📍 Karavali Maruta
LIVE | CONTACT
ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

ಎಲ್ಲರಿಗೂ ಯುಗಾದಿ ಹಬ್ಬ… ಆದರೆ ಈ ಗ್ರಾಮಗಳಲ್ಲಿ ಭಯ ಮೌನ…ಹಬ್ಬ ಇಲ್ಲ…!ಒಂದು ವಿಚಿತ್ರ ಕಥೆ!

ನಾಡಿನೆಲ್ಲೆಡೆ ಯುಗಾದಿ ಅಂದರೆ ಸಂಭ್ರಮ, ಹೊಸ ವರ್ಷಕ್ಕೆ ಹೊಸ ಆಶೆಗಳು, ಬೇವು-ಬೆಲ್ಲದ ಸವಿರುಚಿ, ಮನೆಮಂದಿಯ ಜೊತೆ ನಗು-ನಲಿವು. ಆದರೆ ಬಳ್ಳಾರಿ ಜಿಲ್ಲೆಯ ಕೆಲವು ಗ್ರಾಮಗಳಲ್ಲಿ ಈ ದಿನವೇ ಭಿನ್ನ. ಇಲ್ಲಿ ಯುಗಾದಿ ಬಂದರೂ ಹಬ್ಬದ ಚಿಲುಮೆ ಹರಿಯೋದಿಲ್ಲ… ಬದಲಾಗಿ ಮೌನ, ಭಯ, ಮತ್ತು ಒಂದು ವಿಚಿತ್ರ ನಂಬಿಕೆ.

📍 ಕೂಡ್ಲಿಗಿ ಮತ್ತು ಹಗರಿಬೊಮ್ಮನಹಳ್ಳಿ ತಾಲೂಕಿನ ಗಜಾಪುರ, ತಿಮ್ಮಲಾಪುರ, ಯಾಲ್ದಳ್ಳಿ, ಅಗ್ರಹಾರ ಸೇರಿದಂತೆ ಹತ್ತಾರು ಗ್ರಾಮಗಳಲ್ಲಿ ಯುಗಾದಿ ಹಬ್ಬವನ್ನೇ ಆಚರಿಸುವುದಿಲ್ಲ. ಏಕೆ ಗೊತ್ತಾ?

ಹಳೆಯವರ ಕಥೆಗಳು ಹೇಳುತ್ತವೆ —
ಒಮ್ಮೆ ಯುಗಾದಿ ಹಬ್ಬಕ್ಕೆ ಬೇವು ತರಲು ಹೋದವರು ಮನೆಗೆ ಮರಳಿ ಬಂದಿರಲಿಲ್ಲವಂತೆ! ಇನ್ನೂ ಕೆಲವರು ಹೇಳೋದು — ಹಬ್ಬ ಆಚರಣೆ ಮಾಡಿದ ವರ್ಷಗಳಲ್ಲಿ ಗ್ರಾಮದಲ್ಲಿ ಅವಘಡಗಳು ಸಂಭವಿಸಿದ್ದವಂತೆ. ಈ ಘಟನೆಗಳು ಕಾಲ ಕಳೆದರೂ ಕಥೆಗಳಾಗಿ ಉಳಿದು, ಇವತ್ತು ಮೂಢನಂಬಿಕೆಯಾಗಿವೆ.

😟 “ಯುಗಾದಿ ಆಚರಿಸಿದ್ರೆ ಕೇಡು ಆಗುತ್ತೆ… ಮನೆಗೆ ಅಪಶಕುನ ಬರುತ್ತೆ… ಕೆಲವೊಮ್ಮೆ ಜೀವ ಹಾನಿಯೂ ಆಗಬಹುದು” ಎಂಬ ಭಯ ಗ್ರಾಮಸ್ಥರ ಮನಸ್ಸಿನಲ್ಲಿ ಆಳವಾಗಿ ಬೇರು ಬಿಟ್ಟಿದೆ.

ಇದಕ್ಕೇನು ಫಲ?
👉 ಯುಗಾದಿ ದಿನ ಮಾತ್ರವಲ್ಲ, ಕೆಲವೆಡೆ ಎರಡು ದಿನಗಳ ಕಾಲ ಸ್ನಾನವೂ ಇಲ್ಲ, ಪೂಜೆಯೂ ಇಲ್ಲ
👉 ಹೊಸ ಬಟ್ಟೆ ಧರಿಸುವುದಿಲ್ಲ
👉 ಸಿಹಿ ತಿಂಡಿಗಳನ್ನೂ ತಿನ್ನುವುದಿಲ್ಲ
👉 ಹಬ್ಬದ ಹರ್ಷವೇ ಇಲ್ಲ

ನಾಯಕ, ಗಂಗಾಮಸ್ತ, ಉಪ್ಪಾರ ಸಮುದಾಯದ ಜನರಲ್ಲಿ ಈ ನಂಬಿಕೆ ಹೆಚ್ಚು ಕಂಡು ಬರುತ್ತದೆ. ಪೀಳಿಗೆಯಿಂದ ಪೀಳಿಗೆಗೆ ಬಂದ ಈ ಸಂಪ್ರದಾಯವನ್ನು ಇಂದಿಗೂ ಕಟ್ಟುನಿಟ್ಟಾಗಿ ಪಾಲಿಸಲಾಗುತ್ತಿದೆ.

ಆದರೆ… ಎಲ್ಲರೂ ಹೀಗೆ ಯೋಚಿಸುತ್ತಿಲ್ಲ.

🙏 ಸ್ಥಳೀಯ ದೇವಾಲಯದ ಅರ್ಚಕರು ಮತ್ತು ಪ್ರಜ್ಞಾವಂತರ ಅಭಿಪ್ರಾಯವೇ ಬೇರೆ —
“ಯುಗಾದಿ ಎಲ್ಲರಿಗೂ ಒಳಿತು ತರುವ ಹಬ್ಬ. ಭಯವನ್ನು ಬಿಟ್ಟು, ಹಬ್ಬವನ್ನು ಆಚರಿಸಬೇಕು” ಅಂತಾರೆ.
ಇಂದಿನ ಯುವಕರು, ಶಿಕ್ಷಕರು, ಸಾಮಾಜಿಕ ಸಂಘಟನೆಗಳು ಈ ಮೂಢನಂಬಿಕೆಗೆ ತೆರೆ ಎಳೆಯಲು ಪ್ರಯತ್ನಿಸುತ್ತಿದ್ದಾರೆ.ಒಂದು ಹಬ್ಬ ಭಯದ ಕಾರಣಕ್ಕೆ ಮೌನವಾಗಬೇಕಾ?
ಅಥವಾ ಹೊಸ ಯುಗಾದಿ… ಹೊಸ ಯೋಚನೆಗಳೊಂದಿಗೆ ಈ ಗ್ರಾಮಗಳಲ್ಲಿ ಬೆಳಕು ಚೆಲ್ಲಬೇಕಾ?


#belief#bellary villeges#fesival#karnataka#ಮೂಡನಂಬಿಕೆಗಳು#ಯುಗಾದಿ

COMMENTS

Login with Gmail to comment

ಇನ್ನಷ್ಟು ಸುದ್ದಿ

ಕಂದಾಯ ಸಚಿವರ ದಕ್ಷಿಣ ಕನ್ನಡ ಜಿಲ್ಲಾ ಪ್ರವಾಸ
ದೇಶಾದ್ಯಂತ ಇಂದು ಮೊಬೈಲ್‌ನಲ್ಲಿ ತುರ್ತು ಎಚ್ಚರಿಕೆ ಡ್ರಿಲ್ – ಗಾಬರಿ ಬೇಡ
ನಾಲ್ಕು ದಶಕಗಳ ಕಾಲ ರೋಗಿಗಳಿಗೆ ಜೀವ ನೀಡಿದ ವೈದ್ಯನೇ ಇಂದು ಯಾಕೆ ತನ್ನ ಜೀವ ತಾನೇ ತೆಗೆದುಕೊಂಡರು …
ಸಾಮಾಜಿಕ ಜಾಲತಾಣದಲ್ಲಿ ಕೋಮು ಪ್ರಚೋದನೆಯ ಪೋಸ್ಟ್ ಗಳನ್ನು ಹಾಕಿದ ಆರೋಪಿಯ ಬಂಧನ
ಭಾರತ ಮುಸ್ಲಿಂ ದೇಶವಾಗುವುದೇ?- ನಾಳೆ ಪುಸ್ತಕ ಬಿಡುಗಡೆಯ ಕಾರ್ಯಕ್ರಮ
ಡೇಟಾದಲ್ಲಿ ಸತ್ತಿದ್ದಾರೆ: ಬಡ ಮಹಿಳೆ ತಾನು ಜೀವಂತ ಸಾಬೀತುಪಡಿಸಲು ಹರಸಾಹಸ…ಬಡಜನರು “ಡೇಟಾ” ಅಲ್ಲ — ಅವರು ಜೀವಂತ ಮಾನವರು. 
ರಾಜಕೀಯ ಬದಲಾಗುತ್ತಿದೆ -ಪಂಚರಾಜ್ಯ election ರಿಸಲ್ಟ್ “ಗೆಲುವು-ಸೋಲಿನ ಶಕ್ತಿ ಪಕ್ಷದಲ್ಲಲ್ಲ… ಜನರ ಕೈಯಲ್ಲಿ”
ವಿದ್ಯಾರ್ಥಿಯೊಬ್ಬ 12ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ..
ಹೊರಗೆ ಕ್ಯಾಂಟೀನ್…ಆದ್ರೆ ಒಳಗೆ ನಡೆಯುತ್ತಿತ್ತು ಬೇರೆದ್ದೇ ಆಟ..!ಬಯಲಾಯ್ತು ಬೆಚ್ಚಿಬೀಳಿಸುವ ದಂಧೆ. 
MRPL ವಿರುದ್ಧ ಜನಹೋರಾಟದ ಎಚ್ಚರಿಕೆ – ಮೇ 1ರಿಂದ ಅನಿರ್ದಿಷ್ಟ ಧರಣಿಗೆ ಸಮಿತಿ ಸಜ್ಜು..
ಜನಿವಾರಕ್ಕೆ ಕೈ ಹಾಕಿದವರು, ಪರ್ಮನೆಂಟ್ ಮನೆಗೆ ಹೋಗುವ ದಾರಿಯಲ್ಲಿ….
ಬರ್ಗಿ ಅಣೆಕಟ್ಟಿನಲ್ಲಿ ಭೀಕರ ದುರಂತ-ಕರುಳು ಹಿಂಡುವ ದೃಶ್ಯ ಅಮ್ಮ-ಮಗು ಅಪ್ಪಿಕೊಂಡೇ ಜಲಸಮಾದಿ ಸಂತೋಷದ ಪ್ರವಾಸದಿಂದ ಶೋಕದ ಸಾಗರಕ್ಕೆ
ಬೆಚ್ಚಿಬಿದ್ದ ರಾಷ್ಟ್ರ ರಾಜಧಾನಿ, ಯಂಗ್ ಜಡ್ಜ್ ಆತ್ಮಹತ್ಯೆ
sdfdf
ಮೂರನೇ ಮಹಾಯುದ್ಧದ ಭೀತಿ: ಇರಾನ್ ಹೊಸ ನಾಯಕನಾಗಿ ಮೊಜ್ತಬಾ ಖಮೇನಿ –ನೂತನ ನಾಯಕನಿಗೆ ರಷ್ಯಾ, ಚೀನಾ ಬೆಂಬಲ
ಮೋದಿ ಅವರ ನಿರ್ಧಾರಗಳು“ದೀರ್ಘಕಾಲೀನ ಅಭಿವೃದ್ಧಿಗೆ ಜವಾಬ್ದಾರಿಯುತ ನೀತಿಗಳು” ಆತಂಕದ ಸೂಚನೆ ಅಲ್ಲ-ಎಸ್.ಎಸ್. ನಾಯಕ್
ತಮಿಳುನಾಡು ಮುಖ್ಯಮಂತ್ರಿ ವಿಜಯ್, ಚಧುರಂಗದಾಟದಲ್ಲಿ ಲಾಂಗ್ ಟೈಮ್ ಉಳಿಯುವರೇ?
ಕೆಲವೊಮ್ಮೆ ದೇಹದ ಶತ್ರು “ಲೂಪಸ್ “ಹೊರಗಿಲ್ಲ… ಒಳಗೇ ಇರುತ್ತದೆ.ಮಹಿಳೆಯರ ದಣಿವು, ಸಂಧಿ ನೋವು, ತೂಕ ಇಳಿಕೆ —. ನಿರ್ಲಕ್ಷ್ಯ ಬೇಡ. ‘ಸಾಮಾನ್ಯ’ ಎಂದು ಕಡೆಗಣಿಸಬೇಡಿ.
📣3 ತಿಂಗಳಲ್ಲಿ LPG ಸಂಪರ್ಕ ರದ್ದು ??– PNGಗೆ ಬದಲಾವಣೆ ಕಡ್ಡಾಯ” ಈಗಲೇ ಸತ್ಯ ತಿಳಿದುಕೊಳ್ಳಿ..! ಗ್ಯಾಸ್ ಬಗ್ಗೆ ಗೊಂದಲಕ್ಕೆ ಸ್ಪಷ್ಟ ಉತ್ತರ ಇಲ್ಲಿದೆ.
KIOCL ಮತ್ತು NDMC ವಿಲೀನಕ್ಕೆ ಶಾಸಕ ಡಾ. ಭರತ್ ಶೆಟ್ಟಿಯಿಂದ ಕೇಂದ್ರ ಸಚಿವರಿಗೆ ಮನವಿ
ಹೋಟೆಲ್, ಕೆಫೆ ಬಿಸಿ ಬಿಸಿ ಪ್ಲಾಸ್ಟಿಕ್ ಲ್ಲಿ ಪಾರ್ಸೆಲ್‌ಗೆ ಬ್ರೇಕ್ –ಹಾಗೆ 5ರೂ 10ರೂ ಬೀಡಿ ಸಿಗರೇಟ್ ಗುಟ್ಕಾಕ್ಕೆ ₹1000 ದಂಡ ಕಟ್ಟಬೇಕಾದಿತು ಎಚ್ಚರ …!
🚨 ಮಂಗಳೂರು ನಿವಾಸಿಗಳಿಗೆ ಮಹತ್ವದ ಮಾಹಿತಿ – 2026 ಘನತ್ಯಾಜ್ಯ ನಿರ್ವಹಣೆ ಹೊಸ ನಿಯಮ  🚨
ಮಂಗಳೂರುಗೆ ಹೈಕೋರ್ಟ್ ಸರ್ಕ್ಯೂಟ್ ಬೆಂಚ್: ಕರಾವಳಿಗೆ ಐತಿಹಾಸಿಕ ನ್ಯಾಯಾಂಗ ಶಕ್ತಿ ನೀಡುವ ಮಹತ್ವದ ಹೆಜ್ಜೆ..
ಶಿಕ್ಷಣದ ಹೆಸರಿನಲ್ಲಿ ಡ್ರಗ್ ವ್ಯವಹಾರ! ಬೆಚ್ಚಿಬಿದ್ದ ಮಂಗಳೂರು…
ಬಲಪಂಥೀಯರ ಜೊತೆ ಮುಖ್ಯಮಂತ್ರಿಗಳ ಸ್ನೇಹ : ಅಭದ್ರತೆ ಯಾರಿಗೆಲ್ಲ?
ನೀರು ಪೋಲು ಬೇಡ….ಈಗಲೇ ಎಚ್ಚೆತ್ತುಕೊಳ್ಳಿ!ಇಂದು ನಿರ್ಲಕ್ಷ್ಯ,ನಾಳೆ ಜಲ ಸಂಕಷ್ಟದ ಎಚ್ಚರಿಕೆ…!
ಎಸ್.ಎಸ್.ಎಲ್.ಸಿ. ಪರೀಕ್ಷೆ: ಮಂಗಳೂರಲ್ಲಿ ನಿಷೇಧಾಜ್ಞೆ ಜಾರಿ
ಆಸ್ಪತ್ರೆಯಲ್ಲೇ ಮೂರನೇ ಮಹಡಿಯಿಂದ ಬಿದ್ದು ಸಾವುನಿರ್ಲಕ್ಷ್ಯವೇ? ಸುರಕ್ಷತೆ ಪ್ರಶ್ನೆಗೊಳಗಾಗಿದೆ!
ಮಗಳ ಎಡವಟ್ಟಿಗೆ ಪಿಣರಾಯಿ ಬಲಿ…..ಕೇರಳ ರಾಜಕಾರಣದಲ್ಲಿ ಹೈವೋಲ್ಟೇಜ್ ಭೂಕಂಪ
ಒಂದು ದಿನ ಕೈದಿ ಆಗ್ಬೇಕಾ? ಜೈಲು ಜೀವನ ಹೇಗಿರುತ್ತೆ ಅನ್ನೋ ಕುತೂಹಲಕ್ಕೀಗ ಚಂಚಲ್‌ಗುಡ ಜೈಲು ಬಾಗಿಲು ಈಗ ಸಾರ್ವಜನಿಕರಿಗೆ ಓಪನ್!
ಕಾಂಗ್ರೆಸ್ ಮೇಲಿನ ಕೋಪ ತಣ್ಣಗಾಗಿಲ್ಲ….. ಜನಪರ ಯೋಜನೆ ಮುಂದುವರೆಸಲು ಸ್ಟಾಲಿನ್ ಮನವಿ