📍 Karavali Maruta
LIVE | CONTACT
ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

ಏಳು ವರ್ಷದ ನಂತರ ಮಂಗಳೂರಿಗೆ “ಅಮ್ಮ” ಬರುತ್ತಿದ್ದಾರೆ…. 50ಸಾವಿರ ಜನರ ನಿರೀಕ್ಷೆ

ಆಧ್ಯಾತ್ಮ ಜಗತ್ತಿನ ಸಂತರುಗಳ ಪೈಕಿ ಪ್ರಮುಖರಾದ ಅಮ್ಮ ಖ್ಯಾತಿಯ “ಮಾತಾ ಅಮೃತಾನಂದಮಯಿ ದೇವಿ” ಅವರು ಬರೋಬ್ಬರಿ ಏಳು ವರ್ಷದ ನಂತರ ಮಂಗಳೂರಿಗೆ ಆಗಮಿಸುತ್ತಿದ್ದಾರೆ. ಮೇ 28 ಹಾಗೂ 29ರಂದು ಎರಡು ದಿನಗಳ ಕಾಲ “ಅಮೃತ ಸಂಗಮ 2026” ಇದರ ಅಡಿಯಲ್ಲಿ ಅನೇಕ ಧಾರ್ಮಿಕ ಹಾಗೂ ಆಧ್ಯಾತ್ಮಿಕ ಮತ್ತು ಸಾಮಾಜಿಕ ಚಟುವಟಿಕೆಯಲ್ಲಿ ತೊಡಗಿ ಕೊಳ್ಳಲಿದ್ದಾರೆಂದು ಮಾತಾ ಅಮೃತಾನಂದಮಯಿ ಸೇವಾ ಸಮಿತಿಯ ಪದಾಧಿಕಾರಿಗಳು, ಇಂದು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.

ನಗರದ ಬೋಳೂರು ಸುಲ್ತಾನ್ ಬತ್ತೇರಿಯಲ್ಲಿರುವ ಮಾತಾ ಅಮೃತಾನಂದಮಯಿ ಮಠದ ಆವರಣದಲ್ಲಿ ಕರೆಯಲಾದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡುತ್ತಾ, ಎರಡು ದಿನಗಳ ಕಾಲ ನಡೆಯುವ ಈ ಕಾರ್ಯಕ್ರಮದಲ್ಲಿ ನಲವತ್ತಕ್ಕೂ ಹೆಚ್ಚು ದೇಶಗಳಿಂದ ಸುಮಾರು 300ಕ್ಕೂ ಹೆಚ್ಚು ವಿದೇಶಿ ಪ್ರಜೆಗಳು ಅಮ್ಮನವರ ಈ ಕಾರ್ಯಕ್ರಮಕ್ಕೆ ಆಗಮಿಸಲಿದ್ದಾರೆ. ದೇಶದ ಅನೇಕ ಕಡೆಯಿಂದ ಭಕ್ತರು ಹಾಗೂ ಆಧ್ಯಾತ್ಮಿಕ ಒಲವು ಹೊಂದಿರುವಂತವರು ಕಾರ್ಯಕ್ರಮಕ್ಕೆ ಆಗಮಿಸುತ್ತಿದ್ದಾರೆ. ರಾಜ್ಯದ ಮೂಲೆ ಮೂಲೆಯಿಂದಲೂ ಭಕ್ತರು ತಂಡೋಪತಂಡವಾಗಿ ಆಗಮಿಸಲಿದೆ. ಒಟ್ಟಾರೆ, ಎರಡು ದಿನದಲ್ಲಿ ಸುಮಾರು 50,000 ಭಕ್ತರು ಭಾಗವಹಿಸುವ ನಿರೀಕ್ಷೆ ಇದೆ ಎಂದು ಅವರು ತಿಳಿಸಿದ್ದಾರೆ.

ಎರಡು ದಿನಗಳ ಕಾಲ, ಮುಂಜಾನೆ 5:45 ರಿಂದ ಪ್ರಾರಂಭವಾಗುವ ಕಾರ್ಯಕ್ರಮಗಳು ನಿರಂತರವಾಗಿ ಸಂಜೆ 8 ಗಂಟೆಯವರೆಗೆ ವಿವಿಧ ಧಾರ್ಮಿಕ ಆಧ್ಯಾತ್ಮಿಕ ಹಾಗೂ ಸಾಮಾಜಿಕ ಕಾರ್ಯಕ್ರಮಗಳು ಜರುಗಲಿವೆ.  ಭಕ್ತರು ಇದರ ಸದುಪಯೋಗವನ್ನು ಪಡೆದುಕೊಳ್ಳಬೇಕು ಎಂದು ವಿನಂತಿಸಿದ ಸಮಿತಿಯ ಪದಾಧಿಕಾರಿಗಳು, ಎರಡು ದಿನಗಳ ಕಾಲ ಮಧ್ಯಾಹ್ನ ಹಾಗೂ ಸಂಜೆ ಊಟದ ವ್ಯವಸ್ಥೆಯು ಇಲ್ಲಿರಲಿದೆ. ಬರುವ ಭಕ್ತಾದಿಗಳಿಗೆ ಯಾವುದೇ ಅನಾನುಕೂಲತೆ ಆಗದ ಹಾಗೆ ಸಕಲ ವ್ಯವಸ್ಥೆಗಳನ್ನು ಕೈಗೊಳ್ಳಲಾಗುತ್ತಿದೆ. ಬಸ್ಸಿನ ವ್ಯವಸ್ಥೆ ಹಾಗೂ ದೂರದಿಂದ ಬರುವವರಿಗೆ ಉಳಿದುಕೊಳ್ಳುವ ವ್ಯವಸ್ಥೆ ಸೇರಿದಂತೆ ಯಾವುದೇ ರೀತಿಯಲ್ಲೂ ಅನಾನುಕೂಲವಾಗದಂತೆ ನೋಡಿಕೊಳ್ಳಲಾಗುತ್ತಿದೆ ಎಂದು ಸಮಿತಿಯ ಪದಾಧಿಕಾರಿಗಳು ಸ್ಪಷ್ಟಪಡಿಸಿದರು.

ಒಟ್ಟು 22 ಬ್ರಹ್ಮ ಸ್ಥಾನಗಳನ್ನು ಭಾರತದಲ್ಲಿ ಅಮ್ಮನವರು ಸ್ಥಾಪಿಸಿದ್ದಾರೆ ಆ 22ರಲ್ಲಿ 19ನೇ ಬ್ರಹ್ಮ ಸ್ಥಾನವೇ ಮಂಗಳೂರಿನಲ್ಲಿರುವ ಈ ಬ್ರಹ್ಮ ಸ್ಥಾನ ಎಂದು ಹೇಳಿದ ಸಮಿತಿಯ ಪದಾಧಿಕಾರಿಗಳು, ಇಲ್ಲಿ ವಿಶೇಷ ಪೂಜೆಗಳನ್ನು ಈ ಸಂದರ್ಭದಲ್ಲಿ ಆಯೋಜಿಸಲಾಗಿದೆ ಎಂದು ಹೇಳಿದರು. ಅದರಲ್ಲೂ ಹೆಚ್ಚಾಗಿ 28ರಂದು ರಾಹು ದೋಷ ನಿವಾರಣ ಪೂಜೆ ನಡೆಯಲಿದೆ. 29ರಂದು ಶನಿ ದೋಷ ನಿವಾರಣಾ ಪೂಜೆ ನಡೆಯಲಿದೆ. ಬ್ರಹ್ಮ ಸ್ಥಾನದಲ್ಲಿ ನಡೆಯುವ ದೋಷ ನಿವಾರಣ ಪೂಜೆಯು ಸಾಕಷ್ಟು ಪ್ರಸಿದ್ಧಿಯನ್ನು ಪಡೆದಿದೆ. ಹಾಗಾಗಿ ಭಕ್ತರು ಇಲ್ಲಿ ನಡೆಯುವ ದೋಷ ನಿವಾರಣ ಸೇವೆಯ ಪ್ರಯೋಜನವನ್ನು ಪಡೆದುಕೊಳ್ಳಬಹುದು ಎಂದು ಈ ಸಂದರ್ಭದಲ್ಲಿ ಹೇಳಿದರು.

ಮುಖ್ಯವಾಗಿ ಅಮ್ಮನವರ ಆಶೀರ್ವಾದ ಪಡೆಯಲು ಪ್ರಪಂಚಾದ್ಯಂತದ ಭಕ್ತರು ಹಾತೊರೆಯುತ್ತಾರೆ. ನಾವು ಮೊದಲು ಬಂದವರಿಗೆ ಮೊದಲ ಆದ್ಯತೆ ಎಂಬಂತೆ ಟೋಕನ್ ಸಿಸ್ಟಮ್ ಮಾಡಿದ್ದೇವೆ. ಯಾರು ಮೊದಲಿಗೆ ಬಂದು ಎಂಟ್ರಿ ಮಾಡಿಸುತ್ತಾರೋ, ಆ ಒಂದು ಸರತಿಯಂತೆ ಅಮ್ಮನವರ ದರ್ಶನಕ್ಕೆ ಟೋಕನ್ ದೊರಕಲಿದೆ. ಮೊದಲ ಬಾಂಧವರಿಗೆ ಮೊದಲ ದರ್ಶನ ಆ ರೀತಿಯ ಪ್ರಕಾರ ಅಮ್ಮನವರ ದರ್ಶನ ಹಾಗೂ ಆಶೀರ್ವಾದ ಪಡೆಯಲು ಭಕ್ತರಿಗೆ ಅನುಕೂಲತೆಯನ್ನು ಒದಗಿಸಲಾಗಿದೆ ಎಂದು ಸಮಿತಿಯವರು ತಿಳಿಸಿದ್ದಾರೆ.

ಪತ್ರಿಕಾ ಗೋಷ್ಠಿಯಲ್ಲಿ ಅಧ್ಯಕ್ಷರಾದ ಸುರೇಶ್ ಅಮೀನ್, ಉಪಾಧ್ಯಕ್ಷರಾದ ಡಾಕ್ಟರ್ ಜೀವರಾಜ್ ಸೊರಕೆ, ಸಿಎ ವಾಮನ್ ಕಾಮತ್, ವಸಂತ್ ಕುಮಾರ್ ಪೆರ್ಲ, ಸಿಎ ರಾಮನಾಥ್ ಹಾಗೂ ಅಡ್ವಕೇಟ್ ಸ್ವಸ್ತಿ ಶೆಟ್ಟಿ ಉಪಸ್ಥಿತರಿದ್ದರು.

COMMENTS

Login with Gmail to comment

ಇನ್ನಷ್ಟು ಸುದ್ದಿ

ವಿಟ್ಲ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಕಚೇರಿಯಲ್ಲಿ ಗಲಾಟೆ:
KSRTC ಬಸ್ ಪಲ್ಟಿಯಾಗಿ ಕಂದಕಕ್ಕೆ — ಐವರು ದುರ್ಮರಣ, ಹಲವರಿಗೆ ಗಂಭೀರ ಗಾಯ-ಜಹೀರಾಬಾದ್ ಸಮೀಪ ಭೀಕರ ರಸ್ತೆ ಅಪಘಾತ
ಬಾರ್ ಲೆಕ್ಕಾಚಾರ-ಚೂರಿ ದಾಳಿ – ಯುವಕನ ಕುತ್ತಿಗೆಗೆ ಕೊಯ್ದು ಕೊಲೆ ಯತ್ನ
ವಿಶ್ವ ಸಂಸ್ಥೆಯು ಯಾವ ಪುರುಷಾರ್ಥಕ್ಕೆ? ಬಲವರ್ಧನೆಯ  ಅಗತ್ಯತೆ
ಮಕ್ಕಳ ಸುರಕ್ಷತೆಯೇ ಮುಖ್ಯ – ಸಂದೇಶ ಕೊಟ್ಟ ಹೈಕೋರ್ಟ್
ಇನ್ನು ಹೈವೇಯಲ್ಲಿ ಲಿಮಿಟ್ ಗಿಂತ ವೇಗವಾಗಿ ಹೋಗುವವರು ಹುಷಾರಾಗಿರಿ…
ಇತಿಹಾಸ ಸೇರಿತು ಮಂಗಳೂರಿನ ಮೋತಿ ಮಹಲ್…..
ಮಂಗಳೂರಲ್ಲಿ ಮಳೆಯ ಅಬ್ಬರ… ಗುಡುಗು-ಮಿಂಚಿನ ಆಟ ದಕ್ಷಿಣ ಕನ್ನಡದಲ್ಲಿ ಮತ್ತೆ pre-ಮಾನ್ಸೂನ್ ಮ್ಯಾಜಿಕ್!?
ರಾಪಿಡೊ ಚಾಲಕನ ಖಾತೆಯಲ್ಲಿ 300 ಕೋಟಿ ರೂ. ವಹಿವಾಟು! ಶಾಕ್ ಅದ ED
“ಬರ್ಕಾಸ್ತು ಘಟಕಕ್ಕೆ ‘ಬೋಗಸ್ ನಾಯಕತ್ವ’ – ಕರವೇ ಮಹಿಳಾ ಘಟಕದಲ್ಲಿ ಭಿನ್ನಮತ ಸ್ಫೋಟ!”
ನಿರ್ಮಾಣ ಹಂತ ಕಟ್ಟಡದಿಂದ ಬಿದ್ದು ಕಾರ್ಮಿಕ ಸಾವು-  ಶಣೈ ಮೇಲೆ ಕೇಸು
ಜನಗಣತಿ 2026–27 – Self Enumeration ಮುಗಿದು ಈಗ ಮನೆ ಮನೆ ಭೇಟಿ ಹಂತ ಆರಂಭ!ನಮ್ಮ ಮಾಹಿತಿ = ನಮ್ಮ ದೇಶದ ಬೆಳವಣಿಗೆ…
ಸರ್ಕಾರಿ ಸ್ವಾಮ್ಯದ ಬೇಲಿ ಕಂಬ ಕಿತ್ತಾಕಲು DYFI ಕುಮ್ಮಕ್ಕು….!
Anticipatory Bail ಗೆ ಹೊಸ ರಕ್ಷಣೆ: ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಆಕ್ಷೇಪ
ಕೊನೆಕ್ಷಣದ ಹೃದಯ ಕಲುಕುವ ಹರೀಶ್ ರಾಣಾ – ದಯಾಮರಣvedio
ಬಂಟರ ಸಮುದಾಯದಲ್ಲೊಂದು ಹೀನ ಸಂಪ್ರದಾಯ-ವರದಕ್ಷಿಣೆಗಾಗಿ ಹಿಂಸೆ, ಹಲ್ಲೆ.. ಬೆದರಿಕೆ!
ಮಂಗಳೂರು ಕಮಿಷನರ್ ವಿರುದ್ಧ ಎಸ್ಪಿ ಕಾಶಿನಾಥ್ ದೂರು ಕೊಡುತ್ತಿರುವುದು ಯಾಕೆ?
ಕೆಲವೊಮ್ಮೆ ದೇಹದ ಶತ್ರು “ಲೂಪಸ್ “ಹೊರಗಿಲ್ಲ… ಒಳಗೇ ಇರುತ್ತದೆ.ಮಹಿಳೆಯರ ದಣಿವು, ಸಂಧಿ ನೋವು, ತೂಕ ಇಳಿಕೆ —. ನಿರ್ಲಕ್ಷ್ಯ ಬೇಡ. ‘ಸಾಮಾನ್ಯ’ ಎಂದು ಕಡೆಗಣಿಸಬೇಡಿ.
ಘರ್ ವಾಪ್ಸಿ ಯಾದ ಯೋಗೇಶ್ ಶೆಟ್ಟಿ ಜೆಪ್ಪು
ಬೆಂಗಳೂರು ಕೆಪಿಸಿಸಿ ಕಚೇರಿಯಲ್ಲಿ ಎರಡು ಬಣಗಳ ರಣರಂಗ!ಮಾತಿನ ಚಕಮಕಿ ಹೊಡೆದಾಟಕ್ಕೆ ತಿರುಗಿದ ಕ್ಷಣ…
ಪೂಜೆಗಾಗಿ ತೆರಳಿದ ಅರ್ಚಕರ ಶವ ನಾಲೆಯಲ್ಲಿ ಪತ್ತೆ
ಗ್ಯಾಸ್ ಅಭಾವ ಮತ್ತು ಬೆಲೆ ಏರಿಕೆ, ಸುಳ್ಳು ಎನ್ನುತ್ತಿದೆ-HPCL
ಚಿನ್ನ ಮತ್ತು ಬೆಳ್ಳಿ ಮಾರುಕಟ್ಟೆ ಜಿಗಿತ-ಸುಂಕ ಏರಿಕೆಯಿಂದ ಬೆಲೆಯಲ್ಲಿ ಭಾರೀ ಏರಿಕೆ ಗ್ರಾಹಕರಿಗೆ ಹೊರೆ.
ಎಸ್.ಎಸ್.ಎಲ್.ಸಿ. ಪರೀಕ್ಷೆ: ಮಂಗಳೂರಲ್ಲಿ ನಿಷೇಧಾಜ್ಞೆ ಜಾರಿ
ಗೃಹ ಬಳಕೆಯ LPG ಗ್ರಾಹಕರಿಗೆ Aadhaar e-KYC ಕಡ್ಡಾಯ – PMUY ಫಲಾನುಭವಿಗಳಿಗೆ ವಾರ್ಷಿಕ ಬಯೋಮೆಟ್ರಿಕ್ ಪರಿಶೀಲನೆ
ಬಂಗಾಳದ ಸಿಂಹಾಸನಕ್ಕೆ ಸುವೇಂದು ಏರಿಕೆ — 15 ವರ್ಷದ ಮಮತಾ ಯುಗಕ್ಕೆ ಬ್ರೇಕ್!ಟಿಎಂಸಿ ಕೋಟೆ ಕುಸಿತ…
ರಾಜ್ಯ ಪೊಲೀಸ್ ಇಲಾಖೆಯಲ್ಲಿ “ಕಲೋನಿಯಲ್ ಆರ್ಡರ್ಲಿ” ‘ಆಡಲ್’ (Adal) ಪದ್ದತಿ ರದ್ದು
ಕೊನೆಗೂ ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿದ ನಿತೀಶ್ ಕುಮಾರ್
ಸಹೋದರಿಯ ಎಲುಬುಗಳೊಂದಿಗೆ ಬ್ಯಾಂಕ್ ಗೆ ಬಂದ ಅಣ್ಣ…!ದಾಖಲೆ ನಿಯಮಗಳ ನಡುವೆ ಸೋತ ಮಾನವೀಯತೆ”
ಐಪಿಎಲ್ ಇತಿಹಾಸದಲ್ಲೇ ಸುಮಾರು ₹230 ಕೋಟಿಗೂ ಅಧಿಕ ಒಟ್ಟು ಸಂಭಾವನೆ ಪಡೆದ ಆಟಗಾರನಾಗಿ ಕೊಹ್ಲಿ ದಾಖಲೆ…ಯ ಹಿಂದಿರುವ ಅಸಲಿ ಕಥೆ…!