📍 Karavali Maruta
  • LOGIN
  • ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

    ಉಪಚುನಾವಣೆ ಮುಗಿಯುತಿದ್ದಂತೆಯೇ, ವಿದ್ಯುತ್ ದರ ಏರಿಸುತ್ತಿರುವ ರಾಜ್ಯ ಸರ್ಕಾರ

    ಕರ್ನಾಟಕದ ಜನರಿಗೆ ಒಂದು ಕಡೆಯಿಂದ ಬಿಸಿಲಿನ ತಾಪದ  ನೋವಾದರೆ ಇನ್ನೊಂದು ಕಡೆಯಿಂದ ಅಗತ್ಯ ವಸ್ತುಗಳ ಬೆಲೆ ಗಗನಕ್ಕೇರುತ್ತಿರೋ ನೋವು. ಸಾಲದೂ ಎಂಬಂತೆ, ವಿದ್ಯುತ್ ದರ ಏರಿಕೆಯ ಬಿಸಿ ತಟ್ಟುತ್ತಿದೆ.

    2024 ಹಾಗೂ 25ರ ಆರ್ಥಿಕ ವರ್ಷದಲ್ಲಿ ಕೆ ಇ ಆರ್ ಸಿ ವಾರ್ಷಿಕ ಲಾಭವಾಗಿ 34.0 84 ಕೋಟಿ  ಆದಾಯದ ನಿರೀಕ್ಷೆ ಮಾಡಿತ್ತು. ಆ ನಿರೀಕ್ಷೆಗೆ ತಕ್ಕಂತೆ ಆದಾಯವಾಗಿಲ್ಲವಂತೆ. ಕೇವಲ 32.019 ಕೋಟಿ ಆದಾಯವನ್ನಷ್ಟೇ ಗಳಿಸಲು ಸಾಧ್ಯವಾಯಿತಂತೆ. 2.068 ಕೋಟಿ ಆದಾಯದ ಕೊರತೆ ಉಂಟಾಗಿದ್ದು, ಅದನ್ನು ಸರಿದೂಗಿಸಲು ಗ್ರಾಹಕರಿಗೆ ಅದರ ಹೊರೆ ಹೊರಿಸಲು ಪ್ಲಾನ್ ರೂಪಿಸಿದೆ ವಿದ್ಯುತ್ ಕಂಪನಿಗಳು.

    ಹೌದು ಕೆ ಇ ಆರ್ ಸಿ ಗೆ ಎಸ್ಕಾಂ ಸಂಸ್ಥೆಗಳು ಈಗಾಗಲೇ ವಿದ್ಯುತ್ ದರದ ಹೆಚ್ಚಳಕ್ಕೆ ಮನವಿ ಮಾಡಿದ್ದು, ಆ ಮನವಿಗೆ ಗ್ರೀನ್ ಸಿಗ್ನಲ್ ನೀಡಲಾಗಿದೆ ಅನ್ನೋದು ಈಗ ಗೌಪ್ಯವಾಗಿಲ್ಲದ ವಿಚಾರವಾಗಿದೆ. 

    ಒಂದು ಮೂಲದ ಪ್ರಕಾರ ಇದು ಒಂದು ತಿಂಗಳ ಮೊದಲೇ ವಿದ್ಯುತ್ ದರ ಹೆಚ್ಚಳವಾಗಬೇಕಾಗಿದ್ದ ವಿಷಯವಾಗಿತ್ತಂತೆ. ದಾವಣಗೆರೆ ಹಾಗೂ ಬಾಗಲಕೋಟೆ ಉಪ ಚುನಾವಣೆಯವರೆಗೆ ದರ ಹೆಚ್ಚಳವಾಗದಂತೆ ನೋಡಿಕೊಳ್ಳುವ ಕೆಲಸವನ್ನು ಸಿದ್ದರಾಮಯ್ಯನವರ ಸರ್ಕಾರ ಮಾಡಿದೆ. ಈಗ ಚುನಾವಣೆ ಮುಗಿದಿದೆ. ಇನ್ನೇನು ಜನರ ಅವಶ್ಯಕತೆ ಸಧ್ಯಕ್ಕಿಲ್ಲ ಎಂಬ ತೀರ್ಮಾನಕ್ಕೆ ಸರ್ಕಾರ ಬಂದಂತಿದೆ. ಅದಿಲ್ಲಾಂದ್ರೆ, ಚುನಾವಣೆಯ ಹೊಸ್ತಿಲಿನಲ್ಲಿ ಯಾವುದೇ ಬೆಲೆ ಏರಿಕೆಯ ಕಾರ್ಯ ಮಾಡದವರು, ಚುನಾವಣೆಯ ನಂತರ ಬೆಲೆ ಏರಿಸುವುದು ಎಷ್ಟು ಸರಿ? 

    ಅದೇನೇ ಇರಲಿ, ಒಂದು ಕಡೆಯಲ್ಲಿ ಬಿಸಿಲಿನ ತಾಪ ಹೆಚ್ಚುತ್ತಿದೆ. ವಿದ್ಯುತ್ ಬಳಕೆ ಅನಿವಾರ್ಯವೂ ಹೌದು. ಅಂತರಾಷ್ಟ್ರೀಯ ಮಟ್ಟದಲ್ಲಿನ ಅನೇಕ ಘಟನೆಗಳಿಂದಾಗಿ ಕಚ್ಚಾ ತೈಲದಲ್ಲೂ ಬೆಲೆ ಗಗನಕ್ಕೇರುವ ಸಾಧ್ಯತೆ ಸ್ಪಷ್ಟವಾಗಿರುವ ಕಾರಣ, ಅಗತ್ಯ ವಸ್ತುಗಳ ಎಲ್ಲಾ ಬೆಲೆಯ ಮೇಲೂ, ಇದರ ಪರಿಣಾಮ ಉಂಟಾಗುವದಲ್ಲಿ ಎರಡು ಮಾತೇ ಇಲ್ಲ. ಹೀಗಿರುವಾಗ ವಿದ್ಯುತ್ ಬೆಲೆಯನ್ನೂ ಸಹ ಇದೇ ಸಂದರ್ಭದಲ್ಲಿ ಏರಿಸುವುದು ಎಷ್ಟರ ಮಟ್ಟಿಗೆ ಸರಿ ಎಂಬ ಪ್ರಶ್ನೆ ಏಳುತ್ತಿದೆ. ಸರ್ಕಾರವು ಯಾವುದೇ ಪಕ್ಷದ್ದಿರಲಿ, ಸರ್ಕಾರ ಅಂದ ಮೇಲೆ ಜನಸಾಮಾನ್ಯರ ನೋವು ನಲಿವು ಕಷ್ಟ ಕಾರ್ಪಣ್ಯಗಳ ಬಗ್ಗೆ ಅರಿವನ್ನು ಹೊಂದಿರಬೇಕಾಗುತ್ತದೆ. ಜನರ ಸದ್ಯದ ಪರಿಸ್ಥಿತಿಯ ಬಗ್ಗೆ ಅರಿವಿಲ್ಲದೆ, ತಮಗೆ ಬೇಕಾದ ಹಾಗೆ ಕ್ರಮ ಕೈಗೊಳ್ಳುತ್ತಾ ಹೋದರೆ ಅಂತಹ ಸರ್ಕಾರದ ಬಗ್ಗೆ ಆಡಳಿತದ ಬಗ್ಗೆ ಜನಸಾಮಾನ್ಯರಲ್ಲಿ ಅಸಮಾಧಾನ ಎದ್ದೇಳದೆ ಇರಲು ಸಾಧ್ಯನಾ? 

    COMMENTS

    Login with Gmail to comment

    ಇನ್ನಷ್ಟು ಸುದ್ದಿ

    ಜೀವನ್ಮರಣ ಹೋರಾಟದಲ್ಲೂ ಗೆಳೆಯರ ಬದುಕಿಸಿದ 14ರ ಬಾಲಕನ ರೋಚಕ  ಸ್ಟೋರಿ 
    ಅರೆ ವಾ..! ಕರ್ನಾಟಕದ ಜನರಿಗೆ ಫ್ಯಾನ್ಸಿ ನಂಬರ್‌ಗಳೇ ಫೇವರಿಟ್…RTOಗೆ ₹118 ಕೋಟಿ ಆದಾಯ!
    ಲಿವ್-ಇನ್ ಸಂಬಂಧಗಳಲ್ಲಿ ಕಾನೂನು ಮಿತಿ ಎಲ್ಲಿದೆ?-ಸುಪ್ರೀಂ ಕೋರ್ಟ್‌ನ ಮಹತ್ವದ ಪ್ರಶ್ನೆ
    ಇನ್ಮುಂದೆ ಗೂಗಲ್‌ನಲ್ಲಿ ನಿಮ್ಮ ಹಳೆಯ ಕೋರ್ಟ್ ಕೇಸ್‌ಗಳ ವಿವರಗಳನ್ನುಮರೆಮಾಡಬಹುದು-ದೆಹಲಿ ಹೈಕೋರ್ಟ್ ಗೈಡ್‌ಲೈನ್ಸ್ ರಿಲೀಸ್! 
    ಕರ್ನಾಟಕ ಪ್ರವಾಸೋದ್ಯಮದ ರಾಯಭಾರಿಯಾಗಿ ರಿಷಬ್ ಶೆಟ್ಟಿ…
    ಬ್ರಹ್ಮಾವರ ಅಪಾರ್ಟ್‌ಮೆಂಟ್ ರೂಮಿನಲ್ಲಿ ಯುವತಿಯ ನಿಗೂಢ ಸಾವು
    ಯಕ್ಷಗಾನದಲ್ಲಿ ಶಿಳ್ಳೆ ಹಾಕ್ಲಿಕ್ಕೆ ಪರ್ಮಿಶನ್ ಬೇಕಾ..…!?
    ಪಾಕಿಸ್ತಾನದಿಂದ ನೀರಿನ ವಿಚಾರದಲ್ಲಿ ಕಠಿಣ ಎಚ್ಚರಿಕೆ; ನೀರಿಗಾಗಿ ಯುದ್ದಕ್ಕೂ ಸಿದ್ದವೆಂದ ಪಾಕ್ ….!
    ಮಣಿಪಾಲ ಜೆಇಇ ಮೇನ್ಸ್ ಪರೀಕ್ಷಾ ಕೇಂದ್ರದಲ್ಲಿ ಅಕ್ರಮ ಪ್ರಯತ್ನ….
    ಕಾರಿಗೆ ಮಹಿಳೆ ಡಿಕ್ಕಿ..ಗುಳಿಗಜ್ಜನೆ ಕಾಪಾಡಿದ್ದ..! ಎದೆ ಜಲ್ಲೆನಿಸುವ ದೃಶ್ಯ
    ವಿಶ್ವದ ಅತ್ಯುತ್ತಮ ಶಾಲೆಗಳ ಪಟ್ಟಿಯಲ್ಲಿ ಭಾರತದ 7 ಶಾಲೆಗಳು …!ವಿಶ್ವದ ಗಮನ ಸೆಳೆದ ಸಾಧನೆ ಅಂಥದ್ದೇನಿದೆ!?
    ಖಾಸಗಿ ಆಸ್ಪತ್ರೆಯ ಜೊತೆಗಿನ ಒಪ್ಪಂದ ರದ್ದುಪಡಿಸಲು ಆಗ್ರಹಿಸಿ ಪ್ರತಿಭಟನೆ
    ಗಂಡನ ಮನೆಯಿಂದ ಯುವತಿಯನ್ನು ಎಳೆದೊಯ್ದರು
    ಕೇವಲ ₹5 ಕ್ಕೆ ಸಿಗಲಿದೆ ಬಿಸಿಬಿಸಿ ಮೀನು-ಊಟ! ಮಹಿಳೆಯರ ಖಾತೆಗೆ ಪ್ರತಿ ತಿಂಗಳು ₹3,000 ಫಿಕ್ಸ್! ಎಲ್ಲಿ ಯಾರು ಕೊಡ್ತಾರೆ …
    ಲಾಲ್‌ಬಾಗ್ ಸಿಗ್ನಲ್ ಬಳಿ ಚಾಕು ಇರಿತದ ಘಟನೆ…!
    ಪ್ರಜ್ಞಾನಂದನ ದಿಗ್ವಿಜಯ…ಚೆಸ್ ಚಕ್ರವ್ಯೂಹದಲ್ಲಿ ದಿಗ್ಗಜರನ್ನೆಲ್ಲಾ ಮಣಿಸಿ ಸಿಂಹಾಸನಕ್ಕೇರಿದ ಭಾರತೀಯ ಬಾಲಪ್ರತಿಭೆ! 
    ”ಮೋದಿ ಭರವಸೆ ಪೊಳ್ಳು” : ನೀಟ್ ಪತ್ರಿಕೆ ಸೋರಿಕೆ ಪ್ರಕರಣದ ಬಗ್ಗೆ ಕೇಜ್ರಿವಾಲ್ ವಾಗ್ದಾಳಿ
    ಉಡುಪಿಯಲ್ಲಿ ಟ್ರೇಡಿಂಗ್ ಹೆಸರಲ್ಲಿ ಲಕ್ಷಗಟ್ಟಲೆ ಧೋಕಾ….
    ಎಷ್ಟೇ ಚಾಣಾಕ್ಷತನ ತೋರಿದರೂ, ಡಿಜಿಟಲ್ ಕಣ್ಣುಗಳಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ.” AI ಸಣ್ಣ ಸುಳಿವು’ → ‘ನಿಖರ ಪತ್ತೆ’ ಜನರ ಭದ್ರತೆಗಾಗಿ ತಂತ್ರಜ್ಞಾನವೇ ಶಕ್ತಿಯುತ ಆಯುಧ ..!
    ಗೃಹ ಸಚಿವರಾದ ಜಿ ಪರಮೇಶ್ವರ್ ರವರ ಒಡೆತನದ ಸಂಸ್ಥೆಯಲ್ಲಿ ನಡೆದಿದೆ ಎಂಬ ವಿಡಿಯೋ ವೈರಲ್….!
    ಕುಂದಾಪುರದಲ್ಲಿ ಎರಡು ಮಕ್ಕಳ ತಾಯಿ ನಾಪತ್ತೆ. ಸ್ನೇಹಿತರ ಜೊತೆಯಲ್ಲಿ ಹೋಗಿರುವ ಶಂಕೆ
    ಕನಕಪುರ ಬಂಡೆ ಬಿಜೆಪಿಗೆ ಎಂಬ ಬೋಗಸ್ ಸುದ್ದಿ
    ಕಿಡ್ನಿ ಕಾಯಿಲೆಯ ಬಗ್ಗೆ ಎಚ್ಚರಿಕೆ ಅಗತ್ಯ- ಡಾಕ್ಟರ್ ಅಶೋಕ್ ಭಟ್
    ಬಂಗಾಳ ರಾಜಕೀಯದಲ್ಲಿ ಭಾರಿ ಟ್ವಿಸ್ಟ್ ಮೇಲೆ ಟ್ವಿಸ್ಟ್..! ಸುವೇಂದು ಪ್ರಮಾಣವಚನಕ್ಕೂ ಬ್ರೇಕ್ ಬೀಳುತ್ತಾ?ಸುಪ್ರೀಂ ಕೋರ್ಟ್ ಎಂಟ್ರಿ ಆಗುತ್ತಾ?
    ಶಂಕರಾಚಾರ್ಯರ ಹೊಸ ಯೋಜನೆ ದೇಶವನ್ನೇ ಚರ್ಚೆಗೆ ತಳ್ಳಿದ ಕಾರಣ ಏನು?Go-LXಒಂದು ಕ್ಲಿಕ್‌ನಲ್ಲಿ ಹಸು ಮಾರಾಟ…
    ಸ್ಟರ್ಲಿಂಗ್ ವಸತಿ ಶಾಲೆಯ ಶಿಸ್ತಿನ ಹೆಸರಲ್ಲಿ 12 ವರ್ಷದ ಮುಗ್ಧನ ಜೀವ ಕಸಿದ ಕ್ರೌರ್ಯ!ಅನುಮಾನಾಸ್ಪದ ಸಾವಿನ ಸುತ್ತ ಹರಡಿದ ಆಘಾತಕಾರಿ ಸತ್ಯ…ಇಲ್ಲಿದೆ
    ಮಂಗಳೂರು ಕುಕ್ಕರ್ ಬಾಂಬ್ ಪ್ರಕರಣಕ್ಕೆ ಅಂತಿಮ ತೀರ್ಪು – ಶಾರೀಕ್ ಗೆ 10 ವರ್ಷ ಜೈಲು..
    ಮೂಡಬಿದಿರೆ ಇನ್‌ಸ್ಪೆಕ್ಟರ್ ಪ್ರಕರಣಕ್ಕೆ ಟ್ವಿಸ್ಟ್: ಆರೋಪ ಮಾಡಿದ ಮಹಿಳೆಯ ವಿರುದ್ಧವೇ ಸಹೋದರಿಯ ಬಾಂಬ್!
    ಮಂಗಳೂರು ಬೆಂಗಳೂರು ಮಧ್ಯೆ ಇನ್ನು ತಡರಾತ್ರಿಯೂ ವಿಮಾನ ಯಾನ
    ಬಾಲಕಾರ್ಮಿಕ ಪತ್ತೆ : ಮಾಲೀಕನಿಗೆ ಜೈಲು, ದಂಡ