒಪ್ಪಲೂ ಇಲ್ಲ. ಜನಸಾಮಾನ್ಯರು ಆ ಪ್ರಕರಣಕ್ಕೆ ಸಂಬಂಧಿಸಿದಂತೆ, ಯಾರೆಲ್ಲಾ ಆರೋಪಿಗಳು ಅಂತ ಅಂದುಕೊಂಡಿದ್ದರೊ ಅವರು ಈಗಲೂ ರಾಜರಂತೆಯೇ ಮೆರೆಯುತ್ತಿದ್ದಾರೆ ಹೆಸರಿನಿಂದ ಹೇಳುತ್ತಿದ್ದಾರೆ. ಹಾಗಾಗಿ ಜನಸಾಮಾನ್ಯರಿಗೆ ಸರ್ಕಾರ ನಡೆಸುವಂತಹ ಈ ರೀತಿಯ ತನಿಖೆಗಳ ಮೇಲೆ ನಂಬಿಕೆ ಹೊರಟು ಹೋಗುತ್ತಿದೆ. ಒಳ್ಳೆಯ ಬೆಳವಣಿಗೆಯಂತೂ ಅಲ್ಲ, ಇದು ದುರದಷ್ಟಕರ ವಿಚಾರ. 

ಸಿಜೆ ರಾಯ್ ಪ್ರಕರಣದಲ್ಲೂ ಇದೇ ಆಗುತ್ತಿದೆ. ಜನಸಾಮಾನ್ಯರು ಅಂದುಕೊಳ್ಳುತ್ತಿರುವುದೇ ಬೇರೆ. ಜನಸಾಮಾನ್ಯರ ಪ್ರಕಾರ, ಸಿಜೆ ರಾಯ್ ಅವರನ್ನು ಒತ್ತಡಕ್ಕೆ ಸಿಲುಕಿಸುವ ಕೆಲಸವನ್ನು ಕಾಣದ ಕೈ, ವ್ಯವಸ್ಥೆಯ ಮೂಲಕವೇ ಮಾಡಿದೆ. ಆ ವ್ಯವಸ್ಥೆಯ ಮೂಲಕ ಮಾಡಲಾದ ಈ ಒತ್ತಡಕ್ಕೆ ಸಿಜೆ ಬಲಿಯಾಗಿದ್ದಾರೆ. ಆ ವಿಚಾರದಲ್ಲಿ ತನಿಖೆಯು ಸಾಗಿಯೇ ಇಲ್ಲ, ಕೇವಲ ನಿರ್ದಿಷ್ಟ ವಿಚಾರದ ನಿರ್ದೇಶನದಲ್ಲಿ ತನಿಖೆಯು ನಡೆದಂತೆ ಕಾಣುತ್ತಿದೆ ಅನ್ನೋದು ಸಾಮಾಜಿಕ ಚಟುವಟಿಕೆಯಲ್ಲಿ ಗುರುತಿಸಿಕೊಂಡಂತಹ ವ್ಯಕ್ತಿಗಳ ಅಭಿಪ್ರಾಯ. ಕೇವಲ ಅಭಿಪ್ರಾಯವಲ್ಲ ಆರೋಪವು ಹೌದು.  

COMMENTS

Login with Gmail to comment

ಇನ್ನಷ್ಟು ಸುದ್ದಿ

ಚಿನ್ನ ಮತ್ತು ಬೆಳ್ಳಿ ಮಾರುಕಟ್ಟೆ ಜಿಗಿತ-ಸುಂಕ ಏರಿಕೆಯಿಂದ ಬೆಲೆಯಲ್ಲಿ ಭಾರೀ ಏರಿಕೆ ಗ್ರಾಹಕರಿಗೆ ಹೊರೆ.
ರಾಜಕೀಯ ಸುದ್ದಿ ಅಂದರೆ ಬೋರ್ ಅಂತ ಅನ್ನಿಸುವರಿಗೆ ಇದು ಒಂದು ಪಕ್ಕಾ ಎಂಟರ್‌ಟೈನ್‌ಮೆಂಟ್ ಎಪಿಸೋಡ್!!!
ಲೈಂಗಿಕ ಕಿರುಕುಳ ನೀಡಿದ ಬಾಸ್‌ಗೆ ಪೊಲೀಸರ ಮುಂದೆಯೇ ಮುಖಕ್ಕೆ ಮಸಿ ಬಳಿದು ಕೆನ್ನೆಗೆ ಬಾರಿಸಿದ ಮಹಿಳೆ!
ಮಹಿಳೆಯ ಮೇಲೆ ಮಾರಣಾಂತಿಕ ಹಲ್ಲೆ
ಮಹಿಳೆಯ ಸ್ಕೂಟಿಯನ್ನೇ ಕದ್ದ ಕಳ್ಳರು….. ಹೆಚ್ಚುತ್ತಿರುವ ವಾಹನ ಕಳ್ಳತನ
ಬಳ್ಳಾರಿ “ಪೊಲೀಸ್ ಗನ್‌ಮನ್ ಎಕ್ಸ್‌ಟಾರ್ಷನ್”ಇಲಾಖೆಗೆ ಕಳಂಕ: ಗನ್‌ಮನ್ ಸೇರಿ ಮೂವರ ವಿರುದ್ಧ ಪ್ರಕರಣ!
ಶೈಕ್ಷಣಿಕ ವರ್ಷ ಆರಂಭ, ನೋಟ್‌ಬುಕ್‌ನಿಂದ ಆಟೋವರೆಗೆ ಎಲ್ಲ ಖರ್ಚು ಗಗನಕ್ಕೆ….ಪೋಷಕರಿಗೆ ದುಬಾರಿ ಹೊರೆ
ಶಿರಸಿ ಮಾರಿಯಮ್ಮನ ಜಾತ್ರೆ ಪ್ರಾರಂಭ
ಇರಾನ್ ಸಚಿವ ಅಬ್ಬಾಸ್ ಅರಾಘ್ಚಿ ಭಾರತಕ್ಕೆ… ಮಧ್ಯಪ್ರಾಚ್ಯ ಉದ್ವಿಗ್ನತೆ ನಡುವೆ BRICS ಸಭೆ ಮೇಲೆ ವಿಶ್ವದ ಗಮನ!ಜಾಗತಿಕ ಉದ್ವಿಗ್ನತೆಯ ನಡುವೆ ದೆಹಲಿ ರಾಜತಾಂತ್ರಿಕ ಕೇಂದ್ರಬಿಂದು!…
Top 5, ಹೆಚ್ಚು ಅನುದಾನ ಪಡೆದ ಇಲಾಖೆಗಳು ಯಾವವು ಗೊತ್ತಾ?
ಪರಸ್ತ್ರೀ ಹುಂಡಿಗೆ  ಒಂದುವರೆ ಕೋಟಿ ಅಪಾರ್ಟ್ಮೆಂಟ್, ಮಾಜಿ ಶಾಸಕನ ರಂಗಿನಾಟ 
ಕಾರ್ಕಳದ ವೈದ್ಯಕೀಯ ವಿದ್ಯಾರ್ಥಿನಿ ಭೀಕರ  ಅಪಘಾತಕ್ಕೆ ಬಲಿ
ಕೊನೆಗೂ ಸೋತ ಖಾಕಿ….!!!
ಅಂಡಮಾನ್ boat ದುರಂತ-250 ಕ್ಕೂ ಹೆಚ್ಚು ಮಂದಿ ಕಾಣೆ..
ವಿಟ್ಲ ಪಟಾಕಿ ತಯಾರಿಕಾ ಘಟಕದಲ್ಲಿ ಪಟಾಕಿ ಸ್ಫೋಟ
ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬ್ಯಾಂಕಾಕ್‌ನಿಂದ ಬಂದ ಪ್ರಯಾಣಿಕನ ಬ್ಯಾಗ್‌ನಲ್ಲಿ 47 ಜೀವಂತ ಅಪರೂಪದ ಪ್ರಾಣಿಗಳು ಪತ್ತೆ! 
ಗ್ಯಾಸ್ ಪೈಪ್‍ಲೈನ್ ಸೋರಿಕೆ: ಅಣಕು ಪ್ರದರ್ಶನ
ತಮಿಳುನಾಡು ಮುಖ್ಯಮಂತ್ರಿ ವಿಜಯ್, ಚಧುರಂಗದಾಟದಲ್ಲಿ ಲಾಂಗ್ ಟೈಮ್ ಉಳಿಯುವರೇ?
ಮಹೇಶ್ ಶೆಟ್ಟಿ ತಿಮರೋಡಿಗೆ ಮೂರನೇ ಬಾರಿ ಗಡಿಪಾರು ಆದೇಶ….
ಧೂಮಪಾನ ಮಾಡುತ್ತಿದ್ದೀರಾ? ನಿಮ್ಮ ಮುಖ ನಿಧಾನವಾಗಿ ನಾಶವಾಗುತ್ತಿದೆ…
50ಕ್ಕೂ ಹೆಚ್ಚು ಆಟೋ ಚಾಲಕರ ದಿನನಿತ್ಯದ ಆರೋಗ್ಯದ ಬದುಕಿಗೆ ಮುಳುವಾದ ದೇರಳಕಟ್ಟೆ ಜಂಕ್ಷನ್ ದುರ್ನಾತ! 
ಒಂದೇ ಫ್ಲಾಟ್ ಇಬ್ಬಿಬ್ಬಿರ ಹೆಸರಲ್ಲಿ ..!ಡಬಲ್ ಡಾಕ್ಯುಮೆಂಟ್ ದಂಧೆ ಬಯಲು –ಕೋಟಿ ಕೋಟಿ ವಂಚನೆ ಮಾಡಿ ಆರೋಪಿ ಪರಾರಿ! ರಿಯಲ್ ಎಸ್ಟೇಟ್ ಶಾಕ್….
ಕಾಂಗ್ರೆಸ್ ಮೇಲಿನ ಕೋಪ ತಣ್ಣಗಾಗಿಲ್ಲ….. ಜನಪರ ಯೋಜನೆ ಮುಂದುವರೆಸಲು ಸ್ಟಾಲಿನ್ ಮನವಿ
 “ಮೀನುಗಾರರ ಡೀಸೆಲ್ & ಸಿಲಿಂಡರ್ ಸಮಸ್ಯೆಗೆ ಸರ್ಕಾರದ ತುರ್ತು ಹಸ್ತಕ್ಷೇಪ -ಇಂಧನ ಭರವಸೆ: ಮಂಗಳೂರು ಬಂದರಿನಲ್ಲಿ ತುರ್ತು ಕ್ರಮ”-
ಹೈ ಪ್ರೋಫೈಲ್ ಕೇಸ್ ಬಿಹಾರದಿಂದ UPವರೆಗೆ CID ಚೇಸ್… ಕೊನೆಗೂ ಸಿಕ್ಕಿದ ಸುಪಾರಿ ಕಿಲ್ಲರ್ಸ್!ಸಿನಿಮಾ ಸ್ಟೈಲ್ ಮರ್ಡರ್ ಮಿಸ್ಟರಿ: ಹೈಟೆಕ್ ಪ್ಲಾನ್ ಮಾಡಿದ ಹಂತಕರು… 
MRPL ವಿರುದ್ಧ ಜನಹೋರಾಟದ ಎಚ್ಚರಿಕೆ – ಮೇ 1ರಿಂದ ಅನಿರ್ದಿಷ್ಟ ಧರಣಿಗೆ ಸಮಿತಿ ಸಜ್ಜು..
ಧುರಂಧರ್ 2 ಕ್ರೇಜ್ ಓವರ್‌ಫ್ಲೋ ಕಲೆಕ್ಷನ್‌ನಲ್ಲಿಕರ್ನಾಟಕವೇ ಟಾಪ್… ದಕ್ಷಿಣ ಭಾರತದಲ್ಲಿ 300 ಕೋಟಿ ಕ್ಲಬ್!
ಅಕ್ರಮವಾಗಿ ಲಕ್ಷಾಂತರ ಮೌಲ್ಯದ ಎತ್ತುಗಳನ್ನು ವಧೆಗೆ….!
ಕಪ್ಪೆ ಚಿಪ್ಪು ದುರಂತಕ್ಕೆ ಮತ್ತೆರಡು ಜೀವ ಬಲಿ, ಬಲಿಯ ಸಂಖ್ಯೆ ಏರುವ ಸಾಧ್ಯತೆ