📍 Karavali Maruta
  • LOGIN
  • BREAKING
    ಧಾರವಾಡದಲ್ಲಿ ಭೀಕರ LPG ಸಿಲಿಂಡರ್ ಸ್ಫೋಟ , ಹಲವು ಮೀಟರ್ ದೂರಕ್ಕೆ ಹಾರಿದ ಬೈಕ್‌! ಹಲವರಿಗೆ ಗಾಯ CCTVಯಲ್ಲಿ ಶಾಕಿಂಗ್ ದೃಶ್ಯ ದಯಾಮರಣ ಕೇಳಿದ್ದ ತುಮಕೂರು ರಾಬಿಯಾ ಇನ್ನಿಲ್ಲ …!ಪರಮೇಶ್ವರ್ ಮುಂದೆ ಕಣ್ಣೀರಿಟ್ಟಿದ್ದ ಮಹಿಳೆ ಇಬ್ಬರು ಮಕ್ಕಳೊಂದಿಗೆ ವಿಷಸೇವಿಸಿ ಕೊನೆಯುಸಿರು…‘ಮನೆ’ ಸಿಕ್ಕರೂ ಬದುಕು ಉಳಿಯಲಿಲ್ಲ! ನೇಪಾಳ ದುರಂತ: ಕಂಪ್ಲೀಟ್ ರಿಪೋರ್ಟ್ ಇಲ್ಲಿದೆ…ಕಣ್ಣೆದುರೇ ಕೊಚ್ಚಿಹೋದ ಬದುಕು… ಲೆಕ್ಕಕ್ಕೆ ಸಿಗದ ಸಾವು, ನೋವು!ಪ್ರವಾಹದ ರೌದ್ರದ ನಡುವೆ ಮೃತದೇಹದಿಂದಲೇ ಚಿನ್ನ ಕದಿಯಲು ಯತ್ನ… ಮಾನವೀಯತೆ ಮರೆತ ಕಿರಾತಕರು!ಇಬ್ಬರು ಅರೆಸ್ಟ್! ಮಹಿಳಾ ಕಾನ್ಸ್‌ಟೇಬಲ್ ಮೇಲೆ ಪೊಲೀಸ್ ಠಾಣೆಯಲ್ಲಿ ಮಾರಣಾಂತಿಕ ಹಲ್ಲೆ ವಾಜಪೇಯಿ ಸರ್ಕಾರದ  ಕನಸಿನ ಯೋಜನೆ ನದಿ ಜೋಡಣೆ ವಿರೋಧಿಸಿ ಶಿರಸಿಯಲ್ಲಿ ಸಹಿ ಸಂಗ್ರಹ ಅಭಿಯಾನ
    ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

    ಏಳು ವರ್ಷದ ನಂತರ ಮಂಗಳೂರಿಗೆ “ಅಮ್ಮ” ಬರುತ್ತಿದ್ದಾರೆ…. 50ಸಾವಿರ ಜನರ ನಿರೀಕ್ಷೆ

    ಆಧ್ಯಾತ್ಮ ಜಗತ್ತಿನ ಸಂತರುಗಳ ಪೈಕಿ ಪ್ರಮುಖರಾದ ಅಮ್ಮ ಖ್ಯಾತಿಯ “ಮಾತಾ ಅಮೃತಾನಂದಮಯಿ ದೇವಿ” ಅವರು ಬರೋಬ್ಬರಿ ಏಳು ವರ್ಷದ ನಂತರ ಮಂಗಳೂರಿಗೆ ಆಗಮಿಸುತ್ತಿದ್ದಾರೆ. ಮೇ 28 ಹಾಗೂ 29ರಂದು ಎರಡು ದಿನಗಳ ಕಾಲ “ಅಮೃತ ಸಂಗಮ 2026” ಇದರ ಅಡಿಯಲ್ಲಿ ಅನೇಕ ಧಾರ್ಮಿಕ ಹಾಗೂ ಆಧ್ಯಾತ್ಮಿಕ ಮತ್ತು ಸಾಮಾಜಿಕ ಚಟುವಟಿಕೆಯಲ್ಲಿ ತೊಡಗಿ ಕೊಳ್ಳಲಿದ್ದಾರೆಂದು ಮಾತಾ ಅಮೃತಾನಂದಮಯಿ ಸೇವಾ ಸಮಿತಿಯ ಪದಾಧಿಕಾರಿಗಳು, ಇಂದು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.

    ನಗರದ ಬೋಳೂರು ಸುಲ್ತಾನ್ ಬತ್ತೇರಿಯಲ್ಲಿರುವ ಮಾತಾ ಅಮೃತಾನಂದಮಯಿ ಮಠದ ಆವರಣದಲ್ಲಿ ಕರೆಯಲಾದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡುತ್ತಾ, ಎರಡು ದಿನಗಳ ಕಾಲ ನಡೆಯುವ ಈ ಕಾರ್ಯಕ್ರಮದಲ್ಲಿ ನಲವತ್ತಕ್ಕೂ ಹೆಚ್ಚು ದೇಶಗಳಿಂದ ಸುಮಾರು 300ಕ್ಕೂ ಹೆಚ್ಚು ವಿದೇಶಿ ಪ್ರಜೆಗಳು ಅಮ್ಮನವರ ಈ ಕಾರ್ಯಕ್ರಮಕ್ಕೆ ಆಗಮಿಸಲಿದ್ದಾರೆ. ದೇಶದ ಅನೇಕ ಕಡೆಯಿಂದ ಭಕ್ತರು ಹಾಗೂ ಆಧ್ಯಾತ್ಮಿಕ ಒಲವು ಹೊಂದಿರುವಂತವರು ಕಾರ್ಯಕ್ರಮಕ್ಕೆ ಆಗಮಿಸುತ್ತಿದ್ದಾರೆ. ರಾಜ್ಯದ ಮೂಲೆ ಮೂಲೆಯಿಂದಲೂ ಭಕ್ತರು ತಂಡೋಪತಂಡವಾಗಿ ಆಗಮಿಸಲಿದೆ. ಒಟ್ಟಾರೆ, ಎರಡು ದಿನದಲ್ಲಿ ಸುಮಾರು 50,000 ಭಕ್ತರು ಭಾಗವಹಿಸುವ ನಿರೀಕ್ಷೆ ಇದೆ ಎಂದು ಅವರು ತಿಳಿಸಿದ್ದಾರೆ.

    ಎರಡು ದಿನಗಳ ಕಾಲ, ಮುಂಜಾನೆ 5:45 ರಿಂದ ಪ್ರಾರಂಭವಾಗುವ ಕಾರ್ಯಕ್ರಮಗಳು ನಿರಂತರವಾಗಿ ಸಂಜೆ 8 ಗಂಟೆಯವರೆಗೆ ವಿವಿಧ ಧಾರ್ಮಿಕ ಆಧ್ಯಾತ್ಮಿಕ ಹಾಗೂ ಸಾಮಾಜಿಕ ಕಾರ್ಯಕ್ರಮಗಳು ಜರುಗಲಿವೆ.  ಭಕ್ತರು ಇದರ ಸದುಪಯೋಗವನ್ನು ಪಡೆದುಕೊಳ್ಳಬೇಕು ಎಂದು ವಿನಂತಿಸಿದ ಸಮಿತಿಯ ಪದಾಧಿಕಾರಿಗಳು, ಎರಡು ದಿನಗಳ ಕಾಲ ಮಧ್ಯಾಹ್ನ ಹಾಗೂ ಸಂಜೆ ಊಟದ ವ್ಯವಸ್ಥೆಯು ಇಲ್ಲಿರಲಿದೆ. ಬರುವ ಭಕ್ತಾದಿಗಳಿಗೆ ಯಾವುದೇ ಅನಾನುಕೂಲತೆ ಆಗದ ಹಾಗೆ ಸಕಲ ವ್ಯವಸ್ಥೆಗಳನ್ನು ಕೈಗೊಳ್ಳಲಾಗುತ್ತಿದೆ. ಬಸ್ಸಿನ ವ್ಯವಸ್ಥೆ ಹಾಗೂ ದೂರದಿಂದ ಬರುವವರಿಗೆ ಉಳಿದುಕೊಳ್ಳುವ ವ್ಯವಸ್ಥೆ ಸೇರಿದಂತೆ ಯಾವುದೇ ರೀತಿಯಲ್ಲೂ ಅನಾನುಕೂಲವಾಗದಂತೆ ನೋಡಿಕೊಳ್ಳಲಾಗುತ್ತಿದೆ ಎಂದು ಸಮಿತಿಯ ಪದಾಧಿಕಾರಿಗಳು ಸ್ಪಷ್ಟಪಡಿಸಿದರು.

    ಒಟ್ಟು 22 ಬ್ರಹ್ಮ ಸ್ಥಾನಗಳನ್ನು ಭಾರತದಲ್ಲಿ ಅಮ್ಮನವರು ಸ್ಥಾಪಿಸಿದ್ದಾರೆ ಆ 22ರಲ್ಲಿ 19ನೇ ಬ್ರಹ್ಮ ಸ್ಥಾನವೇ ಮಂಗಳೂರಿನಲ್ಲಿರುವ ಈ ಬ್ರಹ್ಮ ಸ್ಥಾನ ಎಂದು ಹೇಳಿದ ಸಮಿತಿಯ ಪದಾಧಿಕಾರಿಗಳು, ಇಲ್ಲಿ ವಿಶೇಷ ಪೂಜೆಗಳನ್ನು ಈ ಸಂದರ್ಭದಲ್ಲಿ ಆಯೋಜಿಸಲಾಗಿದೆ ಎಂದು ಹೇಳಿದರು. ಅದರಲ್ಲೂ ಹೆಚ್ಚಾಗಿ 28ರಂದು ರಾಹು ದೋಷ ನಿವಾರಣ ಪೂಜೆ ನಡೆಯಲಿದೆ. 29ರಂದು ಶನಿ ದೋಷ ನಿವಾರಣಾ ಪೂಜೆ ನಡೆಯಲಿದೆ. ಬ್ರಹ್ಮ ಸ್ಥಾನದಲ್ಲಿ ನಡೆಯುವ ದೋಷ ನಿವಾರಣ ಪೂಜೆಯು ಸಾಕಷ್ಟು ಪ್ರಸಿದ್ಧಿಯನ್ನು ಪಡೆದಿದೆ. ಹಾಗಾಗಿ ಭಕ್ತರು ಇಲ್ಲಿ ನಡೆಯುವ ದೋಷ ನಿವಾರಣ ಸೇವೆಯ ಪ್ರಯೋಜನವನ್ನು ಪಡೆದುಕೊಳ್ಳಬಹುದು ಎಂದು ಈ ಸಂದರ್ಭದಲ್ಲಿ ಹೇಳಿದರು.

    ಮುಖ್ಯವಾಗಿ ಅಮ್ಮನವರ ಆಶೀರ್ವಾದ ಪಡೆಯಲು ಪ್ರಪಂಚಾದ್ಯಂತದ ಭಕ್ತರು ಹಾತೊರೆಯುತ್ತಾರೆ. ನಾವು ಮೊದಲು ಬಂದವರಿಗೆ ಮೊದಲ ಆದ್ಯತೆ ಎಂಬಂತೆ ಟೋಕನ್ ಸಿಸ್ಟಮ್ ಮಾಡಿದ್ದೇವೆ. ಯಾರು ಮೊದಲಿಗೆ ಬಂದು ಎಂಟ್ರಿ ಮಾಡಿಸುತ್ತಾರೋ, ಆ ಒಂದು ಸರತಿಯಂತೆ ಅಮ್ಮನವರ ದರ್ಶನಕ್ಕೆ ಟೋಕನ್ ದೊರಕಲಿದೆ. ಮೊದಲ ಬಾಂಧವರಿಗೆ ಮೊದಲ ದರ್ಶನ ಆ ರೀತಿಯ ಪ್ರಕಾರ ಅಮ್ಮನವರ ದರ್ಶನ ಹಾಗೂ ಆಶೀರ್ವಾದ ಪಡೆಯಲು ಭಕ್ತರಿಗೆ ಅನುಕೂಲತೆಯನ್ನು ಒದಗಿಸಲಾಗಿದೆ ಎಂದು ಸಮಿತಿಯವರು ತಿಳಿಸಿದ್ದಾರೆ.

    ಪತ್ರಿಕಾ ಗೋಷ್ಠಿಯಲ್ಲಿ ಅಧ್ಯಕ್ಷರಾದ ಸುರೇಶ್ ಅಮೀನ್, ಉಪಾಧ್ಯಕ್ಷರಾದ ಡಾಕ್ಟರ್ ಜೀವರಾಜ್ ಸೊರಕೆ, ಸಿಎ ವಾಮನ್ ಕಾಮತ್, ವಸಂತ್ ಕುಮಾರ್ ಪೆರ್ಲ, ಸಿಎ ರಾಮನಾಥ್ ಹಾಗೂ ಅಡ್ವಕೇಟ್ ಸ್ವಸ್ತಿ ಶೆಟ್ಟಿ ಉಪಸ್ಥಿತರಿದ್ದರು.

    COMMENTS

    Login with Gmail to comment

    ಇನ್ನಷ್ಟು ಸುದ್ದಿ

    ಅಮೆರಿಕಾ ಭಾರತವನ್ನು ಬ್ಲ್ಯಾಕ್‌ಮೇಲ್ ಮಾಡುತ್ತಿದೆ” – ಕೆ.ಸಿ. ವೇಣುಗೋಪಾಲ್
    ಬೆಂಗಳೂರಿನಲ್ಲಿ₹2,384 ಕೋಟಿ GSTದಂಧೆ ಭೇದಿಸಿದ ಇಲಾಖೆ.. ಭರ್ಜರಿ ದಾಳಿ! ಭಾರೀ GST ಸ್ಕ್ಯಾಂ .. ಹಲವರು ಬಲೆಗೆ ಬೀಳುವ ಸಾಧ್ಯತೆ!…
    ಬಂಗಾಳದಲ್ಲಿ ಬಿಜೆಪಿಯ ಯುದ್ಧೋನ್ಮಾದ, ದೀದಿಯ ರಚ್ಚೆ…
    2027ರಲ್ಲಿ ರಸ್ತೆಗಿಳಿಯಲಿರುವ EV ಕಾರ್ Avinya X ನೋಡಿದರೆ ಸಾಮಾನ್ಯ SUVಗಳನ್ನೇ ಮರೆತುಬಿಡುತ್ತಿರಾ…ಬರುತ್ತಿದೆ ಟಾಟಾದ ಅತ್ಯಂತ ದುಬಾರಿ ಕನಸು!
    ಕ್ರಿಮಿನಲ್ಸ್ ಸಪೋರ್ಟಿಗೆ ನಿಂತವರು ಯಾರ್ಯಾರು ಅನ್ನುವುದು ಈಗ ಗೊತ್ತಾಗುತ್ತಿದೆ ನೋಡಿ….!
    ಮಂಗಳೂರು ಬೆಂಗಳೂರು ಮಧ್ಯೆ ಇನ್ನು ತಡರಾತ್ರಿಯೂ ವಿಮಾನ ಯಾನ
    ಬಳ್ಳಾರಿ “ಪೊಲೀಸ್ ಗನ್‌ಮನ್ ಎಕ್ಸ್‌ಟಾರ್ಷನ್”ಇಲಾಖೆಗೆ ಕಳಂಕ: ಗನ್‌ಮನ್ ಸೇರಿ ಮೂವರ ವಿರುದ್ಧ ಪ್ರಕರಣ!
    ಕರಾವಳಿಯಲ್ಲಿ ಮತ್ತೆ ಸೈಬರ್ ವಂಚಕರ ಅಟ್ಟಹಾಸ: 3 ಪ್ರಕರಣಗಳಲ್ಲಿ ₹12 ಲಕ್ಷಕ್ಕೂ ಅಧಿಕ ಹಣ ಕಳೆದುಕೊಂಡ ಜನ!
    ಚುನಾವಣಾ ಆಯೋಗ ಸರ್ವಾಧಿಕಾರಿಯಾಗುತ್ತಿದೆ ಎಂಬ ಅನುಮಾನದ ಸುತ್ತ….
    ಅಮೇರಿಕಾ ಅಧ್ಯಕ್ಷರ ಮೇಲೆ ಎರಡನೆಯ ಬಾರಿ ಗುಂಡಿನ ದಾಳಿ
    ಗುಂಡಿನ ದಾಳಿ ನಡೆಸಿದ ಹಂತಕರ ಬಂಧನ??
    ಪತ್ರಕರ್ತನ ಮೇಲೆ ಹಲ್ಲೆ ನಡೆಸಿದ ವೈದ್ಯನನ್ನು ಅಮಾನತ್ತು ಮಾಡಿದರೆ ಸಾಕೆ?
    ಆಸ್ತಿ ಬರೆದುಕೊಟ್ಟ ಅಪ್ಪ ಬೇಡವಾದನಾ?92ರ ತಂದೆ ಕೋರ್ಟ್‌ನಲ್ಲಿ ಗೆದ್ದ ಕಥೆ!
    AI ಡೀಪ್‌ಫೇಕ್ ಕೇವಲ ಸಿನಿಮಾ ನಟಿಯರಿಗೆ ಸೀಮಿತವಾಗಿಲ್ಲ .
    ರಾಕಿಂಗ್ ಸ್ಟಾರ್ ಯಶ್ ‘ಟಾಕ್ಸಿಕ್’ ಸಿನಿಮಾ ಅಪ್ಡೇಟ್: ಸೋಶಿಯಲ್ ಮೀಡಿಯಾದಲ್ಲಿ ಧೂಳೆಬ್ಬಿಸ್ತಿರೋ ಯಶ್ ಡೈಲಾಗ್!
    ಕರಾವಳಿಯಲ್ಲಿ ಅಕ್ರಮ 109 ಹೋಂಸ್ಟೇಗಳು, 21ರೆಸಾರ್ಟ್‌ಗಳಿಗೆ ಶಾಕ್ ಲೋಕಾಯುಕ್ತ ಬೀಗ!ರೆಸಾರ್ಟ್‌ಗಳು ಬಂದ್!
    ಮತದಾರರೇ…ಕರ್ನಾಟಕ SIR ನಲ್ಲಿ 47 ಲಕ್ಷ ಹೆಸರುಗಳು ಡಿಲೀಟ್…..‌! 2002ರ ಪಟ್ಟಿ ವಿವರ ಇಲ್ಲದಿದ್ದರೆ ನೋಟಿಸ್? ಮುಂದೆ ಏನು ಮಾಡಬೇಕು?
    ರಾಜಿ ಮಾಡಲು ಬಂದವನಿಗೇ ಚೂರಿ ಇರಿತ
    40 ವರ್ಷದ ಹಳೆಯ ಕೊಲೆಕೇಸ್‌ಗೆ ಅಂತಿಮ ಕೀ ಆಗಿ ಸಾಕ್ಷಿ ಆಗಿದ್ದು ತಿಂದು ಉಗುಳಿದ ಚೂಯಿಂಗ್ ಗಮ್ …!ಏನಿದು realstory..
    Cocktail 2 ಸುತ್ತ ರಶ್ಮಿಕಾ ಮಂದಣ್ಣ ಕ್ರಿಯೇಟ್ ಮಾಡಿದ ಹೈಪ್ ಎಷ್ಟು ಗೊತ್ತಾ?ಅನ್ಟೋಲ್ಡ್ ಮಸಾಲೆ ಸ್ಟೋರಿಗಳು ಇಲ್ಲಿವೆ!
    NEET ಹಂಗಾಮ ನೀಟಾಗಿ ಅಂತ್ಯ ಕಾಣುತ್ತಾ…?!ಮೋದಿಯ ‘ತಡವಾದ ಪ್ರತಿಕ್ರಿಯೆ’-ಕೊನೆಗೂ ವಾಂಗ್ಚುಕ್ ಉಪವಾಸ ಅಂತ್ಯ… ಆದರೆ … ‘ಕಾಕ್ರೋಚ್’ ಹೋರಾಟ ಮುಂದುವರಿಕೆ!ಮುಂದೇನು??
    ಶಸ್ತ್ರಚಿಕಿತ್ಸೆಯ ಪಿತಾಮಹ ಮಹಾನ್ ವೈದ್ಯ….ಸುಶ್ರುತನನ್ನ ಜಗತ್ತು ಗೌರವಿಸಿದ ಕ್ಷಣ…ಆಧುನಿಕ ವೈದ್ಯಕೀಯದ ಬೇರುಗಳು ಭಾರತದಲ್ಲೇ…
    ಸಹೋದರಿಯ ಎಲುಬುಗಳೊಂದಿಗೆ ಬ್ಯಾಂಕ್ ಗೆ ಬಂದ ಅಣ್ಣ…!ದಾಖಲೆ ನಿಯಮಗಳ ನಡುವೆ ಸೋತ ಮಾನವೀಯತೆ”
    Top 5, ಹೆಚ್ಚು ಅನುದಾನ ಪಡೆದ ಇಲಾಖೆಗಳು ಯಾವವು ಗೊತ್ತಾ?
    “ಅಪ್ಪಾ” ಎಂದು ಕರೆದವನ ಕೈಯಿಂದಲೇ 18 ತಿಂಗಳ ಕಂದಮ್ಮನ ದೇಹದ ಮೇಲೆ 91 ಗಾಯದ ಗುರುತು – ಅಮಾನುಷ ಹತ್ಯೆ!..
    ಶಿರಾಡಿ ಗ್ರಾ.ಪಂ PDO ಸಹಿ ನಕಲು ….6 ತಿಂಗಳಾದರೂ ದೂರು ದಾಖಲಾಗಿಲ್ಲ!
    “Arvind Kejriwal: ‘ಸತ್ಯಾಗ್ರಹ’ದಿಂದ ನ್ಯಾಯದ ಬೇಡಿಕೆ.”
    ಕಂಪನಿಗೆ ಯಶಸ್ಸು ತಂದ ಇಂಟರ್ನ್‌ ಸಂಬಳ ಜಾಸ್ತಿಕೇಳಿದ್ದಕ್ಕೆ CEO ಅಂದ್ರು “Money-minded”-ಸಿಇಒ ನಡೆಗೆ ಸೋಶಿಯಲ್ ಮೀಡಿಯಾದಲ್ಲಿ ಭಾರಿ ಆಕ್ರೋಶ
    ಬೆಳಗ್ಗೆಯೇ ಲೋಕಾಯುಕ್ತ ಬಿಗ್ ಬ್ಲಾಸ್ಟ್!54 ಕಡೆ ಏಕಕಾಲದಲ್ಲಿ ರೇಡ್… ಚಿನ್ನ, ನಗದು, ಮನೆ, ಜಮೀನುಗಳ ಮಹಾಪರ್ವತ ಪತ್ತೆ!