📍 Karavali Maruta
  • LOGIN
  • ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

    ಎನ್‌ಡಿಎ ಜೊತೆ ಎನ್‌ಸಿಪಿ ವಿಲೀನ ವದಂತಿ: ಪ್ರಧಾನಿ ಮೋದಿಯನ್ನು ಭೇಟಿಯಾದ ಶರದ್ ಪವಾರ್, ಸುಪ್ರಿಯಾ ಸುಳೆ

    ನವದೆಹಲಿ: ಎನ್‌ಸಿಪಿ ಎನ್‌ಡಿಎ ಜೊತೆ ವಿಲೀನವಾಗಲಿದೆ ಎಂಬ ಅಂತೆ ಕಂತೆಗಳು ಹರಿದಾಡುತ್ತಿರುವ ಹೊತ್ತಿನಲ್ಲೇ ಶರದ್ ಪವಾರ್ ಹಾಗೂ ಸುಪ್ರಿಯಾ ಸುಳೆ ಅವರು ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿಯಾಗಿದ್ದು, ಈ ಸುದ್ದಿಗೆ ಮತ್ತಷ್ಟು ಪುಷ್ಟಿ ಸಿಕ್ಕಂತಾಗಿದೆ.

    ಸಂಸತ್ತಿನಲ್ಲಿ ನೀಟ್ ಅಕ್ರಮ ಮತ್ತು ಇತರ ವಿಷಯಗಳ ಕುರಿತು ವಿರೋಧ ಪಕ್ಷಗಳು ಸರ್ಕಾರದ ವಿರುದ್ಧ ತೀವ್ರ ಪ್ರತಿಭಟನೆ ನಡೆಸುತ್ತಿರುವ ಬೆನ್ನಲ್ಲೇ, ದೆಹಲಿಯಲ್ಲಿ ಮಹತ್ವದ ರಾಜಕೀಯ ಬೆಳವಣಿಗೆಯೊಂದು ನಡೆದಿದೆ.

    ಸಮಾಲೋಚನೆ ನಡೆಸಿದ ನಾಯಕರು

    ಎನ್‌ಸಿಪಿ (ಶರದ್ ಪವಾರ್ ಬಣ) ಮುಖ್ಯಸ್ಥ ಶರದ್ ಪವಾರ್ ಹಾಗೂ ಅವರ ಪುತ್ರಿ ಸಂಸದೆ ಸುಪ್ರಿಯಾ ಸುಳೆ ಅವರು ಬುಧವಾರ ಸಂಸತ್ ಭವನದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಅವರ ಕಚೇರಿಯಲ್ಲಿ ಪ್ರಧಾನಿಯವರನ್ನು ಭೇಟಿಯಾಗಿ ಸಮಾಲೋಚನೆ ನಡೆಸಿದ್ದಾರೆ.

    ಸಭೆಯ ವೇಳೆ ಪ್ರಧಾನಿ ಮೋದಿ ಹಾಗೂ ಶರದ್ ಪವಾರ್ ಅತ್ಯಂತ ಆತ್ಮೀಯವಾಗಿ ನಗುಮುಖದಿಂದ ಮಾತುಕತೆ ನಡೆಸುತ್ತಿರುವ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ರಾಜಕೀಯ ವಲಯದಲ್ಲಿ ತೀವ್ರ ಕುತೂಹಲಕ್ಕೆ ಕಾರಣವಾಗಿದೆ.

    ಭೇಟಿಗೆ ಕಾರಣವೇನು?

    ಕ್ಷೇತ್ರ ಪುನರ್ವಿಂಗಡಣೆ ಮಸೂದೆ: ಸಂಸತ್ತಿನ ಮಳಿಗಾಲದ ಅಧಿವೇಶನದಲ್ಲಿ ‘ಕ್ಷೇತ್ರ ಪುನರ್ವಿಂಗಡಣೆಗೆ ಮಸೂದೆ’ಯನ್ನು ತರಲು ಯೋಜಿಸುತ್ತಿದ್ದು, ಇದನ್ನು ಅಂಗೀಕರಿಸಲು ಸಂಸತ್ತಿನಲ್ಲಿ 2/3 ಬಹುಮತದ ಅಗತ್ಯವಿದೆ. ಲೋಕಸಭೆಯಲ್ಲಿ ಶರದ್ ಪವಾರ್ ಬಣದ 8 ಸಂಸದರು ಅತ್ಯಂತ ನಿರ್ಣಾಯಕ ಪಾತ್ರ ವಹಿಸಲಿದ್ದಾರೆ.

    1. ಮಸೂದೆ ಬಗ್ಗೆ ಬೆಂಬಲ: ಶೇಕಡಾ 50 ರಷ್ಟು ಸಂಸತ್ ಕ್ಷೇತ್ರಗಳ ಸಂಖ್ಯೆಯನ್ನು ಹೆಚ್ಚಿಸುವ ಕುರಿತು ಸರ್ಕಾರ ಲಿಖಿತ ಭರವಸೆ ನೀಡಿದರೆ ಬೆಂಬಲ ನೀಡುವ ಸುಳಿವನ್ನು ಎನ್‌ಸಿಪಿ ನೀಡಿದೆ. “ನಿಮ್ಮ ನಿಲುವನ್ನು ಕಾಗದ ಮೇಲೆ ಸ್ಪಷ್ಟಪಡಿಸಿ, ನಂತರ ಚರ್ಚಿಸೋಣ” ಎಂದು ಸುಪ್ರಿಯಾ ಸುಳೆ ಇತ್ತೀಚೆಗೆ ಹೇಳಿಕೆ ನೀಡಿದ್ದರು. ಎನ್‌ಡಿಎ ವಿಲೀನ ವದಂತಿ: ಮಹಾರಾಷ್ಟ್ರ ರಾಜಕೀಯ ಮತ್ತು ಎನ್‌ಸಿಪಿ ಪುನರ್ ಏಕೀಕರಣದ ವದಂತಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಶರದ್ ಪವಾರ್ ಬಣದ ನಡುವೆ ಮತ್ತೆ ಒಂದಾಗುವ ಚರ್ಚೆಗಳು ಮಹಾರಾಷ್ಟ್ರದಲ್ಲಿ ತೀವ್ರವಾಗಿ ನಡೆಯುತ್ತಿವೆ. ಶರದ್ ಪವಾರ್ ಅವರ ಬಣ ಎನ್‌ಡಿಎ ಮೈತ್ರಿಕೂಟ ಸೇರಲಿದೆ ಎಂಬ ವದಂತಿಗಳೂ ಇವೆ.

    ಮಹಾರಾಷ್ಟ್ರ ರಾಜಕೀಯದಲ್ಲಿ ಸಂಚಲನ

    ಶರದ್ ಪವಾರ್ ಅಥವಾ ಅವರ ನಾಯಕರನ್ನು ವೈಯಕ್ತಿಕವಾಗಿ ಎನ್‌ಡಿಎ ಒಕ್ಕೂಟಕ್ಕೆ ಸೇರಿಸಿಕೊಳ್ಳಲು ಬಿಜೆಪಿಗೆ ಆಸಕ್ತಿಯಿಲ್ಲ. ಆದರೆ ಮಹಾರಾಷ್ಟ್ರದಲ್ಲಿ ಅಜಿತ್ ಪವಾರ್ ಮತ್ತು ಶರದ್ ಪವಾರ್ ಅವರ ಎರಡೂ ಎನ್‌ಸಿಪಿ ಬಣಗಳು ತಮ್ಮ ಭಿನ್ನಾಭಿಪ್ರಾಯ ಬಗೆಹರಿಸಿಕೊಂಡು ಸಂಪೂರ್ಣವಾಗಿ ಒಂದಾದರೆ ಮಾತ್ರ ಎನ್‌ಡಿಎ ಜೊತೆಗಿನ ನಿಕಟ ಮೈತ್ರಿ ಬಗ್ಗೆ ಪರಿಗಣಿಸಲಾಗುವುದು ಎನ್ನಲಾಗಿದೆ.

    ಸಂಸತ್ತಿನಲ್ಲಿ ವಿಪಕ್ಷಗಳು ಸರ್ಕಾರದ ವಿರುದ್ಧ ಸರಣಿ ಹೋರಾಟ ನಡೆಸುತ್ತಿರುವ ಮಧ್ಯೆಯೇ, ವಿಪಕ್ಷಗಳ ಪ್ರಮುಖ ರೂವಾರಿಯಾದ ಶರದ್ ಪವಾರ್ ಅವರು ಪ್ರಧಾನಿ ಮೋದಿಯವರನ್ನು ಭೇಟಿ ಮಾಡಿರುವುದು ಮುಂಬರುವ ದಿನಗಳಲ್ಲಿ ಭಾರಿ ರಾಜಕೀಯ ಬದಲಾವಣೆಯ ಮುನ್ಸೂಚನೆ ಎನ್ನಲಾಗಿದೆ.


    COMMENTS

    Login with Gmail to comment

    ಇನ್ನಷ್ಟು ಸುದ್ದಿ

    ಸಾಲದ ಹಣ ಕೇಳಿದ ವಿಚಾರಕ್ಕೆ ಚೂರಿಯಿಂದ ಕೊಲೆ ಯತ್ನ..
    ನೂರರ ಸಂಭ್ರಮದಲ್ಲಿ “ಜೈ” ತುಳು ಸಿನಿಮಾ
    ಮಸೀದಿ ಹುಂಡಿಗೂ ಲಗ್ಗೆ ಇಟ್ಟ ಕಳ್ಳರು….!
    ಎಸ್ ಪಿ ಅರುಣ್ ಕುಮಾರ್ ಗೆ ಮುಖ್ಯಮಂತ್ರಿ ಪದಕ
    ಉದ್ಯಮಿ ಸಿಜೆ ರಾಯ್ ಆತ್ಮಹತ್ಯೆ, ನಿರೀಕ್ಷಿತ ತನಿಖೆ
    ಹೆಡ್‌ಲೈಟ್ ಇಲ್ಲ… ಮೊಬೈಲ್ ಟಾರ್ಚ್‌ನಲ್ಲೇ ಓಡಿದ ಸರ್ಕಾರಿ ಬಸ್!
    ವಿಶ್ವಸಂಸ್ಥೆಗೆ ಜೀವ ಬಂತು ನೋಡಿ…
    50ಕ್ಕೂ ಹೆಚ್ಚು ಆಟೋ ಚಾಲಕರ ದಿನನಿತ್ಯದ ಆರೋಗ್ಯದ ಬದುಕಿಗೆ ಮುಳುವಾದ ದೇರಳಕಟ್ಟೆ ಜಂಕ್ಷನ್ ದುರ್ನಾತ! 
    “ಅಮ್ಮ”ನ ಕಾರ್ಯಕ್ರಮದಲ್ಲಿ  ಕೇಂದ್ರ ಸಚಿವರಿಂದ ರಾಜಕೀಯ ಭಾಷಣ
    ಮುಳುಗುತ್ತಿರುವ ಕಾಂಗ್ರೆಸ್ಸಿಗೆ ಇನ್ನೂ ಬುದ್ಧಿ ಬಂದಂತಿಲ್ಲ… ಡಿಜೆಪಿ ರಾಮಚಂದ್ರರಾವ್  ಅಮಾನತ್ ಆದೇಶ ಹಿಂಪಡೆದ  ಸರ್ಕಾರ
    ₹10,000ಕ್ಕೆ NEET-UG 2026 ಪ್ರಶ್ನೆಪತ್ರಿಕೆ? ದೇಶವೇ ಬೆಚ್ಚಿಬಿದ್ದ ಲೀಕ್ ಸ್ಕಾಂಡಲ್!ಟೆಲಿಗ್ರಾಂ ಸೀಕ್ರೆಟ್ ಚಾಟ್ ವೈರಲ್…22 ಲಕ್ಷ ವಿದ್ಯಾರ್ಥಿಗಳ ಕನಸಿಗೆ ದೊಡ್ಡ ಹೊಡೆತ — NEET 2026 ರದ್ದು!
    ಜನಗಣತಿ 2026–27 – Self Enumeration ಮುಗಿದು ಈಗ ಮನೆ ಮನೆ ಭೇಟಿ ಹಂತ ಆರಂಭ!ನಮ್ಮ ಮಾಹಿತಿ = ನಮ್ಮ ದೇಶದ ಬೆಳವಣಿಗೆ…
    🔴ಬ್ರೇಕಿಂಗ್ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ನಾಳೆ ಜುಲೈ 8 ರಜೆ ಘೋಷಣೆ!
    ಬಿಡದಿ ಟೌನ್‌ಶಿಪ್ ಯೋಜನೆ ಜಾರಿಗೆ ಸ್ಥಳೀಯ ರೈತರಿಂದಲೇ ಆಗ್ರಹ
    ತುಮಕೂರಿನಲ್ಲಿ 10 ಲಕ್ಷದ ವಜ್ರಾಭರಣ ಕದ್ದ ಈ ಮಹಾಚೋರನ ಕಥೆ ಕೇಳಿದರೆ ನಿಜಕ್ಕೂ ಶಾಕ್ ಆಗ್ತೀರಾ!”
    AI ಹವಾ-ಬೇಗನೆ ಫೈನಾನ್ಷಿಯಲ್ ಇಂಡಿಪೆಂಡೆಂಟ್ ಆಗೋ ಟ್ರೆಂಡ್- ಕೈಬಿಟ್ಟ  ಓದು!! ಇದು ಗಂಭೀರ ಸೂಚನೆ….
    ಕರ್ನಾಟಕದಲ್ಲೇ ಮೊದಲು-ಕಿಚ್ಚ ಸುದೀಪ್ ಕೈಯಿಂದ ಗ್ರಾಂಡ್ ಓಪನಿಂಗ್!₹130 ಕೋಟಿ ವೆಚ್ಚದ ವಿಶ್ವದರ್ಜೆಯ ‘MR-Linac’ ತಂತ್ರಜ್ಞಾನ ಹೈಟೆಕ್ ಕ್ಯಾನ್ಸರ್ ಆಸ್ಪತ್ರೆ!
    ಗುಜರಾತ್ ಪೊಲೀಸರಲ್ಲಿ ಆಗದ ಕೆಲಸ, ಒಬ್ಬ ಮಂತ್ರವಾದಿಯಿಂದ ಆಯ್ತು
    ಸರ್ಕಾರಿ ವೈದ್ಯರ ಅನರ್ದಿಷ್ಟಾವಧಿ ಮುಷ್ಕರ ರದ್ದು
    ಮುಂಬಯಿಯಲ್ಲಿ ಪಹಲ್ಗಾಮ್ ಮಾದರಿ ದಾಳಿ ಯತ್ನ: ಉಗ್ರ ಚಟುವಟಿಕೆ ಯತ್ನ ವಿಫಲ…!
    ಇಂದು ದಕ್ಷಿಣ ಕನ್ನಡ ಜಿಲ್ಲಾ ಮಹಿಳಾ ಕಾಂಗ್ರೆಸ್ ನಿಂದ ಪ್ರತಿಭಟನೆ
    ಗೋವಾದಲ್ಲಿ ಪ್ರವಾಸಿಗರ ಬೋಟ್ ಮುಳುಗಡೆ?!!??ವೈರಲ್ ವಿಡಿಯೋದ ಹಿಂದಿನ ಅಸಲಿ ಸತ್ಯ ಬಿಚ್ಚಿಟ್ಟ ಗೋವಾ ಪೊಲೀಸರು!
    ಗಂಡನಿಗೆ ಚಿನ್ನ ಕಳ್ಳತನದ ಪಿಎಚ್‌ಡಿ, ಹೆಂಡತಿಗೆ ಮಾರ್ಕೆಟಿಂಗ್ ಜಾಣ್ಮೆ…ಆಹಾ ಒಮ್ಮೆ ಓದಿ ಎಂಥಾ ಜೋಡಿ..
    ತೈಲ ಟ್ಯಾಂಕರ್ ಮೇಲೆ ಇರಾನ್ ಆತ್ಮಹತ್ಯಾ ದೋಣಿ ದಾಳಿ – ಭಾರತೀಯ ನಾವಿಕ ಸಾವು
    ತಿರುಪತಿಯಲ್ಲಿ ಒಂದಿಡೀ ಕುಟುಂಬವೇ ನಾಶ!
    ಬಾಲ್ಯದ ಗೆಳೆಯನ ಬಲೆಗೆ ಬಿದ್ದ ವಾಯುಸೇನೆ ಅಧಿಕಾರಿಯ ಪತ್ನಿ?! ಲೈಂಗಿಕ ಬ್ಲ್ಯಾಕ್‌ಮೇಲ್,’ಕಬೂಲ್ ಹೈ’ ಹೇಳುವಂತೆ ಒತ್ತಾಯ!
    ನಕಲಿ ಔಷಧ ದಂಧೆ: ಜೀವ ಉಳಿಸಬೇಕಾದ ಔಷಧವೇ ಹಣ ಮಾಡುವ ದಂಧೆಯಾಯಿತೇ?
    ಮತದಾರರೇ…ಕರ್ನಾಟಕ SIR ನಲ್ಲಿ 47 ಲಕ್ಷ ಹೆಸರುಗಳು ಡಿಲೀಟ್…..‌! 2002ರ ಪಟ್ಟಿ ವಿವರ ಇಲ್ಲದಿದ್ದರೆ ನೋಟಿಸ್? ಮುಂದೆ ಏನು ಮಾಡಬೇಕು?
    ಸಾಮಾಜಿಕ ಜಾಲತಾಣದಲ್ಲಿ ಕೋಮು ಪ್ರಚೋದನೆಯ ಪೋಸ್ಟ್ ಗಳನ್ನು ಹಾಕಿದ ಆರೋಪಿಯ ಬಂಧನ
    ಅಮೆರಿಕ–ಇರಾನ್ ಸಂಘರ್ಷಕ್ಕೆ ಮತ್ತೆ ಹೊತ್ತಿ ಉರಿದ ಮಧ್ಯಪ್ರಾಚ್ಯ! ಕದನ ವಿರಾಮ ಸಂಪೂರ್ಣ ವಿಫಲ..