📍 Karavali Maruta
LIVE | CONTACT
ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

ಉಪಚುನಾವಣೆ ಮುಗಿಯುತಿದ್ದಂತೆಯೇ, ವಿದ್ಯುತ್ ದರ ಏರಿಸುತ್ತಿರುವ ರಾಜ್ಯ ಸರ್ಕಾರ

ಕರ್ನಾಟಕದ ಜನರಿಗೆ ಒಂದು ಕಡೆಯಿಂದ ಬಿಸಿಲಿನ ತಾಪದ  ನೋವಾದರೆ ಇನ್ನೊಂದು ಕಡೆಯಿಂದ ಅಗತ್ಯ ವಸ್ತುಗಳ ಬೆಲೆ ಗಗನಕ್ಕೇರುತ್ತಿರೋ ನೋವು. ಸಾಲದೂ ಎಂಬಂತೆ, ವಿದ್ಯುತ್ ದರ ಏರಿಕೆಯ ಬಿಸಿ ತಟ್ಟುತ್ತಿದೆ.

2024 ಹಾಗೂ 25ರ ಆರ್ಥಿಕ ವರ್ಷದಲ್ಲಿ ಕೆ ಇ ಆರ್ ಸಿ ವಾರ್ಷಿಕ ಲಾಭವಾಗಿ 34.0 84 ಕೋಟಿ  ಆದಾಯದ ನಿರೀಕ್ಷೆ ಮಾಡಿತ್ತು. ಆ ನಿರೀಕ್ಷೆಗೆ ತಕ್ಕಂತೆ ಆದಾಯವಾಗಿಲ್ಲವಂತೆ. ಕೇವಲ 32.019 ಕೋಟಿ ಆದಾಯವನ್ನಷ್ಟೇ ಗಳಿಸಲು ಸಾಧ್ಯವಾಯಿತಂತೆ. 2.068 ಕೋಟಿ ಆದಾಯದ ಕೊರತೆ ಉಂಟಾಗಿದ್ದು, ಅದನ್ನು ಸರಿದೂಗಿಸಲು ಗ್ರಾಹಕರಿಗೆ ಅದರ ಹೊರೆ ಹೊರಿಸಲು ಪ್ಲಾನ್ ರೂಪಿಸಿದೆ ವಿದ್ಯುತ್ ಕಂಪನಿಗಳು.

ಹೌದು ಕೆ ಇ ಆರ್ ಸಿ ಗೆ ಎಸ್ಕಾಂ ಸಂಸ್ಥೆಗಳು ಈಗಾಗಲೇ ವಿದ್ಯುತ್ ದರದ ಹೆಚ್ಚಳಕ್ಕೆ ಮನವಿ ಮಾಡಿದ್ದು, ಆ ಮನವಿಗೆ ಗ್ರೀನ್ ಸಿಗ್ನಲ್ ನೀಡಲಾಗಿದೆ ಅನ್ನೋದು ಈಗ ಗೌಪ್ಯವಾಗಿಲ್ಲದ ವಿಚಾರವಾಗಿದೆ. 

ಒಂದು ಮೂಲದ ಪ್ರಕಾರ ಇದು ಒಂದು ತಿಂಗಳ ಮೊದಲೇ ವಿದ್ಯುತ್ ದರ ಹೆಚ್ಚಳವಾಗಬೇಕಾಗಿದ್ದ ವಿಷಯವಾಗಿತ್ತಂತೆ. ದಾವಣಗೆರೆ ಹಾಗೂ ಬಾಗಲಕೋಟೆ ಉಪ ಚುನಾವಣೆಯವರೆಗೆ ದರ ಹೆಚ್ಚಳವಾಗದಂತೆ ನೋಡಿಕೊಳ್ಳುವ ಕೆಲಸವನ್ನು ಸಿದ್ದರಾಮಯ್ಯನವರ ಸರ್ಕಾರ ಮಾಡಿದೆ. ಈಗ ಚುನಾವಣೆ ಮುಗಿದಿದೆ. ಇನ್ನೇನು ಜನರ ಅವಶ್ಯಕತೆ ಸಧ್ಯಕ್ಕಿಲ್ಲ ಎಂಬ ತೀರ್ಮಾನಕ್ಕೆ ಸರ್ಕಾರ ಬಂದಂತಿದೆ. ಅದಿಲ್ಲಾಂದ್ರೆ, ಚುನಾವಣೆಯ ಹೊಸ್ತಿಲಿನಲ್ಲಿ ಯಾವುದೇ ಬೆಲೆ ಏರಿಕೆಯ ಕಾರ್ಯ ಮಾಡದವರು, ಚುನಾವಣೆಯ ನಂತರ ಬೆಲೆ ಏರಿಸುವುದು ಎಷ್ಟು ಸರಿ? 

ಅದೇನೇ ಇರಲಿ, ಒಂದು ಕಡೆಯಲ್ಲಿ ಬಿಸಿಲಿನ ತಾಪ ಹೆಚ್ಚುತ್ತಿದೆ. ವಿದ್ಯುತ್ ಬಳಕೆ ಅನಿವಾರ್ಯವೂ ಹೌದು. ಅಂತರಾಷ್ಟ್ರೀಯ ಮಟ್ಟದಲ್ಲಿನ ಅನೇಕ ಘಟನೆಗಳಿಂದಾಗಿ ಕಚ್ಚಾ ತೈಲದಲ್ಲೂ ಬೆಲೆ ಗಗನಕ್ಕೇರುವ ಸಾಧ್ಯತೆ ಸ್ಪಷ್ಟವಾಗಿರುವ ಕಾರಣ, ಅಗತ್ಯ ವಸ್ತುಗಳ ಎಲ್ಲಾ ಬೆಲೆಯ ಮೇಲೂ, ಇದರ ಪರಿಣಾಮ ಉಂಟಾಗುವದಲ್ಲಿ ಎರಡು ಮಾತೇ ಇಲ್ಲ. ಹೀಗಿರುವಾಗ ವಿದ್ಯುತ್ ಬೆಲೆಯನ್ನೂ ಸಹ ಇದೇ ಸಂದರ್ಭದಲ್ಲಿ ಏರಿಸುವುದು ಎಷ್ಟರ ಮಟ್ಟಿಗೆ ಸರಿ ಎಂಬ ಪ್ರಶ್ನೆ ಏಳುತ್ತಿದೆ. ಸರ್ಕಾರವು ಯಾವುದೇ ಪಕ್ಷದ್ದಿರಲಿ, ಸರ್ಕಾರ ಅಂದ ಮೇಲೆ ಜನಸಾಮಾನ್ಯರ ನೋವು ನಲಿವು ಕಷ್ಟ ಕಾರ್ಪಣ್ಯಗಳ ಬಗ್ಗೆ ಅರಿವನ್ನು ಹೊಂದಿರಬೇಕಾಗುತ್ತದೆ. ಜನರ ಸದ್ಯದ ಪರಿಸ್ಥಿತಿಯ ಬಗ್ಗೆ ಅರಿವಿಲ್ಲದೆ, ತಮಗೆ ಬೇಕಾದ ಹಾಗೆ ಕ್ರಮ ಕೈಗೊಳ್ಳುತ್ತಾ ಹೋದರೆ ಅಂತಹ ಸರ್ಕಾರದ ಬಗ್ಗೆ ಆಡಳಿತದ ಬಗ್ಗೆ ಜನಸಾಮಾನ್ಯರಲ್ಲಿ ಅಸಮಾಧಾನ ಎದ್ದೇಳದೆ ಇರಲು ಸಾಧ್ಯನಾ? 

COMMENTS

Login with Gmail to comment

ಇನ್ನಷ್ಟು ಸುದ್ದಿ

ರಾಜಕೀಯದಲ್ಲಿ ಅನುಭವ ಎಷ್ಟು ಮುಖ್ಯ?…  ತಮಿಳುನಾಡು ರಾಜಕಾರಣ ತೋರಿಸುತ್ತಿದೆ ನೋಡಿ
ಮಹಿಳಾ ಟಿ20 ವಿಶ್ವಕಪ್‌ಗೂ ಮುನ್ನ ಭಾರತ-ಪಾಕ್ ಹೈಪ್ ನಡುವೆ ಮಂಧಾನಾ ಮಾತು ವೈರಲ್…
ಡಿಜಿಟಲ್ ದಿಗ್ಗಜರಿಗೆ ₹2 ಕೋಟಿ ಲೀಗಲ್ ನೋಟಿಸ್ ಶಾಕ್!ಯೂಟ್ಯೂಬ್ ಸ್ಟಾರ್ vs ಟಿವಿ ಸ್ಟಾರ್ ನಡುವಿನ ಕಾನೂನು ಸಮರ!
ಸುಳ್ಳು ಸ್ಟೇಟ್ಮೆಂಟ್ ನೀಡಿದ ಎಚ್ ಪಿ ಸಿ ಎಲ್
ಬಂಗಾಳದಲ್ಲಿ ಬಿಜೆಪಿಯ ಯುದ್ಧೋನ್ಮಾದ, ದೀದಿಯ ರಚ್ಚೆ…
ಹೈ ಪ್ರೋಫೈಲ್ ಕೇಸ್ ಬಿಹಾರದಿಂದ UPವರೆಗೆ CID ಚೇಸ್… ಕೊನೆಗೂ ಸಿಕ್ಕಿದ ಸುಪಾರಿ ಕಿಲ್ಲರ್ಸ್!ಸಿನಿಮಾ ಸ್ಟೈಲ್ ಮರ್ಡರ್ ಮಿಸ್ಟರಿ: ಹೈಟೆಕ್ ಪ್ಲಾನ್ ಮಾಡಿದ ಹಂತಕರು… 
ಟೂರಿಸಂ ಡೆವಲಪ್‌ಮೆಂಟ್‌ಗೆ ಅಧಿಕಾರಿಗಳೇ ಮಾರಕ
NEET ಗೊಂದಲ, ಮರುಪರೀಕ್ಷೆ, ಮೌಲ್ಯಮಾಪನ ದೋಷಗಳು ಮತ್ತು ವಿದ್ಯಾರ್ಥಿ ಜೀವನದ ನೋವು..
🔴 ಯುದ್ಧದ ಹೊತ್ತಿನಲ್ಲಿ ಮಾನವೀಯ ರಾಜತಾಂತ್ರಿಕತೆ: ಇರಾನ್‌ಗೆ ಭಾರತದಿಂದ ಮೊದಲ ವೈದ್ಯಕೀಯ ನೆರವು:
50 ಸಾವಿರ ಸಾಲಕ್ಕೆ ಸವಣೂರು ಪೇಟೆಯಲ್ಲಿ ರಕ್ತಸಿಕ್ತ ಘರ್ಷಣೆ ..
ದಿವಾ ಉತ್ಕರ್ಷ ಬೆಂಗಳೂರಿನ ಕೇವಲ 17 ವರ್ಷದ ಹೆಣ್ಣುಮಗಳಕಾರ್ಯಕ್ಕೆ ಪ್ರಪಂಚವೇ ಫಿದಾ…ಫೋರ್ಬ್ಸ್ ಟಾಪ್ ಪಟ್ಟಿಯಲ್ಲಿ ಯುವಸ್ಪೂರ್ತಿ ಹೆಸರು ಯಾಕೆ ಬಂತು ..!?
“ಧುರಂಧರ್” ನಟ ರಣವೀರ್ ಸಿಂಗ್‌ ವಿರುದ್ಧ ಇಡೀ ಬಾಲಿವುಡ್ ಒಕ್ಕೂಟವೇ ತಿರುಗಿಬಿದ್ದಿದ್ದೇಕೆ? shocking ₹45 ಕೋಟಿ ವಿವಾದದ ಅಸಲಿ ಕಥೆ ಇಲ್ಲಿದೆ!
War update-ಕಂಪ್ಲೀಟ್ ಡೀಟೇಲ್ಸ್ …ಮುಂದೇನು? ceasefire ಮುಂದುವರಿಯುತ್ತದೆಯಾ?ಶಾಂತಿ ಅಥವಾ ಸಂಘರ್ಷ? ಮುಂದಿನ ಕೆಲ ದಿನಗಳು ವಿಶ್ವದ ಭವಿಷ್ಯ ತೀರ್ಮಾನಿಸುತ್ತದೆ.
ಖಾಸಗಿ ಬಸ್ಸಿನಲ್ಲಿ ಮಹಿಳೆಯ ಮಂಗಳಸೂತ್ರ ಏಗರಿಸಿದ್ರಾ?
ನಾಲ್ಕು ದಶಕಗಳ ಕಾಲ ರೋಗಿಗಳಿಗೆ ಜೀವ ನೀಡಿದ ವೈದ್ಯನೇ ಇಂದು ಯಾಕೆ ತನ್ನ ಜೀವ ತಾನೇ ತೆಗೆದುಕೊಂಡರು …
ಸ್ಮಾರ್ಟ್ ಲಾಕ್ ಇದ್ದ ಸುರಕ್ಷಿತ ಮನೆಯಲ್ಲೇ ಯುವತಿಯ ರೇಪ್ ಅಂಡ್ ಮರ್ಡರ್…!ನಗರವನ್ನು ಬೆಚ್ಚಿಬೀಳಿಸಿದ ಘಟನೆ”
ಘೋರ ಭಾನುವಾರ, ಒಂದೇ ಕುಟುಂಬದ ಎಂಟು ಮಹಿಳೆಯರ ದುರ್ಮರಣ
ಪ್ರಧಾನಿ ಮೋದಿ ನೆದರ್ಲ್ಯಾಂಡ್ ಭೇಟಿ ಭಾರತ ಸಹಕಾರದ ಸೇತುವೆ ಕಟ್ಟುವ ದ್ವಿಪಕ್ಷೀಯ ಸಂಬಂಧಗಳ ವಿಸ್ತರಣೆ…
ಮೊಹಾಲಿ ಬೆಚ್ಚಿಬೀಳಿಸಿದ ಕಚೇರಿ ಕೊಲೆ: ಮಹಿಳೆ ಮೇಲೆ ಮಾರಣಾಂತಿಕ ದಾಳಿ, ದೇಶಾದ್ಯಂತ ಆಕ್ರೋಶ…
“ಕಾಂತರಾ” ಖ್ಯಾತಿಯ ಸಪ್ತಮಿ ಗೌಡ, ದುಮುಕಿದ್ದು  ಹೋರಾಟದ ಅಂಗಳಕ್ಕೆ
“ಯೋಗೇಶ್ ಗೌಡ ಪ್ರಕರಣದಲ್ಲಿ ಕಾನೂನು ಗರ್ಜನೆ!”ಕಾನೂನು ಕಾಯುವವರೇ ಬೂಟು ನೆಕ್ಕಿಕಾನೂನು ಮುರಿದಾಗ-7 ವರ್ಷಗಳ ಜೈಲು!ಕಾನೂನು ಇನ್ನೂ ಜೀವಂತ!”
ಬ್ಯಾಂಕಿಂಗ್ ಸೇವೆ ಸ್ಮಾರ್ಟ್‌ಫೋನ್ ನೇ ಬೇಕಂತಿಲ್ಲ .ಕೀಪ್ಯಾಡ್ ಫೋನ್ ಸಾಕು ಈಗ “ಸ್ಮಾರ್ಟ್” ಆಗಿದ್ದರೆ ಸಾಕು! 
ನಾಟಕ ಕಲಾವಿದೆ ಸೌಮ್ಯ ಶೆಟ್ಟಿ ಬಂಧನ
ಸಿಎಂ ಕುರ್ಚಿಯನ್ನು, ಡಿಕೆಗೆ ಮಗ್ಗಲ ಮುಳ್ಳನ್ನಾಗಿಸಲು ಸಕಲ ತಯಾರಿ
ದೆಹಲಿಯನ್ನು ನಡುಗಿಸಿದ ಸೈಕೋಪಾತ್ ಘಟನೆಯ ಕ್ರೂರ ಸತ್ಯ…. ಆನ್‌ಲೈನ್ ಬೆಟ್ಟಿಂಗ್ ಮತ್ತು ಆಟಗಳ ಅಡಿಕ್ಟ್ – ಸಾಲ …ಮನೋವೈಕಲ್ಯ ಲಕ್ಷಣ!
“ತಲೈವಾ”ಗೂ ಭಯವಾ? ಹೂವಿನ ಚೆಂಡು ಕಂಡು ವಿಜಯ್ ರನ್! ಒಂದು ಕ್ಷಣದ ಥ್ರಿಲ್ಲರ್!
ಮಂಗಳೂರಿನಲ್ಲಿ ಮುಂಜಾನೆ ನಡೆದ ರೌಡಿಶೀಟರ್ ಹತ್ಯೆ – ದುಷ್ಕರ್ಮಿಗಳ  ಜಾಡು ಬೆನ್ನಟ್ಟಿದ ಪೊಲೀಸ್‌ ಪಡೆ….ಮಹತ್ವದ ಸುಳಿವು…..!
ಇತಿಹಾಸ ಸೃಷ್ಟಿಸಿದ ಈಶಾಂಕ್ ಸಮುದ್ರವನ್ನೇ ಸವಾಲಾಗಿ ತೆಗೆದುಕೊಂಡ 7 ವರ್ಷದ ಹೀರೋ ..!
ಹಳೆಯ ಬಟ್ಟೆಗೂ ಹಣ ಸಿಗುತ್ತಾ?! ಬೆಂಗಳೂರಿನ ಈ ಸ್ಟಾರ್ಟ್‌ಅಪ್ ನಿಜಕ್ಕೂ ಶಾಕ್ ಕೊಡುತ್ತಿದೆ!
ಶೃಂಗೇರಿ ವಿಧಾನಸಭೆಯ ಮರುಕೌಂಟಿಂಗ್ ನಲ್ಲಿ ನಡೆದ ಲಪಡಾಗಳೇನು?